Tag: digvijay singh

  • ಪುಲ್ವಾಮಾ ದಾಳಿ ಆಕ್ಸಿಡೆಂಟ್ ಅನ್ನೋದಕ್ಕೆ ನಿಮ್ಮ ಬಳಿ ದಾಖಲೆ ಇದೆಯಾ? ಹುತಾತ್ಮ ಯೋಧನ ಪತ್ನಿ

    ಪುಲ್ವಾಮಾ ದಾಳಿ ಆಕ್ಸಿಡೆಂಟ್ ಅನ್ನೋದಕ್ಕೆ ನಿಮ್ಮ ಬಳಿ ದಾಖಲೆ ಇದೆಯಾ? ಹುತಾತ್ಮ ಯೋಧನ ಪತ್ನಿ

    ಮಂಡ್ಯ: ಪುಲ್ವಾಮಾ ಪ್ರಕರಣ ಒಂದು ಆಕ್ಸಿಡೆಂಟ್ ಎಂದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಹುತಾತ್ಮ ಯೋಧ ಗುರು ಪತ್ನಿ ಕಣ್ಣೀರು ಹಾಕುತ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಹುತಾತ್ಮ ಯೋಧ ಗುರು ಅವರ ಪತ್ನಿ ಕಲಾವತಿ, ಸೈನಿಕರ ಪ್ರಾಣಕ್ಕೆ ಬೆಲೆಯೇ ಇಲ್ಲವೆ? ಚಳಿ, ಮಳೆ, ಬಿಸಿಲೆನ್ನದೆ, ತಿನ್ನಲು ಊಟ ಇಲ್ಲದೆ ದೇಶ ಕಾಯುತ್ತಾರೆ. ಅಂಥವರ ಪ್ರಾಣಕ್ಕೆ ಬೆಲೆ ಕಟ್ಟಬೇಡಿ. ಯಾವ ಉದ್ದೇಶದಿಂದ ಆಕ್ಸಿಡೆಂಟ್ ಎಂಬ ಪದ ಬಳಸಿದ್ದೀರಿ ಗೊತ್ತಿಲ್ಲ. ನಿಮ್ಮ ಬಳಿ ದಾಖಲೆ ಇದ್ದರೆ ತೋರಿಸಿ. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರನ್ನು ಕಳೆದುಕೊಂಡು ಅವರ ಕುಟುಂಬಗಳು ಎಷ್ಟು ಕಷ್ಟ ಪಡುತ್ತಿದೆ ನಿಮಗೆ ಗೊತ್ತೆ? ಆಪ್ತರನ್ನು ಕಳೆದುಕೊಂಡಿದ್ದರೆ ನಿಮಗೆ ನಮ್ಮ ನೋವು ಗೊತ್ತಾಗುತ್ತಿತ್ತು. ಈ ರೀತಿ ಹೇಳಲು ನಿಮಗೆ ಹೇಗೆ ಧೈರ್ಯ ಬಂತು? ಪುಲ್ವಾಮಾ ದಾಳಿ ಒಂದು ಆಕ್ಸಿಡೆಂಟ್ ಅಂತ ಹೇಳಿ ಯೋಧರ ಸಾವಿಗೆ ಅವಮಾನ ಮಾಡಬೇಡಿ ಎಂದು ದಿಗ್ವಿಜಯ್ ಸಿಂಗ್ ಹೇಳಿಕೆಗೆ ಆಕ್ರೋಶ ಹೊರಹಾಕಿದ್ದಾರೆ.

    ನಮ್ಮ ಪರಿಸ್ಥಿತಿ ಅವರಿಗೆ ಗೊತ್ತಿಲ್ಲ. ನಿಮ್ಮ ಮನೆಯಲ್ಲಿ, ನಿಮ್ಮ ಮನೆ ಮಕ್ಕಳು ಈ ರೀತಿ ಮೃತಪಟ್ಟಿದ್ದರೆ ಏನು ಮಾಡುತ್ತಿದ್ದಿರಿ? ಕಳೆದುಕೊಂಡಿರುವ ನೋವು ನಮಗೆ ಗೊತ್ತು. ದೇಶಕ್ಕಾಗಿ ಪ್ರಾಣ ಕೊಟ್ಟಿರುವುದಕ್ಕೆ ಬೆಲೆಯೇ ಇಲ್ವಾ? ದಯವಿಟ್ಟು ಅಪಪ್ರಚಾರ ಮಾಡಬೇಡಿ. ಸತ್ಯ ತಿಳಿದು ಮಾತನಾಡಿ. ದಯಮಾಡಿ ಆಕ್ಸಿಡೆಂಟ್ ಎಂಬ ಪದ ಬಳಸಬೇಡಿ ಎಂದು ಕಣ್ಣೀರು ಹಾಕುತ್ತ ಕಲಾವತಿ ಅವರು ವಿನಂತಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಧ್ಯಪ್ರದೇಶ ಕೈ ನಾಯಕನ ವಿರುದ್ಧ ಜಾಮೀನು ರಹಿತ ವಾರೆಂಟ್!

    ಮಧ್ಯಪ್ರದೇಶ ಕೈ ನಾಯಕನ ವಿರುದ್ಧ ಜಾಮೀನು ರಹಿತ ವಾರೆಂಟ್!

    ಹೈದರಾಬಾದ್: ಮಾನನಷ್ಟ ಹೇಳಿಕೆ ನೀಡಿದ್ದ ಆರೋಪದಡಿ ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಹೈದರಾಬಾದ್ ಕೋರ್ಟ್ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ.

    ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ನಾಂಪಲ್ಲಿಯ 8ನೇ ಎಸಿಎಂಎಂ ನ್ಯಾಯಾಲಯವು ದಿಗ್ವಿಜಯ ಸಿಂಗ್ ಅವರಿಗೆ ವಾರೆಂಟ್ ಜಾರಿ ಮಾಡಿದೆ.

    ಏನಿದು ಪ್ರಕರಣ?:
    ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಣಕ್ಕಾಗಿ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಅವರು 2016ರಲ್ಲಿ ಹೇಳಿಕೆ ನೀಡಿದ್ದರು.

    ದಿಗ್ವಿಜಯ್ ಸಿಂಗ್ ಮಾನನಷ್ಟ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅಸಾದುದ್ದೀನ್ ಓವೈಸಿ ಹೈದರಾಬಾದ್‍ನ ಕೋರ್ಟ್ ಮೆಟ್ಟಿಲೇರಿದ್ದರು. ದೂರು ದಾಖಲಿಸಿಕೊಂಡಿದ್ದ ಹೈದರಾಬಾದ್‍ನ ನಾಂಪಲ್ಲಿಯ 8ನೇ ಎಸಿಎಂಎಂ ನ್ಯಾಯಾಲಯವು ವಿಚಾರಣೆ ನಡೆಸಿತ್ತು. ಆದರೆ ದಿಗ್ವಿಜಯ್ ಸಿಂಗ್ ವಿಚಾರಣೆಗೆ ಹಾಜರಾಗದೆ ನಿರಂತರವಾಗಿ ಗೈರು ಉಳಿದಿದ್ದರು. ಇದರಿಂದಾಗಿ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

    ದಿಗ್ವಿಜಯ್ ಸಿಂಗ್ ಅವರು ಅನೇಕ ಬಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ವಾರೆಂಟ್ ಜಾರಿಯಾಗಿದ್ದು ಇದೇ ಮೊದಲೇನಲ್ಲ. 2017 ಫೆಬ್ರವರಿ 21ರಂದು ಟ್ವೀಟ್ ಮಾಡಿದ್ದ ದಿಗ್ವಿಜಯ್ ಸಿಂಗ್ ಅವರು, ‘ಮದರಸಾ ಹಾಗೂ ಆರ್‌ಎಸ್‌ಎಸ್ ನಡೆಸುತ್ತಿರುವ ಸರಸ್ವತಿ ಶಿಶು ಮಂದಿರ್ ನಲ್ಲಿ ಯಾವುದಾರೂ ವ್ಯತ್ಯಾಸವಿದೆಯೇ? ನನ್ನ ಅಭಿಪ್ರಾಯದ ಪ್ರಕಾರ ಎರಡೂ ದ್ವೇಷವನ್ನೇ ಬಿತ್ತುತ್ತಿವೆ ಎಂದಿದ್ದರು. ಈ ಕುರಿತು ಕಿಡಿಕಾರಿದ್ದ ಆರ್‌ಎಸ್‌ಎಸ್ ಹಾಗೂ ಮದರಸಾ ದಿಗ್ವಿಜಯ್ ಸಿಂಗ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಲ್ಲು ತೂರುವವರ ಬದಲು ಅರುಂಧತಿ ರಾಯ್‍ನ ಜೀಪಿಗೆ ಕಟ್ಟಿ: ಬಿಜೆಪಿ ಸಂಸದ ಪರೇಶ್ ರಾವಲ್

    ಕಲ್ಲು ತೂರುವವರ ಬದಲು ಅರುಂಧತಿ ರಾಯ್‍ನ ಜೀಪಿಗೆ ಕಟ್ಟಿ: ಬಿಜೆಪಿ ಸಂಸದ ಪರೇಶ್ ರಾವಲ್

    ನವದೆಹಲಿ: ಕಲ್ಲು ತೂರಾಟ ನಡೆಸುವವರನ್ನು ಜೀಪಿಗೆ ಕಟ್ಟುವ ಬದಲು ಲೇಖಕಿ ಅರುಂಧತಿ ರಾಯ್ ಅವರನ್ನು ಕಟ್ಟಿ ಎಂದು ಬಿಜೆಪಿ ಸಂಸದ ಪರೇಶ್ ರಾವಲ್ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.

    ಕಾಶ್ಮೀರದಲ್ಲಿ ಸೈನಿಕರ ಮೇಲೆ ಕಲ್ಲು ತೂರಾಟ ನಡೆಸುವವರನ್ನು ಸೇನೆಯ ಜೀಪಿನ ಮುಂಭಾಗಕ್ಕೆ ಕಟ್ಟಿದ್ದರ ಹಿನ್ನೆಲೆಯಲ್ಲಿ, ಕಲ್ಲು ತೂರಾಟ ನಡೆಸುವವರ ಬದಲು ಲೇಖಕಿ ಅರುಂಧತಿ ರಾಯ್ ಅವರನ್ನು ಕಟ್ಟಿ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ. ಪರೇಶ್ ರಾವಲ್ ಭಾನುವಾರ ರಾತ್ರಿ ಈ ರೀತಿಯಾಗಿ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿದ್ದು, ಈ ಹೇಳಿಕೆಯ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ.

    ಅರುಂಧತಿ ರಾಯ್ ಭಾರತೀಯ ಸೇನೆಯ ವಿರುದ್ಧ ಮಾತನಾಡಿದ್ದರು ಎಂಬ ಹಿನ್ನೆಲೆಯಲ್ಲಿ ರಾವಲ್ ಈ ರೀತಿ ಟ್ವೀಟ್ ಮಾಡಿದ್ದಾರೆಂದು ವರದಿಯಾಗಿದೆ.

    ಇದನ್ನೂ ಓದಿ: ಕಲ್ಲು ತೂರಿದ್ದ ಯುವಕನನ್ನು ಜೀಪಿಗೆ ಕಟ್ಟಿ ಮೆರವಣಿಗೆ ಮಾಡಿದ್ದ ಅಧಿಕಾರಿಗೆ ಸೇನೆಯಿಂದ ಪ್ರಶಸ್ತಿ

    ಪರೇಶ್ ರಾವಲ್ ಟ್ವೀಟ್‍ಗೆ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದು, `ನಿಮಗೆ ಅರುಂಧತಿ ರಾಯ್ ಸಿಗದಿದ್ರೆ, ಪತ್ರಕರ್ತೆ ಸಾಗಾರಿಕಾ ಘೋಷ್ ಅವರನ್ನು ಜೀಪಿನ ಮುಂಭಾಗಕ್ಕೆ ಕಟ್ಟಬಹುದು. ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ರಾವಲ್ `ನಮ್ಮ ಮುಂದೆ ಹಲವು ಆಯ್ಕೆಗಳಿವೆ’ ಎಂದು ಹೇಳಿದ್ದಾರೆ.

    ಪರೇಶ್ ರಾವಲ್ ಟ್ವೀಟ್‍ಗೆ ಅರುಂಧತಿ ರಾಯ್ ಇದೂವರೆಗೂ ಪ್ರತಿಕ್ರಿಯೆ ನೀಡಿಲ್ಲ. ಆದರೆ ಪತ್ರಕರ್ತೆ ಸಾಗರಿಕಾ ಘೋಷ್ ಪ್ರತಿಕ್ರಿಯಿಸಿದ್ದು, `ಅದ್ಭುತ ಸರ್, ತುಂಬಾ ಒಳ್ಳೆಯದು. ನೀವೊಬ್ಬ ಮಾದರಿ ಸಂಸದೀಯ ಪಟು’ ಎಂದು ವ್ಯಂಗ್ಯ ಮಾಡಿದ್ದಾರೆ.

    ಈ ಟ್ವೀಟ್‍ಗೆ ಕಾಂಗ್ರೆಸ್‍ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪ್ರತಿಕ್ರಿಯಿಸಿ, `ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಬಿಜೆಪಿ ನಡುವೆ ಮೈತ್ರಿ ಬೆಸೆದವರನ್ನು ಯಾಕೆ ಜೀಪಿಗೆ ಕಟ್ಟಬಾರದು’ ಎಂದಿದ್ದಾರೆ.

     

    https://twitter.com/SirPareshRawal/status/866345474722320388

     

     

  • ಬಿಎಸ್‍ವೈ, ಈಶ್ವರಪ್ಪ ಟೀಮ್‍ನಿಂದ ನಾಲ್ವರಿಗೆ ಕೊಕ್- ಮುರಳೀಧರ್‍ರಾವ್ ಖಡಕ್ ಆದೇಶ

    ಬಿಎಸ್‍ವೈ, ಈಶ್ವರಪ್ಪ ಟೀಮ್‍ನಿಂದ ನಾಲ್ವರಿಗೆ ಕೊಕ್- ಮುರಳೀಧರ್‍ರಾವ್ ಖಡಕ್ ಆದೇಶ

    ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಶನಿವಾರ ರಾತ್ರೋರಾತ್ರಿ ಬಿಗ್‍ಶಾಕ್ ಕೊಟ್ಟಿದೆ. ಯಡಿಯೂರಪ್ಪ ಹಾಗೂ ಈಶ್ವರಪ್ಪನವರ ಎರಡು ಬಣಗಳಿಗೂ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಬಿಸಿ ಮುಟ್ಟಿಸಿದ್ದಾರೆ.

    ಈಶ್ವರಪ್ಪ ಟೀಂನಿಂದ ಭಾನುಪ್ರಕಾಶ್, ನಿರ್ಮಲ್ ಕುಮಾರ ಸುರಾನಾ ಅವರು ಹೊಂದಿದ್ದ ಉಪಾಧ್ಯಕ್ಷ ಸ್ಥಾನವನ್ನ ಕಿತ್ಕೊಂಡು ಇಬ್ಬರಿಗೂ ಕೊಕ್ ಕೊಟ್ಟಿದೆ. ಇತ್ತ ಬಿ.ಎಸ್ ಯಡಿಯೂರಪ್ಪ ಬಣದ ಎಂ.ಪಿ. ರೇಣುಕಾಚಾರ್ಯಗೆ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನದಿಂದ ಕೊಕ್ ಕೊಟ್ರೆ, ಗೋ ಮಧುಸೂಧನ್ ಅವರಿಗೆ ನೀಡಲಾಗಿದ್ದ ರಾಜ್ಯ ವಕ್ತಾರ ಹುದ್ದೆಯನ್ನ ಹೈಕಮಾಂಡ್ ಕಸಿದುಕೊಂಡು ಇಬ್ಬರು ನಾಯಕರಿಗೆ ಖಡಕ್ ಎಚ್ಚರಿಕೆ ಕೊಟ್ಟಿದೆ.

    ನಿನ್ನೆ ರಾತ್ರಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತುಕತೆ ನಡೆದಿತ್ತು.  ಕೊನೆಗೆ ಯಡಿಯೂರಪ್ಪ-ಈಶ್ವರಪ್ಪ ಕಿತ್ತಾಟ ಕಂಡು ಮುರಳೀಧರ್ ರಾವ್ ಖಡಕ್ ತೀರ್ಮಾನ ಕೈಗೊಂಡು ನಿಮಗಿಂತಾ ಬಿಜೆಪಿ ಹೈಕಮಾಂಡ್ ಸ್ಟ್ರಾಂಗ್ ಇದೆ. ಕೈಕಟ್ಟಿ ಕೂತಿಲ್ಲ ಅನ್ನೋ ಎಚ್ಚರಿಕೆ ಕೊಟ್ಟಿದ್ದಾರೆ.

    ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಭೇಟಿ ಬಳಿಕ ಅಲ್ಲಿಂದ ತೆರಳಿದ ಬಿ.ಎಸ್ ಯಡಿಯೂರಪ್ಪ ಸೀದಾ ಶಿವಮೊಗ್ಗಕ್ಕೆ ಹೋದ್ರು. ಇಂದು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    ಅಂದಹಾಗೆ ಕಾಂಗ್ರೆಸ್‍ನಲ್ಲೂ ನಿನ್ನೆ ಮಹಾ ಬದಲಾವಣೆಯೇ ಆಗಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿದ್ದ ದಿಗ್ವಿಜಯ್ ಸಿಂಗ್‍ಗೆ ಕೊಕ್ ಕೊಟ್ಟು ಆ ಜಾಗಕ್ಕೆ ವೇಣುಗೋಪಾಲ್ ಅವ್ರನ್ನ ನೇಮಿಸಿದೆ.