Tag: digvijaya singh

  • ಶಾರೂಖ್ ಖಾನ್ ಪುತ್ರನಾಗಿದ್ದರಿಂದ ಆರ್ಯನ್ ಖಾನ್ ಬಲಿಪಶು: ದಿಗ್ವಿಜಯ್ ಸಿಂಗ್

    ಶಾರೂಖ್ ಖಾನ್ ಪುತ್ರನಾಗಿದ್ದರಿಂದ ಆರ್ಯನ್ ಖಾನ್ ಬಲಿಪಶು: ದಿಗ್ವಿಜಯ್ ಸಿಂಗ್

    ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾತ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್‍ಗೆ ಸಂಬಂಧಿಸಿದಂತೆ ಎನ್ ಸಿಬಿಯಿಂದ ಬಂಧನಕ್ಕೊಳಗಾಗಿದ್ದಾನೆ. ಶಾರೂಖ್ ಖಾನ್ ಪುತ್ರನಾಗಿರುವುದರಿಂದ ಆತನನ್ನು ಬಲಿಪಶು ಮಾಡಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಶಾರೂಖ್ ಖಾನ್ ಪುತ್ರನಾಗಿರುವುದರಿಂದ ಆತನನ್ನು ಬಲಿಪಶು ಮಾಡಿರುವುದು ಬೇಸರವಾಗಿದೆ. ಆತನ ಅಪರಾಧ ಏನು? ಆತನ ಜೊತೆಯಲ್ಲಿದ್ದವನ ಬಳಿ 5 ಗ್ರಾಮ್ ಡ್ರಗ್ಸ್ ಸಿಕ್ಕಿದೆ. ಮುಂದ್ರಾ ಬಂದರಿನಲ್ಲಿ ಟನ್ ಗಟ್ಟಲೇ ವಶಕ್ಕೆ ಪಡೆದ ಹೆರಾಯಿನ್ ಬಗ್ಗೆ ಏನಾಯಿತು? ಕುಲದೀಪ್ ಸಿಂಗ್ ಯಾರು? ಎನ್‍ಸಿಬಿ ಮತ್ತು ಎನ್‍ಐಎ ಈ ಕೇಸ್ ಬಗ್ಗೆ ವಿಚಾರಣೆ ನಡೆಸುತ್ತಿದ್ದೆಯೇ ಎಂಬುದನ್ನು ನಮಗೆ ಹೇಳಲಿ ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸ್ವಿಮ್ಮಿಂಗ್‍ಪೂಲ್‍ನಲ್ಲಿ ಐರಾ, ಯಥರ್ವ್ ಮೋಜು ಮಸ್ತಿ

    ನ್ಯಾಯಾಲಯದ ಆದೇಶ ಕಾಯದೆ ಕಾಂಗ್ರೆಸ್ ಮುಖಂಡರೇ ತೀರ್ಪು ನೀಡಿದ್ದಾರೆ. ಅಂತಿಮವಾಗಿ ದಿಗ್ವಿಜಯ್ ಸಿಂಗ್ ಆರ್ಯನ್ ಖಾನ್ ರಕ್ಷಣೆಗೆ ಬಂದಿದ್ದಾರೆ. ತನಿಖಾ ತಂಡ ವಾಸ್ತವ ಅಂಶ ಪರಿಶೀಲಿಸುತ್ತಿರುವಾಗ ದಿಗ್ವಿಜಯ್ ಸಿಂಗ್ ತೀರ್ಪು ನೀಡಿದ್ದಾರೆ. ಇಂತಹ ತುಷ್ಟೀಕರಣ ರಾಜಕಾರಣ ಮಾಡುವ ಮೂಲಕ ಎಷ್ಟು ದಿನಗಳವರೆಗೆ ಜನರನ್ನು ನೀವು ಹಾದಿ ತಪ್ಪಿಸುತ್ತೀರಾ? ಎಂದು ಬಿಜೆಪಿ ಪ್ರಶ್ನಿಸಿದೆ ಎಂದು ದಿಗ್ವಿಜಯ್ ಹೇಳಿಕೆ ವಿರುದ್ಧ ಮಧ್ಯ ಪ್ರದೇಶ ಬಿಜೆಪಿ ಪ್ರತಿದಾಳಿ ನಡೆಸಿದೆ. ಇದನ್ನೂ ಓದಿ:  ಜೀವನದ ಹೊಸದೊಂದು ಹೆಜ್ಜೆ, ನಿಮ್ಮೊಂದಿಗೆ ಹಂಚಿಕೊಳ್ಳುವ ಆಸೆ: ನಟಿ ಚಂದನಾ

    ಮುಂಬೈಯ ಕರಾವಳಿಯಲ್ಲಿ ಕ್ರೂಸ್ ಶಿಪ್ ಮೇಲೆ ಅಕ್ಟೋಬರ್ 3 ರಂದು ಎನ್‍ಸಿಬಿ ದಾಳಿಯ ನಂತರ ಆರ್ಯನ್ ಖಾನ್‍ನನ್ನು ಬಂಧಿಸಲಾಗಿದೆ. ಸದ್ಯ ಜೈಲಿನಲ್ಲಿರುವ ಆರ್ಯನ್ ಖಾನ್, ವಿಶೇಷ ಕೋರ್ಟ್ ಜಾಮೀನು ಅರ್ಜಿಯನ್ನು ನಿರಾಕರಿಸಿದ ನಂತರ ಬಾಂಬೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

  • ಮುಸ್ಲಿಮರಲ್ಲಿ ಸಂತಾನೋತ್ಪತ್ತಿ ದರ ಕಡಿಮೆಯಾಗಿದೆ: ದಿಗ್ವಿಜಯ ಸಿಂಗ್

    ಮುಸ್ಲಿಮರಲ್ಲಿ ಸಂತಾನೋತ್ಪತ್ತಿ ದರ ಕಡಿಮೆಯಾಗಿದೆ: ದಿಗ್ವಿಜಯ ಸಿಂಗ್

    ನವದೆಹಲಿ: ಮುಸ್ಲಿಮರಲ್ಲಿ ಸಂತಾನೋತ್ಪತ್ತಿ ದರ ಕಡಿಮೆಯಾಗಿದೆ. ಮುಸ್ಲಿಮರಲ್ಲಿ ಫಲವತ್ತತೆ ದರವು ಹಿಂದೂಗಳಿಗಿಂತ ಕಡಿಮೆಯಾಗಿದೆ. ಹೀಗಾಗಿ 2028ರ ವೇಳೆಗೆ ಮುಸ್ಲಿಮರಷ್ಟೇ ಹಿಂದೂಗಳ ಜನಸಂಖ್ಯೆ ಇರಲಿದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

    ಸೆಹೋರೆಯಲ್ಲಿ ನಡೆದ ಕಿಸಾನ್ ಕ್ರಾಂತಿ ಪಾದಯಾತ್ರೆಯಲ್ಲಿ ಮಾತನಾಡಿದ ದಿಗ್ವಿಜಯ ಸಿಂಗ್, ಅಧ್ಯಯನದ ಪ್ರಕಾರ 1951ರಿಂದ ಮುಸ್ಲಿಮರ ಸಂತಾನೋತ್ಪತ್ತಿ ದರವು ಕಡಿಮೆಯಾಗುತ್ತಾ ಬಂದಿದೆ. ಇದೆ ಸಮಯದಲ್ಲಿ ಹಿಂದೂಗಳ ಸಂತಾನೋತ್ಪತ್ತಿ ದರ ಕಡಿಮೆಯಾಗಿಲ್ಲ, ಏರಿಕೆ ಕಂಡಿದೆ. ಸದ್ಯ ಮುಸ್ಲಿಮರಲ್ಲಿ ಸಂತಾನೋತ್ಪತ್ತಿ ದರವು 2.7% ಇದ್ದರೇ ಹಿಂದೂಗಳಲ್ಲಿ 2.3% ಇದೆ ಎಂದರು. ಇದನ್ನೂ ಓದಿ: ದೆಹಲಿ ಜನ್ರಿಗೆ ಗುಡ್ ನ್ಯೂಸ್ – ಅ.1ರಿಂದ ಕಾರ್ಯನಿರ್ವಹಿಸಲಿರುವ ಹೊಂಜು ಗೋಪುರ

    ಈ ಆಧಾರದ ಪ್ರಕಾರ 2028ರ ವೇಳೆಗೆ ಹಿಂದೂಗಳು, ಮುಸ್ಲಿಮರ ಜನಸಂಖ್ಯೆಗೆ ಸಮಾನವಾಗಿರುತ್ತದೆ. ಮೋದಿ ಹಿಂದೂಗಳಿಗೆ ಬೆಂಬಲ ನೀಡಿ ರಾಜಕೀಯ ಮಾಡಿದರೆ, ಒವೈಸಿ ಮುಸ್ಲಿಮರಿಗೆ ಆಪತ್ತು ಇದೆ ಎಂದು ರಾಜಕೀಯ ಮಾಡುತ್ತಿದ್ದಾರೆ. ಆದರೆ 2028ರಲ್ಲಿ ಜನಸಂಖ್ಯೆ ಹಿಂದೂಗಳದ್ದು ಮತ್ತು ಮುಸ್ಲಿಮರದ್ದು ಸ್ಥಿರವಾಗಲಿದೆ. ಬಿಜೆಪಿ ಸುಳ್ಳುಗಳನ್ನೇ ಹೇಳಿಕೊಂಡು ಸರ್ಕಾರ ನಡೆಸುತ್ತಿದೆ. ಬಿಜೆಪಿ ಮತ ಪಡೆಯಲು ಧರ್ಮಗಳನ್ನು ಒಡೆಯುವ ಕೆಲಸಕ್ಕೆ ಮುಂದಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 50,000 ಪರಿಹಾರ ನೀಡಲು NDMA ಶಿಫಾರಸು

  • ಕೇಸರಿ ಬಟ್ಟೆ ಧರಿಸಿ, ದೇವಸ್ಥಾನದಲ್ಲಿ ರೇಪ್: ದಿಗ್ವಿಜಯ್ ಸಿಂಗ್

    ಕೇಸರಿ ಬಟ್ಟೆ ಧರಿಸಿ, ದೇವಸ್ಥಾನದಲ್ಲಿ ರೇಪ್: ದಿಗ್ವಿಜಯ್ ಸಿಂಗ್

    ಭೋಪಾಲ್: ಕೇಸರಿ ಬಟ್ಟೆ ಧರಿಸಿದ ವ್ಯಕ್ತಿಗಳಿಂದ ಅತ್ಯಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್‍ನ ಹಿರಿಯ ನಾಯಕ, ಮಾಜಿ ಸಂಸದ ದಿಗ್ವಿಜಯ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮಧ್ಯಪ್ರದೇಶದ ಭೋಪಾಲ್‍ನಲ್ಲಿ ಮಾತನಾಡಿದ ಅವರು, ದೇವಸ್ಥಾನಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಇದು ನಮ್ಮ ಹಿಂದೂ ಸಂಸ್ಕೃತಿಯೇ? ನಮ್ಮ ಸನಾತನ ಧರ್ಮವನ್ನು ಹಾನಿ ಮಾಡುತ್ತಿರುವವರನ್ನು ದೇವರು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದ್ದಾರೆ.

    ದಿಗ್ವಿಜಯ್ ಸಿಂಗ್ ಅವರ ಈ ಹೇಳಿಕೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಪ್ರತಿ ಅಪರಾಧವನ್ನು ಸನಾತನ ಧರ್ಮದೊಂದಿಗೆ ಸಂಯೋಜಿಸುವ ಮೂಲಕ ಹಿಂದೂಗಳನ್ನು ಕೆಣಕುವ ಅಭ್ಯಾಸವನ್ನು ದಿಗ್ವಿಜಯ್ ಸಿಂಗ್ ಹೊಂದಿದ್ದಾರೆ. ಆದರೆ ಮುಸ್ಲಿಂ ಸಮುದಾಯದ ಅಪರಾಧಗಳ ವಿಷಯ ಬಂದಾಗ ಅವರಿಗೆ ಯಾವುದೇ ಧರ್ಮವಿಲ್ಲ ಎಂದು ಹೇಳುತ್ತಾರೆ. ಸಂಕ್ಷಿಪ್ತವಾಗಿ ಹೇಳುವುದಾದರೆ ಇಂದು ಕಾಂಗ್ರೆಸ್‍ನ ಸಿದ್ಧಾಂತ ಎಂದು ದೇವಿಕಾ ಎಂಬವರು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

    ಈ ಹಿಂದೆಯೂ ದಿಗ್ವಿಜಯ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಮಧ್ಯಪ್ರದೇಶದ ಭಿಂಡ್‍ನಲ್ಲಿ ಮಹಾರಾಣಾ ಪ್ರತಾಪ್ ಅವರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ್ದ ಅವರು, ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‍ಐ)ನಿಂದ ಬಿಜೆಪಿ ಹಾಗೂ ಬಜರಂಗ ದಳ ಹಣ ಪಡೆಯುತ್ತಿವೆ. ಮುಸ್ಲಿಮರಿಗಿಂತ ಮುಸ್ಲಿಮೇತರರೇ ಹೆಚ್ಚಾಗಿ ಪಾಕಿಸ್ತಾನದ ಐಎಸ್‍ಐಗೆ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂದು ಹೇಳಿದ್ದರು.

    ಬಿಜೆಪಿ ಹಾಗೂ ಹಿಂದೂ ಸಂಘಟನೆಯಾಗಿರುವ ಬಜರಂಗ ದಳಕ್ಕೆ ಪಾಕಿಸ್ತಾನದ ಐಎಸ್‍ಐನಿಂದ ಹಣ ವರ್ಗಾವಣೆಯಾಗುತ್ತಿದೆ. ಇದನ್ನು ಎಲ್ಲರೂ ಗಮನಿಸಬೇಕು, ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷವು ಬಿಜೆಪಿ ಹಾಗೂ ಸಂಘ ಪರಿವಾರ ಸಿದ್ಧಾಂತದ ವಿರುದ್ಧ ಹೋರಾಡುತ್ತಿದೆ. ಸ್ವಾತಂತ್ರ್ಯ ಹೋರಾಟದ ವೇಳೆ ಬಿಜೆಪಿ- ಸಂಘ ಪರಿವಾರ ಇರಲಿಲ್ಲ. ಹೀಗಾಗಿ ಅವರಿಂದ ನಾವು ದೇಶ ಪ್ರೇಮವನ್ನು ಕಲಿಯುವ ಅಗತ್ಯವಿಲ್ಲ ಎಂದು ಹೇಳಿದ್ದರು.

  • ಪಾಕ್‍ನ ಐಎಸ್‍ಐನಿಂದ ಬಿಜೆಪಿ, ಬಜರಂಗ ದಳ ಹಣ ಪಡೆಯುತ್ತಿವೆ: ದಿಗ್ವಿಜಯ್ ಸಿಂಗ್

    ಪಾಕ್‍ನ ಐಎಸ್‍ಐನಿಂದ ಬಿಜೆಪಿ, ಬಜರಂಗ ದಳ ಹಣ ಪಡೆಯುತ್ತಿವೆ: ದಿಗ್ವಿಜಯ್ ಸಿಂಗ್

    ಭೋಪಾಲ್: ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‍ಐ)ನಿಂದ ಬಿಜೆಪಿ ಹಾಗೂ ಬಜರಂಗ ದಳ ಹಣ ಪಡೆಯುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

    ಮಧ್ಯಪ್ರದೇಶದ ಭಿಂಡ್‍ನಲ್ಲಿ ಮಾಜಿ ಸಂಸದರು ಶನಿವಾರ ಮಹಾರಾಣಾ ಪ್ರತಾಪ್ ಅವರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು. ಈ ವೇಳೆ ಮಾತನಾಡಿದ ಅವರು, ಮುಸ್ಲಿಮರಿಗಿಂತ ಮುಸ್ಲಿಮೇತರರೇ ಹೆಚ್ಚಾಗಿ ಪಾಕಿಸ್ತಾನದ ಐಎಸ್‍ಐಗೆ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಬಿಜೆಪಿ ಹಾಗೂ ಹಿಂದೂ ಸಂಘಟನೆಯಾಗಿರುವ ಬಜರಂಗ ದಳಕ್ಕೆ ಪಾಕಿಸ್ತಾನದ ಐಎಸ್‍ಐನಿಂದ ಹಣ ವರ್ಗಾವಣೆಯಾಗುತ್ತಿದೆ. ಇದನ್ನು ಎಲ್ಲರೂ ಗಮನಿಸಬೇಕು, ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷವು ಬಿಜೆಪಿ ಹಾಗೂ ಸಂಘ ಪರಿವಾರ ಸಿದ್ಧಾಂತದ ವಿರುದ್ಧ ಹೋರಾಡುತ್ತಿದೆ. ಸ್ವಾತಂತ್ರ್ಯ ಹೋರಾಟದ ವೇಳೆ ಬಿಜೆಪಿ- ಸಂಘ ಪರಿವಾರ ಇರಲಿಲ್ಲ. ಹೀಗಾಗಿ ಅವರಿಂದ ನಾವು ದೇಶ ಪ್ರೇಮವನ್ನು ಕಲಿಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

    ದಿಗ್ವಿಜಯ್ ಸಿಂಗ್ ಅವರ ವಿವಾದಾತ್ಮಕ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಜಿ ಸಂಸದರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ.

  • ಹಠ ಯೋಗಕ್ಕೆ ದಿಗ್ವಿಜಯ್ ಸಿಂಗ್‍ರನ್ನ ಆಹ್ವಾನಿಸಿರಲಿಲ್ಲ: ಕಂಪ್ಯೂಟರ್ ಬಾಬಾ ಯೂಟರ್ನ್

    ಹಠ ಯೋಗಕ್ಕೆ ದಿಗ್ವಿಜಯ್ ಸಿಂಗ್‍ರನ್ನ ಆಹ್ವಾನಿಸಿರಲಿಲ್ಲ: ಕಂಪ್ಯೂಟರ್ ಬಾಬಾ ಯೂಟರ್ನ್

    ಭೋಪಾಲ್: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಹಠ ಯೋಗಕ್ಕೆ ಆಹ್ವಾನಿಸಿರಲಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಯೂಟರ್ನ್ ಹೊಡೆದಿದ್ದಾರೆ.

    ಚುನಾವಣಾ ಆಯೋಗ ನೀಡಿರುವ ನೋಟಿಸ್‍ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವರು, ಹಠ ಯೋಗ ಕ್ಯಾಂಪ್‍ಗೆ ಬರುವಂತೆ ದಿಗ್ವಿಜಯ್ ಸಿಂಗ್ ಅವರಿಗೆ ಆಹ್ವಾನ ನೀಡಿರಲಿಲ್ಲ. ಅವರು ಪತ್ನಿಯ ಸಮೇತ ಬಂದು ಪೂಜೆಯಲ್ಲಿ ಭಾಗವಹಿಸಿದ್ದು ನನಗೆ ತಿಳಿದಿಲ್ಲ. ಅಷ್ಟೇ ಅಲ್ಲದೆ ದಾನಿಗಳಿಂದ ಹಣ ಸಂಗ್ರಹಿಸಿ ಹಠ ಯೋಗ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

    ಕಂಪ್ಯೂಟರ್ ಬಾಬಾ ಅವರ ಮೂಲ ಹೆಸರು ನಾಮ್‍ದಾಸ್ ತ್ಯಾಗಿ. ಅವರು ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌವ್ಹಾನ್ ಅವರ ಸರ್ಕಾರದಲ್ಲಿ ಸಚಿವರಾಗಿದ್ದರು. ಆದರೆ ಭೋಪಾಲ್‍ನ ಸಫಿಯಾ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರ ಗೆಲುವಿಗಾಗಿ ಹಠ ಯೋಗ ಕ್ಯಾಂಪ್ ಮಾಡಿದ್ದರು.

    ಈ ಹಿಂದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಕಂಪ್ಯೂಟರ್ ಬಾಬಾ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಐದು ವರ್ಷ ಸರ್ಕಾರ ನಡೆಸಿದರೂ ರಾಮ ಮಂದಿರ ನಿರ್ಮಾಣ ಮಾಡಲಿಲ್ಲ. ರಾಮ ಮಂದಿರ ಇಲ್ಲವೆಂದ ಮೇಲೆ ಮೋದಿಯೂ ಇಲ್ಲ ಎಂದು ಹೇಳಿದ್ದರು. ಈ ಸಂಬಂಧ ಬಿಜೆಪಿಯು ಕಂಪ್ಯೂಟರ್ ಬಾಬಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

    ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಸಾಧ್ವಿ ಪ್ರಜ್ಞಾಸಿಂಗ್ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಈ ನಾಯಕರ ಮಧ್ಯೆ ಭರ್ಜರಿ ಪೈಪೋಟಿ ಏರ್ಪಟ್ಟಿದೆ. ಮಧ್ಯಪ್ರದೇಶದ ಸಾಗರ್, ಭೋಪಾಲ್ ಸೇರಿದಂತೆ 8 ಲೋಕಸಭಾ ಕ್ಷೇತ್ರಗಳ ಮತದಾನವು ಮೇ 12ರಂದು ನಡೆಯಲಿದೆ.

  • ಮಸೂದ್ ಅಜರ್‌ಗೆ ಸಾಧ್ವಿ ಶಾಪ ಹಾಕಿದ್ರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವೇ ಬೀಳಲ್ಲ: ದಿಗ್ವಿಜಯ್ ಸಿಂಗ್

    ಮಸೂದ್ ಅಜರ್‌ಗೆ ಸಾಧ್ವಿ ಶಾಪ ಹಾಕಿದ್ರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವೇ ಬೀಳಲ್ಲ: ದಿಗ್ವಿಜಯ್ ಸಿಂಗ್

    ಭೋಪಾಲ್: ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಅವರು ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ಗೆ ಶಾಪ ಹಾಕಿದರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವೇ ಬೀಳಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ವ್ಯಂಗ್ಯವಾಡಿದ್ದಾರೆ.

    ಮಧ್ಯ ಪ್ರದೇಶದ ಭೋಪಾಲ್‍ನ ಅಶೋಕ್ ಗಾರ್ಡನ್ ಬಳಿ ಪ್ರಚಾರ ನಡೆಸಿ ಮಾತನಾಡಿದ ಅವರು, ತಾವು ಶಾಪ ಹಾಕಿದ್ದರಿಂದಲೇ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಸಾವನ್ನಪ್ಪಿದ್ದರು ಎಂದು ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಹೇಳಿದ್ದಾರೆ. ದೇಶದ ಭದ್ರತೆಗಾಗಿ ಉಗ್ರರ ಜೊತೆ ಹೋರಾಡಿ ಹುತಾತ್ಮರಾದ ಕರ್ಕರೆ ಅವರ ಬಗ್ಗೆ ಸಾಧ್ವಿ ಸಿಂಗ್ ಹಗುರವಾಗಿ ಮಾತನಾಡಿದ್ದಾರೆ ಎಂದು ಗುಡುಗಿದರು. ಇದನ್ನೂ ಓದಿ: ಹೇಮಂತ್ ಕರ್ಕರೆ ಸಾವಿನ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ವೈಯಕ್ತಿಕ: ಬಿಜೆಪಿ 

    ಉಗ್ರರು ಬೆಟ್ಟದಲ್ಲಿ ಅಡಗಿ ಕುಳಿತಿದ್ದರೂ ನಾವು ಹೊಡೆದು ಹಾಕುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಪುಲ್ವಾಮಾ, ಪಠಾನ್‍ಕೋಟ್ ಹಾಗೂ ಉರಿ ದಾಳಿ ನಡೆದಾಗ ಪ್ರಧಾನಿ ಮೋದಿ ಎಲ್ಲಿದ್ದರು? ಇಂತಹ ದಾಳಿಯನ್ನು ಯಾಕೆ ಮೋದಿ ತಡೆಯಲಿಲ್ಲ ಎಂದು ದಿಗ್ವಿಜಯ್ ಅವರು ಪ್ರಶ್ನಿಸಿ ವಾಗ್ದಾಳಿ ನಡೆಸಿದರು.

    ದೇಶದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರು ಸಹೋದರರಂತೆ ಬದುಕುತ್ತಿದ್ದಾರೆ. ಹಿಂದೂಗಳು ಒಗ್ಗಾಟ್ಟಾಗಿ ಇರಬೇಕು ಎಂದು ಅವರು ಹೇಳುತ್ತಿದ್ದಾರೆ. ದೇಶವನ್ನು ಸುಮಾರು 500 ವರ್ಷಗಳ ಕಾಲ ಮುಸ್ಲಿಂ ರಾಜಮನೆತಗಳು ಆಳಿವೆ. ಆದರೆ ಇದು ಯಾವುದೇ ಧರ್ಮದ ಮೇಲೆ ಪರಿಣಾಮ ಬೀರಿಲ್ಲ. ಹೀಗಾಗಿ ರಾಜಕೀಯ ಲಾಭಕ್ಕೆ ಧರ್ಮ ಬಳಸಿಕೊಳ್ಳುವವರ ಬಗ್ಗೆ ಎಚ್ಚರ ವಹಿಸಿ ಎಂದು ಬಿಜೆಪಿ ನಾಯಕ ವಿರುದ್ಧ ಗುಡುಗಿದರು.

    ಹಿಂದೂ ಧರ್ಮದಲ್ಲಿ “ಹರ ಹರ ಮಹದೇವ್” ಎಂದು ಹೇಳಲಾಗುತ್ತದೆ. ಆದರೆ ಬಿಜೆಪಿಯವರು ”ಹರ ಹರ ಮೋದಿ” ಎಂದು ಹೇಳುವ ಮೂಲಕ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ ಎಂದು ದೂರಿದರು.

    ಭೋಪಾಲ್ ಲೋಕಸಭಾ ಕ್ಷೇತ್ರದ ಮತದಾನವು ಮೇ 12ರಂದು ನಡೆಯಲಿದೆ. ಫಲಿತಾಂಶವು ಮೇ 23ರಂದು ಹೊರ ಬೀಳಲಿದೆ. ಈ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಹಿರಿಯ ಮುಖಂಡ ದಿಗ್ವಜಯ್ ಸಿಂಗ್ ಸ್ಪರ್ಧೆ ಮಾಡಿದರೆ, ಬಿಜೆಪಿಯಿಂದ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಕಣಕ್ಕೆ ಇಳಿದಿದ್ದಾರೆ.

  • ಖಾತೆಗೆ 15 ಲಕ್ಷ ರೂ. ಬಂತೇ – ದಿಗ್ವಿಜಯ್ ಪ್ರಶ್ನೆಗೆ ವೇದಿಕೆಯಲ್ಲೇ ಉತ್ತರ ಕೊಟ್ಟ ಯುವಕನಿಗೆ ಸನ್ಮಾನ

    ಖಾತೆಗೆ 15 ಲಕ್ಷ ರೂ. ಬಂತೇ – ದಿಗ್ವಿಜಯ್ ಪ್ರಶ್ನೆಗೆ ವೇದಿಕೆಯಲ್ಲೇ ಉತ್ತರ ಕೊಟ್ಟ ಯುವಕನಿಗೆ ಸನ್ಮಾನ

    ನವದೆಹಲಿ: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಭೋಪಾಲ್ ಕ್ಷೇತ್ರದ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಪ್ರಶ್ನೆಗೆ ವೇದಿಕೆ ಮೇಲೆ ಉತ್ತರಿಸಿದ್ದ ಯುವಕನಿಗೆ ಬಿಜೆಪಿ ಸನ್ಮಾನ ಮಾಡಿ ಗೌರವ ಸೂಚಿಸಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು 2014ರ ಚುನಾವಣೆಗೂ ಮುನ್ನ 15 ಲಕ್ಷ ಬ್ಯಾಂಕ್ ಖಾತೆಗೆ ಹಾಕುವುದಾಗಿ ಹೇಳಿದ್ದರು. ನಿಮ್ಮ ಖಾತೆಗೆ ಹಣ ಬಂದಿದ್ದೇಯಾ ಎಂದು ದಿಗ್ವಿಜಯ್ ಸಿಂಗ್ ಪ್ರಚಾರ ಸಮಾರಂಭದಲ್ಲಿ ಪ್ರಶ್ನಿಸಿದ್ದರು. ಈ ವೇಳೆ ವೇದಿಕೆ ಬಂದಿದ್ದ ಅಮಿತ್ ಮಲಿ, ಮೋದಿ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ನಡೆಸುವ ಮೂಲಕ 15 ಲಕ್ಷ ರೂ. ನನಗೆ ನೀಡಿದ್ದಾರೆ ಎಂದು ಹೇಳಿ ದಿಗ್ವಿಜಯ್ ಸಿಂಗ್‍ಗೆ ಮುಜುಗರ ಉಂಟು ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಒಂದೇ ದಿನದಲ್ಲಿ ಯುವಕ ಸ್ಟಾರ್ ಆಗಿದ್ದ.

    ಕಾಂಗ್ರೆಸ್ ಸಮಾವೇಶದ ಬಳಿಕ ಅಲ್ಲಿದ್ದ ಯಾರು ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡಿಲ್ಲ ಎಂದು ಅಮಿತ್ ಮಲಿ ಸ್ಪಷ್ಟಪಡಿಸಿದ್ದಾನೆ. ಇತ್ತ ಯುವಕ ನಡೆಗೆ ಮೆಚ್ಚುಗೆ ಸೂಚಿಸಿರುವ ಭೋಪಾಲ್ ಬಿಜೆಪಿ ಘಟಕ ಸನ್ಮಾನ ಮಾಡಿ ಗೌರವಿಸಿದೆ.

    ಲೋಕಸಭಾ ಚುನಾವಣೆಯ 6ನೇ ಹಂತದ ಭಾಗವಾಗಿ ಮೇ 12 ರಂದು ಭೋಪಾಲ್ ನಲ್ಲಿ ಮತದಾನ ನಡೆಯಲಿದೆ. ಇತ್ತ ಬಿಜೆಪಿಯಿಂದ ಸಾಧ್ವಿ ಪ್ರಜ್ಞಾ ಸಿಂಗ್ ಭೋಪಾಲ್ ನಿಂದ ಸ್ಪರ್ಧೆ ಮಾಡುತ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ.

  • ಖಾತೆಗೆ 15 ಲಕ್ಷ ರೂ. ಬಂತೇ – ದಿಗ್ವಿಜಯ್ ಪ್ರಶ್ನೆಗೆ ವೇದಿಕೆಯಲ್ಲೇ ಉತ್ತರ ಕೊಟ್ಟ ಯುವಕ

    ಖಾತೆಗೆ 15 ಲಕ್ಷ ರೂ. ಬಂತೇ – ದಿಗ್ವಿಜಯ್ ಪ್ರಶ್ನೆಗೆ ವೇದಿಕೆಯಲ್ಲೇ ಉತ್ತರ ಕೊಟ್ಟ ಯುವಕ

    ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಪಕ್ಷಗಳ ನಡುವಿನ ಆರೋಪ ಪ್ರತ್ಯಾರೋಪ ಹೆಚ್ಚಾಗುತ್ತಿದ್ದು, ಇಂದು ಕೂಡ ಕಾಂಗ್ರೆಸ್ ಹಿರಿಯ ನಾಯಕ, ಭೋಪಾಲ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಭೋಪಾಲ್ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಅವರು ಇಂದು ಕಾರ್ಯಕತರ ಸಮಾವೇಶದಲ್ಲಿ ಮಾತನಾಡಿ,”ಪ್ರಧಾನಿ ಮೋದಿ ನಿಮ್ಮ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂದು ಭರವಸೆ ನೀಡಿದ್ದರು. ಅಧಿಕಾರಕ್ಕೆ ಬಂದು 5 ವರ್ಷ ಕಳೆದಿದ್ದು, 15 ಲಕ್ಷ ರೂ. ಬಂದಿದ್ಯಾ?” ಎಂದು ಪ್ರಶ್ನಿಸಿದ್ದರು.

    ಈ ವೇಳೆ,”ಯುವಕನೊಬ್ಬ ನನ್ನ ಖಾತೆಗೆ ಬಂದಿದೆ” ಎಂದು ಕೈ ಮೇಲೆತ್ತಿ ಉತ್ತರ ನೀಡಿದ್ದ. ಇದನ್ನು ಕಂಡ ದಿಗ್ವಿಜಯ್ ಸಿಂಗ್ ಆಶ್ಚರ್ಯಗೊಂಡು,”ಹೌದೇ? ಬಂದಿದ್ದರೆ ಜನರಿಗೆ ತಿಳಿಸು ಬಾ” ಎಂದು ವೇದಿಕೆಗೆ ಯುವಕನನ್ನು ಕರೆದಿದ್ದಾರೆ.

    ವೇದಿಕೆಗೆ ತೆರಳಿದ ಯುವಕ,”ನನ್ನ ಖಾತೆಗೆ 15 ಲಕ್ಷ ರೂ. ಬಂದಿದೆ. ಪ್ರಧಾನಿ ಮೋದಿ ಅವರು ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ನಡೆಸುವ ಮೂಲಕ ಉಗ್ರರನ್ನು ನಾಶ ಮಾಡಿ 15 ಲಕ್ಷ ರೂ. ಹಾಕಿದ್ದಾರೆ” ಎಂದು ಭಾಷಣ ಮಾಡಿದ್ದಾನೆ.

    ಯುವಕನ ಉತ್ತರದಿಂದ ಸಿಡಿಮಿಡಿಗೊಂಡ ದಿಗ್ವಿಜಯ್ ಸಿಂಗ್ ತಕ್ಷಣ ಆತನನ್ನು ವೇದಿಕೆಯಿಂದ ಕೆಳಗಿಳಿಸಿದ್ದಾರೆ. 15 ಲಕ್ಷ ರೂ. ಬಂತೇ ಎಂದಷ್ಟೇ ನಾನು ಕೇಳಿದ್ದೇ ಎಂದು ಕೋಪದಿಂದಲೇ ನಂತರ ಭಾಷಣ ಮುಂದುವರಿಸಿದರು.

  • 2019 ಲೋಕಸಮಯ: ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾಸಿಂಗ್ ಸ್ಪರ್ಧೆ?

    2019 ಲೋಕಸಮಯ: ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾಸಿಂಗ್ ಸ್ಪರ್ಧೆ?

    ಭೋಪಾಲ್: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಭೋಪಾಲ್ ನಿಂದ ಚುನಾವಣಾ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.

    ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪ್ರಜ್ಞಾ ಸಿಂಗ್, ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲುವು ಪಡೆಯುವುದು ನಿಶ್ಚಿತ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮಹಾರಾಷ್ಟ್ರದ ಬಿಜೆಪಿ ನಾಯಕರಾದ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ರಾಮ್ ಲಾಲ್ ಅವರನ್ನು ಪ್ರಜ್ಞಾಸಿಂಗ್ ಭೇಟಿ ಮಾಡಿದ್ದಾರೆ ಎನ್ನಲಾಗಿದ್ದು, ಸದ್ಯ ಭೋಪಾಲ್ ಬಿಜೆಪಿ ಅಭ್ಯರ್ಥಿಯಾಗಿರುವ ಅಲೋಕ್ ಸಂಜರ್ ಕೂಡ ಪ್ರಜ್ಞಾರ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶದ ವಿರುದ್ಧ ಮಾತನಾಡುವ ದ್ರೋಹಿಗಳ ವಿರುದ್ಧ ಸ್ಪರ್ಧೆ ಮಾಡುವ ಇಚ್ಛೆ ಇದ್ದು, ಪಕ್ಷ ನನಗೆ ಟಿಕೆಟ್ ನೀಡುವ ವಿಶ್ವಾಸ ಇದೆ ಎಂದು ಪ್ರಜ್ಞಾ ಸಿಂಗ್ ತಿಳಿಸಿದ್ದಾರೆ.

    1989 ರ ನಂತರ ಕಾಂಗ್ರೆಸ್ ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಪಡೆದಿಲ್ಲ. ಕಳೆದ ಚುನಾವಣೆಯಲ್ಲೂ ಬಿಜೆಪಿಯ ಅಲೋಕ್ ಸಂಜರ್ 3.7 ಲಕ್ಷ ಮತಗಳಿಂದ ಗೆಲುವು ಪಡೆದಿದ್ದರು. 2008ರ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರಿಂದ ಬಂಧನಕ್ಕೆ ಒಳಗಾದ ಸ್ವಾಧ್ವಿ ಕಳೆದ ವರ್ಷ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ತಾನು ಕೃತ್ಯದಲ್ಲಿ ಭಾಗಿಯಾಗದೇ ಇದ್ದರೂ ನನ್ನ ಮೇಲೆ ಯುಪಿಎ ಸರ್ಕಾರ ಸುಳ್ಳು ಆರೋಪವನ್ನು ಹೊರಿಸಿತ್ತು ಎಂದು ಸಾಧ್ವಿ ಮಾಧ್ಯಮವೊಂದರ ಸಂದರ್ಶನದಲ್ಲಿ ತಿಳಿಸಿದ್ದರು.

    ದಿಗ್ವಿಜಯ್ ಸಿಂಗ್ ಅವರನ್ನು ಬಿಜೆಪಿ ನಾಯಕರು ಹಿಂದೂ ವಿರೋಧಿ ನಾಯಕ ಎಂದೇ ಬಿಂಬಿಸುತ್ತಿದ್ದಾರೆ. ದಿಗ್ವಿಜಯ್ ಅವರು ಮಾಲೆಗಾಂವ್ ಸ್ಫೋಟದ ಬಳಿಕ ‘ಹಿಂದು ಉಗ್ರಗಾಮಿಗಳು’ ಎಂದು ಕರೆದು ಬಿಜೆಪಿ ಆರೋಪಿಗಳನ್ನು ಬೆಂಬಲಿಸುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದರು. ಈಗ ದಿಗ್ವಿಜಯ್ ಅವರಿಗೆ ಕೌಂಟರ್ ಕೊಡಲೆಂದು ಬಿಜೆಪಿ ಭೋಪಾಲ್ ನಿಂದ ಸಾಧ್ವಿ ಅವರಿಗೆ ಟಿಕೆಟ್ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ.

  • ‘ರಾಮಪಥ’ ನಿರ್ಮಾಣಕ್ಕೆ ಕಾಂಗ್ರೆಸ್ ಬದ್ಧ: ದಿಗ್ವಿಜಯ್ ಸಿಂಗ್

    ‘ರಾಮಪಥ’ ನಿರ್ಮಾಣಕ್ಕೆ ಕಾಂಗ್ರೆಸ್ ಬದ್ಧ: ದಿಗ್ವಿಜಯ್ ಸಿಂಗ್

    ಭೋಪಾಲ್: ಪೌರಾಣಿಕ ಮಾರ್ಗ ‘ರಾಮಪಥ’ ನಿರ್ಮಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

    ಹಿಂದೂಗಳ ಆರಾಧ್ಯದೇವ ಶ್ರೀರಾಮ 14 ವರ್ಷಗಳ ವನವಾಸದ 11 ವರ್ಷ ಮಧ್ಯಪ್ರದೇಶ ಅರಣ್ಯ ಪ್ರದೇಶದಲ್ಲಿ ಸಂಚರಿಸಿದ ಎಂದು ಹೇಳಲಾಗುವ ಮಾರ್ಗವನ್ನು ಕಾಂಗ್ರೆಸ್ ಸರ್ವೆ ನಡೆಸಿ ನಿರ್ಮಾಣ ಮಾಡಲಾಗುತ್ತದೆ. ರಾಮಪಥದ ಜೊತೆಗೆ ‘ನರ್ಮದಾ ಪರಿಕ್ರಮ ಪಥ’ ನಿರ್ಮಿಸಲಾಗುವುದು. ರಾಮಪಥ ನಿರ್ಮಾಣಕ್ಕಾಗಿ ಜನರು ಕಾಂಗ್ರೆಸ್ ಅಧಿಕಾರಕ್ಕೆ ತರಬೇಕಿದೆ ಎಂದು ದಿಗ್ವಿಜಯ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

    ಆಡಳಿತ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ರಾಮಪಥ ನಿರ್ಮಿಸಲಾಗುವುದು ಎಂದು ಭರವಸೆ ನೀಡಿತ್ತು. ಅಧಿಕಾರ ಗದ್ದುಗೆ ಹಿಡಿದ ಬಿಜೆಪಿ ಕೊಟ್ಟ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಮಧ್ಯಪ್ರದೇಶದ ಗಡಿ ಭಾಗದವರೆಗೂ ರಾಮಪಥವನ್ನು ನಾವು ನಿರ್ಮಿಸುತ್ತೇವೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಗೋ ಮಾತೆಯ ಬಗ್ಗೆ ದೊಡ್ಡ ಮಾತುಗಳನ್ನಾಗಿ ಗೆದ್ದ ಬಳಿಕ ಮರೆತು ಬಿಡ್ತಾರೆ. ಇದೂವರೆಗೂ ರಾಜ್ಯದಲ್ಲಿ ಗೋ ಶಾಲೆ ನಿರ್ಮಿಸಲು ವಿಫಲವಾಗಿದ್ದು, ಸರ್ಕಾರದ ಆಡಳಿತ ವೈಖರಿಗೆ ಕೈಗನ್ನಡಿಯಾಗಿದೆ. ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದ್ರೆ ಗೋವುಗಳಿಗಾಗಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ‘ಗೋ ಶಾಲೆ’ ಆರಂಭಿಸಲಾಗುವುದು ಎಂದು ದಿಗ್ವಿಜಯ್ ಸಿಂಗ್ ಭರವಸೆ ನೀಡಿದರು.

    ಏನಿದು ನರ್ಮದಾ ಪರಿಕ್ರಮ ಪಥ?
    ನರ್ಮದಾ ನದಿಗೆ ಪ್ರದಕ್ಷಿಣೆ ಹಾಕುವ ಧಾರ್ಮಿಕ ಪದ್ಧತಿಗೆ ‘ನರ್ಮದಾ ಪರಿಕ್ರಮ’ ಎಂದು ಕರೆಯುತ್ತಾರೆ. ಒಟ್ಟು 3,300 ಕಿ.ಮೀ. ಉದ್ದದ ನರ್ಮದಾ ನದಿಗೆ ಭಕ್ತರು ಪ್ರದಕ್ಷಿಣೆ ಹಾಕುತ್ತಾರೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳಿಗಾಗಿ ಸುಸಜ್ಜಿತ ಮತ್ತು ಮೂಲಭೂತ ಸೌಕರ್ಯಯುಳ್ಳ ಮಾರ್ಗ ಅಭಿವೃದ್ಧಿ ಆಗಬೇಕಿದೆ.

    ಅಕ್ಟೋಬರ್ 1, 2017ರಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ‘ರಾಮ ಗಮನ ಪಥ’ ನಿರ್ಮಿಸುತ್ತೇವೆ ಎಂಬ ಭರವಸೆ ನೀಡಿದ್ದರು. ರಾಮಪಥ ಮಧ್ಯಪ್ರದೇಶದ ಸಾತ್ನಾ, ಪನ್ನಾ, ಶಾದೋಲ್, ಜಬಲ್ಪುರ ಮತ್ತು ವಿದಿಶಾ ಜಿಲ್ಲೆಗಳಲ್ಲಿ ನಿರ್ಮಾಣ ಆಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv