Tag: digvijaya singh

  • ಬಿಜೆಪಿ ವಿರುದ್ಧ ಕಿಡಿಕಾರಲು ಹೋಗಿ ಎಡವಟ್ಟು: ಕ್ಷಮೆ ಕೇಳಿದ ದಿಗ್ವಿಜಯ್ ಸಿಂಗ್

    ಬಿಜೆಪಿ ವಿರುದ್ಧ ಕಿಡಿಕಾರಲು ಹೋಗಿ ಎಡವಟ್ಟು: ಕ್ಷಮೆ ಕೇಳಿದ ದಿಗ್ವಿಜಯ್ ಸಿಂಗ್

    ನವದೆಹಲಿ: ಭೋಪಾಲ್ ನಗರ ಮೆಟ್ರೋ ಸೇತುವೆ ಚಿತ್ರ ಎಂದು ಫೇಕ್ ಫೋಟೋವನ್ನು ಟ್ವೀಟ್ ಮಾಡಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದಾರೆ.

    ತಮ್ಮ ಟ್ವಿಟ್ಟರ್ ಖಾತೆಯಿಂದ ಫೋಟೋವೊಂದನ್ನು ಶನಿವಾರ ಟ್ವೀಟ್ ಮಾಡಿದ್ದ ಅವರು, ಇದು ಮಧ್ಯಪ್ರದೇಶದ ಭೋಪಾಲ್ ನಗರದ ಸೇತುವೆಯಾಗಿದ್ದು, ಈಗಾಗಲೇ ಸೇತುವೆಗೆ ಡ್ಯಾಮೇಜ್ ಆಗಿದೆ. ಬಿಜೆಪಿ ನಾಯಕರು ಕೇವಲ ಸಿದ್ಧಾಂತಗಳನ್ನು ಮಾತನಾಡುತ್ತಾರೆ. ಆದರೆ ಇದು ಅವರಿಗೆ ತಿಳಿಯುವುದಿಲ್ಲ ಎಂದು ಬರೆದುಕೊಂಡಿದ್ದರು. ಅಲ್ಲದೇ ತಮ್ಮ ಟ್ವೀಟ್ ನಲ್ಲಿ ವಾರಣಾಸಿ ಸೇತುವೆ ಕುಸಿತ ಕುರಿತು ಉಲ್ಲೇಖಿಸಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸಲು ಕೋರಿದ್ದರು.

    https://twitter.com/digvijaya_28/status/1005679859732008961

    ಈ ಫೋಟೋ ಹಿಂದಿನ ಸತ್ಯಾಂಶವನ್ನು ಬಿಚ್ಚಿಟ್ಟ ಹಿರಿಯ ಪತ್ರಕರ್ತರೊಬ್ಬರು 2016ರ ಚಿತ್ರವನ್ನು ನೀವು ಅಪ್ಲೋಡ್ ಮಾಡಿದ್ದೀರಿ. ಪಾಕಿಸ್ತಾನದ ರಾವಲ್ಪಿಂಡಿ ಮೆಟ್ರೋ ಸೇತುವೆ ಚಿತ್ರ ಎಂದು ಮರು ಟ್ವೀಟ್ ಮಾಡಿದ್ದರು. ಅಲ್ಲದೇ ತೆಲಂಗಾಣ ಸಚಿವ, ತೆಲಂಗಾಣ ರಾಷ್ಟ್ರ ಸಮಿತಿಯ ನಾಯಕ ಕೆಟಿ ರಾಮರಾವ್ ಅವರು ಸಹ ಚಿತ್ರದ ಕುರಿತು ಮಾಹಿತಿ ಹಂಚಿಕೊಂಡಿದ್ದರು.

    ಪತ್ರಕರ್ತರ ಸ್ಪಷ್ಟನೆ ಕೇಳುತ್ತಿದಂತೆ ಎಚ್ಚೆತ್ತ ದಿಗ್ವಿಜಯ್ ಸಿಂಗ್ ಅವರು ತನ್ನ ಸ್ನೇಹಿತ ಕಳುಹಿಸಿದ ಚಿತ್ರವನ್ನು ತಾನು ಟ್ವೀಟ್ ಮಾಡಿದ್ದು, ಈ ಕುರಿತು ಮಾಹಿತಿ ಪಡೆದಿರಲಿಲ್ಲ ಎಂದು ಕ್ಷಮೆ ಕೇಳಿದ್ದಾರೆ.

    ಇದೇ ಮೊದಲಲ್ಲ: ಈ ಹಿಂದೆಯೂ ಕಾಂಗ್ರೆಸ್ ಹಿರಿಯ ನಾಯಕರಾದ ದಿಗ್ವಿಜಯ್ ಸಿಂಗ್ ಅವರು ಟ್ವೀಟ್‍ರಲ್ಲಿ ಪೋಸ್ಟ್ ಮಾಡಿ ಹಲವು ಎಡವಟ್ಟುಗಳನ್ನು ಮಾಡಿಕೊಂಡಿದ್ದರು. ಒಮ್ಮೆ ಕಾಂಗ್ರೆಸ್ ಸಂಸದೆ ರಾಜಕುಮಾರಿ ರತ್ನಾಸಿಂಗ್ ಅವರ ಬಗ್ಗೆ ಟ್ವೀಟ್ ಮಾಡಿ ರಾಜೀವ್ ಗಾಂಧಿ ಬದಲಾಗಿ ರಾಹುಲ್ ಗಾಂಧಿ ಸಂಪುಟದಲ್ಲಿ ಕಾರ್ಯನಿರ್ವಹಿಸಿದ್ದರು ಎಂದು ಟ್ವೀಟ್ ಮಾಡಿ ಬಳಿಕ ಡಿಲೀಟ್ ಮಾಡಿದ್ದರು. ಅಲ್ಲದೇ ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಪೋಪ್ ಕುರಿತ ಫೇಕ್ ವಿಡಿಯೋ ಟ್ವೀಟ್ ಮಾಡಿ ಪ್ರಮಾದ ಎಸಗಿದ್ದರು.

  • ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಿಂದ ದಿಗ್ವಿಜಯ್ ಸಿಂಗ್‍ಗೆ ಕೊಕ್

    ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಿಂದ ದಿಗ್ವಿಜಯ್ ಸಿಂಗ್‍ಗೆ ಕೊಕ್

    – ಗೋವಾ ಖುರ್ಚಿಯಿಂದಲೂ ಕಿಕ್‍ಔಟ್
    – ಕರ್ನಾಟಕಕ್ಕೆ ಬಂದ್ರು ಕೆ.ಸಿ. ವೇಣುಗೋಪಾಲ್

    ನವದೆಹಲಿ: ರಾಜ್ಯ ಕಾಂಗ್ರೆಸ್‍ನಲ್ಲಿ ಎಲೆಕ್ಷನ್ ಹೊಸ್ತಿಲಲ್ಲೇ ದೊಡ್ಡ ಬದಲಾವಣೆ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ದಿಗ್ವಿಜಯ್ ಸಿಂಗ್‍ಗೆ ಕೊಕ್ ಕೊಡಲಾಗಿದೆ. ಗೋವಾ ಉಸ್ತುವಾರಿಯಿಂದಲೂ ಕೊಕ್ ನೀಡಲಾಗಿದೆ.

    ದಿಲ್ಲಿ ಮಟ್ಟದ ಕೆಲ ನಾಯಕರು ಹಾಗೂ ರಾಜ್ಯ ಮಟ್ಟದ ಕೆಲ ನಾಯಕರಿಂದಲೂ ದಿಗ್ವಿಜಯ್ ಉಸ್ತುವಾರಿಗೆ ವಿರೋಧ ಇತ್ತು. ಇದೇ ಕಾರಣದಿಂದ ಹೈಕಮಾಂಡ್, ದಿಗ್ವಿಜಯ್ ಸಿಂಗ್ ಅವರನ್ನು ಉಸ್ತುವಾರಿ ಸ್ಥಾನದಿಂದ ಕೆಳಗಿಳಿಸಿದೆ ಎನ್ನಲಾಗಿದೆ. ದಿಗ್ವಿಜಯ್ ಸಿಂಗ್ ಸ್ಥಾನಕ್ಕೆ ಕೇರಳ ಮೂಲದ ಹಾಲಿ ಸಂಸದ, 48 ವರ್ಷದ ಕೆ.ಸಿ. ವೇಣುಗೋಪಾಲ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

    ಇವರ ಜೊತೆ ಮಾಣಿಕಂ ಠಾಗೂರ್, ಪಿ.ಸಿ. ವಿಶ್ವನಾಥ್, ಮಧು ಯಕ್ಷಿಗೌಡ್, ಡಾ. ಸಾಯಿಲಿಂಗನಾಥ್ ಅವರನ್ನು ಕಾರ್ಯದರ್ಶಿಗಳನ್ನಾಗಿ ನೇಮಿಸಿದೆ. ಇನ್ನು ಗೋವಾ ಉಸ್ತುವಾರಿಯನ್ನಾಗಿ ಡಾ. ಚಲ್ಲಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

    ಕೆಸಿ ವೇಣುಗೋಪಾಲ್ ಯಾರು?
    ಕಾಲೇಜು ದಿನಗಳಲ್ಲೇ ಎನ್‍ಎಸ್‍ಯುಐ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟ ವೇಣುಗೋಪಾಲ್ 1992 ರಿಂದ 8 ವರ್ಷ ಕೇರಳದ ಯೂಥ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಗಣಿತದಲ್ಲಿ ಸ್ನಾತಕೋತ್ತರ ಪದವಿ ಮಾಡಿರುವ ಇವರು 1996, 2001, ಹಾಗೂ 2006ರಲ್ಲಿ ಆಲ್ಲಪುಜ್ಜಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2004 – 2006 ಕೇರಳದ ಯುಡಿಎಫ್ ಸರ್ಕಾರದಲ್ಲಿ ಸಚಿವರಾಗಿದ್ದ ವೇಣುಗೋಪಾಲ್ 2009ರಲ್ಲಿ ಮೊದಲ ಬಾರಿ ಆಲ್ಲಪುಜ್ಜಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆಗಿದ್ದರು. ಯುಪಿಎ 2ನೇ ಅವಧಿಯಲ್ಲಿ ಕೇಂದ್ರದಲ್ಲಿ ರಾಜ್ಯಖಾತೆ ವಿಮಾನಯಾನ ಸಚಿವ 2014ರಲ್ಲಿ ಸಂಸದರಾಗಿ ಮರು ಆಯ್ಕೆ ಆಗಿದ್ದರು. ಸಚಿವರಾಗಿದ್ದ ವೇಳೆ ವಿಮಾನದಲ್ಲಿ ಟಿಕೆಟ್ ಹಗರಣವನ್ನು ಪತ್ತೆ ಮಾಡಿದ್ರು.

  • ಹಸುಗಳ ಆಧಾರ್ ಕಾರ್ಡ್ ವೆಚ್ಚವನ್ನು ಯಾರು ಭರಿಸ್ತಾರೆ? ಗುತ್ತಿಗೆ ಗೋ ರಕ್ಷಕರಿಗೆ ಸಿಗುತ್ತಾ: ದಿಗ್ವಿಜಯ್ ಪ್ರಶ್ನೆ

    ಹಸುಗಳ ಆಧಾರ್ ಕಾರ್ಡ್ ವೆಚ್ಚವನ್ನು ಯಾರು ಭರಿಸ್ತಾರೆ? ಗುತ್ತಿಗೆ ಗೋ ರಕ್ಷಕರಿಗೆ ಸಿಗುತ್ತಾ: ದಿಗ್ವಿಜಯ್ ಪ್ರಶ್ನೆ

    ನವದೆಹಲಿ: ಆಧಾರ್ ರೀತಿಯ ವಿಶಿಷ್ಟ ಗುರುತು ಸಂಖ್ಯೆಯನ್ನು ಹಸುಗಳಿಗೂ ನೀಡಲು ಹೊರಟಿರುವ ಕೇಂದ್ರದ ಪ್ರಸ್ತಾಪಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಕಿಡಿ ಕಾರಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು ಆಧಾರ್ ವ್ಯವಸ್ಥೆ ಜಾರಿಗೆ ತಗಲುವ ವೆಚ್ಚವನ್ನು ಯಾರು ಭರಿಸುತ್ತಾರೆ ಎಂದು ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

    ಮೋದಿಜೀ ಏನಾಯ್ತು? ಈಗ ನೀವು ಹಸುಗಳಿಗೂ ಆಧಾರ್ ಕಾರ್ಡ್ ನೀಡುತ್ತೀರಾ. ಇದಕ್ಕೆ ಎಷ್ಟು ಖರ್ಚಾಗುತ್ತದೆ? ಇದರ ಗುತ್ತಿಗೆ ಗೋ ರಕ್ಷಕರಿಗೆ ಸಿಗುತ್ತಾ ಎಂದು ಪ್ರಶ್ನಿಸಿದ್ದಾರೆ. ಈ ಆಧಾರ್ ಬಂದ ನಂತರ ಮಾಂಸ ವ್ಯಾಪಾರ ಮಾಡುವ ಮುಸ್ಲಿಮ್ ಬಾಂಧವರಿಗೆ ಗೋ ರಕ್ಷಕರಿಂದ ರಕ್ಷಣೆ ಸಿಗುತ್ತದೆ ಎಂದು ಭರವಸೆ ನೀಡುತ್ತೀರಾ ಎಂದು ಕೇಳಿದ್ದಾರೆ.

    ಮೋದಿ ಭಕ್ತರೇ.. ಅಹಿಂಸಾತ್ಮಕವಾಗಿ ಗೋವುಗಳನ್ನು ರಕ್ಷಣೆ ಮಾಡುವುದನ್ನು ತಿಳಿದುಕೊಳ್ಳಿ. ದೇಶ ಒಡೆಯುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ.

    ದೇಶಾದ್ಯಂತ ಇರುವ ಪ್ರತಿ ಹಸು ಮತ್ತು ಅದರ ಸಂತತಿಗೆ “ವಿಶಿಷ್ಟ ಗುರುತಿನ ಸಂಖ್ಯೆ’ಯನ್ನು ಕಡ್ಡಾಯಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ  ಸೋಮವಾರ ಸುಪ್ರೀಂಗೆ ಸಲ್ಲಿಸಿತ್ತು.

    ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ ರಚಿಸಿದ್ದ ಸಮಿತಿಯ ವರದಿಯನ್ನು ಕೋರ್ಟ್‍ಗೆ ಒಪ್ಪಿಸಿದ ಕೇಂದ್ರ, ಹಸುಗಳ ಕಳ್ಳಸಾಗಣೆ ತಡೆಯಲು ಪ್ರತಿ ಜಿಲ್ಲೆ ಯಲ್ಲೂ ಕನಿಷ್ಠ 500 ಹಸುಗಳ ವಾಸಕ್ಕೆ ಅಗತ್ಯ ವಿರುವ ಗೋಶಾಲೆ ನಿರ್ಮಿಸಿ, ಬಿಡಾಡಿ ದನಗಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದೆ. ಅಷ್ಟೇ ಅಲ್ಲದೇ ಬಿಡಾಡಿ ದನಗಳನ್ನು ಪೋಷಿಸುವ ಜವಾಬ್ದಾರಿ ಆಯಾ ರಾಜ್ಯ ಸರ್ಕಾರಗಳದ್ದಾಗಿದೆ ಎಂದು ಹೇಳಿದೆ.