Tag: Dikeshi

  • ನಿಮ್ಮ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಹೆಸರು ಬಹಿರಂಗಪಡಿಸಿ – ಕಾಂಗ್ರೆಸ್‍ಗೆ ರೇಣುಕಾಚಾರ್ಯ ಸವಾಲ್

    ನಿಮ್ಮ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಹೆಸರು ಬಹಿರಂಗಪಡಿಸಿ – ಕಾಂಗ್ರೆಸ್‍ಗೆ ರೇಣುಕಾಚಾರ್ಯ ಸವಾಲ್

    ದಾವಣಗೆರೆ: ನಿಮ್ಮ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಹೆಸರು ಬಹಿರಂಗಪಡಿಸಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಸವಾಲು ಹಾಕಿದ್ದಾರೆ.

    ಬಿಜೆಪಿ ಪಕ್ಷದಲ್ಲಿ ಒಗ್ಗಟ್ಟಿಲ್ಲ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಉತ್ತರಿಸಿದ ಅವರು, ಬಿಜೆಪಿ ಸಚಿವರು, ಶಾಸಕರು ಒಗ್ಗಟ್ಟಾಗಿದ್ದಾರೆ. ಕಾಂಗ್ರೆಸ್ ಪಕ್ಷದವರು ಅಧಿಕಾರದ ಹಗಲು ಕನಸು ಕಾಣುತ್ತಿದ್ದಾರೆ. ಬಿಜೆಪಿಯ ಎಲ್ಲ ಶಾಸಕರು ಸಿಂಹಗಳಿದ್ದಂತೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಗಲು ಕನಸು ಕಾಣುತ್ತಾ ಭ್ರಮಾಲೋಕದಲ್ಲಿ ಇರಬೇಡಿ. ನಿಮ್ಮ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಹೆಸರು ಬಹಿರಂಗಪಡಿಸಿ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಪಿಂಚಣಿ ಪಡೆಯಲು ಚಿಕ್ಕಪ್ಪನ ಶವವನ್ನ ಪೋಸ್ಟ್ ಆಫೀಸ್‍ಗೇ ತಂದ!

    ಕಾಂಗ್ರೆಸ್ ಅವರು ತಮ್ಮಲ್ಲಿರುವ ವ್ಯತ್ಯಾಸಗಳನ್ನು ಮರೆಮಾಚಲು ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಎರಡು ಬಾರಿ ಪ್ರತಿಪಕ್ಷದ ಸ್ಥಾನ ಕಳೆದುಕೊಂಡಿದ್ದೀರಿ. ಕಾಂಗ್ರೆಸ್ ದೇಶದಲ್ಲಿಯೇ ವಿಳಾಸ ಇಲ್ಲದಂತಾಗಿದೆ. ರಾಜ್ಯದಲ್ಲಿ ಹಿಂದೆ ಕಾಂಗ್ರೆಸ್ ನಿಂದ 121 ಶಾಸಕರು ಇದ್ರಿ ಈಗ ಎಷ್ಟು ಜನ ಇದೀರಾ ಲೆಕ್ಕಾ ಹಾಕಿ. ನೀವು ಧರ್ಮ ಹೊಡೆಯುತ್ತೀರಿ, ಜಾತಿಯ ವಿಷ ಬೀಜ ಬಿತ್ತುತ್ತೀರಿ. ನಾಟಕೀಯವಾಗಿ ಪಾದಯಾತ್ರೆ ಮಾಡ್ತೀರಾ ಎಂದು ವ್ಯಂಗ್ಯವಾಡಿದ್ದಾರೆ.

    2023ಕ್ಕೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ಬಿಜೆಪಿಗೆ ಬಂದರೂ ಆಶ್ಚರ್ಯಪಡಬೇಕಿಲ್ಲ. ಕಾಂಗ್ರೆಸ್ ನ ಹಿರಿಯ ಶಾಸಕ, ಮಾಜಿ ಸಚಿವರು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ನಮ್ಮ ಶಾಸಕರ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್‍ನಲ್ಲಿದ್ದವರಿಗೆ ಭವಿಷ್ಯವಿಲ್ಲ, ಕಾಂಗ್ರೆಸ್ ಮುಳುಗುವ ಹಡಗು ಎಂದು ಟೀಕಿಸಿದ್ದಾರೆ.

    ಮಧ್ಯ ಕರ್ನಾಟಕಕ್ಕೆ ಒಂದು ಸಚಿವ ಸ್ಥಾನ ನೀಡ್ಬೇಕೆಂದು ಸಿಎಂಗೆ ಕೇಳಿದ್ದೇವೆ. ನಾಲ್ಕು ಗೋಡೆಗಳ ಮಧ್ಯೆ ಸಚಿವ ಸ್ಥಾನಕ್ಕಾಗಿ ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದೇವೆ. ಸಿಎಂ ಬೊಮ್ಮಾಯಿ ಸಮರ್ಥರಾಗಿದ್ದಾರೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡ್ತಿದ್ದೇವೆ. ನಾನು ಯತ್ನಾಳ್ ಆತ್ಮೀಯ ಸ್ನೇಹಿತರು, ನಮ್ಮ ಮಧ್ಯೆ ಸಣ್ಣಪುಟ್ಟ ವ್ಯತ್ಯಾಸಗಳು ಬಂದಿವೆ. ಯತ್ನಾಳ್ ಹಾಗೂ ನನ್ನಿಂದ ಪಕ್ಷಕ್ಕೆ ಮುಜುಗರ ಆಗಬಾರದೆಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಮಾತನಾಡಿದ್ವೀ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಪ್ಪು ಮುಸುಕು ಧರಿಸಿ ಸರ್ಕಾರದ ವಿರುದ್ಧ ಸಫಾಯಿ ಕರ್ಮಚಾರಿಗಳ ಆಕ್ರೋಶ

    2023ಕ್ಕೆ ಬಿಜೆಪಿ ಅಧಿಕಾರಕ್ಕೆ ಬರಲು ಇಬ್ಬರು ಆತ್ಮೀಯ ಸ್ನೇಹಿತರಾಗಿ ಕೆಲಸ ಮಾಡುತ್ತೇವೆ. ಸಚಿವ ಸ್ಥಾನಕ್ಕಾಗಿ ನಾನು ಯಾವತ್ತೂ ಹಠ ಹಿಡಿದಿಲ್ಲ. ಸಚಿವ ಸ್ಥಾನಕ್ಕೆ ಹಠ ಹಿಡಿದಿದ್ದರೆ ಯಾವತ್ತೋ ಸಚಿವನಾಗುತ್ತಿದ್ದೆ ಎಂದಿದ್ದಾರೆ.

  • ಮಾಜಿ ಶಾಸಕ, ಜೆಡಿಎಸ್ ನಾಯಕ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆ

    ಮಾಜಿ ಶಾಸಕ, ಜೆಡಿಎಸ್ ನಾಯಕ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆ

    ಬೆಳಗಾವಿ: ನವಲಗುಂದ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಹಿರಿಯ ನಾಯಕ ಕೋನರೆಡ್ಡಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

    ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಕೋನರೆಡ್ಡಿ ಅವರಿಗೆ ಪಕ್ಷದ ಧ್ವಜವನ್ನು ನೀಡಿ ಸ್ವಾಗತಿಸಲಾಯಿತು.

    ಮಾಧ್ಯಮಗಳೊಂದಿಗೆ ಮಾತನಾಡಿದ ಕೋನರೆಡ್ಡಿ, ನಾನು ಜೆಡಿಎಸ್‍ಗೆ ಇಂದು ರಾಜೀನಾಮೆ ಕಳುಹಿಸಿದ್ದೇನೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ, ನಾನು ಸಿದ್ದರಾಮಣ್ಣ ಅಂದಿದ್ದೆ. ಆಗ ನಾನು ಸಿದ್ದರಾಮಣ್ಣ ಅಂತಾ ಏಕವಚನದಲ್ಲಿ ಅಂದಿದ್ದೆ. ಆ ರೀತಿ ಅಂದಿದ್ದನ್ನ ನಾನು ಅಂದು ಕಡತದಿಂದ ತಗೆಯುವಂತೆ ಮಾಡಿದ್ದೆ. ಆಗ ಸಿದ್ದರಾಮಯ್ಯ ಅವರು, ನೀನೂ ನನಗೆ ಸಿದ್ದರಾಮಣ್ಣ ಇನ್ಯಾರು ಅಂತಾ ಹೇಳಿದ್ರು ಎಂದು ತಿಳಿಸಿದರು. ಇದನ್ನೂ ಓದಿ: ಕರೆನ್ಸಿ ನೋಟುಗಳ ಮೇಲೆ ನೇತಾಜಿ ಫೋಟೋ ಮುದ್ರಿಸಿ: ಹರೇನ್ ಬಿಸ್ವಾಸ್ ಮನವಿ

    ಡಿಕೆ ಶಿವಕುಮಾರ್ ಒಂದು ತರಹ ಕುದುರೆ ಇದ್ದ ಹಾಗೆ. ನಾನು ಎಲ್ಲೆ ಇದ್ರು ಪ್ರೀತಿಯಿಂದ ಮಾತನಾಡಿಸುತ್ತಿದ್ದರು. ನಾನು ಜೆಡಿಎಸ್ ಬಿಡಬೇಕು ಅಂತಾ ಇರಲಿಲ್ಲ. ಕ್ಷೇತ್ರದ ಜನರು ಒತ್ತಾಯ ಮಾಡಿದ್ರು. ಹೀಗಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಬೇಕಾಯ್ತು ಎಂದರು.

    ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರಯ ನನ್ನನ್ನು ಹೋಗಬೇಡ ಅಂದ್ರು. ಆಗ ನಾನು ಕ್ಷೇತ್ರದ ಜನರ ಒತ್ತಾಯ ಮೇರೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದೇನೆ. ಪಕ್ಷವನ್ನ ನಾನು ತಾಯಿ ಎಂದು ತಿಳಿದುಕೊಂಡು ಕೆಲಸ ಮಾಡಿದ್ದೇನೆ. ನಾನು ನಾಲ್ಕು ಬಾರಿ ಸ್ಪರ್ಧೆ ಮಾಡಿ ಗೆಲುವು ಕಂಡವನು. ಪ್ರಧಾನಿ ಮೋದಿ ಅಲೆಯಿಂದ ಕಳೆದ ಬಾರಿ ಸೋಲು ಕಂಡೆ. ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ಕೃಷಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಹೋರಾಟ ಸ್ಪೂರ್ತಿ ಆಯ್ತು. ರಾಹುಲ್ ಗಾಂಧಿ, ಸೋನಿಯಾಗಾಂಧಿ ಅವರ ರೈತ ಪರ ನಿಲುವು ಕಂಡು ಕಾಂಗ್ರೆಸ್ ಸೇರ್ಪಡೆಯಾದೆ. ಪಕ್ಷ ಕೊಟ್ಟ ಜವಾಬ್ದಾರಿ ನಿರ್ವಹಿಸುವೆ ಎಂದು ಭರವಸೆಯ ಮಾತುಗಳನ್ನು ನುಡಿದರು.

    ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ಕೋನರೆಡ್ಡಿ ಅವರಿಗೆ ಇವತ್ತು ದೊಡ್ಡ ಭಾಗ್ಯ ಸಿಕ್ಕಿದೆ. ಬೆಳಗಾವಿಯ ಕಚೇರಿಯಲ್ಲಿ ನಾನು ಕೋನರೆಡ್ಡಿ ಅವರ ವಿಚಾರವಾಗಿ ಎಐಸಿಸಿಗೂ ತಿಳಿಸಿ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಕಡೆ ದಳ ಕಟ್ಟುವುದು ಸರಳ. ಆದ್ರೆ ಕೋನರೆಡ್ಡಿ ಅವರ ಶಕ್ತಿಯಿಂದ ದಳ ಕಟ್ಟಿದ್ರು. ನಾವೂ ಎನೂ ಆಪರೇಷನ್ ಹಸ್ತ ಆರಂಭಿಸಿಲ್ಲ. ಪಕ್ಷದ ಸಿದ್ಧಾಂತಗಳನ್ನ ಒಪ್ಪಿಕೊಂಡು ಸೇರ್ಪಡೆ ಆಗುತ್ತಿದ್ದಾರೆ ಎಂದು ತಿಳಿಸಿದರು.

    DK SHIVAKUMAR

    ಧಾರವಾಡ, ಬೆಳಗಾವಿ, ಮೈಸೂರು ಸೇರಿದಂತೆ ವಿವಿಧೆಡೆ ಕಾಂಗ್ರೆಸ್ ಸದಸ್ಯರು ಹೆಚ್ಚಿರುವ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ನಾವು ಸೋಲು ಕಂಡಿರುವ ಕಡೆಗೂ ಉತ್ತಮ ಬೆಂಬಲ ದೊರೆತಿದೆ. ರಾಜ್ಯದ ಜನರ ಅಭಿಪ್ರಾಯ ಮುಂದಿನ ದಿನಗಳಲ್ಲಿ ಬದಲಾವಣೆ ಬಳಸುತ್ತಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದುಕೊಂಡು ನಾವು ಉತ್ತಮ ಸಾಧನೆ ಮಾಡಿದ್ದೇವೆ ಎಂದು ತಮ್ಮ ಕಾರ್ಯದ ಬಗ್ಗೆ ತಿಳಿಸಿದರು. ಇದನ್ನೂ ಓದಿ: 263 ಪಾಸಿಟಿವ್, 7 ಸಾವು – ಇಂದು 2,25,152 ಜನರಿಗೆ ಲಸಿಕೆ

    ಕಾಂಗ್ರೆಸ್ ಸದಸ್ಯರು ಸದಸ್ಯತ್ವ ನೊಂದಣಿ ಮಾಡಿಸಬೇಕು. ನಮ್ಮ ಪಕ್ಷದ ಮೇಲೆ ಭರವಸೆ ಇಟ್ಟು ಕೋನರೆಡ್ಡಿ ಅವರು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಪಕ್ಷದಿಂದ ಕೋನರೆಡ್ಡಿಗೆ, ಕೋನರೆಡ್ಡಿಯಿಂದ ಪಕ್ಷಕ್ಕೆ ಬಲ ಬಂದಿದೆ. ನಮ್ಮ ಹುಡುಗರನ್ನ ಜೊತೆಗೆ ಇಟ್ಟುಕೊಂಡು ಕೆಲಸ ಮಾಡಬೇಕು. ನೀವು ನಮ್ಮ ಹುಡುಗರನ್ನ ಕೈಬಿಟ್ಟರು ನಾನು ಅವರನ್ನ ಕೈಬಿಡಲ್ಲ ಎಂದು ವಿಶ್ವಾಸದ ಮಾತುಗಳನ್ನು ಆಡಿದರು.

  • ಡಿಕೆಶಿ ಭಂಡಾಸುರ, ಸಿದ್ದರಾಮಯ್ಯ ಮಂಡಾಸುರ: ಶ್ರೀರಾಮುಲು ವ್ಯಂಗ್ಯ

    ಡಿಕೆಶಿ ಭಂಡಾಸುರ, ಸಿದ್ದರಾಮಯ್ಯ ಮಂಡಾಸುರ: ಶ್ರೀರಾಮುಲು ವ್ಯಂಗ್ಯ

    ಚಿತ್ರದುರ್ಗ: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭಂಡಾಸುರ ಹಾಗೂ ಮಂಡಾಸುರರು ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

    ಚಿತ್ರದುರ್ಗದ ಎಂಎಲ್‍ಸಿ ಚುನಾವಣಾ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 400 ಲೋಕಸಭೆ ಸದಸ್ಯರಿದ್ದ ಕಾಂಗ್ರೆಸ್ ಈಗ 50ಕ್ಕೆ ತಲುಪಿದೆ. ಇಂತಹ ವೇಳೆ ಬಿಜೆಪಿ ಮುಳುಗುತ್ತಿರುವ ಹಡಗು ಎಂದು ಬಂಡಾಸುರ ಡಿಕೆಶಿ ಹೇಳಿದ್ದಾರೆಂದು ಟೀಕಿಸಿದರು.

    ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೀಯಾಳಿಸಿ ದೊಡ್ಡವಾರಾಗಬಹುದೆಂದು ಭಾವಿಸಿರುವ ಸಿದ್ದರಾಮಯ್ಯ ಹಾಗು ಡಿಕೆಶಿ ಎಂಬ ಭಂಡಾಸುರ ಮತ್ತು ಮಂಡಾಸುರರು ದೊಡ್ಡ ದೊಡ್ಡ ಮಾತು ಆಡುತ್ತಿದ್ದಾರೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುತ್ತಾರೆಂದು ಕುಟುಕಿದರು. ಇದನ್ನೂ ಓದಿ: ಮಧ್ಯವರ್ತಿಗಳಿಗೆ ಅವಕಾಶವಿಲ್ಲ, ನೇರವಾಗಿ ರೈತರ ಖಾತೆಗಳಿಗೆ ಬೆಳೆ ಪರಿಹಾರ- ಅಶೋಕ್

    ಇದೇ ವೇಳೆ ಮುರುಗೇಶ್ ನಿರಾಣಿ ಸಿಎಂ ಆಗುತ್ತಾರೆಂದಿರುವ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಲು ಹಿಂದೇಟು ಹಾಕಿದ ಅವರು, ಈ ಬಗ್ಗೆ ನಾನು ಮಾತಾಡಲ್ಲ. ಇದರ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಜಾರಿಕೊಂಡರು. ಜೊತೆಗೆ ರಾಜ್ಯದಲ್ಲಿ ಬಾರಿ ಸದ್ದು ಮಾಡ್ತಿರುವ ಬಿಟ್ ಕಾಯಿನ್ ಬಗ್ಗೆ ಭಂಡಾಸುರ, ಮಂಡಾಸುರರ ಬಳಿ ದಾಖಲೆ ಇಲ್ಲ. ಆದರೆ ನಮ್ಮ ಬುಟ್ಟಿಯಲ್ಲಿ ಹಾವಿದೆ ಎಂದು ಬಿಟ್ ಕಾಯಿನ್ ಬಗ್ಗೆ ಮಾತಾಡುತ್ತಿದ್ದಾರೆಂದು ಹೇಳಿದರು.

    ಬಿಜೆಪಿ ಪಕ್ಷದಲ್ಲಿ ಯಾವುದೇ ಕಚ್ಚಾಟ ಇಲ್ಲ. ನಮ್ಮಲ್ಲಿ ಒಗ್ಗಟ್ಟಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಕಚ್ಚಾಟ ಇದೆ ಎಂದು ಡಿಕೆಶಿಗೆ ತಿರುಗೇಟು ನೀಡಿದ್ದು, ಸಿಎಂ ಆಗಬೇಕೆಂದು ಭಂಡಾಸುರ ಹಾಗು ಮಂಡಾಸುರರ ನಡುವೆ ಪೈಪೋಟಿ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಜನಪದರ ಬಾಯಲ್ಲಿ ಹಾಡಾದ ಪುನೀತ್ – ತಾಯಂದಿರ ಕಣ್ಣಲ್ಲಿ ನೀರು ತರಿಸ್ತಿದೆ ಹಾಡು

    ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಹರಡುವ ಭೀತಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇನ್ನು ಮುಂದೆ ಜೀವನದಲ್ಲಿ ಅನೇಕ ಕಾಯಿಲೆ ಬರಬಹುದು. ರಾಜ್ಯಕ್ಕೆ ಓಮಿಕ್ರಾನ್ ಅಥವಾ ಬೇರೆ ಯಾವುದೇ ಕಾಯಿಲೆ ಬರಬಹುದು. ಅದು ಮಾನವ ಸೃಷ್ಟಿ ಅಥವಾ ನ್ಯಾಚುರಲ್ ವೈರಸ್ ಇರಬಹುದು. ಈ ಬಗ್ಗೆ ನಾನು ಚರ್ಚೆ ಮಾಡಲು ಹೋಗುವುದಿಲ್ಲ. ಆದರೆ ಸರ್ಕಾರದ ನಿಯಮಗಳನ್ನು ಜನರು ಜಾಗೃತಿಯಿಂದ ಪಾಲಿಸಬೇಕು ಎಂದು ಕರೆ ನೀಡಿದರು.

    ಈ ವೇಳೆ ಶಾಸಕರಾದ ತಿಪ್ಪಾರೆಡ್ಡಿ, ಚಂದ್ರಪ್ಪ ಶ್ರೀರಾಮುಲು ಅವರ ಜೊತೆಗಿದ್ದರು.