Tag: Dimple Hayati

  • ಐಪಿಎಸ್ ಅಧಿಕಾರಿ ಜೊತೆಗಿನ ಕಿರಿಕ್: ಬಾಲಯ್ಯನ ವಿಡಿಯೋ ಹಾಕಿ ಹಯಾತಿ ಟಾಂಗ್

    ಐಪಿಎಸ್ ಅಧಿಕಾರಿ ಜೊತೆಗಿನ ಕಿರಿಕ್: ಬಾಲಯ್ಯನ ವಿಡಿಯೋ ಹಾಕಿ ಹಯಾತಿ ಟಾಂಗ್

    ಕಾರು ಪಾರ್ಕಿಂಗ್ ವಿಚಾರವಾಗಿ ಐಪಿಎಸ್ ಅಧಿಕಾರಿ ಜೊತೆ ಕಿರಿಕ್ ಮಾಡಿಕೊಂಡಿದ್ದ ಡಿಂಪಲ್ ಹಯಾತಿ, ಈ ವಿಷಯವನ್ನು ಇಲ್ಲಿಗೆ ಬಿಡುವಂತೆ ಕಾಣುತ್ತಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಐಪಿಎಸ್ ಅಧಿಕಾರಿಯನ್ನು ಸದಾ ಕೆಣುಕುತ್ತಲೇ ಇದ್ದಾರೆ. ಐಪಿಎಸ್ ಅಧಿಕಾರಿಯನ್ನು ಉರಿಸಲೆಂದೇ ಅವರು ಬಾಲಯ್ಯ (Balayya) ನಟನ ಸಿಂಹ ಚಿತ್ರದ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅನ್ಯಾಯವಾದಾಗೆಲ್ಲ ‘ನೋ ಪೊಲೀಸ್’ ಎನ್ನುವ ಡೈಲಾಗ್ ಇದೆ.

    ತಮಗೆ ಅನ್ಯಾಯವಾಗಿದೆ. ಹಾಗಾಗಿ ನೋ ಪೊಲೀಸ್ ಎನ್ನುವ ಅರ್ಥದಲ್ಲಿ ಅದನ್ನು ಕಲ್ಪಿಸಿಕೊಳ್ಳಲಾಗುತ್ತಿದೆ. ಒಂದು ಕಡೆ ಪೊಲೀಸ್ ಅಧಿಕಾರಿ ಜೊತೆ ಕಾಲು ಕೆರೆದುಕೊಂಡು ಜಗಳಕ್ಕೆ ಇಳಿಯುತ್ತಿದ್ದರೆ ಮತ್ತೊಂದು ಕಡೆ ಡಿಂಪಲ್ ಹಯಾತಿ (Dimple Hayati) ಖಿನ್ನತೆಗೆ ಜಾರಿದ್ದಾರಂತೆ. ಅಧಿಕಾರಿ ಜೊತೆಗಿನ ಜಗಳದಿಂದಾಗಿ ನಟಿಗೆ ಬೆದರಿಕೆಯ ಕರೆಗಳು ಬರುತ್ತಿದ್ದು, ಅವುಗಳನ್ನು ಎದುರಿಸೋಕೆ ಆಗದೇ ಡಿಂಪಲ್ ಖಿನ್ನತೆಗೆ  (Depression) ಒಳಗಾಗಿದ್ದಾರೆ ಎಂದು ಮಾಧ್ಯಮಗಳ ವರದಿ ಮಾಡಿವೆ.

     

    ಸಿನಿಮಾಗಳಿಗಿಂತ ಕಿರಿಕ್ ಸುದ್ದಿಗಳಿಂದಲೇ ಹೆಚ್ಚೆಚ್ಚು ಸುದ್ದಿ ಮಾಡಿದವರು ಡಿಂಪತ್ ಹಯಾತಿ. ಈ ಹಿಂದೆಯೂ ನಾನಾ ರೀತಿಯ ವಿವಾದಗಳನ್ನು ಮೈಮೇಲೆ ಎಳೆದುಕೊಂಡವರು. ಮೊನ್ನೆಯಷ್ಟೇ ಐಪಿಎಸ್ ಅಧಿಕಾರಿ ಜೊತೆ ಡಿಂ ಕಿರಿಕ್ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ.

    ಪೊಲೀಸ್ ಅಧಿಕಾರಿ ರಾಹುಲ್ ಹೆಗ್ಡೆ(Rahul Hegde)- ಸೌತ್ ನಟಿ ಡಿಂಪಲ್ ಹಯಾತಿ ನಡುವಿನ ಜಗಳ ತಾರಕಕ್ಕೇರಿದೆ. ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿತ್ತಾಟ ಈಗ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪೊಲೀಸ್ ಅಧಿಕಾರಿಯ ಕಾರನ್ನು ಡ್ಯಾಮೇಜ್ ಮಾಡಿದ ಆರೋಪದ ಮೇಲೆ ನಟಿ ಡಿಂಪಲ್ ಹಯಾತಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

    ನಟಿ ಡಿಂಪಲ್ ಹಾಗೂ ಅವರ ಗೆಳೆಯ ವಿಕ್ಟರ್ (Victor) ಹೈದರಾಬಾದ್‌ನ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದಾರೆ. ಇದೇ ಅಪಾರ್ಟ್ಮೆಂಟ್‌ನಲ್ಲಿ ಹೈದರಾಬಾದ್‌ನ ಟ್ರಾಫಿಕ್ ಪೊಲೀಸ್ ಡೆಪ್ಯೂಟಿ ಕಮೀಷನರ್, ಐಪಿಎಸ್ ಅಧಿಕಾರಿ ರಾಹುಲ್ ಹೆಗ್ಡೆ ಕೂಡ ವಾಸವಾಗಿದ್ದಾರೆ. ಇವರ ಮಧ್ಯೆ ಕೆಲ ಸಮಯದಿಂದ ಪಾರ್ಕಿಂಗ್ ವಿಚಾರದಲ್ಲಿ ಕಿತ್ತಾಟ ನಡೆದಿದೆ. ನಟಿ ಈ ವಿಚಾರದಲ್ಲಿ ರಿವೇಂಜ್ ತೆಗೆದುಕೊಂಡಿದ್ದಾರೆ.

    ಮೇ ೧೪ರಂದು ಡಿಂಪಲ್ ಹಯಾತಿ ಅವರು ರಾಹುಲ್ ಕಾರಿಗೆ ಡ್ಯಾಮೇಜ್ ಮಾಡಿದ್ದಾರೆ. ಇದು ಉದ್ದೇಶಪೂರ್ವಕವಾಗಿತ್ತು ಎಂಬುದಕ್ಕೆ ಸಿಸಿಟಿವಿ ದೃಶ್ಯಗಳು ಸಾಕ್ಷ್ಯ ಸಿಕ್ಕಿದೆ. ಇದನ್ನು ಆಧರಿಸಿ ನಟಿ ಡಿಂಪಲ್ ವಿರುದ್ಧ ರಾಹುಲ್ ಅವರ ಕಾರು ಡ್ರೈವರ್ ದೂರು ದಾಖಲಿಸಿದ್ದರು. ಸದ್ಯ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಡಿಂಪಲ್ ಹಯಾತಿಗೆ ಸಮನ್ಸ್ ನೀಡಲಾಗಿದೆ.

  • ಐಪಿಎಸ್ ಅಧಿಕಾರಿ ಜೊತೆಗಿನ ಕಿರಿಕ್ : ಖಿನ್ನತೆಗೆ ಜಾರಿದ ಡಿಂಪಲ್ ಹಯಾತಿ

    ಐಪಿಎಸ್ ಅಧಿಕಾರಿ ಜೊತೆಗಿನ ಕಿರಿಕ್ : ಖಿನ್ನತೆಗೆ ಜಾರಿದ ಡಿಂಪಲ್ ಹಯಾತಿ

    ಪಾರ್ಕಿಂಗ್ ವಿಚಾರವಾಗಿ ಐಪಿಎಸ್ ಅಧಿಕಾರಿ ಜೊತೆ ಕಿರಿಕ್ ಮಾಡಿಕೊಂಡಿದ್ದ ನಟಿ ಡಿಂಪಲ್ ಹಯಾತಿ (Dimple Hayati) ಖಿನ್ನತೆಗೆ ಜಾರಿದ್ದಾರಂತೆ. ಅಧಿಕಾರಿ ಜೊತೆಗಿನ ಜಗಳದಿಂದಾಗಿ ನಟಿಗೆ ಬೆದರಿಕೆಯ ಕರೆಗಳು ಬರುತ್ತಿದ್ದು, ಅವುಗಳನ್ನು ಎದುರಿಸೋಕೆ ಆಗದೇ ಡಿಂಪಲ್ ಖಿನ್ನತೆಗೆ  (Depression) ಒಳಗಾಗಿದ್ದಾರೆ ಎಂದು ಮಾಧ್ಯಮಗಳ ವರದಿ ಮಾಡಿವೆ.

    ಸಿನಿಮಾಗಳಿಗಿಂತ ಕಿರಿಕ್ ಸುದ್ದಿಗಳಿಂದಲೇ ಹೆಚ್ಚೆಚ್ಚು ಸುದ್ದಿ ಮಾಡಿದವರು ಡಿಂಪತ್ ಹಯಾತಿ. ಈ ಹಿಂದೆಯೂ ನಾನಾ ರೀತಿಯ ವಿವಾದಗಳನ್ನು ಮೈಮೇಲೆ ಎಳೆದುಕೊಂಡವರು. ಮೊನ್ನೆಯಷ್ಟೇ ಐಪಿಎಸ್ ಅಧಿಕಾರಿ ಜೊತೆ ಡಿಂ ಕಿರಿಕ್ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಇದನ್ನೂ ಓದಿ:ಭಾರತದ ಮಣ್ಣಿಗೆ ಘನತೆಯಿದೆ- G20 ಸಭೆಯಲ್ಲಿ ರಾಮ್ ಚರಣ್‌ ಮಾತು

    ಪೊಲೀಸ್ ಅಧಿಕಾರಿ ರಾಹುಲ್ ಹೆಗ್ಡೆ(Rahul Hegde)- ಸೌತ್ ನಟಿ ಡಿಂಪಲ್ ಹಯಾತಿ ನಡುವಿನ ಜಗಳ ತಾರಕಕ್ಕೇರಿದೆ. ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿತ್ತಾಟ ಈಗ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪೊಲೀಸ್ ಅಧಿಕಾರಿಯ ಕಾರನ್ನು ಡ್ಯಾಮೇಜ್ ಮಾಡಿದ ಆರೋಪದ ಮೇಲೆ ನಟಿ ಡಿಂಪಲ್ ಹಯಾತಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

    ನಟಿ ಡಿಂಪಲ್ ಹಾಗೂ ಅವರ ಗೆಳೆಯ ವಿಕ್ಟರ್ (Victor) ಹೈದರಾಬಾದ್‌ನ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದಾರೆ. ಇದೇ ಅಪಾರ್ಟ್ಮೆಂಟ್‌ನಲ್ಲಿ ಹೈದರಾಬಾದ್‌ನ ಟ್ರಾಫಿಕ್ ಪೊಲೀಸ್ ಡೆಪ್ಯೂಟಿ ಕಮೀಷನರ್, ಐಪಿಎಸ್ ಅಧಿಕಾರಿ ರಾಹುಲ್ ಹೆಗ್ಡೆ ಕೂಡ ವಾಸವಾಗಿದ್ದಾರೆ. ಇವರ ಮಧ್ಯೆ ಕೆಲ ಸಮಯದಿಂದ ಪಾರ್ಕಿಂಗ್ ವಿಚಾರದಲ್ಲಿ ಕಿತ್ತಾಟ ನಡೆದಿದೆ. ನಟಿ ಈ ವಿಚಾರದಲ್ಲಿ ರಿವೇಂಜ್ ತೆಗೆದುಕೊಂಡಿದ್ದಾರೆ.

    ಮೇ ೧೪ರಂದು ಡಿಂಪಲ್ ಹಯಾತಿ ಅವರು ರಾಹುಲ್ ಕಾರಿಗೆ ಡ್ಯಾಮೇಜ್ ಮಾಡಿದ್ದಾರೆ. ಇದು ಉದ್ದೇಶಪೂರ್ವಕವಾಗಿತ್ತು ಎಂಬುದಕ್ಕೆ ಸಿಸಿಟಿವಿ ದೃಶ್ಯಗಳು ಸಾಕ್ಷ್ಯ ಸಿಕ್ಕಿದೆ. ಇದನ್ನು ಆಧರಿಸಿ ನಟಿ ಡಿಂಪಲ್ ವಿರುದ್ಧ ರಾಹುಲ್ ಅವರ ಕಾರು ಡ್ರೈವರ್ ದೂರು ದಾಖಲಿಸಿದ್ದರು. ಸದ್ಯ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಡಿಂಪಲ್ ಹಯಾತಿಗೆ ಸಮನ್ಸ್ ನೀಡಲಾಗಿದೆ. ಸೋಮವಾರ (ಮೇ 29) ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

  • ‘ಕೆಜಿಎಫ್’ ರೈಟರ್ ಮೂಲಕ ಕನ್ನಡಕ್ಕೆ ಬಂದ ಬೋಲ್ಡ್ ಬ್ಯೂಟಿ

    ‘ಕೆಜಿಎಫ್’ ರೈಟರ್ ಮೂಲಕ ಕನ್ನಡಕ್ಕೆ ಬಂದ ಬೋಲ್ಡ್ ಬ್ಯೂಟಿ

    ಕೆಜಿಎಫ್ ಸಿನಿಮಾ ರೈಟರ್ ಚಂದ್ರಮೌಳಿ (Chandramouli) ಇದೀಗ ಡೈರೆಕ್ಟರ್ ಆಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ‘ದಿಲ್ ಮಾರ್’ (Dil Mar) ಸಿನಿಮಾ ಮೂಲಕ ಮೊದಲ ಬಾರಿಗೆ ಅವರು ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾದಲ್ಲಿ   ಮಾಸ್ ಮಹಾರಾಜ ರವಿತೇಜಾ ನಟನೆಯ ಕಿಲಾಡಿ ಚಿತ್ರದಲ್ಲಿ ನಟಿಸಿದ್ದ ಬೋಲ್ಡ್ ಬ್ಯೂಟಿ ಡಿಂಪಲ್ ಹಯಾತಿ (Dimple Hayathi) ನಾಯಕಿಯಾಗಿ ನಟಿಸಿದ್ದಾರೆ.

    ಹೀರೋಯಿನ್ ಆಗಿ ಡಿಂಪಲ್ ಗೆ ಇದು ಮೊದಲ ಚಿತ್ರವಾಗಿದ್ದು, ಒಂದೊಳ್ಳೆ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಹೊಸ ಬಗೆಯ ಪಾತ್ರದ ಮೂಲಕ ಅವರು ಪ್ರೇಕ್ಷಕರ ಮುಂದೆ ನಿಲ್ಲಲಿದ್ದಾರೆ. ಡಿಂಪಲ್ ನಾಯಕಿಯಾದರೆ, ಯುವ ಪ್ರತಿಭೆ ರಾಮ್ (Ram)ನಾಯಕನಾಗಿ ಬಣ್ಣ ಹಚ್ಚಿದ್ದು, ಡೈಲಾಗ್ ಕಿಂಗ್ ಸಾಯಿ ಕುಮಾರ್ ವಿಲನ್ ಆಗಿ ಘರ್ಜಿಸಿದ್ದಾರೆ.   ಇದನ್ನೂ ಓದಿ:ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ: ಹಿರಿಯ ನಟ ದತ್ತಣ್ಣ

    ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬರ್ತಿರುವ ದಿಲ್ ಮಾರ್ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯದಲ್ಲಿಯೇ ಹಾಡು ಬಿಡುಗಡೆಯಾಗಲಿದೆ. ಇದಾದಾ ಬಳಿಕ ಟ್ರೇಲರ್ ರಿಲೀಸ್ ಮಾಡುವ ಮೂಲಕ ಪ್ರಮೋಷನ್ ಗೆ ಕಿಕ್ ಸ್ಟಾರ್ಟ್ ಕೊಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

    ಈ ಸಿನಿಮಾದಲ್ಲಿ ನುರಿತ ತಂತ್ರಜ್ಞಾನ ತಂಡವೇ ಕೆಲಸ ಮಾಡಿದ್ದು, ಅರ್ಜುನ್ ರೆಡ್ಡಿ ಖ್ಯಾತಿಯ ರಾದನ್ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಕೆ ಮಹೇಶ್ ಮತ್ತು ನಾಗರಾಜ್ ಭದ್ರಾವತಿ ಬಂಡವಾಳ ಹೂಡಿದ್ದಾರೆ. ಯುವಕರನ್ನೇ ಗುರಿಯಾಗಿಸಿಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ ಎನ್ನುತ್ತಿದೆ ಚಿತ್ರತಂಡ.