Tag: Dinesh Amin Mattu

  • ಪೇಜಾವರ ಶ್ರೀ ಕೋಮುವಾದಿ ಹೇಗೆ ಆಗ್ತಾರೆ – ಮಟ್ಟು ವಿರುದ್ಧ ಕೋಟ ಕಿಡಿ

    ಪೇಜಾವರ ಶ್ರೀ ಕೋಮುವಾದಿ ಹೇಗೆ ಆಗ್ತಾರೆ – ಮಟ್ಟು ವಿರುದ್ಧ ಕೋಟ ಕಿಡಿ

    ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರಾಗಿದ್ದ ದಿನೇಶ್ ಅಮೀನ್ ಮಟ್ಟು ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ಕೃಷ್ಣಮಠ, ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಟೀಕಿಸಿದ್ದಾರೆ.

    ಮಂಗಳೂರಲ್ಲಿ ಮಾತನಾಡಿದ್ದ ಅಮಿನ್ ಮಟ್ಟು ಅವರು, ಕೃಷ್ಣಮಠ ಕೋಮುವಾದದ ಕೇಂದ್ರ. ಪೇಜಾವರ ಸ್ವಾಮೀಜಿ ಅದರ ಮುಖಂಡ ಎಂದು ಹೇಳಿದ್ದರು. ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕೋಟ ಶ್ರೀನಿವಾಸ ಪೂಜಾರಿ, ಮಟ್ಟು ಹೇಳಿಕೆ ಅತ್ಯಂತ ನೋವಿನ ಸಂಗತಿ. ಪೇಜಾವರ ಸ್ವಾಮೀಜಿ ವಯೋವೃದ್ಧರು, ಜ್ಞಾನ ವಂತರು. ಪೇಜಾವರ ಶ್ರೀಗಳು ಇಫ್ತಾರ್ ಕೂಟ ಮಾಡಿದ್ದರು. ಆಗ ನಿಮ್ಮಂತೆ ಯೋಚಿಸುವವರು ಸ್ವಾಗತಿಸಿರಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

    ಅಯೋಧ್ಯೆಯಲ್ಲಿ ರಾಮಮಂದಿರ ಆಗಬೇಕು ಅಂದರೆ ಪೇಜಾವರ ಶ್ರೀ ಕೋಮುವಾದಿ ಹೇಗಾಗ್ತಾರೆ? ಮಠ ಕೋಮುವಾದಿಗಳ ಕೇಂದ್ರ ಎಂದು ಹೇಗೆ ಹೇಳುತ್ತೀರಿ? ಕೃಷ್ಣಮಠ ಹಿಂದೂ ಧರ್ಮದ ಸರ್ವಶ್ರೇಷ್ಟ ದೇವಾಲಯ. ಪೇಜಾವರ ಶ್ರೀ ಬಗ್ಗೆ ಲಘುವಾಗಿ ಮಾತನಾಡುವುದು ಖಂಡನೀಯ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

  • ಪ್ರಕಾಶ್ ರೈ ಮತ ವಿಭಜನೆಗೆ ಹೊರಟಿದ್ದಾರೆ: ದಿನೇಶ್ ಅಮಿನ್ ಮಟ್ಟು

    ಪ್ರಕಾಶ್ ರೈ ಮತ ವಿಭಜನೆಗೆ ಹೊರಟಿದ್ದಾರೆ: ದಿನೇಶ್ ಅಮಿನ್ ಮಟ್ಟು

    – ಪೇಜಾವರ ಮಠದಲ್ಲೂ ರಾಜಕೀಯ ಇದೆ

    ಉಡುಪಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ನಟ ಪ್ರಕಾಶ್ ರೈ ಇಷ್ಟು ದಿನ ಬಿಜೆಪಿಯನ್ನು ಕ್ಯಾನ್ಸರ್ ಎನ್ನುತ್ತಿದ್ದರು. ಆದರೆ ಈಗ ಕಾಂಗ್ರೆಸ್ ಕೂಡಾ ಕ್ಯಾನ್ಸರ್ ಬಂದಂತೆ ಕಾಣಿಸುತ್ತಿದೆ. ಹೀಗೆ ರೈ ಹೇಳುತ್ತಲೇ ಪ್ರಕಾಶ್ ರೈ ಮತ ವಿಭಜನೆಗೆ ಹೊರಟಿದ್ದಾರೆ ಎಂದು ದಿನೇಶ್ ಅಮಿನ್ ಮಟ್ಟು ಹೇಳಿದರು.

    ಉಡುಪಿಯಲ್ಲಿ ಸಹಬಾಳ್ವೆ ಸಂಸ್ಥೆ ಆಯೋಜಿಸಿದ್ದ ಸರ್ವಜನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷವನ್ನು ಮರೆತು ಮುಖವಾಡಗಳನ್ನು ಬಿಟ್ಟು ಬಿಡಿ. ಮುಖಗಳನ್ನು ನೋಡಿ ಮತ ನೀಡಿ ಎಂದು ಕರೆ ನೀಡಿದ ಅವರು, 6 ತಿಂಗಳ ಹಿಂದೆ ರೈ ಅವರು ಬಿಜೆಪಿಗೆ ಕ್ಯಾನ್ಸರ್ ಎನ್ನುತ್ತಿದ್ದರು. ಈಗ ಕಾಂಗ್ರೆಸನ್ನು ಕ್ಯಾನ್ಸರ್ ಎಂದು ಕರೆಯುತ್ತಿದ್ದಾರೆ. 6 ತಿಂಗಳ ಅವಧಿಯಲ್ಲಿ ಈ ಪಕ್ಷಕ್ಕೆ ಏನಾಯ್ತು ಅಥವಾ ಅವರ ರೈ ಅವರ ದೃಷ್ಟಿಗೆ ಏನಾಯ್ತು ಎಂಬುವುದು ನನಗೆ ತಿಳಿದಿಲ್ಲ ಎಂದರು.

    ಇದೇ ವೇಳೆ ಪೇಜಾವರ ಶ್ರೀಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಅವರು, ಉಡುಪಿ ಕೃಷ್ಣ ಮಠದಲ್ಲೂ ರಾಜಕೀಯ ಇದೆ. ಪೇಜಾವರ ಸ್ವಾಮಿಗಳು ಹಿಂದೂ ಯಾರು ಅಂತ ಹೇಳಬೇಕು. ಬಿಜೆಪಿ ಶಾಸಕ ರಘುಪತಿ ಭಟ್ ನಿಜವಾದ ಹಿಂದೂವೋ? ಅಥವಾ ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಿಂದೂವಾ ಎಂದು ಪೇಜಾವರ ಶ್ರೀಗಳು ಹೇಳಬೇಕು. ಒಂದು ಪಕ್ಷದ ಪರ ಬೆಂಬಲ ನೀಡುವ ಮೂಲಕ ಹಿಂದೂಗಳ ಪರ ಅಂತ ಧರ್ಮ ದ್ರೋಹ ಮಾಡ ಬೇಡಿ ಎಂದರು. ಇದನ್ನು ಓದಿ: ನಿಮ್ಮ ಕ್ಷೇತ್ರದ ಮೇಲೆ ನಿಮಗೆ ನಂಬಿಕೆ ಇಲ್ವಾ: ಮೋದಿ, ರಾಹುಲ್‍ಗೆ ಪ್ರಕಾಶ್ ರೈ ಟಾಂಗ್

  • ಆರೋಪಗಳನ್ನು ಪ್ರಶ್ನಿಸಬೇಡಿ, ದಾಖಲೆ ಸಹಿತ ತೋರಿಸಿ- ಪತ್ರಕರ್ತರ ವಿರುದ್ಧ ಅಮಿನ್ ಮಟ್ಟು ಕಿಡಿ

    ಆರೋಪಗಳನ್ನು ಪ್ರಶ್ನಿಸಬೇಡಿ, ದಾಖಲೆ ಸಹಿತ ತೋರಿಸಿ- ಪತ್ರಕರ್ತರ ವಿರುದ್ಧ ಅಮಿನ್ ಮಟ್ಟು ಕಿಡಿ

    ತುಮಕೂರು: ಕಾಂಗ್ರೆಸ್ ಸರ್ಕಾರದ ವೈಫಲ್ಯದ ಬಗ್ಗೆ ಪ್ರಶ್ನೆ ಮಾಡಿದ ಪತ್ರಕರ್ತರ ವಿರುದ್ಧ ಹಿರಿಯ ಪತ್ರಕರ್ತ, ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ ಸಿದ್ದರಾಮಯ್ಯ ಸಿಡಿಮಿಡಿಗೊಂಡ ಘಟನೆ ನಡೆಯಿತು.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕರಾವಳಿಯಲ್ಲಿನ ಕೋಮುಗಲಭೆ ಹೆಚ್ಚಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಕಾರಣ ಎಂಬ ಆರೋಪ ಇದೆ ಎಂಬ ಪ್ರಶ್ನೆಗೆ ಆಕ್ರೋಶ ಭರಿತರಾದ ಸಿದ್ದಲಿಂಗಯ್ಯ ಹಾಗೂ ದಿನೇಶ್ ಅಮಿನ್ ಮಟ್ಟು, ಆರೋಪಗಳನ್ನು ಪ್ರಶ್ನಿಸಬೇಡಿ, ದಾಖಲೆ ಸಹಿತ ತೋರಿಸಿ ಎಂದು ಪತ್ರಕರ್ತರನ್ನು ಬಾಯಿ ಮುಚ್ಚಿಸಲು ಯತ್ನಿಸಿದರು.

    ಎಸ್ ಜಿ ಸಿದ್ದರಾಮಯ್ಯ ಅವರು ಚಿಕ್ಕನಾಯಕನ ಹಳ್ಳಿ ಕ್ಷೇತ್ರದಲ್ಲಿ ತಮ್ಮ ಸಮುದಾಯದ ಜೆಡಿಎಸ್ ಅಭ್ಯರ್ಥಿ ಸುರೇಶ್ ಬಾಬು ಅವರನ್ನು ಬೆಂಬಲಿಸುತ್ತಿರಿ ಎನ್ನುವ ಆರೋಪದ ಪ್ರಶ್ನೆ ಕೇಳಿದಾಗ ಸಿದ್ದರಾಮಯ್ಯ ಕೆಂಡಾಮಂಡಲವಾಗಿ ಯಾವ ಮೂರ್ಖರು ಹಾಗಂತ ಹೇಳಿದ್ದು? ಎಂದು ಏರು ಧ್ವನಿಯಲ್ಲಿ ಮಾತನಾಡಿ ಮಾಧ್ಯಮದವರ ಬಾಯಿ ಮುಚ್ಚಿಸುವ ಯತ್ನಮಾಡಿದರು.

    ಸುದ್ದಿಗೋಷ್ಠಿ ನಡೆಸಲು ಬಂದಿದ್ದ ದಿನೇಶ್ ಅಮಿನ್ ಮಟ್ಟು ಹಾಗೂ ಸಿದ್ದರಾಮಯ್ಯರ ಧೋರಣೆ ಖಂಡಿಸಿ ಪತ್ರಕರ್ತರು ಪ್ರತಿದಾಳಿ ನಡೆಸಿದಾಗ ಸುಮ್ಮನಾಗಿ ಉತ್ತರ ನೀಡತೊಡಗಿದರು.

  • ದಿನೇಶ್ ಅಮಿನ್ ಮಟ್ಟು ವಿರುದ್ಧ ಕೋಟಾ ಶ್ರೀನಿವಾಸ ಪೂಜಾರಿ ವಾಗ್ದಾಳಿ

    ದಿನೇಶ್ ಅಮಿನ್ ಮಟ್ಟು ವಿರುದ್ಧ ಕೋಟಾ ಶ್ರೀನಿವಾಸ ಪೂಜಾರಿ ವಾಗ್ದಾಳಿ

    ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ವಿರುದ್ಧ ಕೋಟಾ ಶ್ರೀನಿವಾಸ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ನಿಯಮ 68 ರಲ್ಲಿ ವಿಧಾನ ಪರಿಷತ್ ನಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ಅವರು, ಕೋಮು ಗಲಭೆಗಳ ಕೊಲೆಗಳಾದಾಗ ಧರ್ಮ ಜಾತಿ ರಾಜಕಾರಣ ಮಾಡಬೇಡಿ. ಕುದ್ರೋಳಿ ದೇವಸ್ಥಾನಕ್ಕೆ ಸಂಘ ಪರಿವಾರದವರು ಬಂದು ಜನಾರ್ದನ ಪೂಜಾರಿ ಹಾಳಾಗಿದ್ದಾರೆ ಎಂದು ದಿನೇಶ್ ಅಮೀನ್ ಮಟ್ಟು ಮಾತಾನಾಡುತ್ತಾರೆ. ಮಾಧ್ಯಮ ಸಲಹೆಗಾರರು ಹೀಗೆ ಮಾತಾಡುವುದು ಸರಿಯಲ್ಲ ಎಂದು ಹೇಳಿದರು.

    ಗೌರಿ ಹತ್ಯೆಗೈದವರನ್ನು ಹಿಡಿಯಬೇಕಾದವರು ರಾಜ್ಯ ಸರ್ಕಾರ. ಆದರೆ ಮಂಗಳೂರಿನಲ್ಲಿ ಮಾನವ ಸರಪಳಿ ಮಾಡಿ “ನಾನು ಗೌರಿ ನಾವೆಲ್ಲ ಗೌರಿ” ಎಂದು ಹೇಳುವುದು ಎಷ್ಟು ಸರಿ? ಅಧಿಕಾರ ನಿಮ್ಮ ಕೈಯಲ್ಲಿದ್ದು ನೀವೇ ಹಿಡಿಯಬೇಕು. ಗೌರಿಗೆ ಹೇಳಿದಂತೆ “ನಾನು ಸಂತೋಷ್, ನಾನು ಪರೇಸ್ ಮೆಸ್ತಾ” ಎಂಬುದಾಗಿ ಯಾಕೆ ಹೇಳುವುದಿಲ್ಲ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಉಡುಪಿ ಚಲೋ ವೇಳೆ ಗೋಮೂತ್ರ ಸಿಂಪಡಣೆ ಈಗ ಏಕಿಲ್ಲ: ಅಮೀನ್ ಮಟ್ಟು ವಿವಾದಾದ್ಮಕ ಪೋಸ್ಟ್

    ಪರೇಶ್ ಮೆಸ್ತಾ ಸಾವು ಸಹಜ ಸಾವು ಎಂದು ಸರ್ಕಾರ ಹೇಳಿದೆ. ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಸಂತೋಷ್ ಕೊಲೆ ಮಾಡಲಾಗಿದೆ ಎಂದು ಎಂದು ಗೃಹ ಸಚಿವರು ಹೇಳ್ತಾರೆ. ನಮಗೆ ದೀಪಕ್, ಬಷೀರ್ ಹತ್ಯೆ ಎರಡು ಒಂದೇ ಎಂದು ಹೇಳಿದರು. ಇದನ್ನೂ ಓದಿ: ಗೆದ್ರೆ ಖುಷಿಯಲ್ಲಿ, ಸೋತ್ರೆ ದು:ಖದಲ್ಲಿ ತಿನ್ನೋಣವೆಂದು 2 ಕೆಜಿ ಕಾಣೆ ಮೀನು ತಂದಿಟ್ಟುಕೊಂಡಿದ್ದೇನೆ- ಅಮೀನ್ ಮಟ್ಟು

    ಮಂಗಳೂರು ಎಸ್.ಪಿ. ಸುಧೀಂದ್ರ ರೆಡ್ಡಿ ವರ್ಗಾವಣೆ ವಿಷಯ ಪ್ರಸ್ತಾಪಿಸಿದ ಅವರು ಸುಧೀಂದ್ರ ರೆಡ್ಡಿ ಅವರನ್ನು ವರ್ಗಾವಣೆ ಯಾಕೆ ಮಾಡಿದ್ರಿ? ಅಕ್ರಮ ಮರಳುಗಾರಿಕೆ ಮಾಡಿದ್ದಕ್ಕೆ ವರ್ಗಾವಣೆ ಮಾಡಿದ್ದೀರಿ. ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆ ಇಲ್ಲ. ಪ್ರಾಮಾಣಿಕ ಅಧಿಕಾರಿಗಳನ್ನ ಎತ್ತಂಗಡಿ ಮಾಡಿತ್ತಿದ್ದೀರಿ ಎಂದು ಹೇಳಿ ಸರ್ಕಾರದ ವಿರುದ್ಧ ಪೂಜಾರಿ ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ ಭಟ್ಟರ ಹಿಂದೂ ಧರ್ಮಕ್ಕೆ ಧಿಕ್ಕಾರ, ಮೋದಿ ದೊಡ್ಡ ಜಾದೂಗಾರ: ಅಮೀನ್ ಮಟ್ಟು

  • ರಾಷ್ಟ್ರಪತಿಗಳಿಗೆ ಟಿಪ್ಪು ಭಾಷಣ ಬರೆದು ಕೊಟ್ಟಿದ್ರು ಇವ್ರು ಅಂದ್ರು ದಿನೇಶ್ ಅಮೀನ್ ಮಟ್ಟು

    ರಾಷ್ಟ್ರಪತಿಗಳಿಗೆ ಟಿಪ್ಪು ಭಾಷಣ ಬರೆದು ಕೊಟ್ಟಿದ್ರು ಇವ್ರು ಅಂದ್ರು ದಿನೇಶ್ ಅಮೀನ್ ಮಟ್ಟು

    ಬೆಂಗಳೂರು: ವಿಧಾನಸೌಧದ ವಜ್ರಮಹೋತ್ಸವದ ಭಾಷಣದಲ್ಲಿ ಟಿಪ್ಪುವಿನ ಬಗ್ಗೆ ಉಲ್ಲೇಖವಾಗಿದ್ದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಪರ – ವಿರೋಧದ ಚರ್ಚೆಗಳು ಮುಂದುವರೆದಿದೆ. ನಿನ್ನೆ ಮಧ್ಯಾಹ್ನದಿಂದ ರಾಷ್ಟ್ರಪತಿಗಳ ಭಾಷಣ ನಿಜವಾಗಿಯೂ ಬರೆದಿದ್ದು ಯಾರು ಎಂಬ ಬಗ್ಗೆ ಚರ್ಚೆಯೋ ಚರ್ಚೆ. ಕೆಲವರು ರಾಜ್ಯದತ್ತ ಕೈತೋರಿಸಿದರೆ, ಇನ್ನು ಕೆಲವರು ಕೇಂದ್ರದತ್ತ ಕೈ ತೋರಿಸಿದ್ದಾರೆ. ಈ ಎಲ್ಲದರ ನಡುವೆ ಸಿಎಂ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ಅವರು ರಾಮನಾಥ್ ಕೋವಿಂದ್ ವಿಧಾನಸಭೆ ವಜ್ರಮಹೋತ್ಸವದಲ್ಲಿ ಮಾಡಿದ ಭಾಷಣ ಯಾರು ಬರೆದು ಕೊಟ್ಟಿದ್ದಾರೆ ಎಂಬ ಬಗ್ಗೆಯೂ ತಮ್ಮ ಫೇಸ್ ಬುಕ್ ಪುಟದಲ್ಲಿ ವಿವರವಾಗಿ ಬರೆದಿದ್ದಾರೆ. ಜೊತೆಗೆ ಮಾಜಿ ಸಚಿವ ಸುರೇಶ್ ಕುಮಾರ್ ಹಾಗೂ ಬಿಜೆಪಿಯ ಪ್ರಕಾಶ್ ಕಾಲೆಳೆದಿದ್ದಾರೆ. ಇದೆಲ್ಲದರ ನಡುವೆ ಕಾಂಗ್ರೆಸ್ ಕಚೇರಿಯಲ್ಲಿ ಸುತ್ತಾಡುತ್ತಿರುವ ವಿಗ್ ಗಿರಾಕಿಯೊಬ್ಬರು ನನ್ನ ರಾಜೀನಾಮೆ ಕೇಳಿ ಪ್ರೆಸ್ ನೋಟ್ ಸಿದ್ಧಪಡಿಸುತ್ತಿದ್ದ ಎಂಬ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ.

    ದಿನೇಶ್ ಅಮೀನ್ ಮಟ್ಟು ಫೇಸ್ ಬುಕ್ ಪುಟದಲ್ಲಿ ಬರೆದಿದ್ದೇನು?
    ರಾಷ್ಟ್ರಪತಿಗಳ ಭಾಷಣದ ಬಗ್ಗೆ ಚರ್ಚಿಸುತ್ತಾ ಮಧ್ಯಾಹ್ನ ಹೋಟೆಲ್ ಗೆ ಊಟಕ್ಕೆ ಹೋಗಿದ್ದಾಗ ದಲಿತ ಸಮುದಾಯಕ್ಕೆ ಸೇರಿರುವ ಬಿಜೆಪಿಯ ಶಾಸಕರೊಬ್ಬರು ಭೇಟಿಯಾದರು. (ನನಗೆ ಆತ್ಮೀಯರಾಗಿರುವ ಕಾರಣ ಹೆಸರು ಹೇಳುವುದಿಲ್ಲ). ನನ್ನನ್ನು ನೋಡಿದವರೇ ‘ಏನ್ಸಾಮಿ, ನೀವು ಹೀಗೆಲ್ಲ ಬರೆದುಕೊಡೋದಾ? ಎಂದು ನಗುತ್ತಲೇ ಆಕ್ಷೇಪದ ದನಿಯಲ್ಲಿ ಪ್ರಶ್ನಿಸಿದರು. ಅವರು ತಮಾಷೆ ಮಾಡ್ತಾ ಇದ್ದಾರೆ ಎಂದು ಸುಮ್ಮನೆ ನಕ್ಕೆ. ಆದರೆ ಅದು ತಮಾಷೆಯಾಗಿರಲಿಲ್ಲ. ಅವರೇ ಮಾತು ಮುಂದುವರಿಸಿ ನಮ್ಮ ಪಕ್ಷದ ಕಚೇರಿಯಲ್ಲಿ ಇದೇ ವಿಷಯ ಚರ್ಚೆಯಾಗುತ್ತಿದೆ’ ಎಂದರು. ರಾಷ್ಟ್ರಪತಿ ಭಾಷಣ ಹೇಗೆ ತಯಾರಿಸುತ್ತಾರೆ ಎಂದು ವಿವರವಾಗಿ ತಿಳಿಸಿದರೂ ಅವರಿಗಾಗಲಿ, ಅವರ ಜತೆಯಲ್ಲಿರುವವರಿಗಾಲಿ ಪೂರ್ಣವಾಗಿ ಮನವರಿಕೆಯಾಗಲಿಲ್ಲ.

    ಇದನ್ನೇ ನಿಜವೆಂದು ನಂಬಿ ಸ್ನೇಹಿತರಾದ ಶಾಸಕ ಸುರೇಶ್ ಕುಮಾರ್ ಮತ್ತು ಪಕ್ಷದ ಅರೆವಕ್ತಾರ ‘ಪರನಿಂದಕಾಶ’ ಅನುಕ್ರಮವಾಗಿ 14 ಮತ್ತು 19ನೇ ಬಾರಿ ರಾಜೀನಾಮೆ ಕೇಳಿದರೆ ನನ್ನ ಗತಿ ಏನು ಎಂದು ಸಂಜೆ ವರೆಗೆ ಬಹಳ ಚಿಂತೆಯಲ್ಲಿದ್ದೆ. ಇದರ ಜತೆಗೆ ಕಾಂಗ್ರೆಸ್ ಕಚೇರಿಯಲ್ಲಿ ಸುತ್ತಾಡುತ್ತಿರುವ ಒಬ್ಬ ವಿಗ್ ಗಿರಾಕಿ ನನ್ನ ರಾಜೀನಾಮೆ ಕೇಳಿ ಪ್ರೆಸ್ ನೋಟ್ ರೆಡಿ ಮಾಡ್ತಾ ಇದ್ದಾನೆ ಎಂಬ ಸುದ್ದಿ ಇನ್ನಷ್ಟು ಭಯಭೀತನನ್ನಾಗಿ ಮಾಡಿತ್ತು. ದೇವರ ದಯೆಯಿಂದ ಏನೂ ಆಗಲಿಲ್ಲ.

    ಗೊತ್ತಿಲ್ಲದವರಿಗಾಗಿ ಮಾಹಿತಿ: ರಾಷ್ಟ್ರಪತಿಗಳ ಭಾಷಣ ತಯಾರಿಸಲು ಅವರೇ ನೇಮಿಸಿಕೊಂಡ ಪತ್ರಿಕಾ ಕಾರ್ಯದರ್ಶಿಗಳಿರುತ್ತಾರೆ. ಸಾಮಾನ್ಯವಾಗಿ ಆ ಹುದ್ದೆಗೆ ಐಎಎಸ್, ಐಎಫ್ ಎಸ್ ಅಧಿಕಾರಿಗಳನ್ನು ನೇಮಿಸುತ್ತಾರೆ. ಇದೇ ಮೊದಲಬಾರಿಗೆ ಕೋವಿಂದ್ ಅವರು ಹಿರಿಯ ಪತ್ರಕರ್ತ, ಅಂಕಣಕಾರ ಮತ್ತು ಬಿಜೆಪಿ ಬೆಂಬಲಿಗರಾದ ಅಶೋಕ್ ಮಲ್ಲಿಕ್ ಅವರನ್ನು ಪತ್ರಿಕಾ ಕಾರ್ಯದರ್ಶಿಯನ್ನಾಗಿ ನೇಮಿಸಿಕೊಂಡಿದ್ದಾರೆ. ರಾಷ್ಟ್ರಪತಿಗಳ ಭಾಷಣ ತಯಾರಿಯ ಹೊಣೆ ಅವರದ್ದು. ರಾಷ್ಟ್ರಪತಿಗಳು ಓದಿದ್ದ ಭಾಷಣದ ಬಗ್ಗೆ ಬಿಜೆಪಿ ನಾಯಕರಿಗೆ ಆಕ್ಷೇಪ ಇದ್ದರೆ, ಸುಮ್ಮನೆ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು, ಮುಖ್ಯಕಾರ್ಯದರ್ಶಿಗಳು ಕೊನೆಗೆ ನನ್ನಂತಹ ಬಡಪಾಯಿ ಮೇಲೆ ಆರೋಪ ಮಾಡುವ ಬದಲಿಗೆ ಅವರ ಪತ್ರಿಕಾ ಕಾರ್ಯದರ್ಶಿಯ ರಾಜೀನಾಮೆ ಕೇಳಲಿ.

    ಇದರ ಜೊತೆಗೆ ಅಶೋಕ್ ಮಲ್ಲಿಕ್ ಯಾರು ಎಂದು ತಿಳಿಯಲು ಅವರ ಫೋಟೋವನ್ನು ಕೂಡಾ ಇಂದು ಸಂಜೆಯ ವೇಳೆಗೆ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

  • ಉಡುಪಿ ಚಲೋ ವೇಳೆ ಗೋಮೂತ್ರ ಸಿಂಪಡಣೆ ಈಗ ಏಕಿಲ್ಲ: ಅಮೀನ್ ಮಟ್ಟು ವಿವಾದಾದ್ಮಕ ಪೋಸ್ಟ್

    ಉಡುಪಿ ಚಲೋ ವೇಳೆ ಗೋಮೂತ್ರ ಸಿಂಪಡಣೆ ಈಗ ಏಕಿಲ್ಲ: ಅಮೀನ್ ಮಟ್ಟು ವಿವಾದಾದ್ಮಕ ಪೋಸ್ಟ್

    ಬೆಂಗಳೂರು: ಉಡುಪಿ ಮಠದಲ್ಲಿ ನಡೆದ ಇಫ್ತಾರ್ ಕೂಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಫೇಸ್‍ಬುಕ್‍ನಲ್ಲಿ ವಿವಾದಾತ್ಮಕವಾಗಿ ಬರಹವನ್ನು ಪೋಸ್ಟ್ ಮಾಡಿದ್ದಾರೆ.

    ದಲಿತರು ಉಡುಪಿ ಚಲೋ ಮಾಡಿದ್ದ ಸಂದರ್ಭದಲ್ಲಿ ಮಠದ ಶುದ್ಧೀಕರಣಕ್ಕೆ ಅನುಮತಿ ನೀಡಿದ್ದ ಪೇಜಾವರ ಶ್ರೀಗಳು ಇದೀಗ ಮಠದಲ್ಲಿ ನಡೆದ ಇಫ್ತಾರ್ ಕೂಟವನ್ನು ಬೆಂಬಲಿಸುತ್ತಿದ್ದಾರೆ. ಹಾಗಾದರೆ ದಲಿತರು ಮುಸ್ಲಿಂಮರಿಗಿಂತಲೂ ಕೀಳಾದರೆ ಎಂದು ಅಮೀನ್ ಮಟ್ಟು ಪ್ರಶ್ನಿಸಿದ್ದಾರೆ.

    ಈ ಎಫ್‍ಬಿ ಪೋಸ್ಟ್ ಗೆ ಇಫ್ತಾರ್ ಕೂಟದಲ್ಲಿ ಭಾಗಿಯಾದ ಮುಸ್ಲಿಂ ಮುಖಂಡ ರಹೀಂ ಉಚ್ಚಿಲ್ ಖಾರವಾಗಿ ಪ್ರತಿಕ್ರಿಯಿಸಿದ್ದು, ಅಮೀನ್ ಮಟ್ಟು ಯಾಕೆ ಈ ರೀತಿ ಹೇಳ್ತಿದ್ದಾರೆ ಅಂತ ನನಗೆ ಅರ್ಥವಾಗ್ತಿಲ್ಲ. ಇಲ್ಲಿ ದಲಿತರು ಮುಸ್ಲಿಮರು ಎಂಬ ಪ್ರಶ್ನೆ ಇಲ್ಲ. ಈ ಹಿಂದೆ ದಲಿತ ಸಮುದಾಯದ ಕೆಲವು ಮಂದಿ ಅಲ್ಲಿಗೆ ಹೋಗಿದ್ದು ಸ್ವಾಮೀಜಿ ವಿರುದ್ಧವಾಗಿ, ಮಠದ ವಿರುದ್ಧವಾಗಿ. ಮಠದ ವಿರುದ್ಧ ಹೋರಾಟ ಮಾಡಲು. ಆದ್ರೆ ನಾವು ಮುಸ್ಲಿಮರು ಹೋಗಿದ್ದು ಸ್ವಾಮೀಜಿಯ ಆಹ್ವಾನದ ಮೇಲೆ. ಆದ್ದರಿಂದ ಮಠದ ವಿರುದ್ಧ ಹೋದವರ ಮನಸ್ಸು ಶುದ್ಧಿ ಮಾಡುವ ಕೆಲಸ ಆಗಿದೆ. ಅದು ಕೂಡ ಮಠದಿಂದ ಆಗಿದ್ದಲ್ಲ. ಮಠದ ವಿಶ್ವಾಸವಿದ್ದವರಿಂದ ಆಗಿದ್ದು. ನಾವು ಪರಿಶುದ್ಧವಾದ ಮನಸ್ಸಿನಿಂದ ಹೋಗಿದ್ದರಿಂದ ಆ ರೀತಿ ಮಾಡೋ ಪ್ರಶ್ನೆಯೇ ಇಲ್ಲ. ಶುದ್ಧ ಮನಸ್ಸಿನಿಂದ ಹೋಗಿದ್ದೇವೆ. ಇಲ್ಲಿ ಹಿಂದೂ, ಮುಸ್ಲಿಂ, ದಲಿತ ಎಂಬ ವಿಚಾರವೇ ಬರುವುದಿಲ್ಲ. ಅಮೀನ್ ಮಟ್ಟು ಈ ರೀತಿ ಹೇಳಿಕೆ ನೀಡಿ ದಲಿತರ ಓಲೈಕೆ ಮಾಡಲು ಹೊರಟಿದ್ದು, ಇದರಲ್ಲಿ ಖಂಡಿತ ಯಶಸ್ವಿಯಾಗಲ್ಲ ಎಂದಿದ್ದಾರೆ.

    ಚುನಾವಣೆ ಉದ್ದೇಶ ಇಟ್ಕೊಂಡು ಅಮೀನ್ ಮಟ್ಟು ಈ ರೀತಿ ಹೇಳಿದ್ದಾರೆ. ಮೊದಲು ಅಮೀನ್ ಮಟ್ಟು ಅಂತವರ ಮನಸ್ಸನ್ನು ಶುದ್ಧಿ ಮಾಡ್ಬೇಕು. ಕರ್ನಾಟಕ ರಾಜ್ಯದ ಜನತೆ ಕಾಂಗ್ರೆಸ್‍ಗೂ ಹಾಗೂ ಅಮೀನ್ ಮಟ್ಟು ಮನಸ್ಸನ್ನು ಶುದ್ಧಿ ಮಾಡಬೇಕಿದೆ. ಮುಸ್ಲಿಂ ಸಮುದಾಯ ಆಕ್ರೋಶಗೊಳ್ಳುವ ರೀತಿಯಲ್ಲಿ ಮಟ್ಟು ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

    ಈ ಬಗ್ಗೆ ಉಡುಪಿ ಚಲೋದಲ್ಲಿ ಪಾಲ್ಗೊಂಡ ಜಿಲ್ಲೆಯ ದಲಿತ ಮುಖಂಡ ಸುಂದರ್ ಮಾಸ್ಟರ್ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ಸ್ವಾಮೀಜಿಯದ್ದು ದ್ವಂದ್ವ ನಿಲುವು. ಶ್ರೀಗಳ ನಡವಳಿಕೆ ಡೋಂಗಿತನ. ಆಗ ದಲಿತರು ರಸ್ತೆಯಲ್ಲಿ ನಡೆದ ಕೂಡಲೇ ಇಡೀ ಉಡುಪಿ ಮಲಿನವಾಗಿದೆ. ಈಗ ಇಫ್ತಾರ್ ಕೂಟ ನಡೆದಾಗ ಮಠದ ಒಳಗಡೆ ಹೋದಾಗ ಮಲಿನವೇ ಆಗಿಲ್ಲ. ಗೋಮೂತ್ರ ಹಾಕಿ ಶುದ್ಧೀಕರಣ ಮಾಡುವ ಅಗತ್ಯವಿಲ್ಲ. ದಲಿತರು ಬಂದಾಗ ಏನಾಗಿತ್ತು ಅವರಿಗೆ? ಸ್ವಾಮೀಜಿ ದಲಿತರು ಮತ್ತು ಮುಸ್ಲೀಮರ ಬಗ್ಗೆ ಇಬ್ಬಗೆ ನೀತಿ ಅನುಸರಿಸಿದ್ದಾರೆ ಎಂದು ದೂರಿದ್ದಾರೆ.

    ಅಮಿನ್ ಮಟ್ಟು ಅವರ ಫೇಸ್‍ಬುಕ್ ಪೋಸ್ಟ್,

  • ಎಲ್‍ಕೆ ಅಡ್ವಾಣಿ ರೀತಿಯಲ್ಲಿ ಡೈರಿಯಲ್ಲಿ ಹೆಸರಿರುವವರು ರಾಜೀನಾಮೆ ನೀಡ್ಬೇಕು – ಅಮೀನ್ ಮಟ್ಟು

    ಎಲ್‍ಕೆ ಅಡ್ವಾಣಿ ರೀತಿಯಲ್ಲಿ ಡೈರಿಯಲ್ಲಿ ಹೆಸರಿರುವವರು ರಾಜೀನಾಮೆ ನೀಡ್ಬೇಕು – ಅಮೀನ್ ಮಟ್ಟು

    ಬೆಂಗಳೂರು: ಎಲ್‍ಕೆ ಅಡ್ವಾಣಿ ರೀತಿಯಲ್ಲೇ ಡೈರಿಯಲ್ಲಿ ಹೆಸರಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಸಿಎಂ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟಿದ್ದಾರೆ.

    ಈ ಬಗ್ಗೆ ತಮ್ಮ ಫೆಸ್‍ಬುಕ್ ಅಕೌಂಟ್‍ನಲ್ಲಿ ಪೋಸ್ಟ್ ಮಾಡಿರೋ ಅಮೀನ್ ಮಟ್ಟು, ಈ ಹಿಂದೆ ಹವಾಲಾ ಹಣ ಸ್ವೀಕರಿಸಿದವರ ಪಟ್ಟಿಯಲ್ಲಿ `ಎಲ್ ಕೆ ಎನ್’ ಎನ್ನುವ ಇನಿಷಿಯಲ್ ಇರುವುದು ಬಹಿರಂಗವಾಗಿ, ಅದು ಲಾಲ್ ಕೃಷ್ಣ ಅಡ್ವಾಣಿಯವರೇ ಎಂದು ಪ್ರಚಾರವಾಗತೊಡಗಿದಾಗ ನೊಂದುಕೊಂಡ ಅಡ್ವಾಣಿಯವರು ಅದೇ ದಿನ ಸಂಜೆ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಹಾರಾ-ಬಿರ್ಲಾ ಡೈರಿಯಲ್ಲಿ `ಗುಜರಾತ್ ಸಿಎಂ’ ಮಧ್ಯಪ್ರದೇಶ ಸಿಎಂ, ಚತ್ತೀಸ್ ಗಡ ಸಿಎಂ’ ಡೆಲ್ಲಿ ಸಿಎಂ ಅವರಿಗೆ ಹಣ ನೀಡಲಾದ ಎಂಟ್ರಿಗಳಿವೆಯಂತೆ. ಡೈರಿ ಹಾವಳಿ ಅತಿಯಾಯಿತು. ಇದನ್ನು ಕೊನೆಗೊಳಿಸಬೇಕಾದರೆ ಸನ್ಮಾನ್ಯ ನರೇಂದ್ರಮೋದಿಯವರು ತಮ್ಮದೇ ಪಕ್ಷದ ಮಾರ್ಗದರ್ಶಕ ಮಂಡಳಿಯ ಹಿರಿಯ ಸದಸ್ಯರಾದ ಎಲ್.ಕೆ.ಅಡ್ವಾಣಿಯವರ ಮಾದರಿಯನ್ನು ಅನುಸರಿಸಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅದರ ನಂತರ ಗೋವಿಂದರಾಜ್ ಅವರದ್ದೆನ್ನಲಾದ ಡೈರಿಯಲ್ಲಿರುವ ಹೆಸರಿನ ಎಲ್ಲ ರಾಜಕಾರಣಿಗಳು ಕ್ಷಣಮಾತ್ರವೂ ಸಮಯ ವ್ಯರ್ಥಮಾಡದೆ ರಾಜೀನಾಮೆ ಎಸೆದುಬಿಡಬೇಕು ಎಂದಿದ್ದಾರೆ.

    ಈ ಮಧ್ಯೆ ಇಂದು ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ನಡೆಯಲಿದ್ದು 4 ವರ್ಷ ಪೂರೈಸಿದ ಹಿರಿಯ ಸಚಿವರಿಗೆ ಸಂಪುಟದಿಂದ ಗೇಟ್‍ಪಾಸ್ ನೀಡೋ ನಿರೀಕ್ಷೆ ಇದೆ.

    ಅಮೀನ್ ಮಟ್ಟು ಫೇಸ್‍ಬುಕ್ ಪೋಸ್ಟ್ ನಲ್ಲಿ ಈ ರೀತಿ ಹೇಳಿದ್ದಾರೆ:

    ಕಳೆದ ಕೆಲವು ವರ್ಷಗಳಿಂದ ಈ ಸಿಕ್ರೇಟ್ ಡೈರಿಗಳ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗುತ್ತಲೇ ಇದೆ. ಜೈನ್ ಹವಾಲಾ ಡೈರಿ, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಯು.ವಿ.ಸಿಂಗ್ ನೀಡಿದ ತನಿಖಾ ವರದಿಯಲ್ಲಿನ ಖಾರದಪುಡಿ ಮಹೇಶ್ ಡೈರಿ, ಇತ್ತೀಚೆಗೆ ಸಹರಾ ಮತ್ತು ಬಿರ್ಲಾ ಕಂಪೆನಿಗಳ ಕಚೇರಿಯಲ್ಲಿ ಸಿಕ್ಕಿದೆಯೆನ್ನಲಾದ ಡೈರಿ, ಇದೀಗ ಎಂಎಲ್‍ಸಿ ಗೋವಿಂದರಾಜ್ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆಯೆನ್ನಲಾದ ಡೈರಿ.
    ಜೈನ್-ಹವಾಲಾ ಡೈರಿಯಲ್ಲಿನ ಆರೋಪಿಗಳೆಲ್ಲರನ್ನೂ ಸುಪ್ರೀಂಕೋರ್ಟ್ ಖುಲಾಸೆಗೊಳಿಸಿದೆ. ಸಹಾರಾ-ಬಿರ್ಲಾ ಕಂಪೆನಿಗಳ ಡೈರಿ ಬಗ್ಗೆ ವಿಚಾರಣೆಯನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ. ಈಗ ಉಳಿದಿರುವುದು ನೈತಿಕತೆಯ ಆಧಾರದ ಪಾಪ ಪ್ರಾಯಶ್ಚಿತ. ಇದು ಹೇಗೆ ಎನ್ನುವುದು ಪ್ರಶ್ನೆ. ನೈತಿಕತೆಯ ಆಧಾರದ ಪಾಪ ಪ್ರಾಯಶ್ಚಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಪಾಲಿಸಿದ ರಾಜಧರ್ಮದ ಮಾರ್ಗವೊಂದಿದೆ. ಇದು ಸರಿಯಾದ ಮಾರ್ಗ ಎಂದೆನಿಸುತ್ತದೆ. ಹವಾಲಾ ಹಣ ಸ್ವೀಕರಿಸಿದವರ ಪಟ್ಟಿಯಲ್ಲಿ `ಎಲ್ ಕೆ ಎನ್’ ಎನ್ನುವ ಇನಿಷಿಯಲ್ ಇರುವುದು ಬಹಿರಂಗವಾಗಿ, ಅದು ಲಾಲ್ ಕೃಷ್ಣ ಅಡ್ವಾಣಿಯವರೇ ಎಂದು ಪ್ರಚಾರವಾಗತೊಡಗಿದಾಗ ನೊಂದುಕೊಂಡ ಅಡ್ವಾಣಿಯವರು ಅದೇ ದಿನ ಸಂಜೆ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

    `ರಾಜಕೀಯದಲ್ಲಿ ವಿಶ್ವಾಸಾರ್ಹತೆ ಮುಖ್ಯ, ಅಧಿಕಾರ ಅಲ್ಲ. ಈ ಆರೋಪದಿಂದ ಮುಕ್ತವಾಗುವವರೆಗೆ ಲೋಕಸಭೆ ಪ್ರವೇಶಿಸುವುದಿಲ್ಲ’ ಎಂದು ಅವರು ಶಪಥ ಮಾಡಿದ್ದರು. ಅನಂತರ ಡೈರಿಯಲ್ಲಿ ಹೆಸರಿದ್ದ ಅನೇಕ ರಾಜಕಾರಣಿಗಳು ಕೂಡಾ ರಾಜೀನಾಮೆ ನೀಡಬೇಕಾಯಿತು. ನೈತಿಕ ನಿಲುವುಗಳು ಮೇಲಿನಿಂದ ಕೆಳಕ್ಕೆ ಇಳಿದು ಬರಬೇಕು. ಈಗ ಚೆಂಡು ಸನ್ಮಾನ್ಯ ಪ್ರಧಾನಿ ನರೇಂದ್ರಮೋದಿಯವರ ಮನೆಯಂಗಳದಲ್ಲಿದೆ. ಸಹಾರಾ-ಬಿರ್ಲಾ ಡೈರಿಯಲ್ಲಿ `ಗುಜರಾತ್ ಸಿಎಂ’ ಮಧ್ಯಪ್ರದೇಶ ಸಿಎಂ, ಚತ್ತೀಸ್ ಗಡ ಸಿಎಂ’ ಡೆಲ್ಲಿ ಸಿಎಂ ಅವರಿಗೆ ಹಣ ನೀಡಲಾದ ಎಂಟ್ರಿಗಳಿವೆಯಂತೆ. ಡೈರಿ ಹಾವಳಿ ಅತಿಯಾಯಿತು. ಇದನ್ನು ಕೊನೆಗೊಳಿಸಬೇಕಾದರೆ ಸನ್ಮಾನ್ಯ ನರೇಂದ್ರಮೋದಿಯವರು ತಮ್ಮದೇ ಪಕ್ಷದ ಮಾರ್ಗದರ್ಶಕ ಮಂಡಳಿಯ ಹಿರಿಯ ಸದಸ್ಯರಾದ ಎಲ್.ಕೆ.ಅಡ್ವಾಣಿಯವರ ಮಾದರಿಯನ್ನು ಅನುಸರಿಸಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅದರ ನಂತರ ಗೋವಿಂದರಾಜ್ ಅವರದ್ದೆನ್ನಲಾದ ಡೈರಿಯಲ್ಲಿರುವ ಹೆಸರಿನ ಎಲ್ಲ ರಾಜಕಾರಣಿಗಳು ಕ್ಷಣಮಾತ್ರವೂ ಸಮಯ ವ್ಯರ್ಥಮಾಡದೆ ರಾಜೀನಾಮೆ ಎಸೆದುಬಿಡಬೇಕು.