Tag: Dipavali

  • ಗಗನಕ್ಕೇರಿದ ಬಂಗಾರದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ!

    ಗಗನಕ್ಕೇರಿದ ಬಂಗಾರದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ!

    – ಚಿನ್ನದ ಮೇಲೆ ಹೂಡಿಕೆ ಬೇಡವೆಂದ ತಜ್ಞರು!

    ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಲಕ್ಷ್ಮೀ ಪೂಜೆಗೆ ಸಿದ್ಧತೆಗಳು ಆರಂಭವಾಗಿವೆ. ಜೊತೆಗೆ ಮದುವೆ ಸೀಜನ್ ಸಹ ಸ್ಟ್ರಾಟ್ ಆಗಿದೆ. ಆದ್ರೇ ಈ ಸಮಯದಲ್ಲೇ ಬಂಗಾರ (Gold), ಬೆಳ್ಳಿ ಬಲು ಭಾರವಾಗಿದ್ದು, ಮಧ್ಯಮ ಮತ್ತು ಬಡ ವರ್ಗದವರಿಗೆ ಕೈಗೆಟುಕದಂತಾಗಿದೆ.

    ದಿನದಿಂದ ದಿನಕ್ಕೆ ಚಿನ್ನದ ಬೆಲೆ (Gold Rate) ಗಗನಕ್ಕೇರುತ್ತಿದ್ದು, ಬಂಗಾರದ ಬೆಲೆಯಲ್ಲಿ ಆಲ್ ಟೈಮ್ ರೆಕಾರ್ಡ್ ನಿರ್ಮಾಣವಾಗ್ತಿದೆ. ಕಳೆದ ಒಂದು ವರ್ಷದಲ್ಲಿ 65% ರಷ್ಟು ದರ ಏರಿಕೆ ಆಗಿದ್ದರೂ ಸಹ ಚಿನ್ನದ ಮೇಲೆ ಕ್ರೇಜ್ ಮಾತ್ರ ಕಡಿಮೆ ಆಗಿಲ್ಲ. ಇನ್ನು ಬೆಳ್ಳಿ ಒಂದು ವರ್ಷದಲ್ಲಿ 75% ಏರಿಕೆಯಾಗಿದೆ. ಹಿಂದಿನ ಯಾವ ವರ್ಷಗಳಲ್ಲೂ ಆಗದ ಬೆಲೆ ಏರಿಕೆ ಕಳೆದ ಅಕ್ಟೋಬರ್‌ನಿಂದ ಈ ವರ್ಷ ಅಕ್ಟೋಬರ್‌ನಲ್ಲಿ ಆಗಿದೆ. ದೀಪಾವಳಿ ಹಾಗೂ ಈಗಾಗಲೇ ಮದುವೆ ಸೀಜನ್ ಆರಂಭವಾಗಿದ್ದು, ಮಧ್ಯಮ ವರ್ಗ ಹಾಗೂ ಬಡವರ್ಗದ ಮಹಿಳೆಯರಿಗೆ ಬಂಗಾರ ಕೊಳ್ಳಂಗಿಲ್ಲ, ಮುಟ್ಟಂಗಿಲ್ಲ ಎನ್ನುವಂತಾಗಿದೆ. ಇದನ್ನೂ ಓದಿ: ಬಿಗ್‌ ಬಾಸ್‌ ಶೂಟಿಂಗ್‌ನಲ್ಲಿ ಸುದೀಪ್‌ ಭಾಗಿ

    ಇನ್ನೂ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1,24,000 ರೂ. ಆಗಿದ್ರು, ಬೆಳ್ಳಿ ಕೆ.ಜಿಗೆ 1,60,000 ರೂ. ಆಗಿದೆ. ಪ್ರಮುಖವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿರೋದು, ವಿವಿಧ ದೇಶದ ಬ್ಯಾಂಕ್‌ಗಳು ಚಿನ್ನ ಕೊಳ್ಳುತ್ತಿರೋದು, ಟ್ರಂಪ್‌ನ ಟಾರಿಫ್ ನೀತಿ ಮೊದಲಾದ ಕಾರಣಗಳಿಂದ ಚಿನ್ನ, ಬೆಳ್ಳಿ ಏರಿಕೆಯಾಗ್ತಿದೆ. ಇದನ್ನೂ ಓದಿ: 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, 12 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

    ಇನ್ನೂ ಎರಡ್ಮೂರು ತಿಂಗಳು ಇದೇ ದರ ಇರಲಿದ್ದು, 10 ಗ್ರಾಂ ಚಿನ್ನದ ಬೆಲೆ 1,35,000 ರೂ. ಹಾಗೂ ಬೆಳ್ಳಿ ಕೆ.ಜಿಗೆ 1,75,000 ರೂ.ವರೆಗೆ ಹೆಚ್ಚಳವಾಗೋ ಸಾಧ್ಯತೆಯಿದೆ. ಇನ್ನೂ ಒಂದೆರಡು ತಿಂಗಳಲ್ಲಿ ಕೇವಲ 10ರಿಂದ 15% ಮಾತ್ರ ಇಳಿಕೆಯಾಗೋ ನಿರೀಕ್ಷೆಯಿದೆ. ಹೆಚ್ಚಿನ ಇಳಿಕೆಯನ್ನು ನಿರೀಕ್ಷಿಸಲಾಗ್ತಿಲ್ಲ. ಹೀಗಾಗಿ ಶಾಸ್ತ್ರಕ್ಕಾಗಿ ಚಿನ್ನ ಖರೀದಿಸಿ, ಯಾವುದೇ ಕಾರಣಕ್ಕೂ ಚಿನ್ನದ ಮೇಲೆ ಹೂಡಿಕೆ ಮಾಡಬೇಡಿ ಎಂದು ಹಣಕಾಸು ತಜ್ಞರು ಹೇಳುತ್ತಿದ್ದಾರೆ.

    ಒಟ್ಟಿನಲ್ಲಿ ಮಧ್ಯಮ ಮತ್ತು ಬಡ ವರ್ಗದವರಲ್ಲಿಯೇ ಈ ಚಿನ್ನದ ಮೇಲಿನ ಕ್ರೇಜ್ ಹೆಚ್ಚಾಗಿದೆ. ಇನ್ನು ಸದ್ಯಕ್ಕೆ ಚಿನ್ನ ಹಾಗೂ ಬೆಳ್ಳಿಯ ನಾಗಲೋಟಕ್ಕೆ ಬ್ರೇಕ್ ಬೀಳುವ ಲಕ್ಷಣಗಳಿಲ್ಲ.

  • ಮೊದಲು ರಕ್ತವಿಲ್ಲದ ಬಕ್ರೀದ್ ಮಾಡಿ ಬಳಿಕ ಪಟಾಕಿಯನ್ನು ನಿಷೇಧಿಸಿ – ಋಷಿಕುಮಾರ ಸ್ವಾಮೀಜಿ ಕಿಡಿ

    ಮೊದಲು ರಕ್ತವಿಲ್ಲದ ಬಕ್ರೀದ್ ಮಾಡಿ ಬಳಿಕ ಪಟಾಕಿಯನ್ನು ನಿಷೇಧಿಸಿ – ಋಷಿಕುಮಾರ ಸ್ವಾಮೀಜಿ ಕಿಡಿ

    ಚಿಕ್ಕಮಗಳೂರು: ರಕ್ತರಹಿತವಾದ ಬಕ್ರೀದ್ ಆಚರಿಸೋಣ, ನಿಶ್ಶಬ್ದವಾದ ಶುಕ್ರವಾರ ಆಚರಣೆ ಮಾಡೋಣ. ಆಗ ಶಬ್ದವಿಲ್ಲದ, ಪಟಾಕಿ ಇಲ್ಲದ ದೀಪಾವಳಿ ಆಚರಿಸೋಣ ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮಾತನಾಡಿದ ಅವರು, ಪಟಾಕಿ ನಿಷೇಧದ ಬಗ್ಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಸಿರು ಪಟಾಕಿಯಂತೆ. ಇದ್ಯಾವುದು ಹೊಸದು. ಎಲೆ ಸುತ್ತಬೇಕಾ ಅಥವಾ ಪೇಪರ್ ಹರಿದು ಹಸಿರು ಬಣ್ಣದ ಪೇಪರ್ ಸುತ್ತಬೇಕಾ ಎಂದು ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ಬಿಎಸ್‍ವೈ ಪೂರ್ಣಾವಧಿ ಸಿಎಂ ಎಂದು ಯಾವಾಗಲೂ ಹೇಳುತ್ತಿರುತ್ತೇನೆ. ಹಿಂದೂಗಳಿಗೆ ಹೀಗೆ ಮಾಡಿದರೆ ಮೂರು ತಿಂಗಳೂ ಇರುವುದಿಲ್ಲ. ಉಂಡುಂಡು ಮಲಗೋದು, ದಿನಕ್ಕೊಂದು ಕಾನೂನು ತರೋದಷ್ಟೆ ಸರ್ಕಾರದ ಸಾಧನೆಯಾಯ್ತು. ಯೋಗಿ ಸರ್ಕಾರವನ್ನು ನೋಡಿ ಕಲಿಯರಿ. ಅವರು 6 ಲಕ್ಷ ದೀಪ ಹಚ್ಚುತ್ತಿದ್ದಾರೆ ಎಂದು ಬಿಎಸ್‍ವೈ ವಿರುದ್ಧ ಕಿಡಿಕಾರಿದರು.

    ಮೊದಲು ರಕ್ತವಿಲ್ಲದ ಬಕ್ರೀದ್ ಮಾಡೋಣ, ನಿಶ್ಶಬ್ದವಾದ ಶುಕ್ರವಾರ ಆಚರಣೆ ಮಾಡೋಣ. ಆಗ ಶಬ್ದವಿಲ್ಲದ, ಪಟಾಕಿ ಇಲ್ಲದ ದೀಪಾವಳಿ ಮಾಡೋಣ. ಮೊದಲು ಅವೆಲ್ಲವನ್ನೂ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ದತ್ತಮಾಲಾ ಅಭಿಯಾನಕ್ಕೆ ಕಡಿಮೆ ಜನ ಸೇರಿಸಿ ಎಂದು ಹೇಳಿರುವ ಜಿಲ್ಲಾಡಳಿತದ ವಿರುದ್ಧವೂ ರಿಷಿಕುಮಾರ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.

    ನೀವು ಹೇಳುವ ಕೋವಿಡ್ ನಿಯಂತ್ರಣಕ್ಕೆ ನಾವು ಬದ್ಧ. ಅದಕ್ಕೆ ಈ ಬಾರಿ ರೋಡ್ ಶೋ ನಿಲ್ಲಿಸಿದ್ದೇವೆ. ಅಂತರ ಕಾಪಾಡಾಲು ಬದ್ಧ. ಹಿಂದೂ ಕಾರ್ಯಕ್ರಮಗಳಿಗೆ ಏಕೆ ತಡೆ ಒಡ್ಡುತ್ತೀರಾ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಇದೇ ತಿಂಗಳ 26ರಂದು ದತ್ತಮಾಲಾ ಅಭಿಯಾನ ನಡೆಯಲಿದೆ. ಈ ವರ್ಷ ಜಿಲ್ಲಾಡಳಿತ ತಡೆಯೊಡ್ಡುತ್ತಿದೆ. ಜನರನ್ನ ಸೇರಿಸಿ ಆದರೆ, ಕಡಿಮೆ ಜನರನ್ನ ಸೇರಿಸಿ. ನೀವು ಮಾತ್ರ ಹೋಗಿ ಬನ್ನಿ ಎಂದು ಹೇಳಿದೆ ಎಂದು ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದರು.

    ಇದು ಇಡೀ ರಾಜ್ಯ ಕಾಯುತ್ತಿರುವ ದಿನಗಳು. ಇಡೀ ರಾಜ್ಯ, ರಾಜ್ಯದ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಕೆಲಸವನ್ನ ಚಿಕ್ಕಮಗಳೂರು ಜಿಲ್ಲಾಡಳಿತ ಮಾಡುತ್ತಿದೆ. ಸಿ.ಟಿ.ರವಿ ನಮ್ಮವರು ನಮ್ಮವರು ಎಂದು ಹೇಳುತ್ತಲೇ ಕಳೆದ ವರ್ಷ ವಿಗ್ರಹವನ್ನು ಬೀದಿಯಲ್ಲಿ ಇಡುವ ಕೆಲಸ ಮಾಡಿದ್ದರು. ನಾವು ಅದನ್ನ ದೇವಾಸ್ಥಾನದಲ್ಲಿಟ್ಟು, ತ್ರಿಕಾಲ ಪೂಜೆ ಮಾಡುತ್ತಿದ್ದೇವೆ. ನಾವು ದತ್ತಮಾಲಾ ಅಭಿಯಾನಕ್ಕೆ ಇಡೀ ರಾಜ್ಯಕ್ಕೆ ಕರೆ ಕೊಟ್ಟಿದ್ದೇವೆ. ಸರ್ಕಾರ ದತ್ತಮಾಲಾ ಅಭಿಯಾನಕ್ಕೆ ಪೂರ್ಣ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.