Tag: Dipika Kakar

  • ‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ಕಕ್ಕರ್‌ಗೆ ಕ್ಯಾನ್ಸರ್

    ‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ಕಕ್ಕರ್‌ಗೆ ಕ್ಯಾನ್ಸರ್

    ಹಿಂದಿ ಕಿರುತೆರೆಯ ಜನಪ್ರಿಯ ನಟಿ ದೀಪಿಕಾ ಕಕ್ಕರ್‌ಗೆ (Dipika Kakar) 2ನೇ ಹಂತದ ಯಕೃತ್‌ಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ನಟಿ ತಿಳಿಸಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್‌ಗೆ ಶಾಕ್ ಆಗಿದೆ. ಇದನ್ನೂ ಓದಿ:ವಿದೇಶಕ್ಕೆ ಶೂಟಿಂಗ್‌ ತೆರಳಲು ಅನುಮತಿ ಕೋರಿ ದರ್ಶನ್‌ ಅರ್ಜಿ

    ನಟಿಯ ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ, ನಿಮಗೆಲ್ಲರಿಗೂ ತಿಳಿದಿರುವಂತೆ ಕಳೆದ ಕೆಲವು ವಾರಗಳು ನನಗೆ ತುಂಬಾ ಕಷ್ಟಕರವಾಗಿತ್ತು. ನನ್ನ ಹೊಟ್ಟೆಯ ಮೇಲ್ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಹೋದಾಗ ಲಿವರ್‌ನಲ್ಲಿ ಟೆನ್ನಿಸ್ ಚೆಂಡಿನ ಗಾತ್ರದ ಗೆಡ್ಡೆ ಇರುವುದು ತಿಳಿಯಿತು. ಆ ಗೆಡ್ಡೆ ಎರಡನೇ ಹಂತದ ಮಾರಕ ಕ್ಯಾನ್ಸರ್ ಎಂದು ಗೊತ್ತಾಯ್ತು. ನಾನು ನೋಡಿದ ಅತ್ಯಂತ ಕಷ್ಟಕರ ಸಮಯಗಳಲ್ಲಿ ಇದು ಒಂದು ಎಂದಿದ್ದಾರೆ. ಕ್ಯಾನ್ಸರ್ ವಿಚಾರ ತಿಳಿದ ಮೇಲೆ ನಾನು ಈಗ ಪಾಸಿಟಿವ್ ಆಗಿ ಇದ್ದೇನೆ. ಕ್ಯಾನ್ಸರ್ ಅನ್ನು ಎದುರಿಸಿ ಬಲಶಾಲಿಯಾಗಿ ಹೊರಬರಲು ದೃಢನಿಶ್ಚಯ ಮಾಡಿದ್ದೇನೆ. ನನ್ನ ಇಡೀ ಕುಟುಂಬ ನನ್ನೊಂದಿಗೆ ಇದೆ. ನಿಮ್ಮೆಲ್ಲರ ಪ್ರೀತಿ ಮತ್ತು ಪ್ರಾರ್ಥನೆಗಳು ನನ್ನೊಂದಿಗೆ ಇದೆ. ದಯವಿಟ್ಟು ನನಗಾಗಿ ಪ್ರಾರ್ಥಿಸಿ ಎಂದು ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Dipika (@ms.dipika)

    ಕ್ಯಾನ್ಸರ್‌ನಿಂದ ಮುಕ್ತರಾಗಲು ನಟಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ದೀಪಿಕಾಗೆ ಕ್ಯಾನ್ಸರ್ ಎಂದು ಸುದ್ದಿ ಕೇಳಿ ಫ್ಯಾನ್ಸ್ ಕಂಗಾಲಾಗಿದ್ದಾರೆ. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಇದನ್ನೂ ಓದಿ:ತಮಿಳಿನಿಂದ ಕನ್ನಡ ಎಂದ ಕಮಲ್ ಹಾಸನ್‌ಗೆ ಸಂಕಷ್ಟ- ಕ್ಷಮೆಯಾಚಿಸುವಂತೆ ಆಗ್ರಹ

    ಸಲ್ಮಾನ್ ಖಾನ್ ನಿರೂಪಣೆಯ ‘ಬಿಗ್ ಬಾಸ್ ಹಿಂದಿ 12’ರಲ್ಲಿ ದೀಪಿಕಾ ವಿನ್ನರ್ ಆಗಿದ್ದರು. ಕಿರುತೆರೆ ಹಲವು ಸೀರಿಯಲ್‌ನಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಶೋಯೆಬ್ ಇಬ್ರಾಹಿಂ ಜೊತೆ ನಟಿ ಮದುವೆಯಾಗಿದ್ದಾರೆ. 2023ರಲ್ಲಿ ನಟಿ ಗಂಡು ಮಗುವಿಗೆ ಜನ್ಮ ನೀಡಿದರು.

  • ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕಿರುತೆರೆ ದಂಪತಿ

    ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕಿರುತೆರೆ ದಂಪತಿ

    ಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terrorist Attack) ಉಗ್ರರ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಕಿರುತೆರೆಯ ಖ್ಯಾತ ಜೋಡಿ ಶೋಯೆಬ್ ಇಬ್ರಾಹಿಂ (Shoaib Ibrahim) ಮತ್ತು ದೀಪಿಕಾ ಕಕ್ಕರ್ (Dipika Kakar) ಸೇಫ್ ಆಗಿದ್ದಾರೆ. ಈ ಘಟನೆಯ ಕುರಿತು ಶೋಯೆಬ್ ಪ್ರತಿಕ್ರಿಯಿಸಿ, ನಾವು ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ಉಗ್ರರ ಹೇಯ ಕೃತ್ಯ ಖಂಡಿಸಿದ ಶಿವಣ್ಣ, ರಶ್ಮಿಕಾ ಮಂದಣ್ಣ, ಅನುಷ್ಕಾ ಶರ್ಮಾ

     

    View this post on Instagram

     

    A post shared by Dipika (@ms.dipika)

    ಪ್ರವಾಸಕ್ಕೆಂದು ಪಹಲ್ಗಾಮ್‌ಗೆ ಮಗ ಹಾಗೂ ಪತ್ನಿ ದೀಪಿಕಾ ಜೊತೆ ಶೋಯೆಬ್ ಇಬ್ರಾಹಿಂ ಬಂದಿದ್ದರು. ಏ.22ರಂದು ನಡೆದ ಭಯೋತ್ಪಾದಕರ ದಾಳಿಗೂ ಕೆಲವು ಗಂಟೆಗಳ ಮುನ್ನ ಪಹಲ್ಗಾಮ್ ತೊರೆದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ. ಇದನ್ನೂ ಓದಿ:ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ: ಉಗ್ರರ ಕೃತ್ಯದ ಬಗ್ಗೆ ಅನುಪಮ್ ಖೇರ್ ಆಕ್ರೋಶ

    ಈ ಬಗ್ಗೆ ಶೋಯೆಬ್ ಪ್ರತಿಕ್ರಿಯಿಸಿ, ನಾವು ಸುರಕ್ಷಿತವಾಗಿದ್ದೇವೆ, ಚಿಂತಿಸಬೇಡಿ. ನಾವು ಕಾಶ್ಮೀರ ಬಿಟ್ಟಿದ್ದೇವೆ. ಈಗ ದೆಹಲಿ ತಲುಪಿದ್ದೇವೆ. ಹೊಸ ವ್ಲಾಗ್ ಶೀಘ್ರದಲ್ಲಿ ಬರಲಿದೆ ಎಂದು ಬರೆದುಕೊಂಡಿದ್ದಾರೆ.

    ಕುಂಕುಮ ಭಾಗ್ಯ, ನಚ್ ಬಲಿಯೆ, ಬಿಗ್ ಬಾಸ್ ಹಿಂದಿ 12ರ ಮೂಲಕ ಶೋಯೆಬ್ ಗುರುತಿಸಿದ್ದಾರೆ. ದೀಪಿಕಾ ಕೂಡ ಹಲವು ಸೀರಿಯಲ್‌ಗಳಲ್ಲಿ ನಟಿಸಿದ್ದಾರೆ. 2018ರಲ್ಲಿ ಈ ಜೋಡಿ ಮದುವೆಯಾದರು.