Tag: director

  • ನಿರ್ದೇಶಕ, ನಟ ಸತ್ಯ ನಿಧನಕ್ಕೆ ಕಂಬನಿ ಮಿಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

    ನಿರ್ದೇಶಕ, ನಟ ಸತ್ಯ ನಿಧನಕ್ಕೆ ಕಂಬನಿ ಮಿಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

    ಬೆಂಗಳೂರು: ನಿರ್ದೇಶಕ, ನಟ ಪಿ.ಎನ್ ಸತ್ಯ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಂಬನಿ ಮಿಡಿದಿದ್ದಾರೆ.

    ಕಳೆದ ಒಂದು ವರ್ಷದಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಸತ್ಯ ಚಿಕಿತ್ಸೆ ಫಲಿಸದೆ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಸುಮಾರು 7.30ಕ್ಕೆ ವಿಧಿವಶರಾಗಿದ್ದಾರೆ. ಇದನ್ನೂ ಓದಿ: ಮೆಜೆಸ್ಟಿಕ್ ಸಿನಿಮಾ ನಿರ್ದೇಶಕ ಪಿ.ಎನ್.ಸತ್ಯ ವಿಧಿವಶ

    ಸದ್ಯ ಬಸವೇಶ್ವರನಗರದ ಸೋದರಿ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ದರ್ಶನ್‍ಗೆ ನಾಯಕ ನಟ ಇಮೇಜ್ ತಂದು ಕೊಟ್ಟಿದ್ದೇ ಈ ಸತ್ಯ.

    ಈ ಬಗ್ಗೆ ದರ್ಶನ್ ಕಂಬನಿ ಮಿಡಿದಿದ್ದು, “ನನ್ನ ಆಪ್ತ ಸ್ನೇಹಿತರಲ್ಲೊಬ್ಬರು, ನನ್ನ `ಮೆಜೆಸ್ಟಿಕ್’ ಚಿತ್ರದ ನಿರ್ದೇಶಕರು ಪಿ.ಎನ್ ಸತ್ಯ ಇಂದು ನಮ್ಮಿಂದ ದೈಹಿಕವಾಗಿ ದೂರವಾಗಿದ್ದಾರೆ. ಈ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಸತ್ಯ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.

    ಮೆಜೆಸ್ಟಿಕ್, ಡಾನ್, ದಾಸ, ಶಾಸ್ತ್ರೀ, ಗೂಳಿ ಸೇರಿದಂತೆ 16 ಚಿತ್ರಗಳನ್ನ ನಿರ್ದೇಶಿಸಿದ್ದ ಸತ್ಯ ಅವರ ಕೊನೆಯ ಚಿತ್ರ ಮರಿ ಟೈಗರ್ ಆಗಿತ್ತು.

  • ರಾಜರಥ ಸಿನಿಮಾ ತಂಡದ ವಿರುದ್ಧ ಮತ್ತೊಂದು ದೂರು ದಾಖಲು

    ರಾಜರಥ ಸಿನಿಮಾ ತಂಡದ ವಿರುದ್ಧ ಮತ್ತೊಂದು ದೂರು ದಾಖಲು

    ಬೆಂಗಳೂರು: ರಾಜರಥ ಸಿನಿಮಾ ತಂಡದ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.

    ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ರಾಜರಥ ಸಿನಿಮಾ ತಂಡದ ವಿರುದ್ಧ ದೂರು ನೀಡಿದ್ದು, ತಕ್ಷಣ ರಾಜರಥ ಸಿನಿಮಾ ಪ್ರದರ್ಶನ ನಿಲ್ಲಿಸದೆ ಇದ್ದರೆ ಪ್ರತಿಭಟನೆ ನಡೆಸುವ ಕುರಿತು ಎಚ್ಚರಿಕೆ ನೀಡಿದೆ. ಅಲ್ಲದೇ ರಾಜರಥ ಸಿನಿಮಾ ನಟ ನಟಿ ಮತ್ತು ನಿರ್ದೇಶಕರನ್ನು ಆರು ತಿಂಗಳ ಕಾಲ ಚಿತ್ರೋದ್ಯಮದಿಂದ ಅಮಾನತು ಮಾಡಬೇಕು ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಂದರ್ಶನದಲ್ಲಿ ಕನ್ನಡ ಸಿನಿಮಾವನ್ನ ನೋಡದೇ ಇರುವರು ಅಂತ ಹೇಳಿಲ್ಲ, ರಾಜರಥ ಸಿನಿಮಾವನ್ನ ನೋಡದೇ ಇರುವವರು ಕಚಡಾಗಳು ಎಂದು ಹೇಳಿಕೆ ಕೊಟ್ಟಿರುವುದು ನೋವುಂಟು ಮಾಡಿದೆ ಎಂದು ದೂರಿನಲ್ಲಿ ಸಂಘಟನೆ ಆರೋಪಿಸಿದೆ.

    ಕರ್ನಾಟಕ ಸಂಘಟನೆಗಳ ಒಕ್ಕೂಟ ಇದೇ ಕಾರಣಕ್ಕಾಗಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಚಿತ್ರ ತಂಡದ ವಿರುದ್ಧ ಮಂಗಳವಾರ ದೂರು ದಾಖಲಿಸಿತ್ತು.

    ಖಾಸಗಿ ರೇಡಿಯೋ ಕಾರ್ಯಕ್ರಮದಲ್ಲಿ ಭಾಗಿವಹಿಸಿದ್ದ ರಾಜರಥ ಸಿನಿಮಾ ತಂಡ, ರಾಜರಥ ಸಿನಿಮಾ ನೋಡದ ಪ್ರೇಕ್ಷಕ “ಕಚಡ ನನ್ಮಕ್ಳು” ಎನ್ನುವ ಹೇಳಿಕೆ ನೀಡಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕ ವಲಯದಿಂದ ತೀವ್ರ ಅಕ್ರೋಶ ವ್ಯಕ್ತವಾಗಿತ್ತು.  ಇದನ್ನೂ ಓದಿ: ರಾಜರಥ ಸಿನಿಮಾ ವಿವಾದದ ಕುರಿತಾಗಿ ಅಚ್ಚರಿಯ ಹೇಳಿಕೆ ನೀಡಿದ ರ‍್ಯಾಪಿಡ್ ರಶ್ಮಿ

    ಈ ಕುರಿತು ಮಂಗಳವಾರ ಫೀಲ್ಮ ಚೇಂಬರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚಿತ್ರದ ನಿರ್ದೇಶಕ ಹಾಗೂ ನಾಯಕರಾದ ಭಂಡಾರಿ ಸಹೋದದರು ಚಿತ್ರರಂಗ ಹಾಗೂ ಕನ್ನಡ ಅಭಿಮನಿಗಳ ಕ್ಷಮೆ ಕೋರಿದ್ದರು. ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗು ನೋವುಂಟು ಮಾಡಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ. ಸಂದರ್ಶನಕ್ಕು ಮುನ್ನ, ಹಲವರು ಕನ್ನಡ ಸಿನಿಮಾ ನೋಡುವುದಿಲ್ಲ, ಹಲವಾರು ಒಳ್ಳೆ ಚಿತ್ರಗಳು ಬರುತ್ತಿವೆ ಆದರು ಏಕೆ ಹೀಗೆ, ಎಂದು ಚರ್ಚಿಸಿದ್ದೆವು. ಹಾಗೆ ಸಂದರ್ಶನದಲ್ಲಿ ಬಂದ ಪ್ರಶ್ನೆಗೆ ಆ ಹಿನ್ನೆಲೆಯಲ್ಲಿ ಕೊಟ್ಟ ತಪ್ಪು ಉತ್ತರವದು. ಇದು ಖಂಡಿತವಾಗಿಯು ಕನ್ನಡ ಪ್ರೇಕ್ಷಕರನ್ನುದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ. ನಮ್ಮ ಯಾವುದೇ ಬೇರೆ ಸಂದರ್ಶನಗಳನ್ನು ನೋಡಿದರೂ ನಮ್ಮ ಗೆಲುವಿಗೆ ಪ್ರೇಕ್ಷಕರೆ ಕಾರಣ ಎಂದು ಹಲವು ಬಾರಿ ಹೇಳಿದ್ದೇವೆ. ಕನ್ನಡ ಮತ್ತು ಕನ್ನಡ ಸಿನಿಮಾದ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಅನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶಿರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದು ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

  • ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ

    ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ

    ಬೆಂಗಳೂರು: ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ. ನಮಗೆ ಇದರಿಂದ ತುಂಬ ನೋವಾಗಿದೆ ಇನ್ಮುಂದೆ ಹೀಗೆ ಆಗುವುದಿಲ್ಲ. ನಾವು ಕನ್ನಡಿಗರಿಗೆ ನೋಯಿಸಬೇಕು ಅಂತ ಆ ರೀತಿ ಮಾತನಾಡಲಿಲ್ಲ ಎಂದು ಹೇಳಿ ರಾಜರಥ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ.

    ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರ್ಯಾಪಿಡ್ ರಶ್ಮಿ ಅವರಲ್ಲಿ ಆ ವಿಡೀಯೊವನ್ನ ಡಿಲೀಟ್ ಮಾಡಲು ತಿಳಿಸಿದ್ದೇವೆ. ಯಾವುದೋ ಸಮಯದಲ್ಲಿ ಹೀಗೆ ಆಗಿ ಹೋಗಿದೆ ಎಂದು ಹೇಳಿದರು. ಈ ವೇಳೆ ರಾಜರಥ ಚಿತ್ರ ತಂಡ ಎದ್ದುನಿಂತು ಕನ್ನಡಿಗರ ಕ್ಷಮೆ ಯಾಚಿಸಿತು.

    ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ ರಾ ಗೋವಿಂದ್ ಮಾತನಾಡಿ, ನಿನ್ನೆ ಸಂಜೆಯಿಂದ ದೂರವಾಣಿ ಕರೆಗಳು ಬರುತ್ತಿದೆ. ಸಾರ್ವಜನಿಕವಾಗಿ ತಪ್ಪು ನಡೆದಿದೆ ನೀವೇ ಕ್ಷಮೆ ಕೇಳಬೇಕು ಅಂತ ಹೇಳಿದಾಗ ಚಿತ್ರ ತಂಡದವರು ಬಂದಿದ್ದಾರೆ. ಚಿತ್ರ ರಿಲೀಸ್ ಆಗುವ ಮೊದಲೇ ಈ ರೀತಿ ಮಾತನಾಡಿದ್ದಾರೆ. ಕೆಲವರು ಕೇಳುವ ಪ್ರಶ್ನೆಗಳು ಉದ್ರೇಕಗೊಳಿಸುತ್ತದೆ. ಎಂತಹವರಿಗಾದರು ಸಿಟ್ಟು ತರಿಸುತ್ತೆ ಎಂದು ಹೇಳಿದರು.

    ಮಾಡಿದ ಸಿನಿಮಾಗಳೆಲ್ಲಾ ಹಿಟ್ ಆಗಲೇ ಬೇಕು ಅಂತ ಇಲ್ಲ. ಕೆಟ್ಟ ಪದವನ್ನು ಯಾರು ಬಳಸಿರಲಿಲ್ಲ. ರಾಜ್ ಕುಮಾರ್ ಆಗಿರಲಿ, ವಿಷ್ಣುವರ್ಧನ್, ಅಂಬರೀಶ್ ಯಾರೂ ಸಹ ಕೆಟ್ಟದಾಗಿ ಮಾತನಾಡಿರಲಿಲ್ಲ ಆದರೆ ಇಂದು ಪರಿಸ್ಥಿತಿ ಹಾಗಿಲ್ಲ. ಚಿತ್ರತಂಡ ಪೂರ್ತಿ ಕನ್ನಡದವರು, ಕನ್ನಡಿಗರ ಬಗ್ಗೆ ಈ ರೀತಿಯ ಮಾತು ಸರಿಯಲ್ಲ ಎಂದರು.

    ಭಂಡಾರಿ ಸಹೋದರರು ಹೇಳಿದ್ದು ಏನು?
    ಸಂದರ್ಶನದ ನಡುವೆ ರ್ಯಾಪಿಡ್ ರಶ್ಮಿ “ರಾಜರಥ ಸಿನಿಮಾ ನೋಡದ ಪ್ರೇಕ್ಷಕರು______” ಎಂದು ಬಿಟ್ಟ ಸ್ಥಳವನ್ನು ತುಂಬಿಸುವಂತೆ ಕೇಳುತ್ತಾರೆ. ಮೊದಲು ಉತ್ತರಿಸಿದ ಅನೂಪ್ ಭಂಡಾರಿ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ನನ್ ಮಕ್ಳು” ಎಂದು ಹೇಳುತ್ತಾರೆ. ನಂತರ ಆ ಪ್ರಶ್ನೆ ನಟಿ ಅವಾಂತಿಕಾ ಶೆಟ್ಟಿಗೆ ಹೋಗುತ್ತದೆ. ಅವರೂ ಸಹ ಅನೂಪ್ ಅವರ ಉತ್ತರವನ್ನೇ ಮತ್ತೆ ಹೇಳುತ್ತಾರೆ. ಕೊನೆಗೆ ನಿರೂಪ್ ಭಂಡಾರಿ ಕೂಡ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ಮಾತ್ರವಲ್ಲ ಲೋಫರ್ ನನ್ ಮಕ್ಳು” ಎಂದು ಹೇಳಿದ್ದಾರೆ.

    ಫೇಸ್‍ಬುಕ್ ನಲ್ಲಿ ಕ್ಷಮೆ:
    ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗು ನೋವುಂಟು ಮಾಡಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ. ಸಂದರ್ಶನಕ್ಕೂ ಮುನ್ನ, ಹಲವರು ಕನ್ನಡ ಸಿನಿಮಾ ನೋಡುವುದಿಲ್ಲ, ಹಲವಾರು ಒಳ್ಳೆ ಚಿತ್ರಗಳು ಬರುತ್ತಿವೆ ಆದರು ಏಕೆ ಹೀಗೆ, ಎಂದು ಚರ್ಚಿಸಿದ್ದೆವು. ಹಾಗೆ ಸಂದರ್ಶನದಲ್ಲಿ ಬಂದ ಪ್ರಶ್ನೆಗೆ ಆ ಹಿನ್ನೆಲೆಯಲ್ಲಿ ಕೊಟ್ಟ ತಪ್ಪು ಉತ್ತರವದು. ಇದು ಖಂಡಿತವಾಗಿಯು ಕನ್ನಡ ಪ್ರೇಕ್ಷಕರನ್ನುದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ. ನಮ್ಮ ಯಾವುದೇ ಬೇರೆ ಸಂದರ್ಶನಗಳನ್ನು ನೋಡಿದರೂ ನಮ್ಮ ಗೆಲುವಿಗೆ ಪ್ರೇಕ್ಷಕರೇ ಕಾರಣ ಎಂದು ಹಲವು ಬಾರಿ ಹೇಳಿದ್ದೇವೆ. ಕನ್ನಡ ಮತ್ತು ಕನ್ನಡ ಸಿನಿಮಾದ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಅನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶಿರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದು ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

  • ಪಾಕ್ ಶಾದ್ಮನ್ ಚೌಕದ ಫೋಟೋ ಪ್ರಕಟಿಸಿ, ಈಗ ಹೇಗಿದೆ ಅನ್ನೋದನ್ನು ತಿಳಿಸಿದ್ರು ರಾಜಮೌಳಿ

    ಪಾಕ್ ಶಾದ್ಮನ್ ಚೌಕದ ಫೋಟೋ ಪ್ರಕಟಿಸಿ, ಈಗ ಹೇಗಿದೆ ಅನ್ನೋದನ್ನು ತಿಳಿಸಿದ್ರು ರಾಜಮೌಳಿ

    ಹೈದರಾಬಾದ್: ನಿರ್ದೇಶಕ ರಾಜಮೌಳಿ ಪ್ರತಿ ಬಾರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅಂಶಗಳು ಅಭಿಮಾನಿಗಳಲ್ಲಿ ಕುತೂಹಲವನ್ನು ಉಂಟು ಮಾಡುತ್ತವೆ. ಈ ಬಾರಿ ರಾಜಮೌಳಿ ಫೋಟೋವೊಂದನ್ನು ಟ್ವೀಟ್ ಮಾಡಿದ್ದು, ಅಭಿಮಾನಿಗಳಲ್ಲಿ ಕುತೂಹಲವನ್ನು ಉಂಟು ಮಾಡಿದೆ.

    ಅಂದ ಹಾಗೇ ರಾಜಮೌಳಿ ಪಾಕಿಸ್ತಾನದ ಲಾಹೋರ್ ನಗರದ ಶಾದ್ಮನ್ ಚೌಕದ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಇಲ್ಲಿಯೇ ಭಾರತ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ರನ್ನು ಬ್ರೀಟಿಷರು ಗಲ್ಲಿಗೇರಿಸಿದ್ದರು ಎಂದು ತಮ್ಮ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಇತ್ತೀಚೆಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರದರ್ಶನಕ್ಕೆ ಎಂದು ಪಾಕಿಸ್ತಾನದ ಕರಾಚಿಗೆ ತೆರಳಿದ್ದ ರಾಜಮೌಳಿ ಲಾಹೋರ್ ಮತ್ತು ಇಸ್ಲಾಮಾಬಾದ್ ನಗರಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಲಾಹೋರ್ ನ ಈ ಪ್ರದೇಶದೊಂದಿಗೆ ಭಾರತ ಹೊಂದಿರುವ ಸಂಬಂಧ ಮಹತ್ವ ಅರಿತು ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಈ ಪ್ರದೇಶದ ಮಹತ್ವ ಸಾರುವ ಯಾವ ಗುರುತು ಇಲ್ಲ ಎಂದು ತಿಳಿಸಿದ್ದಾರೆ.

    ಪಾಕಿಸ್ತಾನಕ್ಕೆ ತೆರಳುವ ಮುನ್ನ ರಾಜಮೌಳಿ ಟ್ವೀಟ್ ಮಾಡಿ, ಬಾಹುಬಲಿ ಸಿನಿಮಾ ನನಗೆ ಸಾಕಷ್ಟು ಅವಕಾಶಗಳನ್ನ ತಂದುಕೊಟ್ಟಿದೆ. ಇದರಿಂದ ನಾನು ಹಲವಾರು ದೇಶಗಳನ್ನ ಸುತ್ತಿದ್ದೇನೆ. ಬಾಹುಬಲಿಯಿಂದಾಗಿ ಪಾಕಿಸ್ತಾನಕ್ಕೆ ಬಂದಿರುವುದಕ್ಕೆ ಬಹಳ ಉತ್ಸಾಹದಿಂದ್ದಿದೇನೆ. ನನ್ನನ್ನು ಆಹ್ವಾನಿಸಿರುವ ಪಾಕಿಸ್ತಾನದ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಹೃದಯಪೂರ್ವಕ ಧನ್ಯವಾದಗಳು ಎಂದು ಬರೆದುಕೊಂಡಿದ್ದರು.

  • ನಿರ್ದೇಶಕ ಸೂರಿಗೆ ಬೆದರಿಕೆ ಹಾಕಿದ ಹುಚ್ಚ ವೆಂಕಟ್!- ವಿಡಿಯೋ

    ನಿರ್ದೇಶಕ ಸೂರಿಗೆ ಬೆದರಿಕೆ ಹಾಕಿದ ಹುಚ್ಚ ವೆಂಕಟ್!- ವಿಡಿಯೋ

    ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ `ಟಗರು’ ಚಿತ್ರ ತೆರೆಕಂಡು ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದರೆ, ಇತ್ತ ಚಿತ್ರದ ನಿರ್ದೇಶಕರ ವಿರುದ್ಧ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ಸದ್ಯ ವೆಂಕಟ್ ಸೂರಿಗೆ ಎಚ್ಚರಿಕೆ ನೀಡಿರೋ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸಿನಿಮಾದಲ್ಲಿ ವಿಲನ್ ಗಳು ನಾಯಕ ನಟ ಶಿವರಾಜ್ ಕುಮಾರ್ ಅವರಿಗೆ ಅವಾಚ್ಯ ಪದಗಳಿಂದ ಬೈಯ್ಯುವ ಸನ್ನಿವೇಶಗಳಿವೆ. ಇದರಿಂದ ಶಿವಣ್ಣ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದೀಗ ಹುಚ್ಚ ವೆಂಕಟ್ ಕೂಡಾ ರೊಚ್ಚಿಗೆದ್ದಿದ್ದಾರೆ. ಇದನ್ನೂ ಓದಿ: ಪೊಗದಸ್ತಾದ ಟಗರು!

    ವಿಲನ್‍ಗಳು ಶಿವಣ್ಣನಿಗೆ ಹೇಳಿದ ಡೈಲಾಗ್ ಕೇಳಿ ಹುಚ್ಚ ವೆಂಕಟ್ ನಿರ್ದೇಶಕ ಸೂರಿ ಅವರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ಶಿವಣ್ಣನಿಗೆ ಉಪಯೋಗಿಸಿದ ಅವಾಚ್ಯ ಪದಗಳನ್ನು ಮ್ಯೂಟ್ ಮಾಡಬೇಕು. ಇಲ್ಲದಿದ್ದರೆ ನನ್ನ ಹುಡುಗರು ನಿನ್ನನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಪೊಗದಸ್ತಾದ ಟಗರು ನೋಡಿ ಜಬರ್ದಸ್ತಾದ ಹೇರ್ ಕಟ್ ಮಾಡಿಸ್ಕೊಂಡ ಅಭಿಮಾನಿ

    ಈ ಡೈಲಾಗ್‍ಗಳನ್ನು ನೀನು ಕೂಡಲೇ ಮ್ಯೂಟ್ ಮಾಡದಿದ್ದರೆ ಮುಂದಾಗುವ ಪರಿಣಾಮಗಳಿಗೆ ನಾನು ಜವಾಬ್ದಾರನಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಶಿವರಾಜ್‍ಕುಮಾರ್ ಎಂದರೆ ನನಗೆ ಇಷ್ಟ. ಇಷ್ಟಪಡುವವರಿಗೆ ಪ್ರಾಣ ಬೇಕಾದ್ರೂ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಟಗರು ನಿರ್ದೇಶಕ ಸೂರಿ ವಿರುದ್ಧ ಶಿವರಾಜ್ ಕುಮಾರ್ ಅಭಿಮಾನಿಗಳು ಗರಂ

    https://www.youtube.com/watch?v=p6H6cBKSaPQ

  • ಟಗರು ನಿರ್ದೇಶಕ ಸೂರಿ ವಿರುದ್ಧ ಶಿವರಾಜ್ ಕುಮಾರ್ ಅಭಿಮಾನಿಗಳು ಗರಂ

    ಟಗರು ನಿರ್ದೇಶಕ ಸೂರಿ ವಿರುದ್ಧ ಶಿವರಾಜ್ ಕುಮಾರ್ ಅಭಿಮಾನಿಗಳು ಗರಂ

    ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ `ಟಗರು’ ಚಿತ್ರ ಶುಕ್ರವಾರವಷ್ಟೇ ತೆರೆಕಂಡು ಪ್ರದರ್ಶನ ಕಾಣುತ್ತಿದ್ದರೆ, ಇತ್ತ ಚಿತ್ರದ ನಿರ್ದೇಶಕರ ವಿರುದ್ಧ ಶಿವಣ್ಣ ಅಭಿಮಾನಿಗಳು ಗರಂ ಆಗಿದ್ದಾರೆ.

    ಈ ಬಗ್ಗೆ ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಸೇನಾ ಸಮಿತಿಯಿಂದ ಸುದ್ದಿಗೋಷ್ಠಿ ನಡೆಸಿ, ಸಿನಿಮಾದಲ್ಲಿ ವಿಲನ್ ಗಳು ನಾಯಕ ನಟ ಶಿವಣ್ಣನಿಗೆ ಅವಾಚ್ಯ ಪದಗಳಿಂದ ಬೈಯ್ಯುವ ಸನ್ನಿವೇಶಗಳಿವೆ. ಈ ಕಾರಣಕ್ಕೆ ಶಿವಣ್ಣ ಅಭಿಮಾನಿಗಳು ಸೂರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೊಗದಸ್ತಾದ ಟಗರು ನೋಡಿ ಜಬರ್ದಸ್ತಾದ ಹೇರ್ ಕಟ್ ಮಾಡಿಸ್ಕೊಂಡ ಅಭಿಮಾನಿ

    ಟಗರು ಚಲನಚಿತ್ರದ ನಿರ್ದೇಶಕ ಸೂರಿಯವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೋರಬೇಕಾಗಿ ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಸೇನಾ ಸಮಿಯ ಅಧ್ಯಕ್ಷ ಹೆಚ್ ಎಸ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪೊಗದಸ್ತಾದ ಟಗರು!

    ಕ್ಷಮೆ ಕೇಳದೇ ಹೋದ ಪಕ್ಷದಲ್ಲಿ ಸೂರಿಯವರ ಮುಖಕ್ಕೆ ಮಸಿ ಬಳಿದು, ಅವರು ನಿರ್ದೇಶಿಸಿರುವ ಎಲ್ಲಾ ಚಿತ್ರಗಳನ್ನು ಬಹಿಷ್ಕರಿಸಲು ಕನ್ನಡ ಚಲಚನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟಿಸುತ್ತೇವೆ. ಸೂರಿಯವರನ್ನು ನಿರ್ದೇಶಕ ಸ್ಥಾನದಿಂದ ವಜಾ ಮಾಡುವವರೆಗೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

    ಈ ಕುರಿತು ಭಾನುವಾರ ಸಂತೋಷ್ ಥಿಯೇಟರ್ ನಲ್ಲಿ ನಟ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಬುದ್ಧಿ ಹೇಳಿದ್ರು. ನಾನ್ ವಿಲನ್ ಗಳಿಗೆ ಬೈದಾಗ ನೀವುಗಳು ಸಿಳ್ಳೆ ಚಪ್ಪಾಳೆ ಹೊಡಿತೀರಾ. ಅದೇ ನನಗೆ ವಿಲನ್ ಗೆ ಬೈದಾಗ ಯಾಕೆ ಸಹಿಸಲ್ಲ ಅಂತ ಪ್ರಶ್ನಿಸಿದ್ದರು.

    ಇದಕ್ಕೂ ಮುಂಚೆ `ಕಡ್ಡಿಪುಡಿ’ ಚಲನಚಿತ್ರದಲ್ಲಿ ಶಿವರಾಜ್ ಕುಮಾರ್ ಅವರನ್ನು ಅವಮಾನಕರ ರೀತಿಯಲ್ಲಿ ನಡೆಸಿಕೊಂಡು ಚಿತ್ರವನ್ನು ಮಾಡಿರುವುದು ಡಾ. ರಾಜ್ ಕುಮಾರ್ ಸೇನಾ ಸಮಿತಿಯು ಪ್ರತಿಭಟನೆ ಮಾಡಿತ್ತು.

    ಟಗರು ಚಿತ್ರದಲ್ಲಿ ಪೊಲೀಸ್ ಪಾತ್ರ ಸೇರಿದಂತೆ ಹಲವಾರು ಗೆಟಪ್‍ಗಳಲ್ಲಿ ಶಿವಣ್ಣ ಮಿಂಚಿದ್ದರೆ, ಖಳನಾಯಕರ ಪಾತ್ರದಲ್ಲಿ ಧನಂಜಯ್ ಮತ್ತು ವಶಿಷ್ಠ ಸಿಂಹ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಭಾವನಾ ಮೆನನ್ ಮತ್ತು ಮಾನ್ವಿತಾ ಹರೀಶ್ ನಾಯಕಿಯರಾಗಿ ಅಭಿನಯಿಸಿದ್ದಾರೆ.

  • ಇಂದು ಸಪ್ತಪದಿ ತುಳಿಯಲಿರೋ ‘ರಾಜಕುಮಾರ’ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್

    ಇಂದು ಸಪ್ತಪದಿ ತುಳಿಯಲಿರೋ ‘ರಾಜಕುಮಾರ’ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್

    ಬೆಂಗಳೂರು: ‘ರಾಜಕುಮಾರ’ ಚಿತ್ರ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ಗೃಹಸ್ಥಾಶ್ರಮಕ್ಕೆ ಕಾಲಿಡುತ್ತಿದ್ದಾರೆ. ಬೆಂಗಳೂರಿನ ಜೆ.ಪಿ ನಗರದ ಸಿಂಧೂರಿ ಕನ್ವೆಂಷನ್ ಸೆಂಟರ್ ನಲ್ಲಿ ಆರತಕ್ಷತೆ ನಡೆದಿದೆ.

    ಇಂದು ಬೆಳಗ್ಗೆ ಅದೇ ಹಾಲ್ ನಲ್ಲಿ ಮದುವೆ ಶಾಸ್ತ್ರಗಳು ನಡೆಯಲಿದೆ. ಬೆಳಗ್ಗೆ 11.30 ರ ಶುಭ ಮುಹೂರ್ತದಲ್ಲಿ ಬಳ್ಳಾರಿ ಮೂಲದ ಸುರಭಿ ಹತ್ವಾರ್ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಮಂಗಳವಾರ ಅದ್ಧೂರಿಯಾಗಿ ನಡೆದ ಆರತಕ್ಷತೆ ಸಮಾರಂಭಕ್ಕೆ ಕನ್ನಡ ಚಿತ್ರೋದ್ಯಮದ ಅನೇಕ ಗಣ್ಯರು ಆಗಮಿಸಿದ್ದರು.

    ಸಂಜೆ 7 ಗಂಟೆಯಿಂದ 10 ಗಂಟೆ ವರೆಗೆ ನಡೆದ ಆರತಕ್ಷತೆ ಸಮಾರಂಭದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ದಂಪತಿ, ಪುನೀತ್ ರಾಜ್‍ಕುಮಾರ್ ದಂಪತಿ, ಅನಂತ್ ನಾಗ್ ದಂಪತಿ, ರಮೇಶ್ ಅರವಿಂದ್, ಪ್ರೇಮ್, ರಾಘವೇಂದ್ರ ರಾಜ್‍ಕುಮಾರ್ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಅನೇಕರು ಆಗಮಿಸಿ ನೂತನ ವಧು-ವರರಿಗೆ ಶುಭಾಶಯ ಕೋರಿದರು.

    ಸ್ಯಾಂಡಲ್ ವುಡ್ ನಲ್ಲಿ “ಮಿಸ್ಟರ್ ಆ್ಯಂಡ್ ಮಿಸಸ್ ರಾಮಚಾರಿ” ಚಿತ್ರದ ಮೂಲಕ ನಿರ್ದೇಶನಕ್ಕೆ ಎಂಟ್ರಿ ಕೊಟ್ಟ ಸಂತೋಷ್ ಆನಂದ್ ರಾಮ್ ಅವರ ಮೊದಲ ಚಿತ್ರವೇ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಎರಡನೇ ಚಿತ್ರ “ರಾಜಕುಮಾರ” ಕೂಡ ಅದ್ಧೂರಿ ಹಿಟ್ ಚಿತ್ರ.

    ಇದೀಗ ಮದುವೆ ಬಳಿಕ ಸಂತೋಷ್ ಆನಂದ್ ರಾಮ್ ಪುನೀತ್ ರಾಜ್‍ಕುಮಾರ್ ಗೆ ಮತ್ತೊಂದು ಚಿತ್ರ ನಿರ್ದೇಶನ ಮಾಡಲಿದ್ದಾರೆ. ಇಂದಿನ ಮದುವೆ ಶಾಸ್ತ್ರದಲ್ಲೂ ಅನೇಕ ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ.

  • ಬಿಗ್ ಬಾಸ್ ಹಣದಲ್ಲಿ ದಿವಾಕರ್ ಗೂ ಕೊಡ್ಬೇಕಿತ್ತು ಅಂದವ್ರಿಗೆ ಚಂದನ್ ನೀಡಿದ ಚೆಂದದ ಉತ್ತರ!

    ಬಿಗ್ ಬಾಸ್ ಹಣದಲ್ಲಿ ದಿವಾಕರ್ ಗೂ ಕೊಡ್ಬೇಕಿತ್ತು ಅಂದವ್ರಿಗೆ ಚಂದನ್ ನೀಡಿದ ಚೆಂದದ ಉತ್ತರ!

    ಬೆಂಗಳೂರು: ಬಿಗ್‍ಬಾಸ್ ಸೀಸನ್ ಐದರ ಆಟ ಮುಗಿದಿದೆ. ಈ ಕಾರ್ಯಕ್ರಮದಲ್ಲಿ ತಮ್ಮ ಸ್ನೇಹದಿಂದ ಚಂದನ್ ಶಟ್ಟಿ ಹಾಗೂ ದಿವಾಕರ್ ಕರುನಾಡ ಜನತೆಯ ಮನ ಗೆದ್ದಿದ್ದಾರೆ. ಬಿಗ್ ಬಾಸ್ ಚಂದನ್ ಗೆದಿದ್ದಕ್ಕೆ ಕೆಲವರು ಸಂತೋಷಪಟ್ಟರೆ, ಇನ್ನೂ ಕೆಲವರು ಸಾಮಾಜಿಕ ಜಾಲತಣದಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನೀನ್ ಗೆಲ್ಲಬೇಕು. ಗೆದ್ದ ಹಣವನ್ನು ನನ್ನ ಜೀವನದಲ್ಲಿ ನಾನು ಹೇಗೋ ಸಂಪಾದನೆ ಮಾಡುತ್ತೇನೆ ಎಂದು ಚಂದನ್ ಬಿಗ್ ಬಾಸ್ ಮನೆಯಲ್ಲಿ ದಿವಾಕರ್‍ಗೆ ಹೇಳಿದ್ದರು. ಈಗ ಚಂದನ್ ಶೆಟ್ಟಿ ಬಿಗ್ ಬಾಸ್ ಪಟ್ಟ ಪಡೆದು 50 ಲಕ್ಷ ರೂ. ತಮ್ಮದಾಗಿಸಿಕೊಂಡಿದ್ದಾರೆ. ಆದರೆ ಗೆದ್ದ ಹಣದಲ್ಲಿ ಚಂದನ್ ದಿವಾಕರ್‍ಗೂ ಸ್ವಲ್ಪ ಕೋಡಬೇಕಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ಹೇಳುತ್ತಿದ್ದಾರೆ.

    ಈಗ ಈ ವಿಷಯದ ಬಗ್ಗೆ ಚಂದನ್ ಶೆಟ್ಟಿ ಪ್ರತಿಕ್ರಿಯಿಸಿ, ಗೆದ್ದ ಹಣದಲ್ಲೇ ದಿವಾಕರ್‍ಗೆ ಸಹಾಯ ಮಾಡಬೇಕು ಎಂದೇನಿಲ್ಲ. ನಾನು ದಿವಾಕರ್ ಗೆ ಕೊಡಬೇಕಾಗಿರುವುದು ತುಂಬಾ ಇದೆ. ಬೇರೆ ರೀತಿಯಲ್ಲೂ ನಾನು ದಿವಾಕರ್ ಗೆ ಸಹಾಯ ಮಾಡಬಹುದು. ಸಹಾಯ ಮಾಡುತ್ತೀನಿ ಎಂದು ಚಂದನ್ ಶೆಟ್ಟಿ ಖಡಕ್ ಉತ್ತರ ನೀಡಿದ್ದಾರೆ.

    ನಾನು ಈ ಮೊದಲು ಕೆಲ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದು, ಈಗ ನನ್ನ ಗೆಳೆಯ ದಿವಾಕರ್ ನಟಿಸುವ ಸಿನಿಮಾಕ್ಕೆ ಸಂಗೀತ ನಿರ್ದೇಶನ ಮಾಡುತ್ತೇನೆ. ನನ್ನ ಕಲ್ಪನೆಯ ದಿವಾಕರ್ ನನ್ನು ಇಟ್ಟುಕೊಂಡು ‘ದಿವಾಕರ್- ದಿ ಸೇಲ್ಸ್ ಮ್ಯಾನ್’ ಎಂದು ಒಂದು ಕಥೆ ಮಾಡಿದ್ದೇನೆ. ಅದನ್ನು ನಾನೇ ನಿರ್ದೇಶನ ಮಾಡುತ್ತೇನೆ ಎಂದು ಚಂದನ್ ಶೆಟ್ಟಿ ತಿಳಿಸಿದ್ದಾರೆ.

    ಚಂದನ್ ಶೆಟ್ಟಿ ನಿರ್ದೇಶಕನಾಗಬೇಕೆಂದು ಸ್ಯಾಂಡಲ್ ವುಡ್ ಗೆ ಬಂದಿದ್ದರು. ಆದರೆ ಡೈರೆಕ್ಟ್ ಆಗಿ ಡೈರೆಕ್ಟರ್ ಕ್ಯಾಪ್ ಹಾಕಿಕೊಳ್ಳಲು ಗಾಂಧಿನಗರದಲ್ಲಿ ಸಾಧ್ಯವಿರದ ಕಾರಣ ಟ್ರ್ಯಾಕ್ ಸಿಂಗರ್, ಲಿರಿಕ್ ರೈಟರ್, ರ‍್ಯಾಪ್ ಸಿಂಗಿಂಗ್ ಕಮ್ ಡೈರೆಕ್ಷನ್ ಮತ್ತು ಸಂಗೀತ ಸಂಯೋಜಕರಾಗಿ ಕೆಲಸ ಮಾಡಿದರು. ಆಲ್ಬಂ ಸಾಂಗ್‍ಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್ ಹುಟ್ಟು ಹಾಕಿದರು.

     

  • ನಟ, ನಿರ್ದೇಶಕ ಕಾಶಿನಾಥ್ ನಡೆದುಬಂದ ಹಾದಿ

    ನಟ, ನಿರ್ದೇಶಕ ಕಾಶಿನಾಥ್ ನಡೆದುಬಂದ ಹಾದಿ

    ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅತ್ಯುತ್ತಮ ನಟ, ನಿರ್ದೇಶಕರಲ್ಲಿ ಕಾಶಿನಾಥ್ ಕೂಡ ಒಬ್ಬರು. ಡಬಲ್ ಮಿನಿಂಗ್ ಡೈಲಾಗ್‍ನಿಂದಲೇ ಫೇಮಸ್ ಆದ ಇವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯುವಪ್ರತಿಭೆಗಳಗೆ ಅವಕಾಶ ನೀಡಿದ್ದಾರೆ.

    ಕಾಶಿನಾಥ್ ಅವರು ವಿಜಯಾ ಕಾಲೇಜಿನಲ್ಲಿ ತಮ್ಮ ವ್ಯಾಸಾಂಗವನ್ನು ಮುಗಿಸಿದ್ರು. ನಂತರ ಅಸಿಮಾ ಎಂಬ ಫಿಲ್ಮಂ ಸೆಂಟರ್ ಗೆ ಸೇರಿಕೊಂಡರು. 1975ರಲ್ಲಿ ಕಾಶಿನಾಥ್ ಅವರು ಅಪರೂಪದ ಅಥಿತಿಗಳು ಚಿತ್ರವನ್ನು ನಿರ್ದೇಶನ ಮಾಡುವ ಮೂಲಕ ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಟ್ಟರು. ನಂತರ 1978ರಲ್ಲಿ ಸಸ್ಪೆನ್ಸ್ ಥ್ರೀಲ್ಲರ್ ಆದ ಅಪರಿಚಿತ ಚಿತ್ರವನ್ನು ನಿರ್ದೇಶನ ಮಾಡಿದ್ದು, ಆ ಚಿತ್ರ ಯಶಸ್ವಿಯಾಯ್ತು. ಆ ಚಿತ್ರವನ್ನು ಬೀ-ಶೇಕ್ ಎಂದು ಹೆಸರಿಟ್ಟು ಹಿಂದಿಯಲ್ಲಿ ಕೂಡ ನಿರ್ದೇಶನ ಮಾಡಿದ್ದರು.

    ಅಪರಿಚಿತ ಚಿತ್ರದ ನಂತರ ಕಾಶಿನಾಥ್ ಅವರು 16 ಸಿನಿಮಾಗಳನ್ನ ಒಟ್ಟಿಗೆ ನಿರ್ದೇಶಿಸಿದ್ದು, ಆ ಚಿತ್ರಗಳೆಲ್ಲಾ ಸಾಕಷ್ಟು ಹಿಟ್ ಆಗಿದ್ದವು. 1984ರಲ್ಲಿ ಮೊದಲ ಬಾರಿಗೆ ಕಾಶಿನಾಥ್ ಅವರು ಅನುಭವ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದರು. ಅವರಿಗೆ ಅಭಿನಯ ಹಾಗೂ ಉಮಾಶ್ರೀ ನಾಯಕಿಯರಾಗಿ ಸಾಥ್ ನೀಡಿದ್ದರು. ಅನುಭವ ಚಿತ್ರ ಕನ್ನಡದಲ್ಲಿ ಯಶಸ್ವಿ ಆಗುತ್ತಿದ್ದಂತೆ ಆ ಚಿತ್ರವನ್ನು ಹಿಂದಿಯಲ್ಲಿ ಅನುಭವ್ ಎಂಬ ಹೆಸರಲ್ಲಿ ನಿರ್ದೇಶನ ಮಾಡಿದ್ದರು. 2 ಹಿಂದಿ ಸಿನಿಮಾ ನಿರ್ದೇಶನ ಮಾಡಿದ್ದಾರೆ.

    1988ರಲ್ಲಿ ಅವಳೇ ನನ್ನ ಹೆಂಡ್ತಿ ಚಿತ್ರದಲ್ಲಿ ಟಾಪ್ ನಟಿ ಭವ್ಯ ಹಾಗೂ ತಾರಾ ಜೊತೆ ನಟಿಸಿದ್ದರು. ನಂತರ 1988ರಲ್ಲಿ ಅವನೇ ನನ್ನ ಗಂಡ, ಮನ್ಮಥ ರಾಜ ಹಾಗೂ 1990ರಲ್ಲಿ ಚಪಲ ಚನ್ನಿಗರಾಯ ಎಂಬ ಹಾಸ್ಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. 1993ಯಲ್ಲಿ ಸೂಪರ್ ಸ್ಟಾರ್ ಉಪೇಂದ್ರ ಅವರು ನಿರ್ದೇಶನ ಮಾಡಿದ್ದ ಶ್…! ಹಾಗೂ ಹಲೋ ಯಮ ಚಿತ್ರದಲ್ಲಿ ಕಾಶಿನಾಥ್ ನಟಿಸಿದ್ದರು.

    ಕಾಶಿನಾಥ್ ಅವರು ತಮ್ಮ ಸಿನಿಮಾ ಜೀವನದಲ್ಲಿ 40ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಉಪೇಂದ್ರ, ವಿ. ಮನೋಹರ್, ಸುನೀಲ್ ಕುಮಾರ್ ದೇಸಾಯಿರಂತಹ ಪ್ರತಿಭೆಗಳಿಗೆ ಸ್ಯಾಂಡಲ್‍ವುಡ್ ನಲ್ಲಿ ಅವಕಾಶ ನೀಡಿದ್ದಾರೆ. ಫೆಬ್ರವರಿ 3, 2017ರಲ್ಲಿ ತೆರೆಕಂಡ ಚೌಕ ಚಿತ್ರದಲ್ಲಿ ಕಾಶಿನಾಥ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದರು. ಇದು ಅವರ ಕೊನೆಯ ಚಿತ್ರ.