Tag: director

  • ಮಂಜುನಾಥ್‌ರಂತಹ ಅಳಿಯ ಸಿಕ್ಕಿದ್ದು ನನ್ನ ಪುಣ್ಯ: ಹೆಚ್‌.ಡಿ ದೇವೇಗೌಡ

    ಮಂಜುನಾಥ್‌ರಂತಹ ಅಳಿಯ ಸಿಕ್ಕಿದ್ದು ನನ್ನ ಪುಣ್ಯ: ಹೆಚ್‌.ಡಿ ದೇವೇಗೌಡ

    ಬೆಂಗಳೂರು: ಜಯದೇವ (Jayadeva Hospital) ನಿರ್ದೇಶಕ ಡಾ. ಮಂಜುನಾಥ್‌ (Dr. Manjunath) ಅವರ ಸೇವಾವಧಿ ಬುಧವಾರಕ್ಕೆ ಮುಕ್ತಾಯಗೊಳ್ಳಲಿದೆ. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಮಂಜುನಾಥ್‌ ಅವರ ಬಗ್ಗೆ ಮಾತನಾಡುತ್ತಾ ಇಂತಹ ಅಳಿಯ ಸಿಕ್ಕಿದ್ದು ನನ್ನ ಪುಣ್ಯ ಎಂದು ಹೇಳಿದ್ದಾರೆ.

    ಈ ಸಂಸ್ಥೆಗೆ ಪ್ರಥಮ ಬುನಾದಿ ಹಾಕಿದವರು ಡಾಕ್ಟರ್ ಚೆನ್ನಯ್ಯ. ಅವರಿಗೂ ಮಂಜುನಾಥ್ ಕಂಡರೆ ತುಂಬಾ ಪ್ರೀತಿ. ನೀವು ಹೊರದೇಶಕ್ಕೆ ಹೋಗಿ ಕೋಟ್ಯಂತರ ರೂಪಾಯಿ ದುಡಿಯಬಹುದು. ಆದರೆ ಇಲ್ಲಿಯ ಜನರ ಕಷ್ಟ ಕೇಳಿದಷ್ಟು ತೃಪ್ತಿ ಸಿಗುವುದಿಲ್ಲ ಎಂದರು.

    ನಾನು ಮತ್ತು ನನ್ನ ಶ್ರೀಮತಿ 15 ವರ್ಷ ಮಗಳು ಅನುಸೂಯ ಮನೆಯಲ್ಲಿಯೇ ಇದ್ದೆವು. ಅದು ನನ್ನ ಜೀವನದ ಸೌಭಾಗ್ಯ ಅಂತ ಹೇಳುತ್ತೇನೆ. ಇವತ್ತು ಹೆಮ್ಮೆ ಇದೆ ನನಗೆ, ಇಡೀ ರಾಷ್ಟ್ರದಲ್ಲಿ ಎರಡು ಸಾವಿರ ಬೆಡ್ ಆಸ್ಪತ್ರೆ ಬಹುಶಃ ಇಲ್ಲ ಅಂತ ನನ್ನ ಭಾವನೆ. ಸಚಿವ ಸುಧಾಕರ್ ಬಂದು ಇಲ್ಲಿ ಭಾಗವಹಿಸಿದ್ದು ಸಂತೋಷ. ಈ ಸಂಸ್ಥೆ ಆಗಿನ ದಿನಗಳನ್ನು ನೀವು ಸಹ ನೋಡಿದ್ದೀರಿ ಎಂದು ಹೇಳಿದರು. ಇದನ್ನೂ ಓದಿ: ಜ.31 ರಂದು ಜಯದೇವ ಆಸ್ಪತ್ರೆಯ ಡಾ.ಮಂಜುನಾಥ್ ನಿವೃತ್ತಿ – ಹೇಗಿತ್ತು 16 ವರ್ಷಗಳ ಜರ್ನಿ?

    ನನ್ನ ಮಗ ನನ್ನ ಮಗಳ ಸೌಭಾಗ್ಯ ಅಂತ ಭಾವಿಸುತ್ತೇನೆ. ಮಂಜುನಾಥ್ ಅಂತಹ ಒಬ್ಬ ಶ್ರೇಷ್ಠ ವ್ಯಕ್ತಿ ಕೈ ಹಿಡಿದಿರುವುದು ನನ್ನ ಮಗಳ ಪುಣ್ಯ. ಅಂದು ನಾನು, ಬಡವರಿಗೆ ಸಹಾಯ ಮಾಡಬೇಕು ಅಂದರೆ ಇಲ್ಲೇ ಇರಬೇಕು ಅಂತ ಹೇಳಿದ್ದೆ. ಅದನ್ನು ಮಂಜುನಾಥ್ ಪುರಸ್ಕಾರ ಮಾಡಿದರು. ನಾನು ಎಲ್ಲೂ ಹೋಗಲ್ಲ, ಇಲ್ಲೇ ಇರುತ್ತೇನೆ ಎಂದು ಮಾತು ಕೊಟ್ಟಿದ್ದರು ಎಂದು ಹೆಚ್‌ಡಿಡಿ (HD Devegowda) ತಿಳಿಸಿದರು.

    ಯಾವ ಶ್ರೀಗಳು ಬೇಕಾಗಿಲ್ಲ: ಮಂಜುನಾಥ್ ಅವರಿಗೆ ಪದ್ಮಶ್ರೀ ಅಥವಾ ಯಾವ ಶ್ರೀಗಳು ಬೇಕಾಗಿಲ್ಲ. ಅಂತಹ ಬಿರುದುಗಳಿಗಿಂತಲೂ ಜನತೆ ಪ್ರೀತಿ ದೊಡ್ಡದು ಅಂತ ಹೇಳಿದ್ರು. ಇವತ್ತು ಈ ಸಂಸ್ಥೆಯಲ್ಲಿ ಎಲ್ಲ ಸಿಬ್ಬಂದಿ ಕುಟುಂಬ ಎನ್ನುವ ರೀತಿ ನಡೆಸಿಕೊಂಡು ಬಂದಿದ್ದಾರೆ. ಯಾರೊಬ್ಬರ ಮನಸ್ಸನ್ನು ಕೂಡ ನೋಯಿಸದೆ ಇರೋದು ಎಲ್ಲಾ ನನಗೆ ಗೊತ್ತಿದೆ. ಇದಕ್ಕೆ ನನ್ನ ಮಗಳ ದೈವ ಭಕ್ತಿ ಸಹ ಕಾರಣ ಎಂದರು.

    ಇಂದು ಈ ಕಾರ್ಯಕ್ರಮ ಅದ್ಬುತವಾಗಿ ನಡೆದಿದೆ. ಇಷ್ಟು ವರ್ಷ ಕೆಲಸ ಮಾಡಿದ ಅವರು ಇನ್ನೂ ಇರಬೇಕು ಎಂಬ ನಿರೀಕ್ಷೆ ಸಹಜ. ನೀವು ಬಿಟ್ಟು ಹೋದ ಮೇಲೆ ಏನು ಎಂಬ ಬಗ್ಗೆಯೂ ಯೋಚನೆ ಮಾಡಿ ಅಂತ ಹೇಳಿದ್ದೆ. ಮುಂದೆ ಬರುವ ಹೊಸ ನಿರ್ದೇಶಕರಿಗೆ ಆ ಶಕ್ತಿ ಸಿಗಲಿ ಅಂತ ಪ್ರಾರ್ಥನೆ ಮಾಡುತ್ತೇನೆ.
    ದೇಶ-ವಿದೇಶಗಳಿಂದ ಬಂದ ಜನರಿಗೆ ಉಚಿತ ಚಿಕಿತ್ಸೆ ನೀಡಿದ್ದನ್ನು ಸ್ಮರಿಸಿಕೊಳ್ಳುತ್ತೇನೆ. ಮಂಜುನಾಥ್ ಅವರಿಗೆ ಉತ್ತಮ ಆರೋಗ್ಯ ಸಿಗಲಿ ಪ್ರಾರ್ಥನೆ ಮಾಡುತ್ತೇನೆ. ನನಗೆ ಈಗ 91 ವರ್ಷ ಇಂತಹ ಸಂದರ್ಭಕ್ಕಿಂತ ಇನ್ನೇನು ಖುಷಿ ಬೇಕು ನನಗೆ. ಇದಕ್ಕಿಂತ ಹೆಮ್ಮೆ ನನಗೆ ಏನೂ ಬೇಕಾಗಿಲ್ಲ ಎಂದು ಹೆಚ್‌ಡಿಡಿ ಹೇಳಿದರು.

  • ನಿರ್ದೇಶನದ ಜೊತೆಗೆ ನಟನೆಗೂ ಸೈ ಎಂದ ಸತ್ಯಪ್ರಕಾಶ್

    ನಿರ್ದೇಶನದ ಜೊತೆಗೆ ನಟನೆಗೂ ಸೈ ಎಂದ ಸತ್ಯಪ್ರಕಾಶ್

    ತ್ತೀಚಿನ ದಿನಗಳಲ್ಲಿ ಹಲವು ನಿರ್ದೇಶಕರು ತಮ್ಮ ವಿಭಿನ್ನ ರೀತಿಯ ಕಥೆಯನ್ನು ತೆರೆ ಮೇಲೆ ತರಲು ತಾವೇ ನಟನೆಗಿಳಿಯುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಡಿ ಸತ್ಯಪ್ರಕಾಶ್‌ (Satya Prakash). ರಾಮಾ ರಾಮಾ ರೇ (Rama Rama Re) ಮತ್ತು ಒಂದಲ್ಲಾಎರಡಲ್ಲಾ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಿರ್ದೇಶಕ ಎಂದು ಹೆಸರು ಮಾಡಿದ್ದ ಇವರು ತಮ್ಮ ಮೊದಲೆರೆಡು ಸಿನಿಮಾಗಳಿಗೆ ಚಿತ್ರಗಳಿಗೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ಪಡೆದವರು. ಕೆಲ ದಿನಗಳ ಹಿಂದೆಯಷ್ಟೇ ಇವರ ನಿರ್ದೇಶನಲ್ಲಿ (Director) ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಎಂಬ ಸಿನಿಮಾ ಮೂಡಿ ಬಂದಿತ್ತು. ನಿರ್ದೇಶನದ ಜತೆಗೆ ತಮ್ಮದೇ ಬ್ಯಾನರ್ ನಲ್ಲಿ ನಿರ್ಮಾಣವನ್ನು ಸಹ ಮಾಡುವ ಸತ್ಯ ಸಿನಿಮಾಗಳ ವಿತರಣೆಯನ್ನು ಸಹ ಕಳೆದ ಒಂದೂವರೆ  ವರ್ಷಗಳಿಂದ ಮಾಡುತ್ತಿದ್ದಾರೆ.

    ಈಗಾಗಲೇ 35ಕ್ಕೂ ಹೆಚ್ಚಿನ ಸಿನಿಮಾಗಳನ್ನು ಸತ್ಯ ಸಿನಿ‌ ಡಿಸ್ಟ್ರಿಬ್ಯೂಟರ್ಸ್ ವತಿಯಿಂದ ವಿತರಿಸಿದ್ದಾರೆ.  ಈಗ ಅವರು ತಮ್ಮ ಮುಂದಿನ ಸಿನಿಮಾವನ್ನು ನಿರ್ದೇಶನ ಮಾಡಲು ಸಜ್ಜಾಗಿದ್ದು, ಈ ಚಿತ್ರದಲ್ಲಿ ತಾವು ಸಹ ಒಂದ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ.

    ಕೊಂಚ ಫ್ಯಾಂಟಸಿ ಮತ್ತು ಕಮರ್ಷಿಯಲ್‌ ಎಲಿಮೆಂಟ್‌ಗಳಿರುವ ಈ ಹೊಸ ಸಿನಿಮಾದಲ್ಲಿ ಫ್ರೆಶ್‌ ಆಗಿರುವ ನಕ್ಕು ನಗಿಸುವಂತಹ ಕಥೆಯನ್ನು ಸಿನಿಮಾದಲ್ಲಿ ಸತ್ಯಪ್ರಕಾಶ್‌ ಹೇಳಲಿದ್ದಾರೆ. ಈ ಚಿತ್ರದಲ್ಲಿ ಸತ್ಯಪ್ರಕಾಶ್‌ ಜತೆಗೆ ಅಥರ್ವ ಪ್ರಕಾಶ್ ಎಂಬ ಯುವಕ ಕೂಡಾ ನಟಿಸುತ್ತಿದ್ದಾರೆ. ಸತ್ಯಪ್ರಕಾಶ್‌ ಅವರೇ ನಿರ್ದೇಶನ ಮಾಡಿದ್ದ ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಸಿನಿಮಾದಲ್ಲಿ ಅಥರ್ವ ಪ್ರಕಾಶ್   ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸಿ ಗಮನ ಸೆಳೆದಿದ್ದರು.  ವಿಶೇಷ ಎಂದರೆ ಈ ಸಿನಿಮಾದಲ್ಲಿ ಸತ್ಯಪ್ರಕಾಶ್‌ ನಿರ್ದೇಶನ, ಮತ್ತು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವುದರ ಜತಗೆ ನಿರ್ಮಾಣವನ್ನು ಸಹ ತಮ್ಮ ಸತ್ಯಪಿಕ್ಚರ್ಸ್‌ ಬ್ಯಾನರ್‌ನಲ್ಲಿ ಮಾಡುತ್ತಿದ್ದಾರೆ.

    ಸದ್ಯಕ್ಕೆ ಸಿನಿಮಾ ಅನೌನ್ಸ್‌ಮೆಂಟ್‌ ಮಾತ್ರ ಈಗ ಮಾಡಿದ್ದು,   ಸತ್ಯಪ್ರಕಾಶ್‌ ಅವರ ಹಿಂದಿನ ಸಿನಿಮಾಗಳಲ್ಲಿ ಕೆಲಸ ಮಾಡಿದ ತಂತ್ರಜ್ಞರ ತಂಡ ಈ ಚಿತ್ರದಲ್ಲಿಯೂ ಮುಂದುವರೆಯಲಿದೆ. ಸ್ಯಾಂಡಲ್‌ವುಡ್‌ನ ಪ್ರಮುಖ ಕಲಾವಿದರು  ಈ ಸಿನಿಮಾದ ಭಾಗವಾಗಲಿದ್ದಾರೆ. ಸದ್ಯಕ್ಕೆ ಸಿನಿಮಾಗೆ ಇನ್ನೂ ಟೈಟಲ್‌ ಇಟ್ಟಿಲ್ಲ, ಸದ್ಯದಲ್ಲೇ ಸಣ್ಣ ಟೀಸರ್‌ ಮೂಲಕ ಟೈಟಲ್‌ ಅನ್ನುಅನೌನ್ಸ್‌ ಮಾಡಲಿದ್ದಾರಂತೆ. ಇನ್ನೊಂದು ವಿಶೇಷ ಎಂದರೆ ಸತ್ಯಪ್ರಕಾಶ್‌ ಕಥೆ ಬರೆದಿರುವ ‘ಕಾಲಾ ಪತ್ಥರ್‌’ ಮತ್ತು ‘ಅನ್ಲಾಕ್‌ ರಾಘವ’ ಇದೇ ವರ್ಷ ಬಿಡುಗಡೆಯಾಗಲಿದೆ. ಈ ಎರಡೂ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಒಂದು ನಿರೀಕ್ಷೆ ಇದೆ.

     

    ‘ಈಗ ಮಾಡಲು ಹೊರಟಿರುವ ಕಥೆಯನ್ನು ನಾನೇ ಬರೆದಿದ್ದೇನೆ. ಈ ಚಿತ್ರದಲ್ಲಿಎರಡು ಪ್ರಮುಖ ಪಾತ್ರಗಳು ಬರಲಿದ್ದು, ಒಂದನ್ನು ನಾನು ನಿರ್ವಹಿಸುತ್ತಿದ್ದೇನೆ. ಪಾತ್ರಕ್ಕೆ ನಾನು ಸೂಕ್ತವಾಗಿ ಹೊಂದಿಕೆಯಾಗುತ್ತೇನೆ ಎಂದು ಅನಿಸಿ ಮೇಲೆ ನಟನಾಗಲು ನಿರ್ಧರಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೇನೆ. ಪ್ರೇಕ್ಷಕರನ್ನು ನಕ್ಕು ನಗಿಸುತ್ತಾ ಒಂದು ಭಾವನಾತ್ಮಕ ಕಥೆಯನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನವಾಗಲಿದೆ. ’ಎನ್ನುವುದು ಸತ್ಯಪ್ರಕಾಶ್‌ ಮಾತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊನೆಗೂ ಕ್ಯಾಮೆರಾ ಕಣ್ಣಿಗೆ ಸಿಕ್ಕ ‘Bigg Boss Kannada’ ಶೋ ಡೈರೆಕ್ಟರ್

    ಕೊನೆಗೂ ಕ್ಯಾಮೆರಾ ಕಣ್ಣಿಗೆ ಸಿಕ್ಕ ‘Bigg Boss Kannada’ ಶೋ ಡೈರೆಕ್ಟರ್

    ನ್ನಡದ ಬಿಗ್ ಬಾಸ್ ಶೋ (Bigg Boss Kannada) ನಿರ್ದೇಶಕರು ಈ ಬಾರಿ ಬದಲಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಈ ಶೋವನ್ನು ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಆಗಿದ್ದ ಪರಮೇಶ್ ಗುಂಡ್ಕಲ್ ಅವರೇ ನಿರ್ದೇಶನ ಮಾಡುತ್ತಿದ್ದರು. ಪ್ರೊಮೋದಿಂದ ಹಿಡಿದು, ಅಲ್ಲಿ ನಡೆಯುವ ಟಾಸ್ಕ್ ತನಕವೂ ಅವರ ನಿರ್ದೇಶನದಲ್ಲೇ (Director) ತಯಾರಾಗುತ್ತಿದ್ದವು. ಈ ಬಾರಿ ಆ ಎಲ್ಲ ಜವಾಬ್ದಾರಿಯನ್ನು ಬೇರೆಯವರು ವಯಿಸಿಕೊಂಡಿದ್ದಾರೆ.

    ಪರಮೇಶ್ ಗುಂಡ್ಕಲ್ ಅವರು ಜಿಯೋ ಸಿನಿಮಾದ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಸ್ಥಾನವನ್ನು ಪ್ರಶಾಂತ್ ನಾಯಕ್ ವಹಿಸಿಕೊಂಡಿದ್ದಾರೆ. ಆದರೆ, ಬಿಗ್ ಬಾಸ್ ಸೀಸನ್ 10 ಅನ್ನು ಪ್ರಕಾಶ್ (Prakash) ಎನ್ನುವವರು ನಿರ್ದೇಶನ ಮಾಡಲಿದ್ದಾರೆ. ಕಲರ್ಸ್ ವಾಹಿನಿಯ ಅನೇಕ ರಿಯಾಲಿಟಿ ಶೋಗಳಿಗೆ ಇವರೇ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ.

    ಕಲರ್ಸ್ ವಾಹಿನಿಯಲ್ಲಿ ಮೂಡಿ ಬರುತ್ತಿರುವ ರಾಜಾ ರಾಣಿ, ನಮ್ಮಮ್ಮ ಸೂಪರ್ ಸ್ಟಾರ್ ಸೇರಿದಂತೆ ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ನಿರ್ದೇಶನ ಮಾಡಿರುವ ಪ್ರಕಾಶ್, ಈ ಬಾರಿ ಬಿಗ್ ಬಾಸ್ ಶೋ ನಿರ್ದೇಶನ ಮಾಡಲು ಸರ್ವ ಸಿದ್ಧತೆ ಮಾಡಿಕೊಂಡಿದ್ದಾರೆ. ಈವರೆಗೂ ಬಿಗ್ ಬಾಸ್ ಪ್ರೊಮೋಗಳೆಲ್ಲ ಇವರ ನಿರ್ದೇಶನದಲ್ಲೇ ಮೂಡಿ ಬಂದಿವೆ.

    ಈ ಬಾರಿಯ ಬಿಗ್ ಬಾಸ್ ಹತ್ತು ಹಲವು ಕಾರಣಗಳಿಂದಾಗಿ ವಿಶೇಷ ಅನಿಸಿದೆ. ಕಾರ್ಯಕ್ರಮವು ಹೇಗೆ ವಿಭಿನ್ನವಾಗಿ ರೂಪಿತವಾಗುತ್ತಿದೆಯೋ, ಹಾಗೆಯೇ ಬಿಗ್ ಬಾಸ್ ಮನೆ ಕೂಡ ಹೊಸ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಹಲವು ವರ್ಷಗಳ ಕಾಲ ಬಿಗ್ ಬಾಸ್ ಮನೆಯನ್ನು ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ನಿರ್ಮಾಣವಾಗುತ್ತಿತ್ತು. ವರ್ಷದಿಂದ ವರ್ಷಕ್ಕೆ ಸಣ್ಣ ಮಟ್ಟದಲ್ಲಿ ಬದಲಾವಣೆ ಮಾಡಿಕೊಂಡು ಕಾರ್ಯಕ್ರಮವನ್ನು ನಡೆಸಲಾಗುತ್ತಿತ್ತು. ಈ ವರ್ಷ ಎಲ್ಲವೂ ಬದಲಾಗಿದೆ.

     

    ಈ ಬಾರಿ ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಬಿಗ್ ಬಾಸ್ ನಡೆಯುತ್ತಿಲ್ಲ. ಬದಲಾಗಿ ಬೆಂಗಳೂರಿನ ದೊಡ್ಡ ಆಲದ ಮರದ ಬಳಿ ಮನೆಯನ್ನು ಹೊಸದಾಗಿ ನಿರ್ಮಾಣ ಮಾಡಲಾಗಿದೆ. ಇದು ಭಾರತದಲ್ಲೇ ಅತೀ ದೊಡ್ಡ ಬಿಗ್ ಬಾಸ್ ಮನೆ ಎಂಬ ಖ್ಯಾತಿಗೆ ಪಾತ್ರವಾಗಲಿದೆ. ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪ್ರಶಾಂತ್ ನಾಯಕ್ ಈ ವಿಷಯದ ಕುರಿತು ಮಾತನಾಡಿ, ವಿಸ್ತೀರ್ಣದ ವಿಷಯದಲ್ಲಿ ಇದು ದೊಡ್ಡ ಮನೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅದ್ದೂರಿಯಾಗಿ ನಡೆಯಿತು ಪವನ್ ಒಡೆಯರ್ ಮಗಳ ನಾಮಕರಣ

    ಅದ್ದೂರಿಯಾಗಿ ನಡೆಯಿತು ಪವನ್ ಒಡೆಯರ್ ಮಗಳ ನಾಮಕರಣ

    ಸ್ಯಾಂಡಲ್‌ವುಡ್ (Sandalwood) ಡೈರೆಕ್ಟರ್ ಪವನ್ ಒಡೆಯರ್ (Pavan Wadeyar) ದಂಪತಿ ತಮ್ಮ ಮುದ್ದಾದ ಮಗಳಿಗೆ ಚೆಂದದ ಹೆಸರಿಟ್ಟಿದ್ದಾರೆ. ಇತ್ತೀಚೆಗಷ್ಟೇ 2ನೇ ಮಗುವನ್ನ ಪವನ್- ಅಪೇಕ್ಷಾ ಜೋಡಿ ಬರಮಾಡಿಕೊಂಡರು. ಈಗ ಅದ್ದೂರಿಯಾಗಿ ಮಗಳ ನಾಮಕರಣ ಮಾಡಿದ್ದಾರೆ.

    ಗೂಗ್ಲಿ (Googly Film) ನಿರ್ದೇಶಕ ಪವನ್ ಒಡೆಯರ್ (Pavan Wadeyar) ಮತ್ತು ಅಪೇಕ್ಷಾ ಜೋಡಿ (Apeksha Purohit) ತಮ್ಮ ಮುದ್ದು ಮಗಳಿಗೆ ಯಾದ್ವಿ (Yadvi) ಎಂದು ಹೆಸರಿಟ್ಟಿದ್ದಾರೆ. ನಾಮಕರಣದ ಚೆಂದದ ವಿಡಿಯೋವೊಂದನ್ನ ಸೋಶಿಯಲ್ ಮೀಡಿಯಾದಲ್ಲಿ ಪವನ್ ದಂಪತಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:104 ದಿನಗಳಲ್ಲಿ ರೆಡಿಯಾಯ್ತು ಪರಿಣಿತಿ ಮದುವೆಗೆ ಧರಿಸಿದ ದುಬಾರಿ ಲೆಹೆಂಗಾ

    ಇವಳೇ ನಮ್ಮ ಜೀವನದ ಹೊಸ ಪ್ರೀತಿ, ರಾಜಕುಮಾರಿ ಮತ್ತು ಶೌರ್ಯನ ತಂಗಿ. ನಾವು ಇವಳನ್ನು ಯಾದ್ವಿ ಒಡೆಯರ್ ಎಂದು ಕರೆಯುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪವನ್ ಪತ್ನಿ ಅಪೇಕ್ಷಾ ಪುರೋಹಿತ್ ಬರೆದುಕೊಂಡಿದ್ದಾರೆ. ಈ ಸಮಾರಂಭದಲ್ಲಿ ‘ಗಾಳಿಪಟ’ ನಟಿ ಭಾವನಾ ರಾವ್‌ (Bhavana Rao) ಸೇರಿದಂತೆ ಚಿತ್ರರಂಗದ ಅನೇಕ ನಟ-ನಟಿಯರು ಭಾಗಿಯಾಗಿದ್ದಾರೆ.

    ಅಂದ್ಹಾಗೆ, 2018ರಲ್ಲಿ ಅಪೇಕ್ಷಾ ಪುರೋಹಿತ್- ಪವನ್ ಒಡೆಯರ್ ಮದುವೆಯಾದರು. ದಂಪತಿಗೆ ಈಗಾಗಲೇ ಶೌರ್ಯ ಎಂಬ ಮಗನಿದ್ದಾನೆ. ಕಳೆದ ಜುಲೈ ತಿಂಗಳಿನಲ್ಲಿ ಹೆಣ್ಣು ಮಗುವಿಗೆ ಅಪೇಕ್ಷಾ ಜನ್ಮ ನೀಡಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಜಯ್ ದೇವರಕೊಂಡ ಚಿತ್ರದ ನಿರ್ದೇಶಕನ ಮೇಲೆ ಕಾಸ್ಟಿಂಗ್ ಕೌಚ್ ಆರೋಪ

    ವಿಜಯ್ ದೇವರಕೊಂಡ ಚಿತ್ರದ ನಿರ್ದೇಶಕನ ಮೇಲೆ ಕಾಸ್ಟಿಂಗ್ ಕೌಚ್ ಆರೋಪ

    ಕ್ಷಿಣ ಸಿನಿಮಾ ರಂಗದ ಖ್ಯಾತ ನಟ ವಿಜಯ್ ದೇವರಕೊಂಡ (Vijay Devarakonda) ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕನ (Director) ಮೇಲೆ ಗುರುತರ ಆರೋಪ ಮಾಡಿದ್ದಾರೆ ನಟಿ ಶಾಲೂ ಶಾಮು (Shalu Shamu). ತನಗಾದ ಕಹಿ ಘಟನೆಯನ್ನು ಆಕೆ ಖಾಸಗಿ ಚಾನೆಲ್ ಜೊತೆ ಹಂಚಿಕೊಂಡಿದ್ದಾರೆ. ಅದನ್ನು ನೆನಪಿಸಿಕೊಂಡರೆ ಈಗಲೂ ಮೈ ನಡುಗುತ್ತದೆ ಎಂದು ಅವರು ಹೇಳಿದ್ದಾರೆ.

    ಕಾಸ್ಟಿಂಗ್ ಕೌಚ್ (Casting Couch) ಕುರಿತಾಗಿ ಒಬ್ಬೊಬ್ಬರೇ ನಟಿಯರು ಬಾಯ್ಬಿಡುತ್ತಿದ್ದಾರೆ. ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಅವರು ಸಾರ್ವಜನಿಕವಾಗಿ ಹೇಳಿಕೊಳ್ಳುತ್ತಿದ್ದಾರೆ. ಈ ಮೂಲಕ ಸಿನಿಮಾ ರಂಗದ ಮತ್ತೊಂದು ಕರಾಳ ಮುಖವನ್ನು ಅವರು ಅನಾವರಣಗೊಳಿಸುತ್ತಿದ್ದಾರೆ. ಇದೀಗ ಶಾಲೂ ಶಾಮು ಕೂಡ ತನಗಾದ ಅನುಭವನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ಗೆ ಸಾಯಿ ಪಲ್ಲವಿ- ಸ್ಟಾರ್‌ ನಟನ ಪುತ್ರನಿಗೆ ‘ಫಿದಾ’ ಬ್ಯೂಟಿ ನಾಯಕಿ

    ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಶಾಲೂ, ‘ವಿಜಯ್ ದೇವರಕೊಂಡ ಅವರ ಸಿನಿಮಾವನ್ನು ಮಾಡಿದ್ದ ನಿರ್ದೇಶಕರು ನನಗೆ ಆಹ್ವಾನ ನೀಡಿದ್ದರು. ಅಲ್ಲಿಗೆ ಹೋದ ಅದು ಅವರದ್ದೇ ಮನೆ ಅಂತ ಗೊತ್ತಾಯಿತು. ಮನೆಯಲ್ಲಿ ಯಾರೂ ಇರಲಿಲ್ಲ. ಎಲ್ಲಿಗೆ ಹೋಗಿದ್ದಾರೆ ಎಂದೆ. ವಿದೇಶಕ್ಕೆ ಹೋಗಿದ್ದಾರೆ ಎಂದು ಹೇಳಿದರು. ನಂತರ ಜ್ಯೂಸ್ ಕೊಟ್ಟರು. ಪಾತ್ರದ ಬಗ್ಗೆ ಮಾತನಾಡುವುದಕ್ಕಿಂತ ಬೇರೆಯದ್ದೇ ಮಾತನಾಡುವುದಕ್ಕೆ ಶುರು ಮಾಡಿದರು. ನನಗೆ ಗಾಬರಿ ಆಯಿತು. ನೇರವಾಗಿ ಆಮೇಲೆ ಬೆಡ್ ರೂಮ್‍ ಗೆ ಕರೆದ. ಅವನ ಉದ್ದೇಶ ಗೊತ್ತಾಗಿ ಅಲ್ಲಿಂದ ಎದ್ದು ಬಂದೆ’ ಎಂದು ಅವರು ಹೇಳಿಕೊಂಡಿದ್ದಾರೆ.

    ತಾವಿದ್ದ ಸ್ಥಳಕ್ಕೆ ನಿರ್ದೇಶಕ ಕರೆದಾಗ, ಅವನು ತನ್ನ ಮನೆಗೆ ಕರೆಯುತ್ತಾನೆ ಎಂದು ಗೊತ್ತಿರಲಿಲ್ಲ. ಸೀರೆ ಧರಿಸಿಕೊಂಡು ಬರುವಂತೆ ಹೇಳಿದ್ದ. ಒಳ್ಳೆಯ ಪಾತ್ರವಿರಬಹುದು ಎಂದು ನಾನು ಅಲ್ಲಿಗೆ ಹೋಗಿದ್ದೆ ಎಂದು ಅವರು ಹೇಳಿಕೊಂಡಿದ್ದಾರೆ. ಆದರೆ, ಆ ನಿರ್ದೇಶಕ ಯಾರು ಎನ್ನುವುದನ್ನು ಶಾಲೂ ಹೇಳಿಕೊಂಡಿಲ್ಲ. ಅವನ ಹೆಸರು ಬೇಡ ಎಂದು ಮಾತು ಮುಂದುವರೆಸುತ್ತಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೀರಿಯಲ್ ನಿರ್ದೇಶನದತ್ತ ‌’ಚಮಕ್‌’ ಡೈರೆಕ್ಟರ್ ಸಿಂಪಲ್ ಸುನಿ

    ಸೀರಿಯಲ್ ನಿರ್ದೇಶನದತ್ತ ‌’ಚಮಕ್‌’ ಡೈರೆಕ್ಟರ್ ಸಿಂಪಲ್ ಸುನಿ

    ಮಕ್, ಅವತಾರ ಪುರುಷ (Avatara Purusha)  ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ನಿರ್ದೇಶಕ ಸಿಂಪಲ್ ಸುನಿ (Simple Suni) ಸೀರಿಯಲ್ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಶಾಂಭವಿ (Shambhavi) ಎಂಬ ಸೀರಿಯಲ್ ಮೂಲಕ ಕಿರುತೆರೆ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

    ಶಾಂಭವಿ ಮುದ್ದಾದ 6 ವರ್ಷದ ಮಗು. ಇವಳ ಅಮ್ಮ ಶಿವಗಾಮಿ ಸಾವಿರಾರು ಕೋಟಿ ಆಸ್ತಿಯ ಒಡತಿ. ಶ್ರೀ ಶಾಂಭವಿ ಶಿಕ್ಷಣ ಸಂಸ್ಥೆ ಜೊತೆ ಇನ್ನೂ ಹಲವು ಉದ್ಯಮಗಳಿವೆ. ಇವಳಿಗೊಬ್ಬ ಅಣ್ಣ ಹರಿಪ್ರಸಾದ್. ಅಣ್ಣ ತಂಗಿಗೆ ಅವರಿಬ್ಬರೇ ಪ್ರಪಂಚವಾಗಿರುತ್ತಾರೆ. ಇದನ್ನೂ ಓದಿ:Jawan ರಿಲೀಸ್ ದಿನವೇ ಬರುತ್ತಿದೆ ಕನ್ನಡತಿ ಅನುಷ್ಕಾ ಶೆಟ್ಟಿ ಸಿನಿಮಾ

    ನಾಯಕ ಅಶೋಕ ಅವರ ಸಂಸ್ಥೆಯಲ್ಲಿ ಶಿಕ್ಷಕನಾಗಿ ಸೇರುವುದರೊಂದಿಗೆ ಕಥೆ ತಿರುವು ಪಡೆದುಕೊಳ್ಳುತ್ತದೆ. ಅಶೋಕನ ಮನೆಯವರು ದುಡ್ಡಿಗಾಗಿ ಹಪಹಪಿಸುವ ಮಂದಿಯಾಗಿದ್ದು,  ಅವನ ಅಮ್ಮ ಮತ್ತು ತಮ್ಮಂದಿರು ತುಂಬಾ ಖತರ್ನಾಕ್ ಆಗಿರುತ್ತಾರೆ. ಈ ಮೂಲಕ ದೇವರಾಗಿ ದೆವ್ವವಾಗಿ ಕಾಡುವ ಮಗುವಿನ ಕಥೆಯನ್ನ ಸಿಂಪಲ್ ಸುನಿ ತೋರಿಸಲು ಹೊರಟಿದ್ದಾರೆ. ಸದ್ಯದಲ್ಲೇ ಈ ಸೀರಿಯಲ್‌, ಟಿವಿ ಪರದೆಯಲ್ಲಿ  ಮೂಡಿ ಬರಲಿದೆ.

    ಶಾಂಭವಿ ಸೀರಿಯಲ್‌ನಲ್ಲಿ ಐಶ್ವರ್ಯಾ ಸಿಂಧೋಗಿ (Aishwarya Shindogi), ವಿನಯ್ ಗೌಡ (Vinay Gowda) ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶಾಂಭವಿ ಆಗಿ ಬಾಲನಟಿ ರಚನಾ ಜೀವ ತುಂಬಿದ್ದಾರೆ. ಈ ಸೀರಿಯಲ್ ಜೊತೆಗೆ ಒಂದು ಸರಳ ಪ್ರೇಮ ಕಥೆ, ಅವತಾರ ಪುರುಷ 2, ಗತವೈಭವ ಸಿನಿಮಾಗಳು ಸಿಂಪಲ್ ಸುನಿ ಕೈಯಲ್ಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅವಕಾಶದ ಆಸೆ ತೋರಿಸಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಹೆಸರಾಂತ ಡೈರೆಕ್ಟರ್ ಬಂಧನ

    ಅವಕಾಶದ ಆಸೆ ತೋರಿಸಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಹೆಸರಾಂತ ಡೈರೆಕ್ಟರ್ ಬಂಧನ

    ನಾಯಕಿ ಆಗಬೇಕು ಎಂದು ಕನಸ್ಹೊತ್ತು ಚಿತ್ರೋದ್ಯಮಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ  ಲೈಂಗಿಕ ದೌರ್ಜನ್ಯ (Sexual Assault) ಎಸೆಗಿದ್ದಾರೆ ಎನ್ನುವ ಕಾರಣಕ್ಕಾಗಿ ಮಲಯಾಳಂ (Malayalam) ಸಿನಿಮಾ ರಂಗದ ಹೆಸರಾಂತ ನಿರ್ದೇಶಕ (Director) ಜಾಸಿಕ್ ಅಲಿ (Jasik Ali) ಅನ್ನು ಕೊಯಿಲಾಂಡಿ ಪೊಲೀಸ್ ರು ಬಂಧಿಸಿದ್ದಾರೆ. ಅವಕಾಶ ಕೊಡಿಸುವುದಾಗಿ ನಂಬಿಸಿ ಜಾಸಿಕ್ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಆರೋಪಿಸಲಾಗಿದೆ.

    ಜಾಸಿಕ್ ಅಲಿ ಮೇಲೆ ಪೋಕ್ಸೋ ಆರೋಪದಡಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಅವರು ನಾಪತ್ತೆಯಾಗಿದ್ದರು. ಕೊಯಿಲಾಂಡಿ ಪೊಲೀಸ್ ಠಾಣಾಧಿಕಾರಿ ಎಂ.ಬಿ. ಬಿಜು ಮತ್ತು ಅವರ ತಂಡ ಜಾಸಿಕ್ ಬಂಧಿಸಲು ಬಲೆ ಬೀಸಿದ್ದರು. ಕೊನೆಗೂ ನಡಕ್ಕಾವುವಿನಲ್ಲಿರುವ ಮನೆಯಲ್ಲಿ ಜಾಸಿಕ್ ನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

     

    ಸಂತೃಸ್ತೆ ನೀಡಿರುವ ದೂರಿನಲ್ಲಿ ಜಾಸಿಕ್ ತನಗೆ ಅವಕಾಶ ಕೊಡಿಸುವ ಆಮಿಷ ತೋರಿಸಿ, ಹಲವು ಸ್ಥಳಗಳಿಗೆ ತನ್ನನ್ನು ಕರೆದುಕೊಂಡು ಹೋಗಿದ್ದು, ಅಲ್ಲಿ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಆರೋಪ ಮಾಡಿದ್ದಾಳೆ. ಬಾಲಕಿಯ ಕುಟುಂಬ ಪೊಲೀಸ್ ಠಾಣೆ ಮೆಟ್ಟಿಲು ಏರುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಪೊಲೀಸ್ ಅಧಿಕಾರಿ ಜಾಸಿಕ್ ನನ್ನು ಹುಡುಕಿ ನ್ಯಾಯಾಲಯದ ಮುಂದೆ ನಿಲ್ಲಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಖ್ಯಾತ ನಿರ್ದೇಶಕ ಸಿದ್ದಿಕಿಗೆ ಹೃದಯಾಘಾತ, ಆರೋಗ್ಯ ಸ್ಥಿತಿ ಗಂಭೀರ

    ಖ್ಯಾತ ನಿರ್ದೇಶಕ ಸಿದ್ದಿಕಿಗೆ ಹೃದಯಾಘಾತ, ಆರೋಗ್ಯ ಸ್ಥಿತಿ ಗಂಭೀರ

    ಟ ವಿಜಯ ರಾಘವೇಂದ್ರ ಪತ್ನಿ, ನಿರ್ಮಾಪಕಿ ಸ್ಪಂದನಾ ಹೃದಯಾಘಾತದಿಂದ ನಿಧನ ಹೊಂದಿರುವ ಸುದ್ದಿ ಸ್ಯಾಂಡಲ್ ವುಡ್ ಗೆ ಶಾಕ್ ನೀಡಿದೆ. ಈ ರೀತಿಯ ಹೃದಯಾಘಾತಗಳು ಯಾಕೆ ಆಗುತ್ತಿವೆ ಎನ್ನುವ ಚರ್ಚೆ ಕೂಡ ನಡೆದಿದೆ. ಈ ಮಧ್ಯ ಮಲಯಾಳಂ ಸಿನಿಮಾ ರಂಗದಲ್ಲೂ ಆತಂಕ ಮನೆಮಾಡಿದೆ. ಮಲಯಾಳಂ (Malayalam) ಸಿನಿಮಾ ರಂಗದ ಖ್ಯಾತ ನಿರ್ದೇಶಕ (Director) ಸಿದ್ದಿಕಿ (Siddiqui) ಅವರಿಗೆ ತೀವ್ರ ಹೃದಯಾಘಾತವಾಗಿದ್ದು(Heart attack), ಸ್ಥಿತಿ ಚಿಂತಾಜನಕ ಎನ್ನುವ ಮಾಹಿತಿ ಹೊರ ಬಿದ್ದಿದೆ.

    ಸೋಮವಾರ ಸಂಜೆ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಕ್ಸ್ ಟ್ರಾಕಾರ್ಪೋರಿಯಲ್ ಮೆಂಬರೇನ್ ಆಕ್ಸಿಜನೇಷನ್ (ಇಸಿಎಂಒ) ಬೆಂಬಲದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಇದೆ. 24 ಗಂಟೆ ಅವರ ಆರೋಗ್ಯದ ಬಗ್ಗೆ ನಿಗಾ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಸ್ಪಂದನಾರನ್ನ ನೋಡಬೇಕು ಎಂದು ಕಣ್ಣೀರಿಟ್ಟಿದ್ದರು ಚಿನ್ನಾರಿಮುತ್ತ ವಿಜಯ್

    ಸಿದ್ದಿಕಿ ನ್ಯುಮೋನಿಯಾ ಮತ್ತು ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು ಮತ್ತು ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಆಪ್ತ ಮೂಲಗಳು ದೃಢಪಡಿಸಿವೆ. ತೆಲುಗು, ಮಲಯಾಳಂ, ಹಿಂದಿ ಚಿತ್ರೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಿದ್ದಿಕಿ, ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರ ಬಾಡಿಗಾರ್ಡ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದರು.

     

    ಕಾಬುಲಿವಾಲಾ, ಗಾಡ್ ಫಾದರ್, ರಾಮ್‍ ಜಿ ರಾವ್ ಸ್ಪೀಕಿಂಗ್, ಫ್ರೆಂಡ್ಸ್, ಹಿಟ್ಲರ್ ಸೇರಿದಂತೆ ಸಾಕಷ್ಟು ಸಿನಿಮಾಗಳಿಗೆ ಸಿದ್ದಿಕಿ ಆಕ್ಷನ್ ಕಟ್ ಹೇಳಿದ್ದಾರೆ. ಸಿದ್ದಿಕಿ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಯಕಿ ಪ್ರಧಾನ ಸಿನಿಮಾಗೆ ಸ್ಕ್ರಿಪ್ಟ್ ರೆಡಿ ಮಾಡಿದ ನಿರ್ದೇಶಕ ವಿಜಯ್ ಪ್ರಸಾದ್

    ನಾಯಕಿ ಪ್ರಧಾನ ಸಿನಿಮಾಗೆ ಸ್ಕ್ರಿಪ್ಟ್ ರೆಡಿ ಮಾಡಿದ ನಿರ್ದೇಶಕ ವಿಜಯ್ ಪ್ರಸಾದ್

    ನ್ನಡದ ಪ್ರತಿಭಾವಂತ ನಿರ್ದೇಶಕ (Director) ವಿಜಯ್ ಪ್ರಸಾದ್ (Vijay Prasad) ‘ಪೆಟ್ರೊಮ್ಯಾಕ್ಸ್’ ಸಿನಿಮಾ ನಂತರ ಮತ್ತೊಂದು  ಸ್ಕ್ರಿಪ್ಟ್ ರೆಡಿ ಮಾಡಿಕೊಂಡಿದ್ದಾರೆ. ಈ ಬಾರಿ ಅವರು ಮಹಿಳಾ ಪ್ರಧಾನ (Female lead) ಸಿನಿಮಾವನ್ನು ಮಾಡಲಿದ್ದಾರೆ. ವಿಜಯ್ ಪ್ರಸಾದ್ ನಿರ್ದೇಶನದ ಬಹುತೇಕ ಸಿನಿಮಾಗಳಲ್ಲಿ ನಾಯಕನಷ್ಟೇ ನಾಯಕಿಗೂ ಪ್ರಧಾನ್ಯತೆ ಇದ್ದರೂ, ಈ ಸಿನಿಮಾ ನಾಯಕಿಗೆ ಮತ್ತಷ್ಟು ಜವಾಬ್ದಾರಿ ನೀಡಲಿದೆಯಂತೆ.

    ಹೊಸ ಸಿನಿಮಾದ (New Movie) ಕುರಿತಾಗಿ ತಮ್ಮ ಬೇಸರವನ್ನು ಹೊರ ಹಾಕಿರುವ ಅವರು, ‘ಮೂರು ಚಿತ್ರ ನಿರ್ಮಾಣ ಸಂಸ್ಥೆಗಳೊಂದಿಗೆ ಮಾತುಕತೆ ಮುಗಿಸಿದೆ (ಹೆಸರು ಬೇಡ). ಯಾರೊಬ್ಬರೂ ಕಥೆ ಕೇಳಲಿಲ್ಲ. ಕೇಳಿದ್ದು ಎರಡೇ, ಒಂದು ಡಬ್ಬಲ್ ಮೀನಿಂಗ್ ಡೈಲಾಗ್, ಇನ್ನೊಂದು ಅವರೇ ನಾಯಕ ಆಗಬಹುದೇ ಎಂದು. ಆದರೆ, ಈ ಬಾರಿ ನನ್ನ ಪ್ರಯಾಣವೇ ಬೇರೆ. ಕಾರಣ ನಾಯಕಿಯೇ ಚಿತ್ರದ ಜೀವಾಳ. ಹಿಂದಿನ ನಿರಾಸೆಗೆ ಕ್ಷಮೆ ಇರಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಅಪ್ಪ- ಅಮ್ಮನ ಕ್ಯೂಟ್ ಲವ್‌ ಸ್ಟೋರಿ ಹಂಚಿಕೊಂಡು ಮದುವೆ ವಾರ್ಷಿಕೋತ್ಸವಕ್ಕೆ ರಾಧಿಕಾ ವಿಶ್‌ ‌

    ವಿಜಯ್ ಪ್ರಸಾದ್ ನಿರ್ದೇಶನದ ತೋತಾಪುರಿ 2 ಸಿನಿಮಾ ರಿಲೀಸ್ ಗೆ ರೆಡಿಯಿದೆ. ಪರಿಮಳ ಲಾಡ್ಜ್ ಹೆಸರಿನ ಸಿನಿಮಾವನ್ನೂ ಅವರು ಘೋಷಣೆ ಮಾಡಿದ್ದರು. ಪರಿಮಳ ಲಾಡ್ಜ್ ಗಿಂತ ಮುಂಚೆ ಈ ಹೊಸ ಸಿನಿಮಾ ಸೆಟ್ಟೇರಲಿದೆಯಂತೆ. ಅಗಸ್ಟ್ ನಿಂದ ಶೂಟಿಂಗ್ ಮಾಡುವ ಪ್ಲ್ಯಾನ್ ಕೂಡ ಮಾಡಿಕೊಂಡಿದ್ದಾರೆ.

    ನಾಯಕಿ ಪ್ರಧಾನ ಸಿನಿಮಾವಾಗಿದ್ದರಿಂದ ಹೊಸ ನಾಯಕಿಯೊಂದಿಗೆ ಸಿನಿಮಾ ಶುರು ಮಾಡುತ್ತಾರಾ ಅಥವಾ ಹೆಸರಾಂತ ನಟಿಯೊಂದಿಗೆ ಸಿನಿಮಾ ಮಾಡುತ್ತಾರಾ ಎನ್ನುವ ಕುರಿತು ಅವರು ಏನೂ ಹೇಳಿಲ್ಲ. ನಿರ್ಮಾಪಕರು ಸಿಕ್ಕ ನಂತರ ಬಹುಶಃ ಎಲ್ಲದಕ್ಕೂ ಸ್ಪಷ್ಟತೆ ಸಿಗಬಹುದು.

  • ವಿಧಾನಸಭೆ ಚುನಾವಣೆ 2023: ಬೈಂದೂರಿನ ಕೆರಾಡಿಯಲ್ಲಿ ನಟ ರಿಷಬ್ ಶೆಟ್ಟಿ ಮತದಾನ

    ವಿಧಾನಸಭೆ ಚುನಾವಣೆ 2023: ಬೈಂದೂರಿನ ಕೆರಾಡಿಯಲ್ಲಿ ನಟ ರಿಷಬ್ ಶೆಟ್ಟಿ ಮತದಾನ

    ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ (Rishabh Shetty) ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಬಂದಿದ್ದ ರಿಷಬ್ ಶೆಟ್ಟಿ ಮತದಾನ (Voting) ಮಾಡುವ ಮೂಲಕ ಮಾದರಿಯಾಗಿದ್ದಾರೆ.

    ಕಾಂತಾರ-2 ಸ್ಕ್ರಿಪ್ಟ್ ವರ್ಕ್ ನಲ್ಲಿ ಬ್ಯುಸಿಯಾಗಿರುವ ರಿಷಬ್ ಶೆಟ್ಟಿ, ಮತದಾನಕ್ಕೋಸ್ಕರ ಬಿಡುವು ಮಾಡಿಕೊಂಡು ಮನೆಗೆ ಆಗಮಿಸಿದ್ದರು. ಬೆಳಗ್ಗೆ 11 ಗಂಟೆಗೆ ಮತಗಟ್ಟೆಗೆ ಆಗಮಿಸಿದ ರಿಷಬ್ ಸಾರ್ವಜನಿಕರ ಜೊತೆ ಸರದಿ ಸಾಲಿನಲ್ಲಿ ನಿಂತರು. ಸುಮಾರು 20 ನಿಮಿಷಗಳ ಕಾಲ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದರು. ಮತಗಟ್ಟೆ ಸಮೀಪ ಇದ್ದ ರಿಷಬ್ ಅಭಿಮಾನಿಗಳು ಸೆಲ್ಫಿ ತೆಗೆದುಕೊಂಡರು.

    ಬೆಳಗ್ಗೆ 7 ಗಂಟೆಯಿಂದಲೇ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದ್ದು, ದಿನದ ಮೊದಲರ್ಧದಲ್ಲೇ ಸ್ಯಾಂಡಲ್ ವುಡ್ (Sandalwood) ನ ಬಹುತೇಕ ನಟ (Actor) -ನಟಿಯರು (Actress) ಹಾಗೂ ತಂತ್ರಜ್ಞರು ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ತಮ್ಮ ಹಕ್ಕನ್ನು ಚಲಾಯಿಸುವುದರ ಜೊತೆಗೆ ಅಭಿಮಾನಿಗಳಿಗೆ ಸಂದೇಶವನ್ನೂ ಸಾರಿದ್ದಾರೆ.

    ನಟ ಯಶ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರೆ, ಸುದೀಪ್ ಪುಟ್ಟೇನಹಳ್ಳಿ, ಶಿವರಾಜ್ ಕುಮಾರ್ ಬ್ಯಾಟರಾಯನ ಪುರ (ರಾಚೇನಹಳ್ಳಿ), ರವಿಚಂದ್ರನ್ ರಾಜಾಜಿನಗರ, ಉಪೇಂದ್ರ ಕತ್ರಿಗುಪ್ಪೆ, ಧ್ರುವ ಸರ್ಜಾ ತ್ಯಾಗರಾಜನಗರ(ಶಾಸ್ರ್ತಿ ನಗರ), ರಾಘವೇಂದ್ರ ರಾಜ್ ಕುಮಾರ್  ಸದಾಶಿವನಗರ, ಅಶ್ವಿನಿ ಪುನೀತ್ ರಾಜ್ ಕುಮಾರ್ ಸದಾಶಿವನಗರ, ರಾಧಿಕ ಪಂಡಿತ್ ದೇವಯ್ಯ ಪಾರ್ಕ್, ಸುಧಾರಾಣಿ ಮಲ್ಲೇಶ್ವರಂ, ರಕ್ಷಿತಾ ಪ್ರೇಮ್ ಚಂದ್ರ ಲೇಔಟ್ ಪ್ರೇಮ್ ಚಂದ್ರ ಲೇಔಟ್ ನಲ್ಲಿ ತಮ್ಮ ಮತದಾನ ಮಾಡಿದ್ದಾರೆ.

    ಅಮೂಲ್ಯ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ನೆನಪಿರಲಿ ಪ್ರೇಮ್ ಆರ್ ಆರ್ ನಗರ,  ರಚಿತಾ ರಾಮ್ ಆರ್ ಆರ್ ನಗರ, ಮೇಘನಾ ಸರ್ಜಾ ಜೆಪಿ ನಗರ, ತಾರಾ ಜೆ ಪಿ ನಗರ, ದ್ವಾರಕೀಶ್ ಬೊಮ್ಮನಹಳ್ಳಿ, ಸೃಜನ್ ಲೋಕೇಶ್  ಕತ್ರಿಗುಪ್ಪೆ, ಅಜಯ್ ರಾವ್ ರಾಜಾಜಿನಗರ, ಬಿ.ಸರೋಜದೇವಿ ಮಲ್ಲೇಶ್ವರಂ, ಹರ್ಷಿಕಾ ಪೂಣಚ್ಚ ಕೆ ಆರ್ ಪುರ, ಪೂಜಾ ಗಾಂಧಿ  ಕತ್ರಿಗುಪ್ಪೆ, ಯೋಗರಾಜ್ ಭಟ್ ಗಿರಿ ನಗರ, ಅನಂತ್ ನಾಗ್  ಮಲ್ಲೇಶ್ವರಂ ಮತ ಕೇಂದ್ರಗಳಲ್ಲಿ ತಮ್ಮ ಮತದಾನ ಮಾಡಿದ್ದಾರೆ.

    ಚಂದನ್ ಶೆಟ್ಟಿ ನಾಗರಭಾವಿಯಲ್ಲಿ ಮತದಾನ ಮಾಡಿದರೆ, ಕಾರುಣ್ಯ ರಾಮ್ ಆರ್ ಆರ್ ನಗರ, ಅವಿನಾಶ್  ಆರ್ ಆರ್ ನಗರ, ಜಗ್ಗೇಶ್ ಮಲ್ಲೇಶ್ವರಂ, ಶರಣ್ ಹೊಸಕೆರೆಹಳ್ಳಿ, ದುನಿಯಾ ವಿಜಯ್ ಕತ್ತಿಗುಪ್ಪೆ,  ಸಾಧು ಕೋಕಿಲ ನಾಗರಭಾವಿ, ಅರ್ಜುನ್ ಜನ್ಯ ಹೆಬ್ಬಾಳ, ಶ್ರೀಮುರುಳಿ ವಸಂತನಗರ, ವಿಜಯ್ ರಾಘವೇಂದ್ರ ಯಲಹಂಕ, ಸಪ್ತಮಿಗೌಡ ಜೆ ಪಿ ನಗರ, ರಮೇಶ್ ಅರವಿಂದ್ ಪದ್ಮನಾಭ ನಗರ, ಮಾಲಾಶ್ರೀ ಶಿವಾಜಿನಗರದಲ್ಲಿ ಮತ ಚಲಾವಣೆ ಮಾಡಿದ್ದಾರೆ.

    ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ಶ್ರುತಿ ಹೊಸಕೆರೆ ಹಳ್ಳಿ,  ಭಾರತಿ ಜಯನಗರ, ಅನಿರುದ್ದ್ ಜಯನಗರ, ಅಭಿಷೇಕ್ ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಜೆ ಪಿ ನಗರ, ಪ್ರಶಾಂತ್ ನೀಲ್ ವಸಂತನಗರದಲ್ಲಿ ತಮ್ಮ ಮತದಾನದ ಹಕ್ಕುಗಳನ್ನು ಚಲಾಯಿಸಿದ್ದಾರೆ.

    ರಿಷಬ್ ಶೆಟ್ಟಿ ಕೆರಾಡಿ, ಕುಂದಾಪುರ, ರಕ್ಷಿತ್ ಶೆಟ್ಟಿ ಉಡುಪಿ, ರಾಜ್ ಬಿ ಶೆಟ್ಟಿ ಉಡುಪಿ, ನಿಖಿಲ್ ಕುಮಾರಸ್ವಾಮಿ ಕೇತಗನಹಳ್ಳಿ (ಬಿಡದಿ), ಡಾಲಿ ಧನಂಜಯ ಅರಸೀಕೆರೆ, ಅಶಿಕಾ ರಂಗನಾಥ್ ತುಮಕೂರು, ಚಿಕ್ಕಣ್ಣ ಮೈಸೂರು, ಲೀಲಾವತಿ ಸೋಲದೇವನಹಳ್ಳಿ, ವಿನೋದ್ ರಾಜ್ ಸೋಲದೇವನ ಹಳ್ಳಿ, ದೊಡ್ಡಣ್ಣ ಬಿದರುಕಲ್ಲು ಮತದಾನ ಮಾಡಿದ್ದಾರೆ.