Tag: director

  • ಚೆನ್ನೈನ ಸೈಕ್ಲೋನ್ ಹೊಡೆತಕ್ಕೆ ಸಿಲುಕಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ

    ಚೆನ್ನೈನ ಸೈಕ್ಲೋನ್ ಹೊಡೆತಕ್ಕೆ ಸಿಲುಕಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ

    ಕನ್ನಡದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಸೈಕ್ಲೋನ್ ಹೊಡೆತಕ್ಕೆ ಸಿಕ್ಕು ತತ್ತರಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ತಾವು ಎದುರಿಸಿದ ಸೈಕ್ಲೋನ್ ರಾಡಾರ್ ಸಿನಿಮಾದ ಸೈಕ್ಲೋನ್ ಸುತ್ತುವ ಮಧ್ಯ ಭಾಗದಲ್ಲಿ ಇದ್ದೇವೆ ಎನ್ನುವಂತೆ ಭಾಸವಾಯಿತು ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಸಿನಿಮಾದ ನಿರ್ಮಾಪಕ ದೇವರಾಜ್.ಆರ್ ಕೂಡ ಇದ್ದರು ಎಂದು ಹೇಳಿದ್ದಾರೆ.

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿಅವರು, ‘ತುರ್ತು ಕೆಲಸದ ಮೇಲೆ ಚೆನ್ನೈಗೆ ಬಂದಿದ್ದೆ, ವಾಪಾಸ್ಸು ಬರಲು ಟಿಕೆಟ್ ಬುಕ್ ಆಗಿದ್ದ ವಿಮಾನ ರದ್ದಾದ ಕಾರಣ ನಾನು ನಮ್ಮ ನಿರ್ಮಾಪಕರು, ರಸ್ತೆಯ ಮೂಲಕ ಬೆಂಗಳೂರು ತಲುಪಲು ನಿರ್ಧರಿಸಿ ಚೆನ್ನೈ ಸಿಟಿಯಿಂದ ಒಂದು ಐವತ್ತು ಕಿಮೀ ಬಂದು ರಸ್ತೆ ಸಾಗಲು ಸಹ ತ್ರಾಸದಾಯಕವಾದ ಸೈಕ್ಲೋನ್ ನೋಡುತ್ತಾ ಕೂತಿರುವ ಕ್ಷಣ. ರಾಡಾರ್ ಚಿತ್ರದಲ್ಲಿ ಸೈಕ್ಲೋನ್ ಸುತ್ತುವ ಮಧ್ಯ ಭಾಗದಲ್ಲಿ ನಾವಿದ್ದೇವೆ ಎಂದು ತೋರಿಸುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಹುಡುಗಿಯ ಜೊತೆ ಸಲ್ಮಾನ್ ಖಾನ್‌ಗೆ ಪ್ಯಾರ್

    ಬರಹದ ಜೊತೆಗೆ ವಿಡಿಯೋ ಪೋಸ್ಟ್ ಮಾಡಿದ್ದು, ಅದನ್ನು ನೋಡಿದ ಹಲವರು ಇಂತಹ ಸಾಹಸವನ್ನು ಇನ್ನೊಮ್ಮೆ ಮಾಡಬೇಡಿ ಎಂದು ಪ್ರೀತಿಯಿಂದ ಗದರಿದ್ದಾರೆ. ಆ ಸೈಕ್ಲೋನ್ ನಿಂದ ಪಾರಾಗಿ ಬಂದಿರುವ ಮಂಸೋರೆ ಮತ್ತು ನಿರ್ಮಾಪಕರು ಸುರಕ್ಷಿತವಾಗಿ ಮನೆ ತಲುಪಿದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ವಿಡಿಯೋ ವೀಕ್ಷಿಸಿದ ಹಲವರು ಆತಂಕವನ್ನು ವ್ಯಕ್ತಪಡಿಸುವ ಮೂಲಕ ಸುರಕ್ಷಿತವಾಗಿ ಮನೆ ತಲುಪಿ ಎಂದು ಹಾರೈಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯದಲ್ಲಿ ಕೊಂಚ ಚೇತರಿಕೆ

    ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯದಲ್ಲಿ ಕೊಂಚ ಚೇತರಿಕೆ

    ನ್ನಡ ಸಿನಿಮಾ ರಂಗದ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯದಲ್ಲಿ ಮೂರು ದಿನಗಳ ಹಿಂದೆ ಏರುಪೇರಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು ಎಂದು ವೈದ್ಯರು ತಿಳಿಸಿದ್ದರು. ಸದ್ಯ ಸಿಕ್ಕಿರುವ ಮಾಹಿತಿಯ ಪ್ರಕಾರ, ಭಗವಾನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ನಟ, ನಿರ್ದೇಶಕ, ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಭಗವಾನ್ ಗುರುತಿಸಿಕೊಂಡಿದ್ದರು. 89 ವರ್ಷದ ಭಗವಾನ್ ಅವರು ಇತ್ತೀಚೆಗೆ ಶೀತ ಮತ್ತು ಜ್ವರದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ 3 ದಿನದ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.  ಡಾ.ಮಂಜುನಾಥ್‌ ಅವರು ಭಗವಾನ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ.  ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ಭಗವಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಸುದ್ದಿಯು ಸಿಗುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು. ಅಲ್ಲದೇ, ಸಿನಿಮಾ ರಂಗದ ಹಿತೈಷಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಇದೀಗ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿಕೊಂಡಿದೆ ಎನ್ನುತ್ತಿದ್ದಾರೆ ಅವರ ಆಪ್ತರು.

    1966ರಲ್ಲಿ ʻಸಂಧ್ಯಾರಾಗʼ ಸಿನಿಮಾ ಮೂಲಕ ಸಹಾಯಕ ನಿರ್ದೇಶಕರಾಗಿ ಭಗವಾನ್ ಚಿತ್ರರಂಗ ಪ್ರವೇಶಿಸಿದ್ದರು. ಬಳಿಕ ದೊರೈರಾಜ್ ಅವರ ಜೊತೆಗೂಡಿ ಸಾಕಷ್ಟು ಸಿನಿಮಾಗಳನ್ನ ನಿರ್ದೇಶನ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

    ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

    ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಿರ್ದೇಶಕ ಭಗವಾನ್ (Director Bhagavan) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ನಟ,ನಿರ್ದೇಶಕ, ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಭಗವಾನ್ ಗುರುತಿಸಿಕೊಂಡಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 89 ವರ್ಷದ ಭಗವಾನ್ ಅವರು ಇತ್ತೀಚೆಗೆ ಶೀತದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ 2 ದಿನದ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.  ಡಾ.ಮಂಜುನಾಥ್‌ ಅವರು ಭಗವಾನ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ.

    1966ರಲ್ಲಿ ʻಸಂಧ್ಯಾರಾಗʼ ಸಿನಿಮಾ ಮೂಲಕ ಸಹಾಯಕ ನಿರ್ದೇಶಕರಾಗಿ ಭಗವಾನ್ ಚಿತ್ರರಂಗ ಪ್ರವೇಶಿಸಿದ್ದರು. ಬಳಿಕ ದೊರೈರಾಜ್ ಅವರ ಜೊತೆಗೂಡಿ ಸಾಕಷ್ಟು ಸಿನಿಮಾಗಳನ್ನ ನಿರ್ದೇಶನ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರ ಪ್ರಶಸ್ತಿ ನಿರ್ದೇಶಕ ಸತ್ಯ ಪ್ರಕಾಶ್ ಇದೀಗ ಹೀರೋ

    ರಾಷ್ಟ್ರ ಪ್ರಶಸ್ತಿ ನಿರ್ದೇಶಕ ಸತ್ಯ ಪ್ರಕಾಶ್ ಇದೀಗ ಹೀರೋ

    ‘ರಾಮಾ ರಾಮಾ ರೇ’, ‘ಒಂದಲ್ಲ ಎರಡಲ್ಲ’ ಸಿನಿಮಾ ಖ್ಯಾತಿಯ ಪ್ರತಿಭಾವಂತ ನಿರ್ದೇಶಕ ಸತ್ಯ ಪ್ರಕಾಶ್. ಎರಡು ಅಪರೂಪದ ಸಿನಿಮಾಗಳ ಮೂಲಕ ಜನಮೆಚ್ಚುಗೆ ಜೊತೆಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡಿರುವ ಸತ್ಯ ಪ್ರಕಾಶ್ ಹೊಸದೊಂದು ಸಾಹಸಕ್ಕೆ ಹೊರಳಿದ್ದಾರೆ. ನಿರ್ದೇಶಕ, ನಿರ್ಮಾಪಕನಾಗಿ ಯಶಸ್ವಿಯಾಗಿರುವ ಸತ್ಯ ಪ್ರಕಾಶ್ ನಟನಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

    ಈ ನಡುವೆ ನಿರ್ದೇಶಕರು ನಟನಾಗುತ್ತಿರೋದು ಕಾಮನ್ ವಿಚಾರವಾಗಿದೆ. ಜೊತೆಗೆ ತಾವೇ ಬರೆದ ಕಥೆಗೆ ನಿರ್ದೇಶನ ಮಾಡಿ ನಿರ್ಮಾಣ ಮಾಡಿ ನಟನಾಗುವುದು ಒಂದು ರೀತಿ ಟ್ರೆಂಡ್ ಆಗಿದೆ. ಅಂತಹದ್ದೇ ಒಂದು ಪ್ರಯತ್ನಕ್ಕೆ ಸತ್ಯ ಪ್ರಕಾಶ್ ಕೈ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸತ್ಯ ಪ್ರಕಾಶ್ ಇದೊಂದು ಹೊಸ ರೀತಿಯ ಕಥೆ. ಒಬ್ಬೊಬ್ಬರ ಜೀವನದಲ್ಲಿ ಒಂದೊಂದು ಘಟನೆ ನಡೆದಿರುತ್ತೆ. ನನ್ನ ಬದುಕಿನಲ್ಲೂ ಒಂದಷ್ಟು ಘಟನೆಗಳು ನಡೆದಿವೆ. ಅವೆಲ್ಲವನ್ನು ಆಧರಿಸಿ ಕಥೆ ಹೆಣೆದಿದ್ದೇನೆ. ಈ ಕಥೆಯಲ್ಲಿ ಒಬ್ಬ ಹೊಸ ನಾಯಕ ನನಗೆ ಕಾಣುತ್ತಿದ್ದಾನೆ ಆದ್ರಿಂದ ನಾನೇ ನಟಿಸುತ್ತಿದ್ದೇನೆ. ನಾಯಕ ನಟ ಅನ್ನೋದಕ್ಕಿಂತ ಮುಖ್ಯ ಪಾತ್ರ ಎಂದಷ್ಟೇ ಹೇಳಬಹುದು ಎನ್ನುತ್ತಾರೆ ನಿರ್ದೇಶಕ ಸತ್ಯ ಪ್ರಕಾಶ್.

    ಈ ಚಿತ್ರ ಸಾಮಾನ್ಯ ಮನುಷ್ಯನ ಬದುಕಿಗೆ ಸಂಬಂಧಿಸಿದ ಕಥೆ ಒಳಗೊಂಡಿದೆ. ಸಾಮಾನ್ಯ ವ್ಯಕ್ತಿ ಬದುಕಲ್ಲಿ ಹಾಸ್ಯ, ಎಮೋಷನ್ಸ್, ರಾಜಕೀಯ ಎಲ್ಲವೂ ಇರುತ್ತೆ ಈ ಚಿತ್ರದಲ್ಲೂ ಅವೆಲ್ಲವೂ ಇದೆ. ಕಥಾನಾಯಕನಿಗೆ ಎಲ್ಲರಿಗೂ ಒಳ್ಳೆಯದನ್ನು ಬಯಸುವ ಗುಣವಿರುತ್ತೆ ಆದ್ರೆ ಆತನ ಒಳ್ಳೆಯ ಗುಣದಿಂದ ಅವನಿಗಾಗುವ ಪ್ರಯೋಜನ ಹಾಗೂ ತೊಂದರೆಗಳೇನು ಎಂಬುದನ್ನು ಹಾಸ್ಯದ ಮೂಲಕ ಹೇಳ ಹೊರಟಿದ್ದೇನೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ಸತ್ಯ ಪ್ರಕಾಶ್. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ರೀತಿಯಲ್ಲಿಯೇ ಕೈ ಸನ್ನೆ ಮಾಡಿ ರಿಷಬ್ ತಿರುಗೇಟು

    ನಾನು ಯಾವಾಗಲೂ ಯೂನಿವರ್ಸಲ್ ಸಬ್ಜೆಕ್ಟ್ ಆಯ್ಕೆ ಮಾಡಿಕೊಳ್ಳುತ್ತೇನೆ. ನನ್ನ ಸಿನಿಮಾವನ್ನು ಎಲ್ಲಾ ವರ್ಗದ ಜನರು ನೋಡಬೇಕು ಎನ್ನುವುದು ನನ್ನ ಆಸೆ.  ಈ ಚಿತ್ರದ  ಕಥೆಯೂ ಹಾಗೆ ಇದೆ. ಸಿನಿಮಾ ಚಿತ್ರೀಕರಣ ಜನವರಿಯಲ್ಲಿ ಆರಂಭವಾಗಲಿದೆ .ರಾಮಾ ರಾಮಾ ರೇ ಸಿನಿಮಾದಲ್ಲಿ ಕೆಲಸ ಮಾಡಿದ ತಂತ್ರಜ್ಞರೇ ಈ ಚಿತ್ರಕ್ಕೂ ಕೆಲಸ ಮಾಡಲಿದ್ದಾರೆ ಎಂದು ಮಾಹಿತಿ ನೀಡಿರುವ ಸತ್ಯ ಪ್ರಕಾಶ್ ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡೋದಾಗಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಂಭಾಷಣೆಗಾರ ಪ್ರಶಾಂತ್ ರಾಜಪ್ಪ ಇದೀಗ ರಿಷಿ ಸಿನಿಮಾದ ನಿರ್ದೇಶಕ

    ಸಂಭಾಷಣೆಗಾರ ಪ್ರಶಾಂತ್ ರಾಜಪ್ಪ ಇದೀಗ ರಿಷಿ ಸಿನಿಮಾದ ನಿರ್ದೇಶಕ

    ಚಂದನವನದಲ್ಲಿ ಡೈಲಾಗ್ ರೈಟರ್ ಆಗಿ ಗುರುತಿಸಿಕೊಂಡಿರುವ ಪ್ರಶಾಂತ್ ರಾಜಪ್ಪ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ. ‘ವಿಕ್ಟರಿ’, ‘ಅಧ್ಯಕ್ಷ’, ‘ರನ್ನ’, ‘ಪೊಗರು’, ‘ಹೊಂದಿಸಿ ಬರೆಯಿರಿ’ ಸೇರಿದಂತೆ 25ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ ಪ್ರಶಾಂತ್ ರಾಜಪ್ಪ. ಸಹ ನಿರ್ದೇಶಕನಾಗಿಯೂ ಕೆಲಸ ಮಾಡಿದ ಅನುಭವ ಇವರಿಗಿದೆ. ಇದೀಗ ಅವೆಲ್ಲ ಅನುಭವವನ್ನು ಇಟ್ಟುಕೊಂಡು ನಿರ್ದೇಶಕನಾಗಿ ಚಂದನವನದಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಹೊರಟಿದ್ದಾರೆ.

    ನಿರ್ದೇಶಕನಾಗಬೇಕು ಎಂಬುದು ಪ್ರಶಾಂತ್ ರಾಜಪ್ಪ ಅವರ ಬಹಳ ವರ್ಷದ ಕನಸು. ಆ ಕನಸೀಗ ನನಸಾಗುವ ಹಂತಕ್ಕೆ ಬಂದಿದೆ. ಸಿನಿಮಾ ಬರಹಗಾರನಾಗಿ, ನಿರ್ದೇಶಕರಾದ ಗುರು ಪ್ರಸಾದ್, ಪಿ.ಸಿ. ಶೇಖರ್, ಹೆಚ್. ಪಿ. ದಾಸ್ ಜೊತೆ ಸಹ ನಿರ್ದೇಶಕನಾಗಿ ಚಿತ್ರರಂಗದಲ್ಲಿ ದುಡಿದ ಅನುಭವವನ್ನು ತಮ್ಮ ಮೊದಲ ಚಿತ್ರಕ್ಕೆ ಧಾರೆ ಎರೆಯುತ್ತಿದ್ದಾರೆ. ಕಥೆ, ಚಿತ್ರಕಥೆ, ಡೈಲಾಗ್ ಬರೆದು ನಿರ್ದೇಶನ ಮಾಡುವುದರ ಮೂಲಕ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ. ಇದನ್ನೂ ಓದಿ:`ಕಾಂತಾರ’ ಮುಂದೆ ಬೆದರಿದ ಬಾಲಿವುಡ್: ಥಿಯೇಟರ್‌ಗೆ `ಗುಡ್ ಬೈ’ ಹೇಳಿದ ರಶ್ಮಿಕಾ ಚಿತ್ರ

    ‘ಆಪರೇಷನ್ ಅಲಮೇಲಮ್ಮ’, ‘ಕವಲು ದಾರಿ’ ಸಿನಿಮಾ ಖ್ಯಾತಿಯ ನಟ ರಿಷಿ ಪ್ರಶಾಂತ್ ರಾಜಪ್ಪ ಮೊದಲ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕಾಮಿಡಿ ಎಮೋಷನಲ್ ಡ್ರಾಮಾ ಸಿನಿಮಾ ಇದಾಗಿದ್ದು, ಸಿನಿಮಾದ ಪ್ರಿಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಡಿಸೆಂಬರ್ ನಲ್ಲಿ ಸಿನಿಮಾ ಸೆಟ್ಟೇರಲಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸದ್ಯದಲ್ಲೇ ಸಿನಿಮಾ ಟೈಟಲ್, ತಾರಾಬಳಗ ಎಲ್ಲವನ್ನೂ ರಿವೀಲ್ ಮಾಡೋದಾಗಿ ಪ್ರಶಾಂತ್ ರಾಜಪ್ಪ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಾನಿ ಲಿವರ್ ನನ್ನು ಕನ್ನಡಕ್ಕೆ ಪರಿಚಯಿಸಿದ್ದ ನಿರ್ದೇಶಕ ಮುರಳಿ ಕೃಷ್ಣ ನಿಧನ

    ಜಾನಿ ಲಿವರ್ ನನ್ನು ಕನ್ನಡಕ್ಕೆ ಪರಿಚಯಿಸಿದ್ದ ನಿರ್ದೇಶಕ ಮುರಳಿ ಕೃಷ್ಣ ನಿಧನ

    ನ್ನಡ ಸಿನಿಮಾ ರಂಗದ ನಿರ್ದೇಶಕ, ನಿರ್ಮಾಪಕ ಕೆ.ಆರ್. ಮುರಳಿ ಕೃಷ್ಣ ನಿಧನರಾಗಿದ್ದಾರೆ. 63 ವಯಸ್ಸಿನ ಇವರು ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದರು. ಸಣ್ಣ ಸತ್ಯ, ಗರ ಸೇರಿದಂತೆ ಹಲವು ಚಿತ್ರಗಳನ್ನು ಇವರು ನಿರ್ದೇಶನ ಮಾಡಿದ್ದಾರೆ. ಗರ ಸಿನಿಮಾದ ಮೂಲಕ ಬಾಲಿವುಡ್ ನ ಖ್ಯಾತ ಹಾಸ್ಯ ಕಲಾವಿದ ಜಾನಿ ಲಿವರ್ ಅವರನ್ನು ಕನ್ನಡ ಸಿನಿಮಾ ರಂಗಕ್ಕೆ ಪರಿಚಯಿಸಿದ್ದರು. ಈ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ.

    ಬ್ರೈನ್ ಟೂಮರ್ ಇರುವುದು ತಡವಾಗಿ ಪತ್ತೆ ಆಗಿದ್ದರಿಂದ, ಶಸ್ತ್ರ ಚಿಕಿತ್ಸೆಗಾಗಿ ಕೂಡಲೇ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ‍ಸ್ತ್ರ ಚಿಕಿತ್ಸೆ ಫಲಕಾರಿಯಾದರೂ, ಹೃದಯಾಘಾತ ಕಾರಣದಿಂದಾಗಿ ಅವರು ನಿನ್ನ ಸಂಜೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದರೂ, ಪ್ರವೃತ್ತಿಯಲ್ಲಿ ಸಿನಿಮಾ ನಿರ್ದೇಶಕರಾಗಿ, ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ನಿರ್ಮಿಸಿದ್ದರು

    ಬೆಂಗಳೂರಿನ ಸಹಕಾರ ನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದು, 12.30ಕ್ಕೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನ ಇವರು ಅಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕನ್ನಡದ ನಿರ್ದೇಶಕ, ನಟ ಸಯ್ಯದ್ ಅಶ್ರಫ್ ಹೃದಯಾಘಾತದಿಂದ ನಿಧನ

    ಕನ್ನಡದ ನಿರ್ದೇಶಕ, ನಟ ಸಯ್ಯದ್ ಅಶ್ರಫ್ ಹೃದಯಾಘಾತದಿಂದ ನಿಧನ

    ಕನ್ನಡ ಕಿರುತೆರೆ ನಿರ್ದೇಶಕ, ನಟ ಸಯ್ಯದ್ ಅಶ್ರಫ್ ಇಂದು ಬೆಳಗ್ಗೆ 3 ಗಂಟೆಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇವಲ 42ರ ವಯಸ್ಸಿನ ಸಯ್ಯದ್ ಕನ್ನಡ ಕಿರುತೆರೆಯಲ್ಲಿ ನಟರಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಅದರಲ್ಲೂ ಕನ್ನಡ ಕಿರುತೆರೆ ಜಗತ್ತಿಗೆ ಭಕ್ತಿ ಪ್ರಧಾನ ಮತ್ತು ಫ್ಯಾಂಟಿಸಿ ಧಾರಾವಾಹಿಗಳನ್ನು ಕೊಟ್ಟ ಹೆಗ್ಗಳಿಕೆ ಇವರದ್ದು.

    ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಸಾವಿರಾರು ಕಂತುಗಳಲ್ಲಿ ಪ್ರಸಾರವಾಗಿರುವ ಧಾರಾವಾಹಿಗಳಿಗೆ ಇವರು ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಬಿ.ಸುರೇಶ ಅವರ ಸಾರಥ್ಯದಲ್ಲಿ ಮೂಡಿ ಬಂದ ಹಲವಾರು ಧಾರಾವಾಹಿಗಳಿಗೆ ಇವರದ್ದೇ ನಿರ್ದೇಶನವಿದೆ. ಮೀಡಿಯಾ ಹೌಸ್ ಸ್ಟುಡಿಯೋ ನಿರ್ಮಾಣದಲ್ಲಿ ಹತ್ತು ವರ್ಷಗಳ ಕಾಲ ಧಾರಾವಾಹಿಗಾಗಿ ದುಡಿದಿದ್ದಾರೆ. ಇದನ್ನೂ ಓದಿ:ವಿರಹ ಮುಂದುವರೆಯಲಿ ಎಂದು ದಿವ್ಯಾ ಉರುಡುಗ ಕಾಲೆಳೆದ ಕಿಚ್ಚ

    ಸಯ್ಯದ್ ಅಶ್ರಫ್ ನಿಧನಕ್ಕೆ ಬಿ.ಸುರೇಶ, ಶೈಲಜಾ ನಾಗ್ ಹಾಗೂ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮಧ್ಯಾಹ್ನದವರೆಗೂ ಅಶ್ರಫ್ ಅವರ ಸ್ವಗೃಹದಲ್ಲಿ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ನಂತರ ಅಂತ್ಯ ಸಂಸ್ಕಾರ ಮಾಡುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಮೀಟು’ ಅನ್ನೋದು ಕಾಮನ್ ಆಗಿದೆ, ಊರು ಅಂದ್ಮೇಲೆ ಸಮಸ್ಯೆ ಇರುತ್ತೆ: ನಿರ್ದೇಶಕ ಶಶಾಂಕ್

    ‘ಮೀಟು’ ಅನ್ನೋದು ಕಾಮನ್ ಆಗಿದೆ, ಊರು ಅಂದ್ಮೇಲೆ ಸಮಸ್ಯೆ ಇರುತ್ತೆ: ನಿರ್ದೇಶಕ ಶಶಾಂಕ್

    ಟಿ ಆಶಿತಾ (Ashita) ಮಾಡಿರುವ ಮೀಟು ಆರೋಪ, ಸ್ಯಾಂಡಲ್ ವುಡ್ (Sandalwood) ನಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಈ ಕುರಿತು ಆಶಿತಾ ಸಿನಿಮಾದಲ್ಲಿ ಗೀತ ಸಾಹಿತಿಯಾಗಿ ಕೆಲಸ ಮಾಡಿದ್ದ ಮತ್ತು ಮೊಗ್ಗಿನ ಮನಸು ಸಿನಿಮಾದಲ್ಲಿ ನಟಿಸುವಂತೆ ಆಶಿತಾಗೆ ಆಫರ್ ಮಾಡಿದ್ದ ನಿರ್ದೇಶಕ ಶಶಾಂಕ್, ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಮೀಟು (MeToo) ಅನ್ನುವುದು ಬಹಳ ಕಾಮನ್ ಆಗಿದೆ. ಊರು ಅಂದ ಮೇಲೆ ಆ ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಹೆಣ್ಣು ಮಕ್ಕಳು ಅದನ್ನು ನಿಭಾಯಿಸಲು ಕಲಿತುಕೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ:ಬಂಧನದ ಭೀತಿಯಿಂದ ಕೇರಳಕ್ಕೆ ಎಸ್ಕೇಪ್ ಆದ್ರಾ ನಟಿ ಶ್ರೀಲೀಲಾ ತಾಯಿ?: ಮನೆಗೆ ಬೀಗ, ಮೊಬೈಲ್ ಆಫ್

    ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಶಶಾಂಕ್, ‘ಆಶಿತಾ ಅವರಿಗೆ ಆಗಿರುವ ಅನುಭವದಿಂದ ಅವರು ಸಿನಿಮಾ ಬಿಟ್ಟು ಹೋಗಿದ್ದಾರೆ. ಯಾರೂ ಇನ್ನೊಬ್ಬರಿಗೆ ತಲೆ ಬಗ್ಗಿಸುವ ಅವಶ್ಯಕತೆ ಇಲ್ಲ. ಯಾವುದೇ ಕ್ಷೇತ್ರದಲ್ಲಿ ಆಗಲಿ ಗಂಡಸರು ಈ ರೀತಿ ಮಾಡಲು ಹೆದರುತ್ತಾರೆ. ಬಾ ಬಾರೋ ರಸಿಕ ಟೈಮ್ ನಲ್ಲಿ ನಾನು ಗೀತ ಸಾಹಿತಿಯಾಗಿ ಅವರ ಸಿನಿಮಾದಲ್ಲಿ ಕೆಲಸ ಮಾಡಿದ್ದೆ. ಮೊಗ್ಗಿನ ಮನಸ್ಸು ಸಿನಿಮಾಗೆ ಆಶಿತಾ ಅವರಿಗೆ ಪಾತ್ರದ ಆಫರ್ ಮಾಡಿದ್ದೆ. ಕೆಲವು ಕಾರಣಗಳಿಂದ ಅವರು ನಟಿಸಲು ಸಾಧ್ಯವಾಗಲಿಲ್ಲ’ ಎಂದಿದ್ದಾರೆ.

    ಮುಂದುವರೆದು ಮಾತನಾಡಿದ ಶಶಾಂಕ್, ‘ಅವರ ಅನುಭವಕ್ಕೆ ಬಂದಿರುವ ವಿಚಾರವನ್ನು ಅವರು ಹೇಳಿ ಕೊಂಡಿದ್ದಾರೆ. ಮೀಟು ಅನ್ನುವುದು ಅನಾದಿಕಾಲದಿಂದಲೂ ಬಂದಿರುವ ಒಂದು ಸಮಸ್ಯೆ. ಕೆಟ್ಟ ಮನಸ್ಸಿರುವ ವ್ಯಕ್ತಿಗಳು ಬದಲಾಗಬೇಕು. ಹೆಣ್ಣುಮಕ್ಕಳು ಅದನ್ನು ನಿಭಾಯಿಸುವ ರೀತಿ ಕಲಿತು ಕೊಳ್ಳಬೇಕು’ ಎಂದು ಮೀಟು ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • MeToo-ಮೀಟೂ ಆರೋಪ ಹೊತ್ತ ನಿರ್ದೇಶಕ ಯಾರು? ಆಶಿತಾ ಚಿತ್ರಗಳ ನಿರ್ದೇಶಕರ ಹುಡುಕಾಟ

    MeToo-ಮೀಟೂ ಆರೋಪ ಹೊತ್ತ ನಿರ್ದೇಶಕ ಯಾರು? ಆಶಿತಾ ಚಿತ್ರಗಳ ನಿರ್ದೇಶಕರ ಹುಡುಕಾಟ

    ಸ್ಯಾಂಡಲ್ ವುಡ್ (Sandalwood) ನಲ್ಲಿ ಮತ್ತೆ ಮೀಟು (MeToo) ಬಿರುಗಾಳಿ ಎಬ್ಬಿಸಿದ ನಟಿ ಆಶಿತಾ ಕ್ರಾಸ್ತಾ (Ashita) ನಟನೆಯ ಚಿತ್ರಗಳು ಇದೀಗ ಮುನ್ನೆಲೆಗೆ ಬಂದಿವೆ. ಅದಕ್ಕಾಗಿ ಕಾರಣ, ಆಯಾ ಚಿತ್ರಗಳ ನಿರ್ದೇಶಕರು (Director) ಮತ್ತು ನಿರ್ಮಾಪಕರು ಯಾರು ಎಂದು ನೆಟ್ಟಿಗರು ಸರ್ಚ್ ಮಾಡುತ್ತಿದ್ದಾರೆ. ತನಗಾದ ಕೆಟ್ಟ ಅನುಭವಗಳ ಕಾರಣಕ್ಕಾಗಿ ನಾನು ಸಿನಿಮಾ ರಂಗ ತೊರೆಯಬೇಕಾಯಿತು ಎಂದು ಆಶಿತಾ ಹೇಳಿದ್ದಾರೆ. ಅವಕಾಶ ಬೇಕು ಅಂದರೆ, ಸಲುಗೆಯಿಂದ ಇರಬೇಕು, ನಾವು ಹೇಳಿದಂತೆ ಕೇಳಬೇಕು ಎಂದು ಕೆಲವರು ಆಶಿತಾ ಅವರನ್ನು ಕೇಳಿದ್ದರಂತೆ. ಕೋ ಆಪ್ ರೇಟ್ ಮಾಡದೇ ಇರುವ ಕಾರಣಕ್ಕಾಗಿ ಶೂಟಿಂಗ್ ಸ್ಪಾಟ್ ನಲ್ಲಿ ಅವಮಾನಿಸುತ್ತಿದ್ದರು ಎಂದು ಅವರು ಆರೋಪ ಮಾಡಿದ್ದಾರೆ. ಹಾಗಾಗಿ ಅವರು ಯಾರಿರಬಹುದು ಎಂಬ ಕುತೂಹಲ ನೆಟ್ಟಿಗರದ್ದು.

    ಬಾ ಬಾರೋ ರಸಿಕ, ಆಕಾಶ್, ತವರಿನ ಸಿರಿ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಆಶಿತಾ, ತಮಗಾದ ಕಹಿ ಅನುಭವಗಳ ಕಾರಣದಿಂದಾಗಿಯೇ ಚಿತ್ರರಂಗದಿಂದ ದೂರವಾಗಿದ್ದಾರಂತೆ. ಸಿನಿಮಾದಲ್ಲಿ ಅವಕಾಶ ಸಿಗಲು, ಸಲುಗೆ ಇಂದ ಇರು, ನಾವು ಹೇಳಿದಂತೆ ಕೇಳು ಎನ್ನುವ ಪದಗಳು ಅವರಿಗೆ ಹೇಸಿಗೆ ತರಿಸಿದ ಕಾರಣದಿಂದಾಗಿ ಚಿತ್ರರಂಗವನ್ನೇ ತೊರೆಯಬೇಕಾಯಿತು ಎಂದು ಅವರು ಸಂದರ್ಶನದಲ್ಲಿ ಹೇಳಿದ್ದಾರೆ. ನಾಚಿಕೆ ಇಲ್ಲದೇ ನೇರವಾಗಿಯೇ ಕೇಳಿದ ನಿರ್ದೇಶಕನ ಅಸಹ್ಯ ಪ್ರವೃತ್ತಿಯನ್ನು ಅವರು ತೆರೆದಿಟ್ಟಿದ್ದಾರೆ. ಇದನ್ನೂ ಓದಿ:ಕೊಟ್ಟ ಮಾತಿನಂತೆ ಕಿರುತೆರೆ ನಟಿ ಸ್ವಪ್ನಾ ಪತಿಗೆ ಕೆಲಸ ಕೊಡಿಸಿದ ಗೋಲ್ಡನ್ ಸ್ಟಾರ್ ಗಣೇಶ್

    ಸಿನಿಮಾ ರಂಗದಿಂದ ದೂರವಾಗಿದ್ದಕ್ಕೆ ನನಗೇನೂ ಬೇಸರವಿಲ್ಲ. ಆದರೆ, ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ಮೇಲೂ ನನಗೆ ಕೆಟ್ಟ ಅನುಭವಗಳು ಆದವು. ಆದರೆ, ನಾನು ಅದಕ್ಕೆ ಆಸ್ಪದ ಕೊಡಲಿಲ್ಲ. ನನಗೆ ಅಂತಹ ಅವಕಾಶವೂ ಬೇಕಾಗಿರಲಿಲ್ಲ. ಆ ನಿರ್ದೇಶಕರ ಹೆಸರು ಹೇಳುವುದು ಬೇಡ, ಅವರು ತಮ್ಮೊಂದಿಗೆ ನನ್ನನ್ನು ಸಲುಗೆಯಿಂದ ಇರಲು ಹೇಳಿದರು. ಅದಕ್ಕೆ ಒಪ್ಪದಾಗ ಏನಲ್ಲ ಅವಮಾನಗಳನ್ನು ಮಾಡಿದ್ದರು. ಟೇಕ್ ಚೆನ್ನಾಗಿ ಬಂದರೂ, ಮತ್ತೆ ರಿಟೇಕ್ ಮಾಡಿಸುತ್ತಿದ್ದರು. ಇದೆಲ್ಲದರಿಂದ ನಾನು ಬೇಸತ್ತಿದ್ದೆ ಎಂದು ಅವರು ಮಾತನಾಡಿದ್ದಾರೆ.

    ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ನನ್ನಂತವಳಿಗೆ ಹೀಗಾದರೂ, ಹೊಸ ಹುಡುಗಿಯರು ಇನ್ನೆಷ್ಟು ಸಂಕಟ ಪಟ್ಟಿದ್ದಾರೋ ಗೊತ್ತಿಲ್ಲ. ಈಗಲೂ ನನಗೆ ನಟಿಸುವುದಕ್ಕೆ ಆಸಕ್ತಿ ಇದೆ. ಆದರೆ, ನನಗೆ ಟೀಮ್ ಇಷ್ಟವಾಗಬೇಕು ಮತ್ತು ನನಗೊಪ್ಪುವ ಪಾತ್ರ ಸಿಗಬೇಕು ಎಂದು ಹೇಳುವ ಮೂಲಕ ಮತ್ತೆ ಸಿನಿಮಾ ರಂಗಕ್ಕೆ ವಾಪಸ್ಸಾಗುವ ಕುರಿತು ಅವರು ಮಾತನಾಡಿದ್ದಾರೆ. ಇಷ್ಟೆಲ್ಲ ಮಾತನಾಡಿದರೂ, ತಮಗೆ ಕಿರುಕುಳ ಕೊಟ್ಟವರ ಹೆಸರನ್ನು ಮಾತ್ರ ಆಶಿತಾ ಬಹಿರಂಗ ಪಡಿಸಿಲ್ಲ.

    Live Tv
    [brid partner=56869869 player=32851 video=960834 autoplay=true]

  • MeToo-ಸ್ಯಾಂಡಲ್ ವುಡ್ ಮೇಲೆ ಮತ್ತೆ ಸಿಡಿದ ‘ಮೀಟು’ ಬಾಂಬ್: ಬಾ ಬಾರೋ ರಸಿಕ ನಟಿ ಹೇಳಿದ ಕಹಿ ಸತ್ಯ

    MeToo-ಸ್ಯಾಂಡಲ್ ವುಡ್ ಮೇಲೆ ಮತ್ತೆ ಸಿಡಿದ ‘ಮೀಟು’ ಬಾಂಬ್: ಬಾ ಬಾರೋ ರಸಿಕ ನಟಿ ಹೇಳಿದ ಕಹಿ ಸತ್ಯ

    ಖ್ಯಾತ ನಟಿ ಶ್ರುತಿ ಹರಿಹರನ್ (Shruti Hariharan) ಸೇರಿದಂತೆ ಹಲವು ನಟಿಯರು ಈಗಾಗಲೇ ಸ್ಯಾಂಡಲ್ ವುಡ್ (Sandalwood) ಮೇಲೆ ಮೀಟು (Metto) ಬಾಂಬ್ ಸಿಡಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಈ ಪ್ರಕರಣಗಳು ಕೋರ್ಟ್ ಮೆಟ್ಟಿಲು ಕೂಡ ಹತ್ತಿದ್ದವು. ಸ್ಯಾಂಡಲ್ ವುಡ್ ಕರಾಳ ಮುಖಗಳನ್ನೂ ಬಿಚ್ಚಿಟ್ಟಿದ್ದವು. ಇದೀಗ ಮತ್ತೆ ಚಂದವನದಲ್ಲಿ ಮೀಟು ಸದ್ದು ಕೇಳಿ ಬರುತ್ತಿದೆ. ರೋಡ್ ರೋಮಿಯೋ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ, ಇದೀಗ ಸಿನಿಮಾ ರಂಗದಿಂದಲೇ ದೂರವಾಗಿರುವ ಆಶಿತಾ (Ashita) ತಮಗಾದ ಕಹಿ ಅನುಭವಗಳನ್ನು ನಿರ್ದೇಶಕ ರಘುರಾಮ್ ನಡೆಸಿದ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ.

    ಬಾ ಬಾರೋ ರಸಿಕ, ಆಕಾಶ್ (Akash), ತವರಿನ ಸಿರಿ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಆಶಿತಾ, ತಮಗಾದ ಕಹಿ ಅನುಭವಗಳ ಕಾರಣದಿಂದಾಗಿಯೇ ಚಿತ್ರರಂಗದಿಂದ ದೂರವಾಗಿದ್ದಾರಂತೆ. ಸಿನಿಮಾದಲ್ಲಿ ಅವಕಾಶ ಸಿಗಲು, ಸಲುಗೆ ಇಂದ ಇರು, ನಾವು ಹೇಳಿದಂತೆ ಕೇಳು ಎನ್ನುವ ಪದಗಳು ಅವರಿಗೆ ಹೇಸಿಗೆ ತರಿಸಿದ ಕಾರಣದಿಂದಾಗಿ ಚಿತ್ರರಂಗವನ್ನೇ ತೊರೆಯಬೇಕಾಯಿತು ಎಂದು ಅವರು ಸಂದರ್ಶನದಲ್ಲಿ ಹೇಳಿದ್ದಾರೆ. ನಾಚಿಕೆ ಇಲ್ಲದೇ ನೇರವಾಗಿಯೇ ಕೇಳಿದ ನಿರ್ದೇಶಕನ ಅಸಹ್ಯ ಪ್ರವೃತ್ತಿಯನ್ನು ಅವರು ತೆರೆದಿಟ್ಟಿದ್ದಾರೆ. ಇದನ್ನೂ ಓದಿ:ನಾಗಚೈತನ್ಯ- ಸಮಂತಾ ಬ್ರೇಕಪ್ ಬಗ್ಗೆ ಕೊನೆಗೂ ಮೌನ ಮುರಿದ ನಟ ನಾಗಾರ್ಜುನ್

    ಸಿನಿಮಾ ರಂಗದಿಂದ ದೂರವಾಗಿದ್ದಕ್ಕೆ ನನಗೇನೂ ಬೇಸರವಿಲ್ಲ. ಆದರೆ, ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ಮೇಲೂ ನನಗೆ ಕೆಟ್ಟ ಅನುಭವಗಳು ಆದವು. ಆದರೆ, ನಾನು ಅದಕ್ಕೆ ಆಸ್ಪದ ಕೊಡಲಿಲ್ಲ. ನನಗೆ ಅಂತಹ ಅವಕಾಶವೂ ಬೇಕಾಗಿರಲಿಲ್ಲ. ಆ ನಿರ್ದೇಶಕರ (Director) ಹೆಸರು ಹೇಳುವುದು ಬೇಡ, ಅವರು ತಮ್ಮೊಂದಿಗೆ ನನ್ನನ್ನು ಸಲುಗೆಯಿಂದ ಇರಲು ಹೇಳಿದರು. ಅದಕ್ಕೆ ಒಪ್ಪದಾಗ ಏನಲ್ಲ ಅವಮಾನಗಳನ್ನು ಮಾಡಿದ್ದರು. ಟೇಕ್ ಚೆನ್ನಾಗಿ ಬಂದರೂ, ಮತ್ತೆ ರಿಟೇಕ್ ಮಾಡಿಸುತ್ತಿದ್ದರು. ಇದೆಲ್ಲದರಿಂದ ನಾನು ಬೇಸತ್ತಿದ್ದೆ ಎಂದು ಅವರು ಮಾತನಾಡಿದ್ದಾರೆ.

    ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ನನ್ನಂತವಳಿಗೆ ಹೀಗಾದರೂ, ಹೊಸ ಹುಡುಗಿಯರು ಇನ್ನೆಷ್ಟು ಸಂಕಟ ಪಟ್ಟಿದ್ದಾರೋ ಗೊತ್ತಿಲ್ಲ. ಈಗಲೂ ನನಗೆ ನಟಿಸುವುದಕ್ಕೆ ಆಸಕ್ತಿ ಇದೆ. ಆದರೆ, ನನಗೆ ಟೀಮ್ ಇಷ್ಟವಾಗಬೇಕು ಮತ್ತು ನನಗೊಪ್ಪುವ ಪಾತ್ರ ಸಿಗಬೇಕು ಎಂದು ಹೇಳುವ ಮೂಲಕ ಮತ್ತೆ ಸಿನಿಮಾ ರಂಗಕ್ಕೆ ವಾಪಸ್ಸಾಗುವ ಕುರಿತು ಅವರು ಮಾತನಾಡಿದ್ದಾರೆ. ಇಷ್ಟೆಲ್ಲ ಮಾತನಾಡಿದರೂ, ತಮಗೆ ಕಿರುಕುಳ ಕೊಟ್ಟವರ ಹೆಸರನ್ನು ಮಾತ್ರ ಆಶಿತಾ ಬಹಿರಂಗ ಪಡಿಸಿಲ್ಲ.

    Live Tv
    [brid partner=56869869 player=32851 video=960834 autoplay=true]