Tag: director

  • ಶಾಲಾ ಪಠ್ಯದಲ್ಲಿ ಲೈಂಗಿಕ ಶಿಕ್ಷಣ ಅಳವಡಿಸಲು ತಮಿಳು ನಾಡು ಸರಕಾರಕ್ಕೆ ಮನವಿ ಮಾಡಿದ ನಿರ್ದೇಶಕ ವೆಟ್ರಿಮಾರನ್

    ಶಾಲಾ ಪಠ್ಯದಲ್ಲಿ ಲೈಂಗಿಕ ಶಿಕ್ಷಣ ಅಳವಡಿಸಲು ತಮಿಳು ನಾಡು ಸರಕಾರಕ್ಕೆ ಮನವಿ ಮಾಡಿದ ನಿರ್ದೇಶಕ ವೆಟ್ರಿಮಾರನ್

    ಶಾಲಾ ಮಕ್ಕಳು ಲೈಂಗಿಕ ಶಿಕ್ಷಣವನ್ನು ಕಲಿಯುವುದರ ಅವಶ್ಯಕತೆ ಇದೆ. ಶಾಲಾ ಪಠ್ಯಕ್ರಮದ ಭಾಗವಾಗಿ ಲೈಂಗಿಕ ಶಿಕ್ಷಣವನ್ನು ಸೇರ್ಪಡೆ ಮಾಡುವುದರ ಬಗ್ಗೆ ಕೇರಳ ಹೈಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿರುವ ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್, ಇದನ್ನು ತಮಿಳುನಾಡಿನಲ್ಲೂ ಜಾರಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ವಿಶ್ವ ಲೈಂಗಿಕ ಆರೋಗ್ಯ ದಿನ ಸಂದರ್ಭದಲ್ಲಿ ಮಾತನಾಡಿದ ಅವರು ಸಲಿಂಗ ವಿವಾಹವನ್ನೂ ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

    ಬಾಂಗ್ಲಾದೇಶದ ಮಹಿಳೆ ಮತ್ತು ತಮಿಳುನಾಡಿನ ಮಹಿಳೆಯ ನಡುವೆ ನಡೆದ ಮದುವೆಯನ್ನು ಉದಾಹರಣೆಯಾಗಿ ತಗೆದುಕೊಂಡ ಅವರು ಇಂತಹ ಮದುವೆಯನ್ನು ನಾಗರೀಕ ಸಮಾಜ ಪ್ರೋತ್ಸಾಹಿಸಬೇಕು ಎಂದು ಅವರು ಮನವಿ ಮಾಡಿದರು. ಅಲ್ಲದೇ, ತಮಿಳುನಾಡಿನ ಸುಭಿಕ್ಷಾ ಸುಬ್ರಮಣಿ ಹಾಗೂ ಟೀನಾ ದಾಸ್ ಸಲಿಂಗಿಗಳು ತಮಿಳು ಸಾಂಪ್ರದಾಯಿಕ ಶೈಲಿಯಲ್ಲಿ ಮದುವೆಯಾಗಿದ್ದನ್ನೂ ಅವರು ನೆನಪಿಸಿಕೊಂಡರು. ಇದನ್ನೂ ಓದಿ: ಮತ್ತೆ ಶುರುವಾಯ್ತು ಬಾಲಿವುಡ್ ಬಾಯ್‌ಕಾಟ್ ಟ್ರೆಂಡ್: `ಬ್ರಹ್ಮಾಸ್ತ್ರʼ ಚಿತ್ರಕ್ಕೆ ವಿರೋಧ

    ಪ್ರತಿಯೊಬ್ಬರೂ ತಮ್ಮ ತಮ್ಮ ಹಕ್ಕುಗಳನ್ನು ಪಡೆದುಕೊಂಡು ಬದುಕಬೇಕು. ತೃತಿಯ ಲಿಂಗಿಗಳಿಗೆ ತಮ್ಮದೇ ಆದ ಬದುಕಿನ ಹಕ್ಕು ನೀಡುವಂತೆ ಕರೆಕೊಟ್ಟ ವೆಟ್ರಿಮಾರನ್, ಲೈಂಗಿಕ ಶಿಕ್ಷಣದ ಬಗ್ಗೆ ಒತ್ತು ನೀಡುವಂತೆ ಅವರು ಕೇಳಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ‘ಚಾರ್ಲಿ’ ನಿರ್ದೇಶಕನ ಹೆಸರಲ್ಲಿ ಮಲಯಾಳಂ ನಟಿ ಮಾಲಾ ಪಾರ್ವತಿಗೆ ಕರೆ ಮಾಡಿದ ನಕಲಿ ನಿರ್ದೇಶಕ

    ‘ಚಾರ್ಲಿ’ ನಿರ್ದೇಶಕನ ಹೆಸರಲ್ಲಿ ಮಲಯಾಳಂ ನಟಿ ಮಾಲಾ ಪಾರ್ವತಿಗೆ ಕರೆ ಮಾಡಿದ ನಕಲಿ ನಿರ್ದೇಶಕ

    ಕೆಜಿಎಫ್ 2 ಸಿನಿಮಾದ ನಂತರ ಭಾರತೀಯ ಸಿನಿಮಾ ರಂಗದಲ್ಲಿ ಮತ್ತೊಂದು ಸದ್ದು ಮಾಡಿದ ಚಿತ್ರ ಚಾರ್ಲಿ 777. ಬಾಕ್ಸ್ ಆಫೀಸಿನಲ್ಲಿ ಅದು ಸಖತ್ ಕಮಾಯಿ ಮಾಡಿತು. ಚೊಚ್ಚಲು ಸಿನಿಮಾದ ಮೂಲಕ ನಿರ್ದೇಶಕ ಕಿರಣ್ ರಾಜ್, ಭಾರತೀಯ ಸಿನಿಮಾ ರಂಗಕ್ಕೆ ಪರಿಚಯವಾದರು. ಕಿರಣ್ ರಾಜ್ ಗೆ ಇದೀಗ ಎಲ್ಲಿಲ್ಲದ ಬೇಡಿಕೆ. ಹಾಗಾಗಿ ಇವರ ಹೆಸರನ್ನು ದುರುಪಯೋಗ ಪಡಿಸಿಕೊಂಡ ಘಟನೆ ನಡೆದಿದೆ. ನಕಲಿ ನಿರ್ದೇಶಕನೊಬ್ಬ ಕಿರಣ್ ರಾಜ್ ಹೆಸರನ್ನು ಬಳಸಿಕೊಂಡು, ಮಲಯಾಳಂ ನಟಿ ಮಾಲಾ ಪಾರ್ವತಿಗೆ ಕರೆ ಮಾಡಿದ್ದಾನೆ.

    ಮಲಯಾಳಂ ಖ್ಯಾತ ನಟಿ ಮಾಲಾ ಪಾರ್ವತಿಗೆ ಕರೆ ಮಾಡಿರುವ ನಕಲಿ ನಿರ್ದೇಶಕ, ತಾನು ಚಾರ್ಲಿ ಸಿನಿಮಾದ ಡೈರೆಕ್ಟರ್ ಎಂದು ಪರಿಚಯ ಮಾಡಿಕೊಂಡಿದ್ದಾನೆ. ತನ್ನ ಮುಂದಿನ ಚಿತ್ರಕ್ಕೆ ತಮ್ಮ ಡೇಟ್ ಬೇಕಾಗಿತ್ತು ಎಂದು ಕೇಳಿದ್ದಾನೆ. ನಾಲ್ಕೈದು ಬಾರಿ ಕರೆ ಮಾಡಿದಾಗ ಮಾಲಾಗೆ ಅನುಮಾನ ಬಂದು, ತಮಗೆ ಪರಿಚಿತ ಚಾರ್ಲಿ ಸಿನಿಮಾದ ತಂತ್ರಜ್ಞರೊಬ್ಬರಿಗೆ ಕರೆ ಮಾಡಿದ್ದಾರೆ. ಅವರು ಕಿರಣ್ ಗೆ ಕರೆ ಮಾಡಿ ವಿಷಯ ತಿಳಿಸಿದಾಗ ಸ್ವತಃ ಅಚ್ಚರಿಗೊಂಡಿದ್ದಾರೆ ಕಿರಣ್. ಇದನ್ನೂ ಓದಿ:ಜಯಶ್ರೀ ಜೊತೆ ಸೋನು ಶ್ರೀನಿವಾಸ್ ಗೌಡ ಕಿರಿಕ್

    ಆ ನಕಲಿ ಡೈರೆಕ್ಟರ್ ನನ್ನು ಕಂಡು ಹಿಡಿಯಬೇಕು ಎಂದು ಮಾಲಾ ಅವರಿಗೆ, ನಕಲಿ ಡೈರೆಕ್ಟರ್ ಜೊತೆ ಕಾನ್ಫರೆನ್ಸ್ ಕಾಲ್ ಹಾಕಲು ಹೇಳಿದ್ದಾರೆ. ಮಾಲಾ ಅದೇ ರೀತಿ ಮಾಡಿದಾಗ ನಕಲಿ ಡೈರೆಕ್ಟರ್ ಬಣ್ಣ ಬಯಲಾಗಿದೆ. ಕೂಡಲೇ ಅವರು ಆ ವ್ಯಕ್ತಿಯ ಮೇಲೆ ಸೈಬರ್ ಠಾಣೆಗೆ ದೂರು ದಾಖಲಿಸಿದ್ದಾರೆ. ಅಲ್ಲದೇ, ಈ ಅನುಭವವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಇಂತಹ ವ್ಯಕ್ತಿಗಳಿಂದ ದೂರವಿರಿ ಎಂದು ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಕಿರಣ್ ರಾಜ್, ನಾನೆಂದೂ ಆ ರೀತಿ ಕೆಲಸ ಮಾಡುವವನು ಅಲ್ಲ. ಹಾಗಾಗಿ ನನ್ನ ಹೆಸರಿನಲ್ಲಿ ಈ ರೀತಿ ಕೆಲಸ ನಡೆದಿದೆ ಎಂದಾಗ ಶಾಕ್ ಆದೆ. ಆ ವ್ಯಕ್ತಿಗೆ ಪಾಠ ಕಲಿಸಲೇಬೇಕು ಎಂದು ಮಾಲಾ ಅವರಿಗೆ ತಿಳಿಸಿದೆ. ಅವರು ಕೂಡ ನಾನು ಹೇಳಿದಂತೆ ಮಾಡಿದರು. ಕೊನೆಗೂ ಆ ನಕಲಿ ಡೈರೆಕ್ಟರ್ ನನ್ನು ಕಂಡು ಹಿಡಿದೆವು. ಆದರೆ, ಈ ಘಟನೆ ನಂತರ ಅವನು ಮೊಬೈಲ್ ಆಫ್ ಮಾಡಿಕೊಂಡಿದ್ದಾನೆ ಎನ್ನುತ್ತಾರೆ ಕಿರಣ್.

    Live Tv
    [brid partner=56869869 player=32851 video=960834 autoplay=true]

  • ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಲಿಂಗುಸ್ವಾಮಿಗೆ ಆರು ತಿಂಗಳು ಜೈಲು ಶಿಕ್ಷೆ

    ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಲಿಂಗುಸ್ವಾಮಿಗೆ ಆರು ತಿಂಗಳು ಜೈಲು ಶಿಕ್ಷೆ

    ಭೀಮ, ಸಂಕೋಳಿ, ರನ್ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ತಮಿಳಿನ ಖ್ಯಾತ ನಿರ್ದೇಶಕ ಲಿಂಗುಸ್ವಾಮಿ ಅವರಿಗೆ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಕೇವಲ ಲಿಂಗುಸ್ವಾಮಿಗೆ ಮಾತ್ರವಲ್ಲ, ಅವರ ಸಹೋದರ, ಖ್ಯಾತ ನಿರ್ಮಾಪಕರೂ ಆಗಿರುವ ಸುಭಾಷ್ ಚಂದ್ರ ಬೋಸ್ ಅವರಿಗೂ ಅದೇ ಶಿಕ್ಷೆಯನ್ನು ಪ್ರಕಟಿಸಿದೆ.

    ಎನ್ನಿ ಏಳು ನಾಲ್ ಸಿನಿಮಾ ಮಾಡಲು ಲಿಂಗುಸ್ವಾಮಿ ಮತ್ತು ಸಹೋದರ ಪಿವಿಪಿ ಎಂಬ ಕಂಪೆನಿಯಿಂದ ಸಾಲವಾಗಿ 1.03 ಕೋಟಿ ಪಡೆದಿದ್ದರಂತೆ. ಸಾಲವನ್ನು ತೀರಿಸುವುದಕ್ಕಾಗಿ 35 ಲಕ್ಷ ರೂಪಾಯಿ ಚೆಕ್ ಕೂಡ ನೀಡಿದ್ದರಂತೆ. ಆದರೆ, ಲಿಂಗುಸ್ವಾಮಿ ಖಾತೆಯಲ್ಲಿ ಹಣವಿಲ್ಲದ ಕಾರಣಕ್ಕಾಗಿ ಚೆಕ್ ಬೌನ್ಸ್ ಆಗಿದೆ. ನಂತರವೂ ಹಣ ಕೊಡಲು ಸತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಿವಿಪಿ ಸಂಸ್ಥೆ ಚೆಕ್ ಬೌನ್ಸ್ ಕೇಸು ದಾಖಲಿಸಲಾಗಿತ್ತು. ಅದೀಗ ನಿಜವೆಂದು ಸಾಬೀತಾಗಿದೆ. ಇದನ್ನೂ ಓದಿ:ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣನ ಹುಡುಕಿಕೊಂಡು ಬಂತು ಮತ್ತೊಂದು ಬಾಲಿವುಡ್ ಸಿನಿಮಾ

    ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಲಿಂಗುಸ್ವಾಮಿ ಮತ್ತು ಅವರ ಸಹೋದರ ಸುಭಾಷ್ ಚಂದ್ರ ಬೋಸ್, ಇಬ್ಬರೂ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಕೊಟ್ಟಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ. ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿ ಸಕ್ರಿಯರಾಗಿರುವ ಇವರು, ಇದೇ ಮೊದಲ ಬಾರಿಗೆ ಇಂಥದ್ದೊಂದು ಸಂಕಷ್ಟಕ್ಕೆ ಎದುರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಮ್ಯಾಕೃಷ್ಣ- ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್? ಅಸಲಿ ವಿಚಾರ ಬಿಚ್ಚಿಟ್ಟ ಕೃಷ್ಣವಂಶಿ

    ರಮ್ಯಾಕೃಷ್ಣ- ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್? ಅಸಲಿ ವಿಚಾರ ಬಿಚ್ಚಿಟ್ಟ ಕೃಷ್ಣವಂಶಿ

    ಕ್ಷಿಣ ಭಾರತದ ಸ್ಟಾರ್ ನಟಿ ರಮ್ಯಾಕೃಷ್ಣ ವಯಸ್ಸು 50 ವರ್ಷವಾದ್ದರೂ ಈಕೆಯ ಮೇಲಿರುವ ಕ್ರೇಜ್ ಒಂದಚೂರು ಕಡಿಮೆಯಾಗಿಲ್ಲ. ಪವರ್‌ಫುಲ್ ಪಾತ್ರಗಳ ಮೂಲಕ ಅಭಿಮಾನಿಗಳನ್ನ ರಂಜಿಸುತ್ತಲೇ ಬಂದಿದ್ದಾರೆ. ಈಗ ತಮ್ಮ ಖಾಸಗಿ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ರಮ್ಯಾಕೃಷ್ಣ ಮತ್ತು ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್ ವದಂತಿಗೆ ಪತಿ ಕೃಷ್ಣವಂಶಿ ರಿಯಾಕ್ಟ್ ಮಾಡಿದ್ದಾರೆ.

    ಕನ್ನಡದ ಜತೆ ಪರಭಾಷೆ ಚಿತ್ರಗಳಲ್ಲಿ ನೇಮು ಫೇಮು ಗಿಟ್ಟಿಸಿಕೊಂಡಿರುವ ನಟಿ ರಮ್ಯಾಕೃಷ್ಣಗೆ ಬಾಹುಬಲಿ ಚಿತ್ರದ ಶಿವಗಾಮಿ ಪಾತ್ರ ಮತ್ತಷ್ಟು ಹೆಸರನ್ನ ತಂದುಕೊಟ್ಟಿತ್ತು. ಸದಾ ಸಿನಿಮಾಗಳ ವಿಚಾರವಾಗಿ ಹೈಪ್ ಕ್ರಿಯೇಟ್ ಮಾಡೋ ನಟಿ ಈಗ ಡಿವೋರ್ಸ್ ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪತಿ ಕೃಷ್ಣವಂಶಿ ಅಸಲಿ ವಿಚಾರ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

    2003ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದ ಈ ಜೋಡಿಯ ಪ್ರೀತಿಗೆ ಸಾಕ್ಷಿಯಾಗಿ ಒಬ್ಬ ಮಗನಿದ್ದಾನೆ. ಇತ್ತೀಚೆಗಷ್ಟೇ ನೀಡಿದ ಸಂದರ್ಶನದಲ್ಲಿ ಕೃಷ್ಣವಂಶಿಗೆ ನಿರೂಪಕಿ ಡಿವೋರ್ಸ್ ವದಂತಿಯ ಕುರಿತು ಪ್ರಶ್ನಿಸಿದ್ದಾರೆ. ಫ್ಯಾಮಿಲಿ ಜವಬ್ದಾರಿಗೆ ಹೆದರಿ ಮದುವೆಯೇ ಬೇಡವೆಂದು ಅಂದುಕೊಂಡಿದ್ದೆ, ನಂತರ ರಮ್ಯಾಕೃಷ್ಣ ಅವರೊಂದಿಗೆ ಮದುವೆಯಾಯಿತು. ಯಾವುದೇ ನಿಯಮಗಳನ್ನ ನನ್ನ ಮೇಲೆ ಹೇರದೆ, ನನನ್ನಷ್ಟಕ್ಕೆ ಇರೋಕೆ ಬಿಟ್ಟಳು. ಇನ್ನು ಅವರೊಂದಿಗೆ ಡಿವೋರ್ಸ್ ಅಂತೀರಾ, ಇದರಲ್ಲಿ ಸತ್ಯಾಂಶವಿಲ್ಲ. ಪಬ್ಲಿಕ್ ಫಿಗರ್ ಅಂದಮೇಲೆ ಇವೆಲ್ಲಾ ಕಾಮನ್ ಎಂದು ನಿರ್ದೇಶಕ ಕೃಷ್ಣವಂಶಿ ಮಾತನಾಡಿದ್ದಾರೆ. ಡಿವೋರ್ಸ್ ವದಂತಿಗೆ ತಮ್ಮ ಉತ್ತರದ ಮೂಲಕ ಅಂತ್ಯ ಹಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಮಿಳು ನಟ ಪ್ರತಾಪ್ ಪೋಥೆನ್ ಚೆನ್ನೈ ಫ್ಲಾಟ್ ನಲ್ಲಿ ಶವವಾಗಿ ಪತ್ತೆ

    ತಮಿಳು ನಟ ಪ್ರತಾಪ್ ಪೋಥೆನ್ ಚೆನ್ನೈ ಫ್ಲಾಟ್ ನಲ್ಲಿ ಶವವಾಗಿ ಪತ್ತೆ

    ಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಮತ್ತು ಹನ್ನೆರಡಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಪ್ರತಾಪ್ ಪೋಥೆನ್ ತಮ್ಮ ಚೆನ್ನೈನ ಅಪಾರ್ಟಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 69ರ ವಯಸ್ಸಿನ ಪ್ರತಾಪ್, ಕೇರಳ ಮೂಲದವರು. ಮಲಯಾಳಂ ಸಿನಿಮಾ ರಂಗದಿಂದ ವೃತ್ತಿ ಆರಂಭಿಸಿದ್ದ ಇವರು, ನಂತರ ತೆಲುಗು, ಹಿಂದಿ, ತಮಿಳಿನಲ್ಲೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ಇದನ್ನೂ ಓದಿ:ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದವರಿಗೆ ಖಡಕ್ ವಾರ್ನಿಂಗ್ ಕೊಟ್ಟ ಫ್ಯಾಶನ್‌ ಡಿಸೈನರ್‌ ಮಸಾಬ ಗುಪ್ತಾ

    ಪ್ರತಾಪ್ ನಿಧನಕ್ಕೆ ಅನಾರೋಗ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಹಲವು ದಿನಗಳಿಂದ ಇವರು ಅನಾರೋಗ್ಯದಿಂದ ಬಳಲುತ್ತಿದ್ದರು. ಒಂಟಿಯಾಗಿ ವಾಸಿಸುತ್ತಿದ್ದರಿಂದ ಸಾವಿನ ಬಗ್ಗೆ ನಿಖರ ಮಾಹಿತಿ ತಿಳಯಬೇಕಿದೆ. ಹಿರಿಯ ಕಲಾವಿದರ ನಿಧನಕ್ಕೆ ತಮಿಳು ಮತ್ತು ಮಲಯಾಳಂ ಸಿನಿಮಾ ರಂಗ ಕಂಬನಿ ಮಿಡಿದಿದೆ. ಅನೇಕ ಅಭಿಮಾನಿಗಳು ಕೂಡ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದಾರೆ.

    ಪ್ರತಾಪ್ ಪೋಥೆನ್ ಅವರ ಖಾಸಗಿ ಬದುಕಿ ಅಷ್ಟೊಂದು ನೆಮ್ಮದಿಯಾಗಿರಲಿಲ್ಲ ಎಂದು ಹೇಳಲಾಗುತ್ತಿದೆ. ಜನಪ್ರಿಯತೆಯ ಉತ್ತುಂಗದಲ್ಲಿರುವಾಗ ನಟಿ ರಾಧಿಕಾ ಅವರನ್ನು ಮದುವೆಯಾಗಿದ್ದರಂತೆ. ಸಪ್ತಪದಿ ತುಳಿದ ಒಂದೇ ವರ್ಷಕ್ಕೆ ಈ ವಿವಾಹ ಮುರಿದು ಬಿದ್ದಿದೆ. ನಂತರ ಅಮಲಾ ಸತ್ಯನಾಥ್ ಎನ್ನುವವರ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. 22 ವರ್ಷದ ಬಳಿಕ ಅವರೊಂದಿಗೆ ವಿಚ್ಚೇದನ ಪಡೆದಿದ್ದಾರೆ. ಈ ಜೋಡಿಗೆ ಒಂದು ಹೆಣ್ಣು ಮಗು ಕೂಡ ಇದೆ.

    ನಟನೆ ಮತ್ತ ನಿರ್ದೇಶನ ಎರಡರಲ್ಲೂ ಪಳಗಿದ್ದ ಪ್ರತಾಪ್ ಅವರ ನಿರ್ದೇಶನದಲ್ಲಿ ಮೂಡಿ ಬಂದ ಮೀಂದು ಒರು ಕಾದಲ್ ಕಥೈ ಸಿನಿಮಾ ಇವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಈ ಸಿನಿಮಾ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿತ್ತು. ನಟನೆ ಮತ್ತು ನಿರ್ದೇಶನಕ್ಕಾಗಿ ಮೂರು ಬಾರಿ ಫಿಲ್ಮ್ ಫೇರ್ ಪ್ರಶಸ್ತಿಯನ್ನೂ ಇವರು ಪಡೆದಿದ್ದಾರೆ. ಅನಾರೋಗ್ಯದ ನಡುವೆಯೂ ಅವರು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಾಪ್ ನಿಧನಕ್ಕೆ ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಿಂದ ಲೆಕ್ಕ ಕೇಳಿದ ಆಡಳಿತಾಧಿಕಾರಿ

    ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಿಂದ ಲೆಕ್ಕ ಕೇಳಿದ ಆಡಳಿತಾಧಿಕಾರಿ

    ರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಲೆಕ್ಕಪತ್ರ ಯಾವುದೂ ಸರಿ ಇಲ್ಲ ಎಂದು ಹಲವು ವರ್ಷಗಳಿಂದ ಅದರ ಸದಸ್ಯರೇ ಮಾತನಾಡುತ್ತಿದ್ದರು. ಈ ಸಂಬಂಧ ಅನೇಕ ಬಾರಿ ಗಲಾಟೆಗಳು ನಡೆದಿವೆ. ಅಧಿಕಾರದ ಚುಕ್ಕಾಣೆ ಹಿಡಿಯಲು ಹೈಡ್ರಾಮಾ ಕೂಡ ನಡೆದಿತ್ತು. ಇದೀಗ ಇಬ್ಬರು ನಿರ್ದೇಶಕರಿಗೆ ಲೆಕ್ಕ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ ಆಡಳಿತಾಧಿಕಾರಿ. ಈ ಕುರಿತು ಅವರು ಹಿಂದಿನ ಅಧ್ಯಕ್ಷರುಗಳಾದ ಡಾ.ನಾಗೇಂದ್ರ ಪ್ರಸಾದ್ ಹಾಗೂ ಟೇಸಿ ವೆಂಕಟೇಶ್ ಅವರಿಗೆ ತಿಳುವಳಿಕೆ ಪತ್ರ ಕಳುಹಿಸಿದ್ದಾರೆ.

    ಆಡಳಿತಾಧಿಕಾರಿ ಎಸ್.ಜಿ.ಮಂಜುನಾಥ್ ಸಿಂಗ್ ಕಳುಹಿಸಿರುವ ಪತ್ರದಲ್ಲಿ, “ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದಲ್ಲಿ ಡ್ರಾ ಮಾಡಿರುವಂತಹ ಹಣದ ಖರ್ಚಿನ ವಿವರ ನೀಡುವ ಬಗ್ಗೆ ಟೇಸಿ ವೆಂಕಟೇಶ್ ಆದ ನೀವು ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾಗಿ ನಿಮ್ಮ ಅಧಿಕಾರ ಅವಧಿಯಲ್ಲಿ ಬ್ಯಾಂಕಿನಿಂದ ವಿವಿಧ ದಿನಾಂಕಗಳಲ್ಲಿ ಹಣವನ್ನು ಡ್ರಾ ಮಾಡಿರುತ್ತೀರಿ. ಆದರೆ ದಾಖಲೆಗಳನ್ನು ಪರಿಶೀಲಿಸಿದ ನಿಮ್ಮ ಅವಧಿಯಲ್ಲಿ ಡ್ರಾ ಮಾಡಿದ ಹಣಕ್ಕೆ ಸಂಬಂಧಿಸಿದಂತೆ ಕಾರ್ಯಕಾರಿ ಸಮಿತಿ ನಡಾವಳಿ, ವೋಚರ್ಸ್, ನಗದು ಪುಸ್ತಕವನ್ನು ಈ ನೋಟಿಸ್ ನೀಡಿದ ಹತ್ತು ದಿನಗಳೊಳಗಾಗಿ ಸಲ್ಲಿಸತಕ್ಕದ್ದು. ತಪ್ಪಿದ್ದಲ್ಲಿ ನಿಮ್ಮ ವಿರುದ್ಧ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರಡಿ ಸೂಕ್ತ ಕ್ರಮ ಜರುಗಿಸಲಾಗುವುದು’ ಎಂದು ಇಂದು ನೋಟಿಸ್ ಕಳುಹಿಸಲಾಗಿದೆ. ಇದನ್ನೂ ಓದಿ:ಅನಾಥ ಮಹಿಳೆಗೆ ಮನೆ ಕಟ್ಟಿಸಿಕೊಟ್ಟ ಕಿಚ್ಚ ಸುದೀಪ್

    ಮಾಜಿ ಅಧ್ಯಕ್ಷರಾದ ವಿ. ನಾಗೇಂದ್ರ ಪ್ರಸಾದ್ ಅವರಿಗೂ ಇದೇ ಮಾದರಿಯ ಪತ್ರವನ್ನು ಕಳುಹಿಸಲಾಗಿದ್ದು, ಅವರಿಗೂ ನೋಟಿಸ್ ಕಳುಹಿಸಿದ ಹತ್ತು ದಿನಗಳೊಳಗೆ ಡ್ರಾ ಮಾಡಿದ ಹಣಕ್ಕೆ ಸಂಬಂಧಿಸಿದಂತೆ ಕಾರ್ಯಕಾರಿ ಸಮಿತಿ ನಡಾವಳಿ, ವೋಚರ್ಸ್, ನಗದು ಪುಸ್ತಕವನ್ನು ಈ ನೋಟಿಸ್ ನೀಡಿದ ಹತ್ತು ದಿನಗಳೊಳಗಾಗಿ ಸಲ್ಲಿಸತಕ್ಕದ್ದು. ತಪ್ಪಿದ್ದಲ್ಲಿ ನಿಮ್ಮ ವಿರುದ್ಧ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರಡಿ ಸೂಕ್ತ ಕ್ರಮ ಜರುಗಿಸಲಾಗುವುದೆಂದು ನೋಟಿಸ್ ಕಳುಹಿಸಿದ್ದಾರೆ.

    Live Tv

  • ಮಲಯಾಳಂ ನಟಿ ಅಂಬಿಕಾ ರಾವ್ ನಿಧನ

    ಮಲಯಾಳಂ ನಟಿ ಅಂಬಿಕಾ ರಾವ್ ನಿಧನ

    ಮಾಲಿವುಡ್‌ನ ನಟಿ ಮತ್ತು ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದ ಅಂಬಿಕಾ ರಾವ್ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ರಾತ್ರಿ ಹೃದಯ ಸ್ತಂಭನದಿಂದ ನಿರ್ದೇಶಕಿ ಅಂಬಿಕಾ ನಿಧನರಾಗಿದ್ದಾರೆ.

    `ಕುಂಬಳಂಗಿ ನೈಟ್ಸ್’ ಖ್ಯಾತಿಯ ಮಲಯಾಳಂ ನಟಿ ಕಮ್ ನಿರ್ದೇಶಕಿ ಅಂಬಿಕಾ ರಾವ್ ಸೋಮವಾರ (ಜೂ.27) ರಾತ್ರಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಸುಮಾರು 10.30ಕ್ಕೆ ನಟಿ ಅಂಬಿಕಾ ಕೊನೆಯುಸಿರೆಳೆದಿದ್ದಾರೆ.ಕೋವಿಡ್ ಒಳಗಾದ ನಂತರ ನಟಿಯ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದಕ್ಕೆ ಸೂಕ್ತ ಚಿಕಿತ್ಸೆಯು ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಇದನ್ನೂ ಓದಿ:ನಿರೂಪಕಿ ಅನುಶ್ರೀಗೆ ಗಿಫ್ಟ್ ನೀಡಿದ ಶಿವರಾಜ್‌ಕುಮಾರ್

    2002ರಲ್ಲಿ `ಕೃಷ್ಣ ಗೋಪಾಲಕೃಷ್ಣ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪರಿಚಿತರಾದ ಸಹಾಯಕ ನಿರ್ದೇಶಕಿಯಾಗಿ ಪ್ರವೇಶಿಸಿದ್ದರು. ಮಮ್ಮುಟಿ ಮತ್ತು ಪೃಥ್ವಿರಾಜ್ ಸುಕುಮಾರನ್ ನಟನೆಯ ಚಿತ್ರದಲ್ಲಿ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿದ್ದಾರೆ. ನಟಿ, ನಿರ್ದೇಶಕಿಯಾಗಿ ಗುರುತಿಸಿಕೊಂಡಿರುವ ಅಂಬಿಕಾ ಅಕಾಲಿಕ ನಿಧನಕ್ಕೆ ಚಿತ್ರರಂಗ ಸಂತಾಪ ಸೂಚಿಸಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ಕೂಡ ನಟಿ ಸಾವಿಗೆ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

    Live Tv

  • ಬಾಲಿವುಡ್ ಗೆ ನಿರ್ದೇಶಕ ಹರಿಸಂತು ಎಂಟ್ರಿ : ಜುಲೈನಿಂದ ಲಂಡನ್ ನಲ್ಲಿ ಶೂಟಿಂಗ್

    ಬಾಲಿವುಡ್ ಗೆ ನಿರ್ದೇಶಕ ಹರಿಸಂತು ಎಂಟ್ರಿ : ಜುಲೈನಿಂದ ಲಂಡನ್ ನಲ್ಲಿ ಶೂಟಿಂಗ್

    ಕ್ಷಿಣ ಭಾರತದ ಸಿನಿಮಾ ಮೇಕರ್ ಗಳ  ಕಥಾವಸ್ತು, ಮೇಕಿಂಗ್ ಶೈಲಿ, ಭಾರತೀಯ ಚಿತ್ರರಂಗವನ್ನ ಬೆರಗುಳೊಸ್ತಿದೆ, ಇಂತಹದೊಂದು ಪರ್ವ ಈಗ ಭಾರತೀಯ ಚಿತ್ರರಂಗದಲ್ಲಿ ಬಿರುಗಾಳಿಯಂತೆ ಆವರಿಸಿದೆ. ಇವತ್ತಿಗೆ ಸೌತ್ ಸಿನಿಮಾಗಳಿಂದ ಸ್ಫೂರ್ತಿಗೊಳ್ತಿದೆ ಬಾಲಿವುಡ್. ರಿಮೇಕ್ ಮಾಡೋದಕ್ಕೆ ಮುಗಿಬಿದಿದೆ. ದಕ್ಷಿಣದ ಸಿನಿಮಾಗಳ ಡಬ್ಬಿಂಗ್ ವರ್ಶನ್ ಗೆ ಭಾರಿ ಬೇಡಿಕೆ ಶುರುವಾಗಿದೆ.

    ದಕ್ಷಿಣ ಭಾರತದ ಸಿನಿಮಾ ಮೇಕರ್ ಗಳ ಮೇಕಿಂಗ್ ಶೈಲಿ ಬಾಲಿವುಡ್ ಮಂದಿಯ ನಿದ್ದೆ ಗೆಡೆಸಿದೆ.  ಬಾಹುಬಲಿ, ಕೆ.ಜಿ.ಎಫ್, ಪುಷ್ಪ,ಆರ್,ಆರ್.ಆರ್ ಅಂತ ಸಿನಿಮಾಗಳು ಸಂಚಲ ಸೃಷ್ಟಿಸಿವೆ. ಎಸ್ .ಎಸ್ ರಾಜಮೌಳಿ, ಪ್ರಶಾಂತ್ ನೀಲ್ ಅಂತ ನಿರ್ದೇಶಕರು, ಸಿನಿಮಾ ಅನ್ನೋದು ಭಾಷೆಗಳನ್ನ ಮೀರಿದ ಮಾಧ್ಯಮ ಅದು ಎಲ್ಲಾ ಕಡೆಯೂ ಸಲ್ಲುವಂತಹದ್ದು ಅನ್ನೋದನ್ನ ಸಾರಿ ಹೇಳಿದ್ದಾರೆ.  ಇದನ್ನೂ ಓದಿ: ಪೃಥ್ವಿ ಅಂಬರ್ ಮತ್ತು ಪ್ರಮೋದ್ ಕಾಂಬಿನೇಷನ್ ಚಿತ್ರಕ್ಕೆ ಚಾಲನೆ

    ಇಂತಹ ಹೊತ್ತಲ್ಲೇ ಕನ್ನಡದ ಖ್ಯಾತ ನಿರ್ದೇಶಕ, ಹಾಂಟಿಂಗ್ ಲವ್ ಸ್ಟೋರಿಗಳ ಫಿಲಂ ಮೇಕರ್ ಹರಿ ಸಂತು, ನೇರವಾಗಿ ಬಾಲಿವುಡ್ ನಲ್ಲಿ ಸಿನಿಮಾ ಮಾಡೋ ಅವಕಾಶ ಪಡೆದಿದ್ದಾರೆ, ದಶಕಗಳ ಹಿಂದೆ ಕನ್ನಡದ ಕೆಲವು ಹಿರಿಯ ನಿರ್ದೇಶಕರು  ಹಿಂದಿ ಸಿನಿಮಾ ಮಾಡಿದ್ದನ್ನ ಬಿಟ್ರೆ, ಇದೀಗ ವರ್ಷಗಳ  ನಂತ್ರ ಹರಿ ಸಂತು ಆ ಸಾಲಿಗೆ ಸೇರ್ತಿದ್ದಾರೆ.

    ಲವ್ ಜಾನರ್ ಸಿನಿಮಾಗಳ ನಿಪುಣ ಹರಿಸಂತಚು ಚೊಚ್ಚಲ ಬಾಲಿವುಡ್ ಚಿತ್ರಕ್ಕೆ ಲವ್ ಸ್ಟೋರಿಯನ್ನೇ ಆಯ್ಕೆ ಮಾಡಿಕೊಂಡಿದ್ದು, ಚಿತ್ರಕ್ಕೆ ಪಪ್ಪಿ ಲವ್ ಅನ್ನೋ ಮುದ್ದಾದ ಟೈಟಲ್ ನ ಇಟ್ಟಿದ್ದಾರೆ. ವೆಬ್ ಸೀರಿಸ್ ಗಳಿಂದ ಖ್ಯಾತಿ ಗಳಿಸಿರೋ ತನುಜ್ ವಿರ್ವಾನಿ, ತ್ರಿಧಾ ಚೌಧರಿ, ಸಪ್ನಪಬ್ಬಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ತಿದ್ದು, ನಿಕೇತ್ ಪಾಂಡೆ  ಬರವಣಿಗೆ ಚಿತ್ರಕ್ಕಿರಲಿದ್ದು, ರಾಜಾರಾಂ ಛಾಯಾಗ್ರಹಣ ಚಿತ್ರಕ್ಕಿರಲಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ:ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯಗೆ ಜಾಮೀನು

    ಭುವನ್ ಮೂವೀಸ್ ಸುರೇಶ್ ಹಾಗೂ ಪದ್ಮಾವತಿ ಪಿಚ್ಚರ್ಸ್ ಅವಿನಾಶ್ ಡ್ಯಾನಿಯಲ್ ಚಾರ್ಲ್ಸ್ ಯುಕೆ ಮೂಲಕದ ಬ್ಲೂ ಬ್ಲಿಂಗ್ ಪ್ರೊಡಕ್ಷನ್ಸ್ ನ ವಿಪುಲ್ ಶರ್ಮಾ ಸಹಯೋಗದಲ್ಲಿ ಈ ಸಿನಿಮಾ ನಿರ್ಮಾಣವಾಗ್ತಿದೆ, ಜುಲೈ ತಿಂಗಳಲ್ಲಿ ಚಿತ್ರೀಕರಣ ಶುರು ಮಾಡಲಿದ್ದು, ಯುಕೆ ಲಂಡನ್ ನಲ್ಲೇ ಸಂಪೂರ್ಣ ಚಿತ್ರೀಕರಣ ನಡೆಯುತ್ತಿರೋದು ವಿಶೇಷ.

    Live Tv

  • ಅಸಲಿ ‘ಕೆಜಿಎಫ್’ ಕಥೆ ಹೇಳ್ತಾರಂತೆ ತಮಿಳಿನ ಕಬಾಲಿ ಖ್ಯಾತಿಯ ನಿರ್ದೇಶಕ ಪಾ.ರಂಜಿತ್

    ಅಸಲಿ ‘ಕೆಜಿಎಫ್’ ಕಥೆ ಹೇಳ್ತಾರಂತೆ ತಮಿಳಿನ ಕಬಾಲಿ ಖ್ಯಾತಿಯ ನಿರ್ದೇಶಕ ಪಾ.ರಂಜಿತ್

    ಮಿಳಿನ ಖ್ಯಾತ ನಿರ್ದೇಶಕ, ರಜನಿಕಾಂತ್ ಸೇರಿದಂತೆ ಹಲವು ಸ್ಟಾರ್ ನಟರುಗಳಿಗೆ ಸಿನಿಮಾ ಮಾಡಿರುವ ಪಾ.ರಂಜಿತ್ ಕನ್ನಡಿಗರಿಗೆ ತಲೆಗೆ ಹುಳು ಬಿಟ್ಟುಕೊಳ್ಳುವಂತಹ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ಅದರಲ್ಲೂ ಕನ್ನಡ ಸಿನಿಮಾ ರಂಗವನ್ನು ಜಗತ್ತಿಗೆ ಪರಿಚಯಿಸಿದ ‘ಕೆಜಿಎಫ್’ ಸಿನಿಮಾದ ಅಸಲಿ ಕಥೆಯನ್ನೂ ಅವರು ಬಿಚ್ಚಿಟ್ಟಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬಂದ ಕೆಜಿಎಫ್ ಸಿನಿಮಾ ಅದೊಂದು ಕಾಲ್ಪನಿಕ ಕಥೆಯನ್ನು ಹೊಂದಿತ್ತು. ತಾವು ಅಸಲಿ ಕಥೆಯನ್ನು ಹೇಳುವುದಾಗಿ ತಿಳಿಸಿದ್ದಾರೆ.

    ಕೆಜಿಎಫ್ ಸಿನಿಮಾ ಬರುವ ಮುಂಚೆಯೇ ಅವರು ಕೆಜಿಎಫ್ ನೆಲದ ಕರುಣಾಜನಕ ನೈಜ ಕಥೆಯನ್ನು ಸಿನಿಮಾ ಮಾಡಲು ಹೊರಟಿದ್ದರಂತೆ. ಆದರೆ, ಕನ್ನಡದ ಕೆಜಿಎಫ್ ಸಿನಿಮಾ ಬಂದಿದ್ದರಿಂದ ಅದನ್ನು ಮುಂದೆಹಾಕಿದ್ದರಂತೆ. ಈ ವಿಷಯವನ್ನು ಸ್ವತಃ ರಂಜಿತ್ ಅವರೇ ಕಾನ್ ಫೆಸ್ಟಿವೆಲ್ ನಲ್ಲಿ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಅಲ್ಲದೇ, ಕೆಜಿಎಫ್ ಸಿನಿಮಾದ ಪಾತ್ರಗಳು ಕಾಲ್ಪನಿಕವಾಗಿದ್ದವು. ರಂಜಿತ್ ಮಾಡಿರುವ ಕಥೆಯಲ್ಲಿ ಬಹುತೇಕ ಪಾತ್ರಗಳು ಆ ನೆಲದಲ್ಲಿ ಜೀವಿಸಿದ್ದವು ಎಂದಿದ್ದಾರೆ. ಇದನ್ನೂ ಓದಿ: ದಿಗಂತ್ ಡಿಸ್ಚಾರ್ಜ್ ಬೆನ್ನಲ್ಲೇ ಫ್ಯಾನ್ಸ್‌ಗೆ ಧನ್ಯವಾದ ತಿಳಿಸಿದ ನಟಿ ಐಂದ್ರಿತಾ ರೇ

    ಈಗಾಗಲೇ ಅವರು ಕಥೆಯನ್ನು ಬರೆದು ಮುಗಿಸಿದ್ದಾರಂತೆ. ಚಿಯಾನ್ ವಿಕ್ರಮ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರಂತೆ. ಕೆಜಿಎಫ್ ಹುಟ್ಟಿದ್ದು ಹೇಗೆ? ಚಿನ್ನಕ್ಕಾಗಿ ಬ್ರಿಟಿಷರು ಹೂಡಿದ್ದ ಆಟವೇನು? ಈ ನೆಲದಲ್ಲಿ ತಮಿಳಿಗರ ಪಾತ್ರ ಏನಾಗಿತ್ತು? ಹೀಗೆ ಹಲವು ಸಂಗತಿಗಳನ್ನು ಚಿತ್ರದಲ್ಲಿ ತೋರಿಸಲಿದ್ದಾರಂತೆ. ಕನ್ನಡಿಗರಿಗಿಂತಲೂ ತಮಿಳಿಗರನ್ನು ಕರೆತಂದು ಈ ಚಿನ್ನದ ಗಣಿಯಲ್ಲಿ ಬಿಡುತ್ತಿದ್ದರಂತೆ ಬ್ರಿಟಿಷರು. ಪ್ರಮುಖವಾಗಿ ಕಥೆಯನ್ನು ಅವರು ಹೇಳಲಿದ್ದಾರಂತೆ.

    Live Tv

  • ‘ಮಂತ್ರ ಮಾಂಗಲ್ಯ’ ಮದುವೆ ಮೂಲಕ ಮಾದರಿಯಾದ ನಿರ್ದೇಶಕ ಕೆ.ಎಂ. ರಘು

    ‘ಮಂತ್ರ ಮಾಂಗಲ್ಯ’ ಮದುವೆ ಮೂಲಕ ಮಾದರಿಯಾದ ನಿರ್ದೇಶಕ ಕೆ.ಎಂ. ರಘು

    ರಸಂಗ, ತರ್ಲೆ ವಿಲೇಜ್ , ದೊಡ್ಡಹಟ್ಟಿ ಬೋರೇಗೌಡ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೆ.ಎಂ.ರಘು ನಿನ್ನೆ ಮೈಸೂರಿನ ಕುಮಾರಬೀಡುವಿನಲ್ಲಿ ಕೆ.ಆರ್.ಆಶಾ ಜೊತೆ ಸಪ್ತಪದಿ ತುಳಿದಿದ್ದಾರೆ. ತಮ್ಮ ಆಶಯದಂತೆ ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ಬೆಂಗಳೂರಿ ನಿವಾಸಿ ಕೆ.ಆರ್. ಆಶಾ ಅವರ ಜೊತೆ ನಿನ್ನೆ (ಮೇ 29) ಮಂತ್ರ ಮಾಂಗಲ್ಯ ಮಾಡಿಕೊಂಡಿರುವ ರಘುವಿಗೆ ಕನ್ನಡದ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಮಂತ್ರ ಮಾಂಗಲ್ಯ ಬೋಧನೆ ಮಾಡಿಸಿದರೆ, ಎರಡು ಕುಟುಂಬ ಸದಸ್ಯರು ಮತ್ತು ಆಪ್ತರು ಈ ಸರಳ ವಿವಾಹ ಮಹೋತ್ಸವಕ್ಕೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಬೆಂಗಳೂರಿನ ಪಿಇಎಸ್ ಕಾಲೇಜು ಉಪನ್ಯಾಸಕಿ ಆಗಿರುವ ಆಶಾ ಕೂಡ ಕುವೆಂಪು ಅವರ ತತ್ವಗಳಲ್ಲಿ ನಂಬಿಕೆ ಇಟ್ಟವರು. ಹಾಗಾಗಿ ರಘು ಮತ್ತು ಆಶಾ ತಮ್ಮ ಕುಟುಂಬಗಳನ್ನು ಒಪ್ಪಿಸಿ, ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ. ಖುಷಿಯಿಂದಲೇ ಎರಡು ಕುಟುಂಬಗಳು ಸತಿಪತಿಗೆ ಹಾರೈಸಿ, ಆಶೀರ್ವದಿಸಿದ್ದಾರೆ.

    ಹಲವಾರು ಚಿತ್ರಗಳನ್ನು ನಿರ್ದೇಶನ ಮಾಡಿರುವ ರಘು, ಈ ವರ್ಷ ಬೆಂಗಳೂರಿನ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ದೊಡ್ಡ ಹಟ್ಟಿ ಬೋರೇಗೌಡ ಚಿತ್ರಕ್ಕಾಗಿ ಪ್ರಶಸ್ತಿ ಕೂಡ ಪಡೆದಿದದ್ಆರೆ. ಪರಸಂಗ ಮತ್ತು ತರ್ಲೆ ವಿಲೇಜ್ ಚಿತ್ರಗಳು ಪ್ರೇಕ್ಷಕರ ಗಮನ ಸೆಳೆದಿವೆ.