Tag: Dispur

  • ಅಕ್ರಮವಾಗಿ ಸೆಕ್ಸ್‌ ಮೂವಿ ಶೂಟಿಂಗ್‌ – ಬಾಂಗ್ಲಾ ಮಹಿಳೆ ಸೇರಿ ಮೂವರು ಅರೆಸ್ಟ್‌

    ಅಕ್ರಮವಾಗಿ ಸೆಕ್ಸ್‌ ಮೂವಿ ಶೂಟಿಂಗ್‌ – ಬಾಂಗ್ಲಾ ಮಹಿಳೆ ಸೇರಿ ಮೂವರು ಅರೆಸ್ಟ್‌

    ದಿಸ್ಪುರ್‌: ಅಸ್ಸಾಂನ (Assam) ಗುವಾಹಟಿಯ ಹೋಟೆಲ್‌ ಒಂದರಲ್ಲಿ ಸೆಕ್ಸ್‌ ಮೂವಿ ಶೂಟಿಂಗ್‌ ಮಾಡುತ್ತಿದ್ದ ಆರೋಪದ ಮೇಲೆ ಬಾಂಗ್ಲಾದೇಶಿ (Bangladesh) ಮಹಿಳೆ ಸೇರಿದಂತೆ ಮೂವರನ್ನು ದಿಸ್ಪುರ್ (Dispur) ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಅಸ್ಸಾಂ ಮೂಲದ ಶಫಿಕುಲ್, ಜಹಾಂಗೀರ್ ಮತ್ತು ಬಾಂಗ್ಲಾದೇಶದ ನಿವಾಸಿ ಮೀನ್ ಅಖ್ತರ್ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಗುವಾಹಟಿಯ ಸೂಪರ್ ಮಾರ್ಕೆಟ್ ಪ್ರದೇಶದ ಹೋಟೆಲ್‌ ಒಂದರಲ್ಲಿ ಕೊಠಡಿಗಳನ್ನು ಬುಕ್ ಮಾಡಿದ್ದರು. ಅಲ್ಲಿ ಅವರು ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಲು ಯೋಜಿಸಿದ್ದಾರೆ ಎಂದು ತನಿಖಾಧಿಕಾರಿಗಳು ಶಂಕಿಸಿ ದಾಳಿ ನಡೆಸಿದ್ದರು.

    ಮೀನ್ ಅಖ್ತರ್ ಬಾಂಗ್ಲಾದೇಶ ಗಡಿಗೆ ಏಕಾಂಗಿಯಾಗಿ ಪ್ರಯಾಣಿಸಿ ಉದ್ಯೋಗದ ಸುಳ್ಳು ನೆಪದಲ್ಲಿ ಭಾರತವನ್ನು ಪ್ರವೇಶಿಸಿದ್ದಾಳೆ ಎಂದು ಮೂಲಗಳು ಬಹಿರಂಗಪಡಿಸಿವೆ. ಆಕೆ ವೀಸಾ ಅಥವಾ ಪಾಸ್‌ಪೋರ್ಟ್ ಇಲ್ಲದೇ ಅಸ್ಸಾಂಗೆ ಪ್ರವೇಶಿಸಿದ್ದಾಳೆ ಎಂದು ಆರೋಪಿಸಲಾಗಿದೆ.

    ಇದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಜಾಲಗಳ ಸಂಪರ್ಕದ ಬಗ್ಗೆ ಸಹ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ರಿವಾಲ್ವರ್ ಬಳಸಿ ನಾಲ್ಕು ತಿಂಗಳ ಗರ್ಭಿಣಿ ಪತ್ನಿಗೆ ಗುಂಡು ಹಾರಿಸಿದ ಪೊಲೀಸ್ ಪೇದೆ

    ರಿವಾಲ್ವರ್ ಬಳಸಿ ನಾಲ್ಕು ತಿಂಗಳ ಗರ್ಭಿಣಿ ಪತ್ನಿಗೆ ಗುಂಡು ಹಾರಿಸಿದ ಪೊಲೀಸ್ ಪೇದೆ

    ಡಿಸ್ಪುರ್: ನಾಲ್ಕು ತಿಂಗಳ ಗರ್ಭಿಣಿ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸ್ ಪೇದೆಯನ್ನು ಬಂಧಿಸಿರುವ ಘಟನೆ ಅಸ್ಸಾಂನ ಸದರ್‌ನಲ್ಲಿ ನಡೆದಿದೆ.

    ದಿಬ್ರುಗಢ್ ಜಿಲ್ಲೆಯ ಸದರ್ ಪೊಲೀಸ್ ಠಾಣೆ ಬಳಿಯ ತನ್ನ ಕ್ವಾರ್ಟರ್‌ ಲ್ಲಿಯೇ ಅಸ್ಸಾಂ ಪೊಲೀಸ್ ಪೇದೆಯೊಬ್ಬ ತನ್ನ ನಾಲ್ಕು ತಿಂಗಳ ಗರ್ಭಿಣಿ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಈ ಹಿನ್ನೆಲೆ ಆರೋಪಿ ವಿರುದ್ಧ ಸ್ಥಳೀಯರು ದೂರುಕೊಟ್ಟ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ:  ಬೆಂಗಳೂರು ಮ್ಯಾಚ್ ವೇಳೆ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು – ನಾಲ್ವರು ಅರೆಸ್ಟ್

    Assam Cop Kills Pregnant Wife With Service Revolver, Arrested

    ಏನಿದು ಘಟನೆ?
    ಪೊಲೀಸ್ ಪೇದೆ ಬಿಕಿ ಚೇತಿಯಾ ತನ್ನ ಸರ್ವಿಸ್ ರಿವಾಲ್ವರ್ ಬಳಸಿ ಪತ್ನಿ ಜಯಶ್ರೀ ಚೇತಿಯಾಗೆ ಗುಂಡು ಹಾರಿಸಿದ್ದಾನೆ. ಈ ದಂಪತಿ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇವರಿಬ್ಬರ ನಡುವೆ ಕೆಲವು ಕೌಟುಂಬಿಕ ಕಲಹವಿತ್ತು. ಘಟನೆ ನಡೆಯಬೇಕಾದರೆ ಬಿಕಿ ಮದ್ಯದ ಅಮಲಿನಲ್ಲಿದ್ದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬಿಕಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಕೌಟುಂಬಿಕ ಕಲಹದಿಂದಾಗಿ ತನ್ನ ಹೆಂಡತಿಯನ್ನು ಕೊಂದಿದ್ದಾನೆ. ಭಾನುವಾರ ಈ ಘಟನೆ ನಡೆದಿದೆ. ರಾತ್ರಿ ಗುಂಡು ತಗುಲಿದ ಮೇಲೆ ಜಯಶ್ರೀಯನ್ನು ಅಸ್ಸಾಂ ವೈದ್ಯಕೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಎಷ್ಟು ಪ್ರಯತ್ನಪಟ್ಟರೂ ಆಕೆಯನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲೆ ಸಾವು – ತಂದೆ ಸ್ಥಿತಿ ಚಿಂತಾಜನಕ!

    ಜಯಶ್ರೀ ಸಾವನ್ನಪ್ಪಿರುವುದನ್ನು ತೀವ್ರವಾಗಿ ವಿರೋಧಿಸಿದ ನೂರಾರು ಸ್ಥಳೀಯರು ಸೋಮವಾರ(ಇಂದು) ಬೆಳಗ್ಗೆ ದಿಬ್ರುಗಢ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಪೇದೆಯನ್ನು ಬಂಧಿಸಿದ್ದಾರೆ. ಪ್ರಸ್ತುತ ಪೊಲೀಸರು ಕೊಲೆಯ ಹಿಂದಿನ ಉದ್ದೇಶ ತಿಳಿಯಲು ತನಿಖೆ ಆರಂಭಿಸಿದ್ದಾರೆ.

     

  • ಚಹಾ ಮಾರಾಟ ಮಾಡ್ತಿದ್ದವ ಒಂದೇ ಪ್ರಯತ್ನಕ್ಕೆ NEET ಪಾಸ್ – ದೆಹಲಿಯಲ್ಲಿ AIIMS ಪ್ರವೇಶಕ್ಕೆ ಸಿದ್ಧ

    ಚಹಾ ಮಾರಾಟ ಮಾಡ್ತಿದ್ದವ ಒಂದೇ ಪ್ರಯತ್ನಕ್ಕೆ NEET ಪಾಸ್ – ದೆಹಲಿಯಲ್ಲಿ AIIMS ಪ್ರವೇಶಕ್ಕೆ ಸಿದ್ಧ

    ಡಿಸ್ಪುರ: ಅಸ್ಸಾಂನಲ್ಲಿ ಚಹಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬ NEET ಮೊದಲ ಪ್ರಯತ್ನದಲ್ಲೇ ಪಾಸ್ ಆಗಿದ್ದು, ದೆಹಲಿಯ ಏಮ್ಸ್ ನಲ್ಲಿ ಪ್ರವೇಶ ಪಡೆಯಲು ಸಿದ್ಧನಾಗಿದ್ದಾನೆ.

    ಎನ್‍ಇಇಟಿ ಪಾಸ್ ಆದ ವಿದ್ಯಾರ್ಥಿ 24 ವರ್ಷದ ರಾಹುಲ್ ದಾಸ್. ಈತ ತನ್ನ ತಾಯಿ ನಡೆಸುತ್ತಿದ್ದ ಅಂಗಡಿಯಲ್ಲಿ ಗ್ರಾಹಕರಿಗೆ ಚಹ ಕೊಡುತ್ತಿದ್ದನು. ರಾಹುಲ್ ದಾಸ್ ಹಲವು ಸವಾಲುಗಳನ್ನು ಎದುರಿಸಿದ್ದು, ಕೆಲಸ ಮತ್ತು ಓದು ಎರಡನ್ನೂ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾನೆ. ಪ್ರಸ್ತುತ ರಾಹುಲ್ ಚಹಾ ಮಾರಾಟ ಮಾಡುತ್ತಿದ್ದು, ಓದಿಕೊಂಡು ಎನ್‍ಇಇಟಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗಿದ್ದಾನೆ. ಕೊನೆಗೂ ರಾಹುಲ್ ಶ್ರಮಕ್ಕೆ ಅಂತಿಮವಾಗಿ ಫಲ ಸಿಕ್ಕಿದೆ. ಇದನ್ನೂ ಓದಿ: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ವಿವಾಹಿತನಿಗೆ 10 ವರ್ಷ ಜೈಲು, 25 ಸಾವಿರ ದಂಡ

    ಛಲ ಬಿಡಲಿಲ್ಲ!
    ರಾಹುಲ್ ಅವರ ಜೀವನ ಸುಲಭವಾಗಿರಲಿಲ್ಲ. ರಾಹುಲ್ ಅವರ ತಾಯಿ 11 ವರ್ಷಗಳ ಹಿಂದೆಯೇ ತನ್ನ ಪತಿಯಿಂದ ದೂರವಾಗಿ ಒಬ್ಬಂಟಿಯಾಗಿ ಇಬ್ಬರು ಮಕ್ಕಳನ್ನು ಸಾಕಿದರು. ರಾಹುಲ್ 12ನೇ ತರಗತಿ ನಂತರ ಮುಂದೆ ಓದಲು ಆಗಲಿಲ್ಲ. ಆದರೆ ತನ್ನ ಛಲವನ್ನು ಮಾತ್ರ ಆತ ಬಿಟ್ಟಿರಲಿಲ್ಲ.

    ರಾಹುಲ್‍ಗೆ ವೈದ್ಯನಾಗುವ ಕನಸು ಬೆಟ್ಟದಷ್ಟು ಇತ್ತು. ಆದರೆ ಅಸ್ಸಾಂ ಪಟಾಚಾರ್ಕುಚಿ ಚೌಕ್ ಪ್ರದೇಶದಲ್ಲಿನ ತನ್ನ ತಾಯಿಯ ಅಂಗಡಿಯಲ್ಲಿ ಗ್ರಾಹಕರಿಗೆ ಚಾಹ ಕೊಟ್ಟು ಜೀವನ ಸಾಗಿಸುತ್ತಿದ್ದನು. ಆದರೆ ಸಮಯ ಸಿಕ್ಕಾಗೆಲ್ಲ ಓದಿಕೊಳ್ಳುತ್ತಿದ್ದ. ಕೊನೆಗೂ ರಾಹುಲ್ ಪ್ರಯತ್ನಕ್ಕೆ ಫಲ ಸಿಕ್ಕಿದೆ.

    ಈ ಕುರಿತು ಮಾತನಾಡಿದ ರಾಹುಲ್, ನನ್ನ ತಾಯಿ ನಮಗಾಗಿ ಕಷ್ಟಪಡುವುದನ್ನು ನಾನು ನೋಡಿದ್ದೇನೆ. ನಾವು ಅಂಗಡಿಯಲ್ಲಿ ಬೇರೆ ಸಹಾಯಕರನ್ನು ಇಟ್ಟುಕೊಳ್ಳಲು ಸಾಧ್ಯವಾಗಲಿಲ್ಲ. ಶಾಲೆಯಿಂದ ಬಂದ ತಕ್ಷಣ ನಾನು ಅವಳಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುವುದನ್ನು ರೂಢಿಸಿಕೊಂಡಿದ್ದೆ. ನಾನು ಚಹಾವನ್ನು ತಯಾರಿಸಿ ಮಾರುತ್ತಿದೆ. ಸಮಯ ಸಿಕ್ಕಾಗೆಲ್ಲ ಅಧ್ಯಯನ ಮಾಡುತ್ತಿದೆ ಎಂದು ವಿವರಿಸಿದರು.

    Assam tea seller clears NEET in first attempt, set to take admission in  AIIMS-Delhi

    2015 ರಲ್ಲಿ ಅವರು ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಹಣದ ಕೊರತೆಯಿಂದ ತಮ್ಮ ಅಧ್ಯಯನವನ್ನು ನಿಲ್ಲಿಸಿಬೇಕಾಯಿತು. ಆದರೂ ಉನ್ನತ ಶಿಕ್ಷಣಕ್ಕಾಗಿ ರಾಹುಲ್ ಎರಡು ವರ್ಷಗಳ ನಂತರ ಪ್ಲಾಸ್ಟಿಕ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಮಾಡಲು ಸೆಂಟ್ರಲ್ ಇನ್‍ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ (CIPET) ಗೆ ಸೇರಿದ್ದು, ಮೂರು ವರ್ಷಗಳ ನಂತರ ಡಿಸ್ಟಿಂಕ್ಷನ್‍ನಲ್ಲಿ ಉತ್ತೀರ್ಣನಾದೆ. ಕೋವಿಡ್-19 ಮಧ್ಯೆಯೂ 2020ರ ಅಕ್ಟೋಬರ್‍ನಲ್ಲಿ ಗುವಾಹಟಿಯ ಬಹು-ರಾಷ್ಟ್ರೀಯ ಕಂಪನಿಯಲ್ಲಿ ‘ಎಂಜಿನಿಯರ್’ ಆಗಿ ಕೆಲಸವನ್ನು ಪ್ರಾರಂಭಿಸಿದೆ ಎಂದು ತಿಳಿಸಿದರು.

    From next year, NEET compulsory for admissions into AIIMS and JIPMER too-  Edexlive

    ನಾನು ಏನೇ ಮಾಡಿದರೂ ನನಗೆ ಕೆಲಸದಲ್ಲಿ ತೃಪ್ತಿ ಇರಲಿಲ್ಲ. ನಾನು ಯಾವಾಗಲೂ ವೈದ್ಯನಾಗಲು ಬಯಸುತ್ತಿದೆ. ನನ್ನ ಸೋದರ ಸಂಬಂಧಿಯೊಬ್ಬರು ದಂತ ಶಸ್ತ್ರಚಿಕಿತ್ಸಕರಾಗಿದ್ದಾರೆ. ಅವರು ನನಗೆ ಸ್ಫೂರ್ತಿಯಾಗಿದ್ದರು. ನನ್ನ ಓದಿಗೆ ಸಂಬಂಧಿಸಿದಂತೆ ಪುಸ್ತಕಗಳನ್ನು ಖರೀದಿಸಲು ನನ್ನ ಬಳಿ ಹಣವಿರಲಿಲ್ಲ. ಅದಕ್ಕೆ ನಾನು ನನ್ನ ಕೆಲಸವನ್ನು ಬಿಟ್ಟು ಆನ್‍ಲೈನ್‍ನಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಎನ್‍ಇಇಟಿ ಪರೀಕ್ಷೆ ಬರೆಯಲು ಸಿದ್ಧತೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಕನ್ನಡ ಮಾತಾಡಲ್ಲವೆಂದ ಬ್ಯಾಂಕ್ ಸಿಬ್ಬಂದಿ – ಮುತ್ತಿಗೆ ಹಾಕಿದ ರಕ್ಷಣಾ ವೇದಿಕೆ ಸದಸ್ಯರು

    ರಾಹುಲ್ ಬಗ್ಗೆ ನಮಗೆ ತುಂಬಾ ಹೆಮ್ಮೆಯಿದೆ. ಏಕೆಂದರೆ ಅವರು ಬಜಾಲಿ ಜಿಲ್ಲೆಯಿಂದ ನವದೆಹಲಿಯ ಏಮ್ಸ್‍ನಲ್ಲಿ ಸೀಟು ಪಡೆದ ಮೊದಲಿಗರಾಗಿದ್ದಾರೆ ಎಂದು ಡೆಪ್ಯೂಟಿ ಕಮಿಷನರ್ ಸಂತೋಷ ವ್ಯಕ್ತಪಡಿಸಿದರು. ರಾಹುಲ್ ಅವರ ಎಲ್ಲ ಶಿಕ್ಷಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ಘೋಷಿಸಿದ್ದಾರೆ ಎಂದು ದೇವಚೌಧರಿ ಹೇಳಿದರು.

  • ಪ್ರಾಂಶುಪಾಲೆಯ ಕಿರುಕುಳಕ್ಕೆ 5ನೇ ಮಹಡಿಯಿಂದ ಬಿದ್ದು ಪ್ರಾಣ ಬಿಟ್ಟ 13 ವರ್ಷದ ಬಾಲಕಿ

    ಪ್ರಾಂಶುಪಾಲೆಯ ಕಿರುಕುಳಕ್ಕೆ 5ನೇ ಮಹಡಿಯಿಂದ ಬಿದ್ದು ಪ್ರಾಣ ಬಿಟ್ಟ 13 ವರ್ಷದ ಬಾಲಕಿ

    ಡಿಸ್ಪುರ್: 13 ವರ್ಷದ ಬಾಲಕಿ ಪ್ರಾಂಶುಲೆ ಕಿರುಕುಳಕ್ಕೆ 5ನೇ ಮಹಡಿಯಿಂದ ಬಿದ್ದು ಪ್ರಾಣ ಕಳೆದುಕೊಂಡಿರುವ ದುರ್ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ.

    ಡಿಸೆಂಬರ್ 24 ರಂದು 8ನೇ ತರಗತಿ ವಿದ್ಯಾರ್ಥಿನಿಯು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಸಾವಿಗೆ ಕಾರಣವೇನು ಎಂದು ಬರೆದಿಟ್ಟು, ಶಾಲೆಯ ಐದನೇ ಮಹಡಿಯಿಂದ ಜಿಗಿದಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಭಾನುವಾರ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಜನತೆಯ ಹಿತದೃಷ್ಟಿಯಿಂದ ಕಠಿಣ ಕ್ರಮ: ಸುಧಾಕರ್ ಸಮರ್ಥನೆ

    ಬಾಲಕಿ ಮೃತಪಟ್ಟ ನಂತರ ಪೋಷಕರು ಹಾಗೂ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪೋಷಕರ ಮುಂದೆಯೇ ಪ್ರಾಂಶುಪಾಲೆ ಬಾಲಕಿಯನ್ನು ಅವಮಾನಿಸಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸರು, ಶಾಲೆಯ ಪ್ರಾಂಶುಪಾಲೆ ಇನ್ನೊಬ್ಬ ವಿದ್ಯಾರ್ಥಿಯೊಂದಿಗಿನ ಪ್ರೇಮ ಸಂಬಂಧವಿದ್ದ ಕಾರಣ ಈ ಬಾಲಕಿಗೆ ಕಿರುಕುಳ ನೀಡುತ್ತಿದ್ದಳು. ಈ ಪರಿಣಾಮ ಬಾಲಕಿಗೆ ಆಕೆಯ ಕಿರುಕುಳ ಸಹಿಸಲಾಗದೇ ಸಾವನ್ನಪ್ಪಿದ್ದಾಳೆ ಎಂದರು. ಇದನ್ನೂ ಓದಿ: ಓಮಿಕ್ರಾನ್ ವೈರಸ್‍ಗೆ ಬೆಚ್ಚಿಬಿದ್ದ ಜನ – ಡಿಸೆಂಬರ್‌ನಲ್ಲಿ ಹೆಚ್ಚು ವ್ಯಾಕ್ಸಿನೇಷನ್

    ಪೊಲೀಸರು ಅಪ್ರಾಪ್ತ ಬಾಲಕಿಯ ಆತ್ಮಹತ್ಯೆಗೆ ಪರೋಕ್ಷವಾಗಿ ಪ್ರಚೋದನೆ ನೀಡಿದ್ದಕ್ಕೆ ಪ್ರಾಂಶುಪಾಲೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಸ್ತುತ ಪ್ರಾಂಶುಪಾಲೆ ನಾಪತ್ತೆಯಾಗಿದ್ದು, ಆಕೆಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

  • ಕುಡಿಯುವ ನೀರು ನೋಡಿ ಕೊಳಾಯಿಗೆ ಕೈ ಮುಗಿದ ಮಹಿಳೆ – ವಿಡಿಯೋ ವೈರಲ್

    ಕುಡಿಯುವ ನೀರು ನೋಡಿ ಕೊಳಾಯಿಗೆ ಕೈ ಮುಗಿದ ಮಹಿಳೆ – ವಿಡಿಯೋ ವೈರಲ್

    ದಿಸ್ಪೂರ್: ಪ್ರತಿಯೊಂದು ಜೀವಿಗೂ ನೀರು ಬಹಳ ಮುಖ್ಯ. ಏನಿಲ್ಲವಾದರೂ ನೀರಿಲ್ಲದೆ ಮನುಷ್ಯ ಬದುಕಲಾರ. ನೀರು ಕೆಲವೊಮ್ಮ ಹಸಿವನ್ನು ಕೂಡ ನೀಗಿಸುತ್ತದೆ. ನೀರಿಲ್ಲದೆ ಏನು ಕೂಡ ಇಲ್ಲ. ಪ್ರತಿಯೊಂದು ಕೆಲಸಕ್ಕೂ ನೀರು ಬೇಕೆ ಬೇಕು. ಅಂತಹ ನೀರಿನ ಮಹತ್ವ ತಿಳಿದ ಮಹಿಳೆಯೊಬ್ಬಳ ವಿಡಿಯೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ಬಾರಿ ಸದ್ದು ಮಾಡುತ್ತಿದೆ.

    ಅಸ್ಸಾಂ ಮಹಿಳೆಯೊಬ್ಬಳು ವಾಟರ್ ಪೈಪ್‍ನ ಮೂಲಕ ಕೊಳಾಯಿಯಲ್ಲಿ ನೀರು ಬರುವುದನ್ನು ನೋಡಿ ಕೈ ಮುಗಿದು ಬೇಡಿಕೊಂಡಿರುವ ವಿಡಿಯೋವೊಂದು ಸೋಶಿಯಲ್ ಮಿಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿನ ಜನರ ಮನಗೆಲ್ಲುವ ಮೂಲಕ ಎಲ್ಲರ ಪ್ರೀತಿ ಗಳಿಸಿದೆ.

    60 ವರ್ಷದ ಮಹಿಳೆಯೊಬ್ಬಳು ತನ್ನ ಮನೆಗೆ ಮೊದಲ ಬಾರಿಗೆ ಪೈಪ್ ಮೂಲಕ ಕುಡಿಯುವ ನೀರು ಬರುವುದನ್ನು ನೋಡಿ ಇಂದು ಕೊನೆಗೂ ದೇವರಿಗೆ ನನ್ನ ಪ್ರಾರ್ಥನೆ ಕೇಳಿಸಿದೆ ಎಂಬಂತೆ ತಲೆ ತಗ್ಗಿಸಿ ತನ್ನ ಎರಡು ಕೈಗಳನ್ನು ಜೋಡಿಸಿ ಬೇಡಿಕೊಂಡಿದ್ದಾಳೆ.

    ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಜಲಶಕ್ತಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಅಸ್ಸಾಂನ ಈ ಸಹೋದರಿಯು ನಲ್ಲಿಯಲ್ಲಿ ನೀರು ಬರುತ್ತಿರುವುದನ್ನು ಕಂಡು ತಲೆ ಬಾಗಿಸಿ ತನ್ನ ಎರಡು ಕೈಗಳನ್ನು ಜೋಡಿಸಿ ದೇವರಿಗೆ ಧನ್ಯವಾದ ಸಲ್ಲಿಸಿದ್ದಾಳೆ. ಸ್ವಾತಂತ್ರದ ನಂತರವೂ ಜನ ನೀರಿನ ಸಮಸ್ಯೆಯನ್ನು ಪರದಾಡುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಜನರು ಎದುರಿಸುತ್ತಿರುವ ಮೂಲಭೂತ ಅಗತ್ಯಗಳನ್ನು ಒದಗಿಸುವ ಮೂಲಕ ಜನರ ಜೀವನವನ್ನು ಬದಲಾಯಿಸಿದ್ದಾರೆ ಎಂದು ಹೇಳಿದ್ದಾರೆ.

    ಅಲ್ಲದೆ ಈ ವಿಡಿಯೋವನ್ನು ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಭಾರತೀಯ ಜನತಾ ಪಕ್ಷ ಜೀವನಧಾರವಾಗಿರುವ ಕುಡಿಯುವ ನೀರು ಕೊನೆಗೂ ಆಕೆಯ ಮನೆಗೆ ತಲುಪಿದೆ ಎಂದು ಕ್ಯಾಪ್ಷನ್ ಹಾಕಿದ್ದಾರೆ.

  • ಟ್ರಕ್ ಗುದ್ದಿದ ರಭಸಕ್ಕೆ ಬಸ್ಸಿನಲ್ಲಿದ್ದ 7 ಮಂದಿ ಸಾವು, 20 ಮಂದಿಗೆ ಗಾಯ

    ಟ್ರಕ್ ಗುದ್ದಿದ ರಭಸಕ್ಕೆ ಬಸ್ಸಿನಲ್ಲಿದ್ದ 7 ಮಂದಿ ಸಾವು, 20 ಮಂದಿಗೆ ಗಾಯ

    ದಿಸ್ಪುರ್: ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 7 ಮಂದಿ ಮೃತಪಟ್ಟ ಘಟನೆ ಅಸ್ಸಾಂನ ಕೊಕ್ರಜಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ -17 ರಲ್ಲಿ ನಡೆದಿದೆ.

    ಈ ಭೀಕರ ರಸ್ತೆ ಅಪಘಾತದಲ್ಲಿ ಅನೇಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಸ್ಸಿಲ್ಲಿದ್ದ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇನ್ನು 20 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬೋಗ್ರಿಬಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

    ಬಸ್ ಸಪತ್‍ಗ್ರಾಮ್‍ನಿಂದ ಧುಬ್ರಿಗೆ ಹೋಗುತ್ತಿದ್ದರೆ, ಟ್ರಕ್ ಗುವಾಹಟಿಗೆ ಹೋಗುತ್ತಿತ್ತು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಗುದ್ದಿದ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕಿಡಾಗಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದವರಿಗೆ ಗಾಯಗಳಾಗಿವೆ. ಹಲವು ಜನರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೂಡಲೇ ಹತ್ತಿರದಲ್ಲಿದ್ದ ಸ್ಥಳೀಯರ ತಂಡವು ವಾಹನಗಳಿಂದ ಪ್ರಯಾಣಿಕರನ್ನು ರಕ್ಷಿಸಿ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಿದ್ದಾರೆ. ಅಪಘಾತದಲ್ಲಿ ಗಾಯಾಗೊಂಡಿರುವ ಗಾಯಾಳುಗಳು 20 ಗುವಾಹಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಪಫಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಎಂಬ ವರದಿಗಳು ನಮಗೆ ಬಂದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಅಸ್ಸಾಂ ಸಿಎಂ ಸರ್ಬಾನಂದ ಸೋನೊವಾಲ್ ಅಪಘಾತದಲ್ಲಿ ಆಗಿರುವ ಪ್ರಾಣಹಾನಿ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಶೀಘ್ರವಾಗಿ ಚೇತರಿಸಿಕೊಳ್ಳಲಿ ಹಾರೈಸಿದ್ದಾರೆ.

  • ಅಪಾರ್ಟ್‌ಮೆಂಟ್ ಮೇಲೆ ಪೊಲೀಸರು ದಿಢೀರ್ ದಾಳಿ- ಮಹಿಳೆ ಮನೆಯಲ್ಲಿ 74 ಲಕ್ಷ ಪತ್ತೆ

    ಅಪಾರ್ಟ್‌ಮೆಂಟ್ ಮೇಲೆ ಪೊಲೀಸರು ದಿಢೀರ್ ದಾಳಿ- ಮಹಿಳೆ ಮನೆಯಲ್ಲಿ 74 ಲಕ್ಷ ಪತ್ತೆ

    – ಅಕ್ರಮವಾಗಿ ಡ್ರಗ್ಸ್ ಸಾಗಣೆ ಮಾಡ್ತಿರೋ ಶಂಕೆ

    ಡಿಸ್ಪುರ್: ಪೊಲೀಸರು ಮಹಿಳೆಯೊಬ್ಬಳ ಮನೆಯಲ್ಲಿ ಬರೋಬ್ಬರಿ 74 ಲಕ್ಷ ರೂಪಾಯಿಯನ್ನು ವಶಪಡಿಸಿಕೊಂಡಿದ್ದು, ಮೂವರನ್ನು ಬಂಧಿಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

    ಸೋಲಾಪರಾದಲ್ಲಿ ವಾಸಿಸುತ್ತಿದ್ದ ಸಂಗೀತಾ ಲೈಶನ್‍ಬಾಮ್, ಶಂಕಿತರಾದ ಸ್ಯಾಮ್ ಲೈಥಂಗ್‍ಬಾಮ್ ಮತ್ತು ಥಂಗ್‍ಕೋಸತ್ ಮೂವರನ್ನು ಬಂಧಿಸಲಾಗಿದೆ. ಮಹಿಳೆಯ ಮನೆಯಲ್ಲಿ 74,05,600 ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈಕೆ ಅಕ್ರಮವಾಗಿ ಡ್ರಗ್ಸ್ ಸಾಗಣೆ ಮಾಡುತ್ತಿದ್ದಳು ಎಂದು ಪೊಲೀಸರು ಶಂಕಿಸಿದ್ದಾರೆ.

    ಅಕ್ರಮವಾಗಿ ಡ್ರಗ್ಸ್ ಸಾಗಾಣೆ ಮಾಡುವ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಲಾಚಿನಿ ಅಪಾರ್ಟ್‌ಮೆಂಟ್ ಮೇಲೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ. ಅಲ್ಲಿ ನಾಲ್ಕನೇ ಮಹಡಿಯಲ್ಲಿ ಸಂಗೀತಾ ಲೈಶಾಬ್‍ಬಾಮ್ ಮನೆಯ ಆವರಣದಲ್ಲಿ ಹುಡುಕಾಟ ನಡೆಸಲಾಯಿತು. ಆಗ 74 ಲಕ್ಷ ಹಣ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶೋಧದ ವೇಳೆ ಶಂಕಿತರಾದ ಸ್ಯಾಮ್ ಲೈಥಂಗ್‍ಬಾಮ್ ಮತ್ತು ಥಂಗ್‍ಕೋಸತ್‍ರನ್ನು ಸಹ ಬಂಧಿಸಲಾಗಿದೆ. ತನಿಖೆಯ ಸಮಯದಲ್ಲಿ ಸಂಗೀತಾ ಈ ಹಿಂದೆ ಅಕ್ರಮ ಡ್ರಗ್ಸ್ ಮಾರಾಟಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ ಕಾಯ್ದೆಯಡಿ ಬಂಧಿಸಲಾಗಿತ್ತು. ಈ ಕುರಿತು ಈಗಾಗಲೇ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

  • ಮನೆ ಸ್ವಚ್ಛ ಮಾಡುವಾಗ ಭೂಕುಸಿತ- ಜಾನಪದ ನರ್ತಕಿ ದುರ್ಮರಣ

    ಮನೆ ಸ್ವಚ್ಛ ಮಾಡುವಾಗ ಭೂಕುಸಿತ- ಜಾನಪದ ನರ್ತಕಿ ದುರ್ಮರಣ

    – ಲಂಡನ್‍ನಲ್ಲಿ ನೃತ್ಯ ಮಾಡಲು ಅವಕಾಶ ಸಿಕ್ಕಿತ್ತು

    ದಿಸ್ಪುರ್: ಅಸ್ಸಾಂನ ಗುವಾಹಟಿಯ ಖಾರ್ಘುಲಿ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಯುವ ಜಾನಪದ ನರ್ತಕಿಯೊಬ್ಬರು ಮೃತಪಟ್ಟಿದ್ದಾರೆ.

    ಪ್ರಿಯಾಂಕಾ ಬೋರೊ (21) ಮೃತ ಯುವತಿ. ಈಕೆ ಗುವಾಹಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಬೆಳಗ್ಗೆ ಸುಮಾರು 6 ಗಂಟೆಗೆ ಪ್ರಿಯಾಂಕಾ ಮನೆಕೆಲಸಗಳಲ್ಲಿ ನಿರತರಾಗಿದ್ದಳು. ಈ ವೇಳೆ ನಿರಂತರ ಸುರಿದ ಮಳೆಯಿಂದ ಭೂಕುಸಿತದ ಉಂಟಾಗಿದೆ. ಪರಿಣಾಮ ಮನೆ ಸ್ವಚ್ಛ ಮಾಡುತ್ತಿದ್ದ ಪ್ರಿಯಾಂಕಾ ಮಣ್ಣಿನೊಳಗೆ ಸಿಲುಕಿ ಮೃತಪಟ್ಟಿದ್ದಾರೆ.

    ಪ್ರಿಯಾಂಕಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಗೌಹತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ಪ್ರಿಯಾಂಕಾ ಅಸ್ಸಾಂನಲ್ಲಿ ಪ್ರತಿಭಾವಂತ ನರ್ತಕಿ ಎಂದು ಪ್ರಸಿದ್ಧರಾಗಿದ್ದರು. ಅನೇಕ ವೇದಿಕೆಗಳಲ್ಲಿ ಪ್ರಿಯಾಂಕಾ ತನ್ನ ನೃತ್ಯ ಪ್ರದರ್ಶಗಳನ್ನು ನೀಡಿದ್ದರು.

    21 ವರ್ಷದ ಪ್ರಿಯಾಂಕಾ 2015ರ ಎಚ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಂಗೀತ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಶ್ರೇಯಾಂಕ ಪಡೆದಿದ್ದರು. ಬಿಹು, ಶಾಸ್ತ್ರಿ ಮತ್ತು ಇತರ ಸಾಂಸ್ಕೃತಿಕ ನೃತ್ಯಗಳನ್ನು ಮಾಡುತ್ತಿದ್ದರು. ಅನೇಕ ದೇಶಗಳಲ್ಲಿ ಮತ್ತು ಭಾರತದಲ್ಲಿ ನೃತ್ಯ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ತಮ್ಮ ನೃತ್ಯ ಪ್ರದರ್ಶನಗಳ ಮೂಲಕ ಅಸ್ಸಾಂಗೆ ಪ್ರಶಸ್ತಿಗಳನ್ನು ತಂದಿದ್ದರು.

    ಇತ್ತೀಚೆಗೆ ಲಂಡನ್‍ನಲ್ಲಿ ಜಾನಪದ ನೃತ್ಯ ಮಾಡಲು ಅವಕಾಶ ಸಿಕ್ಕಿತ್ತು. ಆದರೆ ಅಷ್ಟರಲ್ಲಿ ಭೂಕುಸಿತದಿಂದ ಪ್ರಿಯಾಂಕಾ ಬೋರೊ ಮೃತಪಟ್ಟಿದ್ದಾರೆ. ಹೀಗಾಗಿ ಪ್ರಿಯಾಂಕಾ ಸಾವಿನಿಂದ ಇಡೀ ಪ್ರದೇಶ ದುಃಖದ ಮಡುವಿನಲ್ಲಿದೆ. ಪ್ರಿಯಾಂಕಾ ಸಾವಿಗೆ ಸಾಂಸ್ಕೃತಿಕ ರಂಗದ ಹಲವಾರು ಸಂಸ್ಥೆಗಳು ಮತ್ತು ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ.

  • ಅಸ್ಸಾಂನ ಮೂರು ಜಿಲ್ಲೆಯಲ್ಲಿ ಭಾರೀ ಭೂ ಕುಸಿತ- 20 ಮಂದಿ ದುರ್ಮರಣ

    ಅಸ್ಸಾಂನ ಮೂರು ಜಿಲ್ಲೆಯಲ್ಲಿ ಭಾರೀ ಭೂ ಕುಸಿತ- 20 ಮಂದಿ ದುರ್ಮರಣ

    ದಿಸ್ಪುರ್: ದಕ್ಷಿಣ ಅಸ್ಸಾಂನ ಬರಾಕ್ ಕಣಿವೆ ಪ್ರದೇಶದ ಮೂರು ಜಿಲ್ಲೆಯಲ್ಲಿ ಭಾರೀ ಭೂ ಕುಸಿತ ಸಂಭವಿಸಿದ ಪರಿಣಾಮ ಸುಮಾರು 20 ಮಂದಿ ಮೃತಪಟ್ಟಿದ್ದಾರೆ.

    ಮೃತಪಟ್ಟವರಲ್ಲಿ ಕ್ಯಾಚರ್ ಜಿಲ್ಲೆಯಲ್ಲಿ ಏಳು, ಹೈಲಕಂಡಿ ಜಿಲ್ಲೆಯಲ್ಲಿ ಏಳು ಮತ್ತು ಕರಿಮ್‍ಗಂಜ್ ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಮೂರು ಕುಟುಂಬಗಳಲ್ಲಿ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ 11 ಮಕ್ಕಳು ಮತ್ತು ಮೂವರು ಮಹಿಳೆಯರಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಕಳೆದ ಎರಡು ದಿನಗಳಿಂದ ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಅಲ್ಲದೇ ಈ ಭೂ ಕುಸಿತದಿಂದ ಹಲವಾರು ಮಂದಿ ಗಾಯಗೊಂಡಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ.

    ಭಾರತದ ಈಶಾನ್ಯ ರಾಜ್ಯವಾದ ಅಸ್ಸಾಂನಲ್ಲಿ ಈಗಾಗಲೇ ಪ್ರವಾಹದಿಂದ 3.72 ಲಕ್ಷ ತೊಂದರೆಗೀಡಾಗಿದ್ದಾರೆ. ಗೋಲ್ಪಾರ ಜಿಲ್ಲೆಯಲ್ಲಿ ಹೆಚ್ಚು ಹಾನಿಯಾಗಿದ್ದು, ಪ್ರವಾಹದಿಂದ ನೂರಾರು ಗ್ರಾಮಗಳು ಜಲಾವೃತವಾಗಿದೆ. ಸುಮಾರು 27,000 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳಿಗೆ ಹಾನಿಯಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

    ಭೂಕುಸಿತದ ನಂತರ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ, ಶೀಘ್ರವೇ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಆದೇಶ ಹೊರಡಿಸಿದ್ದಾರೆ.

  • 7 ವಿದ್ಯಾರ್ಥಿಗಳಿಂದ ಅಪ್ರಾಪ್ತೆ ಮೇಲೆ ಗ್ಯಾಂಗ್‍ರೇಪ್ – ಮರಕ್ಕೆ ನೇಣು ಹಾಕಿ ಪೈಶಾಚಿಕ ಕೃತ್ಯ

    7 ವಿದ್ಯಾರ್ಥಿಗಳಿಂದ ಅಪ್ರಾಪ್ತೆ ಮೇಲೆ ಗ್ಯಾಂಗ್‍ರೇಪ್ – ಮರಕ್ಕೆ ನೇಣು ಹಾಕಿ ಪೈಶಾಚಿಕ ಕೃತ್ಯ

    – 10ನೇ ತರಗತಿಯ 7 ಆರೋಪಿಗಳು ಅರೆಸ್ಟ್

    ದಿಸ್ಪುರ್: 10ನೇ ತರಗತಿಯ ಏಳು ವಿದ್ಯಾರ್ಥಿಗಳು 12 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಸಂತ್ರಸ್ತೆಯನ್ನು ಮರಕ್ಕೆ ನೇಣು ಹಾಕಿ ಕೊಲೆ ಮಾಡಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

    ಅಸ್ಸಾಂನ ಬಿಸ್ವನಾಥ್ ಜಿಲ್ಲೆಯಲ್ಲಿ ಈ ಘಟನೆ ಶುಕ್ರವಾರ ನಡೆದಿದೆ. ಗೋಹಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಕ್ಲಾ ಗ್ರಾಮದಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ನಂತರ ಸಂತ್ರಸ್ತೆಯನ್ನು ಮರಕ್ಕೆ ನೇಣು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    10ನೇ ತರಗತಿಯ ಏಳು ಆರೋಪಿಗಳು ಪರೀಕ್ಷೆ ನಂತರ ಪಾರ್ಟಿಯನ್ನು ಆಯೋಜನೆ ಮಾಡುವ ನೆಪದಲ್ಲಿ ಸಂತ್ರಸ್ತೆಯನ್ನು ಶುಕ್ರವಾರ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಏಳು ವಿದ್ಯಾರ್ಥಿಗಳು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ನಂತರ ಮನೆಯ ಸಮೀಪದ ಕಾಡಿನಲ್ಲಿದ್ದ ಮರವೊಂದಕ್ಕೆ ನೇಣು ಹಾಕಿದ್ದಾರೆ.

    ಇತ್ತ ನಾಪತ್ತೆಯಾದ ಮಗಳನ್ನು ಪೋಷಕರು ಹುಡುಕುತ್ತಿದ್ದರು. ಆಗ ಶನಿವಾರ ಸಂತ್ರಸ್ತೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಂತರ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು. ಭಾನುವಾರ 10ನೇ ತರಗತಿಯ ಏಳು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.