Tag: Disqualification

  • ಸುಪ್ರೀಂನಿಂದ ಮಹಾರಾಷ್ಟ್ರದ ಎರಡೂ ಬಣದ ಶಾಸಕರಿಗೆ ತಾತ್ಕಾಲಿಕ ರಿಲೀಫ್‌

    ಸುಪ್ರೀಂನಿಂದ ಮಹಾರಾಷ್ಟ್ರದ ಎರಡೂ ಬಣದ ಶಾಸಕರಿಗೆ ತಾತ್ಕಾಲಿಕ ರಿಲೀಫ್‌

    ಮುಂಬೈ: ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ‌ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ದಾಖಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಪರಿಶೀಲಿಸಿದೆ. ಏಕನಾಥ್ ಶಿಂಧೆ ಸರ್ಕಾರ ರಚನೆ ವಿರೋಧಿಸಿ ಉದ್ಧವ್ ಠಾಕ್ರೆ ಬಣ ದಾಖಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.

    ಇಂದು ಅರ್ಜಿಗಳನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಗೆ ಪ್ರತ್ಯೇಕ ಸಂವಿಧಾನಿಕ ಪೀಠ ರಚನೆ ಮಾಡುವ ಅಗತ್ಯವಿದೆ. ಈ ಕಾರ್ಯಕ್ಕೆ ಸ್ವಲ್ಪ ಸಮಯವಕಾಶ ಬೇಕಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್‍.ವಿ ರಮಣ ಅವರು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಈ ಅರ್ಜಿ ಇತ್ಯರ್ಥವಾಗುವವರೆಗೂ, ಶಿವಸೇನೆಯ ರೆಬೆಲ್ ಶಾಸಕರು, ಮತ್ತು ಉದ್ಧವ್ ಬಣದ ಶಾಸಕರ ಅನರ್ಹತೆಗೆ ಸಂಬಂಧಿಸಿ ಯಾವುದೇ ತೀರ್ಮಾನ ತೆಗೆದುಕೊಳ್ಳದಂತೆ ಸ್ಪೀಕರ್‌ಗೆ ಸ್ಪಷ್ಟವಾಗಿ ಸೂಚಿಸಿದೆ. ಇದನ್ನೂ ಓದಿ: ಎಡಿಜಿಪಿ ಬೆದರಿಕೆ ಬಗ್ಗೆ `ಹೈ’ ಆದೇಶದಲ್ಲಿ ಉಲ್ಲೇಖ – ಎಸಿಬಿಗೆ ಕಳಂಕಿತರ ನೇಮಿಸದಂತೆ ಸರ್ಕಾರಕ್ಕೆ ನಿರ್ದೇಶನ

    ಹೀಗಾಗಿ ಶಿವಸೇನೆಯ ಎರಡು ಬಣಗಳು ಸದ್ಯದ ಮಟ್ಟಿಗೆ ನಿಟ್ಟುಸಿರು ಬಿಟ್ಟಿವೆ. ಈ ಮಧ್ಯೆ, ವಿಪಕ್ಷ ನಾಯಕನ ಸ್ಥಾನ ತಮಗೆ ಬೇಕೆಂದು ಶಿವಸೇನೆ, ಮಿತ್ರಪಕ್ಷಗಳ ಬಳಿ ಕೇಳಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ 16 ಬಂಡಾಯ ಶಾಸಕರು ತಮಗೆ ಸ್ಪೀಕರ್ ನೀಡಿದ್ದ ಅನರ್ಹತೆ ನೋಟಿಸ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಇನ್ನೊಂದೆಡೆ ಸರ್ಕಾರ ರಚನೆಗೆ ಹಾಗೂ ವಿಶ್ವಾಸಮತ ಯಾಚನೆಗೆ ರಾಜ್ಯಪಾಲರು ಶಿಂಧೆಗೆ ನೀಡಿದ್ದ ಆಹ್ವಾನ ಪ್ರಶ್ನಿಸಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಅರ್ಜಿ ಸಲ್ಲಿಸಿತ್ತು. ಇದೇ ವೇಳೆ ನೂತನ ಸ್ಪೀಕರ್ ಶಿವಸೇನೆಯ ಹೊಸ ಮುಖ್ಯ ಸಚೇತಕರನ್ನು ನೇಮಿಸಿದ್ದನ್ನೂ ಶಿವಸೇನೆ ಪ್ರಶ್ನಿಸಿತ್ತು. ಇದನ್ನೂ ಓದಿ: ಜುಲೈ 21ಕ್ಕೆ ಹಾಜರಾಗಿ – ಸೋನಿಯಾ ಗಾಂಧಿಗೆ ಮತ್ತೆ ED ಸಮನ್ಸ್

    Live Tv
    [brid partner=56869869 player=32851 video=960834 autoplay=true]

  • 1 ತಿಂಗ್ಳ ಬಳಿಕ ರಾಜ್ಯಕ್ಕೆ ಅನರ್ಹ ಶಾಸಕ ಬಿಸಿ ಪಾಟೀಲ್ ವಾಪಸ್

    1 ತಿಂಗ್ಳ ಬಳಿಕ ರಾಜ್ಯಕ್ಕೆ ಅನರ್ಹ ಶಾಸಕ ಬಿಸಿ ಪಾಟೀಲ್ ವಾಪಸ್

    – ಮೈತ್ರಿ ಸರ್ಕಾರ, ಎಚ್‍ಡಿಕೆ ಕುಟುಂಬ ರಾಜಕಾರಣ ವಿರುದ್ಧ ವಾಗ್ದಾಳಿ

    ಬೆಂಗಳೂರು: ಅನರ್ಹಗೊಂಡಿದ್ದ ಅತೃಪ್ತ ಶಾಸಕ ಬಿ.ಸಿ.ಪಾಟೀಲ್ ಅವರು ಬರೋಬ್ಬರಿ ಒಂದು ತಿಂಗಳ ಬಳಿಕ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಇಂದು ಸಂಜೆ 05.45ರ ವೇಳೆಗೆ ಇಂಡಿಗೋ ವಿಮಾನದಲ್ಲಿ ದೆಹಲಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷ 2 ತಿಂಗಳಿನಿಂದ ರಾಜ್ಯದಲ್ಲಿ ರಾಕ್ಷಸ ಸರ್ಕಾರವಿತ್ತು. ಕಾಂಗ್ರೆಸ್ಸಿನ ಇಬ್ಬರು, ಮೂವರು ನಾಯಕರಿಗೆ ಬಿಟ್ಟರೆ ಸಂಪೂರ್ಣ ಆಡಳಿತ ಒಂದೇ ಕುಟುಂಬದ ಹಿಡಿತದಲ್ಲಿತ್ತು. ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಸರ್ಕಾರ ಆಡಳಿತ ನಡೆಯುತಿತ್ತು. ಹೀಗಾಗಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಹಾಗೂ ಉತ್ತರ ಕರ್ನಾಟಕ, ನಮ್ಮ ಕ್ಷೇತ್ರಗಳಿಗೆ ಆಗುತ್ತಿದ್ದ ಅನ್ಯಾಯ ತಡೆಯಲು ನಾವು ರಾಜೀನಾಮೆ ನೀಡಿದ್ದೇವೆ ಎಂದರು.

    ಸ್ಪೀಕರ್ ಅನರ್ಹತೆ ತೀರ್ಮಾನದ ಕುರಿತು ಮಾತನಾಡಿದ ಅವರು, ಈ ನಿರ್ಧಾರದ ವಿರುದ್ಧ ಈಗಾಗಲೇ ಸುಪ್ರೀಂಕೋರ್ಟ್ ಮೊರೆಹೋಗಿದ್ದು ಮುಂದಿನ ವಾರ ಉತ್ತಮ ನಿರ್ಣಯ ಬರುತ್ತೆ ಎಂಬ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಸ್ಪಷ್ಟ ಪಡಿಸಿದ ಅವರು, ಕ್ಷೇತ್ರಕ್ಕೆ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ಆಗುತ್ತಿದ್ದ ಅನ್ಯಾಯವನ್ನು ತಡೆಯಲು ರಾಜೀನಾಮೆ ನೀಡಿ ಸರ್ಕಾರ ಕೆಡುವುದರಲ್ಲಿ ಯಶಸ್ವಿಯಾಗಿದ್ದೇವೆ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಹಿರೇಕೆರೂರಿನಿಂದಲೇ ನಾನು ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರದ ಜನರ ಅಭಿಪ್ರಾಯ ಸಂಗ್ರಹಿಸಿ ಯಾವ ಪಕ್ಷದಿಂದ ಎಂಬ ತೀರ್ಮಾನ ಮಾಡುತ್ತೇನೆ ಎಂದರು.

    ಚುನಾವಣೆಯಲ್ಲಿ ಪುತ್ರಿ ಸ್ಪರ್ಧೆ ಮಾಡುತ್ತರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಮಗಳು ಕೂಡ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಬಹುದು. ನಾನು ಕೇವಲ ಹಿರೇಕೆರೂರು ಕ್ಷೇತ್ರಕ್ಕೆ ಮಾತ್ರ ಸಮೀತವಾಗಿಲ್ಲ. ಇಡೀ ರಾಜ್ಯಕ್ಕೆ ನನ್ನ ಬಗ್ಗೆ ತಿಳಿದಿದೆ. ನನ್ನ ಜೀವನದಲ್ಲಿ ಎರಡನೇ ರಾಜೀನಾಮೆ ನೀಡಿದ್ದೇನೆ. 2002 ರಲ್ಲಿ ಪೊಲೀಸ್ ಕೆಲಸಕ್ಕೆ ರಾಜೀನಾಮೆ ನೀಡಿದ್ದೆ. ಅಂದು ಸಹ ನಾನು ಆಸೆ ಆಕಾಂಕ್ಷೆಗಳನ್ನು ಹೊಂದಿರಲಿಲ್ಲ. ಯಾವುದೇ ಆಸೆ ಆಕಾಂಕ್ಷೆಗಳಿಗೆ ಒಳಗಾಗುವ ವ್ಯಕ್ತಿ ನಾನಲ್ಲ. ಮುಂದಿನ ಚುನಾವಣೆಯಲ್ಲಿ ನಾನು ಗೆದ್ದು ಮತ್ತೆ ವಿಧಾನಸಭೆ ಪ್ರವೇಶ ಮಾಡುವ ಅರ್ಹತೆ ಪಡೆದುಕೊಳ್ಳುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಬಿಜೆಪಿ ಫ್ಲೆಕ್ಸ್‌ನಲ್ಲಿ ರಮೇಶ್ ಜಾರಕಿಹೊಳಿ ಚಿತ್ರ

    ಬಿಜೆಪಿ ಫ್ಲೆಕ್ಸ್‌ನಲ್ಲಿ ರಮೇಶ್ ಜಾರಕಿಹೊಳಿ ಚಿತ್ರ

    ಕೊಪ್ಪಳ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿಯವರ ಫೋಟೋ ಆಗಲೇ ಬಿಜೆಪಿ ಫ್ಲೆಕ್ಸ್, ಬ್ಯಾನರ್ ಗಳಲ್ಲಿ ಭಾವಚಿತ್ರ ರಾರಾಜಿಸುತ್ತಿದೆ.

    ಕೊಪ್ಪಳದಲ್ಲಿ ಬಿಜೆಪಿ ನಾಯಕರು ಹಾಕಿರುವ ಫ್ಲೆಕ್ಸ್ ನಲ್ಲಿ ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಭಾವಚಿತ್ರವಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಜಾರಕಿಹೊಳಿ ಅವರ ಮೇಲೆ ಇನ್ನೂ ಅನರ್ಹತೆ ತೂಗುಗತ್ತಿ ನೇತಾಡುತ್ತಿದೆ. ಅಲ್ಲದೆ, ಜಾರಕಿಹೊಳಿ ಪಕ್ಷಕ್ಕೆ ಸೇರುವ ಕುರಿತು ಬಿಜೆಪಿ ನಾಯಕರು ಇನ್ನೂ ಯಾವುದೇ ರೀತಿಯ ತೀರ್ಮಾನ ಕೈಗೊಂಡಿಲ್ಲ. ಆಗಲೇ ಫ್ಲೆಕ್ಸ್ ನಲ್ಲಿ ರಮೇಶ್ ಜಾರಕಿಹೊಳಿ ಭಾವಚಿತ್ರವನ್ನು ಹಾಕಲಾಗಿದೆ.

    ನಗರದ ಅಶೋಕ ವೃತ್ತದಲ್ಲಿ ಬಿಜೆಪಿ ಯುವ ಮುಖಂಡ ಹಾಲೇಶ್ ಕಂದಾರಿ, ಯಡಿಯೂರಪ್ಪನವರು ಮುಖ್ಯಮಂತ್ರಿ ಆದ ಹಿನ್ನಲೆಯಲ್ಲಿ ಅಭಿನಂದನೆ ಸಲ್ಲಿಸಲು ಹಾಕಿರುವ ಫ್ಲೆಕ್ಸ್ ನಲ್ಲಿ ರಮೇಶ್ ಜಾರಕಿಹೊಳಿ ಫೋಟೋ ಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು ಇತ್ತೀಚಿಗಷ್ಟೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಅಲ್ಲದೆ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.

    ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಬಿಜೆಪಿ ಸೇರುವುದಕ್ಕೂ ಮೊದಲೇ ರಮೇಶ್ ಜಾರಕಿಹೊಳಿ ಅವರ ಭಾವಚಿತ್ರವನ್ನು ಬಿಜೆಪಿ ನಾಯಕರು ತಮ್ಮ ಫ್ಲೆಕ್ಸ್‌ನಲ್ಲಿ ಹಾಕಿಕೊಂಡಿರುವುದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

  • ಸ್ಪೀಕರ್ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ – ಅನರ್ಹ ಶಾಸಕರ ಅರ್ಜಿಯಲ್ಲಿ ಏನಿದೆ?

    ಸ್ಪೀಕರ್ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ – ಅನರ್ಹ ಶಾಸಕರ ಅರ್ಜಿಯಲ್ಲಿ ಏನಿದೆ?

    ನವದೆಹಲಿ: ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಅನರ್ಹತೆ ಆದೇಶವನ್ನು ಪ್ರಶ್ನಿಸಿ 15 ಜನ ಅನರ್ಹಗೊಂಡ ಶಾಸಕರು ಸುಪ್ರೀಂ ಮೆಟ್ಟಿಲೇರಿದ್ದಾರೆ.

    ಕಳೆದ ಸೋಮವಾರ ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್‍ ಕುಮಟಳ್ಳಿ ಅರ್ಜಿ ಸಲ್ಲಿಸಿದ್ದರು. ಇದೀಗ ಮತ್ತೆ 15 ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಸ್ಪೀಕರ್ ಆದೇಶವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. ಶುಕ್ರವಾರ ಇಲ್ಲವೇ ಮಂಗಳವಾರ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.

    ಅರ್ಜಿಯಲ್ಲಿ ಏನಿದೆ?
    ಶಾಸಕರನ್ನು ಅನರ್ಹ ಮಾಡಿರುವ ಸ್ಪೀಕರ್ ಆದೇಶ ಅಸಂವಿಧಾನಿಕವಾಗಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ. ಮೊದಲು ರಾಜೀನಾಮೆ ಅಂಗಿಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಇದನ್ನು ಮಾನ್ಯ ಮಾಡದೇ ಸ್ಪೀಕರ್ ಶಾಸಕರನ್ನು ಅನರ್ಹ ಮಾಡಿ ನ್ಯಾಯಾಂಗ ನಿಂದನೆ ಮಾಡಿದ್ದಾರೆ.

    ವಿಶ್ವಾಸಮತ ಯಾಚನೆಗೆ ಹಾಜರಾಗುವ ಸಂಬಂಧ ಸುಪ್ರೀಂ ಕೋರ್ಟ್ ಶಾಸಕರಿಗೆ ವಿನಾಯಿತಿ ನೀಡಿತ್ತು. ಆದರೆ ವಿಶ್ವಾಸಮತದ ವೇಳೆ ವಿಪ್ ಉಲ್ಲಂಘನೆ ಮಾಡಿದ ಕಾರಣ ನೀಡಿ ಅನರ್ಹ ಮಾಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿರುವುದು ಪಕ್ಷಾಂತರ ನಿಷೇಧ ಕಾಯಿದೆಯ ಉಲ್ಲಂಘನೆ ಆಗುವುದಿಲ್ಲ. ಸ್ಪೀಕರ್ ಈ ಅಂಶಗಳನ್ನು ಪರಿಗಣಿಸದೆ, ಉದ್ದೇಶ ಪೂರ್ವಕವಾಗಿ ಅನರ್ಹಗೊಳಿಸಿದ್ದಾರೆ.

    ಅನರ್ಹತೆ ನಿಯಮದಡಿ ನೋಟಿಸ್ ಕೊಟ್ಟ ಬಳಿಕ ಶಾಸಕರಿಗೆ ಪ್ರತಿಕ್ರಿಯೆ ನೀಡಲು ಏಳು ದಿನ ಅವಕಾಶ ನೀಡಬೇಕಿತ್ತು. ಆದರೆ ಕೇವಲ 3 ದಿನ ಸಮಯಾವಕಾಶ ಕೊಟ್ಟಿದ್ದಾರೆ. ಪಕ್ಷೇತರ ಶಾಸಕ ಆರ್.ಶಂಕರ್ ವಿಚಾರದಲ್ಲೂ ಸ್ಪೀಕರ್ ನೋಟಿಸ್‍ ನೀಡದೇ ಕ್ರಮ ಕೈಗೊಂಡಿದ್ದಾರೆ. ಕೆಪಿಜೆಪಿ ಕಾಂಗ್ರೆಸ್ ಜೊತೆಗೆ ಇನ್ನೂ ವಿಲೀನಗೊಂಡಿಲ್ಲ, ಪ್ರಕ್ರಿಯೆ ನಡೆಯುತ್ತಿದ್ದವು. ಈ ನಡುವೆಯೇ ಆರ್.ಶಂಕರ್ ಅವರನ್ನು ಅನರ್ಹಗೊಳಿಸಲಾಗಿದೆ. ಅನರ್ಹತೆ ವಿಚಾರವನ್ನು ನಮಗೆ ಮೊದಲೇ ತಿಳಿಸಬೇಕಿತ್ತು. ಆದರೆ, ಸ್ಪೀಕರ್ ನೇರವಾಗಿ ಸುದ್ದಿಗೋಷ್ಠಿ ಮೂಲಕ ಅನರ್ಹತೆ ಆದೇಶ ಹೊರಡಿಸಿದ್ದಾರೆ. ನಿಯಮದಂತೆ 24 ಗಂಟೆಯೊಳಗೆ ಅನರ್ಹತೆಯ ಆದೇಶವನ್ನು ಶಾಸಕರಿಗೆ ತಲುಪಿಸಬೇಕು. ಉದ್ದೇಶ ಪೂರ್ವಕವಾಗಿ ಶಾಸಕರಿಗೆ ಅನರ್ಹತೆ ಆದೇಶ ತಲುಪಿಸಿಲ್ಲ. ಸ್ಪೀಕರ್ ಈ ಪ್ರಕರಣದಲ್ಲಿ ಪಕ್ಷಪಾತ ಮಾಡುತ್ತಿದ್ದಾರೆ. ಹೀಗಾಗಿ ಸ್ಪೀಕರ್ ನೀಡಿರುವ ಅನರ್ಹತೆವನ್ನು ವಜಾ ಮಾಡಿ, ಸ್ಪೀಕರ್ ಮುಂದೆ ಮರು ವಿಚಾರಣೆಗೆ ಹಾಜರಾಗಲು ಸೂಚಿಸಲು ಅನುಮತಿ ನೀಡಿ.

  • ಸ್ಪೀಕರ್ ನಿರ್ಧಾರ ಕಾನೂನು ಬಾಹಿರ – ಬಿ.ವಿ.ಆಚಾರ್ಯ

    ಸ್ಪೀಕರ್ ನಿರ್ಧಾರ ಕಾನೂನು ಬಾಹಿರ – ಬಿ.ವಿ.ಆಚಾರ್ಯ

    ಬೆಂಗಳೂರು: 14 ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ರಮೇಶ್ ಕುಮಾರ್ ನಿರ್ಧಾರ ಕಾನೂನು ಬಾಹಿರವಾಗಿದೆ ಎಂದು ಹಿರಿಯ ವಕೀಲ ಬಿ.ವಿ.ಆಚಾರ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಹಿರಿಯ ವಕೀಲರು, ರಾಜೀನಾಮೆಯನ್ನು ಮಾತ್ರ ಅಂಗೀಕಾರ ಮಾಡಿ ಎಂದು ಸುಪ್ರೀಂಕೋರ್ಟ್ ಹೇಳಿತ್ತೇ ಹೊರತು ಅನರ್ಹತೆ ಬಗ್ಗೆ ತಿಳಿಸಿರಲಿಲ್ಲ. ಅಷ್ಟೇ ಅಲ್ಲದೆ ರಾಜೀನಾಮೆಯನ್ನು ಕೈಬಿಟ್ಟು ಅನರ್ಹತೆ ಗೊಳಿಸಿದ್ದಾರೆ. ಇಂತಹ ಪ್ರಕರಣಗಳಲ್ಲಿ ರಾಜೀನಾಮೆಯನ್ನು ಮೊದಲು ಅಂಗೀಕಾರ ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ:  ಕಾಂಗ್ರೆಸ್ ನಾಯಕರೇ ನಮ್ಮನ್ನು ಪ್ರಚೋದಿಸಿ ರಾಜೀನಾಮೆ ಕೊಡಿಸಿದ್ದು: ಮುನಿರತ್ನ

    ಕಾನೂನಿನ ಪ್ರಕಾರ ಅನರ್ಹತೆಗೆ ಒಂದು ವಾರದ ಕಾಲಾವಕಾಶ ನೀಡಬೇಕಿತ್ತು. ಆದರೆ ಸ್ಪೀಕರ್ ಮೂರು ದಿನಗಳಲ್ಲಿ ದಿಢೀರನೆ ಅನರ್ಹತೆ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಅತೃಪ್ತ ಶಾಸಕರು ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ, ಆದೇಶವನ್ನು ತಡೆಹಿಡಿಯುವ ಅವಕಾಶವಿದೆ ಎಂದರು.

    ಶನಿವಾರ ಹಾಗೂ ಭಾನವಾರ ರಜೆ ಇದ್ದರೂ ಕಚೇರಿಯಲ್ಲಿ ಕುಳಿತು ತರಾತುರಿಯಲ್ಲಿ ಅನರ್ಹತೆ ಆದೇಶ ಹೊರಡಿಸಿದ್ದಾರೆ. ಅದೇ ಶಾಸಕರು ರಾಜೀನಾಮೆ ಸ್ವೀಕರಿಸುವಾಗ ರಜೆ ಇದೆ, ಖಾಸಗಿ ಕಾರ್ಯಕ್ರಮದ ಅಂತ ಹೇಳಿ ವಿಳಂಬ ನೀತಿ ಅನುಸರಿದರು. ಈ ಮೂಲಕ ಮೈತ್ರಿ ಸರ್ಕಾರಕ್ಕೆ ಅನುಕೂಲವಾಗುವಂತೆ ನಡೆದುಕೊಂಡರು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಲ್ ಪಾಸಾಗಿಲ್ಲ ಅಂದ್ರೆ ಒಂದು ನಯಾ ಪೈಸೆ ಡ್ರಾ ಆಗಲ್ಲ: ಸ್ಪೀಕರ್ ಗರಂ

    ಸ್ಪೀಕರ್ ರಮೇಶ್ ಕುಮಾರ್ ಒಂದು ರೀತಿಯಲ್ಲಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಶಾಸಕರ ಅನರ್ಹತೆಯಿಂದ ವಿಧಾನಸಭೆಯ ಸಂಖ್ಯಾಬಲ ಕಡಿಮೆಯಾಗಿದೆ. ಹೀಗಾಗಿ ಬಿಜೆಪಿಯವರು ಯಾರ ಸಹಾಯವಿಲ್ಲದೇ ವಿಶ್ವಾಸಮತ ಸಾಬೀತು ಮಾಡುತ್ತಾರೆ ಎಂದರು.

    ಶಾಸಕರನ್ನು 2023ರ ವರೆಗೆ ಅನರ್ಹತೆ ಮಾಡಲಾಗಿದೆ ಎಂದು ಸ್ಪೀಕರ್ ಹೇಳುತ್ತಾರೆ. ಇದು ಅಸಂವಿಧಾನಿಕವಾಗಿದೆ. ಕಾನೂನಿನ ಪ್ರಕಾರ ಅನರ್ಹಗೊಂಡ ಶಾಸಕ ಮುಂದಿನ ಉಪ ಚುನಾಮಣೆ ಇಲ್ಲವೇ, ಮುಖ್ಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು. ಸ್ಪೀಕರ್ ಅವರು ಶಾಸಕರನ್ನು ಹೆದರಿಸುವ ತಂತ್ರವನ್ನು ಹೂಡುತ್ತಾ ಬಂದಿದ್ದಾರೆ ಎನ್ನುವ ವಾದಕ್ಕೆ ಸಾಂದರ್ಭಿಕ ಸಾಕ್ಷಿ ಸಿಗುತ್ತದೆ. ಮೊನ್ನೆಯಷ್ಟೇ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದರು. ಈ ಮೂಲಕ ಮೈತ್ರಿ ಪಕ್ಷಕ್ಕೆ ಬೆಂಬಲ ನೀಡುವಂತೆ ಬಿಸಿ ಮುಟ್ಟಿಸಿದ್ದರು ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ. ಅವರ ತಂತ್ರ ವಿಫಲವಾಗಿದ್ದರಿಂದ ಇಂದು 14 ಜನರನ್ನೂ ಅನರ್ಹಗೊಳಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಯಾವ ಕಾನೂನಿನಡಿಯಲ್ಲಿ ಅನರ್ಹ ಮಾಡಿದ್ರಿ: ಶೋಭಾ ಕರಂದ್ಲಾಜೆ ಪ್ರಶ್ನೆ

    ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹಗೊಂಡ ಶಾಸಕರು ಹೈಕೋರ್ಟ್ ಇಲ್ಲವೇ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಬಹುದು. ಈ ಮೂಲಕ ಆದೇಶಕ್ಕೆ ತಡೆತಂದು ಮತ್ತೆ ಕಲಾಪದಲ್ಲಿ ಭಾಗವಹಿಸಬಹುದು. ರೆಬೆಲ್ ಶಾಸಕರು ವಿಪ್ ಉಲ್ಲಂಘನೆ ಮಾಡಿದ್ದಾರೆ ಎಂದು ಪ್ರಸ್ತಾಪಿಸಿದ್ದಾರೆ. ಆದರೆ ಸುಪ್ರೀಂಕೋರ್ಟ್ ಶಾಸಕರ ಮೇಲೆ ಒತ್ತಡ ಹಾಕುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರೂ ಕಾಂಗ್ರೆಸ್ ನಾಯಕರು ವಿಪ್ ಜಾರಿ ಮಾಡಿದ್ದಾರೆ. ಈ ಮೂಲಕ ಸ್ಪೀಕರ್ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದರು.

    ಅತೃಪ್ತ ಶಾಸಕರಿಗೆ ಬಿಜೆಪಿಯು ಸಚಿವ ಸ್ಥಾನ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಹಿರಿಯ ವಕೀಲರು, ಕೊಟ್ಟರೆ ಏನು ತಪ್ಪು? ಮಂತ್ರಿಗಿರಿ ನೀಡಿದರೆ ಪ್ರಳಯವಾಗಲ್ಲ ಬಿಡಿ. ಮಂತ್ರಿಗಿರಿಗಾಗಿಯೇ ಅವರು ರಾಜೀನಾಮೆ ನೀಡಿದ್ದರೆ ತಪ್ಪು. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ವಿಪಕ್ಷಕ್ಕೆ ಬೆಂಬಲ ನೀಡುವ ಉದ್ದೇಶದಿಂದ ರಾಜೀನಾಮೆ ನೀಡುವುದು ಸರಿ ಎಂದು ಅಭಿಪ್ರಾಯಪಟ್ಟರು.

  • ಸ್ಪೀಕರ್ ಮಾತು, ಕೃತಿಗೆ ಸಂಬಂಧವೇ ಇಲ್ಲದಂತೆ ನಡೆದುಕೊಳ್ತಿದ್ದಾರೆ – ಸಿಟಿ ರವಿ ಅಸಮಾಧಾನ

    ಸ್ಪೀಕರ್ ಮಾತು, ಕೃತಿಗೆ ಸಂಬಂಧವೇ ಇಲ್ಲದಂತೆ ನಡೆದುಕೊಳ್ತಿದ್ದಾರೆ – ಸಿಟಿ ರವಿ ಅಸಮಾಧಾನ

    ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಪಕ್ಷದ ಬಂಡಾಯ ಶಾಸಕರನ್ನು ಅನರ್ಹ ಮಾಡಿರುವ ಸ್ಪೀಕರ್ ನಿರ್ಧಾರಕ್ಕೆ ಬಿಜೆಪಿ ಶಾಸಕ ಸಿಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಬಿಎಸ್‍ ಯಡಿಯೂರಪ್ಪ ಅವರು ಸಿಎಂ ಆಗುತ್ತಿರುವ ಕುರಿತು ಸಂತಸ ವ್ಯಕ್ತಪಡಿಸಿ ಮಲ್ಲೇಶ್ವರದಲ್ಲಿರುವ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು, ವಿಧಾನ ಸಭಾಧ್ಯಕ್ಷರು ನಿನ್ನೆ ತೆಗೆದುಕೊಂಡ ನಿರ್ಣಯ ಸರಿಯಿಲ್ಲ. ಕೆಲ ತಿಂಗಳ ಹಿಂದೆ ಕೊಟ್ಟಿರುವ ಶಾಸಕರ ಅನರ್ಹ ದೂರಿಗೆ ಈಗ ಅವರನ್ನು ಅನರ್ಹ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ರಾಜೀನಾಮೆ ವಿಚಾರವಾಗಿ ತೀರ್ಮಾನ ಮಾಡಿ ಎಂದು ಹೇಳಿದ್ದರು ಕೂಡ ಅವರು ಅನರ್ಹ ಮಾಡಿದ್ದಾರೆ. ಆ ಮೂಲಕ ಸ್ಪೀಕರ್ ಮಾತು ಮತ್ತು ಕೃತಿಗೆ ಸಂಬಂಧವೇ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ ಎಂದರು.

    ಪತ್ರಿಕಾಗೋಷ್ಠಿ ನಡೆಸುವ ಸಂದರ್ಭದಲ್ಲಿ ಸ್ಪೀಕರ್ ಅವರಿಗೆ ನಾನು ತಪ್ಪು ಮಾಡುತ್ತಿದ್ದೇನೆ ಎನ್ನುವಂತೆ ಕಂಡು ಬಂದರು. ಆದ್ದರಿಂದಲೇ ಅವರು ಒಂದೂವರೆ ಗಂಟೆಗಳ ಕಾಲ ವಿವರಣೆ ನೀಡಿದ್ದಾರೆ. ಸಭಾಧ್ಯಕ್ಷರ ಸ್ಥಾನದಲ್ಲಿ ಇರುವ ಅವರು, ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ. ಅವರಿಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕಳೆದ 14 ತಿಂಗಳಿಂದ ಪಂಚ ತಾರಾ ಹೋಟೆಲ್‍ನಲ್ಲಿದ್ದುಕೊಂಡೇ ಆಡಳಿತ ಮಾಡುತ್ತಿದ್ದ ಕುಮಾರಸ್ವಾಮಿ ಅವರ ವಾಸ್ತವ್ಯದಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ರೆಸಾರ್ಟ್ ವಾಸ್ತವ್ಯದ ಬಗ್ಗೆಯೂ ಮಾತನಾಡಬೇಕಿತ್ತು. ಅಲ್ಲದೇ ಎಲ್ಲೋ ಒಂದು ಕಡೆ ಸ್ಪೀಕರ್ ಅವರ ನಡೆ ಅನುಮಾನ ಹುಟ್ಟಿಸಿದೆ. ಸಭಾಧ್ಯಕ್ಷರೇ ಸುಪ್ರೀಂ ಅಲ್ಲ, ಅಂತಿಮವಾಗಿ ನ್ಯಾಯಾಲಯ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂಬ ವಿಶ್ವಾಸ ಇದೆ ಎಂದರು.

    ಬಿಎಸ್‍ವೈ ಅವರು ಬಹುಮತ ಸಾಬೀತು ಪಡಿಸುವ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಬಹುಮತ ಸಾಬೀತು ಪಡೆಸಬೇಕಾಗಿರುವುದು ವಿಧಾನ ಸೌಧದಲ್ಲಿ ವಿನಃ, ರಾಜಭವನದಲ್ಲಿ ಅಲ್ಲ. ಎಲ್ಲರೂ ಕಾದು ನೋಡಿ. ಸದನದಲ್ಲೇ ಕುಮಾರಸ್ವಾಮಿ ಅವರ ವಿಶ್ವಾಸ ಮತಯಾಚನೆ ನಡೆದಿದ್ದು, ಅಲ್ಲಿ ಅವರು ವಿಫಲರಾದರು. ಆದರೆ ಬಿಎಸ್‍ವೈ ಅವರು ಖಂಡಿತ ಬಹುಮತ ಸಾಬೀತು ಪಡೆಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • 4 ವಾರಗಳ ಸಮಯ ನೀಡಿ – ಸ್ಪೀಕರ್ ಗೆ ಅತೃಪ್ತರ ಪತ್ರ

    4 ವಾರಗಳ ಸಮಯ ನೀಡಿ – ಸ್ಪೀಕರ್ ಗೆ ಅತೃಪ್ತರ ಪತ್ರ

    ಬೆಂಗಳೂರು: ಇಂದು ವಿಚಾರಣೆಗೆ ಹಾಜರಾಗಿ ಎಂದು ಸೂಚಿಸಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಅತೃಪ್ತ ಶಾಸಕರು ಪತ್ರ ಬರೆದು ಹಾಜರಾಗಲು 4 ವಾರಗಳ ಸಮಯ ನೀಡಿ ಎಂದು ಕೇಳಿಕೊಂಡಿದ್ದಾರೆ.

    ಪತ್ರದಲ್ಲಿ ನಾವು ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ರಾಜೀನಾಮೆಯನ್ನು ಶೀಘ್ರವೇ ಅಂಗೀಕರಿಸಬೇಕೆಂದು ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಇದರ ನಡುವೆ ನಮ್ಮ ಪಕ್ಷದ ಕಡೆಯಿಂದ ಅನರ್ಹತೆ ಅರ್ಜಿ ನಿಮ್ಮ ಬಳಿ ಬಂದಿದೆ ಅಂತ ಗೊತ್ತಾಗಿದೆ ಎಂದು ಉಲ್ಲೇಖಿಸಿದ್ದಾರೆ.

    ಅನರ್ಹತೆ ವಿಚಾರ ಸಂಬಂಧ ಪಕ್ಷದ ಕಡೆಯಿಂದ ಯಾವುದೇ ನೋಟಿಸ್ ಬಂದಿಲ್ಲ. ಆದರೆ ಇಂದು ನೀವು ಹಾಜರಾಗಿ ಎಂದು ನೋಟಿಸ್ ನೀಡಿದ್ದೀರಿ. ಕೆಲ ಅನಿವಾರ್ಯ ಕಾರಣಗಳಿಂದ ನಾವು ಹೊರಗಡೆ ಇದ್ದು ನಿಮ್ಮ ಪ್ರಶ್ನೆಗೆ ಉತ್ತರಿಸಲು ನಮಗೆ 4 ವಾರಗಳ ಸಮಯ ಬೇಕು ಎಂದು ಸ್ಪೀಕರ್ ಅವರಿಗೆ ಅತೃಪ್ತ ಶಾಸಕರು ಪತ್ರ ಬರೆದಿದ್ದಾರೆ.

    ಸೋಮವಾರ ಶಾಸಕಾಂಗ ಪಕ್ಷದ ಅಧ್ಯಕ್ಷರಿಗೆ ವಿಪ್ ನೀಡುವ ಜವಾಬ್ದಾರಿ ಇದೆ ಎಂದು ಸ್ಪೀಕರ್ ರಮೇಶ್ ಕುಮಾರ್ ರೂಲಿಂಗ್ ನೀಡಿದ್ದಾರೆ. ವಿಪ್ ನೀಡಬಹುದೋ ಇಲ್ಲವೋ ಎನ್ನುವುದರ ಬಗ್ಗೆ ಸಿದ್ದರಾಮಯ್ಯ ಕ್ರಿಯಾ ಲೋಪ ಎತ್ತಿದ್ದಾರೆ. ಶಾಸಕಾಂಗ ಪಕ್ಷದ ನಾಯಕರು ಸದಸ್ಯರಿಗೆ ವಿಪ್ ನೀಡಬಹುದು. ಅದು ಸಂವಿಧಾನದತ್ತವಾದ ಹಕ್ಕು. ಈ ವಿಚಾರದ ಬಗ್ಗೆ ನಾನು ಕಾನೂನು ಪಂಡಿತರ ಜೊತೆ ಚರ್ಚೆ ನಡೆಸಿದ್ದೇನೆ. ಇದನ್ನು ನಾನು ಅಧಿಕಾರ ಎಂದು ಕರೆಯುವುದಿಲ್ಲ. ಇದನ್ನು ಜವಾಬ್ದಾರಿ ಎಂದು ಕರೆಯುತ್ತೇನೆ. ಹೀಗಾಗಿ ಶಾಸಕಾಂಗ ನಾಯಕರು ಸದಸ್ಯರಿಗೆ ವಿಪ್ ನೀಡಬಹುದು ಎಂದು ಸ್ಪೀಕರ್ ರೂಲಿಂಗ್ ನೀಡಿದರು.

    ವಿಪ್ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ಸ್ಪಷ್ಟನೆ ನೀಡುವಂತೆ ಕೋರಿದ್ದಾರೆ. ಜುಲೈ 17ರಂದು ಅತೃಪ್ತರ ಬಗ್ಗೆ ನೀಡಿರುವ ಮಧ್ಯಂತರ ಆದೇಶದಿಂದ ಗೊಂದಲ ಸೃಷ್ಟಿಯಾಗಿದೆ. ಕಲಾಪಕ್ಕೆ ಹಾಜರಾಗಬೇಕೇ? ಬೇಡವೇ ಎನ್ನುವುದನ್ನು ಶಾಸಕರ ವಿವೇಚನೆಗೆ ಬಿಡಲಾಗಿದೆ. ಈ ಆದೇಶ ರಾಜಕೀಯ ಪಕ್ಷಗಳ ವಿಪ್ ಅಧಿಕಾರವನ್ನು ಕಿತ್ತುಕೊಳ್ಳಲಿದೆ. ಶೆಡ್ಯೂಲ್ 102(1)ಬಿ ಅನ್ವಯ ರಾಜಕೀಯ ಪಕ್ಷಗಳಿಗೆ ವಿಪ್ ಅಧಿಕಾರವಿದೆ. ವಿಶ್ವಾಸಮತ ಸಾಬೀತು ವೇಳೆ ಶಾಸಕರಿಗೆ ವಿಪ್ ನೀಡುವುದು ಅನಿವಾರ್ಯವಾಗಿದೆ. ನೀವು ನೀಡಿರುವ ಆದೇಶ ಈ ವ್ಯಾಪ್ತಿಗೆ ಬರುತ್ತದೋ ಇಲ್ಲವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಕೇಳಿಕೊಂಡಿದ್ದಾರೆ.

  • ಅನರ್ಹತೆಯ ಅಸ್ತ್ರದಿಂದ ಪಕ್ಷೇತರ ಶಾಸಕ ಆರ್.ಶಂಕರ್ ಬಚಾವ್?

    ಅನರ್ಹತೆಯ ಅಸ್ತ್ರದಿಂದ ಪಕ್ಷೇತರ ಶಾಸಕ ಆರ್.ಶಂಕರ್ ಬಚಾವ್?

    ಬೆಂಗಳೂರು: ಎರಡನೇ ಬಾರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿ ಜೂನ್ 14 ರಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಕೆಪಿಜೆಪಿ ಪಕ್ಷದ ಶಾಸಕ ಆರ್.ಶಂಕರ್ ಅಲ್ಪ ಸಮಯದಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಇದರ ಬೆನ್ನಲ್ಲೇ ಆರ್.ಶಂಕರ್ ಅನರ್ಹತೆಯ ಅಸ್ತ್ರ ಪ್ರಯೋಗ ಆಗಲಿದೆಯಾ ಎಂಬ ಅನುಮಾನ ಮೂಡಿತ್ತು.

    ಸಚಿವ ಸ್ಥಾನ ಪಡೆಯುವ ವೇಳೆ ಶಂಕರ್ ತಮ್ಮ ಪಕ್ಷವನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನ ಮಾಡಲು ಸ್ಪೀಕರ್ ಅವರಿಗೆ ಪತ್ರ ಬರೆದಿದ್ದರು. ಆದರೆ ಸ್ಪೀಕರ್ ಈ ಪತ್ರವನ್ನು ನಿರಾಕರಿಸಿ ಪಕ್ಷದಿಂದ ಪತ್ರವನ್ನು ನೀಡುವಂತೆ ತಿಳಿಸಿದ್ದರು.

    ಇತ್ತ 2ನೇ ಬಾರಿಗೆ ಮೈತ್ರಿ ಸರ್ಕಾರಕ್ಕೆ ಬೆಂಬಲ ವಾಪಸ್ ಪಡೆದು ಮುಂಬೈಗೆ ತೆರಳಿದ್ದ ಆರ್. ಶಂಕರ್ ಜುಲೈ 12 ರಂದು ಸ್ಪೀಕರ್ ಗೆ ಬರೆದು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು, ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದರು. ಅಲ್ಲದೇ ಪ್ರತ್ಯೇಕ ಆಸನ ವ್ಯವಸ್ಥೆ ಮಾಡುವಂತೆ ಸ್ಪೀಕರ್ ಬಳಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಶಂಕರ್ ಅವರಿಗೆ ಪ್ರತ್ಯೇಕ ಆಸನ ವ್ಯವಸ್ಥೆಗೆ ಸ್ಪೀಕರ್ ಸೂಚಿಸಿದ್ದಾರೆ.

    ಇತ್ತ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಹಳ್ಳಿ ಅವರನ್ನು ಅನರ್ಹತೆ ಮಾಡುವಂತೆ ಕಾಂಗ್ರೆಸ್ ಸ್ಪೀಕರ್ ಅವರಿಗೆ ಮನವಿ ಮಾಡಿದೆ. ಹಳೆ ಪ್ರಕರಣದಲ್ಲಿ ವಿಚಾರಣೆ ನಡೆಸಲಿರುವ ಸ್ಪೀಕರ್ ಅವರು ಈ ವಿಚಾರದ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ. ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಹಳ್ಳಿ ಅವರ ವಿರುದ್ಧ ಕಾಂಗ್ರೆಸ್ ಕೆಲ ಸಾಕ್ಷಿಗಳನ್ನು ನೀಡಿದೆ. ಈ ಅಂಶಗಳೊಂದಿಗೆ ಸ್ಪೀಕರ್ ಅವರು ವಿಚಾರಣೆ ನಡೆಲಿದ್ದಾರೆ.