ಬೆಂಗಳೂರು: ಸುಪ್ರೀಂಕೋರ್ಟಿನಲ್ಲಿ ಸಾಲು ಸಾಲು ಹಿನ್ನೆಡೆಯ ಬಳಿಕ ಅನರ್ಹ ಶಾಸಕರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಹೌದು. ಇಂದು ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯದ 17 ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರ, ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಆಯೋಗವು ಇಂದು ಮಧ್ಯಾಹ್ನ 12 ಗಂಟೆಗೆ ದಿನಾಂಕ ಪ್ರಕಟಿಸಲಿದೆ.
ಮಹಾರಾಷ್ಟ್ರ, ಹರಿಯಾಣ ಜೊತೆಗೆ ರಾಜ್ಯದ 17 ಕ್ಷೇತ್ರಗಳಿಗೆ ಕೂಡ ಉಪ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಚುನಾವಣೆಗೂ ಮುನ್ನ ಮಂತ್ರಿಯಾಗುವ ಆಸೆಯಲ್ಲಿದ್ದ ಅನರ್ಹ ಶಾಸಕರಿಗೆ ಬಿಗ್ ಶಾಕ್ ಉಂಟಾಗಿದೆ.
ನವದೆಹಲಿ: ಕರ್ನಾಟಕದ ಸ್ಪೀಕರ್ ಹಾದಿಯನ್ನೇ ದೆಹಲಿ ಸ್ಪೀಕರ್ ಸಹ ತುಳಿದಿದ್ದು, ಎಎಪಿ ತೊರೆದು ಬಿಜೆಪಿ ಸೇರಿದ್ದ ಇಬ್ಬರು ಶಾಸಕರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆ.
ದೆಹಲಿ ವಿಧಾನಸಭೆಯ ಸ್ಪೀಕರ್ ರಾಮ್ ನಿವಾಸ್ ಗೋಯಲ್ ಗುರುವಾರ ಈ ಆದೇಶ ಹೊರಡಿಸಿದ್ದು, ಎಎಪಿ ತೊರೆದು ಬಿಜೆಪಿ ಸೇರಿದ್ದ ಇಬ್ಬರು ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸಿದ್ದಾರೆ. ಅನಿಲ್ ಬಜ್ಪಾಯಿ ಮತ್ತು ದೇವಿಂದರ್ ಸಿಂಗ್ ಶರಾವತ್ ಇಬ್ಬರು ಶಾಸಕರು ಎಎಪಿ ಟಿಕೆಟ್ನಿಂದ ಗೆದ್ದು ಬಂದಿದ್ದರು. ಆದರೆ ಆಡಳಿತಾರೂಢ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರು ಹೀಗಾಗಿ ಅಮಾನತುಗೊಳಿಸಿದ್ದಾರೆ.
ಗಾಂಧಿ ನಗರ ಶಾಸಕ ಅನಿಲ್ ಬಜ್ಪಾಯಿ ಅವರು ಮೇ 3 ರಂದು ಎಎಪಿ ತೊರೆದಿದ್ದರು. ಬಿಜೆಪಿಯ ಕುದುರೆ ವ್ಯಾಪಾರಕ್ಕೊಳಗಾಗಿ ಎಎಪಿ ತೊರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆ ಸಮಯದಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಏಳು ಶಾಸಕರಿಗೆ ತಲಾ 10 ಕೋಟಿ ರೂ. ಆಫರ್ ನೀಡಿ ಬಿಜೆಪಿ ನಮ್ಮ ಶಾಸಕರನ್ನು ಖರೀದಿಸುತ್ತಿದೆ ಎಂದು ಆರೋಪಿಸಿದ್ದರು.
ಈ ಆರೋಪವನ್ನು ಬಜ್ಪಾಯಿ ನಿರಾಕರಿಸಿದ್ದರು. ಅಲ್ಲದೆ, ಬಿಜೆಪಿಯಿಂದ ನಾನು ಯಾವುದೇ ರೀತಿಯ ಹಣ ಪಡೆದಿಲ್ಲ. ಮತ್ತೊಬ್ಬರ ಮೇಲೆ ಆರೋಪ ಹೊರಿಸುವುದು, ನಂತರ ಕ್ಷಮೆಯಾಚಿಸುವುದು ಅರವಿಂದ ಕೇಜ್ರಿವಾಲ್ ಅವರ ಹವ್ಯಾಸವಾಗಿದೆ ಎಂದು ಆರೋಪಿಸಿದ್ದಾರೆ.
ಬಜ್ಪಾಯಿ ಅವರು ಬಿಜೆಪಿ ಸೇರಿದ ನಾಲ್ಕು ದಿನಗಳ ನಂತರ ಮೇ.7 ರಂದು ಬಿಜ್ವಾಸನ್ ಶಾಸಕ ದೇವಿಂದರ್ ಶರಾವತ್ ಅವರು ಬಿಜೆಪಿ ಸೇರಿದ್ದರು. ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ದೇವಿಂದರ್ ಸಿಂಗ್ ಶರಾವತ್, ಎಎಪಿ ಸಂಪೂರ್ಣವಾಗಿ ಕಡೆಗಣಿಸಿ, ನನ್ನನ್ನು ಮೂಲೆಗುಂಪು ಮಾಡಿದೆ. ಅಲ್ಲದೆ, ಪಕ್ಷದ ಸಮಾರಂಭಗಳಿಗೂ ಆಹ್ವಾನಿಸದೇ ನಿರ್ಲಕ್ಷ್ಯವಹಿಸಿದೆ. ಪಕ್ಷ ನನ್ನನ್ನು ಅವಮಾನಿಸಿದರೂ ಸಹ ನಾನು ಅದನ್ನು ಗಂಭೀರವಾಗಿ ಪರಿಗಣಿಸದೆ, ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದರು.
ಸ್ಪೀಕರ್ ರಾಮ್ ನಿವಾಸ್ ಗೋಯಲ್ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಶಾಸಕ ಕಪಿಲ್ ಮಿಶ್ರಾ ಅವರನ್ನು ಅನರ್ಹಗೊಳಿಸಿದ್ದರು.
ಆಗಸ್ಟ್ 2ರಂದು ಕರವಾಲ್ ನಗರದ ಶಾಸಕ ಮಿಶ್ರಾ ಅವರನ್ನು ಅನರ್ಹಗೊಳಿಸಿ ಸ್ಪೀಕರ್ ಆದೇಶಿಸಿದ್ದರು. ಜನವರಿ 27ರಂದು ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕರು ಭಾಗವಹಿಸಿದಾಗಿನಿಂದ ಈ ಆದೇಶ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ಮೈಸೂರು: ನಾನು ದೇವೇಗೌಡರ ಬಳಿ ಕ್ಷಮೆ ಕೇಳುತ್ತೇನೆ. ದೋಸ್ತಿ ಸರ್ಕಾರ ಪತನಕ್ಕೆ ಸರ್ಕಾರ ನಡೆಸಿದವರೇ ಕಾರಣ. ದೋಸ್ತಿ ಸರ್ಕಾರದ ಪತನಕ್ಕೆ ನಾವು 20 ಶಾಸಕರಾಗಲಿ, ಬಿಜೆಪಿ ಆಗಲಿ ಕಾರಣವಲ್ಲ ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದ ಪತನಕ್ಕೆ ಸರ್ಕಾರ ನಡೆಸಿದವರೇ ಕಾರಣವಾಗಿದ್ದಾರೆ. ಸರ್ಕಾರ ನಡೆಸುವವರು ನಾಯಕರ ಥರ ಇರಲಿಲ್ಲ, ಮಾಲೀಕರ ರೀತಿ ಇದ್ದರು. ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಕ್ಷಮೆ ಕೇಳುತ್ತೇನೆ. ಸನ್ನಿವೇಶದ ಒತ್ತಡ, ನನಗೆ ಆದ ಅವಮಾನ, ನನ್ನ ನಿರ್ಲಕ್ಷಿಸಿದ ರೀತಿಯಿಂದ ರಾಜೀನಾಮೆ ಕೊಟ್ಟಿದ್ದೇನೆ. ದೇವೇಗೌಡರ ಮಗಳು ಕೆ.ಆರ್. ಪೇಟೆ ಕ್ಷೇತ್ರಕ್ಕೆ ಬರಲಿದ್ದಾರೆ. ಇದಕ್ಕೆ ಕೆ.ಆರ್. ಪೇಟೆ ಶಾಸಕರಿಗೆ ಅವಮಾನ ಮಾಡಿದರು ಎಂದರು.
ನನ್ನನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ದೂರ ಮಾಡಿದ್ದೇ ಜೆಡಿಎಸ್ ಎಂದು ಗಂಭೀರ ಆರೋಪ ಮಾಡಿದ ಅವರು, ನಾವು ಅತೃಪ್ತರಲ್ಲ. ನಾವು ತೃಪ್ತರು. ದೋಸ್ತಿ ಸರ್ಕಾರ ನಡೆಸಿದವರು ಅತೃಪ್ತರಾಗಿದ್ದಾರೆ. ದೋಸ್ತಿಗಳ ನಡುವಿನ ಅತೃಪ್ತಿ, ಅಸಮಾಧಾನ, ಅನುಮಾನ ಇದರಿಂದ ಸರ್ಕಾರ ಬೀಳಿಸಿ ಕೊಂಡ್ರಿ. ಇದು ಆಪರೇಷನ್ ಕಮಲ ಅಲ್ಲ. ಸಾರಾ ಮಹೇಶ್ ಎಂಬ ಅಪ್ರಬುದ್ಧ ಬಾಯಿಗೆ ಬಂದಂತೆ ಹೇಳುತ್ತಾನೆ. 20 ಜನ ಶಾಸಕರು ದುಡ್ಡಿಗಾಗಿ ಮಾರಿಕೊಂಡಿಲ್ಲ. ಪದವಿಗಾಗಿ ಪದವಿ ತ್ಯಾಗ ಮಾಡಿಲ್ಲ. ರಾಜೀನಾಮೆ ಕೊಟ್ಟ ಶಾಸಕರು ದುಡ್ಡಿನ ಕುಳಗಳು ಎಂದರು.
ನಾನು ಸತ್ಯವಂತ, ಸಂತ, ಮಹಾತ್ಮಗಾಂಧಿ ಎಂದೆಲ್ಲ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳುತ್ತಿದ್ದರು. ಆದರೆ, ಅವರು ಮಾಡಿದ್ದೇನು ಎಂದು ಪ್ರಶ್ನಿಸಿದ ವಿಶ್ವನಾಥ್, ಸದನದಲ್ಲಿ ಇಲ್ಲದ ವ್ಯಕ್ತಿ ವಿರುದ್ಧ ಮಾತನಾಡಲು ಬಿಟ್ಟರು ಎಂದು ವಾಗ್ದಾಳಿ ನಡೆಸಿದರು.
ಸುದ್ದಿಗೋಷ್ಠಿಗೂ ಮುನ್ನ ಮೈಸೂರು ಪತ್ರಕರ್ತರ ಭವನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ಸುದ್ದಿಗೋಷ್ಠಿ ವೇಳೆ ಗಲಾಟೆಯಾಗುವ ಸಂಭವದಿಂದಾಗಿ ಎರಡು ತುಕಡಿ ಸಿಆರ್, ಕೆಎಸ್ಆರ್ ಪಿ ಹಾಗೂ 30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.
ಈ ಮಧ್ಯೆ ಮೈಸೂರು ಪತ್ರಕರ್ತರ ಭವನದ ಬಳಿ ಜೆಡಿಎಸ್ ಕಾರ್ಯಕರ್ತರು ಲಗ್ಗೆಯಿಟ್ಟಿದ್ದು. ಕಾರ್ಯಕರ್ತರನ್ನ ಭವನಕ್ಕೆ ಬರದಂತೆ ಪೊಲೀಸರು ತಡೆದಿದ್ದರು. ಅಲ್ಲದೆ ಸುದ್ದಿಗೋಷ್ಠಿ ಮುಗಿಯುವವೆರೆಗೂ ಬರದಂತೆ ಸೂಚನೆ ನೀಡಿದ್ದರು.
ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ನನ್ನನ್ನು ಅನರ್ಹ ಮಾಡಿದ್ದಕ್ಕೆ ಒಂದು ಸಾಸಿವೆ ಕಾಳಷ್ಟೂ ನೋವಾಗಿಲ್ಲ ಎಂದು ಅನರ್ಹ ಶಾಸಕ ಮುನಿರತ್ನ ಹೇಳಿದ್ದಾರೆ.
ಪಬ್ಲಿಕ್ ಟಿವಿ ಸಂದರ್ಶನದ ವೇಳೆ, ನನ್ನ ಕ್ಷೇತ್ರದ ಅಭಿವೃದ್ಧಿಯಾಗಿ ಯಾವ ಪಾರ್ಟಿಗಾದರೂ ನಾನು ಹೋಗುತ್ತೇನೆ. ರಾಜಕೀಯದಲ್ಲಿ ಯಾರ ಮಾತನ್ನು ತೆಗೆದುಕೊಳ್ಳಬಾರದು. ಅಭಿವೃದ್ಧಿಗಾಗಿ ಯಾರು ಕರೆದರೂ ಹೋಗುತ್ತೇವೆ ಎಂದು ಎಂದು ತಿಳಿಸಿದರು.
ಅನರ್ಹಗೊಳಿಸಿರುವುದಕ್ಕೆ ಬೇಸರ, ದುಃಖ, ಟೆನ್ಶನ್ ಯಾವುದು ಆಗಿಲ್ಲ. ನನಗೆ ಒಂದು ಸಾಸಿವೆ ಕಾಳಷ್ಟೂ ನೋವು ಇಲ್ಲ. ಕೆಲಸ ಮಾಡದೇ ಸಾಯುವುದಕ್ಕಿಂತ ಅದರಿಂದೀಚೆಗೆ ಬಂದು ನೆಮ್ಮದಿ ಜೀವನ ಮಾಡೋಣ. ಅಲ್ಲಿದ್ದು ಜನರಿಗೆ ಮೋಸ ಮಾಡುವ ಬದಲು ಅಲ್ಲಿಂದೀಚೆಗೆ ಬಂದು ನಮ್ಮ ಕೆಲಸ ನಾವು ಮಾಡಿಕೊಂಡು ಇರೋಣ. ಜನರ ಮಧ್ಯೆ ಇದ್ದುಕೊಂಡು ಸುಳ್ಳು ಹೇಳಿಕೊಂಡು ಇರುವುದು ಬೇಡ. ಈಗ ತೃಪ್ತಿ ಇದೆ ಎಂದರು.
ಈ ರಾಜೀನಾಮೆ ಕೊಡುವುದು, ಮುಂಬೈನಲ್ಲಿ ಅತೃಪ್ತ ಶಾಸಕರು ಇರುವುದು, ಅನರ್ಹ ಮಾಡಿರುವುದು ಇದೆಲ್ಲಾ ಬೇಕಿತ್ತಾ ಎಂದಿದ್ದಕ್ಕೆ, ಪ್ರತಿಯೊಬ್ಬರಿಗೂ ಬೇಕಿತ್ತು. ನಾನು ಹಿರಿಯ ಮುಖಂಡರು ಎಂದು ಯಾರು ಅಂದುಕೊಳ್ಳುತ್ತಾರೆ ಅವರಿಗೆಲ್ಲ ಬೇಕಿತ್ತು. ಕಿರಿಯ ಮುಖಂಡರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದರೆ ಏನಾಗುತ್ತದೆ ಎಂಬುದು ಎಲ್ಲರಿಗೂ ತಿಳಿಯಬೇಕಿತ್ತು. ಹೀಗಾಗಿ ಇದೆಲ್ಲ ಬೇಕಿತ್ತು ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ನಾವು ಅನರ್ಹತೆ ಆಗಲು ಯಾರು ಕಾರಣ ಎನ್ನುವುದನ್ನು ಸದ್ಯದಲ್ಲೇ ಬಹಿರಂಗ ಮಾಡುತ್ತೇನೆ. ಮುಂಬರುವ ಮೂರು ದಿನಗಳಲ್ಲಿ ಸ್ಫೋಟಕ ಮಾಹಿತಿ ನೀಡುತ್ತೇನೆ ಎಂದು ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಶಾಸಕ ಎಂಟಿಬಿ ನಾಗರಾಜು ಹೇಳಿಕೆ ನೀಡಿದ್ದಾರೆ.
ಮುಂಬೈನಿಂದ ಬೆಂಗಳೂರಿಗೆ ವಾಪಸ್ ಬಂದಿರುವ ಕಾಂಗ್ರೆಸ್ ನಾಯಕ ಎಂಟಿಬಿ ನಾಗರಾಜ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ನಮ್ಮ ಮುಖಂಡರೇ ನಮಗೆ ದ್ರೋಹ ಮಾಡಿದರು. ಎಲ್ಲವನ್ನ ಸುದ್ದಿಗೋಷ್ಠಿಯಲ್ಲಿ ತಿಳಿಸುತ್ತೇನೆ. ಅನರ್ಹತೆ ಬಗ್ಗೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದರು.
ನನ್ನ ಕ್ಷೇತ್ರದ ಜನರ ಹಾಗೂ ಮುಖಂಡರ ತೀರ್ಮಾನದಂತೆ ನನ್ನ ಮುಂದಿನ ನಡೆ ತೆಗೆದುಕೊಳ್ಳುತ್ತೇನೆ. ನಾವು ಅನರ್ಹತೆ ಆಗಲು ಯಾರು ಕಾರಣ ಹಾಗೂ ಇತರೇ ವಿಚಾರಗಳ ಬಗ್ಗೆ ಮುಂಬರುವ ಮೂರು ದಿನಗಳಲ್ಲಿ ಸ್ಫೋಟಕ ಮಾಹಿತಿ ನೀಡುತ್ತೇನೆ ಎಂದು ಕಿಡಿಕಾರಿದರು.
ರಾಜೀನಾಮೆಗೆ ಕಾರಣ ಏನು ಎಂಬುದನ್ನು ಕೂಡ ಹೇಳುತ್ತಾನೆ. ನಾನು ಜನಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಬೇಕಾದಷ್ಟು ಹಣವನ್ನು ಆ ಭಗವಂತನ ಕೊಟ್ಟಿದ್ದಾನೆ. ಅಧಿಕಾರ, ಹಣದ ಆಸೆಗೆ ನಾನು ಪಕ್ಷ ಬಿಟ್ಟಿಲ್ಲ. ನಮ್ಮನ್ನು ಸ್ಪೀಕರ್ ಅನರ್ಹ ಮಾಡುತ್ತಾರೆ ಅಂತ ಮೊದಲೇ ಗೊತ್ತಿತ್ತು. ಈವರೆಗೂ ನಾನು ಯಾವ ಪಕ್ಷವನ್ನೂ ಸೇರಲು ನಿರ್ಧಾರ ಮಾಡಿಲ್ಲ. ಸಮ್ಮಿಶ್ರ ಸರ್ಕಾರದ ಆಡಳಿತಕ್ಕೆ ಬೇಸತ್ತು ರಾಜೀನಾಮೆ ಕೊಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಹಾವೇರಿ: ಸ್ಪೀಕರ್ ತೀರ್ಪಿನಿಂದ ಅನರ್ಹಗೊಂಡ ಬಿ.ಸಿ.ಪಾಟೀಲ್ ಕ್ಷೇತ್ರದ ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಈ ತೀರ್ಪು ನ್ಯಾಯ ಸಮ್ಮತವಾಗಿಲ್ಲ, ತಲೆ ಕೆಡಿಸಿಕೊಳ್ಳಬೇಡಿ ಎಂದು ಪೋಸ್ಟ್ ಮಾಡಿ ತಿಳಿಸಿದ್ದಾರೆ.
ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ಅವರ ತೀರ್ಪಿಗೆ ಯಾರು ತಲೆ ಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ. ಈ ತೀರ್ಪು ನ್ಯಾಯ ಸಮ್ಮತವಾಗಿಲ್ಲ. ಈ ಬಗ್ಗೆ ನಾವು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ನ್ಯಾಯವಾದ ತೀರ್ಪು ಪಡಿಯೋಣ. ಕ್ಷೇತ್ರದಲ್ಲಿ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧರಿರೋಣ ಎಂದು ಮತದಾರರಿಗೆ ಹಾಗೂ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ರವಾನಿಸಿದ್ದಾರೆ.
ಪೋಸ್ಟ್ ನಲ್ಲಿ ಏನಿದೆ?
ಆತ್ಮೀಯರೇ, ಈ ದಿನದಂದು ಸ್ಪೀಕರ್ ಅವರು ನೀಡಿದ ತೀರ್ಪು ನ್ಯಾಯ ಸಮ್ಮತವಾಗಿರುವುದಿಲ್ಲ. ಈ ತೀರ್ಪಿನ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ನ್ಯಾಯದ ಪರವಾಗಿರುವ ತೀರ್ಪನ್ನು ಪಡೆಯೋಣ. ತಾವೆಲ್ಲರೂ ಯಾವುದೇ ಕಾರಣಕ್ಕೂ ಧೃತಿಗೆಡದೆ ಮುಂದಿನ ನಡೆಯ ಬಗ್ಗೆ ದೃಢ ನಿರ್ಧಾರವನ್ನು ಕೈಗೊಳ್ಳೋಣ ಹಾಗೂ ಮತ್ತೊಮ್ಮೆ ಚುನಾವಣೆಯನ್ನು ಎದುರಿಸಲು ಸಿದ್ಧರಿರೋಣ. ತಮ್ಮ ಸೇವಕ, ಬಿ.ಸಿ.ಪಾಟೀಲ್ ಎಂದು ವಾಟ್ಸ್ ಆ್ಯಪ್ನಲ್ಲಿ ಸಂದೇಶ ಕಳುಹಿಸಿದ್ದಾರೆ.
ಇಂದು ಸ್ಪೀಕರ್ ರಮೇಶ್ ಕುಮಾರ್ ಅವರು, ಮಸ್ಕಿ ಶಾಸಕ ಪ್ರತಾಪ್ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಎಲ್ಲ ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದ್ದಾರೆ.
ಈ ಹಿಂದೆ ಅನರ್ಹಗೊಂಡ ಮೂವರು ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮುಟಳ್ಳಿ ಹಾಗೂ ಆರ್. ಶಂಕರ್ ಬೈ ಎಲೆಕ್ಷನ್ ಗೆ ನಿಲ್ಲುವಂತಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಖಡಕ್ಕಾಗಿ ತಿಳಿಸಿದ್ದಾರೆ.
ಬೆಂಗಳೂರು: ವಂಶಪಾರಂಪರ್ಯದ ರಾಜಕೀಯ ಪಕ್ಷದಲ್ಲಿ ಜನಪ್ರತಿನಿಧಿಗಳಿಗೆ ಸ್ವಾತಂತ್ರ್ಯವಿಲ್ಲ. ಅತೃಪ್ತ ಶಾಸಕರನ್ನು ಹೋಲ್ ಸೇಲ್ ಆಗಿ ಅನರ್ಹಗೊಳಿಸಿರೋದನ್ನ ನಾವು ಸ್ಪೀಕರ್ ಅವರಿಂದ ನಿರೀಕ್ಷಿಸಿರಲಿಲ್ಲ ಎಂದು ಬಿಜೆಪಿ ಶಾಸಕ ಪಿ. ರಾಜೀವ್ ಕಿಡಿಕಾರಿದ್ದಾರೆ.
ಬಿಎಸ್ವೈ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅತೃಪ್ತ ಶಾಸಕರನ್ನ ಸ್ಪೀಕರ್ ರಮೇಶ್ ಕುಮಾರ್ ಹೋಲ್ ಸೇಲ್ ಆಗಿ ಅನರ್ಹ ಮಾಡಿರೋದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ. ಇದು ಸಂವಿಧಾನಕ್ಕೆ ಮಾಡಿರೋ ಅಪಚಾರ. ಸ್ಪೀಕರ್ ಸುಪ್ರೀಂ ಆದೇಶವನ್ನ ಸಂಪೂರ್ಣವಾಗಿ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ:ಯಾವ ಕಾನೂನಿನಡಿಯಲ್ಲಿ ಅನರ್ಹ ಮಾಡಿದ್ರಿ: ಶೋಭಾ ಕರಂದ್ಲಾಜೆ ಪ್ರಶ್ನೆ
ಪ್ರಜಾತಂತ್ರ ವ್ಯವಸ್ತೆಯಲ್ಲಿ ಸ್ಪೀಕರ್ ಹುದ್ದೆಯನ್ನ ಇನ್ನೊಬ್ಬರ ಅನುಕೂಲಕ್ಕೆ ಬಳಸಿಕೊಂಡ ದೊಡ್ಡ ಕಪ್ಪು ಚುಕ್ಕೆಯನ್ನ ರಮೇಶ್ ಕುಮಾರ್ ಅವರು ಹೊತ್ತುಕೊಳ್ಳಬೇಕಾಗಿದೆ. ಅತೃಪ್ತ ಶಾಸಕರ ರಾಜೀನಾಮೆಯ ಬಗ್ಗೆ ಇತ್ಯರ್ಥ ಪಡಿಸಿ, ಆ ವರದಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಿ ಎಂದು ಸುಪ್ರೀಂ ಆದೇಶಿಸಿತ್ತೇ ವಿನಾಃ ಅನರ್ಹಗೊಳಿಸಿ ಎಂದಿರಲಿಲ್ಲ. ಕಾಂಗ್ರೆಸ್, ಜನತಾದಳ ಪಕ್ಷ ಕೆಲವೇ ಕೆಲವು ವ್ಯಕ್ತಿಗಳ ಕಪಿಮುಷ್ಟಿಯಲ್ಲಿದೆ. ಸ್ಪೀಕರ್ ತೀರ್ಪನ್ನು ಸುಪ್ರೀಂ ನಿರಾಕರಿಸಿ, ಈ ವಿಚಾರದಲ್ಲಿ ಅವರಿಗೆ ಎಚ್ಚರಿಕೆ ನೀಡುತ್ತೆ ಎಂದು ನಾನು ಭಾವಿಸಿದ್ದೇನೆ ಎಂದು ರಾಜೀವ್ ಸ್ಪೀಕರ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದರು.
ವಂಶಪಾರಂಪರ್ಯದ ರಾಜಕೀಯ ಪಕ್ಷದಲ್ಲಿ ಆಯ್ಕೆ ಆಗುವ ಬೇರೆ ಜನಪ್ರತಿನಿಧಿಗಳಿಗೆ ಅವಕಾಶವಿಲ್ಲ, ಸ್ವಾತಂತ್ರ್ಯವಿಲ್ಲ. ಜನರಿಂದ ಆಯ್ಕೆಯಾದರೂ ಅವರ ಅಣತಿಗೆ ಕುಣಿಯುವಂತವರಿಗೆ ಕಾಲ ಎನ್ನುವುದು ಮತ್ತೆ ಸಾಬೀತಾಗಿದೆ. ಈ ತೀರ್ಪು ಸಂವಿಧಾನಕ್ಕೆ, ಕಾನೂನಿಗೆ ಮಾಡದ ಅಪಚಾರವಾಗಿದೆ ಎಂದು ಸ್ಪೀಕರ್ ಹಾಗೂ ಕೈ-ದಳದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು: ಅತೃಪ್ತ ಶಾಸಕರ ಅನರ್ಹಗೊಳಿಸಿದ ಸ್ಪೀಕರ್ ತೀರ್ಪನ್ನು ಸ್ವಾಗತಿಸುತ್ತೇವೆ. ಪಕ್ಷಕ್ಕೆ ಹಾಗೂ ಮತದಾರರಿಗೆ ದ್ರೋಹ ಮಾಡಿದಕ್ಕೆ ನ್ಯಾಯಾಲಯ ಕೂಡ ಶಾಸಕರಿಗೆ ತಕ್ಕ ಶಿಕ್ಷೆ ನೀಡಲಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಸೋಮವಾರ ನೂತನ ಮುಖ್ಯಮಂತ್ರಿಗಳು ಬಹುಮತ ಸಾಬೀತುಪಡಿಸುವ ಮುನ್ನ ದಿನವೇ 14 ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಅತೃಪ್ತ ಶಾಸಕರ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಸ್ಪೀಕರ್ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದಿದೆ.
ಮೈತ್ರಿ ಸರ್ಕಾರವನ್ನು ಉರುಳಿಸಬೇಕೆಂದೇ ಬಿಜೆಪಿಯೊಂದಿಗೆ ಕೈ ಜೋಡಿಸಿ ತಮ್ಮ ಪಕ್ಷಗಳಿಗೆ, ತಮ್ಮನ್ನು ಆಯ್ಕೆ ಮಾಡಿದ ಜನತೆಗೆ ದ್ರೋಹ ಬಗೆದ ಈ ಶಾಸಕರುಗಳಿಗೆ ಜನತಾ ನ್ಯಾಯಾಲಯ ಕೂಡ ತಕ್ಕ ಶಿಕ್ಷೆಯನ್ನು ವಿಧಿಸಲಿದೆ. #KarnatakaPolitics
ಟ್ವೀಟ್ನಲ್ಲಿ ಏನಿದೆ?
ಅತೃಪ್ತ ಶಾಸಕರ ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರು ಕೊಟ್ಟಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ಮೈತ್ರಿ ಸರ್ಕಾರವನ್ನು ಉರುಳಿಸಬೇಕೆಂದೇ ಬಿಜೆಪಿಯೊಂದಿಗೆ ಕೈ ಜೋಡಿಸಿ ತಮ್ಮ ಪಕ್ಷಗಳಿಗೆ, ತಮ್ಮನ್ನು ಆಯ್ಕೆ ಮಾಡಿದ ಜನತೆಗೆ ದ್ರೋಹ ಬಗೆದ ಈ ಶಾಸಕರುಗಳಿಗೆ ಜನತಾ ನ್ಯಾಯಾಲಯ ಕೂಡ ತಕ್ಕ ಶಿಕ್ಷೆಯನ್ನು ವಿಧಿಸಲಿದೆ ಎಂದು ಬರೆದು ಟ್ವೀಟ್ ಮಾಡಲಾಗಿದೆ.
ಇಂದು ಸ್ಪೀಕರ್ ರಮೇಶ್ ಕುಮಾರ್ ಅವರು, ಮಸ್ಕಿ ಶಾಸಕ ಪ್ರತಾಪ್ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಎಲ್ಲ ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದ್ದಾರೆ.
ಹಾಗೆಯೇ ಈ ಹಿಂದೆ ಅನರ್ಹಗೊಂಡ ಮೂವರು ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮುಟಳ್ಳಿ ಹಾಗೂ ಆರ್. ಶಂಕರ್ ಬೈ ಎಲೆಕ್ಷನ್ ಗೆ ನಿಲ್ಲುವಂತಿಲ್ಲ ಎಂದು ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಖಡಕ್ಕಾಗಿ ತಿಳಿಸಿದ್ದಾರೆ.