Tag: disqualifiedmla

  • ಮೂರು ತಿಂಗ್ಳ ಮೊದಲೇ ತೀರ್ಪು ಬಂದಿದ್ದರೆ ಚೆನ್ನಾಗಿತ್ತು – ಮಾಧುಸ್ವಾಮಿ

    ಮೂರು ತಿಂಗ್ಳ ಮೊದಲೇ ತೀರ್ಪು ಬಂದಿದ್ದರೆ ಚೆನ್ನಾಗಿತ್ತು – ಮಾಧುಸ್ವಾಮಿ

    ಬೆಳಗಾವಿ: ಮೂರು ತಿಂಗಳ ಮೊದಲೇ ತೀರ್ಪು ಬಂದಿದ್ದರೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅನುಕೂಲ ಆಗುತಿತ್ತು ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

    ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ತೀರ್ಪು ಪ್ರಕಟವಾಗಿದ್ದು, ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ. ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಲಾಗಿದೆ. ಚುನಾವಣೆ ನಿರ್ಬಂಧ ಹೇರಲು ಬರುವುದಿಲ್ಲ, ಅದೇ ರೀತಿ ತೀರ್ಪು ಬಂದಿದೆ ಎಂದರು. ಇದನ್ನೂ ಓದಿ: ನಮ್ಮ ರಾಜಕೀಯ ಭವಿಷ್ಯ ಮುಗಿಯುತ್ತೆ ಎಂದವರಿಗೆ ಸುಪ್ರೀಂ ಆದೇಶವೇ ತಕ್ಕ ಉತ್ತರ – ವಿಶ್ವನಾಥ್

    ಅನರ್ಹರು ಮರಳಿ ಗೆಲುವು ದಾಖಲಿಸುವ ತನಕ ಸಾವಿಂಧಾನಿಕ ಹುದ್ದೆ ಅಲಂಕರಿಸಲು ಬರುವುದಿಲ್ಲ. ಉಪಚುನಾವಣೆಯಲ್ಲಿ ಗೆದ್ದ ಬಳಿಕ ಅವರೆಲ್ಲರಿಗೂ ಸಾಂವಿಧಾನಿಕ ಹುದ್ದೆ ಸಿಗಲಿದೆ. ಮೂರು ತಿಂಗಳ ಮೊದಲೇ ತೀರ್ಪು ಬಂದಿದ್ದರೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅನುಕೂಲ ಆಗುತಿತ್ತು. ತೀರ್ಪು ತಡವಾಗಿ ಬಂದಿದ್ದರಿಂದ ಅನರ್ಹರಿಗೆ ಸ್ವಲ್ಪ ಕಷ್ಟವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ ಸರ್ಕಾರ ಅಕ್ರಮ ಸರ್ಕಾರ ಎಂಬುದು ಸಾಬೀತಾಗಿದೆ: ದಿನೇಶ್ ಗುಂಡೂರಾವ್

    ಬಿ ಫಾರ್ಮ್ ಕೊಟ್ಟ ಮೇಲೇಯೇ ಅನರ್ಹರು ಬಿಜೆಪಿ ಸೇರಲಿದ್ದಾರೆ. ಪಕ್ಷದ ಹಿರಿಯ ನಾಯಕರು ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಅನರ್ಹರನ್ನು ಜತೆಗೆ ಕರೆದೊಯ್ಯುವ ಕೆಲಸವನ್ನು ನಮ್ಮ ಪಕ್ಷ ಮಾಡಲಿದೆ. ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಟಿಕೆಟ್ ಸಿಗದ ಬಿಜೆಪಿ ಅಸಮಾಧಾನಿತರು ರಾಜಿ ಆಗುತ್ತಾರೆ. ಅಸಮಾಧಾನಿತರನ್ನು ಸಮಾಧಾನ ಮಾಡುವ ಕೆಲಸ ಮಾಡುತ್ತೇವೆ. ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಸ್ಪೀಕರ್ ಷಡ್ಯಂತ್ರಕ್ಕೆ ಸುಪ್ರೀಂ ತಕ್ಕ ತೀರ್ಪು ಕೊಟ್ಟಿದೆ: ಸಿಎಂ ಬಿಎಸ್‍ವೈ

  • ನಮ್ಮನ್ನು ಯಾರೂ ಫ್ಲೈಟ್ ಹತ್ತಿಸಿಲ್ಲ, ನಾವೇ ಹೋಗಿದ್ದು- ಎಂಟಿಬಿ

    ನಮ್ಮನ್ನು ಯಾರೂ ಫ್ಲೈಟ್ ಹತ್ತಿಸಿಲ್ಲ, ನಾವೇ ಹೋಗಿದ್ದು- ಎಂಟಿಬಿ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವೈರಲ್ ಆಡಿಯೋ ಇದೀಗ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿದ್ದು, ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಪರಿಣಾಮ ಅನರ್ಹ ಶಾಸಕರಿಗೆ ಭಯ, ಆತಂಕ ಶುರುವಾಗಿದೆ.

    ಈ ಕುರಿತು ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ, ನಮ್ಮನ್ನ ಯಾರೂ ಫ್ಲೈಟ್ ಹತ್ತಿಸಿಲ್ಲ. ನಾವೇ ಹೋಗಿದ್ದು. ಯಡಿಯೂರಪ್ಪ ಅವರ ಆಡಿಯೋ ಬಗ್ಗೆ ಅವರೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಈ ಬಗ್ಗೆ ನನಗೇನೂ ಗೊತ್ತಿಲ್ಲ. ಎಂಟಿಬಿ ಹಿಂದಿನ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯ ಆಗಲಿಲ್ಲ ಎಂದು ರಾಜೀನಾಮೆ ಕೊಟ್ಟಿರುವುದು. ಯಾರ ಮಾತು ಕೇಳಿ ನಾವ್ಯಾಕೆ ಫ್ಲೈಟ್ ಹತ್ತಿ ಹೋಗುತ್ತೇವೆ ಎಂದು ಪ್ರಶ್ನಿಸಿದರು.

    ಇಂದು ಹೊಸಕೋಟೆ ಏತ ನೀರಾವರಿ ಯೋಜನೆಗೆ ಸಿಎಂ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಹೊಸಕೋಟೆಗೆ ಏತ ನೀರಾವರಿ ಯೋಜನೆ ತಂದಿದ್ದೇ ನಾನು. ನಾನು ಕಳೆದೆರಡು ಬಾರಿ ಶಾಸಕನಾಗಿದ್ದಾಗ ನೀರಾವರಿ ಯೋಜನೆಗಾಗಿ ಶ್ರಮಿಸಿದ್ದೇನೆ ಎಂದರು.

    ಏತ ನೀರಾವರಿ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಸಂಸದ ಬಚ್ಚೇಗೌಡ ಬರೋ ವಿಚಾರದ ಸಂಬಂಧ ಮಾತನಾಡಿ, ಪ್ರೊಟೋಕಾಲ್ ಪ್ರಕಾರ ಆಹ್ವಾನವಿರುತ್ತದೆ. ಈ ಭಾಗದ ಸಂಸದರಾಗಿ ಅವರು ಬರುತ್ತಾರೆ. ನಾನು ಯೋಜನೆಗಾಗಿ ದುಡಿದಿದ್ದೇನೆ. ಅದಕ್ಕಾಗಿ ಸಿಎಂಗೆ ಸಹಕಾರ ನೀಡಲು ಇಲ್ಲಿಗೆ ಬಂದಿದ್ದೇನೆ ಎಂದು ಎಂಟಿಬಿ ತಿಳಿಸಿದರು.

    ಆಡಿಯೋದಲ್ಲಿ ಬಿಎಸ್‌ವೈ ಹೇಳಿದ್ದೇನು?
    ಹುಬ್ಬಳ್ಳಿಯಲ್ಲಿ ಕಾರ್ಯಕರ್ತರೊಂದಿಗೆ ನಡೆಸಿದ್ದ ಸಭೆಯಲ್ಲಿ ಬಿಎಸ್‌ವೈ, ಯಾಕೋ ಇವತ್ತು ನೀವು ಮಾತಾಡಿದಂತ ಧಾಟಿ ಸರ್ಕಾರ ಉಳಿಸೋಕೆ ಇದೆ ಅಂತ ಅನ್ನಿಸುತ್ತಿಲ್ಲ. ರಾಷ್ಟ್ರೀಯ ಅಧ್ಯಕ್ಷರೇ ಮುಂದೆ ನಿಂತು 17 ಜನರು 2-3 ತಿಂಗಳು ಮುಂಬೈನಲ್ಲಿರಿಸಿದ್ದರು. ಅವರೆಲ್ಲರೂ ಕ್ಷೇತ್ರಕ್ಕೂ ಬರಲಿಲ್ಲ. ಹೆಂಡ್ತಿ ಮಕ್ಕಳ ಮುಖ ನೋಡಿರಲಿಲ್ಲ. 3-4 ವರ್ಷ ವಿಪಕ್ಷದಲ್ಲಿ ಇರಬೇಕಾದ ನಮ್ಮನ್ನ ಆಡಳಿತ ಪಕ್ಷಕ್ಕೆ ಬರುವಂತೆ ಮಾಡಿದರು.

    ನಿಮ್ಮ ಬಾಯಲ್ಲಿ ಅನರ್ಹ ಪರ ಗಟ್ಟಿಯಾಗಿ ನಿಂತುಕೊಳ್ಳುತ್ತೇವೆ ಅನ್ನೋ ಮಾತು ಬರಲಿಲ್ಲ. ಇದನ್ನ ನಾನು ಖಂಡಿತಾ ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ. ಐ ಆಮ್ ಸಾರಿ. ನನಗೇನೂ ಸಿಎಂ ಗಿರಿ ಬೇಕಾಗಿರಲಿಲ್ಲ. ಈಗಾಗಲೇ 3-4 ಬಾರಿ ಸಿಎಂ ಆಗಿದ್ದೇನೆ. ದೊಡ್ಡತನ ಧಾರಾಳತನ, ವಾಸ್ತವ ಸ್ಥಿತಿಯನ್ನ ತಿಳಿಯದೇ ನೀವು ಮಾತಾಡಿದ್ದೀರಾ ಗೋಕಾಕ್ ಬಗ್ಗೆ ನೀವೇಕೆ ಮಾತಾಡಿಲ್ಲ? ಅದರಲ್ಲಿ ಅಂತಹ ವಿಶೇಷ ಏನಿದೆ..? ಅವರನ್ನೆಲ್ಲ ನಂಬಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತು ನಾನು ಅಪರಾಧ ಮಾಡಿದ್ದೇನೆ ಅಂತ ಈಗ ಅನ್ನಿಸುತ್ತಿದೆ ಎಂದು ಹೇಳಿದ್ದರು. ಈ ಆಡಿಯೋ ಇದೀಗ ಕಾಂಗ್ರೆಸ್ಸಿಗೆ ಸಿಕ್ಕಿದ್ದು, ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ನಾಳೆ ಕೋರ್ಟಿನಲ್ಲಿ ವಿಚಾರಣೆ ಕೂಡ ನಡೆಯಲಿದೆ.