Tag: dissatisfied MLAs

  • ಹೈ ಕಮಾಂಡ್ ಕೈ ಸೇರಿದ ಸೀಕ್ರೆಟ್ ರಿಪೋರ್ಟ್ – ಅಸಮಾಧಾನಿತ ಶಾಸಕರಿಗೆ ‘ಶಾ’ಸ್ತಿ!

    ಹೈ ಕಮಾಂಡ್ ಕೈ ಸೇರಿದ ಸೀಕ್ರೆಟ್ ರಿಪೋರ್ಟ್ – ಅಸಮಾಧಾನಿತ ಶಾಸಕರಿಗೆ ‘ಶಾ’ಸ್ತಿ!

    ಬೆಂಗಳೂರು: ಯಾರು ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನವಾಗಿದ್ದಾರೆ? ಯಾರು ರಾಜ್ಯಾಧ್ಯಕ್ಷರ ಆಯ್ಕೆ ವಿರುದ್ಧ ಮಾತಾನಾಡಿದ್ದಾರೆ? ಹೈ ಕಮಾಂಡ್ ನಿರ್ಧಾರದ ವಿರುದ್ಧ ಉಸಿರು ಎತ್ತುತ್ತಿರುವವರು ಯಾರು ಎಂಬುದರ ಕುರಿತು ಬಿಜೆಪಿಯ ಅಧ್ಯಕ್ಷ ಅಮಿತ್ ಶಾ ರಹಸ್ಯ ವರದಿ ಪಡೆದಿದ್ದಾರೆ.

    ರಾಜ್ಯದ ರಾಜಕೀಯದ ಬೆಳವಣಿಗೆ ಕುರಿತು ಬಿಜೆಪಿ ಹೈ ಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸಚಿವ ಸಂಪುಟ ರಚನೆಯಾದ ನಂತರ ಅಮಿತ್ ಶಾ ಸಹ ರಾಜ್ಯ ರಾಜಕೀಯವನ್ನು ಗಂಭೀರವಾಗಿ ನೋಡುತ್ತಿದ್ದಾರೆ. ಸಚಿವ ಸ್ಥಾನದಿಂದ ವಂಚಿತರಾಗಿರುವ ಅಸಮಾಧಾನಿತರ ಶಾಸಕರ ಕುರಿತು ಸಹ ಅಷ್ಟೇ ನಿಗಾ ವಹಿಸಿದ್ದಾರೆ. ಹೀಗಾಗಿ ಬಿಜೆಪಿ ಶಾಸಕರ ಚಲನವಲನಗಳ ಕುರಿತು ವರದಿ ಪಡೆಯುತ್ತಿದ್ದು, ರಾಜ್ಯದ ನಾಯಕರಿಗೂ ಗೊತ್ತಿಲ್ಲದ ಮಾಹಿತಿಯನ್ನು ಅಮಿತ್ ಶಾ ಪಡೆಯುತ್ತಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಮೂರು ದಿನದಿಂದ ಬಿಜೆಪಿ ಶಾಸಕರು ಬೇಸರ ಹೊರಹಾಕುತ್ತಿದ್ದು, ಮಂತ್ರಿ ಮಾಡದೇ ಹೈಕಮಾಂಡ್ ಅನ್ಯಾಯ ಮಾಡಿದೆ ಎಂದು ಹೇಳುತ್ತಿರುವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಅಸಮಾಧಾನಿತರನ್ನು ಮನವೊಲಿಸುವುದು ಕಾರ್ಯಸಾಧುವಲ್ಲ ಎಂಬುದನ್ನು ಅರಿತ ಹೈಕಮಾಂಡ್ ಅವರಿಗೆ ಬಿಸಿ ಮುಟ್ಟಿಸಿ ಪಾಠ ಕಲಿಸಲು ನಿರ್ಧರಿಸಿದೆ.

    ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ನಿಜಕ್ಕೂ ನನಗೆ ಬೇಸರ ಇದೆ, ಇದನ್ನು ನಾನು ಓಪನ್ ಆಗಿ ಹೇಳುತ್ತೇನೆ. ಯಾರು ಏನು ಬೇಕಾದರೂ ತಿಳಿದುಕೊಳ್ಳಲಿ. ಹಾಗೇನಾದರೂ ಕಷ್ಟ ಎದುರಾದಲ್ಲಿ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದರು. ಗೆದ್ದವರಿಗೆ ಸಚಿವ ಸ್ಥಾನ ಕೊಡುವುದನ್ನು ಬಿಟ್ಟು ಸೋತವರಿಗೇಕೆ ನೀಡಿದ್ದಾರೆ. ಹಲವಾರು ಜನ ಗೆದ್ದವರಿದ್ದಾರೆ. ಬೆಳಗಾವಿ ಭಾಗದ ಹಿರಿಯ ನಾಯಕರಾಗಿರುವ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ಕೊಡಬಹುದಿತ್ತು. ಆದರೆ, ಸೋತಿರುವ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿರುವುದು ಸಾಕಷ್ಟು ಜನರಿಗೆ ಬೇಸರ ತಂದಿದೆ ಎಂದು ಹೇಳಿದ್ದರು.

    ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಸಚಿವ ಸ್ಥಾನದಿಂದ ವಂಚಿತರಾದ ಹಿನ್ನೆಲೆ ತೀವ್ರ ಬೇಸರಗೊಂಡು ಸಿಎಂ ಬಳಿ ಒಂದೊಂದೇ ಬೇಡಿಕೆಯನ್ನು ಸಲ್ಲಿಸುತ್ತಿದ್ದಾರೆ. ತಮಗೆ ಸಚಿವ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಅಣ್ಣ ರಮೇಶ್ ಜಾರಕಿಹೊಳಿಯನ್ನು ಉಪಮುಖ್ಯಮಂತ್ರಿ ಮಾಡುವಂತೆ ಇಲ್ಲವೇ ಸಂಪುಟದಲ್ಲಿ ಪ್ರಮುಖ ಖಾತೆ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

    ಸಚಿವ ಸ್ಥಾನದಿಂದ ವಂಚಿತರಾಗಿರುವ ಇನ್ನೊರ್ವ ಸಚಿವ ಉಮೇಶ್ ಕತ್ತಿ ಅಸಮಾಧಾನ ಹೊರ ಹಾಕಿ, ಬೆಳಗ್ಗೆ 6 ಗಂಟೆಯವರೆಗೂ ನನ್ನ ಹೆಸರು ಇತ್ತು. ಆದರೆ 6.10ಕ್ಕೆ ನನ್ನ ಹೆಸರನ್ನು ಕೈಬಿಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಶಾಸಕನಾಗಿ 35 ವರ್ಷ ಆಯಿತು. 8 ಸಲ ಜನ ಆಶೀರ್ವಾದ ಮಾಡಿದ್ದಾರೆ. 1996ಯಿಂದ 1999ವರೆಗೂ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. 2008-2013ವರೆಗೂ ಕೂಡ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈ ಬಾರಿ ಕೂಡ ಮಂತ್ರಿ ಆಗಬೇಕೆಂಬ ಆಸೆ ಇತ್ತು. ಆದರೆ ಅರ್ಧ ಸಂಪುಟ ವಿಸ್ತರಣೆ ಮಾಡಿದ್ದಾರೆ, ಈಗ ನನ್ನ ಹೆಸರನ್ನು ಕೈಬಿಟ್ಟಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದರು. ಇಂದು ಸಹ ಉಮೇಶ್ ಕತ್ತಿ ಸಿದ್ದರಾಮಯ್ಯನವರಿಗೆ ಕರೆ ಮಾಡಿ ಮಾತನಾಡಿದ್ದು, ಅವರ ನಡೆ ಕುತೂಹಲ ಕೆರಳಿಸಿದೆ.

    ಇತ್ತೀಚೆಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ಆಯ್ಕೆ ಮಾಡಿದ ಹೈ ಕಮಾಂಡ್ ನಿರ್ಧಾರವನ್ನು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

    ಪದೇ ಪದೆ ಈ ಜಿಲ್ಲೆಗೆ ವಲಸಿಗರೇ ಉಸ್ತುವಾರಿ ಸಚಿವರಾಗುತ್ತಿರುವುದು ಚಿತ್ರದುರ್ಗದ ದೌರ್ಭಾಗ್ಯ. ನಾನು 6 ಬಾರಿ ಶಾಸಕನಾಗಿ ಆಯ್ಕೆಯಾದರೂ ಸಹ ಸಚಿವ ಸ್ಥಾನ ನೀಡದಿರುವುದು ಬೇಸರ ತಂದಿದೆ ಎಂದು ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ಸಹ ಅಸಮಾಧಾನ ಹೊರ ಹಾಕಿದ್ದರು.

  • ನಾನು ಜೊತೆಗಿರುವಾಗಲೇ ಸಿದ್ದರಾಮಯ್ಯನವರಿಗೆ ಅತೃಪ್ತರು ಕರೆ ಮಾಡಿದ್ದರು: ತಂಗಡಗಿ ಬಾಂಬ್

    ನಾನು ಜೊತೆಗಿರುವಾಗಲೇ ಸಿದ್ದರಾಮಯ್ಯನವರಿಗೆ ಅತೃಪ್ತರು ಕರೆ ಮಾಡಿದ್ದರು: ತಂಗಡಗಿ ಬಾಂಬ್

    ಕೊಪ್ಪಳ: ನಾವು ಮರಳಿ ಬರುತ್ತೇವೆ ನಮ್ಮನ್ನು ಅನರ್ಹ ಮಾಡಬೇಡಿ ಎಂದು ನಾನು ಜೊತೆಗಿದ್ದಾಗಲೇ ಸಿದ್ದರಾಮಯ್ಯನವರಿಗೆ ಅತೃಪ್ತ ಶಾಸಕರು ಕರೆ ಮಾಡಿದ್ದರು ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಅವರು ಅತೃಪ್ತರ ಕುರಿತು ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

    ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಅತೃಪ್ತ ಶಾಸಕರು ನಾನು ಜೊತೆಗಿರುವಾಗಲೇ ಸಿದ್ದರಾಮಯ್ಯನವರಿಗೆ ಕರೆ ಮಾಡಿದ್ದರು. ನಾವು ಮರಳಿ ಬರುತ್ತೇವೆ ನಮ್ಮನ್ನು ಅನರ್ಹ ಮಾಡಬೇಡಿ ಎಂದು ಕೇಳಿಕೊಂಡರು. ಹೀಗೆ ಅತೃಪ್ತ ಶಾಸಕರು ಬೀದಿಯಲ್ಲಿ ನಿಲ್ಲುವಂತಹ ಸ್ಥಿತಿಯನ್ನು ಇಂದು ಬಿಜೆಪಿ ನಿರ್ಮಾಣ ಮಾಡಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

    ನಂಬಿದವರನ್ನು ಬೀದಿಗೆ ನಿಲ್ಲಿಸಿ ಇದೀಗ ಬಿಜೆಪಿ ಸೇಫ್ ಆಗಿದೆ. ಅಲ್ಲದೆ ಅತೃಪ್ತ ಶಾಸಕರನ್ನು ಅನರ್ಹ ಮಾಡಿದರೆ ಬಿಜೆಪಿಗೆ ಯಾಕೆ ಇಷ್ಟು ಕಷ್ಟವಾಗಿದೆ. ಮತ್ತೊಬ್ಬರನ್ನು ಹಾಳು ಮಾಡಿ ಬಿಜೆಪಿ ಸರ್ಕಾರ ರಚಿಸುತ್ತಿದೆ. ಬಿಜೆಪಿಯವರು ಪಕ್ಕದ ಮನೆಯವರ ಮಗುವನ್ನು ತಮ್ಮ ಮಗು ಎಂದು ನಾಮಕರಣ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

    ಬಿಜೆಪಿಯವರಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ. ಅತೃಪ್ತ ಶಾಸಕರಿಂದ ತಮ್ಮ ಮಾನ ಮುಚ್ಚಿಕೊಳ್ಳುವುದಕ್ಕೆ ಸಿದ್ದರಾಮಯ್ಯನವರ ಹೆಸರು ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರು ಯಾವ ಅತೃಪ್ತ ಶಾಸಕರನ್ನೂ ಕಳುಹಿಸಿಲ್ಲ. ಅತೃಪ್ತರ ರಾಜೀನಾಮೆ ನಡೆಯಿಂದ ಸಿದ್ದರಾಮಯ್ಯ ತುಂಬಾ ನೊಂದಿದ್ದಾರೆ ಎಂದು ಶಿವರಾಜ್ ತಂಗಡಗಿ ಬೇಸರ ವ್ಯಕ್ತಪಡಿಸಿದರು.

    ಇತ್ತೀಚೆಗೆ ಸಿದ್ದರಾಮಯ್ಯನವರಿಗೆ ಕೆಲವು ಅತೃಪ್ತ ಶಾಸಕರು ಕರೆ ಮಾಡಿದ್ದರು ಎಂದು ಎಂ.ಬಿ.ಪಾಟೀಲ್ ಅವರು ಹೇಳಿ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದರು. ಇದಕ್ಕೆ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ ಕೆಲವು ಅತೃಪ್ತ ಶಾಸಕರು ನನಗೆ ಕರೆ ಮಾಡಿದ್ದು ನಿಜ ಎಂದು ಹೇಳಿದ್ದರು. ಈ ಸುದ್ದಿಯನ್ನು ಕೇಳಿದ ಅತೃಪ್ತ ಶಾಸಕರು ದಿಢೀರನೇ ಎಚ್ಚರವಾಗಿದ್ದು, ಅತೃಪ್ತ ಶಾಸಕ ಎಚ್.ವಿಶ್ವನಾಥ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಯಾವುದೇ ಅತೃಪ್ತ ಶಾಸಕರು ಯಾವುದೇ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನು ಸಂಪರ್ಕಿಸಿಲ್ಲ ಇದು ಸುಳ್ಳು ಸುದ್ದಿ, ದಾರಿ ತಪ್ಪಿಸಲು ಮೈತ್ರಿ ನಾಯಕರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿ ಕಾರಿದ್ದರು.

    ಈ ಪ್ರಹಸನದ ಭಾಗವಾಗಿ ಕರೆ ಮಾಡಿದ್ದರು ಎನ್ನಲಾದ ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಅವರೇ ಪ್ರತಿಕ್ರಿಯೆ ನೀಡಿ, ನಾನು ಸಿದ್ದರಾಮಯ್ಯ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿಲ್ಲ. ಇದೆಲ್ಲ ಸುಳ್ಳು ಸುದ್ದಿ ಎಂದು ತಿಳಿಸಿದ್ದರು. ಇದೀಗ ಕಾಂಗ್ರೆಸ್‍ನ ಮಾಜಿ ಸಚಿವ ಶಿವರಾಜ್ ತಂಗಡಗಿ ಅವರು ಇದೇ ಮಾತನ್ನು ಹೇಳಿದ್ದು, ನಾನು ಇದ್ದಾಗಲೇ ಸಿದ್ದರಾಮಯ್ಯನವರಿಗೆ ಅತೃಪ್ತ ಶಾಸಕರು ಕರೆ ಮಾಡಿದ್ದರು ಎಂದು ತಿಳಿಸಿದ್ದಾರೆ.

  • ಬಿಜೆಪಿ ನೂರಕ್ಕೆ ನೂರರಷ್ಟು ಬಹುಮತ ಸಾಬೀತು ಪಡಿಸುತ್ತೆ: ಚಲುವರಾಯಸ್ವಾಮಿ

    ಬಿಜೆಪಿ ನೂರಕ್ಕೆ ನೂರರಷ್ಟು ಬಹುಮತ ಸಾಬೀತು ಪಡಿಸುತ್ತೆ: ಚಲುವರಾಯಸ್ವಾಮಿ

    ಮಂಡ್ಯ: ಆಪರೇಷನ್ ಕಮಲಕ್ಕಿಂತ, ಮೈತ್ರಿ ಸರ್ಕಾರದ ಆಡಳಿತದಿಂದ ಬೇಸತ್ತು ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಆಡಳಿತದಿಂದ ಬೇಸತ್ತು ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದು, ಆಪರೇಷನ್ ಕಮಲವೂ ಕೊಂಚ ಇರಬಹುದು. ಆದರೆ ಅದೇ ಪ್ರಮುಖವಲ್ಲ. ಮೈತ್ರಿ ಸರ್ಕಾರದಿಂದ ಬೇಸತ್ತು ರಾಜೀನಾಮೆ ನೀಡಿದ್ದಾರೆ. ವಿರೋಧ ಪಕ್ಷದ ನಾಯಕರ ಸ್ಥಾನದ ಕುರಿತು ಯಾವುದೇ ಗೊಂದಲವಿಲ್ಲ. ಈಗಾಗಲೇ ಸಿದ್ದರಾಮಯ್ಯನವರು ಶಾಸಕಾಂಗ ಪಕ್ಷದ ನಾಯಕರಾಗಿರುವುದರಿಂದ ವಿರೋಧ ಪಕ್ಷದ ನಾಯಕರಾಗಿಯೂ ಅವರೇ ಮುಂದುವರಿಯುತ್ತಾರೆ. ಈ ವಿಚಾರವಾಗಿ ಯಾವುದೇ ಕಿತ್ತಾಟ ಬರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

    ಸ್ಪೀಕರ್ ಅನರ್ಹತೆ ಮಾಡುವ ಮುನ್ನ ಹಿಂದಿನ ರಾಜೀನಾಮೆ ಪ್ರಕರಣಗಳನ್ನು ಅಧ್ಯಯನ ಮಾಡಬೇಕಿತ್ತು. ಯಾವ ಆಧಾರದ ಮೇಲೆ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಆದರೆ, ಹಿಂದಿನ ಪ್ರಕರಣಗಳನ್ನು ಪರಿಶೀಲಿಸಬೇಕಿತ್ತು ಎಂದು ಸ್ಪೀಕರ್ ನಿರ್ಧಾರದ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.

    ಮೈತ್ರಿ ಪಕ್ಷದ 17 ಶಾಸಕರು ಅನರ್ಹರಾಗಿದ್ದು, ಹೀಗಾಗಿ ಮ್ಯಾಜಿಕ್ ನಂಬರ್ ತಲುಪಲು ಸದನದಲ್ಲಿ ಹಾಜರಿರುವ ಸದಸ್ಯರ ಸಂಖ್ಯೆ ಮುಖ್ಯ. ಬಿಜೆಪಿ ನೂರಕ್ಕೆ ನೂರರಷ್ಟು ಬಹುಮತ ಸಾಬೀತು ಪಡಿಸಲಿದೆ. ಯಡಿಯೂರಪ್ಪನವರು ನಮ್ಮ ಜಿಲ್ಲೆಯವರು. ಅವರಿಗೆ ಒಳ್ಳೆಯದಾಗಲಿ, ದೇವರು ಆಯಸ್ಸು, ಆರೋಗ್ಯ ಕರುಣಿಸಲಿ. ಈಗಾಗಲೇ ಬೂಕನಕೆರೆಗೆ ಆಗಮಿಸಿ ಗ್ರಾಮದ ಅಭಿವೃದ್ಧಿಗೆ ಅನುದಾನ ಘೋಷಿಸಿದ್ದಾರೆ. ಮುಂದೆ ಜಿಲ್ಲೆಗೆ ಒಳ್ಳೆಯ ಕೆಲಸ ಮಾಡುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

    ಉಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ
    ಈ ಹಿಂದೆಯೇ ಹೇಳಿದಂತೆ ನಾನು ಲೋಕಸಭೆ ಅಥವಾ ವಿಧಾನಸಭೆ ಯವುದೇ ರೀತಿಯ ಉಪ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಈಗಾಗಲೇ ಮಂಡ್ಯ ಆಯಿತು, ಕೆ.ಆರ್.ಪೇಟೆಗೆ ಕರೆಯುತ್ತಿದ್ದಾರೆ. ನಾಗಮಂಗಲದವರು ತಿರಸ್ಕರಿಸಿದರು ಎಂದು ಕೆ.ಆರ್.ಪೇಟೆಯವರು ಕರೆಯುತ್ತಿರಬಹುದು. ಜನರಿಗೆ ಚಿರಋಣಿ, ನಾನು ಮೊದಲೇ ಹೇಳಿದಂತೆ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

  • ಕಾಂಗ್ರೆಸ್ ನಾಯಕರೇ ನಮ್ಮನ್ನು ಪ್ರಚೋದಿಸಿ ರಾಜೀನಾಮೆ ಕೊಡಿಸಿದ್ದು: ಮುನಿರತ್ನ

    ಕಾಂಗ್ರೆಸ್ ನಾಯಕರೇ ನಮ್ಮನ್ನು ಪ್ರಚೋದಿಸಿ ರಾಜೀನಾಮೆ ಕೊಡಿಸಿದ್ದು: ಮುನಿರತ್ನ

    ಬೆಂಗಳೂರು: ಅನರ್ಹತೆ ನಮಗೆ ತಿಳಿದಿರುವ ವಿಷಯವೇ, ಕಾಂಗ್ರೆಸ್ ನಾಯಕರು ನಮಗೆ ಮೊದಲೇ ಈ ಬಗ್ಗೆ ತಿಳಿಸಿದ್ದರು. ಅನರ್ಹತೆಯ ಶಿಕ್ಷಯನ್ನೇ ನೀಡುತ್ತೇವೆಂದು ಮೊದಲೇ ಬರೆದು ಬಿಟ್ಟಿದ್ದರು. ಅದು ಇವತ್ತು ಆಗಿದೆ ಅಷ್ಟೇ, ಹೀಗಾಗಿ ನಮಗೆ ಸ್ಪೀಕರ್ ಅನರ್ಹತೆ ನಿರ್ಧಾರ ಆಶ್ಚರ್ಯ ಎನ್ನಿಸುತ್ತಿಲ್ಲ ಎಂದು ರೆಬೆಲ್ ಶಾಸಕ ಮುನಿರತ್ನ ಹೇಳಿದ್ದಾರೆ.

    ಸ್ಪೀಕರ್ ಅನರ್ಹತೆ ನಿರ್ಧಾರದ ಕುರಿತು ಪಬ್ಲಿಕ್ ಟಿವಿ ಜೊತೆ ಮುಂಬೈನಿಂದ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಕೇವಲ ಮೇಲ್ನೋಟಕ್ಕೆ ನೀವು ರಾಜೀನಾಮೆ ನೀಡಿ ಹೋದರೆ, ಅನರ್ಹ ಮಾಡುತ್ತೇವೆ. ನಿಮ್ಮನ್ನು ಬಿಡಲ್ಲ ಎಂದು ಹೇಳಿದ್ದಾರೆ. ಇದು ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ, ದೇವೇಗೌಡರನ್ನು ಮೆಚ್ಚಿಸಲು ಮಾಡಿದ ಕೆಲಸ. ಮೈತ್ರಿ ಸರ್ಕಾರ ರಚನೆಯಾದ ಮೂರು ತಿಂಗಳಿಂದಲೇ ಬೀಳಿಸುವ ಕೆಲಸ ಪ್ರಾರಂಭವಾಗಿತ್ತು. ಈ ಹಿಂದೆ ದೇವೇಗೌಡರು ರಾಹುಲ್ ಗಾಂಧಿ ಅವರಿಗೆ ಯಾಕೆ ದೂರು ನೀಡಿದ್ದು, ಕುಮಾರಸ್ವಾಮಿ ಅವರು ನೆಮ್ಮದಿಯಿಂದ ಆಡಳಿತ ನಡೆಸಲು ಬಿಟ್ಟಿಲ್ಲ. ಒಂದೆಡೆ ಬಳ್ಳಾರಿಯವರು. ಇನ್ನೊಂದೆಡೆ ಕೋಲಾರದವರು ಓಡಿ ಹೋಗುತ್ತಾರೆ. ಹೀಗೆ ಬರೀ ಓಡಿ ಹೋಗುವವರನ್ನು ಹಿಡಿದು ತಂದು ಸಮಾಧಾನ ಮಾಡುವುದೇ ಕುಮಾರಸ್ವಾಮಿಯವರ ಕೆಲಸವಾಗಿತ್ತು ಎಂದು ಹರಿಹಾಯ್ದರು.

    ಮೊದಲನೇಯದು ಇವರಿಬ್ಬರು ಮೈತ್ರಿ ಸರ್ಕಾರ ರಚಿಸಿದ್ದೇ ತಪ್ಪು. ಐದು ವರ್ಷ ಮುಖ್ಯಮಂತ್ರಿ ನೀವೆ ಎಂದು ಹೇಳಿದಾಗ ಕಾಂಗ್ರೆಸ್‍ನವರು ವಿಶ್ವಾಸದಿಂದ ಈ ಮಾತನ್ನು ಹೇಳುತ್ತಿದ್ದಾರಾ ಎಂದು ಜೆಡಿಎಸ್‍ನವರು ಯೋಚಿಸಬೆಕಿತ್ತು. ಕಾಂಗ್ರೆಸ್‍ನವರು ಬಂದರೆಂದು ಇವರು ಆತುರದಿಂದ ನಿರ್ಧಾರ ತೆಗೆದುಕೊಂಡರು. ಸರಿ ಎಂದು ಇವರು ಸುಮ್ಮನಾದರು. ಆದರೆ, ಮೂರು ತಿಂಗಳ ನಂತರ ಸರ್ಕಾರ ಕೆಡವಲು ಪ್ರಯತ್ನ ಶುರುವಾಗಿತ್ತು ಎಂದು ಗುಟ್ಟನ್ನು ಬಿಚ್ಚಿಟ್ಟರು.

    ಸುದ್ದಿಗೋಷ್ಠಿ ನಡೆಸ್ತೀವಿ: ಈ ಪ್ರಯತ್ನವನ್ನು ಎಳೆದುಕೊಂಡು ಬಂದು ಲೋಕಸಭಾ ಚುನಾವಣೆಯವರೆಗೆ ತಂದರು. ಲೋಕಸಭಾ ಚುನಾವಣೆ ನಂತರ ಸರ್ಕಾರ ಕೆಡವಲೇಬೇಕೆಂದು ಸಾಕಷ್ಟು ಸಾರಿ ಕಾಂಗ್ರೆಸ್ ನಾಯಕರೇ ಸಭೆ ನಡೆಸಿದ್ದಾರೆ. ಕುಮಾರಸ್ವಾಮಿಯವರನ್ನು ತೆಗೆಯಬೇಕೆಂದು ಪ್ರಯತ್ನ ಮಾಡಿದವರೇ ಕಾಂಗ್ರೆಸ್ ನಾಯಕರು. ಇದೀಗ ಕುಮಾರಸ್ವಾಮಿಯವರ ಮೇಲೆ ಪ್ರೀತಿ, ಅಭಿಮಾನ ಉಕ್ಕಿ ಹರಿಯುತ್ತಿದೆ. ಯಾವ ನಾಯಕರು ಕೆಡವಲು ಪ್ರಯತ್ನಿಸಿದ್ದಾರೆ ಎಂಬುದನ್ನು ಬೆಂಗಳೂರಿಗೆ ಆಗಮಿಸಿದಾಗ ಎಲ್ಲ ಅತೃಪ್ತ ಶಾಸಕರು ಸೇರಿ ಸುದ್ದಿಗೋಷ್ಠಿ ನಡೆಸಿ ಹೇಳುತ್ತೇವೆ ಎಂದರು.

    ಮಾಧ್ಯಮಗಳ ಮುಂದೆ ಪ್ರೀತಿ: ನಾವು ರಾಜೀನಾಮೆ ನೀಡಲು ಪ್ರಚೋದಿಸಿದವು ಯಾರು, ನಾವು ತೆರಳಲು ಪ್ರಚೋದನೆ ನೀಡಿದ್ದೇ ಕಾಂಗ್ರೆಸ್ ನಾಯಕರು. ಇಲ್ಲವೆ ನಮಗೇನು ಹುಚ್ಚು ಹಿಡಿದಿತ್ತಾ, ನಮಗೆ ಸರ್ಕಾರದಲ್ಲಿ ಕೆಲಸ ಮಾಡಿ ಕೊಟ್ಟಿಲ್ಲ ಎಂಬ ಅಸಮಾಧಾನ ಇದ್ದದ್ದು ನಿಜ. ಇಲ್ಲೂ ನೆಮ್ಮದಿ ಇಲ್ಲ, ಅಲ್ಲೂ ಕೆಲಸ ಆಗುತ್ತಿರಲಿಲ್ಲ ಹೀಗಾಗಿ ಶಾಸಕರು ಬೇಸತ್ತಿದ್ದರು. ಅಲ್ಲದೆ, ಏನೇ ಮಾಡಿದ್ದರೂ ಸರ್ಕಾರ ಇನ್ನು ಎರಡು ತಿಂಗಳು ಸಹ ಇರುತ್ತಿರಲಿಲ್ಲ. ಇವರಿಬ್ಬರ ಮಧ್ಯದಲ್ಲಿ ನಾವೇಕೆ ಹಾಳಾಗಬೇಕಿತ್ತು. ಕನಿಷ್ಟ ಪಕ್ಷ ಸರ್ಕಾರ ರಚನೆಯಾಗಿದೆ ಎಂದು ಹೇಗೋ ಕೆಲಸ ಮಾಡಬಹದಿತ್ತು. ಆದರೆ, ದಿನವೂ ಇವರ ಜಗಳ, ಮುಸುಕಿನ ಗುದ್ದಾಟ. ಒಳಗಡೆ ಇಬ್ಬರಿಗೂ ದ್ವೇಷ ಇತ್ತು ಕೇವಲ ಮಾಧ್ಯಮದವರ ಮುಂದೆ ಪ್ರೀತಿ ತೋರಿಸುತ್ತಿದ್ದರು. ಇಬ್ಬರ ನಡುವೆ ಬೆಂಕಿ ಕಡ್ಡಿ ಗೀರಿದ್ದರೆ ಬೆಂಕಿ ಹೊತ್ತಿಕೊಳ್ಳುತ್ತಿತ್ತು ಅಷ್ಟು ದ್ವೇಷವಿತ್ತು. ಹೊರಗಡೆ ಮಾತ್ರ ಪ್ರೀತಿ ತೋರಿಸುತ್ತಿದ್ದರು ಎಂದು ಮೈತ್ರಿ ಸರ್ಕಾರದ ಮುಸುಕಿನ ಗುದ್ದಾಟದ ಕಹಾನಿಯನ್ನು ಬಿಚ್ಚಿಟ್ಟರು.

    ಒಳಗೊಳಗೆ ಖುಷಿ: ಕಾಂಗ್ರೆಸ್ ನಾಯಕರು ಮೈತ್ರಿ ಸರ್ಕಾರವನ್ನು ತೆಗೆಯಬೇಕಿತ್ತು. ತಗೆದಾಗಿದೆ. ಇದನ್ನು ಈಗ ನಮ್ಮ ತಲೆಗೆ ಕಟ್ಟುತ್ತಿದ್ದಾರೆ. ಒಳಗೊಳಗೆ ಅವರಿಗೆ ಖುಷಿ ಇದೆ. ಈಗ ನಮ್ಮ ಮೇಲೆ ಕ್ರಮ ಜರುಗಿಸದಿದ್ದರೆ ಜನ ಬೇರೆ ರೀತಿ ಅರ್ಥೈಸುತ್ತಾರೆ. ಪ್ರಚೋದನೆ ಮಾಡಿ ಕಳುಹಿಸಿ, ನಮ್ಮ ಮೇಲೆ ಕ್ರಮ ಜರುಗಿಸಿ, ಅವರ ಮೇಲೆ ತಪ್ಪು ಬರದಂತೆ ನಾಟವಾಡಿದ್ದಾರೆ ಎಂದು ಹರಿಹಾಯ್ದರು.

    ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಕ್ಷೇತ್ರದಲ್ಲಿ ಕೆಲಸ ಮಾಡಿ ನಾವೆಲ್ಲ ಶಾಸಕರಾಗಿದ್ದೇವೆ. ಹೀಗಾಗಿ ಯಾರು ಕರೆದರೂ ಹೋಗುತ್ತೇವೆ. ನಾವು ರಾಜೀನಾಮೆ ನೀಡಲು ಕಾರಣಗಳೇನು? ಪ್ರಚೋದನೆ ನೀಡಿದವರರು ಯಾರು? ಬೆಳಗಾವಿಯಲ್ಲಿ ಮೊದಲು ಗಲಾಟೆ ಶುರುವಾಗಿತ್ತು. ಅದನ್ನು ಆಗಲೇ ಸ್ವಚ್ಛಗೊಳಿಸಿದ್ದರೆ ಎಲ್ಲವೂ ಸರಿ ಹೋಗುತಿತ್ತು. ಅಲ್ಲಿನ ಕಿಡಿ ಬೆಂಗಳೂರಿಗೆ ಆವರಿಸಿ ನಮ್ಮನ್ನು ಹೊರ ಹೋಗುವಂತೆ ಮಾಡಿತು ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮನ್ನು ಈಗ ಕೇಳುವವರು ಯಾರೂ ಇಲ್ಲ. ಆದರೂ ನಾವು ಸದ್ಯದಲ್ಲೇ ಬೆಂಗಳೂರಿಗೆ ಬರುತ್ತೇವೆ. ಬಂದು ನಮ್ಮ ಈ ಸ್ಥಿತಿಗೆ ಕಾರಣ ಯಾರು ಎಂಬುದನ್ನು ತಿಳಿಸುತ್ತೇವೆ ಎಂದರು.

  • ಇಬ್ಬರು ಅತೃಪ್ತ ಶಾಸಕರು ನನ್ನನ್ನು ಸಂಪರ್ಕಿಸಿದ್ದು ನಿಜ: ಸಿದ್ದರಾಮಯ್ಯ

    ಇಬ್ಬರು ಅತೃಪ್ತ ಶಾಸಕರು ನನ್ನನ್ನು ಸಂಪರ್ಕಿಸಿದ್ದು ನಿಜ: ಸಿದ್ದರಾಮಯ್ಯ

    ಬೆಂಗಳೂರು: ಕೆಲವು ಅತೃಪ್ತ ಶಾಸಕರು ಕರೆ ಮಾಡಿದ್ದು ನಿಜ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಇದೀಗ ಸ್ವತಃ ಸಿದ್ದರಾಮಯ್ಯನವರೇ, ಕೆಲವು ಅತೃಪ್ತ ಶಾಸಕರು ನನ್ನನ್ನು ಸಂಪರ್ಕಿಸಿದ್ದು ನಿಜ. ಅವರೊಂದಿಗೆ ಮಾತನಾಡಬಾರದು ಎಂದು ನಾನು ಕರೆ ಸ್ವೀಕರಿಸಲಿಲ್ಲ. ಅನರ್ಹತೆ ಶಿಕ್ಷೆಗೆ ಹೆದರಿ ನನಗೆ ಕರೆ ಮಾಡಿದ್ದರು. ಹೀಗಾಗಿ ನಾನು ಕರೆ ಸ್ವೀಕರಿಸಿಲ್ಲ ಎಂದು ಹೇಳುವ ಮೂಲಕ ಎಂ.ಬಿ.ಪಾಟೀಲ್ ಅವರ ಹೇಳಿಕೆಯನ್ನು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

    ಯಾವ ಶಾಸಕರು ಬರುತ್ತಾರೋ ಬಿಡುತ್ತಾರೋ ಗೊತ್ತಿಲ್ಲ. ಅವರು ಬಂದಿದ್ದರೆ ಕುಮಾರಸ್ವಾಮಿ ಅವರ ಸರ್ಕಾರ ಉರುಳುತ್ತಿರಲಿಲ್ಲ. ಇವರನ್ನು ಬಂಧಿಸಿಟ್ಟುಕೊಳ್ಳದಿದ್ದರೆ ಸರ್ಕಾರ ಸುಗಮವಾಗಿರುತ್ತಿತ್ತು. ಶಾಸಕರನ್ನು ಬಿಜೆಪಿಯವರು ಕೂಡಿ ಹಾಕಿಕೊಂಡಿದ್ದಾರೆ. ಇದು ಜನರ ಸರ್ಕಾರವಲ್ಲ, ಹಾರ್ಸ್ ಟ್ರೇಡಿಂಗ್ ಸರ್ಕಾರ. ಇದು ಸಂವಿಧಾನ ಬದ್ಧ ಸರ್ಕಾರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಎಚ್.ವಿಶ್ವನಾಥ್ ಹೇಳಿದ್ದೇನು?
    ಯಾವ ಶಾಸಕರೂ ಸಹ ಯಾರನ್ನೂ ಸಂಪರ್ಕಿಸಿಲ್ಲ, ಮೈತ್ರಿ ನಾಯಕರೂ ಸಹ ನಮ್ಮನ್ನು ಸಂಪರ್ಕಿಸಿಲ್ಲ. ಎಂ.ಬಿ.ಪಾಟೀಲ್ ಸೇರಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗಳು ಹಸಿ ಸುಳ್ಳು ಎಂದು ರೆಬೆಲ್ ಶಾಸಕ ಎಚ್.ವಿಶ್ವನಾಥ್ ಸ್ಪಷ್ಟಪಡಿಸಿದ್ದರು.

    ಯಾವ ಅತೃಪ್ತ ಶಾಸಕರೂ ಸಹ ಯಾರನ್ನೂ ಸಂಪರ್ಕಿಸಿಲ್ಲ. ಎಂ.ಬಿ.ಪಾಟೀಲ್ ಹೇಳುತ್ತಿರುವುದು ಹಸಿ ಸುಳ್ಳು. ಕನ್ಫ್ಯೂಸ್ ಮಾಡಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ. ಆದರೆ ಯಾರೂ ದಾರಿ ತಪ್ಪುವುದಿಲ್ಲ. ಅವರೇ ದಾರಿ ತಪ್ಪಿದ್ದಾರೆ. ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಸೇರಿದಂತೆ ಅವರೊಂದಿಗೆ ಇರುವವರು ದಾರಿ ತಪ್ಪಿದ ಮಕ್ಕಳು. ರಾಜ್ಯ ರಾಜಕಾರಣದ ಈ 30 ದಿನಗಳ ಬೆಳವಣಿಗೆಯಲ್ಲಿ ಅವರು ದಾರಿ ತಪ್ಪಿದ ಮಕ್ಕಳು ಎಂದು ವ್ಯಂಗ್ಯವಾಡಿದ್ದರು.

    ಯಾವ ನಾಯಕರೂ ಸಹ ಅತೃಪ್ತರನ್ನು ಸಂಪರ್ಕಿಸಲು ಪ್ರಯತ್ನಿಸಿಲ್ಲ. ಅವರು ಪ್ರಯತ್ನಿಸಿದರೂ ಸಹ ಯಾರೂ ಅವರೊಂದಿಗೆ ಹೋಗಲು ಸಿದ್ಧರಿಲ್ಲ. ನಾವು ಎಲ್ಲವನ್ನೂ ಎದುರಿಸಲು ಸಿದ್ಧರಿದ್ದೇವೆ. ಬಂಡೆಯಂತೆ ಗಟ್ಟಿಯಾಗಿ ನಿಂತಿದ್ದೇವೆ. ನಮ್ಮ ನಿರ್ಧಾರವೂ ಸಹ ಅಷ್ಟೇ ಗಟ್ಟಿಯಾಗಿದೆ. ಏಕೆಂದರೆ ನಾವು ಯಾರೂ ದುಡ್ಡಿಗಾಗಿ ಬಂದಿಲ್ಲ. ಸರ್ಕಾರದ ವಿರುದ್ಧ ಅಸಮಾಧಾನದಿಂದ ಹೊರ ಬಂದಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

    ಇಬ್ಬರು ಅತೃಪ್ತ ಶಾಸಕರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದರು. ಆದರೆ ಸಿದ್ದರಾಮಯ್ಯ ಅವರು ಇಬ್ಬರ ಕರೆಯನ್ನೂ ಸ್ವೀಕರಿಸಿಲ್ಲ ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಇಂದು ಬೆಳಗ್ಗೆ ಹೇಳಿದ್ದರು.

    ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ಸಿದ್ದರಾಮಯ್ಯನವರು ಅತೃಪ್ತ ಶಾಸಕರು ಕರೆ ಮಾಡಿರುವುದು ನಿಜ ಎಂದು ಹೇಳುತ್ತಿದ್ದರೆ, ಇತ್ತ ರೆಬೆಲ್ ಶಾಸಕ ಎಚ್.ವಿಶ್ವನಾಥ್ ಅವರು ಯಾವ ಶಾಸಕರೂ ಯಾರನ್ನೂ ಸಂಪರ್ಕಿಸಿಲ್ಲ. ಅದರ ಅಗತ್ಯತೆಯೂ ನಮಗಿಲ್ಲ, ಎಂ.ಬಿ.ಪಾಟೀಲ್ ಹಾಗೂ ಸಿದ್ದರಾಮಯ್ಯ ದಾರಿ ತಪ್ಪಿದ ಮಕ್ಕಳು ಎಂದು ಹರಿಹಾಯ್ದಿದ್ದರು.

  • ಯಾವ ಶಾಸಕರೂ ಯಾರನ್ನೂ ಸಂಪರ್ಕಿಸಿಲ್ಲ, ಎಂ.ಬಿ.ಪಾಟೀಲ್ ದಡ್ಡ: ಎಚ್.ವಿಶ್ವನಾಥ್

    ಯಾವ ಶಾಸಕರೂ ಯಾರನ್ನೂ ಸಂಪರ್ಕಿಸಿಲ್ಲ, ಎಂ.ಬಿ.ಪಾಟೀಲ್ ದಡ್ಡ: ಎಚ್.ವಿಶ್ವನಾಥ್

    -ಸಿದ್ದರಾಮಯ್ಯ, ಎಂಬಿಪಿ ದಾರಿ ತಪ್ಪಿದ ಮಕ್ಕಳು

    ಮುಂಬೈ: ಯಾವ ಶಾಸಕರೂ ಸಹ ಯಾರನ್ನೂ ಸಂಪರ್ಕಿಸಿಲ್ಲ, ಮೈತ್ರಿ ನಾಯಕರೂ ಸಹ ನಮ್ಮನ್ನು ಸಂಪರ್ಕಿಸಿಲ್ಲ. ಎಂ.ಬಿ.ಪಾಟೀಲ್ ಸೇರಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗಳು ಹಸಿ ಸುಳ್ಳು ಎಂದು ರೆಬೆಲ್ ಶಾಸಕ ಎಚ್.ವಿಶ್ವನಾಥ್ ಕಿಡಿ ಕಾರಿದ್ದಾರೆ.

    ಇಬ್ಬರು ಅತೃಪ್ತ ಶಾಸಕರು ಸಿದ್ದರಾಮಯ್ಯನವರನ್ನು ಸಂಪರ್ಕಿಸಿದ್ದರು. ಆದರೆ ಸಿದ್ದರಾಮಯ್ಯನವರು ಕರೆ ಸ್ವೀಕರಿಸಿಲ್ಲ ಎಂಬ ಎಂ.ಬಿ.ಪಾಟೀಲ್ ಹೇಳಿಕೆ ಕುರಿತು ಎಚ್ ವಿಶ್ವನಾಥ್ ಇಂದು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದರು.

    ಯಾವ ಅತೃಪ್ತ ಶಾಸಕರೂ ಸಹ ಯಾರನ್ನೂ ಸಂಪರ್ಕಿಸಿಲ್ಲ. ಎಂ.ಬಿ.ಪಾಟೀಲ್ ಹೇಳುತ್ತಿರುವುದು ಹಸಿ ಸುಳ್ಳು. ಕನ್ಫ್ಯೂಸ್ ಮಾಡಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ. ಆದರೆ ಯಾರೂ ದಾರಿ ತಪ್ಪುವುದಿಲ್ಲ. ಅವರೇ ದಾರಿ ತಪ್ಪಿದ್ದಾರೆ. ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಸೇರಿದಂತೆ ಅವರೊಂದಿಗೆ ಇರುವವರು ದಾರಿ ತಪ್ಪಿದ ಮಕ್ಕಳು. ರಾಜ್ಯ ರಾಜಕಾರಣದ ಈ 30 ದಿನಗಳ ಬೆಳವಣಿಗೆಯಲ್ಲಿ ಅವರು ದಾರಿ ತಪ್ಪಿದ ಮಕ್ಕಳು ಎಂದು ವ್ಯಂಗ್ಯವಾಡಿದ್ದಾರೆ.

    ಯಾವ ನಾಯಕರೂ ಸಹ ಅತೃಪ್ತರನ್ನು ಸಂಪರ್ಕಿಸಲು ಪ್ರಯತ್ನಿಸಿಲ್ಲ. ಅವರು ಪ್ರಯತ್ನಿಸಿದರೂ ಸಹ ಯಾರೂ ಅವರೊಂದಿಗೆ ಹೋಗಲು ಸಿದ್ಧರಿಲ್ಲ. ನಾವು ಎಲ್ಲವನ್ನೂ ಎದುರಿಸಲು ಸಿದ್ಧರಿದ್ದೇವೆ. ಬಂಡೆಯಂತೆ ಗಟ್ಟಿಯಾಗಿ ನಿಂತಿದ್ದೇವೆ. ನಮ್ಮ ನಿರ್ಧಾರವೂ ಸಹ ಅಷ್ಟೇ ಗಟ್ಟಿಯಾಗಿದೆ. ಏಕೆಂದರೆ ನಾವು ಯಾರೂ ದುಡ್ಡಿಗಾಗಿ ಬಂದಿಲ್ಲ. ಸರ್ಕಾರದ ವಿರುದ್ಧ ಅಸಮಾಧಾನದಿಂದ ಹೊರ ಬಂದಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ನಾವೆಲ್ಲರೂ ಸಂಪೂರ್ಣ ಒಗ್ಗಟ್ಟಾಗಿದ್ದೇವೆ. ನಾವೆಲ್ಲಾ ಒಗ್ಗಟ್ಟಾಗಿ ಇದ್ದಿದ್ದರಿಂದಲೇ ಸರ್ಕಾರ ಬಿದ್ದಿದ್ದು, ಇವರ ಬೆದರಿಕೆ ಮಾತನ್ನು ಯಾರೂ ಕೇಳುವುದಿಲ್ಲ. ಯಾರಿಗೆ ಯಾರ ಭಯವೂ ಇಲ್ಲ. ನಮ್ಮನ್ನು ಸಂಪರ್ಕಿಸುವ ಧೈರ್ಯ ಯಾರ ಬಳಿಯೂ ಇಲ್ಲ. ಎಲ್ಲರೂ ಬಹಳ ಗಟ್ಟಿಯಾಗಿದ್ದೇವೆ. ನಾಲ್ಕೈದು ದಿನಗಳಲ್ಲಿ ಮರಳಿ ರಾಜ್ಯಕ್ಕೆ ಬರುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

    ಕಾನೂನು ಹೋರಾಟ:
    ಯಾವ ಶಾಸಕರನ್ನು ಬೇಕಾದರೂ ಅನರ್ಹ ಮಾಡಲಿ ತಲೆ ಕೆಡಿಸಿಕೊಳ್ಳುವುದಿಲ್ಲ. ಅವರಿಗೆ ಹೇಗೆ ಕಾನೂನು ಇದೆಯೋ ಅದೇ ರೀತಿ ನಮಗೂ ಇದೆ. ಕಾನೂನು ಹೋರಾಟ ಮಾಡುತ್ತೇವೆ. ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ. ನಾವು ಯಾವುದಕ್ಕೂ ಬಗ್ಗಲ್ಲ. ಆಕಾಶವೇ ಬೀಳಲಿ ಮೇಲೆ ನಾವೆಂದೂ ನಮ್ಮ ನಿರ್ಧಾರ ಬದಲಿಸಲ್ಲ ಎಂದು ತಮ್ಮ ನಿಲುವನ್ನು ಒತ್ತಿ ಹೇಳಿದರು.

    ಇಬ್ಬರು ಅತೃಪ್ತ ಶಾಸಕರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದರು. ಆದರೆ ಸಿದ್ದರಾಮಯ್ಯ ಅವರು ಇಬ್ಬರ ಕರೆಯನ್ನೂ ಸ್ವೀಕರಿಸಿಲ್ಲ ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಇಂದು ಬೆಳಗ್ಗೆ ಹೇಳಿದ್ದರು.

  • ಇಬ್ಬರು ಅತೃಪ್ತರಿಂದ ಸಿದ್ದರಾಮಯ್ಯನವರಿಗೆ ಕರೆ- ಎಂ.ಬಿ.ಪಾಟೀಲ್

    ಇಬ್ಬರು ಅತೃಪ್ತರಿಂದ ಸಿದ್ದರಾಮಯ್ಯನವರಿಗೆ ಕರೆ- ಎಂ.ಬಿ.ಪಾಟೀಲ್

    ವಿಜಯಪುರ: ಇಬ್ಬರು ಅತೃಪ್ತ ಶಾಸಕರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದರು ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಅತೃಪ್ತ ಶಾಸಕರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದರು. ಆದರೆ, ಸಿದ್ದರಾಮಯ್ಯ ಅವರು ಇಬ್ಬರ ಕರೆಯನ್ನೂ ಸ್ವೀಕರಿಸಿಲ್ಲ ಎಂದು ತಿಳಿಸಿದ್ದಾರೆ.

    ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ಆಗಬೇಕಿದೆ. ಈ ಕಾಯ್ದೆಯ 10ನೇ ಶೆಡ್ಯೂಲ್‍ಗೆ ತಿದ್ದುಪಡಿ ತರಬೇಕು. ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ನೀಡಿರುವ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಬೇಕು. ಈ ಮೂಲಕ ಪಕ್ಷಾಂತರ ನಿಷೇಧ ಕಾಯ್ದೆಯನ್ನು ವ್ಯವಸ್ಥಿತವಾಗಿ ಜಾರಿಗೆ ತರಲು ಸಹಕರಿಸಬೇಕಿದೆ ಎಂದರು.

    ಗೃಹ ಸಚಿವನಾಗಿ ನಾನೇ ಝೀರೋ ಟ್ರಾಫಿಕ್ ಬಳಸಿಲ್ಲ. ಅಂಥದ್ದರಲ್ಲಿ ಅತೃಪ್ತರಿಗೆ ಹೇಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲು ಸಾಧ್ಯ. ಆಡಳಿತ ಪಕ್ಷದ ಶಾಸಕರನ್ನು ಸೆಳೆದು, ಪಕ್ಷಾಂತರ ಮಾಡಿಸಿ ಅವರಿಗೆ ಸಚಿವ ಸ್ಥಾನದ ಆಫರ್ ನೀಡುವುದು ಸರಿಯಾದ ವ್ಯವಸ್ಥೆಯಲ್ಲ. ಈ ರೀತಿಯ ವ್ಯವಸ್ಥೆ ಪ್ರಾರಂಭವಾದರೆ ಬೇರೆ ರಾಜ್ಯಗಳಿಗೂ ಹರಡುತ್ತದೆ. ನಂತರ ಇದು ಕರ್ನಾಟಕದ ಫಾರ್ಮುಲಾ ಎಂದು ದೇಶಾದ್ಯಂತ ಪ್ರಚಾರ ಪಡೆಯುತ್ತದೆ. ಆಗ ರಾಜ್ಯದ ಗೌರವಕ್ಕೆ ಧಕ್ಕೆ ಬರುತ್ತದೆ ಇದನ್ನು ರಾಜಕೀಯ ನಾಯಕರು ಅರಿಯಬೇಕಿದೆ ಎಂದು ಹರಿಹಾಯ್ದರು.

    ಯಡಿಯೂರಪ್ಪನವರಿಗೆ ಶತಾಯಗತಾಯ ಅಧಿಕಾರಕ್ಕೇರುವುದು ಅನಿವಾರ್ಯವಾಗಿದೆ. ಅವರು ರಾಜಕೀಯ ಜೀವನದ ಕಟ್ಟ ಕಡೆಯ ಹಂತದಲ್ಲಿದ್ದಾರೆ. ಹೀಗಾಗಿ ನಾಲ್ಕು ವರ್ಷ ಕಾಯುವ ತಾಳ್ಮೆ ಅವರಿಗಿಲ್ಲ. ನಾಲ್ಕು ವರ್ಷದ ನಂತರ ಮುಖ್ಯಮಂತ್ರಿಯಾಗುತ್ತೇನೋ ಇಲ್ಲವೋ ಎಂದು ಈ ರೀತಿ ಮಾಡಿದ್ದಾರೆ. ಅವರ ಪಕ್ಷದ ನಿಯಮದಂತೆ ವಯಸ್ಸಿನ ಪರಿಮಿತಿಯಲ್ಲಿ ಆಡಳಿತ ನಡೆಸಬೇಕಾಗಿದೆ. ಹೀಗಾಗಿ ಯಡಿಯೂರಪ್ಪನವರು ತರಾತುರಿಯಲ್ಲಿ ಸರ್ಕಾರ ರಚನೆ ಮಾಡಿದ್ದು, ಇದು ಅನೈತಿಕ ಸರ್ಕಾರವಾಗಿದೆ. ಈ ಸರ್ಕಾರ ತುಂಬಾ ದಿನ ಉಳಿಯುವುದಿಲ್ಲ. ಇದರ ಅವಧಿ ಕೇವಲ ಆರು ತಿಂಗಳಿಂದ ಒಂದು ವರ್ಷ ಮಾತ್ರ ಎಂದು ಅವರು ವಾಗ್ದಾಳಿ ನಡೆಸಿದರು.

    ಸಿದ್ದರಾಮಯ್ಯ ಅವರಿಗೆ ಕರೆ ಮಾಡಿರುವ ಅತೃಪ್ತರು ಯಾರೆಂದು ತನಗೆ ಗೊತ್ತು, ಆದರೆ ಮಾಧ್ಯಮದ ಮುಂದೆ ನಾನು ಹೇಳೋದು ಸರಿಯಿರಲ್ಲ. ಅದನ್ನು ಸಿದ್ದರಾಮಯ್ಯ ಅವರೇ ಹೇಳುತ್ತಾರೆ ಎಂದು ಹೇಳುವ ಮೂಲಕ ಕರೆ ಮಾಡಿದವರು ಯಾರು ಎಂಬುದನ್ನು ಎಂ.ಬಿ ಪಾಟೀಲ್ ಬಾಯಿ ಬಿಟ್ಟಿಲ್ಲ.

  • ಯಡಿಯೂರಪ್ಪ ಪ್ರಮಾಣ ವಚನ – ದೇವಸ್ಥಾನಕ್ಕೆ ತೆರಳಿ ವಿಜಯದ ಕುಂಕುಮ ಧರಿಸಿದ ಅತೃಪ್ತರು

    ಯಡಿಯೂರಪ್ಪ ಪ್ರಮಾಣ ವಚನ – ದೇವಸ್ಥಾನಕ್ಕೆ ತೆರಳಿ ವಿಜಯದ ಕುಂಕುಮ ಧರಿಸಿದ ಅತೃಪ್ತರು

    ಮುಂಬೈ: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರಲ್ಲಿ ಯಾವ ರೀತಿ ಮಂದಹಾಸ ಮೂಡಿದೆಯೋ ಅದೇ ರೀತಿ ಅತೃಪ್ತ ಶಾಸಕರಲ್ಲೂ ಮೂಡಿದ್ದು, ನಾವು ಗೆದ್ದೆವು ಎಂದು ಸಂತಸ ಪಟ್ಟಿದ್ದಾರೆ.

    ಅತೃಪ್ತ ಶಾಸಕರು ಸಂಜೆ ಕೊಲ್ಲಾಪುರದ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿದ್ದು, ದೇವಾಲಯದಲ್ಲಿ ವಿಜಯದ ಸಂಕೇತವಾಗಿ ಕುಂಕುಮವನ್ನು ಧರಿಸಿ ಪರಸ್ಪರ ಸಂತಸ ಹಂಚಿಕೊಂಡಿದ್ದಾರೆ. ನಾವು ಅಂದುಕೊಂಡಂತೆ ಎಲ್ಲ ನಡೆದಿದ್ದು, ಯಾವುದೂ ಹುಸಿಯಾಗಿಲ್ಲ ನಾವು ಗೆದ್ದಿದ್ದೇವೆ ಎಂದು ಸಂಭ್ರಮಿಸಿದ್ದಾರೆ.

    ದೇವಸ್ಥಾನಕ್ಕೆ ತೆರಳಿದ ಸಂದರ್ಭದಲ್ಲಿ ಕೇವಲ ದೇವಿಯ ದರ್ಶನ ಮಾಡಿ ಹೊರ ಬಂದಿಲ್ಲ. ದೇವಸ್ಥಾನದ ಜಗಲಿಯ ಬಳಿ ಕೂತು ಮಾತನಾಡಿಕೊಂಡು ಗಂಟೆಗಟ್ಟಲೇ ಕಾಲ ಕಳೆದಿದ್ದು, ಗೆಲವು ನಮ್ಮದೇ ಎಂದು ಹೇಳಿಕೊಂಡು ಅತೃಪ್ತ ಶಾಸಕರು ಹರಟೆ ಹೊಡೆದಿದ್ದಾರೆ. ಗೆದ್ದೇ ಗೆಲ್ಲುತ್ತೇವೆ ಇದರಲ್ಲಿ ಯಾವುದೇ ಆತಂಕ, ಸಂಶಯವಿಲ್ಲ ಎಂದು ಈ ಹಿಂದೆಯೇ ಹೇಳಿದ್ದೇವೆ ಎಂದು ಅತೃಪ್ತ ಶಾಸಕರು ತಮ್ಮ ಆಪ್ತರ ಬಳಿ ಸಂತಸ ಹಂಚಿಕೊಂಡಿದ್ದಾರೆ.

    ಕೊಲ್ಲಾಪುರದ ಈ ಮಹಾಲಕ್ಷ್ಮೀ ದೇವಾಲಯ ರಮೇಶ್ ಜಾರಕಿಹೊಳಿ ಅವರ ಮನೆ ದೇವರಾಗಿದ್ದು, ಈ ದೇವಸ್ಥಾನ ಬೆಳಗಾವಿಯಿಂದ ಕೇವಲ 100 ಕಿ.ಮೀ.ದೂರದಲ್ಲಿದೆ.

    ದು:ಖವೇ ಇಲ್ಲ
    ಅನರ್ಹತೆ ಎನ್ನುವ ದು:ಖ ಯಾವ ಅತೃಪ್ತ ಶಾಸಕರಲ್ಲೂ ಸಹ ಕಂಡಿಲ್ಲ. ನಮ್ಮನ್ನು ಅನರ್ಹತೆಗೊಳಿಸಿದರೂ ಕೋರ್ಟ್ ನಲ್ಲಿ ನಾವು ಗೆಲ್ಲುವ ಭರವಸೆ ನಮಗಿದೆ. ಯಾವುದರ ಕುರಿತು ಸಹ ನಮಗೆ ಆತಂಕವಿಲ್ಲ. ಅನರ್ಹತೆ ಕುರಿತು ಕೋರ್ಟಿನಲ್ಲಿ ಹೇಗೆ ಗೆಲ್ಲಬೇಕೆಂದು ನಮಗೆ ತಿಳಿದಿದೆ ಎಂದು ಅತೃಪ್ತರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

    ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ಅನರ್ಹತೆ ಕುರಿತ ಅರ್ಜಿ ವಿಚಾರಣೆಗೆ ಬರಲಿದ್ದು, ನಂತರ ಎಲ್ಲರೂ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಮೇಶ್ ಜಾರಕಿಹೊಳಿ, ಪ್ರತಾಪ್‍ಗೌಡ ಪಾಟೀಲ್, ಮಹೇಶ್ ಕುಮಟಳ್ಳಿ, ಆರ್.ಶಂಕರ್ ಸೇರಿದಂತೆ ಎಲ್ಲ ಅತೃಪ್ತ ಶಾಸಕರೂ ಸಹ ದೇವಸ್ಥಾನಕ್ಕೆ ಒಟ್ಟಿಗೆ ಭೇಟಿ ನೀಡಿದ್ದಾರೆ.

  • ಸುಳ್ಳು ಆರೋಪಗಳ ವಿಷ ಕುಡಿದು, ವಿಷಕಂಠನಾಗಿದ್ದೇನೆ- ಹೆಬ್ಬಾರ್ ವಿರುದ್ಧ ಸಿದ್ದರಾಮಯ್ಯ ಕಿಡಿ

    ಸುಳ್ಳು ಆರೋಪಗಳ ವಿಷ ಕುಡಿದು, ವಿಷಕಂಠನಾಗಿದ್ದೇನೆ- ಹೆಬ್ಬಾರ್ ವಿರುದ್ಧ ಸಿದ್ದರಾಮಯ್ಯ ಕಿಡಿ

    ಬೆಂಗಳೂರು: ‘ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು’ ಎಂದು ಕೆಲವು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದಾರೆ. ಇದು ಸಂಪೂರ್ಣ ಸುಳ್ಳು ದುರುದ್ದೇಶ ಪೂರಿತ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ.

    ನಿನ್ನೆ ತಡರಾತ್ರಿ ಕ್ಷೇತ್ರಕ್ಕೆ ಆಗಮಿಸಿದ್ದ ಅತೃಪ್ತ ಶಾಸಕ ಶಿವರಾಮ್ ಹೆಬ್ಬಾರ್, ಸಿದ್ದರಾಮಯ್ಯನವರೇ ನಮ್ಮ ನಾಯಕರು ಅವರು ಹೇಳಿದಂತೆಯೇ ನಡೆದುಕೊಳ್ಳುತ್ತಿದ್ದೇವೆ. ಹೀಗಾಗಿ ಬಿಜೆಪಿ ಸೇರುವ ಯಾವುದೇ ಉದ್ದೇಶ ಹೊಂದಿಲ್ಲ. ಸಿದ್ದರಾಮಯ್ಯನವರ ಮಾರ್ಗದರ್ಶನದಂತೆ ನಡೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದರು. ಹೆಬ್ಬಾರ್ ಅವರ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲ ಸೃಷ್ಟಿಸಿದ್ದು, ಇದೀಗ ಸ್ವತಃ ಸಿದ್ದರಾಮಯ್ಯನವರೇ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಬೇಸರ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ತಪ್ಪು ಮುಚ್ಚಿಕೊಳ್ಳುವ ದುರುದ್ದೇಶದಿಂದ ಅತೃಪ್ತ ಶಾಸಕರು ‘ಸಿದ್ದರಾಮಯ್ಯನವರು ನಮ್ಮ ನಾಯಕರು’ ಎಂದು ಹೇಳುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷಕುಡಿದು, ಕುಡಿದು ನಾನು ವಿಷಕಂಠನ್ನಾಗಿದ್ದೇನೆ. ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ! ಎಂದು ಮೊದಲ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ‘ಸಿದ್ದರಾಮಯ್ಯನವರು ನಮ್ಮ ನಾಯಕರು’ ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂದು ಎರಡನೇ ಟ್ವೀಟ್‍ನಲ್ಲಿ ಉಲ್ಲೇಖಿಸಿದ್ದಾರೆ.

    ‘ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು’ ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದು ಮೂರನೇ ಟ್ವೀಟ್‍ನಲ್ಲಿ ಕಿಡಿ ಕಾರಿದ್ದಾರೆ. ಈ ಮೂಲಕ ಅತೃಪ್ತ ಶಾಸಕರು ತಮ್ಮ ಮೇಲೆ ಮಾಡಿರುವ ಎಲ್ಲ ಆರೋಪಗಳು ಸುಳ್ಳು ಎಂದು ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.

    ಶಿವರಾಮ್ ಹೆಬ್ಬಾರ್ ಹೇಳಿದ್ದೇನು?
    ನಾವು ಬಿಜೆಪಿ ಜೊತೆ ಸಂಪರ್ಕದಲ್ಲಿಲ್ಲ. ನಮ್ಮ ನಾಯಕ ಸಿದ್ದರಾಮಯ್ಯ, ಅವರು ಹೇಳಿದಂತೆ ಯಾರ ಜೊತೆಗೂ ಸಂಪರ್ಕ ಸಾಧಿಸಿಲ್ಲ ಎಂದು ಶಿವರಾಮ್ ಹೆಬ್ಬಾರ್ ಹೇಳಿದ್ದರು. ಬುಧವಾರ ರಾತ್ರಿ ಪಬ್ಲಿಕ್ ಟಿವಿ ಜೊತೆ ಮಾತಾನಾಡಿದ್ದ ಅವರು, ನಾವು ಯಾವ ಬಿಜೆಪಿ ನಾಯಕರ ಜೊತೆ ಸಂಪರ್ಕ ಹೊಂದಿಲ್ಲ. ಸದ್ಯ ರಾಜ್ಯದಲ್ಲಿ ಆಗುತ್ತಿರುವ ಬಿಜೆಪಿ ಸರ್ಕಾರ ರಚನೆಯ ಬೆಳವಣಿಗೆಗೆ ನಮಗೆ ಯಾವುದೇ ಸಂಬಂಧ ಇಲ್ಲ. ನಾವು ಕೇವಲ ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಟ್ಟಿದ್ದೇವೆ. ಇಂದಿಗೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇವೆ ಎಂದು ತಿಳಿಸಿದ್ದರು.

    ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿರುವುದರಿಂದ ರಾಜೀನಾಮೆ ಅಂಗೀಕಾರವಾದ ಬಳಿಕ ಎಲ್ಲರೂ ಒಟ್ಟಿಗೆ ಸೇರಿ ತೀರ್ಮಾನ ಮಾಡುತ್ತೇವೆ. ನಮ್ಮ ನಾಯಕರು ಸಿದ್ದರಾಮಯ್ಯ ಅವರು, ಅವರೇ ದೂರ ಉಳಿಯಿರಿ ಎಂದಿದ್ದಾರೆ. ಸ್ಪೀಕರ್ ಅವರಿಗೆ ಮನವಿ ಮಾಡಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನದ ಮೇಲೆ ನಮ್ಮ ಮುಂದಿನ ತೀರ್ಮಾನ ಇರುತ್ತದೆ ಎಂದಿದ್ದರು.

  • ನನಗೆ ಯಾವುದೇ ಹುದ್ದೆ ಬೇಡ, ಎಚ್‍ಡಿಡಿ ಭೇಟಿ ಬಳಿಕ ರಾಮಲಿಂಗಾರೆಡ್ಡಿ ಸ್ಪಷ್ಟನೆ

    ನನಗೆ ಯಾವುದೇ ಹುದ್ದೆ ಬೇಡ, ಎಚ್‍ಡಿಡಿ ಭೇಟಿ ಬಳಿಕ ರಾಮಲಿಂಗಾರೆಡ್ಡಿ ಸ್ಪಷ್ಟನೆ

    ಬೆಂಗಳೂರು: ನನಗೆ ಯಾವುದೇ ಹುದ್ದೆ ಬೇಡ, ಡಿಸಿಎಂ ಹುದ್ದೆಯೂ ಬೇಡ, ಔಪಚಾರಿಕವಾಗಿ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿದ್ದೆಯಷ್ಟೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.

    ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಔಪಚಾರಿಕವಾಗಿ ಭೇಟಿಯಾಗಿದ್ದೆ ಅಷ್ಟೇ, ಅತೃಪ್ತ ಶಾಸಕರ ಮನವೊಲಿಕೆ ಕುರಿತು ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ನಾನು ರಾಜೀನಾಮೆ ಹಿಂಪಡೆಯುವ ನಿರ್ಧಾರ ಮಾಡಿದಾಗ ಅತೃಪ್ತ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ, ಅವರು ಸಂಪರ್ಕಕ್ಕೆ ಸಿಗಲಿಲ್ಲ ಎಂದು ಇದೇ ವೇಳೆ ತಿಳಿಸಿದರು.

    ಎಸ್.ಟಿ.ಸೋಮಶೇಖರ್ ಹೇಳಿದ್ದು ನಿಜ:
    ಅತೃಪ್ತ ಶಾಸಕ ಸೋಮಶೇಖರ್ ಅವರು ನನ್ನ ಬಗ್ಗೆ ಹೇಳಿದ್ದು ನಿಜ. ನಾನು, ಸೋಮಶೇಖರ್ ಹಾಗೂ ವಿಶ್ವನಾಥ್ ಅವರು ಮೂವರೂ ಸೇರಿ ಮಾತನಾಡಿಕೊಂಡು ಯಾವುದೇ ಒತ್ತಡ ಬಂದರೂ, ನಮ್ಮ ರಾಜೀನಾಮೆಯನ್ನು ವಾಪಸ್ ಪಡೆಯಬಾರದು ಎಂಬ ತಿರ್ಮಾನಕ್ಕೆ ಬಂದಿದ್ದೆವು. ಆದರೆ ಅಷ್ಟು ಜನ ಮುಖಂಡರು ಬಂದು ಒತ್ತಡ ಹಾಕಿದ್ದರಿಂದ ರಾಜೀನಾಮೆ ಹಿಂಪಡೆಯಬೇಕಾಯಿತು. ಭಾನುವಾರ ರಾಜೀನಾಮೆ ವಾಪಸ್ ಪಡೆಯಬೇಕೆಂದು ನಿರ್ಧಾರ ಮಾಡಿದ ನಂತರ ಸೋಮವಾರ, ಮಂಗಳವಾರ ಮಾತನಾಡಲು ಯತ್ನಿಸಿದೆ. ಆದರೆ, ಅವರು ಸಂಪರ್ಕಕ್ಕೆ ಸಿಗಲಿಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದರು.

    ನನಗೆ ಯಾವುದೇ ಹುದ್ದೆ ಬೇಡ, ಡಿಸಿಎಂ ಹುದ್ದೆಯ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಹೀಗಿರುವಾಗ ನನಗೆ ಸಿಗಲು ಹೇಗೆ ಸಾಧ್ಯ. ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ. ಅವರೂ ನೀಡಿದರೂ ನನಗೆ ಬೇಡ. ಹುದ್ದೆಗಾಗಿ ನಾನು ರಾಜೀನಾಮೆ ನೀಡಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

    ಎಸ್.ಟಿ.ಸೋಮಶೇಖರ್ ಹೇಳಿದ್ದೇನು?
    ರಾಮಲಿಂಗಾರೆಡ್ಡಿ ಅವರು ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಹಿಂಪಡೆದ ನಂತರ ಅತೃಪ್ತ ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, ನಾವು ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ಹಿಂಪಡೆಯುತ್ತಾರೆ ಎಂದು ಊಹಿಸಿರಲಿಲ್ಲ. ರಾಜೀನಾಮೆ ಹಿಂಪಡೆಯುವ ಮೂಲಕ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

    ಆದರೆ, ನಾವು(ಉಳಿದ ಅತೃಪ್ತ ಶಾಸಕರು) ಎಂತಹ ಒತ್ತಡ ಹೇರಿದರೂ ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಮ್ಮ ನಿರ್ಧಾರಕ್ಕೆ ನಾವು ಎಂದಿಗೂ ಬದ್ಧರಾಗಿರುತ್ತೇವೆ. ನಾವು ನಾಲ್ಕೂ ಜನ (ಎಚ್.ವಿಶ್ವನಾಥ್, ಮುನಿರತ್ನ, ಸೋಮಶೇಖರ್, ರಾಮಲಿಂಗಾರೆಡ್ಡಿ) ಮತನಾಡಿಕೊಂಡು ರಾಜೀನಾಮೆ ನೀಡಿದ್ದೆವು. ಇದರಲ್ಲಿ ರಾಮಲಿಂಗಾರೆಡ್ಡಿ ರಾಜೀನಾಮೆ ಹಿಂಪಡೆದಿದ್ದಾರೆ. ನಾವು ಮೂವರೂ ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದರು.