Tag: Distribution

  • ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

    ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

    ಕಾರವಾರ: ಯಾವುದೇ ಕಾರ್ಯಕ್ರಮವಿರಲಿ ಬಂದ ಅಥಿತಿಗಳಿಗೆ ಸಿಹಿ ನೀಡಿ ಮೃಷ್ಟಾನ್ನ ಭೋಜನ ನೀಡುವ ಮೂಲಕ ಅತಿಥಿ ಸತ್ಕಾರ ಮಾಡುವುದು ಸಂಪ್ರದಾಯ .

    ಯಲ್ಲಾಪುರ ತಾಲೂಕಿನ ಚಂದಗುಳಿಯಲ್ಲಿ ಬುಧವಾರ ನಡೆದ ಉಪನಯನವೊಂದರಲ್ಲಿ ವಿತರಿಸಿದ ವಿಭಿನ್ನ ಉಂಡೆ ಅತಿಥಿಗಳನ್ನು ಮೆಚ್ಚಿಸುವಂತೆ ಮಾಡಿತ್ತು. ಅಲ್ಲಿ ವಿತರಿಸಿದ್ದು ಯಾವುದೇ ಸಿಹಿಯಾದ ಉಂಡೆಯಾಗಿರದೇ ಪ್ಯಾಕ್ ಮಾಡಿದ ಬೀಜದುಂಡೆಯಾಗಿತ್ತು. ವೀಣಾ ಹಾಗೂ ರಾಮಚಂದ್ರ ವೈದ್ಯ ದಂಪತಿಗಳ ಪುತ್ರನಾದ ಆದಿತ್ಯ (ಜಯಶೀಲ)ನ ಉಪನಯನವನ್ನು ತಾಲೂಕಿನ ಚಂದಗುಳಿ ಗಂಟೆ ಗಣಪತಿ ದೇವಾಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

    ನಮ್ಮ ಮಗನ ಉಪನಯನ ವಿಭಿನ್ನವಾಗಿರಬೇಕು ಮತ್ತು ಈ ಶುಭಕಾರ್ಯದ ಸವಿನೆನಪು ಚಿರಸ್ಥಾಯಿಯಾಗಿರಬೇಕು ಎನ್ನುವ ಉದ್ದೇಶದಿಂದ ಈ ದಂಪತಿ ಆಯ್ಕೆ ಮಾಡಿಕೊಂಡಿದ್ದು ಪರಿಸರ ಜಾಗೃತಿ. ಮಗನ ಉಪನಯನದ ಹೆಸರಿನಲ್ಲಿ ನೂರಾರು ಗಿಡಗಳು ಅಲ್ಲಲ್ಲಿ ಬೆಳೆದು ನಿಲ್ಲಲಿ, ಈ ಮೂಲಕ ಹಸಿರು ಪರಿಸರ ಹೆಚ್ಚಾಗಲಿ ಎಂಬ ಉದ್ದೇಶದಿಂದ ಬೀಜದುಂಡೆಗಳನ್ನು ತಯಾರಿಸಿ, ಬಂದಂತಹ ಅತಿಥಿಗಳಿಗೆ ಆದಿತ್ಯನ ಆಧ್ಯಾತ್ಮಿಕ ಪಯಣಕ್ಕೆ ಸಾಕ್ಷಿಯಾಗಿ ಹರಸಿ. ಪ್ರೀತಿಯಿಂದ ನಾವು ನೀಡುವ ಜೀವಗಾಳು ಪಸರಿಸಿ ಎಂಬ ಸಂದೇಶದೊಂದಿಗೆ ವಿತರಿಸಿದ್ದಲ್ಲದೇ, ಇದನ್ನು ನಿಮ್ಮ ಮನೆಯ ಸುತ್ತಮುತ್ತಲಿನ ಖಾಲಿ ಪ್ರದೇಶದಲ್ಲಿ ಹಾಕುವುದರ ಮೂಲಕ ಹಸಿರು ಪರಿಸರ ಹೆಚ್ಚಾಗಲು ಕೈಜೋಡಿಸಿ ಎಂಬ ಮನವಿಯನ್ನೂ ಮಾಡಿಕೊಳ್ಳಲಾಯಿತು.

    ಈ ವಿಚಾರದ ಬಗ್ಗೆ ಮಾತನಾಡಿರುವ ಈ ಬೀಜದುಂಡೆ ವಿತರಣೆಯ ರೂವಾರಿ ಆದಿತ್ಯನ ಕುಟುಂಬದವರಾದ ವಾನಳ್ಳಿಯ ನಾಗವೇಣಿ ಹೆಗಡೆ, ಅತಿಥಿಗಳಿಗೆ ವಿತರಿಸಲು ಎರಡು ಜಾತಿಯ ಮರಗಳಾದ ನೇರಳೆ, ಹಲಸು ಮುಂತಾದ ಬೀಜಗಳುಳ್ಳ ಸುಮಾರು 1200 ಹೆಚ್ಚು ಬೀಜದುಂಡೆಗಳನ್ನು ತಯಾರಿಸಿ ವಿತರಿಸಿದ್ದೇವೆ. ಅವುಗಳಲ್ಲಿ ನೂರು ಗಿಡಗಳು ಹುಟ್ಟಿ, ಮರವಾಗಿ ಬೆಳೆದು ನಿಂತರೆ ಪರಿಸರಕ್ಕೊಂದು ಕೊಡುಗೆ ನೀಡಬೇಕೆಂದ ನಮ್ಮ ಅಭಿಲಾಶೆ ಎಂದು ತಿಳಿಸಿದ್ದಾರೆ.

    ಒಟ್ಟಿನಲ್ಲಿ ಈ ರೀತಿ ಶುಭ ಕಾರ್ಯಗಳಲ್ಲಿ ಸಾಮಾಜಿಕ ಸಂದೇಶವನ್ನು, ಪರಿಸರ ಜಾಗೃತಿಯನ್ನು ಮೂಡಿಸುವಂತಾದರೆ ಶುಭ ಕಾರ್ಯ ಸಾಮಾಜಿಕ ಕಾರ್ಯವಾಗುವುದರಲ್ಲಿ ಸಂಶಯವಿಲ್ಲ.

  • ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ!

    ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ!

    ಶಿವಮೊಗ್ಗ/ಬಳ್ಳಾರಿ: ರಾಜ್ಯದೆಲ್ಲೆಡೆ ಲೋಕಸಭಾ ಕ್ಷೇತ್ರದ ಚುನಾವಣೆ ರಂಗೇರುತ್ತಿದೆ. ಇತ್ತ ವ್ಯಕ್ತಿಯೊಬ್ಬ ಮತದಾರರಿಗೆ ಹಣ ಹಂಚುತ್ತಿದ್ದಾಗ ಸಿಕ್ಕಿ ಬಿದ್ದಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

    ನಗರದ ವಾರ್ಡ್ ನಂಬರ್ 7 ವಿನೋಬಾನಗರದಲ್ಲಿ ಇರುವ ಮತದಾರರಿಗೆ ದುಡ್ಡು ಹಂಚುತ್ತಿದ್ದಾಗ ವ್ಯಕ್ತಿ ಸಿಕ್ಕಿ ಬಿದ್ದಿದ್ದಾನೆ. ಆತ ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಹಣ ಹಂಚಿಕೆ ಮಾಡುತ್ತಿದ್ದ ಎಂಬ ಮಾಹಿತಿಗಳು ಕೇಳಿಬರುತ್ತಿವೆ.

    ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು, ಮತದಾರರಿಗೆ ಪ್ರಚಾರದ ಜೊತೆ ತಲಾ 500 ರೂಪಾಯಿ ಹಂಚಿಕೆಯನ್ನು ಮಾಡಲಾಗುತ್ತಿತ್ತು. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಕಾರ್ಯಾಚರಣೆ ಮಾಡಿ, ಹಣ ಹಂಚುತ್ತಿದ್ದ ವ್ಯಕ್ತಿಯನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಈ ಬಗ್ಗೆ ಇನ್ನೂ ಯಾವುದೇ ದೂರು ದಾಖಲಾಗಿಲ್ಲ.

    ಬಳ್ಳಾರಿಯಲ್ಲೂ ಕೂಡ ಎಮ್ಮಿಗನೂರು ಹಾಗೂ ಕುರುಗೋಡ್ ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಎಮ್ಮಿಗನೂರು ಗ್ರಾಮದಲ್ಲಿ ಮದ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ ಕುರುಗೋಡ್ ಗ್ರಾಮದಲ್ಲಿ ಮದ್ಯ ಸರಬರಾಜು ಮಾಡುತ್ತಿದ್ದ ಬೈಕ್ ಅನ್ನು ವಶಕ್ಕೆ ಪಡೆದು, 111 ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಎಸ್‍ವೈ ಮತಯಾಚಿಸಿದ ಬಳಿಕ ಕಾರ್ಯಕರ್ತರಿಗೆ ಹಣ ಹಂಚಿಕೆ

    ಬಿಎಸ್‍ವೈ ಮತಯಾಚಿಸಿದ ಬಳಿಕ ಕಾರ್ಯಕರ್ತರಿಗೆ ಹಣ ಹಂಚಿಕೆ

    ವಿಜಯಪುರ/ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತಯಾಚನೆ ಮಾಡಿ ತೆರಳಿದ ಬಳಿಕ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡಲಾಗಿದೆ.

    ಯಡ್ಡಿಯೂರಪ್ಪ ಪ್ರಚಾರ ಸಭೆಗಾಗಿ ಇಂದು ಸಿಂಧಗಿಗೆ ಆಗಮಿಸಿದ್ದರು. ಸಭೆಯಲ್ಲಿ ಸಿಂದಗಿ ಮತಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಬಂದಿದ್ದರು. ಅತ್ತ ಯಡ್ಡಿಯೂರಪ್ಪ ಸಭೆಯಲ್ಲಿ ಮತಯಾಚನೆ ಮಾಡಿ ತೆರಳುತ್ತಿದ್ದಂತೆ ಇತ್ತ ಸಿಂಧಗಿ ಬಿಜೆಪಿ ತಾಲೂಕು ಅಧ್ಯಕ್ಷ ಸಿದ್ದು ಬುಳ್ಳಾ ಹಣ ಹಂಚಿಕೆ ಮಾಡಿದ್ದಾರೆ. ಹಣ ಹಂಚಿಕೆ ಮಾಡಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಸಿಂಧಗಿ ಮಾಜಿ ಶಾಸಕ ರಮೇಶ್ ಭೂಸನೂರ ಆದೇಶದ ಮೇರೆಗೆ ಹಣ ಹಂಚಿರಬಹುದೆಂಬ ಶಂಕೆ ವ್ಯಕ್ತವಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಗೂಳಪ್ಪ ಶೆಟಗಾರ ಪರವಾಗಿ ಮತಚಲಾಯಿಸಲು ಹಣ ಹಂಚಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದ್ದು, ಸಭೆ ನಡೆದ ಸಿಂಧಗಿಯ ವಿರೇಶ್ವರ ಸಭಾ ಭವನದಲ್ಲೇ ಹಣ ಹಂಚಲಾಗಿದೆ.

    ಸಮ್ಮಿಶ್ರ ಸರ್ಕಾರದ ವಿರುದ್ಧ ಕಿಡಿ: ಸಿದ್ದರಾಮಯ್ಯ ನಾನು ಸಿಎಂ ಆಗುತ್ತೇವೆ ಎಂದು ಹೇಳಿದ್ದು ಸಾಮಾನ್ಯ, ಅಪೇಕ್ಷೆ ಪಡುವುದು ಸಾಮಾನ್ಯ ಎಂದು ಸಿದ್ದರಾಮಯ್ಯನವರ ಕಾಲೆಳೆದರು. ಸಮನ್ವಯ ಸಮಿತಿ ಸೇರುವುದೇ ದೊಡ್ಡ ವಿಷಯವಾಗಿತ್ತು. ಬಹಳ ದಿನಗಳ ನಂತರ ಒಂದೆಡೆ ಸೇರಿದ್ದಾರೆ ಎಂದು ವ್ಯಂಗ್ಯವಾಡಿದರು. ಅಲ್ಲದೆ ಈ ಸಮ್ಮಿಶ್ರ ಸರ್ಕಾರ ಗೊಂದಲದ ಗೂಡಾಗಿದೆ. 100 ದಿನ ಪೂರೈಸಿದರೂ ಸಿಎಂ ಉತ್ತರ ಕರ್ನಾಟಕ ಭಾಗಕ್ಕೆ ಬಂದಿಲ್ಲ. ಅಭಿವೃದ್ಧಿ ಶೂನ್ಯ, ನೀರಾವರಿ, ಲೋಕೋಪಯೋಗಿ ಇಲಾಖೆ ಕೆಲಸಗಳು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದರು.

    ರಾಹುಲ್ ಗಾಂಧಿ ಅವರನ್ನು ಕುರಿತು ಪ್ರತಿಕ್ರಿಯಿಸಿದ ಅವರು ಪ್ರಯಾಣಿಸುತ್ತಿದ್ದ ವೇಳೆ ವಿಮಾನದಲ್ಲಿ ಕಂಡಿದ್ದ ತಾಂತ್ರಿಕ ತೊಂದರೆ ಬಗ್ಗೆ ಕೇಂದ್ರ ಸರ್ಕಾರ ಯಾವ ಪ್ರಕರಣವನ್ನೂ ಮುಚ್ಚಿ ಹಾಕಿಲ್ಲ ಸಮಗ್ರ ತನಿಖೆ ಮಾಡುತ್ತಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯತ್ತ ಮತದಾರರು ಒಲವು ತೋರಿದ್ದಾರೆ. ವಿಧಾನ ಪರಿಷದ್ ಉಪ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿಗಳಿಗೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಂಸದರಿಗೆ ದುಬಾರಿ ಐಫೋನ್ ಗಿಫ್ಟ್ ಕೊಟ್ಟ ಸಮ್ಮಿಶ್ರ ಸರ್ಕಾರ- ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಸಮವಸ್ತ್ರವೇ ಕೊಡಲಿಲ್ಲ

    ಸಂಸದರಿಗೆ ದುಬಾರಿ ಐಫೋನ್ ಗಿಫ್ಟ್ ಕೊಟ್ಟ ಸಮ್ಮಿಶ್ರ ಸರ್ಕಾರ- ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಸಮವಸ್ತ್ರವೇ ಕೊಡಲಿಲ್ಲ

    ಚಿಕ್ಕಬಳ್ಳಾಪುರ: ಒಂದು ಕಡೆ ರಾಜ್ಯದ ಸಂಸದರಿಗೆ ದುಬಾರಿ ಐಪೋನ್ ಕೊಟ್ಟಿರೋ ಸಮ್ಮಿಶ್ರ ಸರ್ಕಾರ ಹಾಗೂ ಸಚಿವರ ನಡೆ ಎಲ್ಲರ ಟೀಕೆಗೆ ಗುರಿಯಾಗಿದೆ. ಆದ್ರೆ ಇತ್ತ ಶಾಲೆಗಳು ಆರಂಭವಾಗಿ ಎರಡು ತಿಂಗಳುಗಳೆ ಕಳೆದರೂ ಪಾಪ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರ ಸಮವಸ್ತ್ರವೇ ಕೊಟ್ಟಿಲ್ಲ. ಹೈಸ್ಕೂಲ್ ಗೆ ಬರುತ್ತಿದ್ದಂತೆ ಚೂಡಿದಾರ ತೊಡಬೇಕಿದ್ದ ಹೆಣ್ಣು ಮಕ್ಕಳು ಇನ್ನೂ ಹಳೆಯ ಲಂಗ-ಸ್ಕರ್ಟ್ ಧರಿಸಿಯೇ ಶಾಲೆಗೆ ಬರುವಂತೆ ಜಿಲ್ಲೆಯ ವಿದ್ಯಾರ್ಥಿನಿಯರ ಸ್ಥಿತಿ

    ಚಿಕ್ಕಬಳ್ಳಾಪುರ ಇದುವರೆಗೂ 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸಮವಸ್ತ್ರ ವಿತರಿಸಿಲ್ಲ. 7ನೇ ತರಗತಿ ವರೆಗೂ ಲಂಗ ತೊಡುತ್ತಿದ್ದ ವಿದ್ಯಾರ್ಥಿನಿಯರು ಹೈ ಸ್ಕೂಲ್ ಮೆಟ್ಟಿಲೇರಿದ ಬಳಿಕ ಚೂಡಿದಾರ ತೊಡಬೇಕು. ಇಡೀ ಜಿಲ್ಲೆಯಲ್ಲಿ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಸೇರಿ ಒಟ್ಟು 43,329 ಹೈಸ್ಕೂಲ್ ವಿದ್ಯಾರ್ಥಿಗಳಿದ್ದಾರೆ. ಕೆಲವರು ಯೂನಿಫಾರಂ ಇಲ್ಲದ ಕಾರಣ ಕಲರ್ ಬಟ್ಟೆ ತೊಟ್ಟು ಶಾಲೆಗಳಿಗೆ ಬರುತ್ತಿದ್ದರೆ, ಇನ್ನೂ ಕೆಲವರು ಹಳೆಯ ಯೂನಿಫಾರಂನ್ನೇ ಧರಿಸಿ ಶಾಲೆಗಳಿಗೆ ಬರುತ್ತಿದ್ದಾರೆ.

    ಇದರಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 8,388 ವಿದ್ಯಾರ್ಥಿನಿಯರಿದ್ದು, ಇವರಿಗೆಲ್ಲರಿಗೂ ಸಮವಸ್ತ್ರ ಭಾಗ್ಯ ಲಭಿಸಿಲ್ಲ. ಇದರಲ್ಲಿ 8ನೇ ತರಗತಿಯೇ ಒಟ್ಟು 5,205 ವಿದ್ಯಾರ್ಥಿನಿಯರಿದ್ದು, 7 ನೇ ತರಗತಿಯ ಲಂಗವನ್ನೇ ತೊಟ್ಟು ಹೈಸ್ಕೂಲ್‍ಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಇನ್ನು ಕೆಲ ಶಾಲೆಗಳಲ್ಲಿನ 8ನೇ ತರಗತಿ ವಿದ್ಯಾರ್ಥಿನಿಯರು ಕಲರ್ ಡ್ರಸ್‍ಗಳಲ್ಲಿ ಶಾಲೆಗೆ ಬರ್ತಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನ ಕೇಳಿದ್ರೇ ರಾಜ್ಯ ಮಟ್ಟದಲ್ಲಿ ಟೆಂಡರ್ ಸಮಸ್ಯೆ ಆಗಿದೆ ಅದಷ್ಟು ಬೇಗ ಕೊಡುತ್ತೇವ ಅಂತಿದ್ದಾರೆ.

    ವರ್ಷಕ್ಕೆ ಎರಡು ಜೊತೆ ಸಮವಸ್ತ್ರ ನೀಡಬೇಕಾದ ಸರ್ಕಾರ ಇದುವರೆಗೂ ಒಂದು ಜೊತೆ ಸಮವಸ್ತ್ರವನ್ನೂ ಸಹ ವಿತರಿಸಿಲ್ಲ, ಹೀಗಾಗಿ ಸರ್ಕಾರಿ ಶಾಲೆಗೆ ಬರೋ ಮಕ್ಕಳು ಸ್ವಂತ ಹಣದಿಂದ ಸಮವಸ್ತ್ರ ಖರಿದಿಸೋ ಶಕ್ತಿ ಕೂಡ ಇರಲ್ಲ. ಒಂದು ಕಡೆ ಸಂಸದರಿಗೆ ಬೇಡದ ಇರೋ ಐಫೋನ್ ಕೊಡೋ ಸರ್ಕಾರ, ಇಲ್ಲಿ ಪಾಪ ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡೋಕೆ ಮೀನಾಮೇಷ ಎಣಿಸ್ತಿರೋದು ಎಷ್ಟರ ಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

  • ದರ್ಶನ್ ಮ್ಯಾನೇಜರ್ ದೋಖಾ ಕಥೆ ಬಯಲಾಗಲು ನಟ ಅರ್ಜುನ್ ಸರ್ಜಾ ಕಾರಣ?

    ದರ್ಶನ್ ಮ್ಯಾನೇಜರ್ ದೋಖಾ ಕಥೆ ಬಯಲಾಗಲು ನಟ ಅರ್ಜುನ್ ಸರ್ಜಾ ಕಾರಣ?

    ಬೆಂಗಳೂರು: ದರ್ಶನ್ ಮ್ಯಾನೇಜರ್ ದೋಖಾ ಕಥೆ ಬಯಲಾಗಲು ಬಹುಭಾಷಾ ನಟ ಅರ್ಜುನ್ ಸರ್ಜಾ ಕಾರಣವೇ ಎನ್ನುವ ಅನುಮಾನ ಶುರುವಾಗಿದೆ.

    ಅರ್ಜುನ್ ಸರ್ಜಾ ನಿರ್ದೇಶಿಸಿ, ನಿರ್ಮಿಸಿದ ‘ಪ್ರೇಮಬರಹ’ ಸಿನಿಮಾವನ್ನು ತೂಗುದೀಪ್ ಪ್ರೊಡಕ್ಷನ್ ವಿತರಣೆ ಮಾಡಿತ್ತು. ಇದರ ಉಸ್ತುವಾರಿಯನ್ನ ಮಲ್ಲಿಕಾರ್ಜುನ್ ನೋಡಿಕೊಳ್ಳುತ್ತಿದ್ದ. ಮೊದಲ ವಾರದ ಸಿನಿಮಾದ ಶೇರ್ 10 ಲಕ್ಷ ಎಂದು ಮಲ್ಲಿ, ಅರ್ಜುನ್ ಸರ್ಜಾಗೆ ಲೆಕ್ಕ ಕೊಟ್ಟಿದ್ದಾನೆ.

    ಅನುಮಾನಗೊಂಡ ಅರ್ಜುನ್ ಸರ್ಜಾ ಕ್ರಾಸ್‍ಚೆಕ್ ಮಾಡಿದ್ದಾರೆ. ಎಲ್ಲ ಚಿತ್ರಮಂದಿರಕ್ಕೆ ಕರೆ ಮಾಡಿ ಎಷ್ಟು ಟಿಕೆಟ್ ಸೇಲ್ ಆಗಿದೆ, ಎಷ್ಟು ಶೋ ನಡೆದಿದೆ ಎಂಬುದನ್ನು ಮರು ಪರಿಶೀಲಿಸಿದ್ದಾರೆ. ಈ ವೇಳೆ ಮೊದಲ ವಾರ 10 ಲಕ್ಷ ಅಲ್ಲ 40 ಲಕ್ಷ ಅನ್ನೊದು ಕನ್ಫರ್ಮ್ ಆಗಿದೆ. ಮಲ್ಲಿಯನ್ನು ಕೂರಿಸಿ ತಮ್ಮ ಸ್ಟೈಲ್‍ನಲ್ಲಿ ವಿಚಾರಿಸಿದ ಸರ್ಜಾ ಅಸಲಿ ಕಥೆ ಬಾಯಿ ಬಿಡಿಸಿದ್ದಾರೆ. ತಪ್ಪು ಒಪ್ಪಿಕೊಂಡ ಮಲ್ಲಿ ಒಂದು ಕೋಟಿಯ ಚೆಕ್ ಕೊಟ್ಟು ದರ್ಶನ್ ಅವರಿಗೆ ಈ ವಿಚಾರವನ್ನು ತಿಳಿಸದಂತೆ ಕೈ ಮುಗಿದಿದ್ದಾನೆ ಎಂದು ತಿಳಿದುಬಂದಿದೆ. ಆ ಒಂದು ಕೋಟಿಯ ಚೆಕ್ ಬೌನ್ಸ್ ಆಗ್ತಿದಂತೆ ಮಲ್ಲಿ ಗಾಯಬ್ ಆಗ್ತಿದ್ದಾನೆ.

    ಪ್ರೇಮಬರಹ ಚಿತ್ರದ ವಿತರಣೆಯನ್ನು ಮಲ್ಲಿ ಮಾಡಿದ್ದನು. ಮಲ್ಲಿ ಸಿನಿಮಾ ವಿತರಣೆ ಮಾಡಿ ಈಗ ಆಗ ಎಂದು ಹೇಳಿ ಹಣವನ್ನು ತೆಗೆದುಕೊಂಡು ಹೋಗಿದ್ದಾನೆ. ಅದು ತುಂಬಾ ಬೇಸರದ ವಿಷಯ. ಇದ್ದಕ್ಕೆ ಹೇಗೆ ಪ್ರತಿಕ್ರಿಯೆ ನೀಡಬೇಕೆಂದು ಗೊತ್ತಿಲ್ಲ. ಮಲ್ಲಿ 10 ಲಕ್ಷಕ್ಕಿಂತ ಅಧಿಕ ಮೊತ್ತವನ್ನು ಮೋಸ ಮಾಡಿದ್ದಾನೆ. ಎಲ್ಲರಿಗೂ ಮೋಸ ಮಾಡಿ ಹೋಗಿದ್ದಾನೆ. ಹಣಕ್ಕಿಂತ ಹೆಚ್ಚು ಆತ ನಂಬಿಕೆ ದ್ರೋಹ ಮಾಡಿದ್ದಾನೆ. ನಾವು ಮೋಸ ಹೋಗಿದ್ದೇವೆಂದು ತಿಳಿದು ಮನಸಿಗೆ ಬೇಸರವಾಗುತ್ತದೆ ಎಂದು ನಟ ಅರ್ಜುನ್ ಸರ್ಜಾ ಹೇಳಿದ್ದಾರೆ.

    ಸದ್ಯ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಅಲ್ಲದೇ ಮಲ್ಲಿಕಾರ್ಜುನ್ ಕಳೆದ 15-20 ದಿನದಿಂದ ಕಾಣೆಯಾಗಿದ್ದಾನೆ.

    ಮಲ್ಲಿ ಈ ಹಿಂದೆ ನಮ್ಮ ಡಿಸ್ಟ್ರಿಬ್ಯೂಶನ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದನು. ಮಲ್ಲಿಕಾರ್ಜುನ್‍ನನ್ನು ನಂಬಿ ಸಾಕಷ್ಟು ಜನ ಕೋಟಿ ಕೋಟಿ ಹಣ ಹೇಗೆ ನೀಡಿದ್ದರು ಎಂಬುದು ಗೊತ್ತಾಗುತ್ತಿಲ್ಲ. ಮಲ್ಲಿ ಕಾಣೆಯಾದ ಮೇಲೆ ಎಲ್ಲರೂ ನಮಗೆ ಕರೆ ಮಾಡಿ ಹಣವನ್ನು ಕೇಳುತ್ತಿದ್ದಾರೆ. ಮಲ್ಲಿ ನಮ್ಮ ಸಂಸ್ಥೆಯಲ್ಲಿ 15 ವರ್ಷದಿಂದ ಕೆಲಸ ಮಾಡುತ್ತಿದ್ದು, ತುಂಬ ನಂಬಿಕಸ್ಥ ವ್ಯಕ್ತಿ ಎಂದು ಅವನನ್ನು ಜೊತೆಯಲ್ಲೇ ಇರಿಸಿಕೊಳ್ಳುತ್ತಿದ್ದೇವು ಎಂದು ದರ್ಶನ್ ಸಹೋದರ ದಿನಕರ್ ಪ್ರತಿಕ್ರಿಯಿಸಿದ್ದಾರೆ.