Tag: District Administration Building

  • ಮರಳು ಮೂಟೆ ಅಳವಡಿಸಿದ ನಂತರ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನ ಸಂಚಾರ: ಬಿ.ಸಿ.ನಾಗೇಶ್

    ಮರಳು ಮೂಟೆ ಅಳವಡಿಸಿದ ನಂತರ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನ ಸಂಚಾರ: ಬಿ.ಸಿ.ನಾಗೇಶ್

    ಮಡಿಕೇರಿ: ಮರಳು ಮೂಟೆ ಅಳವಡಿಸಿದ ನಂತರ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದರು.

    ಜಿಲ್ಲಾಡಳಿತ ಭವನ ಬಳಿಯ ಮಂಗಳೂರು ರಸ್ತೆ ತಡೆಗೋಡೆ ವೀಕ್ಷಿಸಿದ ಬಳಿಕ, ಮದೆನಾಡು ಸಮೀಪದ ಸೀಮೆಹುಲ್ಲು ಕಜೆ ಗುಡ್ಡದ ಬದಿಯೊಂದು ಕುಸಿದಿರುವ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಬಿಗಿ ಭದ್ರತೆ ನಡೆದ ಮೊದಲ ಅಗ್ನಿಪಥ್ ಏರ್‌ಫೋರ್ಸ್ ನೇಮಕಾತಿ ಪರೀಕ್ಷೆ

    ತಡೆಗೋಡೆಯನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಜೊತೆಗೆ ಜಿಲ್ಲಾಧಿಕಾರಿ ಅವರ ಕಚೇರಿಗೆ ತೆರಳಲು ರಸ್ತೆ ಮಾಡಿದ್ದರ ಪರಿಣಾಮವಾಗಿ ಇಂತಹ ದುಸ್ಥಿತಿ ಎದುರಿಸುವಂತಾಗಿದೆ ಎಂದು ಸ್ಥಳೀಯರೊಬ್ಬರು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಗಮನಹರಿಸಲಾಗುವುದು. ಸದ್ಯ ಮರಳು ಮೂಟೆ ಅಳವಡಿಸುವ ಕಾರ್ಯ ನಡೆಯುತ್ತಿದ್ದು, ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದರು.

    ಮಡಿಕೇರಿ-ಮಂಗಳೂರು ರಸ್ತೆ ಜಿಲ್ಲಾಡಳಿತ ಭವನ ಬಳಿ ತಡೆಗೋಡೆಯ ಸ್ಲ್ಯಾಬ್‍ಗಳು ಹೊರಚಾಚಿದ ಹಿನ್ನೆಲೆ, ತಾತ್ಕಾಲಿಕವಾಗಿ ಸಾರಿಗೆ ಸಂಚಾರ ಬಂದ್ ಮಾಡಲಾಗಿದೆ. ಮರಳು ಮೂಟೆ ಅಳವಡಿಸಿದ ನಂತರ ಲಘು ವಾಹನ(ದ್ವಿಚಕ್ರ, ಆಟೋ) ಸಂಚಾರಕ್ಕೆ ಅವಕಾಶ ಮಾಡಲಾಗುವುದು. ಆ ನಿಟ್ಟಿನಲ್ಲಿ ಶಾಸಕರು ಮತ್ತು ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ಕೊಟ್ಟರು. ಇದನ್ನೂ ಓದಿ:  ಭೂಕುಸಿತದ ಕಾರಣ ತಿಳಿಯಲು ವಿಜ್ಞಾನಿಗಳ ನೆರವು: ಬಿ.ಸಿ.ನಾಗೇಶ್ 

    ಲೋಕೋಪಯೋಗಿ ಇಲಾಖೆ ಇಇ ನಾಗರಾಜು ಅವರು ತಡೆಗೋಡೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ತಹಶಿಲ್ದಾರ್ ಮಹೇಶ್ ಇತರರು ಇದ್ದರು.

    Live Tv
    [brid partner=56869869 player=32851 video=960834 autoplay=true]

  • ಪಾರಿವಾಳಗಳಿಗೆ ಆಶ್ರಯತಾಣವಾದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ!

    ಪಾರಿವಾಳಗಳಿಗೆ ಆಶ್ರಯತಾಣವಾದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ!

    ಚಿಕ್ಕಬಳ್ಳಾಪುರ: ವಿಧಾನಸೌಧವನ್ನೇ ಮೀರಿಸುವ ಹಾಗೆ ಸುಂದರವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ ನಿರ್ಮಾಣವಾಗಿದೆ. ಭವನದ ಒಳಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದರೆ, ಭವನದ ಮೇಲೆ ಸಾವಿರಾರು ಸಂಖ್ಯೆಯಲ್ಲಿ ಪಾರಿವಾಳಗಳು ಬೀಡುಬಿಟ್ಟಿವೆ.

    ಸಿಬ್ಬಂದಿ ಬಂದು ಕಚೇರಿ ತೆರೆಯುತ್ತಿದ್ದಂತೆ ಹಾರಿಬಂದು ಭವನದ ಮೇಲೆ ಸದ್ದು ಮಾಡುತ್ತವೆ. ಭವನದ ಮೇಲೆ ಇರುವ ರಾಷ್ಟ್ರಲಾಂಛನದಿಂದ ಹಿಡಿದು ಗೋಪುರಗಳ ಮೇಲೆ ಹೂವು ಪೋಣಿಸಿ ಹಾರ ಹಾಕಿದಂತೆ ಸಾಲಾಗಿ ಕುಳಿತು ಮನ ಸೆಳೆಯುತ್ತಿವೆ ಎಂದು ಸ್ಥಳೀಯ ಚಂದ್ರಶೇಖರ್ ಹೇಳಿದ್ದಾರೆ.

    ಸಾರ್ವಜನಿಕರ ಆಕರ್ಷಣೆಗೆ ಕಾರಣವಾಗಿರುವ ಪಾರಿವಾಳಗಳನ್ನು ಯಾರೂ ಸಾಕಿಲ್ಲ. ಕಚೇರಿಗಳಲ್ಲಿ ಅವರು ಬಂದಿಲ್ಲ ಇವರು ಬಂದಿಲ್ಲ ಎಂದು ಬೇಸರದಿಂದ ಕಾಲ ಕಳೆಯುವ ಸಾರ್ವಜನಿಕರು ಪಾರಿವಾಳಗಳ ಚಿತ್ತಾರದ ಹಾರಾಟ-ಗೂಯ್ ಗುಟ್ಟುವ ಸದ್ದನ್ನ ನೋಡಿ ಬೇಸರ ಕಳೆಯುತ್ತಾರೆ. ಮತ್ತೊಂದೆಡೆ ಮುಗಿಲೆತ್ತರದ ಕಟ್ಟಡಗಳ ಮೇಲೆ ಯಾರ ಕಿರಿಕಿರಿಯೂ ಇಲ್ಲದೆ ಇರುವುದರಿಂದ ಸ್ವಚ್ಛಂದ ಸ್ವತಂತ್ರವಾಗಿ ಆಶ್ರಯಿಸುತ್ತವೆ ಎಂದು ಪಶುವೈಧ್ಯ ಡಾ.ಜ್ಞಾನೇಶ್ ತಿಳಿಸಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ, ಪಾರಿವಾಳಗಳು ನಗರ ಪ್ರದೇಶಗಳಿಂದ ಕಾಣೆಯಾಗುತ್ತಿವೆ. ಆದರೆ ನಗರಕ್ಕೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮೇಲೆ ಪಾರಿವಾಳಗಳ ಪರಿವಾರವೇ ಬಿಡಾರ ಹೂಡಿದ್ದು, ಭವನದ ಮೇಲೆ ಬಾನಾಡಿ ಪಾರಿವಾಳಗಳ ಕಲರವ ನೋಡುಗರ ಮನಸೂರೆಗೊಂಡಿದೆ.