Tag: District administrative

  • ಕೇರಳದಿಂದ ಕೊಡಗಿನ ರೆಸಾರ್ಟ್, ಹೋಂ ಸ್ಟೇಗಳಿಗೆ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ

    ಕೇರಳದಿಂದ ಕೊಡಗಿನ ರೆಸಾರ್ಟ್, ಹೋಂ ಸ್ಟೇಗಳಿಗೆ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ

    ಮಡಿಕೇರಿ: ಕೊಡಗಿನ ರೆಸಾರ್ಟ್ ಅಥವಾ ಹೋಂಸ್ಟೇಗಳಲ್ಲಿ ತಂಗಲು ಬರುವ ಪ್ರವಾಸಿಗರು ಕೋವಿಡ್ ನೆಗೆಟಿವ್ ವರದಿ ತರುವುದನ್ನು ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ.

    ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಸಾಕಷ್ಟು ನಿಯಮಗಳನ್ನು ಸಡಿಲಗೊಳಿಸಿದ್ದ ಕೊಡಗು ಜಿಲ್ಲಾಡಳಿತ, ಇದೀಗ ಕೇರಳ, ಮಹಾರಾಷ್ಟ್ರಗಳಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮತ್ತೆ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಕೋವಿಡ್ ಹರಡುವ ಭೀತಿಯಿಂದ ಬಂದ್ ಮಾಡಿದ್ದ ಹೊಟೇಲ್, ರೆಸಾರ್ಟ್ ಮತ್ತು ಹೋಂಸ್ಟೇಗಳನ್ನು ಇತ್ತೀಚೆಗಷ್ಟೇ ತೆರೆಯಲಾಗಿದೆ. ಆದರೆ ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮತ್ತೆ ರೆಸಾರ್ಟ್ ಹಾಗೂ ಹೋಂ ಸ್ಟೇಗಳಲ್ಲಿ ನಿಯಮಗಳನ್ನು ಬಿಗಿಗೊಳಿಸಲಾಗಿದೆ.

    ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಜಿಲ್ಲೆಗೆ ಬರುವ ಪ್ರವಾಸಿಗರು ಹೋಂಸ್ಟೇ ರೆಸಾರ್ಟ್‍ಗಳಲ್ಲಿ ತಂಗಬೇಕಾದರೆ 72 ಗಂಟೆಯೊಳಗೆ ಪಡೆದ ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹಾಜರು ಪಡಿಸಬೇಕು. ನೆಗೆಟಿವ್ ವರದಿ ಇಲ್ಲದೆಯೇ ಯಾವುದೇ ಕಾರಣಕ್ಕೂ ತಂಗಲು ಅವಕಾಶ ನೀಡದಂತೆ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಕಟ್ಟುನಿಟ್ಟಾಗಿ ರೆಸಾರ್ಟ್ ಹಾಗೂ ಹೋಂ ಸ್ಟೇಗಳಿಗೆ ಸೂಚಿಸಿವೆ. ಇದರಿಂದ ಮತ್ತೆ ಎಚ್ಚೆತ್ತುಕೊಂಡಿರುವ ಕೊಡಗಿನ ಕೆಲವು ಹೋಂಸ್ಟೇ, ರೆಸಾರ್ಟ್ ಮತ್ತು ಹೊಟೇಲ್ ಗಳಲ್ಲಿ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿವೆ.

    ರೆಸಾರ್ಟ್, ಹೊಟೇಲ್ ಗಳಿಗೆ ಬರುತ್ತಿದ್ದಂತೆ, ಗ್ರಾಹಕರಿಗೆ ಮೊದಲು ನೆಗೆಟಿವ್ ರಿಪೋರ್ಟ್ ಕೇಳುತ್ತಿವೆ. ರಿಪೋರ್ಟ್ ಇದ್ದರೆ, ಪುನಃ ಅವರಿಗೆ ಸ್ಥಳದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಬಾಡಿ ಟೆಂಪರೇಚರ್ ಕೂಡ ಚೆಕ್ ಮಾಡುತ್ತಿವೆ. ಈ ಎಲ್ಲ ಪರೀಕ್ಷೆಗಳ ಬಳಿಕವಷ್ಟೇ ರೆಸಾರ್ಟ್, ಹೋಂಸ್ಟೇ ಮತ್ತು ಹೊಟೇಲ್ ಗಳಲ್ಲಿ ತಂಗಲು ಎಂಟ್ರಿ ನೀಡುತ್ತಿವೆ. ಆದರೆ ಕಳೆದ 11 ತಿಂಗಳಿಂದ ಸಂಪೂರ್ಣ ಬಂದ್ ಆಗಿದ್ದ ರೆಸಾರ್ಟ್, ಹೋಂಸ್ಟೇಗಳು ಈಗಾಗಿರುವ ನಷ್ಟ ತುಂಬಿಕೊಳ್ಳಲು ಎಲ್ಲಿಂದ, ಯಾವ ಗ್ರಾಹಕರು ಬಂದರೂ ಉಳಿದುಕೊಳ್ಳಲು ಅವಕಾಶ ಕಲ್ಪಿಸುತ್ತಿವೆ ಎನ್ನೋದು ಕೂಡ ಗೊತ್ತಾಗಿದೆ.

    ಇದೆಲ್ಲವನ್ನು ಅರಿತ ಆರೋಗ್ಯ ಇಲಾಖೆ, ಸಪ್ರೈಸ್ ವಿಸಿಟ್ ಮಾಡಿ ಎಲ್ಲವನ್ನೂ ಪರೀಲಿಸಿದರೆ ಮಾತ್ರ ಜಿಲ್ಲಾಡಳಿತ ಜಾರಿ ಮಾಡಿರುವ ನಿಯಮವನ್ನು ಹೋಂಸ್ಟೇ, ರೆಸಾರ್ಟ್‍ಗಳು ಎಷ್ಟರ ಮಟ್ಟಿಗೆ ಪಾಲಿಸುತ್ತಿವೆ ಎನ್ನುವುದು ಗೊತ್ತಾಗುತ್ತದೆ.

  • ಬಸವಸಾಗರ ಜಲಾಶಯದಿಂದ 1.75 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಗ್ರಾಮಸ್ಥರಿಗೆ ಎಚ್ಚರಿಕೆ

    ಬಸವಸಾಗರ ಜಲಾಶಯದಿಂದ 1.75 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಗ್ರಾಮಸ್ಥರಿಗೆ ಎಚ್ಚರಿಕೆ

    ಯಾದಗಿರಿ: ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಬರೋಬ್ಬರಿ 1,75,916 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನಾಳೆ ಬೆಳಗ್ಗೆ ವೇಳೆಗೆ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ನದಿಪಾತ್ರದ ಗ್ರಾಮಗಳಿಗೆ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ ನೀಡಿದೆ.

    ನೀರಿನ ಪ್ರಮಾಣ 2 ಲಕ್ಷ ಕ್ಯೂಸೆಕ್ ತಲುಪಿದರೆ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಉಂಟಾಗಲಿದೆ. ಜಿಲ್ಲೆಯ ಶಳಗ್ಗಿ, ದೇವಾಪುರ, ಯಕ್ಷಚಿಂತಿ, ಗೌಡೂರು ಮತ್ತು ಕೊಳ್ಳೂರು ಗ್ರಾಮಗಳು ಮತ್ತೆ ಜಲಾವೃತವಾಗುವ ಭೀತಿ ನಿರ್ಮಾಣವಾಗಿದೆ. ಕೊಳ್ಳೂರು ಬ್ರಿಡ್ಜ್ ಮುಳುಗಡೆಯ ಮಟ್ಟ ತಲುಪಿದ್ದು, ದೇವದುರ್ಗ ಮತ್ತು ಯಾದಗಿರಿಗೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆಯಿದೆ. ಕಳೆದ ಬಾರಿಯ ಪ್ರವಾಹಕ್ಕೆ ನೀಲಕಂಠರಾಯನ ಗಡ್ಡಿ ಸೇತುವೆ ಕೊಚ್ಚಿಹೋಗಿದ್ದು, ಗ್ರಾಮಕ್ಕೆ ವಿದ್ಯುತ್ ಮತ್ತು ಬಾಹ್ಯ ಸಂಪರ್ಕ ಕಡಿತಗೊಂಡು ನಡುಗಡ್ಡೆಯಾಗಿದೆ.

    ನದಿಪಾತ್ರದ ಜಮೀನುಗಳಲ್ಲಿ ನದಿ ನೀರು ಹೊಕ್ಕು ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿದೆ. ಈಗಾಗಲೇ ಅಧಿಕಾರಿಗಳು ನದಿಪಾತ್ರದ ಗ್ರಾಮಗಳಲ್ಲಿ ಬಿಡು ಬಿಟ್ಟಿದ್ದು, ಜನರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗಿದ್ದಾರೆ. ಆದಷ್ಟು ಬೇಗ ಮತ್ತೆ ನಿರಾಶ್ರಿತರ ಕೇಂದ್ರಗಳನ್ನು ತೆರೆಯುವ ಚಿಂತನೆಯನ್ನು ಜಿಲ್ಲಾಡಳಿತ ನಡೆಸಿದೆ.

    ನಾರಾಯಣಪುರ ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಯ ಮಾಹಿತಿ ಪ್ರಕಾರ 17 ಗೇಟ್‍ಗಳಿಂದ 1,75,916 ಕ್ಯೂಸೆಕ್ ಹೊರಕ್ಕೆ ಬಿಡಲಾಗುತ್ತಿದೆ. ನಾರಾಯಣಪುರ ಜಲಾಶಯ ಒಳಹರಿವು 1,40,000 ಕ್ಯೂಸೆಕ್ ಇದ್ದು, ನೀರಿನ ಮಟ್ಟ 491.77 ಮೀ. ಇದೆ. ಜಲಾಶಯದ ಗರಿಷ್ಟ ಮಟ್ಟ 492.25 ಮೀ. ಆಗಿದೆ. ಗರಿಷ್ಟ ಸಂಗ್ರಹ ಸಾಮಥ್ರ್ಯ 33.315 ಟಿಎಂಸಿ ಆಗಿದ್ದು ಪ್ರಸ್ತುತ 31.28 ಟಿಎಂಸಿ ನೀರು ಸಂಗ್ರಹವಾಗಿದೆ.