Tag: district collector

  • ಬಂದೋಬಸ್ತ್ ನೋಡಲು ತೆರಳ್ತಿದ್ದ ಜಿಲ್ಲಾಧಿಕಾರಿಯ ಕಾರ್ ಅಪಘಾತ!

    ಬಂದೋಬಸ್ತ್ ನೋಡಲು ತೆರಳ್ತಿದ್ದ ಜಿಲ್ಲಾಧಿಕಾರಿಯ ಕಾರ್ ಅಪಘಾತ!

    ಚಿಕ್ಕಮಗಳೂರು: ಇಂದು ನಡೆಯಲಿರುವ ದತ್ತಮಾಲಾ ಅಭಿಯಾನದ ಬಂದೋಬಸ್ತ್ ನೋಡಲು ತೆರಳುತ್ತಿದ್ದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಕಾರು ಅಪಘಾತಕ್ಕೀಡಾಗಿದೆ.

    ಡಿಸಿ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಡಿಸಿ ಕಾರಿನ ಬಂಪರ್ ಹಾಗೂ ಇಂಡಿಕೇಟರ್ ಲೈಟ್ ಪುಡಿಪುಡಿಯಾಗಿದೆ. ಶುಕ್ರವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಅವರು ಚಿಕ್ಕಮಗಳೂರಿನಿಂದ ಮುಳ್ಳಯ್ಯನಗಿರಿ ಮಾರ್ಗದಲ್ಲಿ ದತ್ತಪೀಠಕ್ಕೆ ಹೋಗುತ್ತಿದ್ದರು.

    ಈ ವೇಳೆ ಚನ್ನಗೊಂಡನಹಳ್ಳಿ ಕ್ರಾಸ್ ಬಳಿ ಹಾಸನ ಮೂಲದ ಫೋರ್ಡ್ ಐಕಾನ್ ಕಾರು ಹಾಗೂ ಡಿಸಿ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್ ಜಿಲ್ಲಾಧಿಕಾರಿ ಅಪಾಯದಿಂದ ಪಾರಾಗಿದ್ದಾರೆ. ಹಾಸನದಿಂದ ನಾಲ್ವರು ಯುವಕರು ಚಿಕ್ಕಮಗಳೂರಿಗೆಂದು ಪ್ರವಾಸಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

    ಈ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 5 ವರ್ಷದ ಬಾಲಕನ ಆಟಕ್ಕೆ 60 ಮನೆಗಳು ಹೊತ್ತಿ ಉರಿಯಿತು!

    5 ವರ್ಷದ ಬಾಲಕನ ಆಟಕ್ಕೆ 60 ಮನೆಗಳು ಹೊತ್ತಿ ಉರಿಯಿತು!

    (ಸಾಂದರ್ಭಿಕ ಚಿತ್ರ)

    ಆಗ್ರಾ: 5 ವರ್ಷದ ಬಾಲಕನ ಆಟಕ್ಕೆ 60 ಮನೆಗಳು ಹೊತ್ತಿ ಉರಿದಿರುವ ಘಟನೆ ಉತ್ತರ ಪ್ರದೇಶದ ಆಗ್ರ ಸಮೀಪದ ಝಾಂಡಿ ಕಿ ಮಾಡಿಯಾ ಹಳ್ಳಿಯಲ್ಲಿ ನಡೆದಿದೆ.

    ಬೆಂಕಿ ಕಡ್ಡಿಗಳ ಜೊತೆ ಆಟವಾಡುತ್ತಿದ್ದ ಬಾಲಕ ಕಡ್ಡಿಯನ್ನು ಹೊತ್ತಿಸಿ ತಮ್ಮ ಗುಡಿಸಿಲಿನ ಮೇಲೆ ಅಚಾನಕ್ ಆಗಿ ಹಾಕಿದ್ದಾನೆ. ಗುಡಿಸಿಲಿಗೆ ಬೆಂಕಿ ಹೊತ್ತಿಕೊಂಡು ಸುತ್ತ ಇರುವ ಗುಡಿಸಿಲುಗಳಿಗೂ ಪಸರಿಸಿದೆ. ಇದರಿಂದಾಗಿ ಎಲ್ಲಾ 60 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ.

    ಅಮ್ರಿತ್ ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಗಂಗಾ ನದಿಯ ಬಳಿ ಹಳ್ಳಿ ಇದೆ. ಹಳ್ಳಿಗೆ ಸಂಪರ್ಕ ಸಾಧಿಸಲು ಕಷ್ಟವಿರುವುದರಿಂದ ಸ್ಥಳಕ್ಕೆ ಒಂದು ಅಗ್ನಿಶಾಮಕ ವಾಹನ ತಲುಪಲು ಸಾಧ್ಯವಾಗಿದೆ. ಕೇವಲ ಒಂದು ಅಗ್ನಿಶಾಮಕ ವಾಹನ ಬೆಂಕಿಯನ್ನು ಆರಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದರಿಂದ ಸಂಪೂರ್ಣ 60 ಗುಡಿಸಲುಗಳು ಸುಟ್ಟು ಹೋಗಿವೆ ಎನ್ನಲಾಗಿದೆ. ಘಟನೆಯಿಂದ ಯಾವುದೇ ಜೀವ ಹಾನಿಯಾಗಿಲ್ಲ. ನಂದಿಸಲು ಅಗ್ನಿಶಾಮಕ ದಳದವರು ಸುಮಾರು 2 ಗಂಟೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

    ಜಿಲ್ಲಾಧಿಕಾರಿ ಮೋನಿಕಾ ರಾಣಿ, ತಹಶೀಲ್ದಾರ್ ರಾಜೀವ್ ನಿಗಮ್, ಎಸ್ ಹೆಚ್ ಒ ರಾಮ್ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಹಾರದ ಬಗ್ಗೆ ಭರವಸೆ ನೀಡಿದ್ದಾರೆ.

    ಬೆಂಕಿ ಸಂಪೂರ್ಣ ಹಳ್ಳಿಯನ್ನು ಆಹುತಿ ತೆಗೆದುಕೊಂಡಿದೆ. ಮನೆಗಳನ್ನು ಹುಲ್ಲು ಮತ್ತು ಪ್ಲಾಸ್ಟಿಕ್ ಗಳಿಂದ ಕಟ್ಟಲಾಗಿತ್ತು. ಹತ್ತಿರದಲ್ಲೇ ಇರುವ ಸರ್ಕಾರಿ ಶಾಲೆಗೆ ಎಲ್ಲರನ್ನೂ ಸ್ಥಳಾಂತರಿಸಲಾಗಿದ್ದು ನೀರು ಮತ್ತು ಆಹಾರವನ್ನು ಒದಗಿಸಲಾಗಿದೆ ಎಂದು ರಾಮ್ ಪ್ರಕಾಶ್ ಹೇಳಿದ್ದಾರೆ.

    ಬಾಲಕನ ಅಚಾತುರ್ಯದಿಂದ ಬೆಂಕಿ ಹತ್ತಿಕೊಂಡಿದೆ. ಘಟನೆ ನಡೆದಾಗ ಮನೆಯಲ್ಲಿ ತಂದೆ ತಾಯಿ ಇಬ್ಬರೂ ಇರಲಿಲ್ಲ. ಹಾಗಾಗಿ ಬಾಲಕನ ಇಲ್ಲ ಪೋಷಕರ ವಿರುದ್ಧ ದೂರ ದಾಖಲಿಸಿಕೊಂಡಿಲ್ಲ ಎಂದು ತಿಳಿಸಿದರು.

  • ಮಂಗಳೂರಲ್ಲಿ ನಿಪಾ ವೈರಸ್ ಜ್ವರ ಪತ್ತೆ ಆಗಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

    ಮಂಗಳೂರಲ್ಲಿ ನಿಪಾ ವೈರಸ್ ಜ್ವರ ಪತ್ತೆ ಆಗಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

    ಮಂಗಳೂರು: ನಿಪಾ ವೈರಸ್ ಶಂಕಿತರಿಬ್ಬರ ತಪಾಸಣೆ ನಡೆಸಲಾಗಿದ್ದು ನಿಪಾ ಜ್ವರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದ್ದಾರೆ.

    ಮಂಗಳೂರಿನ ಇಬ್ಬರಲ್ಲಿ ಶಂಕಿತ ನಿಪಾ ಪ್ರಕರಣ ಪತ್ತೆಯಾಗಿತ್ತು. ಮಣಿಪಾಲದಲ್ಲಿ ಸೋಂಕು ಶಂಕಿತರಿಬ್ಬರ ತಪಾಸಣೆ ನಡೆಸಲಾಗಿದೆ. ಯಾವುದೇ ನಿಪಾ ಜ್ವರದ ಲಕ್ಷಣಗಳು ಕಂಡುಬಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಭಯ ಪಡಬೇಕಾಗಿಲ್ಲ ಎಂದು ತಿಳಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಗೆ ನಿಪಾ ಜ್ವರ ಬರುವ ಸಾಧ್ಯತೆ ಕಡಿಮೆ. ಪ್ರಾಣಿಗಳು, ಪಕ್ಷಿಗಳು ಕಚ್ಚಿರುವ ಹಣ್ಣುಗಳನ್ನ ತಿನ್ನಬೇಡಿ. ನಿಪಾ ಸೋಂಕು ಗಾಳಿಯಲ್ಲಿ ಹರಡುವುದಿಲ್ಲ. ಸೋಂಕಿತ ವ್ಯಕ್ತಿಗಳ ಸಂಪರ್ಕದಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಿದೆ ಎಚ್ಚರವಿರಲಿ. ನೆರವಿಗಾಗಿ 104 ಸಂಖ್ಯೆಗೆ ಕರೆ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಕಟಿಸಿದೆ. ಇದನ್ನೂ ಓದಿ:ಬಾವಲಿ ಜ್ವರಕ್ಕೆ ಕರ್ನಾಟಕದಲ್ಲೂ ಹೈಅಲರ್ಟ್ – ಈ ಮಾಹಿತಿ ನಿಮಗೆ ಗೊತ್ತಿರಲಿ..!

    ಕರ್ನಾಟಕದ ಪಕ್ಕದ ರಾಜ್ಯ ಕೇರಳದಲ್ಲಿ ಬಾವಲಿಗಳ ಮೂಲಕ ನಿಪಾ ವೈರಸ್ ಜ್ವರಕ್ಕೆ 16 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ರಾಜ್ಯದಲ್ಲಿ ಫುಲ್ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲೂ ನಿಪಾ ಭಯ ಕಾಡತೊಡಗಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗೆ ಸುತ್ತೋಲೆ ರವಾನೆಯಾಗಿದೆ. ಜ್ವರ, ವಾಂತಿ, ಸುಸ್ತು ಇಂತಹ ಲಕ್ಷಣ ಕಾಣಿಸಿಕೊಂಡ ರೋಗಿಗಳ ರಕ್ತ ಪರೀಕ್ಷೆಯ ಬಗ್ಗೆ ವಿಶೇಷ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಆದೇಶ ಹೊರಡಿಸಿದೆ.

  • ತಮಿಳುನಾಡು ಸಿಎಂ ವಿರುದ್ಧ ಟೀಕೆ- ವ್ಯಂಗ್ಯ ಚಿತ್ರಕಾರ ಅರೆಸ್ಟ್

    ತಮಿಳುನಾಡು ಸಿಎಂ ವಿರುದ್ಧ ಟೀಕೆ- ವ್ಯಂಗ್ಯ ಚಿತ್ರಕಾರ ಅರೆಸ್ಟ್

    ಚೆನ್ನೈ: ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಹಾಗೂ ಜಿಲ್ಲಾಡಳಿತವನ್ನು ಟೀಕಿಸಿದ ಕಾರಣ ವ್ಯಂಗ್ಯ ಚಿತ್ರಕಾರರನ್ನು ಬಂಧನ ಮಾಡಲಾಗಿದೆ.

    ಸಂತ್ರಸ್ತ ಕುಟುಂಬಕ್ಕೆ ಸಹಾಯ ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಸಿಎಂ ಹಾಗೂ ಜಿಲ್ಲಾಧಿಕಾರಿಯನ್ನು ಟೀಕಿಸಿ ಫೇಸ್‍ಬುಕ್‍ನಲ್ಲಿ ವ್ಯಂಗ್ಯಚಿತ್ರವೊಂದನ್ನು ಪೋಸ್ಟ್ ಮಾಡಿದ್ದ ಬಾಲಾ ಜಿ ಎಂಬವರನ್ನು ಅರೆಸ್ಟ್ ಮಡಲಾಗಿದೆ. ಇವರ ವ್ಯಂಗ್ಯಚಿತ್ರಕ್ಕೆ ಫೇಸ್‍ಬುಕ್‍ನಲ್ಲಿ ಈವರೆಗೆ ಸುಮಾರು 4 ರಿಯಾಕ್ಷನ್ಸ್ ಸಿಕ್ಕಿದ್ದು, 13 ಸಾವಿರಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ.

    ಬೆಂಕಿಯಲ್ಲಿ ಉರಿದು ಮಗು ಸಾಯುತ್ತಿದ್ದರೆ ಸಿಎಂ ಇ ಪಳನಿಸ್ವಾಮಿ, ತಿರುನಲ್ವೇಲಿ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿ ಸುಮ್ಮನೆ ನಿಂತಿರುವಂತೆ ಬಾಲಾ ಅವರ ವ್ಯಂಗ್ಯ ಚಿತ್ರದಲ್ಲಿ ತೋರಿಸಲಾಗಿದೆ.

    ಇತ್ತೀಚೆಗಷ್ಟೇ ಇಲ್ಲಿನ ದಿನಗೂಲಿ ಕಾರ್ಮಿಕರ ಕುಟುಂಬದ ನಾಲ್ವರು ತಿರುನಲ್ವೇಲಿ ಜಿಲ್ಲಾಧಿಕಾರಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡಿದ್ದರು.

    https://www.facebook.com/photo.php?fbid=10210598043813635&set=a.1067477413504.2010471.1423116401&type=3&theater

    ಸಾಲದ ಹಣ ಹಿಂದಿರುಗಿಸದ ನಂತರವೂ ಕೂಡ ಐಸಾಕಿಮುತ್ತು ಹಾಗೂ ಅವರ ಪತ್ನಿ ಸುಬ್ಬಲಕ್ಷ್ಮೀ ಮೇಲೆ ಹಣ ನೀಡಿದವರು ದೌರ್ಜನ್ಯವೆಸಗುತ್ತಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಹಾಯ ಕೋರಿ ಜಿಲ್ಲಾಧಿಕಾರಿಗಳ ಕಚೇರಿಗೆ 6 ಬಾರಿ ಅಲೆದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ದಂಪತಿ ಮತ್ತು ಅವರ 2 ಹಾಗೂ 4 ವರ್ಷದ ಇಬ್ಬರು ಪುತ್ರಿಯರು ಆತ್ಮಹತ್ಯೆಗೆ ಶರಣಾಗಿದ್ದರು ಎಂದು ವರದಿಯಾಗಿದೆ.