Tag: District Panchayat

  • ‘ಕ್ವಾರಂಟೈನ್ ಮಾಡೋದು ಅವಮಾನ ಅಲ್ಲ’- ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯಗೆ ತಿಳಿ ಹೇಳಿದ ಸಂಸದೆ ಸುಮಲತಾ

    ‘ಕ್ವಾರಂಟೈನ್ ಮಾಡೋದು ಅವಮಾನ ಅಲ್ಲ’- ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯಗೆ ತಿಳಿ ಹೇಳಿದ ಸಂಸದೆ ಸುಮಲತಾ

    ಮಂಡ್ಯ: ಕ್ವಾರಂಟೈನ್ ಮಾಡೋದು ಅವಮಾನ ಅಲ್ಲ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರಿಗೆ ಸಂಸದೆ ಸುಮಲತಾ ತಿಳಿ ಹೇಳಿದ್ದಾರೆ.

    ಆಶಾ ಕಾರ್ಯಕರ್ತೆಗೆ ಕ್ವಾರಂಟೈನ್ ಮಾಡಿದ್ದಾರೆ. ಮೊದಲೇ ಮನನೊಂದು ಆತ್ಮಹತ್ಯೆಗೆ ಆಶಾ ಕಾರ್ಯಕರ್ತೆ ಯತ್ನಿಸಿದ್ದರು. ಈಗ ಕ್ವಾರಂಟೈನ್ ಮಾಡಿ ಇನ್ನೊಂದು ಅವಮಾನ ಮಾಡಿದ್ದಾರೆ. ಕ್ವಾರಂಟೈನ್ ಮಾಡುವ ಅಗತ್ಯ ಏನಿತ್ತು? ನನಗೆ ಅವರು ಫೋನ್ ಮಾಡಿ ನೋವು ತೋಡಿಕೊಂಡಿದ್ದಾರೆ ಎಂದು ಶಾಸಕ ರವೀಂದ್ರ ಶೀಕಂಠಯ್ಯ ಅವರು ಮಂಡ್ಯದ ಜಿಲ್ಲಾ ಪಂಚಾಯತಿಯ ಸಭೆಯಲ್ಲಿ ಪ್ರಸ್ತಾಪಿಸಿದರು.

    ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅವರು, ಕ್ವಾರಂಟೈನ್ ಮಾಡೋದು ಅವಮಾನ ಅಂತ ತಿಳಿದುಕೊಳ್ಳೋದು ತಪ್ಪು. ಅರಿವು ಮೂಡಿಸಬೇಕಾದ ನಮ್ಮಂತ ಜನಪ್ರತಿನಿಧಿಗಳೇ ಅವಮಾನ ಎಂದು ಹೇಳಿದು ಸರಿಯಲ್ಲ. ಅವಮಾನ ಅಂತ ಹೇಳಿದರೆ ಬಹಳಷ್ಟು ಜನ ಹೆದರುತ್ತಾರೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಸಚಿವರಾದ ಡಾ.ಸುಧಾಕರ್, ನಾರಾಯಣಗೌಡ ಅವರು ಹಾಜರಿದ್ದರು.

    ಏನಿದು ಘಟನೆ: ಇತ್ತೀಚೆಗೆ ಮಂಡ್ಯ ಆಶಾ ಕಾರ್ಯಕರ್ತೆ ಮೇಲಾಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿ ಸದಸ್ಯನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದರು. ಮಂಡ್ಯ ತಾಲೂಕಿನ ಕಾಗೇಹಳ್ಳ ದೊಡ್ಡಿ ಗ್ರಾಮದ ಅಂಗನವಾಡಿಯ ಆಶಾ ಕಾರ್ಯಕರ್ತೆ ಭಾಗ್ಯಮ್ಮ (45) ಆತ್ಮಹತ್ಯೆಗೆ ಯತ್ನಿಸಿದ್ದರು. ಮತದಾರರ ಪಟ್ಟಿಗೆ ಹೆಸರು ಸೇರಿಸುವ ಮತ್ತು ಪರಿಷ್ಕರಿಸುವ ಕೆಲಸಕ್ಕೆ ಭಾಗ್ಯಮ್ಮ ಅವರನ್ನು ನಿಯೋಜನೆ ಮಾಡಲಾಗಿತ್ತು. ಈ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರಿಸುವಂತೆ ಒತ್ತಡ ಹೇರಿದ್ದರು. ಇದಕ್ಕೆ ಭಾಗ್ಯ ಅವರು ನಿರಾಕರಿಸಿದರು ಎನ್ನಲಾಗಿತ್ತು. ಬಳಿಕ ರಾಜಕೀಯ ಪ್ರಭಾವ ಬಳಸಿ ಭಾಗ್ಯಮ್ಮ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ವಿಚಾರದಲ್ಲಿ ಮೇಲಾಧಿಕಾರಿಗಳು ಶಾಮೀಲಾಗಿ ಕಿರುಕುಳ ನೀಡುತ್ತಿದ್ದರು ಎಂದು ಭಾಗ್ಯಮ್ಮ ಹೇಳಿಕೊಂಡಿದ್ದರು ಎನ್ನಲಾಗಿತ್ತು. ಆತ್ಮಹತ್ಯೆ ಪ್ರತ್ನಿಸಿದ್ದ ಭಾಗ್ಯಮ್ಮ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದರು. ಆದ್ದರಿಂದ ಅವರಿಗೆ ಮನೆಯಲ್ಲೇ ಉಳಿದುಕೊಳ್ಳುವಂತೆ ಕ್ವಾರಂಟೈನ್ ಮಾಡಲಾಗಿದೆ ಎಂದು ಶಾಸಕರು ಪ್ರಶ್ನಿಸಿದ್ದರು.

  • ಅರಿಶಿಣಕುಂಟೆ ಗ್ರಾಮ ಪಂಚಾಯ್ತಿ ಪಿಡಿಓ ಗಂಗರಾಜು ”ಸ್ಟಾರ್ ಆಫ್ ದಿ ವೀಕ್”

    ಅರಿಶಿಣಕುಂಟೆ ಗ್ರಾಮ ಪಂಚಾಯ್ತಿ ಪಿಡಿಓ ಗಂಗರಾಜು ”ಸ್ಟಾರ್ ಆಫ್ ದಿ ವೀಕ್”

    ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆದಿತ್ತು. ಈ ವೇಳೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ ನಾಗರಾಜು ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪಿಡಿಓಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪಿಡಿಒಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ “ಸ್ಟಾರ್ ಆಫ್ ದಿ ವೀಕ್” ಎಂಬ ಬಿರುದನ್ನು ನೀಡಿ ಗೌರವಿಸಲಾಗುವುದೆಂದು ಘೋಷಿಸಿದರು.

    ಇಂದು 2020ರ ಜನವರಿ ಮೊದಲ ವಾರದ “ಸ್ಟಾರ್ ಆಫ್ ದಿ ವೀಕ್” ಆಗಿ ನೆಲಮಂಗಲ ತಾಲೂಕಿನ ಅರಿಶಿಣಕುಂಟೆ ಗ್ರಾಮ ಪಂಚಾಯ್ತಿ ಪಿಡಿಒ ಗಂಗರಾಜು ಆಯ್ಕೆಯಾಗಿದ್ದು, ಸಭೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಿದರು.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪಿಡಿಒ ಗಂಗರಾಜು ಸಂತಸ ವ್ಯಕ್ತಪಡಿಸಿದರು. ಅಲ್ಲದೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹಾಗೂ ಪಂಚಾಯ್ತಿ ಗೌರವಾನ್ವಿತ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರ ಹಾಗೂ ಸಿಬ್ಬಂದಿ ಸಹಕಾರದಿಂದ ಉತ್ತಮ ಗುಣಮಟ್ಟದ ಕೆಲಸವಾಗಿದೆ. ಸಾರ್ವಜನಿಕರ ಪ್ರಶಂಸೆ ಕೂಡ ಈ ಪ್ರಶಸ್ತಿ ಪಡೆಯಲು ಸಹಕಾರವಾಗಿದೆ. ಮುಂದಿನ ದಿನದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಲು ಈ ಪ್ರಶಸ್ತಿ ಉತ್ತೇಜನವಾಗಿದೆ. ಹೀಗಾಗಿ ನನ್ನ ಎಲ್ಲಾ ಅಧಿಕಾರಿ ವರ್ಗದವರಿಗೆ ನಾನು ಆಭಾರಿಯಾಗಿರುವೆ ಎಂದು ಸಂತಸ ಹಂಚಿಕೊಂಡರು.

    ಈ ಪ್ರಶಸ್ತಿ ವಿತರಣೆ ವೇಳೆ ಜಿ.ಪಂ. ಉಪ ಕಾರ್ಯದರ್ಶಿ ಕರಿಯಪ್ಪ, ಮುಖ ಯೋಜನಾಧಿಕಾರಿ ವಿನುತಾರಾಣಿ, ಯೋಜನಾ ನಿರ್ದೇಶಕ ಶಿವರುದ್ರಪ್ಪ ಹಾಗೂ ತಾಲೂಕು ಕಾರ್ಯ ನಿರ್ವಾಹಣಾಧಿಕಾರಿಗಳು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

  • ಒಂದೇ ರಸ್ತೆಗೆ ಮೂರು ಬಾರಿ ಬಿಲ್ – ಅಧಿಕಾರಿಗಳಿಂದ ಹಣ ಗುಳುಂ

    ಒಂದೇ ರಸ್ತೆಗೆ ಮೂರು ಬಾರಿ ಬಿಲ್ – ಅಧಿಕಾರಿಗಳಿಂದ ಹಣ ಗುಳುಂ

    ಚಿಕ್ಕಬಳ್ಳಾಪುರ: ಒಂದಲ್ಲ ಎರಡಲ್ಲ ಅಂತ ಅದೇ ರಸ್ತೆಗೆ ಮೂರು ಬಾರಿ ಬಿಲ್ ಮಾಡಿರೋ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರ ದುಡ್ಡನ್ನು ತಿಂದು ತೇಗಿದ್ದಾರೆ. ಆದರೆ ಜನ ಮಾತ್ರ ಅದೇ ಕಲ್ಲು ಮಣ್ಣಿನ ಹಾದಿಯಲ್ಲಿ ಓಡಾಡುವಂತಾಗಿದೆ.

    ಹೌದು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪುಲಿಗಲ್ ಗ್ರಾಮ ಪಂಚಾಯತಿಯಿಂದ ರಾಮನಪಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ 10-15 ವರ್ಷಗಳಿಂದ ಕಲ್ಲು ಮಣ್ಣನಿಂದ ನಿರ್ಮಾಣವಾದ ಈ ರಸ್ತೆ ಇಂದಿಗೂ ಅದೇ ಸ್ಥಿತಿಯಲ್ಲೇ ಇದೆ. ಆದರೆ ಈ ರಸ್ತೆ ಅಭಿವೃದ್ಧಿ ಹೆಸರಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ತಿಂದು ತೇಗಿ ಅಭಿವೃದ್ಧಿಯಾಗಿದ್ದಾರೆ.

    ಅಂದಹಾಗೆ ಪುಲಿಗಲ್ ಕ್ರಾಸ್ ನಿಂದ ರಾಗಿಮಾಕಲಪಲ್ಲಿ ರಸ್ತೆ ಅಭಿವೃದ್ಧಿ ಎಂದು 2 ಲಕ್ಷ 38 ಸಾವಿರ ರೂ. ಬಿಲ್ ಮಾಡಲಾಗಿದೆ. ರಾಮನಪಡಿ ರಸ್ತೆಯಿಂದ ಊದವಾರಪಲ್ಲಿ ಕ್ರಾಸ್‍ವರೆಗೂ ರಸ್ತೆ ಅಭಿವೃದ್ಧಿ ಎಂದು 4 ಲಕ್ಷ 60 ಸಾವಿರ ರೂ. ಬಿಲ್ ಆಗಿದ್ದರೆ, ರಾಮನಪಡಿ ಹತ್ತಿರ ಶಿವಪುರಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಎಂದು 4 ಲಕ್ಷದ 90 ಸಾವಿರ ರೂಪಾಯಿ ಬಿಲ್ ಮಾಡಲಾಗಿದೆ. ಆಸಲಿಗೆ ಈ ಮೂರೂ ರಸ್ತೆಗಳು ಸಹ ಒಂದೇ ರಸ್ತೆಯಾಗಿದ್ದು ಬೇರೆ ಬೇರೆ ಗ್ರಾಮಗಳ ಹೆಸರು ನಮೂದಿಸಿ ಬಿಲ್ ಮಾಡಲಾಗಿದೆ.

    ಪುಲಿಗಲ್ ಕ್ರಾಸ್ ನಿಂದ ರಾಮನಪಡಿ ಗ್ರಾಮದವರೆಗೂ ಸರಿಸುಮಾರು 3 ಕಿಲೋಮೀಟರ್ ದೂರದ ಈ ಮಣ್ಣಿನ ರಸ್ತೆ ಅಭಿವೃದ್ಧಿ ಮಾಡಿದ್ದೀವಿ ಎಂದು ಮೂರು ಬಾರಿ ಲಕ್ಷ ಲಕ್ಷ ಬಿಲ್ ಮಾಡಲಾಗಿದೆ. ಆದರೆ ಪ್ರತ್ಯಕ್ಷವಾಗಿ ನೋಡಿದರೆ ರಸ್ತೆಯ ಅಭಿವೃದ್ಧಿ ಅನ್ನೋದು ಇಲ್ಲ. ಇನ್ನೂ ಇದೇ ರಸ್ತೆ ಕಥೆಯಾದರೆ ವೆಂಕಟರೆಡ್ಡಿಪಲ್ಲಿ ಗ್ರಾಮದ ಸೋಮ್ಲನಾಯಕ್ ಮನೆಯಿಂದ ನಾರಾಯಣ ನಾಯಕ್ ಮನೆಯವರೆಗೂ ಚರಂಡಿ ಮಾಡಿದ್ದೀವಿ ಎಂದು 4 ಲಕ್ಷ 91 ಸಾವಿರ ರೂಪಾಯಿ ಬಿಲ್ ಮಾಡಿಕೊಳ್ಳಲಾಗಿದೆ. ಆದರೆ ಪ್ರತ್ಯಕ್ಷವಾಗಿ ಪರಿಶೀಲನೆ ನಡೆಸಿದರೆ ಅಲ್ಲಿ ಚರಂಡಿಯೇ ಇಲ್ಲ.

    ಒಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್‍ನ ಸಿಎಂಜಿಎಸ್‍ವೈ ಯೋಜನೆಯಲ್ಲಿ ಭಾರೀ ಗೋಲ್ ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದ್ದು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು, ಗುತ್ತಿಗೆದಾರರ ಜೊತೆ ಶಾಮೀಲಾಗಿ ಜನರ ಲಕ್ಷ ಲಕ್ಷ ದುಡ್ಡನ್ನು ತಿಂದು ತೇಗಿದ್ದಾರೆ.

  • ಜನರ ಗಂಭೀರ ಸಮಸ್ಯೆಗಳ ಚರ್ಚೆ ವೇಳೆ ಮೊಬೈಲ್‍ನಲ್ಲೇ ಮುಳುಗಿದ ಅಧಿಕಾರಿಗಳು

    ಜನರ ಗಂಭೀರ ಸಮಸ್ಯೆಗಳ ಚರ್ಚೆ ವೇಳೆ ಮೊಬೈಲ್‍ನಲ್ಲೇ ಮುಳುಗಿದ ಅಧಿಕಾರಿಗಳು

    ಹಾಸನ: ಜಿಲ್ಲೆಯ ಜನರ ಪ್ರಮುಖ ಸಮಸ್ಯೆಗಳ ಬಗ್ಗೆ ಗಂಭೀರವಾದ ಚರ್ಚೆ ನಡೆಯುವ ವೇಳೆ ಅಧಿಕಾರಿಗಳು ಮೊಬೈಲ್ ನಲ್ಲೇ ಮುಳುಗಿ ಕಾಲ ಕಳೆದ ಘಟನೆ ಜಿಲ್ಲಾ ಪಂಚಾಯಿತಿ ಮಾಸಿಕ ಪ್ರಗತಿ ಸಭೆಯಲ್ಲಿ ನಡೆದಿದೆ.

    ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಸೇರಿದಂತೆ ಸಾಮಾನ್ಯ ಜನರಿಗೆ ಹೆಚ್ಚಿನ ಹಾನಿ ಆಗಿತ್ತು. ಈ ಬಗ್ಗೆ ಹಾಸನ ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳ ಸಭೆ ನಡೆಸಿದ್ದರು. ಈ ವೇಳೆ ಚರ್ಚೆ ಏನೋ ಗಂಭೀರವಾಗಿಯೇ ನಡೆಯಿತು. ಕೆಲ ಅಧಿಕಾರಿಗಳು ತಮ್ಮ ಇಲಾಖಾವಾರು ಪ್ರಗತಿಯನ್ನು ಸಭೆಯ ಮುಂದಿಟ್ಟರು. ಆದರೆ ಸಭೆಯಲ್ಲಿ ಹಾಜರಾಗಿದ್ದ ಬಹುತೇಕ ಅಧಿಕಾರಿಗಳು ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು.

    ಮಹಿಳಾ ಹಾಗೂ ಪುರುಷ ಅಧಿಕಾರಿಗಳು ಎನ್ನದೇ ಬಹುತೇಕ ಅಧಿಕಾರಿಗಳು ಸಭೆಗೆ ಯಾವುದೇ ರೀತಿಯ ಮಹತ್ವ ನೀಡದೇ ತಮ್ಮ ಪಾಡಿಗೆ ತಾವು ಮೊಬೈಲ್ ನಲ್ಲಿ ಮುಳುಗಿದ್ದರು. ಕೆಲವರು ಕಾಲ್ ನಲ್ಲಿ ಬ್ಯುಸಿಯಾಗಿದ್ದರೆ, ಮತ್ತೆ ಕೆಲವರು ವಾಟ್ಸಾಪ್ ನಲ್ಲಿ ಮಗ್ನರಾಗಿದ್ದರು. ಇನ್ನೂ ಕೆಲವರು ಯಾವ ಪರಿ ಫ್ರೀಯಾಗಿದ್ರು ಎಂದರೆ ಆನ್‍ಲೈನ್ ಶಾಪಿಂಗ್ ತಾಣದ ಮೂಲಕ ಹೊಸ ಹೊಸ ವಸ್ತುಗಳ ಬುಕ್ಕಿಂಗ್ ಮಾಡಲು ಸಮಯ ಮೀಸಲಿಟ್ಟಿದ್ದರು.

    ಮಾಸಿಕ ಪ್ರಗತಿ ಪರಿಶೀಲನಾ ಸಭೆಗೂ, ನಮಗೂ ಯಾವುದೇ ಸಂಬಂಧ ಇಲ್ಲ ಎಂಬಂತೆ ಮೊಬೈಲ್ ಮೊರೆ ಹೋಗಿದ್ದು ಅಧಿಕಾರಿಗಳ ಬದ್ಧತೆಯನ್ನು ಪ್ರಶ್ನಿಸುವಂತೆ ಮಾಡಿದೆ. ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಜನ ಸಾಮಾನ್ಯರ ಅಧಿಕಾರಿಗಳ ಬಳಿ ಹೋದರೆ ಸಭೆಯ ಕಾರಣ ನೀಡುವ ಅಧಿಕಾರಗಳು ಕೆಲಸ ಮುಂದೂಡುತ್ತಾರೆ. ಆದರೆ ಸಭೆಗೆ ಬರುವ ಅಧಿಕಾರಿಗಳು ಮಾತ್ರ ತಮ್ಮ ಕರ್ತವ್ಯ ಮಾಡದೇ ಅಸಡ್ಡೆ ತೋರಿದ್ದಾರೆ. ಸದ್ಯ ಅಧಿಕಾರಿಗಳ ಈ ವರ್ತನೆ ಗಮನಿಸಿದ ಸಾರ್ವಜನಿಕರು ಯಾವ ಪುರುಷಾರ್ಥಕ್ಕೆ ಸಭೆ ನಡೆಸಲಾಗುತ್ತದೆ ಎಂದು ಪ್ರಶ್ನಿಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮರಾಠಿ ಸದಸ್ಯರ ಪುಂಡಾಟ

    ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮರಾಠಿ ಸದಸ್ಯರ ಪುಂಡಾಟ

    ಬೆಳಗಾವಿ: ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಮರಾಠಿ ಭಾಷೆಯ ಸದಸ್ಯರು ಪುಂಡಾಟ ನಡೆಸಿದ್ದು, ಸರ್ಕಾರಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲಿ ನೀಡುವಂತೆ ಒತ್ತಾಯ ಮಾಡಿದ್ದಾರೆ.

    ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಈ ಕುರಿತು ಜಿ.ಪಂ ಸದಸ್ಯ ಜಯರಾಮ್ ದೇಸಾಯಿ ಸರ್ಕಾರಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲಿ ನೀಡುವಂತೆ ಪಟ್ಟು ಹಿಡಿದರು. ಅಲ್ಲದೇ ಅಧಿಕಾರಿಗಳು ನಮ್ಮ ಮಾತು ಕೇಳದೇ ಭಾಷಾವಾದ ಮಾಡುತ್ತಿದ್ದಾರೆ. ನಮಗೆ ಕನ್ನಡದಲ್ಲಿ ಕೊಟ್ಟ ದಾಖಲೆಗಳು ತಿಳಿಯುತ್ತಿಲ್ಲ. ಅದ್ದರಿಂದ ಕೂಡಲೇ ಮರಾಠಿ ಭಾಷೆಯಲ್ಲಿ ದಾಖಲೆ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಲು ಒತ್ತಾಯ ಮಾಡಿದರು. ಆದರೆ ಅವರ ಇದನ್ನು ನಿರಾಕರಿಸಿದ ಅಧ್ಯಕ್ಷರು ಮರಾಠಿಯಲ್ಲಿ ದಾಖಲೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

    ಏಕವಚನ ಪ್ರಯೋಗ:
    ಈ ವೇಳೆ ಜಿಲ್ಲಾ ಪಂಚಾಯಿತಿಯ ಉಪಾಧ್ಯಕ್ಷರಿಗೆ ಏಕವಚನದಲ್ಲಿ ಮಾತನಾಡಿ ಬಾಯಿಮುಚ್ಚಿ ಎಂದು ಮರಾಠಿ ಸದಸ್ಯೆ ಸರಸ್ವತಿ ಪಾಟೀಲ್ ಉದ್ಧಟತನ ಮೆರೆದರು. ತಮ್ಮ ವ್ಯಾಪ್ತಿಯಲ್ಲಿ ಒಂದು ವಾರದ ಹಿಂದೆ ಗ್ರಾಮಕ್ಕೆ ಚಿರತೆ ಬಂದಾಗ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪ ಮಾಡಿದ ಸರಸ್ವತಿ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ಉಪಾಧ್ಯಕ್ಷ ಅರುಣ ಕಟಾಂಬ್ಳೆ ಅವರಿಗೆ ಏಕವಚನದಲ್ಲಿ ಮಾತನಾಡಿ ಸರಸ್ವತಿ ಉದ್ಧಟನ ಮೆರೆದರು.

    ಈ ಮಾತಿಗೆ ಆಕ್ರೋಶಗೊಂಡ ಕನ್ನಡ ಸದಸ್ಯರು ಸಭೆ ನಡುವೆಯೇ ಸರಸ್ವತಿ ಅವರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ ಉಪಾಧ್ಯಕ್ಷರನ್ನು ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ. ಈ ಕುರಿತು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಈ ಸಮಯದಲ್ಲಿ ಮಧ್ಯಪ್ರವೇಶ ಮಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಅಧಿಕಾರಿ ವಿರುದ್ಧ ರೇಣುಕಾಚಾರ್ಯ ಕೆಂಡಾಮಂಡಲ – ಏರು ಧ್ವನಿಯಲ್ಲೇ ಉತ್ತರಿಸಿದ ಜಿಲ್ಲಾ ಪಂಚಾಯತ್ ಸಿಇಓ

    ಅಧಿಕಾರಿ ವಿರುದ್ಧ ರೇಣುಕಾಚಾರ್ಯ ಕೆಂಡಾಮಂಡಲ – ಏರು ಧ್ವನಿಯಲ್ಲೇ ಉತ್ತರಿಸಿದ ಜಿಲ್ಲಾ ಪಂಚಾಯತ್ ಸಿಇಓ

    ದಾವಣಗೆರೆ: ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ರೇಣುಕಾಚಾರ್ಯ ಅವರು ಅಧಿಕಾರಿಗಳ ವಿರುದ್ಧ ಕೆಂಡಾಮಂಡರಾಗಿದ್ದು, ಈ ವೇಳೆ ಜಿಲ್ಲಾ ಪಂಚಾಯಿತಿ ಸಿಇಓ ಏರು ಧ್ವನಿಯಲ್ಲೇ ಉತ್ತರ ನೀಡಿದ್ದಾರೆ.

    ಇಂದು ನಗರದಲ್ಲಿ ನಡೆಸಿದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಶಾಸಕ ರೇಣುಕಾಚಾರ್ಯ, ಜಿಲ್ಲಾ ಸಿಇಓ ಸಿ.ಅಶ್ವತಿ ಅವರು ಜನಪ್ರತಿನಿಧಿಗಳಿಗೆ ಗೌರವ ಕೊಡುತ್ತಿಲ್ಲ. ಯಾವ ಜನಪ್ರತಿನಿಧಿಗಳ ಫೋನ್ ಕರೆ ಸ್ವೀಕರಿಸುತ್ತಿಲ್ಲ. ಜಿಲ್ಲಾ ಪಂಚಾಯತ್ ನ ಯಾವುದೇ ಕೆಲಸ ಆಗಲಿ ಸಿಇಓ ಅನುಮತಿ ಬೇಕೆಂದು ಅಧಿಕಾರಿಗಳು ಹೇಳುತ್ತಾರೆ. ಯಾವುದೇ ಫೈಲನ್ನು ನಿಗಧಿತ ಸಮಯದಲ್ಲಿ ಕಳುಹಿಸುವುದಿಲ್ಲ. ನಿಮ್ಮ ದರ್ಬಾರ್ ಏನು ಎಂದು ಪ್ರಶ್ನಿಸಿದ್ದಾರೆ.

    ಈ ವೇಳೆ ಶಾಸಕರ ಮಾತಿಗೆ ಸಭೆಯಲ್ಲೇ ತಿರುಗೇಟು ಕೊಟ್ಟ ಸಿಇಓ ಅಧಿಕಾರಿ ಅಶ್ವತಿ ಅವರು, ನಾನು ಜನಪ್ರತಿನಿಧಿಗಳಿಗೆ ಗೌರವ ಕೊಡುತ್ತಿದ್ದೇನೆ. ಯಾರಿಗೂ ಅಗೌರವ ತೋರುತ್ತಿಲ್ಲ. ನಾನು ಆ ರೀತಿ ನಡೆದುಕೊಂಡಿಲ್ಲ. ನನ್ನ ವಿರುದ್ಧ ಅನಗತ್ಯ ಆರೋಪ ಮಾಡಲಾಗುತ್ತಿದೆ ಎಂದು ಏರುಧ್ವನಿಯಲ್ಲೇ ಪ್ರತ್ಯುತ್ತರ ನೀಡಿದ್ದಾರೆ.

    ಮಾಧ್ಯಮಗಳಿಗೆ ಪತ್ರಿಕ್ರಿಯೆ ನೀಡಿದ ರೇಣುಕಾಚಾರ್ಯ ಅವರು, ಅಧಿಕಾರಿಗಳ ವಿರುದ್ಧ ನಾನು ವಾಗ್ದಾಳಿ ನಡೆಸಿಲ್ಲ. ಆದರೆ ಅಧಿಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ತಿಳಿಸಿದ್ದು ಎಲ್ಲಾ ಚುನಾಯಿತ ಸದಸ್ಯರು ಈ ಕುರಿತು ದೂರು ನೀಡಿದ್ದಾರೆ. ಅದ್ದರಿಂದ ಅವರಿಗೆ ಈ ಕುರಿತು ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು. ಸಾಮಾನ್ಯ ಸಭೆಯಲ್ಲಿ ಜಿಲ್ಲೆಯ ಶಾಸಕರು ಸೇರಿದಂತೆ, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

  • ಶಾಸಕರ ಮುಸುಕಿನ ಗುದ್ದಾಟದಿಂದ ಅಧಿಕಾರಿಗಳಿಲ್ಲದೆ ಅನಾಥವಾದ ಚಿಕ್ಕಬಳ್ಳಾಪುರ ಜಿಲ್ಲೆ

    ಶಾಸಕರ ಮುಸುಕಿನ ಗುದ್ದಾಟದಿಂದ ಅಧಿಕಾರಿಗಳಿಲ್ಲದೆ ಅನಾಥವಾದ ಚಿಕ್ಕಬಳ್ಳಾಪುರ ಜಿಲ್ಲೆ

    ಚಿಕ್ಕಬಳ್ಳಾಪುರ: ಸಿಎಂ ಸಿದ್ಧರಾಮಯ್ಯ ಅವರ ಆಪ್ತ ಶಾಸಕರ ಮುಸುಕಿನ ಗುದ್ದಾಟದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆ ಅಧಿಕಾರಿಗಳಿಲ್ಲದೆ ಅನಾಥವಾಗಿದೆ.

    ರಾಜ್ಯ ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಆಡಳಿತ ನಡೆಸಬೇಕಾದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೂ ಇಲ್ಲಿಲ್ಲ. ಸಿಇಓ ವರ್ಗಾವಣೆ ಆಗಿ 4 ತಿಂಗಳುಗಳೇ ಕಳೆದಿದೆ. ಮತ್ತೊಂದೆಡೆ ತರಬೇತಿಗೆಂದು ಹೋಗಿ ತಿಂಗಳಾದರೂ ಜಿಲ್ಲಾಧಿಕಾರಿಯ ಸುಳಿವಿಲ್ಲ. ಇದರ ಜೊತೆಗೆ ಜಿಲ್ಲೆಯ ಹಲವು ಇಲಾಖೆಗಳಲ್ಲೂ ಅಧಿಕಾರಿಗಳಿಲ್ಲದೆ ಕೆಲಸಗಳು ಬಾಕಿ ಉಳಿದಿವೆ.

    ಚಿಕ್ಕಬಳ್ಳಾಪುರ ಶಾಸಕ ಡಾ. ಕೆ.ಸುಧಾಕರ್ ಹಾಗೂ ಗೌರಿಬಿದನೂರು ಶಾಸಕ ಎನ್.ಹೆಚ್ ಶಿವಶಂಕರ ರೆಡ್ಡಿ ವೈಮನಸ್ಸಿನಿಂದಾಗಿ ಅಧಿಕಾರಿಗಳು ಇತ್ತ ಕಡೆ ತಲೆ ಹಾಕುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಇವರು ಹೇಳಿದ್ದು ಮಾಡಿದರೆ ಅವರಿಗೆ ಕೋಪ. ಅವರು ಹೇಳಿದ್ದು ಮಾಡಿದರೆ ಇವರಿಗೆ ಕೋಪ. ಇಬ್ಬರ ಸಹವಾಸವೇ ಬೇಡ ಎಂದು ಅಧಿಕಾರಿಗಳು ಚಿಕ್ಕಬಳ್ಳಾಪುರದಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.