Tag: districts

  • ಸಿಲಿಕಾನ್ ಸಿಟಿಯಲ್ಲಿ ಅತಿಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟು ಮಳೆ?

    ಸಿಲಿಕಾನ್ ಸಿಟಿಯಲ್ಲಿ ಅತಿಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟು ಮಳೆ?

    ಬೆಂಗಳೂರು: ಶನಿವಾರ ರಾಜ್ಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು (Bengaluru) ತತ್ತರಿಸಿ ಹೋಗಿದ್ದು, ಅತೀ ಹೆಚ್ಚು ಮಳೆ ದಾಖಲಾಗಿದೆ.

    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣ ಅಬ್ಬರಿಸಿದ್ದು, ಒಳಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಜೊತೆಗೆ ಇಂದು (ಅ.6) ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (India Meteorological Department) ನೀಡಿದೆ.ಇದನ್ನೂ ಓದಿ: Bengaluru Rains | 49 ಪ್ರದೇಶಗಳಲ್ಲಿ ಮಳೆ ಆರ್ಭಟ – ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್!

    ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ ಎನ್ನುವ ಕುರಿತು ಮಾಹಿತಿ ಈ ಕೆಳಗಿನಂತಿದೆ.

    ಜಿಲ್ಲಾವಾರು ಗರಿಷ್ಠ ಮಳೆ:
    ಬೆಂಗಳೂರು ನಗರ – 113 ಮಿ.ಮೀ
    ಬೆಂಗಳೂರು ಗ್ರಾಮಾಂತರ – 74 ಮಿ.ಮೀ
    ರಾಮನಗರ – 110 ಮಿ.ಮೀ
    ಮಂಡ್ಯ – 87 ಮಿ.ಮೀ
    ಕೋಲಾರ – 84 ಮಿ.ಮೀ
    ಉಡುಪಿ – 69 ಮಿ.ಮೀ
    ಧಾರವಾಡ – 67 ಮಿ.ಮೀ
    ದಕ್ಷಿಣ ಕನ್ನಡ – 66 ಮಿ.ಮೀ
    ಚಾಮರಾಜನಗರ – 66 ಮಿ.ಮೀ
    ತುಮಕೂರು – 65 ಮಿ.ಮೀ
    ಗದಗ- 63 ಮಿ.ಮೀ
    ಹಾಸನ – 64 ಮಿ.ಮೀ
    ಕೊಡಗು – 77 ಮಿ.ಮೀ
    ಬೆಳಗಾವಿ – 59 ಮಿ.ಮೀ
    ಹಾವೇರಿ- 52 ಮಿ.ಮೀ
    ಉತ್ತರ ಕನ್ನಡ – 47 ಮಿ.ಮೀ
    ಮೈಸೂರು – 44 ಮಿ.ಮೀ
    ವಿಜಯನಗರ – 40 ಮಿ.ಮೀ
    ಚಿಕ್ಕಮಗಳೂರು- 33 ಮಿ.ಮೀ
    ಬೀದರ್ – 30 ಮಿ.ಮೀ
    ಕೊಪ್ಪಳ – 24 ಮಿ.ಮೀ
    ವಿಜಯಪುರ – 20 ಮಿ.ಮೀ
    ವಿಜಯನಗರ – 20 ಮಿ.ಮೀ
    ಚಿತ್ರದುರ್ಗ – 20 ಮಿ.ಮೀ ಇದನ್ನೂ ಓದಿ: ಇಂದು ಸಹ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ ಸಾಧ್ಯತೆ – 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

  • ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ- ರೈತರ ಮೊಗದಲ್ಲಿ ಸಂತಸ

    ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ- ರೈತರ ಮೊಗದಲ್ಲಿ ಸಂತಸ

    ಬೆಂಗಳೂರು: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಹಲವೆಡೆಗಳಲ್ಲಿ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಗುಡುಗು ಸಹಿತ ಭಾರೀ ಮಳೆಯಾಗಿದ್ದರಿಂದ ವಾಹನ ಸವಾರರು ಪರದಾಡಿದರೆ, ಇತ್ತ ಮಳೆ ಬಂದಿದ್ದರಿಂದ ರೈತರು ಖುಷಿಯಾಗಿದ್ದಾರೆ.

    ಎಲ್ಲೆಲ್ಲಿ ಮಳೆಯಾಗಿದೆ..?: ಮಂಡ್ಯ, ದಾವಣಗೆರೆ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಮೈಸೂರು ಹಾಗೂ ವಿಜಯಪುರದಲ್ಲಿ ಮಳೆಯಾಗಿದೆ.

    ಮೈಸೂರಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಜನ ಸಂತಸಗೊಂಡಿದ್ದಾರೆ. ಇನ್ನು ಸಂಜೆ ಮಂಡ್ಯ ಜಿಲ್ಲೆಯ ಹಲವೆಡೆ ಅರ್ಧ ಗಂಟೆಗಳ ಕಾಲ ಬಿರುಗಾಳಿ ಸಹಿತ ಮಳೆ (Karnatak Rain) ಸುರಿದಿದೆ. ಬಿಸಿಲ ಬೇಗೆಯಿಂದ ತತ್ತರಗೊಂಡಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ವರ್ಷದ ಮೊದಲ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಬಿರುಗಾಳಿ ಸಹಿತ ಭಾರೀ ಮಳೆಗೆ ಆದಿಚುಂಚನಗಿರಿ ಕಮಾನು ಧರೆಗೆ ಉರುಳಿದೆ. ಕಮಾನು ರಸ್ತೆಗೆ ಬಿದ್ದ ಕಾರಣ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ.

    ಗಣಂಗೂರು ಟೋಲ್ ಸಮೀಪ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿದೆ. ಇದರಿಂದ ಕಂಬದಲ್ಲಿದ್ದ ಹೈಟೆನ್ಷನ್ ವೈರ್ ರಸ್ತೆಗೆ ಬಿದ್ದಿದೆ. ಈ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ. ಇನ್ನು ಕಳ್ಳರ ಕೈ ಚಳಕದಿಂದ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದಾರೆ. ಕಂಬದಲ್ಲಿದ್ದ ರಾಡ್‍ಗಳನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ಇದರಿಂದ ಕಂಬಗಳು ಸಡಿಲಗೊಂಡು ಧರೆಗೆ ಉರುಳಿದೆ.

    ದಾವಣಗೆರೆ: ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಳೆರಾಯನ ಆಗಮನವಾಗಿದೆ. ಬೆಳಗ್ಗೆಯಿಂದ ಬಿಸಿಲಿನಿಂದ ಕಂಗೆಟ್ಡಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ದಾವಣಗೆರೆ, ಹರಪ್ಪನಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ಜನರಲ್ಲಿ ಸಂತಸ ಮನೆ ಮಾಡಿದೆ. ದಾವಣಗೆರೆ ಭಾರೀ ಗಾಳಿ ಮಳೆಗೆ ಬೃಹತ್ ಕೊಂಬೆಯೊಂದು ಮುರಿದು ಬಿದ್ದಿದೆ. ಮರದ ಕೊಂಬೆ ಬಿದ್ದಿರುವ ಹಿನ್ನೆಲೆ ಮೂರು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಮೂರರಿಂದ ನಾಲ್ಕು ಬೈಕ್ ಗಳು ಜಖಂ ಆಗಿವೆ. ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ಮನೆ ಮೇಲ್ಛಾವಣಿ ನೆಲಸಮವಾಗಿವೆ. ಎರಡರಿಂದ ಮೂರು ಮನೆಗಳ ಮೇಲ್ಛಾವಣಿಗಳಿಗೆ ಹಾನಿಯಾಗಿವೆ.

    ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿಯೂ ಮಳೆಯಾಗಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಲವೆಡೆ ಜೋರು ಮಳೆಯಾಗಿದೆ. ದಿನೇ ದಿನೇ ಏರುತ್ತಿರುವ ಗರಿಷ್ಠ ತಾಪಮಾನಕ್ಕೆ ಜನ ಹೈರಾಣಾಗಿದೆ. ಒಟ್ಟಿನಲ್ಲಿ ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಬಿಸಿಲನಾಡು ಜನರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಇತ್ತ ಕೊಪ್ಪಳ ಜಿಲ್ಲೆಯಲ್ಲಿಯೂ ಅರ್ಧಗಂಟೆ ಭಾರೀ ಗಾಳಿಯೊಂದಿಗೆ ಮಳೆ ಸುರಿದಿದೆ. ಮಳೆಯ ಆಗಮನದಿಂದ ಜನತೆ ಸಂತಸಗೊಂಡಿದ್ದಾರೆ.

    ಧಾರವಾಡ: ಜಿಲ್ಲೆಯಾದ್ಯಂತ ಆಲಿಕಲ್ಲು ಮಳೆಯಾಗಿದೆ. ನಗರದಲ್ಲಿ ಮಧ್ಯಾಹ್ನದವರೆಗೆ ಉರಿ ಬಿಸಿಲು, ಮಧ್ಯಾಹ್ನದ ನಂತರ ಸಂಪೂರ್ಣ ಮೋಡ ಕವಿದ ವಾತಾವರಣವಿತ್ತು. ಅಂಜೆಯಾಗ್ತಿದ್ದಂತೆಯೇ ಭಾರೀ ಮಳೆಯಾಗಿದೆ, ರೈತರು ಸಂತಸಗೊಂಡಿದ್ದಾರೆ. ವಿಜಯಪುರದಲ್ಲಿಯೂ ಬಿರುಗಾಳಿ, ಗುಡುಗು ಸಮೇತ ಧಾರಾಕಾರ ಮಳೆಯಾಗಿದೆ.

    ಗದಗ: ಜಿಲ್ಲೆಯ ಹಲವೆಡೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮುಂಗಾರು ಮಳೆ ಆಗಮನದಿಂದ ರೈತರು ಮಂದಹಾಸ ಬೀರಿದ್ದಾರೆ. ಸುಮಾರು ಅರ್ಧ ಗಂಟೆ ಮಳೆ ಸುರಿದಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಸಾರ್ವಜನಿಕರು, ವಾಹನ ಸವಾರರು ಪರದಾಟ ಅನುಭವಿಸಿದರು.

    ಹಾವೇರಿ: ಸುಮಾರು 1 ಗಂಟೆಗೂ ಹೆಚ್ಚು ಮಳೆಯಾಗಿದೆ. ಬಿರುಗಾಳಿ ಸಹಿತ ಸುರಿ ಭಾರೀ ಮಳೆಯಿಂದಾಗಿ ಹಾವೇರಿ ಕೊಳ್ಳಿ ಕಾಲೇಜು ಬಳಿ ನಡೆಯುತ್ತಿದ್ದ ಬಿಜೆಪಿ ಮಹಿಳಾ ಸಮಾವೇಶ ಅರ್ಧಕ್ಕೆ ನಿಂತಿದೆ. ಮಹಿಳೆಯಲ್ಲಿ ಪ್ಲಾಸ್ಟಿಕ್ ಕುರ್ಚಿ ಹಿಡಿದು ನೂರಾರು ಮಹಿಳೆಯರು ನಿಂತಿದ್ದರು. ಮಳೆಯಿಂದಾಗಿ ಅಪಾರ ಬಾಳೆ ಬೆಳೆ ನಾಶವಾಗಿದ್ದು, ಕೆಲವೆಡೆ ಮನೆಯ ಮೇಲ್ಚಾವಣಿ ಗಾಳಿಗೆ ಹಾನಿಗೊಂಡಿವೆ. ಇದೀಗ ಬೆಳೆ ನಾಶಕ್ಕೆ ಪರಿಹಾರ ಒದಗಿಸಿಕೊಡುವಂತೆ ರೈತರು ಆಗ್ರಹಿಸಿದ್ದಾರೆ.

  • ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

    ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

    ಬೆಂಗಳೂರು: ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಸೋಮವಾರ ರಾತ್ರಿ ನಗರದ ಹಲವೆಡೆ ಮಳೆರಾಯ ತಂಪೆರೆದಿದ್ದು, ಇಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು, ಬೆಂಗಳೂರು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – ಕರಾವಳಿ, ಉತ್ತರ ಕರ್ನಾಟಕದಲ್ಲಿ ಬಿಸಿಲು 

    ಅಲ್ಲದೇ ಬೆಂಗಳೂರಿನಲ್ಲಿ (Bengaluru) ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹವಾಮಾನ  ಇಲಾಖೆ ಅಲರ್ಟ್ (Alert) ಘೋಷಿಸಿದೆ. ಇದನ್ನೂ ಓದಿ: ವಾರಸುದಾರರಿಲ್ಲದ 35,000 ಕೋಟಿ ರೂ. RBIಗೆ ವರ್ಗಾವಣೆ 

    ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಇನ್ನೂ ಎರಡು ದಿನ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಜಾರಕಿಹೊಳಿ – ಸವದಿ ಬಣ ರಾಜಕೀಯಕ್ಕೆ ಬ್ರೇಕ್‌; ಹೈಕಮಾಂಡ್‌ ಸಂದೇಶ ರವಾನಿಸಿದ ಜೋಶಿ

  • ಯುಗಾದಿ ಹಬ್ಬದೊಳಗೆ ಹೊಸ ಜಿಲ್ಲೆಗಳ ರಚನೆ: ಜಗನ್ ಮೋಹನ್ ರೆಡ್ಡಿ

    ಯುಗಾದಿ ಹಬ್ಬದೊಳಗೆ ಹೊಸ ಜಿಲ್ಲೆಗಳ ರಚನೆ: ಜಗನ್ ಮೋಹನ್ ರೆಡ್ಡಿ

    ಹೈದರಾಬಾದ್: ಈ ಬಾರಿ ಏಪ್ರಿಲ್ 2ರ ಯುಗಾದಿ ಹಬ್ಬದೊಳಗೆ (ಆಂಧ್ರದಲ್ಲಿ ಹೊಸ ವರ್ಷದ ದಿನ) ಹೊಸ ಜಿಲ್ಲೆಗಳನ್ನು ರಚಿಸಬೇಕು ಎಂದು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

    ಕ್ಯಾಂಪ್ ಕಚೇರಿಯಲ್ಲಿ ಗುರುವಾರ ಹೊಸ ಜಿಲ್ಲೆಗಳ ರಚನೆ ಕುರಿತು ನಡೆಸಿದ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳು, ಹೊಸ ಜಿಲ್ಲೆಗಳ ರಚನೆಯ ನಂತರ ಇಡೀ ಕಾರ್ಯವಿಧಾನವು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಕಾಮಗಾರಿ ಆರಂಭವಾದ ನಂತರ ಯಾವುದೇ ಗೊಂದಲ ಬೇಡ. ಯಾವುದೇ ರೀತಿಯ ತೊಂದರೆಯಿಲ್ಲದ ಆಡಳಿತ ವ್ಯವಸ್ಥೆ ಕಲ್ಪಿಸಲು ಹಾಗೂ ಈ ನಿಟ್ಟಿನಲ್ಲಿ ಸಿದ್ಧತೆಗಳನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್‍ಪಿ) ಕೆಲಸವನ್ನು ಪ್ರಾರಂಭಿಸಲು ಸಿದ್ಧತೆಗಳನ್ನು ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

    ಹೊಸ ಕಟ್ಟಡಗಳು ಸಿದ್ಧವಾಗುವವರೆಗೆ ನೌಕರರ ವಿಭಜನೆ, ಮೂಲಸೌಕರ್ಯಗಳ ಸ್ಥಾಪನೆ ಮತ್ತು ಸರ್ಕಾರಿ ಯಂತ್ರಗಳ ಕಾರ್ಯನಿರ್ವಹಣೆಗೆ ಅಗತ್ಯವಿರುವ ಕಟ್ಟಡಗಳ ಗುರುತಿಸಬೇಕು. ಏನಾದರೂ ಆಕ್ಷೇಪಗಳಿದ್ದರೆ, ಅದನ್ನು ಪರಿಶೀಲಿಸುವುದ ಜೊತೆಗೆ ಚರ್ಚೆ ನಡೆಸಬೇಕು ಎಂದಿದ್ದಾರೆ. ಇದನ್ನೂ ಓದಿ: ಅಪ್ಪು ಜೊತೆಗೆ ಕೊನೆ ಕ್ಷಣದ ವೀಡಿಯೋ ಹಂಚಿಕೊಂಡ ನವರಸ ನಾಯಕ!

    ಹೊಸ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿಗಳು ಮತ್ತು ಎಸ್‍ಪಿಗಳನ್ನು ನೇಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಏಕೆಂದರೆ ಅವರಿಗೆ ಕೆಲಸದಲ್ಲಿ ಅನುಭವವಿರುವುದರಿಂದ ಹೊಸ ಜಿಲ್ಲೆಗಳಲ್ಲಿ ಜಗಳ ಮುಕ್ತವಾಗಿ ಆಡಳಿತ ನಡೆಸಲು ಸಹಾಯಕವಾಗಿದೆ. ಮೂಲಸೌಕರ್ಯಗಳ ಸ್ಥಾಪನೆ ಮತ್ತು ಆಡಳಿತದ ಸಿದ್ಧತೆಗಳನ್ನು ಅವರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಹೇಳಿದ್ದಾರೆ.

    ನ್ಯಾಯಾಂಗ ಮತ್ತು ಕಾನೂನು ಸಮಸ್ಯೆಗಳನ್ನು ಪರಿಗಣಿಸಿ ಸ್ಥಳೀಯ ಸಂಸ್ಥೆಗಳಿಗೆ (ಜಿಲ್ಲಾ ಪರಿಷತ್ತು ವಿಭಾಗ) ಸಂಬಂಧಿಸಿದಂತೆ ಅನುಸರಿಸಬಹುದಾದ ನೀತಿ ಯೋಜನೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹೊಸ ಜಿಲ್ಲೆಯ ನಕ್ಷೆಗಳು ಮತ್ತು ಜಿಲ್ಲಾ ಕೇಂದ್ರಗಳನ್ನು ನಿರ್ಧರಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಲಹೆಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಕೊನೆಗೂ ನಮ್ಮ ಕನಸು ನನಸಾಗಿದೆ: ಆಲಿಯಾ ಹೀಗೆಂದಿದ್ದೇಕೆ?

  • ರಾಜ್ಯಾದ್ಯಂತ ಮಳೆಯ ಅಬ್ಬರ – ಮತ್ತೆ ಪ್ರವಾಹ ಭೀತಿ

    ರಾಜ್ಯಾದ್ಯಂತ ಮಳೆಯ ಅಬ್ಬರ – ಮತ್ತೆ ಪ್ರವಾಹ ಭೀತಿ

    ಬೆಂಗಳೂರು: ರಾಜ್ಯಾದ್ಯಂತ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕರ್ನಾಟಕದಲ್ಲಿ ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ಮತ್ತೆ ಪ್ರವಾಹ ಭೀತಿ ಎದುರಾಗಿದೆ.

    ಉತ್ತರ ಕರ್ನಾಟಕ, ಕಲಬುರಗಿಯ ಚಿಂಚೋಳಿ, ಸೇಡಂ ತಾಲೂಕುಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಚಿಂಚೋಳಿಯ ಚಂದ್ರಪಳ್ಳಿ ಜಲಾಶಯ ಭರ್ತಿ ಹಿನ್ನೆಲೆ ನೀರು ಬಿಡುಗಡೆ ಮಾಡಲಾಗಿದೆ. ಪಟಪಳ್ಳಿ, ಹಸರಗುಂಡಗಿ, ಗಡಿಕೇಶ್ವರ, ಯಂಪಳ್ಳಿ, ಕಂಚಿನಾಳ, ಶಾದಿಪೂರ್ ಗ್ರಾಮಗಳಿಗೆ ನುಗ್ಗಿದ ನೀರಿನಿಂದಾಗಿ ದೇಗಲಮಡಿ ಗ್ರಾಮದ 50ಕ್ಕೂ ಹೆಚ್ಚು ಮನೆಗಳು ಜಲಾವೃತ ಆಗಿದೆ. ಸೇಡಂನ ಮಳಖೇಡಾ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದನ್ನೂ ಓದಿ: ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಕಳ್ಳ

    ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು, ಮಳಖೇಡದ ಉತ್ತಾರಾಧಿ ಮಠ ಸಂಪೂರ್ಣ ಜಲಾವೃತಗೊಂಡಿದೆ. ಮಠದ ಆವರಣದಲ್ಲಿ 4 ಅಡಿಗೂ ಹೆಚ್ಚು ನೀರು ತುಂಬಿದೆ. ಕಾಳಗಿ ತಾಲೂಕಿನ ಬೆಣ್ಣೆತೋರಾ ಜಲಾಶಯ ಭರ್ತಿಯಾಗಿದ್ದು, ಡ್ಯಾಮ್‍ನಿಂದ 20 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಡ್ಯಾಂ ಕೆಳಭಾಗದ ಹಳೆ ಹೆಬ್ಬಾಳ ಗ್ರಾಮಕ್ಕೆ ನುಗ್ಗಿದ ನೀರು ಕಾಳಗಿಯ ನೀಲಕಂಠೇಶ್ವರ, ಸೇಡಂನ ಸಂಗಮೇಶ್ವರ ದೇಗುಲ ಜಲಾವೃತಗೊಂಡಿದೆ. ನೂರಾರು ಎಕರೆ ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ. ಬೀದರ್‍ನಲ್ಲಿ ಸತತ ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬೀದರ್-ಸಿರ್ಸಿ ಗ್ರಾಮದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೆಲ ಗ್ರಾಮಗಳ ಸೇತುವೆಗಳಿಗೆ ಹಾಕಿದ್ದ ಕಾಂಕ್ರಿಟ್ ಪೈಪ್‍ಗಳು ಕೊಚ್ಚಿ ಹೋಗಿವೆ. ನೀರಿನ ರಭಸಕ್ಕೆ ಬೃಹತ್ ಕಂದಕ ನಿರ್ಮಾಣವಾಗಿದೆ.ಇದನ್ನೂ ಓದಿ: ಸ್ಮಶಾನಕ್ಕೆ ದಾರಿ ಇಲ್ಲದೆ ಮೃತದೇಹವನ್ನ ಕೆಸರಲ್ಲೇ ಹೊತ್ತೊಯ್ದ ಗ್ರಾಮಸ್ಥರು

    ಯಾದಗಿರಿ ಜಿಲ್ಲೆಯಲ್ಲೂ ವರುಣನ ಆರ್ಭಟ ಜೋರಾಗಿದ್ದು, ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮ ಜಲಾವೃತವಾಗಿದೆ. ತಗ್ಗು ಪ್ರದೇಶದ ನೂರಾರು ಮನೆಗಳಿಗೆ ನೀರು ನುಗ್ಗಿದೆ. ದವಸ-ಧಾನ್ಯಗಳು ನೀರಲ್ಲಿ ಕೊಚ್ಚಿ ಹೋಗುತ್ತಿದ್ದು, ನಾಯ್ಕಲ್ ಗ್ರಾಮದ ಜನಜೀವನ ಅಸ್ತವ್ಯಸ್ತವಾಗಿದೆ. ಯಾದಗಿರಿ ನಗರದ ಹೊರ ವಲಯದಲ್ಲಿ ದುರ್ಗಾ ನಗರದಲ್ಲಿಯೂ ಸಹ ಇದೇ ಪರಿಸ್ಥಿತಿ ಉಂಟಾಗಿದೆ. ಕೆರೆ ತುಂಬಿದ ಪ್ರತಿಬಾರಿಯೂ ಇದೇ ಪರಿಸ್ಥಿತಿ ಎದುರಾಗುತ್ತಿದ್ದು, ಶಾಶ್ವತ ಪರಿಹಾರಕ್ಕೆ ಸಂತ್ರಸ್ತರು ಆಗ್ರಹಿಸಿದ್ದಾರೆ. ವಿಜಯಪುರದಲ್ಲೂ ನಿನ್ನೆಯಿಂದ ಮಳೆ ಆಗುತ್ತಿದೆ. ನಿನ್ನೆಯಿಂದ ಬಿಟ್ಟೂ ಬಿಡದಂತೆ ಸುರಿಯುತ್ತಿದೆ. ಇಂದು ಕೂಡ ಮೋಡಕವಿದ ವಾತಾವರಣ ಮುಂದುವರಿದಿದ್ದು, ನಾಳೆವರೆಗೂ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆಯಿಂದ ಜಿಲ್ಲೆಯ ರೈತ ವರ್ಗ ಸಂತೋಷಗೊಂಡಿದೆ.  ಇದನ್ನೂ ಓದಿ: ಬೀದಿ ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿ ಕೊಲೆಗೈದರು

    ಉತ್ತರದಲ್ಲಿ ಒಂದ್ಕಡೆ ಪ್ರವಾಹ, ಮತ್ತೊಂದು ಕಡೆ ಭೂಕಂಪ ಭೀತಿ ಎದುರಾಗಿದೆ. ಬಾಗಲಕೋಟೆ ಜಿಲ್ಲೆಯ ಕೆಲ ಭಾಗದಲ್ಲಿ ನಿನ್ನೆ ರಾತ್ರಿ ಭೂಕಂಪನ ಸಂಭವಿಸಿದೆ. ನಿನ್ನೆ ತಡರಾತ್ರಿ 11.50ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವಾಗಿದ್ದು, ಬಾಗಲಕೋಟೆ ವಿದ್ಯಾಗಿರಿಯ 22 ಕ್ರಾಸ್, ಶಾರದಾಳ, ಅಂಕಲಗಿ, ಹಿರೇಶೆಲ್ಲಿಕೇರಿ ಕ್ರಾಸ್‍ನಲ್ಲಿ ಭೂ ಕಂಪನ ಅನುಭವವಾಗಿದೆ. ಶೆಲ್ಲಿಕೇರಿ ಕ್ರಾಸ್‍ನಲ್ಲಿ ಮನೆಯಿಂದ ಕೆಲವರು ಓಡಿ ಹೊರ ಬಂದಿದ್ದಾರೆ. ಬಾಗಲಕೋಟೆ ಜೊತೆಗೆ ವಿಜಯಪುರ ನಗರದಲ್ಲೂ ಭೂಕಂಪದ ಅನುಭವಾಗಿದೆ. ವಿಜಯಪುರ ನಗರದ ವಿವಿಧ ಭಾಗಗಳಲ್ಲಿ ಭೂಮಿ ನಡುಗಿದ ಬಗ್ಗೆ ವರದಿಯಾಗಿದೆ. ನಿನ್ನೆ ತಡರಾತ್ರಿ 11.48 ಭೂಕಂಪನದ ಅನುಭವವಾಗಿದ್ದು, 2 ಬಾರಿ ಭೂಮಿ ಕಂಪಿಸಿದೆ ಎಂದು ಜನ ತಿಳಿಸಿದ್ದಾರೆ. ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿದೆ.

  • ಭಾಗಮಂಡಲ ಜಲಾವೃತ – ಘಟಪ್ರಭಾ, ಕೃಷ್ಣ ನದಿ ತೀರದ ಜನರಿಗೆ ಪ್ರವಾಹ ಭೀತಿ

    ಭಾಗಮಂಡಲ ಜಲಾವೃತ – ಘಟಪ್ರಭಾ, ಕೃಷ್ಣ ನದಿ ತೀರದ ಜನರಿಗೆ ಪ್ರವಾಹ ಭೀತಿ

    ಬೆಂಗಳೂರು: ಮಳೆಯ ಅಬ್ಬರ ಮುಂದುವರಿದಿದೆ. ಹಲವು ಕಡೆ ಉತ್ತಮ ಮಳೆಯಾಗಿದ್ದು ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿಯುತ್ತಿದೆ. ಮಳೆಯಿಂದಾಗಿ ಬೆಳೆ ನಾಶ, ಮನೆ ಕುಸಿತ ರಸ್ತೆ ಬಂದ್ ಆಗಿರುವ ಘಟನೆಗಳು ನಡೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

    ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಭಾಗಮಂಡಲ ಬಹುತೇಕ ಜಲವೃತವಾಗಿದೆ. ರಸ್ತೆ ಸಂಪರ್ಕ ಕಡಿತವಾಗಿದೆ. ನದಿಪಾತ್ರದ ಜನರಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ. ಇದನ್ನೂ ಓದಿ:  ಟಾಪ್‍ಲೆಸ್ ಫೋಟೋ ಶೂಟ್‍ನಲ್ಲಿ ನಟಿ ಕಿಯಾರಾ ಅಡ್ವಾಣಿ ಸಖತ್ ಹಾಟ್

    ಬಾಗಲಕೋಟೆ ಹಾಗೂ ಬೆಳಗಾವಿ ಭಾಗದಲ್ಲಿ ಸುರಿದ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿನೀರಿನ ಹರಿವು ಹೆಚ್ಚಳವಾಗಿದೆ. ಮಿರ್ಜಿ ಗ್ರಾಮದ ಬಳಿಯ ಘಟಪ್ರಭಾ ರಸ್ತೆ ಸೇತುವೆ ಜಲಾವೃತವಾಗಿದೆ. ನದಿ ತೀರದ ಗ್ರಾಮಸ್ಥರಿಗೆ ಪ್ರವಾಹ ಭೀತಿ ಶುರುವಾಗಿದೆ. ನದಿ ತೀರದಲ್ಲಿ ವಾಸವಾಗಿರುವ ರೈತನಿಗೆ ಪೊಲೀಸರ ಮುನ್ನೆಚ್ಚರಿಕೆಯನ್ನು ನೀಡಿದ್ದಾರೆ. ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚು ಕಟ್ಟು ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿದೆ. ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. 14 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಗಳು ಜಲಾವೃತವಾಗಿದೆ.

    ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ನದಿ ತೀರದ ಗ್ರಾಮಗಳಲ್ಲಿ ಆತಂಕ ಹೆಚ್ಚಾಗಿದೆ. ಹಿರಣ್ಯಕೇಶಿ, ಮಲಪ್ರಭಾ, ಘಟಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ನದಿತೀರದಲ್ಲಿ ಸಾವಿರಾರು ಹೆಕ್ಟೇರ್ ಕಬ್ಬಿನ ಗದ್ದೆಗಳು ಜಲಾವೃತವಾಗಿದೆ. ಮೂರು ದಿನಗಳಿಂದ ಮಳೆಯಾಗುತ್ತಿದ್ದರೂ ಬ್ರಿಡ್ಜ್ ಕಮ್ ಬ್ಯಾರೇಜ್ ಗೇಟ್ ಓಪನ್ ಮಾಡದೇ ನಿರ್ಲಕ್ಷ್ಯ ಮಾಡಿರುವುದರಿಂದ ಗದ್ದೆಗೆ ನದಿ ನೀರು ನುಗ್ಗಿದೆ ಎಂದು ರೈತರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. ದಾಂಡೇಲಿ, ಹಳಿಯಾಳದಲ್ಲಿ ಸೇತುವೆ ಮೇಲೆ ತುಂಬಿ ಹರಿಯುತ್ತಿದೆ.

    ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ. ಪ್ರವಾಹ ಮುನ್ಸೂಚನೆ ಹಿನ್ನೆಲೆ ರಾಯಚೂರಿನ ಕೃಷ್ಣ ನದಿ ನಡುಗಡ್ಡೆ ಗ್ರಾಮಗಳ ಜನರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ. ನದಿಯಲ್ಲಿ ದಾರಿಯಿಲ್ಲದ ಹಿನ್ನೆಲೆ ಅಧಿಕಾರಿಗಳು ನೀರಿನಲ್ಲಿ ನಡೆದುಕೊಂಡು ಹೋಗಿ ನಡುಗಡ್ಡೆ ಜನರಿಗೆ ಮುನ್ನೆಚ್ಚರಿಕೆ ನೀಡುತ್ತಿದ್ದಾರೆ. ತಹಶಿಲ್ದಾರ್ ಚಾಮರಾಜ ಪಾಟೀಲ್ ಸೇರಿದಂತೆ ಪೊಲೀಸ್ ಇಲಾಖೆ, ಜೆಸ್ಕಾಂ ಅಧಿಕಾರಿಗಳು ನಡುಗಡ್ಡೆಗೆ ಭೇಟಿ ನೀಡಿ ಸಮಸ್ಯೆಗಳನ್ನ ಆಲಿಸಿದ್ದಾರೆ. ಗರ್ಭಿಣಿಯರು, ಬಾಣಂತಿಯರು, ಮಕ್ಕಳು, ವೃದ್ಧರನ್ನ ಸ್ಥಳಾಂತರಿಸಲು ಸೂಚಿಸಿದ್ದಾರೆ. ನಡುಗಡ್ಡೆಗಳಿಂದ ಹೊರಬರಲು ಒಪ್ಪದ ಜನ ಶಾಶ್ವತ ಪರಿಹಾರದ ಬೇಡಿಕೆ ಇಟ್ಟಿದ್ದಾರೆ.

    ಹಾಸನ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಸುರಿಯುತ್ತಿರುವ ಮಳೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಮನೆ ಕುಸಿತವಾಗುತ್ತಿದೆ. ಮಲೆನಾಡಿನ ಭಾಗದಲ್ಲಿ ಕಳೆದೊಂದು ವಾರದಿಂದ ಅತಿಯಾಗಿ ಮಳೆಯಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಗಾಜನೂರಿನ ತುಂಗಾ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಹೀಗಾಗಿ ಜಲಾಶಯದಿಂದ 21 ಗೇಟ್ ಗಳ ಮೂಲಕ ನೀರನ್ನು ಹೊರ ಬಿಡುತ್ತಿದ್ದಾರೆ. ಜಲಾಶಯಕ್ಕೆ 3,1277 ಕ್ಯೂಸೆಕ್ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ಅಂದರೆ 3,1277 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಮಲೆನಾಡಿನ ಭಾಗದಲ್ಲಿ ಮತ್ತೆ ಹೆಚ್ಚಿನ ಮಳೆಯಾದರೆ ಜಲಾಶಯದ ಒಳ ಹರಿವಿನ ಪ್ರಮಾಣ ಸಹ ಹೆಚ್ಚಾಗಲಿದೆ. ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರ ಹರಿವು ಪ್ರಮಾಣವನ್ನು ಹೆಚ್ಚಳ ಮಾಡಲಾಗುತ್ತದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಲಾಶಯದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

  • ಲಾಕ್ ವಿಸ್ತರಣೆಯಾದ ಜಿಲ್ಲೆಗಳಲ್ಲಿ ಕಂಟ್ರೋಲ್‍ಗೆ ಬಾರದ ಪಾಸಿಟಿವಿಟಿ ರೇಟ್

    ಲಾಕ್ ವಿಸ್ತರಣೆಯಾದ ಜಿಲ್ಲೆಗಳಲ್ಲಿ ಕಂಟ್ರೋಲ್‍ಗೆ ಬಾರದ ಪಾಸಿಟಿವಿಟಿ ರೇಟ್

    – 8 ಜಿಲ್ಲೆಗಳಲ್ಲಿ ಶೇ.10ಕ್ಕೂ ಹೆಚ್ಚು ಪಾಸಿಟಿವಿಟಿ ರೇಟ್

    ಬೆಂಗಳೂರು: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಕೊರೊನಾ ಕಂಟ್ರೋಲ್ ಗೆ ಬಂದಿದೆ. ಹೀಗಾಗಿ ಸರ್ಕಾರ ರಾಜ್ಯದ 19 ಜಿಲ್ಲೆಗಳನ್ನು ಅನ್‍ಲಾಕ್ ಮಾಡಿ ಕೆಲವು ಚಟುವಟಿಕೆಗಳಿಗೆ ಅವಕಾಶ ಕೊಟ್ಟಿದೆ. ಉಳಿದ 11 ಜಿಲ್ಲೆಗಳಲ್ಲಿ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಇನ್ನೂ ಕಡಿಮೆಯಾಗುತ್ತಿಲ್ಲ. ಹೀಗಾಗಿ ಜನರಲ್ಲಿ ಆತಂಕ ಮನೆ ಮಾಡಿದೆ.

    ಲಾಕ್‍ಡೌನ್ ವಿಸ್ತರಣೆ ಮಾಡಿ ಪಾಸಿಟಿವಿಟಿ ರೇಟ್ ಕಂಟ್ರೋಲ್‍ಗೆ ಬರುವ ರೀತಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಡಳಿತಗಳಿಗೆ ಸರ್ಕಾರ ಖಡಕ್ ಆದೇಶ ನೀಡಿತ್ತು. ಆದರೆ 11 ರಲ್ಲಿ 8 ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಹೆಚ್ಚಿದೆ. ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ.

    ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮಂಡ್ಯ, ಮಂಗಳೂರು, ಮೈಸೂರು, ಮಡಿಕೇರಿ, ಬೆಳಗಾವಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ದಾವಣಗೆರೆಯಲ್ಲಿ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದಲೂ ಪಾಸಿಟಿವಿಟಿ ರೇಟ್ ಶೇ.10ರ ಒಳಗಡೆಗೆ ಬರುತ್ತಿಲ್ಲ. ಹೀಗಾಗಿ ಜನ ಆತಂಕಕ್ಕೊಳಗಗಿದ್ದಾರೆ. ಅದರಲ್ಲೂ ಬೆಂಗಳೂರಿಗೆ ಸನಿಹದಲ್ಲಿರುವ ಜಿಲ್ಲೆಗಳಲ್ಲಿ ಕೊರೊನಾ ಕಂಟ್ರೋಲ್‍ಗೆ ಬರುತ್ತಿಲ್ಲ. ಇದನ್ನೂ ಓದಿ: ವಿಷ ಕುಡಿತೀನಿ, ಕೋವಿಡ್ ಕೇರ್ ಸೆಂಟರ್‌ಗೆ ಮಾತ್ರ ಬರಲ್ಲ- ಸೋಂಕಿತನ ರಾದ್ಧಾಂತ

    ಪಾಸಿಟಿವಿಟಿ ರೇಟ್ ಶೇ.10ರ ಒಳಗೆ ಬಾರದ ಹಿನ್ನೆಲೆ ಈ ಎಂಟು ಜಿಲ್ಲೆಗಳು ಅನ್‍ಲಾಕ್ ಆಗೋದು ಡೌಟ್ ಅನ್ನಿಸುತ್ತಿದೆ. ಪಾಸಿಟಿವಿಟಿ ರೇಟ್ ಕಂಟ್ರೋಲ್ ಗೆ ಬಾರದ 8 ಜಿಲ್ಲೆಗಳು ಯಾವು? ಎಷ್ಟು ಪಾಸಿಟಿವಿಟಿ ರೇಟ್ ಇದೆ? ಇಲ್ಲಿದೆ ಮಾಹಿತಿ.

    ಚಿಕ್ಕಮಗಳೂರು- ಶೇ.15.64

    ಮೈಸೂರು- ಶೇ.15.09

    ದಕ್ಷಿಣ ಕನ್ನಡ- ಶೇ.13.52

    ಹಾಸನ- ಶೇ.12.06

    ಚಾಮರಾಜನಗರ- ಶೇ.11.60

    ದಾವಣಗೆರೆ- ಶೇ.13.10

    ಬೆಂಗಳೂರು ಗ್ರಾಮಾಂತರ- ಶೇ.11.60

    ಕೊಡಗು- ಶೇ.10.63

  • ಬೆಂಗಳೂರಿನಲ್ಲಿ ನಿಯಂತ್ರಣ, ಜಿಲ್ಲೆಗಳಲ್ಲಿ ಸ್ಫೋಟ – ಕೊರೊನಾ ಹೆಚ್ಚಾಗಲು ಕಾರಣ ಏನು?

    ಬೆಂಗಳೂರಿನಲ್ಲಿ ನಿಯಂತ್ರಣ, ಜಿಲ್ಲೆಗಳಲ್ಲಿ ಸ್ಫೋಟ – ಕೊರೊನಾ ಹೆಚ್ಚಾಗಲು ಕಾರಣ ಏನು?

    ಬೆಂಗಳೂರು: ಇಷ್ಟು ದಿನ ನಗರಗಳಲ್ಲಿ ಹೆಚ್ಚಾಗಿದ್ದ ಕೊರೊನಾ ಸಾಂಕ್ರಾಮಿಕ ರೋಗ, ಇದೀಗ ಹಳ್ಳಿಗಳಿಗೂ ಕಾಲಿಟ್ಟಿದೆ. ಬೆಂಗಳೂರು ಮಹಾನಗರದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೆ ಜಿಲ್ಲೆಗಳಲ್ಲಿ ಸೋಂಕು ಸ್ಫೋಟಗೊಳ್ಳುತ್ತಿದೆ.

    ಯಾಕೆ ಹೆಚ್ಚಾಯ್ತು?
    ಆರಂಭದ ಹಂತದಲ್ಲಿ ಸರ್ಕಾರ ಕೇವಲ ಬೆಂಗಳೂರಿನತ್ತ ಗಮನವನ್ನು ಕೇಂದ್ರೀಕರಿಸಿತು. ಜಿಲ್ಲೆಗಳಿಗೆ ಬೆಂಗಳೂರಿನಿಂದ ಗುಳೆ ಹೊರಡುವ ಸಮಯದಲ್ಲಿ ಸರ್ಕಾರ ಗ್ರಾಮೀಣ ಭಾಗದಲ್ಲಿ ಟೆಸ್ಟಿಂಗ್ ಹೆಚ್ಚಿಸುವ ಗೋಜಿಗೆ ಹೋಗದೇ ಸುಮ್ಮನಾಯಿತು. ಹೀಗಾಗಿ ನಗರದತ್ತ ಇದ್ದ ಕೊರೊನಾ ಇದೀಗ ಹಳ್ಳಿಗಳಿಗಳಲ್ಲಿಯೂ ಹಬ್ಬುತ್ತಿದೆ.

    ಮಾರ್ಗಸೂಚಿ ಸಡಿಲಿಕೆ ಮಾಡಿದ್ದರಿಂದ ಉಸ್ತುವಾರಿ ಸಚಿವರುಗಳು ಆಯಾಯ ಜಿಲ್ಲೆಯ ಪರಿಸ್ಥಿತಿಯನ್ನು ಮನಕಂಡು ಟಫ್ ರೂಲ್ಸ್ ತರುವುದಕ್ಕೆ ಹೊರಟಿದ್ದರು. ಆದರೆ ಸರ್ಕಾರ ಆರ್ಥಿಕತೆಗೆ ಹೊಡೆತ ಬೀಳಬಹುದು ಎಂಬ ಕಾರಣ ನೀಡಿ ಟಫ್ ರೂಲ್ಸ್‍ಗೆ ಅವಕಾಶ ನೀಡಲಿಲ್ಲ.

    ಗ್ರಾಮೀಣ ಭಾಗದಲ್ಲಿ ಖಾಕಿ ಫೋರ್ಸ್‍ನ್ನು ಜನರನ್ನು ನಿಯಂತ್ರಿಸಲು ಇನ್ನಷ್ಟು ಹೆಚ್ಚಾಗಿ ಬಳಸಬೇಕಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಇಲ್ಲದೇ ಜನರು ಓಡಾಟ ನಡೆಸಿದರು. ಅಲ್ಲದೆ ಮದುವೆ ಸಮಾರಂಭಗಳಿಗೆ ಅವಕಾಶ ಕೊಂಡಿದ್ದರಿಂದ ಸ್ಥಳೀಯ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಹೆಚ್ಚಿನ ಜನ ಸೇರುತ್ತಿದ್ದರು.

    ಲಾಕ್‍ಡೌನ್ ಮೇಲೆ ನಿಗಾ ಇಡಲು ಜಿಲ್ಲಾಡಳಿತ ವಿಫಲವಾಗಿತ್ತು. ಇನ್ನೂ ಹೆಚ್ಚು ಕೇಸ್ ಇರುವ ಭಾಗದಲ್ಲಿ ಮಾರ್ಕೆಟ್‍ಗಳ ತೆರೆದಿದ್ದರಿಂದ ಜನರು ಹೆಚ್ಚಾಗಿ ಸೇರುತ್ತಿದ್ದರು. ಜಿಲ್ಲೆಗಳಲ್ಲಿ ಟೆಸ್ಟಿಂಗ್‍ನತ್ತ ಕೂಡ ಗಮನವೇ ಹರಿಸಿಲ್ಲ. ಟೆಸ್ಟಿಂಗ್ ಹೆಚ್ಚಿಸಬೇಕಾಗಿತ್ತು.

    ಪ್ರಾಥಮಿಕ ಸಂಪರ್ಕಿತರ ಟ್ರೇಸಿಂಗ್‍ನಲ್ಲಿ ಜಿಲ್ಲಾಡಳಿತ ಕೂಡ ಎಡವಿತು. ಈ ಎಲ್ಲಾ ಕಾರಣಗಳಿಂದ ನಗರಗಳಷ್ಟೇ ಅಲ್ಲದೆ ಹಳ್ಳಿಗಳಲ್ಲಿಯೂ ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

  • ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ರುದ್ರನರ್ತನ..!

    ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ರುದ್ರನರ್ತನ..!

    ಬೆಂಗಳೂರು: ಶತಮಾನದ ರೋಗವೊಂದು ಕಣ್ಮರೆಯಾಯ್ತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ತನ್ನ ರಣಾರ್ಭಟ ಮುಂದುವರಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸದ್ದಿಲ್ಲದೇ ಸ್ಫೋಟಗೊಳ್ಳುತ್ತಿದೆ. ಕೊರೊನಾ ಸೋಂಕು ಒಂದಕಿ ತಲುಪಿದ್ದ ನಗರಗಳಲ್ಲೂ ಮತ್ತೆ ಭಾರೀ ಅನಾಹುತ ತಂದೊಡ್ಡುವ ಲಕ್ಷಣಗಳು ಗೋಚರಗೊಳುತ್ತಿವೆ.

    ವಿಶ್ವವನ್ನೇ ಕಾಡುತ್ತಿರುವ ಹೆಮ್ಮಾರಿ ಕೊರೊನಾ ಈಗ ರಾಜ್ಯದಲ್ಲಿ 2ನೇ ಆಟವನ್ನು ಶುರು ಮಾಡಿದೆ. ಕರ್ನಾಟಕಕ್ಕೆ ಬೆಂಗಳೂರು ಅಲ್ಲದೆ ಮಹಾರಾಷ್ಟ್ರ, ಕೇರಳ ಗಡಿ ರಾಜ್ಯಗಳಿಂದಾಗಿ ಸೋಂಕಿನ ಪ್ರಕರಣಗಳು ಹೆಚ್ಚಾಗ್ತಿರೋದು ತೀವ್ರ ಆತಂಕಕ್ಕೆ ಕಾರಣವಾಗಿದೆ.

    ಶನಿವಾರ ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾಗಿದೆ. ಶನಿವಾರದ ಹೆಲ್ತ್ ಬುಲೆಟಿನ್‍ನಲ್ಲಿ ಕೊರೊನಾ ಅಂಕಿ ಅಂಶಗಳನ್ನ ನೋಡೋದಾದ್ರೆ

    ಇನ್ನುಳಿದಂತೆ ಬೀದರ್, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಬೆಳಗಾವಿ, ಬಳ್ಳಾರಿ ಕೇಸ್ ಏರಿಕೆ ಆಗಿದೆ. ಮಾರ್ಚ್ ನಲ್ಲಿ ಎರಡನೇ ಅಲೆ ಎಂಟ್ರಿಯಾಗುತ್ತೆ ಅನ್ನೋ ಮುನ್ಸೂಚನೆಯನ್ನು ತಜ್ಞರು ಕೊಟ್ಟಿದ್ರು. ಅದು ಈಗ ನಿಜವಾಗಿದೆ. ಬೆಂಗಳೂರು ನಂತರ ಉಡುಪಿಯಲ್ಲೇ ಹೆಚ್ಚು ಸೋಂಕು ಕಂಡುಬಂದಿವೆ. ಮಣಿಪಾಲ ಕ್ಯಾಂಪಸ್‍ನಲ್ಲಿ ಒಟ್ಟು 154 ಕೇಸುಗಳು ಪತ್ತೆಯಾಗಿವೆ. ಈಗಾಗಲೇ ಮಣಿಪಾಲ ವಿವಿಯ ಕ್ಯಾಂಪಸ್ಸನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಐಡಿ ಕಾರ್ಡ್ ಇದ್ದವರಿಗೆ ಮಾತ್ರ ಕ್ಯಾಂಪಸ್ ಎಂಟ್ರಿ ಕೊಡಲಾಗುತ್ತಿದೆ.

    ದೇಶದಲ್ಲಿ ಕೊರೊನಾಗೆ ಮೊದಲನೇ ಸಾವು ಕಂಡ ಕಲಬುರಗಿಯಲ್ಲೂ ಸೋಂಕು ಸ್ಫೋಟಗೊಳ್ಳುತ್ತಿದೆ. ಮೈಸೂರು-ಕೇರಳ ಗಡಿ ಭಾಗದಲ್ಲೂ ಕೂಡ ಕೊರೊನಾ ಟೆಸ್ಟಿಂಗ್ ಅಚ್ಚುಕಟ್ಟಾಗಿ ನಡೆಯಲೇ ಇಲ್ಲ. ಕೇರಳದಲ್ಲಿ ಪಾಸಿಟಿವ್ ಪ್ರಕರಣ ಹೆಚ್ಚಾದರೂ ಕೂಡ ಗಡಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸಲಿಲ್ಲ. ಇದರ ಪರಿಣಾಮವಾಗಿ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿವೆ. ಇತ್ತ ವಿಜಯಪು, ಚಿಕ್ಕೋಡಿಯಲ್ಲಿ ಮಹಾರಾಷ್ಟ್ರದಿಂದ ಕೋವಿಡ್ 19 ರಿಪೋರ್ಟ್ ಇಲ್ಲದೆ ಜನತೆ ಎಂಟ್ರಿ ಕೊಡ್ತಿರೋದು ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ.

    ಒಟ್ಟಾರೆ ಗಡಿ ಜಿಲ್ಲೆಗಳಲ್ಲಿ ಕೊರೋನಾ ಸ್ಪೀಡ್ ಜಾಸ್ತಿಯಾಗ್ತಿದೆ.. ಜಿಲ್ಲಾಡಳಿತಗಳು ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳಬೇಕಿದೆ.. ಇಲ್ಲವಾದಲ್ಲಿ ಕೊರೋನಾ ಮತ್ತಷ್ಟು ಸ್ಫೋಟಗೊಳ್ಳೋದು ಗ್ಯಾರಂಟಿ.

  • ಜಿಲ್ಲೆಗಳ ಬೇಡಿಕೆಗೆ ತಕ್ಕಂತೆ ಬಸ್‍ಗಳ ಸಂಚಾರ: KSRTC ಎಂಡಿ

    ಜಿಲ್ಲೆಗಳ ಬೇಡಿಕೆಗೆ ತಕ್ಕಂತೆ ಬಸ್‍ಗಳ ಸಂಚಾರ: KSRTC ಎಂಡಿ

    ಬೆಂಗಳೂರು: ಯಾವ್ಯಾವ ಜಿಲ್ಲೆಗಳಿಗೆ ಬೇಡಿಕೆ ಇದೆಯೋ ಬೇಡಿಕೆಗೆ ತಕ್ಕಂತೆ ಬಸ್‍ಗಳ ಸಂಚಾರ ಮಾಡುತ್ತೇವೆ ಎಂದು ಕೆ.ಎಸ್.ಆರ್.ಟಿ.ಸಿ ಎಂಡಿ ಶಿವಯೋಗಿ ಕಳಸದ್ ಅವರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ

    ಇಂದು ಸಭೆ ನಡೆಸಿ ನಾಲ್ಕನೇ ಹಂತದ ಲಾಕ್‍ಡೌನ್ ಮಾರ್ಗಸೂಚಿಯನ್ನು ಇಂದು ಮಧ್ಯಾಹ್ನ ಮಾಡಿದ ಬಿಎಸ್ ಯಡಿಯೂರಪ್ಪನವರು, ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಖಾಸಗಿ ಬಸ್‍ಗಳು, ಆಟೋ ಮತ್ತು ಟ್ಯಾಕ್ಸಿಗಳು ಓಡಾಡಲು ಅನುಮತಿ ನೀಡಿದ್ದಾರೆ. ಈ ವೇಳೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ.

    ಈಗ ಬಸ್ ಸಂಚಾರ ಮಾಡುವ ವಿಚಾರದ ಬಗ್ಗೆ ಮಾತನಾಡಿರುವ ಅವರು, ಯಾವ್ಯಾವ ಜಿಲ್ಲೆಗಳಿಗೆ ಬೇಡಿಕೆ ಇದೆಯೋ ಬೇಡಿಕೆಗೆ ತಕ್ಕಂತೆ ಬಸ್ ಗಳ ಬಸ್‍ಗಳನ್ನು ಬಿಡುತ್ತೇವೆ. ಆದರೆ ಡಿಮ್ಯಾಂಡ್ ಎಷ್ಟಿದೆ ಎಂದು ಗೊತ್ತಾಗುತ್ತಿಲ್ಲ. ಹೀಗಾಗಿ ಮೊದಲ ವಾರ ಪ್ರಾಥಮಿಕ ಹಂತದಲ್ಲಿ ಶೇ.20 ರಿಂದ 30 ರಷ್ಟು ಬಸ್ ಗಳು ಮಾತ್ರ ಕಾರ್ಯಚರಣೆ ಇಳಿಯುತ್ತವೆ. ಎರಡನೇ ವಾರದಲ್ಲಿ ಬಹುತೇಕ ಹೆಚ್ಚಿನ ಬಸ್‍ಗಳ ಬಿಡುತ್ತೇವೆ. ಈ ವೇಳೆ 30 ಸೀಟ್ ಗಳಿಗೆ ಮಾತ್ರ ಪ್ರಯಾಣಿಕರಿಗೆ ಅವಕಾಶ ಎಂದು ತಿಳಿಸಿದ್ದಾರೆ.

    ಬೆಂಗಳೂರಿನಿಂದ ಬೆಳಗಾವಿ ಬೀದರ್ ಗೆ ಹೋಗೋರಿಗೆ ಬೆಳಗ್ಗೆ 8 ಗಂಟೆಗೆ ವ್ಯವಸ್ಥೆ ಮಾಡಲಾಗಿದ್ದರೆ,  ಆ ಕಡೆಯಿಂದ ಬೆಂಗಳೂರಿಗೆ ಬರುವರಿರಿಗೆ ಬೆಳಿಗ್ಗೆ ಏಳುಗಂಟೆಗೆ ಬಸ್ ವ್ಯವಸ್ಥೆ ಮಾಡಲು ಸಾರಿಗೆ ಇಲಾಖೆ ಸಿದ್ಧತೆ ಮಾಡಿದೆ.