Tag: districts

  • ಮುಂದಿನ 4 ದಿನಗಳಲ್ಲಿ ಮತ್ತೆ ತೀವ್ರಗೊಳ್ಳಲಿದೆ ಮುಂಗಾರು ಮಳೆ

    ಮುಂದಿನ 4 ದಿನಗಳಲ್ಲಿ ಮತ್ತೆ ತೀವ್ರಗೊಳ್ಳಲಿದೆ ಮುಂಗಾರು ಮಳೆ

    ಬೆಂಗಳೂರು: ಎರಡ್ಮೂರು ದಿನಗಳಿಂದ ಸ್ವಲ್ಪ ತಣ್ಣಗಾಗಿದ್ದ ಮುಂಗಾರು ಮುಂದಿನ ನಾಲ್ಕು ದಿನಗಳಲ್ಲಿ ಮತ್ತೆ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ವಾರಾಂತ್ಯಕ್ಕೆ ಬೆಂಗಳೂರಲ್ಲಿ ಧಾರಾಕಾರ ಮಳೆಯಾಗಲಿದೆ. ಇನ್ನು ಜಿಲ್ಲಾವಾರು ಹೋಲಿಸಿದರೆ ಇಲ್ಲಿಯವರೆಗೆ ಹಾಸನದಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಸರಾಸರಿ 321 ಮಿಲಿ ಮೀಟರ್ ಮಳೆಯಾಗುತ್ತಿದ್ದ ಜಿಲ್ಲೆಯಲ್ಲಿ ಜೂನ್‍ನಲ್ಲಿ ಎರಡು ಪಟ್ಟು ಅಂದ್ರೆ 611 ಮಿಲಿ ಮೀಟರ್ ಮಳೆಯಾಗಿದೆ.

    ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜೂನ್‍ನಲ್ಲಿ ಕಲಬುರಗಿ ಅತೀ ಕಡಿಮೆ ಮಳೆ ಕಂಡ ಜಿಲ್ಲೆ ಎಂದು ಹೇಳಲಾಗಿದೆ.

  • ಮೈತ್ರಿ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಬಿಎಸ್‍ವೈ ಪ್ಲಾನ್!

    ಮೈತ್ರಿ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಬಿಎಸ್‍ವೈ ಪ್ಲಾನ್!

    – ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು 6 ತಂಡಗಳೊಂದಿಗೆ ಸಜ್ಜಾದ ಯಡಿಯೂರಪ್ಪ!

    ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ಲಾನ್ ಮಾಡಿದ್ದಾರೆ.

    ಯಡಿಯೂರಪ್ಪ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗುತ್ತಿದ್ದಾರೆ. ರಾಜ್ಯದ ರೈತರ ಸಮಗ್ರ ಸಮಸ್ಯೆಗಳನ್ನರಿಯಲು ಯಡಿಯೂರಪ್ಪ 6 ತಂಡಗಳನ್ನು ರಚಿಸಿದ್ದಾರೆ. ಇಂದಿನಿಂದ ಜೂನ್ 30 ವರೆಗೆ ಒಟ್ಟು 15 ದಿನಗಳ ಕಾಲ ರಾಜ್ಯಾದ್ಯಂತ ಆ 6 ತಂಡಗಳು ಪ್ರವಾಸ ಆರಂಭಿಸಲಿವೆ. ರೈತ ಮೋರ್ಚಾದ ಐದು ತಂಡಗಳಿಂದ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಲಿವೆ.

    ಪ್ರವಾಸ ಮಾಡಲಿರುವ ತಂಡಗಳು
    ತಂಡ 1 – ರಾಜ್ಯ ಬಿಜೆಪಿ ರೈತ ಮೋರ್ಚಾ ಅದ್ಯಕ್ಷ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಪ್ರವಾಸ ಮಾಡಲಿದ್ದು, ಈ ತಂಡ ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಬಾಗಲಕೋಟೆ, ವಿಜಯಪುರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತದೆ.

    ತಂಡ 2 – ಬಳ್ಳಾರಿ, ಬೀದರ್, ಕಲಬುರ್ಗಿ ನಗರ, ಕಲಬುರ್ಗಿ ಗ್ರಾಮಾಂತರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದು, ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯ ನಿರ್ವಹಿಸುತ್ತವೆ.

    ತಂಡ -3 – ಈಶ್ವರ ಚಂದ್ರ ಹೊಸಮನಿ ನೇತೃತ್ವದಲ್ಲಿ ಮೂರನೇ ತಂಡದ ಕಾರ್ಯ ನಿರ್ವಹಣೆ ಮಾಡುತ್ತದೆ. ಈ ತಂಡ ಹಾವೇರಿ, ಗದಗ, ಧಾರವಾಡ, ಧಾರವಾಡ ಗ್ರಾಮೀಣ, ಕೊಪ್ಪಳ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತವೆ.

    ತಂಡ -4 – ನಂಜುಂಡೇಗೌಡ ಅವರ ನೇತೃತ್ವದಲ್ಲಿ ನಾಲ್ಕನೇ ತಂಡದ ಪ್ರವಾಸ ಮಾಡಲಿದ್ದು, ಮೈಸೂರು ನಗರ, ಗ್ರಾಮಾಂತರ, ಹಾಸನ, ಕೊಡಗು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತವೆ.

    ತಂಡ 5 – ಪವಿತ್ರಾ ರಾಮಯ್ಯ ಅವರ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಲಿದ್ದು, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತವೆ.

    ತಂಡ 6 – ಶಿವಪ್ರಸಾದ್ ನೇತೃತ್ವದಲ್ಲಿ ಕೊನೆಯ 6ನೇ ತಂಡದ ಪ್ರವಾಸ ಮಾಡಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತವೆ.

    ತಂಡಗಳಿಗೆ ಯಡಿಯೂರಪ್ಪ ನೀಡಿದ ಟಾಸ್ಕ್:
    * ಸಾಲ ಮನ್ನಾಕ್ಕೆ ಆಗ್ರಹಿಸಿ ಮೈತ್ರಿ ಸರ್ಕಾರದ ವಿರುದ್ದ ರೈತರನ್ನು ಹುರಿದುಂಬಿಸಬೇಕು.
    * ಮೈತ್ರಿ ಸರ್ಕಾರ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಜನರಿಗೆ ಮನವರಿಕೆ ಮಾಡುವುದು.
    * ಆಯಾ ಜಿಲ್ಲೆಗಳಲ್ಲಿನ ರೈತರ ಮೂಲಭೂತ ಸಮಸ್ಯೆಗಳನ್ನು ಪಟ್ಟಿ ಮಾಡುವುದು.
    * ಪ್ರಧಾನಿ ನರೇಂದ್ರ ಮೋದಿ ರೈತರಿಗೆ ನೀಡಿರುವ ಯೋಜನೆಗಳ ಮನವರಿಕೆ ಮಾಡುವುದು.
    * ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲಿಸುವಂತೆ ರೈತರಿಗೆ ಮನವಿ ಮಾಡುವುದು.
    * ಪ್ರತಿ ಜಿಲ್ಲೆಗಳಲ್ಲಿ ರೈತ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಸುವುದು.

    ಆರು ತಂಡಗಳ ಕಾರ್ಯ ನಿರ್ವಹಣೆ:
    * ಬಿ.ಎಸ್.ವೈ ನೀಡಿರುವ ಟಾಸ್ಕ್ ಕಡ್ಡಾಯವಾಗಿ ಪೂರೈಸಲೇಬೇಕು.
    * ಪ್ರವಾಸದ ಸಂಪೂರ್ಣ ವರದಿ ರೈತ ಮೋರ್ಚಾ ಅದ್ಯಕ್ಷ ಲಕ್ಷ್ಮಣ ಸವದಿ ಕೈ ಸೇರಲಿದೆ.
    * ಲಕ್ಷ್ಮಣ ಸವದಿ ಸಂಪೂರ್ಣ ವರದಿಯನ್ನು ರೈತ ಮೋರ್ಚಾ ಉಸ್ತುವಾರಿ ರವಿಕುಮಾರ್ ಗೆ ನೀಡಬೇಕು.
    * ರೈತ ಮೋರ್ಚಾ ಉಸ್ತುವಾರಿ ಹೊತ್ತಿರುವ ರವಿಕುಮಾರ್.
    * ರವಿಕುಮಾರ್ ಸಂಪೂರ್ಣ ವರದಿಯನ್ನು ಯಡಿಯೂರಪ್ಪ ಕೈಗೊಪ್ಪಿಸಲಿದ್ದಾರೆ.

  • ರಾಜ್ಯದ 30 ಜಿಲ್ಲೆಗಳ ಮಣ್ಣಿನಿಂದ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆ

    ರಾಜ್ಯದ 30 ಜಿಲ್ಲೆಗಳ ಮಣ್ಣಿನಿಂದ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆ

    ಮಂಡ್ಯ: ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅಂತ್ಯಕ್ರಿಯೆ ಇಂದು ಹುಟ್ಟೂರು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ನಡೆಯಲಿದೆ. ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆಗೆ ಕ್ಯಾತನಹಳ್ಳಿ ಗ್ರಾಮದಲ್ಲಿರುವ 9 ಎಕರೆ ತೆಂಗಿನತೋಟದಲ್ಲಿ ಎಲ್ಲ ಸಿದ್ಧತೆಗಳು ನಡೆಯುತ್ತಿದೆ. ಗ್ರಾಮಸ್ಥರೆಲ್ಲಾ ಸೇರಿ ಗುಂಡಿ ತೆಗೆಯುತ್ತಿದ್ದಾರೆ.

    ಕ್ಯಾತನಹಳ್ಳಿ ಮೈದಾನದಿಂದ ಪಾರ್ಥಿವ ಶರೀರ ಬಂದ ನಂತರ ಅಂತ್ಯಕ್ರಿಯೆ ನಡೆಯಲಿದ್ದು, ರಾಜ್ಯದ 30 ಜಿಲ್ಲೆಗಳ ಮಣ್ಣಿನಿಂದ ಅಂತ್ಯಕ್ರಿಯೆ ನಡೆಸಲಿದ್ದಾರೆ. ರೈತ ಮುಖಂಡರು 30 ಜಿಲ್ಲೆಗಳಿಂದ ಮಣ್ಣು ತಂದಿದ್ದಾರೆ ಎಂದು ಕ್ಯಾತನಹಳ್ಳಿಯಲ್ಲಿ ಮಂಡ್ಯ ಜಿಲ್ಲಾ ರೈತ ಸಂಘದ ಅಧ್ಯಕ್ಷ ರೈತ ಸುರೇಶ್ ಗೌಡ ಹೇಳಿಕೆ ನೀಡಿದ್ದಾರೆ.

    ಸದ್ಯ ಕ್ಯಾತನಹಳ್ಳಿಯಲ್ಲಿರುವ ಪುಟ್ಟಣ್ಣಯ್ಯ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಇಡಲಾಗಿದೆ. ತಮ್ಮ ನೆಚ್ಚಿನ ಹೋರಾಟಗಾರನ ಅಂತಿಮ ದರ್ಶನಕ್ಕೆ ಅಭಿಮಾನಿಗಳು ಬರುತ್ತಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಬರುವವರಿಗೆ ಪುಟ್ಟಣ್ಣಯ್ಯ ಅಭಿಮಾನಿಗಳು ಕ್ಯಾತನಹಳ್ಳಿ ಸಂತೆ ಮೈದಾನದಲ್ಲಿ ತಿಂಡಿ-ಊಟದ ವ್ಯವಸ್ಥೆ ಮಾಡ್ತಿದ್ದಾರೆ. ಈ ಮೂಲಕವಾದ್ರೂ ಒಂದಷ್ಟು ಅನ್ನದ ಋಣ ತೀರಿಸ್ತೇವೆ ಅಂತಿದ್ದಾರೆ ಸುತ್ತಮುತ್ತಲಿನ ಹಳ್ಳಿಗಳ ರೈತರು.

    ಮಕ್ಕಳು ಮತ್ತು ಕುಟುಂಬ ಆಗಮನ ವಿಳಂಬ ಹಿನ್ನೆಲೆಯಲ್ಲಿ ಪುಟ್ಟಣ್ಣಯ್ಯ ಅಂತ್ಯಕ್ರಿಯೆ ವಿಳಂಬವಾಗಿತ್ತು. ಅಮೆರಿಕದ ಕ್ಯಾಲಿಫೋರ್ನಿಯಾದಿಂದ ಪುಟ್ಟಣ್ಣಯ್ಯ ತಮ್ಮ ಲೇಟ್ ರಮೇಶ್ ಪತ್ನಿ ಸುಜಾತ, ಮಕ್ಕಳಾದ ಮನು, ಮೋಹನ್ ಆಗಮಿಸಿದ್ದಾರೆ. ಯುಎಸ್‍ಎಯಿಂದ ಪುಟ್ಟಣ್ಣಯ್ಯರ ಎರಡನೇ ಮಗಳ ಕುಟುಂಬ ಮಗಳು ಅಕ್ಷತಾ, ಅಳಿಯ ಶ್ರೀನಿವಾಸ್ ಬಂದಿದ್ದಾರೆ. ಕೆನಡಾದಿಂದ ಪುಟ್ಟಣ್ಣಯ್ಯ ಸಹೋದರಿ ರೇಣುಕಾ, ಮೊದಲ ಮಗಳು ಸ್ಮಿತಾ ಹಾಗೂ ಅಳಿಯ ಬಾಲು ಆಗಮಿಸಿದ್ದಾರೆ.

    ಪುಟ್ಟಣ್ಣಯ್ಯ ಮೌಢ್ಯ ವಿರೋಧಿಯಾದ ಕಾರಣ ಯಾವುದೇ ವಿಧಿವಿಧಾನಗಳಿಲ್ಲದ ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ನಂತರ ತೆಂಗಿನ ತೋಟದಲ್ಲಿ ಅವರ ತಂದೆ ಮತ್ತು ತಾಯಿಯ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಪುಟ್ಟಣ್ಣಯ್ಯ ಎಲ್ಲರನ್ನೂ ಸಮನವಾಗಿ ಕಾಣುತ್ತಿದ್ದರು. ಹೀಗಾಗಿ ಅವರ ಪಾರ್ಥಿವ ಶರೀರಕ್ಕೆ ದಲಿತ ಮಹಿಳೆಯಿಂದ ಮೊದಲಿಗೆ ಪೂಜೆ ನಡೆಯಲಿದೆ ಎಂದು ಪಬ್ಲಿಕ್ ಟಿವಿಗೆ ಪುಟ್ಟಣ್ಣಯ್ಯ ಪುತ್ರ ದರ್ಶನ್ ಹೇಳಿದ್ದಾರೆ.

    ಇತ್ತ ಗಣ್ಯ ವ್ಯಕ್ತಿಗಳು ಮರಣದ ಬಳಿಕ ಶಾಲಾ ಕಾಲೇಜುಗಳಿಗೆ ರಜೆ ನೀಡೋದಕ್ಕೆ ಪುಟ್ಟಣ್ಣಯ್ಯ ವಿರೋಧಿಸ್ತಿದ್ರು. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿಲ್ಲ. ರಜೆ ನೀಡಿದರೆ ಮಕ್ಕಳ ಕಲಿಕೆಗೆ ತೊಂದರೆಯಾಗಲಿದೆ ಅನ್ನೋ ನಿಲುವು ಹೊಂದಿದ್ದ ಪುಟ್ಟಣ್ಣಯ್ಯ ಅವರ ನಿಲುವನ್ನ ಗೌರವಿಸಿ ನಾವು ರಜೆ ನೀಡುವುದು ಬೇಡ ಅನ್ನೊ ನಿರ್ಧಾರಕ್ಕೆ ಬರಲಾಯ್ತು ಅಂತ ಜಿಲ್ಲಾಧಿಕಾರಿ ಮಂಜುಳಾ ಹೇಳಿದ್ದಾರೆ.

  • ವರ್ಷಧಾರೆಗೆ ಮುಳುಗಿದ ಸಿಲಿಕಾನ್‍ಸಿಟಿ- ರಾಜ್ಯದ ಈ ಜಿಲ್ಲೆಗಳಲ್ಲೂ ಭರ್ಜರಿ ಮಳೆ

    ವರ್ಷಧಾರೆಗೆ ಮುಳುಗಿದ ಸಿಲಿಕಾನ್‍ಸಿಟಿ- ರಾಜ್ಯದ ಈ ಜಿಲ್ಲೆಗಳಲ್ಲೂ ಭರ್ಜರಿ ಮಳೆ

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ತಡರಾತ್ರಿಯೂ ಭರ್ಜರಿ ಮಳೆಯಾಗಿದೆ. ಒಮ್ಮೆ ಗುಡುಗು, ಮಿಂಚು ಸಮೇತ ಜೋರಾಗಿ ಬಂದ್ರೆ ಮತ್ತೊಮ್ಮೆ ಜಡಿಯಂತೆ ಹನಿದಿದೆ.

    ಇದ್ರಿಂದ ಸಿಲಿಕಾನ್ ಸಿಟಿ ಜನ ರಾತ್ರಿಯೆಲ್ಲಾ ಪರದಾಡುವಂತಾಗಿತ್ತು. ಅದರಲ್ಲೂ, ವಾಹನ ಸವಾರರು ಪರದಾಡುವಂತಾಗಿತ್ತು. ಮಳೆಗಾಲ ಅಂತ ಗೊತ್ತಿದ್ದರೂ ಪದೇ ಪದೇ ಅವಾಂತರಗಳು ಸೃಷ್ಟಿಯಾದ್ರೂ ಬೆಂಗಳೂರು ಮಹಾನಗರ ಪಾಲಿಕೆ, ಅಧಿಕಾರಿಗಳು, ಮತ್ತು ಸಚಿವರು ಎಚ್ಚೆತ್ತುಕೊಂಡಿಲ್ಲ.

    ಇದನ್ನೂ ಓದಿ: ಬೆಂಗಳೂರಿನಲ್ಲಿ ಶನಿವಾರ ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆಯಾಗಿದೆ?

    ಬೆಂಗಳೂರಿನಲ್ಲಿ ಎಲ್ಲಿ ನೋಡಿದರೂ ನೀರೋ ನೀರು. ರಸ್ತೆಗಳಲ್ಲಾ ನದಿಗಳಂತಾಗಿದ್ದವು. ಅಪಾರ್ಟ್‍ಮೆಂಟ್‍ಗಳು ಜಲಾವೃತವಾಗಿದ್ದವು. ದಕ್ಷಿಣ ಬೆಂಗಳೂರಿನ ಕೋರಮಂಗಲ, ಹೆಚ್‍ಎಸ್‍ಆರ್ ಲೇಔಟ್, ಸಿಲ್ಕ್‍ಬೋರ್ಡ್, ಬೇಗೂರು, ಬೆಳ್ಳಂದೂರು, ವರ್ತೂರು, ಓಫಾರಂ, ಚನ್ನಸಂದ್ರ, ವಿಶ್ವಪ್ರಿಯ ಲೇಔಟ್, ಎಸ್‍ಟಿ ಬೆಡ್ ಲೇಔಟ್, ಕಸ್ತೂರಿನಗರ, ವಿಜಯನಗರ, ಚಂದ್ರಾಲೇಔಟ್, ಜ್ಞಾನಭಾರತಿ, ಕಾಮಾಕ್ಷಿಪಾಳ್ಯ, ಅತ್ತ ಹೊಸಕೋಟೆ, ಆನೇಕಲ್, ನೆಲಮಂಗಲ ಈ ಎಲ್ಲಾ ಕಡೆ ಮಳೆ ಸುತ್ತಿ ಬಳಸಿ ಸುರಿದಿದೆ.

    ತಡರಾತ್ರಿ ಜಾರ್ಜ್ ಕೆಲ ಪ್ರದೇಶಗಳಲ್ಲಿ ಪರೀಶೀಲನೆ ನಡೆಸಿದ್ರು. ಇನ್ನು ಇವತ್ತೂ ಸಹ ಭರ್ಜರಿ ಮಳೆಯಾಗುತ್ತೆ ಅಂತ ಹವಾಮಾನ ಮುನ್ಸೂಚನೆ ನೀಡೋ ಖಾಸಗಿ ಸಂಸ್ಥೆ ಸ್ಕೈಮೇಟ್ ಹೇಳಿದೆ.

    ಇದನ್ನೂ ಓದಿ: ರಾತ್ರಿಯಿಡೀ ಸುರಿದ ಮಳೆಗೆ ಬೆಂಗ್ಳೂರು ತತ್ತರ- ಕೆರೆಯಂತಾದ ರಸ್ತೆಗಳು, ಮನೆಗಳಿಗೆ ನುಗ್ಗಿದ ನೀರು

    ಇತರ ಜಿಲ್ಲೆಯಲ್ಲಿ ಕೂಡ ಮಳೆರಾಯ ಶನಿವಾರ ಅವಾಂತರ ಸೃಷ್ಟಿಸಿದ್ದಾನೆ. ಕೋಲಾರ, ಚಿಕ್ಕಬಳ್ಳಾಪುರ, ನೆಲಮಂಗಲ, ರಾಮನಗರಗಳಲ್ಲಿ ಭರ್ಜರಿ ಮಳೆಯಾಗಿದೆ. ರಸ್ತೆಗಳೆಲ್ಲಾ ನದಿಗಳಂತಾಗಿವೆ. ಅತ್ತ, ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಬಿಸಿಲು ನಾಡು ವಿಜಯಪುರ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಶುರುವಾಗಿದೆ.

    ಮಹಾರಾಷ್ಟ್ರದ ಕೊಯ್ನಾ ಹಾಗೂ ಉಜನಿ ಜಲಾಶಯಗಳು ಉಕ್ಕಿ ಹರಿಯುತ್ತಿರುವುದರಿಂದ ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಮೂಡಿಸಿದೆ. ಭೀಮಾ ಹಾಗೂ ಕೃಷ್ಣಾ ನದಿಗಳು ಉಕ್ಕಿ ಹರಿಯುತ್ತಿದ್ದು ನದಿ ಪಾತ್ರದ ಗ್ರಾಮಸ್ಥರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಗಂಜಿ ಕೇಂದ್ರ ತೆರೆಯಲು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಗ್ರಾಪಂ ಪಿಡಿಓ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ; ಚಿಕಿತ್ಸೆಗಾಗಿ ಪ್ರವಾಹದಲ್ಲಿ ಪ್ರಾಣ ಪಣಕ್ಕಿಟ್ಟು ಈಜಿ ದಡ ಸೇರಿದ

    https://www.youtube.com/watch?v=3m0KvN-RWzE

    https://www.youtube.com/watch?v=iMerarHyDDY

    https://www.youtube.com/watch?v=y5yb_FnU7QA

    https://www.youtube.com/watch?v=cVXipXG6Isc

    https://www.youtube.com/watch?v=zRuiyxC3flQ

    https://www.youtube.com/watch?v=fgmuVSxeOYI