Tag: DJ Chakravarty

  • ‘ಹುಲಿ ನಾಯಕ’ ಮೋಷನ್ ಪೋಸ್ಟರ್ ರಿಲೀಸ್: ಕುತೂಹಲಕ್ಕೆ ಕಾರಣವಾದ ಪೋಸ್ಟರ್

    ‘ಹುಲಿ ನಾಯಕ’ ಮೋಷನ್ ಪೋಸ್ಟರ್ ರಿಲೀಸ್: ಕುತೂಹಲಕ್ಕೆ ಕಾರಣವಾದ ಪೋಸ್ಟರ್

    ಡಿ.ಜೆ ಚಕ್ರವರ್ತಿ (ಚಕ್ರವರ್ತಿ ಚಂದ್ರಚೂಡ) ನಿರ್ದೇಶನದಲ್ಲಿ ಮೂಡಿ ಬರಲಿರುವ ಹುಲಿ ನಾಯಕ ಸಿನಿಮಾದ ಮೋಷನ್ ಪೋಸ್ಟರ್  (Motion poster) ರಿಲೀಸ್ ಆಗಿದೆ. ಬಿಡುಗಡೆಯಾದ ಪೋಸ್ಟರ್ ನಲ್ಲಿ ಹತ್ತು ಹಲವು ಕೌತುಕದ ವಿಷಯಗಳು ತುಂಬಿವೆ. ವೀರ ಸಂಗೊಳ್ಳಿ ರಾಯಣ್ಣನ ಗಿಗಿ ಪದವನ್ನು ಬಳಸಿಕೊಂಡು ಅನ್ಯಾಯಕ್ಕೊಳಗಾದವರ ನ್ಯಾಯ ಕೇಳುತ್ತಿದ್ದಾರೆ ನಿರ್ದೇಶಕ. ಟ್ಯಾಗ್ ಲೈನ್ ಆಗಿ ಜಸ್ಟಿಸ್ ಫಾರ್ ಸೌಮ್ಯ ಎಂದು ಹೆಸರಿಟ್ಟಿದ್ದಾರೆ. ಹೀಗಾಗಿ ಈ ಸಿನಿಮಾದಲ್ಲಿ ಏನೆಲ್ಲ ವಿಷಯಗಳು ಇರಲಿವೆ ಎನ್ನುವುದು ಸದ್ಯಕ್ಕಿರುವ ಕ್ಯೂರಿಯಾಸಿಟಿ.

    ಹುಲಿ ನಾಯಕ ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. ಜನವರಿಯಿಂದ ಚಿತ್ರೀಕರಣಕ್ಕೆ ನಿರ್ದೇಶಕರು ಪ್ಲ್ಯಾನ್ ಮಾಡಿದ್ದು, ಅದಕ್ಕೂ ಮುನ್ನ ತಮ್ಮ ಚಿತ್ರದ ನಾಯಕನಿಗೆ ಭರ್ಜರಿ ತಯಾರಿಯನ್ನೂ ಮಾಡಿಸುತ್ತಿದ್ದಾರೆ ಚಕ್ರವರ್ತಿ. ಸಿನಿಮಾ ಶುರುವಾಗುವ ಮುನ್ನವೇ ಆಡಿಯೋ ರೈಟ್ಸ್ ಭರ್ಜರಿ ಮೊತ್ತಕ್ಕೆ ಸೇಲ್ ಆಗಿದ್ದು, ಚಿತ್ರದ ಬಗ್ಗೆ ಈಗಿನಿಂದಲೇ ಹೈಪ್ ಕ್ರಿಯೇಟ್ ಆಗುತ್ತಿದೆ.

    ವರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು ರಿಯಲ್ ಸ್ಟಾರ್ ಉಪೇಂದ್ರ (Upendra) ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್. ಡಿ ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ (DJ Chakravarty) ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ (Title) ಅನಾವರಣಗೊಳಿಸಿದ್ದರು.

    ಚಿತ್ರದ ಹೆಸರು ‘ಹುಲಿ ನಾಯಕ’ (Huli Nayaka) ಎಂದು ಘೋಷಣೆ ಮಾಡಿದ ಉಪೇಂದ್ರ, ಈ ಐತಿಹಾಸಿಕ ಚಿತ್ರ ಯಶಸ್ವಿಯಾಗಲಿ‌. ನಿರ್ದೇಶಕ ಡಿ.ಜೆ.ಚಕ್ರವರ್ತಿ, ನಿರ್ಮಾಪಕ ಮಂಜುನಾಥ್ ಹಾಗೂ ನಾಯಕ ಮಿಲಿಂದ್ ಗೌತಮ್ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದರು.

    ಅನ್ ಲಾಕ್  ರಾಘವ ನಂತರ ಮಿಲಿಂದ್ ಗೌತಮ್ (Milind Gautam) ಸತತ ಮೂರು ತಿಂಗಳುಗಳಿಂದ ಈ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಬೇರೆ ಬೇರೆ ನಿರ್ದೇಶಕರಿಗೆ ಹಲವು ಸಿನಿಮಾಗಳನ್ನು ಬರೆಯುತ್ತಿರುವ ಚಕ್ರವರ್ತಿ ಈ ಸಿನಿಮಾವನ್ನು ತಾವೇ ಬರೆದು ನಿರ್ದೇಶಿಸುತ್ತಿದ್ದಾರೆ.

     

    ಮಣಿಕಾಂತ್ ಕದ್ರಿ ಸಂಗೀತ, ಮಧು ತುಂಬನಕೆರೆ ಸಂಕಲನ, ಯೋಗೇಶ್ವರನ್ ಛಾಯಾಗ್ರಹಣ, ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಬಾಗೂರು, ಡಿಜಿಟಲ್ ಮಾರ್ಕೆಟಿಂಗ್ ಸುನೀಲ್ ಮಾನೆ, ಸಹ ನಿರ್ದೇಶಕರಾಗಿ ಚಂದ್ರಶೇಖರ ಮುದಬಾವಿ ಮುಂತಾದವರ ತಂಡವಿದೆ.

  • ಕಿಚ್ಚನ ಹುಟ್ಟು ಹಬ್ಬಕ್ಕೆ ‘ವೃಕ್ಷದೀಪ’ ಅಭಿಯಾನಕ್ಕೆ ಚಾಲನೆ

    ಕಿಚ್ಚನ ಹುಟ್ಟು ಹಬ್ಬಕ್ಕೆ ‘ವೃಕ್ಷದೀಪ’ ಅಭಿಯಾನಕ್ಕೆ ಚಾಲನೆ

    ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ 50ನೇ ಹುಟ್ಟುಹಬ್ಬದ ಸಡಗರ. ಇದೇ ಸಂದರ್ಭದಲ್ಲಿ ಪತ್ರಕರ್ತ, ನಟ ಹಾಗೂ ನಿರ್ದೇಶಕ ಡಿ.ಜೆ ಚಕ್ರವರ್ತಿ (ಚಂದ್ರಚೂಡ್) (Sudeep), ‘ವೃಕ್ಷದೀಪ’ (Vrikshadeepa) ಎಂಬ ಹೆಸರಿನಲ್ಲಿ ಒಂದು ಲಕ್ಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇತ್ತೀಚೆಗೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ವೃಕ್ಷದೀಪ ಅಭಿಯಾನಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ‘ಅಭಿನಯ ತಿಲಕ’ ಎಂಬ ಅಭಿಮಾನದ ಹಾಡನ್ನು ಚಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಬಿಡುಗಡೆ ಮಾಡಿದರು. ಶಾಸಕ ರಾಜು ಗೌಡ ನಾಯಕ, ವೀರಕಪುತ್ರ ಶ್ರೀನಿವಾಸ್ ಸೇರಿದಂತೆ ಅನೇಕ ಗಣ್ಯರು  ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ನಿರ್ಮಿಸುತ್ತಿರುವ, ಡಿ.ಜೆ.ಚಕ್ರವರ್ತಿ (DJ Chakravarty) ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸುತ್ತಿರುವ ‘ಹುಲಿ ನಾಯಕ’ (Huli Nayaka) ಚಿತ್ರದ ಮೋಷನ್ ಪೋಸ್ಟರನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು. ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಕಿಚ್ಚ ಸುದೀಪ್, ಚಕ್ರವರ್ತಿ ಬಿಗ್ ಬಾಸ್ ನಿಂದ ನನಗೆ ಹತ್ತಿರವಾದರು. ಆತ  ಅದ್ಭುತ ರೈಟರ್. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹುಲಿನಾಯಕ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಇದನ್ನೂ ಓದಿ:Bigg Boss Kannada 10 ಪ್ರೋಮೋ ಔಟ್- ಈ ಬಾರಿ ಸಮ್‌ಥಿಂಗ್ ಸ್ಪೆಷಲ್

    ವೃಕ್ಷದೀಪ ಅಭಿಯಾನಕ್ಕೆ ಚಾಲನೆ ನೀಡಿದ ಎಲ್ಲಾ ಗಣ್ಯರಿಗೆ, ಹಾಡು ಬಿಡುಗಡೆ ಮಾಡಿಕೊಟ್ಟ ಸ್ವಾಮೀಜಿ ಅವರಿಗೆ ಹಾಗೂ ಹುಟ್ಟುಹಬ್ಬದ ಸಡಗರದಲ್ಲಿದ್ದರೂ ನಮ್ಮ ಕಾರ್ಯಕ್ರಮಕ್ಕೆ ಆಗಮಿಸಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಕಿಚ್ಚ ಸುದೀಪ್ ಅವರಿಗೆ ನನ್ನ ಧನ್ಯವಾದ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಿಂಧೂರ ವೀರ ಲಕ್ಷ್ಮಣ ನಾಯಕ ಅವರ ಕುರಿತಾದ ಈ ಚಿತ್ರವನ್ನು ಮಂಜುನಾಥ್ ಅವರು ನಿರ್ಮಿಸುತ್ತಿದ್ದಾರೆ‌. ಮಿಲಿಂದ್ ಗೌತಮ್ ನಾಯಕರಾಗಿ ನಟಿಸುತ್ತಿದ್ದಾರೆ‌. ನಾನು ನಿರ್ದೇಶನ ಮಾಡುತ್ತಿದ್ದೇನೆ‌. ಇಂದು ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಹೆಚ್ಚು ಮಾಹಿತಿ ನೀಡುತ್ತೇನೆ ಎಂದು ಡಿ.ಜೆ ಚಕ್ರವರ್ತಿ ತಿಳಿಸಿದರು.

    ಚಕ್ರವರ್ತಿ ಅವರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಸುದೀಪ್ ಅವರು ನಮ್ಮ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ನನ್ನ ಮಗ ಮಿಲಿಂದ್ ಗೌತಮ್ ನಾಯಕನಾಗಿ ನಟಿಸುತ್ತಿದ್ದಾನೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಮಂಜುನಾಥ್. ನಮ್ಮ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಸರ್ ಅವರಿಗೆ ನಾನು ಆಭಾರಿ. ಉತ್ತಮ ಕಥೆ ಆಯ್ಕೆ ಮಾಡಿಕೊಂಡಿರುವ ಚಕ್ರವರ್ತಿ ಅವರಿಗೆ ಧನ್ಯವಾದ ಎಂದರು ನಾಯಕ ಮಿಲಿಂದ್ ಗೌತಮ್.

    ಇದೇ ಸಂದರ್ಭದಲ್ಲಿ ಡಾಲಿ ಧನಂಜಯ, ನೆನಪಿರಲಿ ಪ್ರೇಮ್, ವಸಿಷ್ಠ ಸಿಂಹ, ಪೂಜಾ ಗಾಂಧಿ, ಸಂಜನಾ ಗಲ್ರಾನಿ ಮುಂತಾದ ಕಲಾವಿದರು ಸೇರಿ ಸಿಂಧೂರ  ಲಕ್ಷ್ಮಣ್ ನಾಯಕ ಅವರ ಕುಟುಂಬದವರನ್ನು ಹಾಗೂ ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ ಅವರನ್ನು ಸನ್ಮಾನಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಹುಲಿ ನಾಯಕ’ನಿಗೆ ಡಿ.ಜೆ.ಚಕ್ರವರ್ತಿ ಡೈರೆಕ್ಷನ್ : ಟೈಟಲ್ ಅನಾವರಣ ಮಾಡಿದ ಉಪ್ಪಿ

    ‘ಹುಲಿ ನಾಯಕ’ನಿಗೆ ಡಿ.ಜೆ.ಚಕ್ರವರ್ತಿ ಡೈರೆಕ್ಷನ್ : ಟೈಟಲ್ ಅನಾವರಣ ಮಾಡಿದ ಉಪ್ಪಿ

    ರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು ರಿಯಲ್ ಸ್ಟಾರ್ ಉಪೇಂದ್ರ (Upendra) ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್. ಡಿ ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ (DJ Chakravarty) ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ (Title) ಅನಾವರಣಗೊಳಿಸಿದ್ದಾರೆ.

    ಚಿತ್ರದ ಹೆಸರು ‘ಹುಲಿ ನಾಯಕ’ (Huli Nayaka) ಎಂದು ಘೋಷಣೆ ಮಾಡಿದ ಉಪೇಂದ್ರ, ಈ ಐತಿಹಾಸಿಕ ಚಿತ್ರ ಯಶಸ್ವಿಯಾಗಲಿ‌. ನಿರ್ದೇಶಕ ಡಿ.ಜೆ.ಚಕ್ರವರ್ತಿ, ನಿರ್ಮಾಪಕ ಮಂಜುನಾಥ್ ಹಾಗೂ ನಾಯಕ ಮಿಲಿಂದ್ ಗೌತಮ್ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ:ಧನ್ಯಾ, ಶರ್ಮಿಳಾ ಮಾಂಡ್ರೆ ಜೊತೆ ದಿಗಂತ್ ಡ್ಯುಯೇಟ್

    ಅನ್ ಲಾಕ್  ರಾಘವ ನಂತರ ಮಿಲಿಂದ್ ಗೌತಮ್ (Milind Gautam) ಸತತ ಮೂರು ತಿಂಗಳುಗಳಿಂದ ಈ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಬೇರೆ ಬೇರೆ ನಿರ್ದೇಶಕರಿಗೆ ಹಲವು ಸಿನಿಮಾಗಳನ್ನು ಬರೆಯುತ್ತಿರುವ ಚಕ್ರವರ್ತಿ ಈ ಸಿನಿಮಾವನ್ನು ತಾವೇ ಬರೆದು ನಿರ್ದೇಶಿಸುತ್ತಿದ್ದಾರೆ.

    ಮಣಿಕಾಂತ್ ಕದ್ರಿ ಸಂಗೀತ, ಮಧು ತುಂಬನಕೆರೆ ಸಂಕಲನ, ಯೋಗೇಶ್ವರನ್ ಛಾಯಾಗ್ರಹಣ, ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಬಾಗೂರು, ಡಿಜಿಟಲ್ ಮಾರ್ಕೆಟಿಂಗ್ ಸುನೀಲ್ ಮಾನೆ, ಸಹ ನಿರ್ದೇಶಕರಾಗಿ ಚಂದ್ರಶೇಖರ ಮುದಬಾವಿ ಮುಂತಾದವರ ತಂಡವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]