Tag: dk shivakuar

  • ಪರಿಷತ್‍ನಿಂದ ಕಾಂಗ್ರೆಸ್ ಸದಸ್ಯರನ್ನ ಅಮಾನತುಗೊಳಿಸಿದ್ದು ಕೆಟ್ಟ ಪದ್ದತಿ: ಡಿಕೆ ಶಿವಕುಮಾರ್

    ಪರಿಷತ್‍ನಿಂದ ಕಾಂಗ್ರೆಸ್ ಸದಸ್ಯರನ್ನ ಅಮಾನತುಗೊಳಿಸಿದ್ದು ಕೆಟ್ಟ ಪದ್ದತಿ: ಡಿಕೆ ಶಿವಕುಮಾರ್

    ಬೆಳಗಾವಿ: ಪರಿಷತ್‍ನಿಂದ ಕಾಂಗ್ರೆಸ್ ಸದಸ್ಯರನ್ನ ಅಮಾನತುಗೊಳಿಸಿದ್ದು ಕೆಟ್ಟ ಪದ್ದತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

    ಪರಿಷತ್‍ನಿಂದ ಕಾಂಗ್ರೆಸ್‍ನ 15 ಸದಸ್ಯರನ್ನು ಅಮಾನತುಗೊಳಿಸಿದ ಹಿನ್ನೆಲೆ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೆ ಪಾರ್ಲಿಮೆಂಟ್‍ನಲ್ಲಿ ಮಾಡಿದ್ದಂತೆ ಇಲ್ಲಿಯೂ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಮಾರಕವಾಗಿದ್ದು, ಕಾಂಗ್ರೆಸ್ ಪಕ್ಷದವರು ಇದನ್ನ ತೀವ್ರವಾಗಿ ಖಂಡಿಸುತ್ತೇವೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನ

    ಈ ಕುರಿತಂತೆ ನಾಳೆ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಚರ್ಚೆ ಮಾಡುತ್ತೇವೆ. ನಾನು ಯಾರ ಬಗ್ಗೆಯೂ ಮಾತನಾಡೋದಿಲ್ಲ. ಆರೋಪಗಳು ಬಂದ ಸದಸ್ಯರ ಮೇಲೆ ಹಿಂದೆ ಸದನದಲ್ಲಿ ಚರ್ಚೆ ಮಾಡಿಲ್ಲವೆ? ಕಾನೂನು ಪ್ರಕಾರ ನೋಟಿಸ್ ಕೊಡಬೇಕು ಎಂದರು. ಇದನ್ನೂ ಓದಿ: ಕಲಾಪಕ್ಕೆ ಅಡ್ಡಿ- ವಿಧಾನ ಪರಿಷತ್‌ನ 15 ಕಾಂಗ್ರೆಸ್ ಸದಸ್ಯರು ಅಮಾನತು‌

    ಉತ್ತರ ಹೇಳಿ ನಾವು ಆರೋಪಿ ಅಂತ ಹೇಳಿದ್ದವಾ? ಯಡಿಯೂರಪ್ಪನವರ ಮೇಲೆ ಕೇಸ್ ಆಯ್ತು ಅವರು ಜೈಲಿಗೆ ಹೋದ ತಕ್ಷಣ ಆರೋಪಿಯಾದರಾ? ಅಕ್ರಮ ಮಾಡಿದ ಸಚಿವರ ಮೇಲೆ ಗಂಭೀರ ಆರೋಪ ಬಂದಾಗ ಹಿಂದೆ ಯಾವ ರೀತಿ ನಡೆದುಕೊಂಡಿದ್ದರೋ ಅದೇ ರೀತಿ ನಡೆದುಕೊಳ್ಳಬೇಕು ಎಂದು ಹೇಳಿದರು.

  • ಹೈಕಮಾಂಡ್‍ನಿಂದ ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಫರ್

    ಹೈಕಮಾಂಡ್‍ನಿಂದ ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಫರ್

    ಬೆಂಗಳೂರು: ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.

    ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ ವಿಷಯ ಡಿಕೆಶಿ ಕಿವಿಗೆ ತಲುಪಿಸುವ ಪ್ರಯತ್ನ ನಡೆದಿದೆ. ಆದರೆ ಇದಕ್ಕೆ ಒಪ್ಪದ ಡಿಕೆಶಿ ಸದ್ಯಕ್ಕೆ ಯಾವುದೆ ಜವಾಬ್ದಾರಿ ಬೇಡ ಎಂದಿದ್ದಾರೆ ಎಂದು ತಿಳಿದುಬಂದಿದೆ.

    ಸದ್ಯಕ್ಕೆ ಯಾವುದೇ ಚುನಾವಣೆ ಇಲ್ಲ. ಆದ್ದರಿಂದ ಪಕ್ಷದ ನೇತೃತ್ವ ವಹಿಸುವಂತಹ ಮಹತ್ತರ ಜವಾಬ್ದಾರಿ ಈಗ ಬೇಡ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಅಲ್ಲದೆ ತಮ್ಮದೇ ಆದ ಕೆಲವು ಸಮಸ್ಯೆಗಳಿವೆ. ಆದ್ದರಿಂದ ಬೇಡವೆಂದು ಹೇಳಿದ್ದಾರೆ ಎನ್ನಲಾಗಿದೆ.

    ಐಟಿ, ಇಡಿ ಸಂಕಷ್ಟದಲ್ಲಿರುವ ಡಿಕೆಶಿಗೆ ಸದ್ಯಕ್ಕೆ ಯಾವುದೇ ಜವಾಬ್ದಾರಿ ಬೇಡ ಅನ್ನಿಸಿದ್ಯಾ ಗೊತ್ತಿಲ್ಲ. ಆದರೆ ಸದ್ಯದ ಮಟ್ಟಿಗೆ ಪಕ್ಷದ ಜವಾಬ್ದಾರಿ ಬೇಡ. ಸಚಿವನಾಗಿಯೇ ಮುಂದುವರಿಯುತ್ತೇನೆ ಎಂದಿದ್ದಾರೆ.

    ಒಂದು ಕಾಲದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದ ಡಿಕೆಶಿ, ಇದೀಗ ಹೈಕಮಾಂಡ್ ಮನಸ್ಸು ಮಾಡಿದರೂ ಸ್ಥಾನ ಬೇಡವೇ ಬೇಡ ಅನ್ನುವ ಮೂಲಕ ಪಕ್ಷದ ನಾಯಕರ ಹುಬ್ಬೇರಿಸುವಂತೆ ಮಾಡಿದ್ದಾರೆ.