Tag: DK Shivakuma

  • ಬಿಜೆಪಿ ಸರ್ಕಾರ ಜನತೆಗೆ ಬೂದಿ ಆಶೀರ್ವಾದ ಮಾಡಿದೆ: ಡಿ.ಕೆ.ಶಿ

    ಬಿಜೆಪಿ ಸರ್ಕಾರ ಜನತೆಗೆ ಬೂದಿ ಆಶೀರ್ವಾದ ಮಾಡಿದೆ: ಡಿ.ಕೆ.ಶಿ

    ರಾಯಚೂರು: ಕೊರೊನಾದಿಂದ ಸತ್ತವರ ಮನೆಗೆ ಬಿಜೆಪಿ ನಾಯಕರು ಯಾರೂ ಹೋಗಲಿಲ್ಲ. 4 ಲಕ್ಷ ಜನ ಕೊರೊನಾಗೆ ಬಲಿಯಾಗಿದ್ದಾರೆ. ಜನರಿಗೆ ಬಿಜೆಪಿ ಸರ್ಕಾರ ಏನು ಆಶೀರ್ವಾದ ಮಾಡಿದೆ. ಜನ ಸತ್ತಿರುವ ಬೂದಿ ನೋಡಿದವಲ್ಲಾ ಇದೇನಾ ಆಶೀರ್ವಾದ. ಬಿಜೆಪಿ ಸರ್ಕಾರ ಜನರಿಗೆ ಬೂದಿ ಆಶೀರ್ವಾದ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

    ರಾಯಚೂರಿನಲ್ಲಿ ಕಲಬುರಗಿ ವಿಭಾಗೀಯ ಮಟ್ಟದ ಕಾಂಗ್ರೆಸ್ ಸಭೆ ಬಳಿಕ ಮಾತನಾಡಿದ ಅವರು, ಸರ್ಕಾರ ಔಷಧಿ, ಗೋಧಿ, ಆಸ್ಪತ್ರೆ ಬೆಡ್ ಕೊಟ್ಟು ಆಶೀರ್ವಾದ ಮಾಡಲಿಲ್ಲ. ಸಿಎಂ ಯಾಕೆ ಬದಲಾವಣೆ ಮಾಡಿದ್ದಾರೆ ಅಂತ ಬಿಜೆಪಿ ಅವರು ಹೇಳಬೆಕು. ಕೇಂದ್ರ ಆರೋಗ್ಯ ಸಚಿವರನ್ನ ಯಾಕೆ ತೆಗೆದ್ರು ಅಂತ ಬಿಜೆಪಿಯವರೇ ಹೇಳಬೇಕು. ಸಭೆಯಲ್ಲಿ ವಿಭಾಗೀಯ ಮಟ್ಟದ ನಾಯಕರಿಗೆ ಟಾರ್ಗೆಟ್ ಕೊಟ್ಟಿದ್ದೇವೆ. ಟಾರ್ಗೆಟ್ ಏನಂದ್ರೆ 75 ವರ್ಷದ ಸ್ವಾತಂತ್ರ್ಯ ಹಿನ್ನೆಲೆ ಇಡೀ ವರ್ಷ ಆಚರಣೆ ಮಾಡುವುದು. ಕಾಂಗ್ರೆಸ್ ಮಾತ್ರವಲ್ಲದೆ ಎಲ್ಲರನ್ನ ಒಳಗೊಂಡು ಕಾರ್ಯಕ್ರಮಗಳನ್ನ ರೂಪಿಸಬೇಕು. ಒಂದೊಂದು ತಿಂಗಳು ಒಂದೊಂದು ಹೆಸರಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ:  ಶೋಭಾ ಕರಂದ್ಲಾಜೆ ಎದುರೇ ಸಿದ್ದರಾಮಯ್ಯಗೆ ಜೈಕಾರ ಕೂಗಿದ ವ್ಯಕ್ತಿ

     

    ಅಕ್ಟೋಬರ್ ತಿಂಗಳಲ್ಲಿ ಗಾಂಧಿ ನೆನಪಲ್ಲಿ ಪ್ರತಿ ಪಂಚಾಯತಿಯಲ್ಲಿ ಸಭೆ. ನವೆಂಬರ್ ನೆಹರು ಜನ್ಮದಿನ ಹಿನ್ನೆಲೆ ಪ್ರಜಾಪ್ರಭುತ್ವ ಕುರಿತು ಜಾಗೃತಿ. ಡಿಸೆಂಬರ್ ತಿಂಗಳು ಕಾಂಗ್ರೆಸ್ ಸಂಸ್ಥಾಪನಾ ದಿನ ಹಿನ್ನೆಲೆ ಕಾರ್ಯಕ್ರಮಗಳನ್ನ ರೂಪಿಸುತ್ತಿದ್ದೇವೆ. ಎಲ್ಲಾ ಕಾರ್ಯಕರ್ತರಿಗೂ ಕೆಲಸ ಹಂಚುತ್ತಿದ್ದೇವೆ. ನಿಷ್ಕ್ರಿಯ ಇದ್ದವರು ಕೆಲಸ ಮಾಡುವವರಿಗೆ ಅವಕಾಶ ಕೊಡಬೇಕು ಅನ್ನೋ ಸಂದೇಶ ನೀಡಿದ್ದೇವೆ ಅಂತ ಡಿ.ಕೆ.ಶಿವಕುಮಾರ್ ಹೇಳಿದರು.

  • ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ: ಡಿಕೆಶಿ

    ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ: ಡಿಕೆಶಿ

    ಬೆಂಗಳೂರು: ರಾಜ್ಯ ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ.ಅವರಿಗೆ ಬೀಗ ಗಿಫ್ಟ್ ಮಾಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಕೇಂದ್ರ ಜಲ ಸಚಿವ ಶೇಖಾವತ್ ಬೆಂಗಳೂರಿಗೆ ಬಂದಿದ್ದಾರೆ. ಭೂಮಿ ಪೂಜೆ ಪಿಕ್ಸ್ ಮಾಡ್ತಾರೆ ಅಂತ ನಂಬಿದ್ದೇವೆ. ಟೆಂಡರ್ ವಿಷಯ ಆಮೇಲೆ ನೋಡೋಣ. ಎಲ್ಲಾ ಕ್ಲಿಯರ್ ಆಗಿದೆ. ಪರಿಸರ ಇಲಾಖೆ ಹಾಗೂ ಮತ್ತೆಲ್ಲಾ ಕ್ಲಿಯರ್ನ್ಸ್ ಆಗಿರಬಹುದು. ಅವರದ್ದೇ ಸರ್ಕಾರ ಇದೆ, ಆದಷ್ಟು ಬೇಗ ಒಳ್ಳೆ ಕೆಲಸ ಮಾಡಲಿ. ಡಬಲ್ ಇಂಜಿನ್ ಸರ್ಕಾರ ಬಂದರೆ ಎಲ್ಲಾ ಕೆಲಸ ಮಾಡುತ್ತೇವೆ ಎಂದು ಹೇಳಿದ್ದರು. ಇದೇನೂ ಸಪರೇಟ್ ಸರ್ಕಾರ ಅಲ್ಲ. ಶೇಖಾವತ್ ಅವರು ಈ ಹಿಂದೆ ಒಳ್ಳೆ ಕೆಲಸ ಮಾಡಿದ್ದಾರೆ. ಬೇರೆ ರಾಜ್ಯಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ.ನಮ್ಮ ರಾಜ್ಯದಲ್ಲೂ ಮಾಡಲಿ ಎಂದಿದ್ದಾರೆ. ಇದನ್ನೂ ಓದಿ: ಮತ್ತೆ ಒಂದಾದ ದರ್ಶನ್, ಉಮಾಪತಿ

    ಕರ್ನಾಟಕದ ಎಂಪಿ ಗಳು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಏನೇನು ಟೆಂಡರ್ ಕರೆದಿದ್ದಾರೆ ಎಂದು ಮಾಹಿತಿ ಕೇಳಿದ್ದೀನಿ. ಮಾಹಿತಿ ಪಡೆದು ಅಸೆಂಬ್ಲಿಯಲ್ಲಿ ಮಾತಾನಾಡುತ್ತೇನೆ ಬಿಜೆಪಿ ಸಂಸದರುಗಳ ಬಾಯಿಗೆ ಬೀಗ ಹಾಕಿ ಕೊಂಡಿದ್ದಾರೆ. ಅವರ ಬಾಯಿಗೆ ಒಂದು ಬೀಗ ಗಿಫ್ಟ್ ಮಾಡಬೇಕು ಎಂದು ವ್ಯಂಗ್ಯಮಾಡಿದ್ದಾರೆ. ಇದನ್ನೂ ಓದಿ: ಅವತ್ತು ನಂದಿನಿ, ಇವತ್ತು ಅರುಣಾ ಕುಮಾರಿ – ಮಹಿಳೆಯೇ ಮೋಸಗಾತಿ ಅಂದ್ರು ನಾಗವರ್ಧನ್

    ರಾಜ್ಯದಲ್ಲಿ ಜನ ಸಂಖ್ಯೆ ನಿಯಂತ್ರಣ ಕಾಯ್ದೆ ಜಾರಿ ಹೇಳಿಕೆ ವಿಚಾರವಾಗಿ ಸಿಟಿ ರವಿ ನೀಡಿದ್ದ ಹೇಳಿಕೆ ಕುರಿತಾಗಿ ಡಿಕೆಶಿ ವ್ಯಂಗ್ಯ ಮಾಡಿದ್ದಾರೆ. ಸಿ.ಟಿ.ರವಿ ರಾಷ್ಟ್ರೀಯ ನಾಯಕರು ನಾನು ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಅವರು ದೊಡ್ಡವರು ಏನ್ ಹೇಳಿದರು ನಡೆಯುತ್ತದೆ. ದೇಶದ ಬಗ್ಗೆ ದೊಡ್ಡದಾಗಿ ಮಾತನಾಡ್ತಾರೆ. ಮೊದಲು ಅಸೆಂಬ್ಲಿಯಲ್ಲಿ ಬಿಲ್ ಮಂಡನೆ ಮಾಡಲಿ ಎಂದಿದ್ದಾರೆ.