Tag: Docters

  • ಟ್ರಕ್‌ಗೆ ಸ್ಕಾರ್‌ಪಿಯೊ ಡಿಕ್ಕಿ – ಭೀಕರ ಅಪಘಾತಕ್ಕೆ ಐವರು ವೈದ್ಯರ ದುರ್ಮರಣ

    ಟ್ರಕ್‌ಗೆ ಸ್ಕಾರ್‌ಪಿಯೊ ಡಿಕ್ಕಿ – ಭೀಕರ ಅಪಘಾತಕ್ಕೆ ಐವರು ವೈದ್ಯರ ದುರ್ಮರಣ

    ಲಕ್ನೋ: ಸ್ಕಾರ್‌ಪಿಯೊ ಎಸ್‌ಯುವಿ (Scorpio SUV) ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯರು ಸಾವನ್ನಪ್ಪಿರುವ ಘಟನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇನಲ್ಲಿ (Agra Lucknow Express Way) ನಡೆದಿದೆ.

    ಮೃತಪಟ್ಟವರು ಉತ್ತರ ಪ್ರದೇಶದ (Uttar Pradesh) ವೈದ್ಯಕೀಯ ವಿಜ್ಞಾನ ವಿವಿಯಲ್ಲಿ ಸ್ನಾತಕೋತರ ತರಬೇತಿ ಪಡೆದ ವೈದ್ಯರು. ದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.ಇದನ್ನೂ ಓದಿ: ಕೇಂದ್ರದಿಂದ ಅನುದಾನ ತಂದು ಸಂಪನ್ಮೂಲ ಹೆಚ್ಚಿಸಿಕೊಳ್ತೇವೆ – ಪರಮೇಶ್ವರ್‌

    ಮೃತರನ್ನು ಆಗ್ರಾ ಮೂಲದ ಡಾ. ಅನಿರುದ್ಧ್ ವರ್ಮಾ (29), ಭದೋಹಿಯ ಡಾ. ಸಂತೋಷ್ ಕುಮಾರ್ ಮೌರ್ಯ (46), ಕನೌಜ್‌ನ ಡಾ. ಅರುಣ್ ಕುಮಾರ್ (34) ಮತ್ತು ಬರೇಲಿಯ ಡಾ. ನಾರ್ದೇವ್ (35) ನಾಲ್ವರು ವೈದ್ಯರಾಗಿದ್ದು ಹಾಗೂ ಇನ್ನೋರ್ವನ್ನು ಲ್ಯಾಬ್ ಟೆಕ್ನಿಷಿಯನ್ ಡಾ. ಜೈವೀರ್ ಸಿಂಗ್ (38) ಎಂದು ಗುರುತಿಸಲಾಗಿದೆ.

    ಪೊಲೀಸರ ಮಾಹಿತಿ ಪ್ರಕಾರ, ಅತಿವೇಗವಾಗಿ ಕಾರು ಚಾಲನೆ ಮಾಡುತ್ತಿದ್ದರಿಂದ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಕ್ಕದಲ್ಲಿದ್ದ ಟಕ್ರ‍್ಗೂ ಡಿಕ್ಕಿ ಹೊಡೆದಿದೆ ಎಂದು ತಿಳಿಸಿದ್ದಾರೆ.

    ಮೃತಪಟ್ಟವರನ್ನು ಹೊರತುಪಡಿಸಿ ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಚಿಕಿತ್ಞೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜಾನ್ಸ್ ಟಿನ್ನಿಸ್‌ವುಡ್ 112ನೇ ವಯಸ್ಸಿನಲ್ಲಿ ನಿಧನ

  • ದರ್ಶನ್ ಎಡಗಾಲಿಗೂ ಸಮಸ್ಯೆ – ಫಿಜಿಯೋಥೆರಪಿನಾ? ಆಪರೇಷನ್‌ನಾ?

    ದರ್ಶನ್ ಎಡಗಾಲಿಗೂ ಸಮಸ್ಯೆ – ಫಿಜಿಯೋಥೆರಪಿನಾ? ಆಪರೇಷನ್‌ನಾ?

    – ಕುಂಟುತ್ತಲೇ ಆಸ್ಪತ್ರೆಗೆ ಬಂದಿದ್ದ ಆರೋಪಿ ನಟ

    ಬೆಂಗಳೂರು: ಜಾಮೀನಿನ ಬಳಿಕ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್‌ಗೆ (Actor Darshan) ಇದೀಗ ವೈದ್ಯಕೀಯ ಕ್ಷೇತ್ರದಲ್ಲಿ ಯಾವ ಚಿಕಿತ್ಸೆ ಕೊಡಬೇಕು ಎನ್ನುವುದೇ ಒಂದು ದೊಡ್ಡ ಚರ್ಚೆಯಾಗಿದೆ.

    ರೇಣುಕಾಸಾಮಿ ಕೊಲೆ ಪ್ರಕರಣದ (Renukaswamy Murder Case) ಹಿನ್ನೆಲೆ ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್‌ಗೆ ಅ.3 ರಂದು ಮಧ್ಯಂತರ ಜಾಮೀನು ಸಿಕ್ಕಿತ್ತು. ಬಳಿಕ ಒಂದು ದಿನ ಸಂಪೂರ್ಣ ವಿಶ್ರಾಂತಿಯ ಬಳಿಕ ನ.1ರಂದು ದರ್ಶನ್ ಕೆಂಗೇರಿಯ (Kengeri) ಬಿಜಿಎಸ್ ಆಸ್ಪತ್ರೆಗೆ (BGS Hospital) ದಾಖಲಾಗಿದ್ದಾರೆ.ಇದನ್ನೂ ಓದಿ: ರಾಯಚೂರು| ಪಟಾಕಿ ಕಿಡಿ ತಗುಲಿ ಅಂಗಡಿಗೆ ಬೆಂಕಿ – ಅಂಗಡಿಯಲ್ಲಿದ್ದ ವಸ್ತುಗಳು ಭಸ್ಮ

    ಆಸ್ಪತ್ರೆಗೆ ದಾಖಲಾದ ಬಳಿಕ ದರ್ಶನ್‌ಗೆ ಫಿಜಿಯೋಥೆರಪಿನಾ? ಅಥವಾ ಆಪರೇಷನ್‌ನಾ? ಎಂದು ಚರ್ಚೆ ನಡೆಯುತ್ತಿದೆ. ಇತ್ತ ಕಾಣಿಸಿಕೊಂಡಿರುವ ನೋವಿಗೆ ಎಕ್ಸಾಮಿನೇಷನ್ ಆಗುವ ತನಕ ಚಿಕಿತ್ಸೆ ಹೇಗೆ ಎಂದು ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ಕೂಡ ರಿಪೋರ್ಟ್‌ಗಳಿಗಾಗಿ ಕಾಯುತ್ತಿದ್ದಾರೆ.

    ಈ ಹಿಂದೆ ಕೂಡ ಇದೇ ರೀತಿ ಬೆನ್ನು ನೋವಿಗೆ ಸಂಬಂಧಿಸಿದಂತೆ ಆಪರೇಷನ್ ಮಾಡಿ ಚಿಕಿತ್ಸೆ ನೀಡಲಾಗಿತ್ತು. ಈಗ ಮತ್ತೆ ಬೆನ್ನಿನಲ್ಲೇ ಸಮಸ್ಯೆ ಉಲ್ಬಣ ಆಗಿದ್ದು, ಆಪರೇಷನ್ ಬದಲು ವೈದ್ಯರು ಫಿಜಿಯೋಥೆರಪಿಗೆ ಹೆಚ್ಚು ಮನ್ನಣೆ ಕೊಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಕುಟುಂಬದವರು ಸಹ ಶಸ್ರ್ತಚಿಕಿತ್ಸೆಯನ್ನು ಕೊನೆಯ ಆಯ್ಕೆಯಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ.

    ದರ್ಶನ್‌ಗೆ ಉಂಟಾಗಿರುವ ಬೆನ್ನು ನೋವಿನಿಂದಾಗಿ ಎಡಗಾಲಿಗೂ ಕೂಡ ದೊಡ್ಡಮಟ್ಟದ ಸಮಸ್ಯೆಯಾಗಿ ಕಾಡುತ್ತಿದೆ. ಜೈಲಿಂದ ರಿಲೀಸ್ ಆದ ದಿನಕ್ಕೂ ನಿನ್ನೆ ಆಸ್ಪತ್ರೆಗೆ ಬಂದ ದಿನಕ್ಕೂ ನೋವು ಕೊಂಚ ಹೆಚ್ಚಾದಂತೆ ಕಾಣುತ್ತಿದೆ.

    ಸ್ಪೈನಲ್‌ ಕಾರ್ಡ್ (Spinal Cord) ಸಮಸ್ಯೆಯಿಂದ ಆರಂಭವಾದ ಬೆನ್ನುನೋವು, ಈಗ ಕಾಲುಗಳಿಗೂ ಸಮಸ್ಯೆ ಉಂಟುಮಾಡುತ್ತಿದೆ. ಹಾಗಾಗಿ ಬೆನ್ನು ನೋವು ಜೊತೆಗೆ ಎಡಗಾಲೂ ನೋವಿದ್ದರೆ ರೋಗಿಯ ಆರೋಗ್ಯದ ಮೇಲೆ ಯಾವ ಪರಿಣಾಮ ಬೀರಲಿದೆ? ಅದರಿಂದ ದೇಹದ ಮೇಲಾಗುವ ಪರಿಣಾಮ ಏನು? ಎನ್ನುವುದನ್ನು ವೈದ್ಯರು ತಿಳಿಸಬೇಕಾಗಿದೆ.

    ವೈದ್ಯರು ಹೇಳೋದೇನು?
    ವೈದ್ಯರ ಮಾಹಿತಿಯ ಪ್ರಕಾರ, ಮೊದಲಿಗೆ ಬೆನ್ನು ನೋವು ಹೆಚ್ಚಾಗುತ್ತಿದ್ದಂತೆ ಕಾಲುಗಳಲ್ಲಿ ನೋವು ಕಾಣಿಸಿಕೊಳ್ಳಲಿದೆ. ಬಳಿಕ ನಡೆಯಲು ಸಮಸ್ಯೆ ಎದುರಾಗಿ ಹಂತ ಹಂತವಾಗಿ ಸಮಸ್ಯೆ ಇರುವ ಕಾಲಿನಲ್ಲಿ ಮರಗಟ್ಟುವಿಗೆ ಶುರುವಾಗುತ್ತದೆ. ಆಗ ಕಾಲು ಬೆರಳಿನಿಂದ ಆರಂಭವಾಗಿ ಇಡೀ ಕಾಲಿಗೆ ವೇಗವಾಗಿ ಮರಗಟ್ಟುವಿಕೆ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇದರಿಂದ ಕಾಲಿನ ಚಲನೆಗೆ ಕೂಡ ಕಷ್ಟವಾಗಿ ಕಾಲು ಸಂಪೂರ್ಣ ನಿಶಕ್ತಿಗೆ ಒಳಗಾಗುತ್ತದೆ. ನಡೆಯಲು ಕಷ್ಟವಾದಾಗ, ಪಾರ್ಶ್ವವಾಯು ಆಗುವ ಸಾಧ್ಯತೆ ಹೆಚ್ಚಾಗುತ್ತದೆ. ಹಾಗಾಗಿ ಶೀಘ್ರದಲ್ಲಿ ಅಗತ್ಯ ಚಿಕಿತ್ಸೆ ನೀಡಬೇಕು ಎನ್ನುತ್ತಾರೆ ವೈದ್ಯರು.ಇದನ್ನೂ ಓದಿ: ದಶಕಗಳ ಬಳಿಕ ಅಪ್ಪಳಿಸಿದ ಭೀಕರ ಪ್ರವಾಹಕ್ಕೆ ಸ್ಪೇನ್‌ ತತ್ತರ – ಸಾವಿನ ಸಂಖ್ಯೆ 205ಕ್ಕೆ ಏರಿಕೆ