Tag: doctor

  • ರಕ್ತ ಸಂಗ್ರಹಿಸುತ್ತಿದ್ದಾಗ 3 ತಿಂಗಳ ಮಗು ಸಾವು – ದಾದಿ ವಿರುದ್ಧ ಪೋಷಕರ ಆಕ್ರೋಶ

    ರಕ್ತ ಸಂಗ್ರಹಿಸುತ್ತಿದ್ದಾಗ 3 ತಿಂಗಳ ಮಗು ಸಾವು – ದಾದಿ ವಿರುದ್ಧ ಪೋಷಕರ ಆಕ್ರೋಶ

    ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಮೂರು ತಿಂಗಳ ಗಂಡು ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

    ಕೋರೇನಹಳ್ಳಿ (Korenahalli) ಗ್ರಾಮದ ಗಂಗರಾಜು, ಸಂಧ್ಯಾ ದಂಪತಿಯ ಮೂರು ತಿಂಗಳ ಗಂಡು ಮಗು ಮೂತ್ರ ವಿಸರ್ಜನೆ ಸಮಸ್ಯೆ ಹಾಗೂ ಪದೇ, ಪದೇ ವಾಂತಿ ಸಮಸ್ಯೆಯಿಂದ ಬಳಲುತ್ತಿತ್ತು. ಹೀಗಾಗಿ ಚಿಕಿತ್ಸೆಗೆಂದು ಶನಿವಾರ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಹೃದಯ ಸಮಸ್ಯೆ ಇರಬಹುದು ಅಂತ ಜಯದೇವ ಆಸ್ಪತ್ರೆಗೆ (Jayadeva Hospital) ಕಳುಹಿಸಿ ಪರೀಕ್ಷೆಗಳನ್ನು ಮಾಡಿಸಿಕೊಂಡು ಬರಲು ತಿಳಿಸಿಲಾಗಿತ್ತು. ನಂತರ ಎಲ್ಲಾ ಪರೀಕ್ಷೆಗಳನ್ನು ನಡೆಸಿದ ಬಳಿಕ ಹೃದಯ ಸಮಸ್ಯೆ ಇಲ್ಲ ಅಂತ ವರದಿ ಬಂದಿದೆ. ಆದರೆ ತದನಂತರ ತಡರಾತ್ರಿ ಸಹ ಮಗು ಅದೇ ರೀತಿ ವಾಂತಿ ಸಮಸ್ಯೆಯಿಂದ ಪುನಃ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: EDಗೆ ಕಿರುಕುಳ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕು: ಡಿ.ಕೆ ಸುರೇಶ್

    ಬೆಳಗ್ಗೆ ಚೆನ್ನಾಗಿಯೇ ಇದ್ದ ಮಗುವಿಗೆ ಯಾಕೆ ಪದೇ, ಪದೇ ವಾಂತಿ ಆಗುತ್ತಿದೆ ಎಂಬುದನ್ನು ಅರಿಯಲು ವೈದ್ಯರು ರಕ್ತ ಪರೀಕ್ಷೆಗೆ ಒಳಪಡಿಸಲು ತಿಳಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ದಾದಿ ರಕ್ತ ಸಂಗ್ರಹಣೆ ಮಾಡುವಾಗ ಮಗುವಿಗೆ ಏಕಾಏಕಿ ಮೂರ್ಛೆ ರೋಗದ ಲಕ್ಷಣಗಳು ಕಂಡು ಬಂದಿದೆ. ನಂತರ ದಿಢೀರನೇ ಹೃದಯ ಬಡಿತ ನಿಂತಿದ್ದು ಮಗು ಸಾವನ್ನಪ್ಪಿದೆ. ಇದರಿಂದ ಚೆನ್ನಾಗಿಯೇ ಇದ್ದ ಮಗು ರಕ್ತ ಸಂಗ್ರಹಣೆ ಮಾಡಿದ ಕಾರಣ ಸಾವನ್ನಪ್ಪಿದೆ. ಸರಿಯಾಗಿ ರಕ್ತ ತೆಗೆದುಕೊಂಡಿಲ್ಲ ಅಂತ ಪೋಷಕರು ದಾದಿಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ತಮ್ಮ ಮಗು ಚೆನ್ನಾಗಿತ್ತು. ರಾತ್ರಿ ಸಿರಪ್ ಚಿಕಿತ್ಸೆ ಕೊಟ್ಟ ನಂತರ ಮೂತ್ರ ವಿಸರ್ಜನೆ ಆಗುತ್ತಿತ್ತು. ಡಿಸ್ಚಾರ್ಜ್ ಮಾಡುತ್ತೇವೆ ಅಂತ ಸಹ ವೈದ್ಯರು ಹೇಳಿದ್ದರು. ಆದರೆ ಈಗ ಏಕಾಏಕಿ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಪಾರದರ್ಶಕ ಪಕ್ಷ, ಭ್ರಷ್ಟಾಚಾರದಿಂದ ಹಣ ಸಂಗ್ರಹಿಸಿಲ್ಲ: ಸಲೀಂ ಅಹ್ಮದ್

    ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಮುಖ್ಯ ಶಸ್ತ್ರಚಿಕಿತ್ಸಕ ರಾಜಾರೆಡ್ಡಿ, ಮಗುವಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪವಾಗಿಲ್ಲ. ಸಮಪರ್ಕವಾಗಿಯೇ ಚಿಕಿತ್ಸೆ ಕೊಡಲಾಗಿದೆ. ವೈದ್ಯರ ಸೂಚನೆ ಮೇರೆಗೆ ದಾದಿ ರಕ್ತ ಸಂಗ್ರಹಣೆ ಮಾಡಿದ್ದಾರೆ. ಆದರೆ ಮಗುವಿನ ಸಾವಿಗೆ ನಿಖರ ಕಾರಣ ಏನು ಎಂಬುದು ಅರಿಯಲು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ತಿಳಿಯಲಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೈರಸ್ ಮಿಸ್ತ್ರಿ ಕಾರು ಅಪಘಾತ – ಜೊತೆಗೆ ಸಂಚರಿಸುತ್ತಿದ್ದ ಡಾ.ಅನಾಹಿತಾ ಪಾಂಡೋಲೆ ವಿರುದ್ಧ ಕೇಸ್ ದಾಖಲು

    ಸೈರಸ್ ಮಿಸ್ತ್ರಿ ಕಾರು ಅಪಘಾತ – ಜೊತೆಗೆ ಸಂಚರಿಸುತ್ತಿದ್ದ ಡಾ.ಅನಾಹಿತಾ ಪಾಂಡೋಲೆ ವಿರುದ್ಧ ಕೇಸ್ ದಾಖಲು

    ಮುಂಬೈ: ಟಾಟಾ ಸನ್ಸ್‌ನ (Tata Sons) ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ (Cyrus Mistry) ಸಂಚರಿಸುತ್ತಿದ್ದ ಕಾರು ಅಪಘಾತವಾಗಿ ಸಾವನ್ನಪ್ಪಿದ ಎರಡು ತಿಂಗಳ ನಂತರ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೊಲೀಸರು ಶನಿವಾರ ಕಾರು ಚಲಾಯಿಸುತ್ತಿದ್ದ ಡಾ.ಅನಾಹಿತಾ ಪಾಂಡೋಲೆ (Dr Anahita Pandole) ವಿರುದ್ಧ ನಿರ್ಲಕ್ಷ್ಯದ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    2022ರ ಸೆಪ್ಟೆಂಬರ್ 4 ರಂದು ಗುಜರಾತ್‍ನಿಂದ ಮುಂಬೈಗೆ ತೆರಳುತ್ತಿದ್ದಾಗ ಪಾಲ್ಘರ್‌ನ ಚರೋತಿಯ ಸೂರ್ಯ ನದಿ ಸೇತುವೆ ಮೇಲೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಸೈರಸ್ ಮಿಸ್ತ್ರಿ ಸಂಚರಿಸುತ್ತಿದ್ದ ಮರ್ಸಿಡಿಸ್ (Mercedes-Benz)  ಕಾರು ಅಪಘಾತವಾಗಿತ್ತು. ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸೇರಿ ಇಬ್ಬರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಮತ್ತಿಬ್ಬರು ಅನಾಹಿತಾ ಪಾಂಡೋಲೆ (55) ಹಾಗೂ ಅವರ ಪತಿ ಡೇರಿಯಸ್ ಪಾಂಡೋಲೆ (60) ಗಾಯಗೊಂಡಿದ್ದರು. ಇದನ್ನೂ ಓದಿ: ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ – ಸಚಿವ ಕಿರಣ್ ರಿಜಿಜು

    ಇದೀಗ ಪೊಲೀಸರು ಕಾರು ಚಲಾಯಿಸುತ್ತಿದ್ದ ಅನಾಹಿತಾ ಪಾಂಡೋಲೆ ವಿರುದ್ಧ ಮೋಟಾರು ವಾಹನ ಕಾಯಿದೆ ಭಾರತೀಯ ದಂಡ ಸಂಹಿತೆ 304(ಎ) (ನಿರ್ಲಕ್ಷ್ಯದ ಕೃತ್ಯದಿಂದ ಸಾವಿಗೆ ಕಾರಣ), 279 (ಅತಿವೇಗದ ಚಾಲನೆ), 337 (ಇತರರ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ತಂದೊಡ್ಡಿದ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಮುಂಬೈನ ಸ್ತ್ರೀರೋಗ ತಜ್ಞೆ ಅನಾಹಿತಾ ಪಾಂಡೋಲೆ ಹಾಗೂ ಅವರ ಪಕ್ಕದಲ್ಲಿ ಕುಳಿತಿದ್ದ ಪತಿ ಡೇರಿಯಸ್ ಪಾಂಡೋಲೆ ಗಂಭೀರವಾಗಿ ಗಾಯಗೊಂಡಿದ್ದರು. ಆ ಬಳಿಕ ಮುಂಬೈನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇದೀಗ ಪೊಲೀಸರು ಅನಾಹಿತಾ ಪಾಂಡೋಲೆ ಮತ್ತು ಡೇರಿಯಸ್ ಪಾಂಡೋಲೆ ಹೇಳಿಕೆಯನ್ನು ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಸೈರಸ್ ಮಿಸ್ತ್ರಿ ಕಾರು ಅಪಘಾತಕ್ಕೂ 5 ಸೆಕೆಂಡ್ ಮುನ್ನ ಬ್ರೇಕ್ ಹಾಕಲಾಗಿದೆ: ಮರ್ಸಿಡಿಸ್ ಕಂಪನಿ

    Live Tv
    [brid partner=56869869 player=32851 video=960834 autoplay=true]

  • ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಮಗು ಬಲಿ

    ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಮಗು ಬಲಿ

    ಬೆಂಗಳೂರು: ತುಮಕೂರು (Tumkuru) ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ಜೀವಗಳು ಬಲಿಯಾದ ಬೆನ್ನಲ್ಲೇ, ಬೆಂಗಳೂರಿನಲ್ಲೊಂದು ದುರಂತ ನಡೆದಿದೆ. ವೈದ್ಯರ (Doctor) ನಿರ್ಲಕ್ಷ್ಯಕ್ಕೆ 4 ವರ್ಷದ ಮಗು ಬಲಿಯಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

    ತುಮಕೂರಿನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಇಬ್ಬರು ಅವಳಿ ನವಜಾತ ಶಿಶುಗಳು ಮೃತಪಟ್ಟ ಪ್ರಕರಣ ಮಾಸುವ ಮುನ್ನವೇ, ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ (Indira Gandhi istitute of Childe Helath) ಮತ್ತೊಂದು ದುರಂತ ನಡೆದಿದೆ. ಟ್ರೈನಿ ವೈದ್ಯರ ಚಿಕಿತ್ಸೆಯಿಂದ 4 ವರ್ಷದ ಬುದ್ಧಿಮಾಂದ್ಯ ಬಾಲಕ (Boy) ಮೃತಪಟ್ಟಿದ್ದಾನೆ ಎಂದು ಮೃತ ಬಾಲಕನ ಪೋಷಕರು ಆರೋಪ ಮಾಡಿದರು.

    ಜಾಲಹಳ್ಳಿಯ ಡೇವಿಡ್ ಎಂಬವರು ತನ್ನ 4 ವರ್ಷದ ಡಾರ್ವಿನ್ ಎಂಬ ಮಗುವನ್ನು ಭಾನುವಾರ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬೆನ್ನು ಮೂಳೆಯಲ್ಲಿ ನೀರು ತೆಗೆಯಲು, ಪೋಷಕರ ಅನುಮತಿ ಪಡೆಯದೇ ಟ್ರೈನಿ ವೈದ್ಯರು ಚಿಕಿತ್ಸೆ ಮಾಡಿದ್ದಾರೆ. ಚಿಕಿತ್ಸೆಗೂ ಮುನ್ನ ಆಕ್ಟಿವ್ ಆಗಿದ್ದ ಮಗು, ಚಿಕಿತ್ಸೆಯ ನಂತರ ಪ್ರಜ್ಞೆತಪ್ಪಿ ಮೃತಪಟ್ಟಿದ್ದಾನೆ. ತಜ್ಞ ವೈದ್ಯರು ಇಲ್ಲದೇ, ಮನಸ್ಸಿಗೆ ಬಂದಂಗೆ ಚಿಕಿತ್ಸೆ ಕೊಟ್ಟು ನನ್ನ ಮಗುವನ್ನು ಸಾಯಿಸಿದ್ದಾರೆ ಎಂದು ಮೃತ ಬಾಲಕನ ಪೋಷಕರು ತಿಳಿಸಿದರು.

    ಆಸ್ಪತ್ರೆಗೆ ತಮ್ಮ ಮಗುವನ್ನು ಕರೆದುಕೊಂಡು ಬಂದಿದ್ದ ಇತರೆ ಪೋಷಕರು ಕೂಡ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ. ಇನ್ನೂ ಇಷ್ಟೆಲ್ಲ ಆದ ಬಳಿಕ, ಆಸ್ಪತ್ರೆಯ ಆಡಳಿತ ಮಂಡಳಿ, ಈ ಘಟನೆಯ ಬಗ್ಗೆ ಸ್ಪಷ್ಟಿಕರಣ ಕೊಡದೇ ಬೇಜವಾಬ್ದಾರಿತನ ಪ್ರದರ್ಶಿಸಿದೆ. ಇದನ್ನೂ ಓದಿ: ನಿರೀಕ್ಷೆಗೂ ಮೀರಿ ಯಶಸ್ವಿ: ರಾಜ್ಯದಲ್ಲಿ 10.5 ಲಕ್ಷ ಕೋಟಿ ಹೂಡಿಕೆ

    ವೈದ್ಯರ ಬೇಜವಾಬ್ದಾರಿಯನ್ನು ಖಂಡಿಸಿ, ಮೃತ ಬಾಲಕ ಪೋಷಕರು, ಹಾಗೂ ಆಸ್ಪತ್ರೆಯಲ್ಲಿದ್ದ ಜನ, ಮೃತ ಬಾಲಕನ ಶವ ಆಸ್ಪತ್ರೆಯ ಮುಂದಿಟ್ಟು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್‌ ಹೊಡೆದು ಬೈಕ್‌ ಸವಾರ ಸಾವು – ಅಪಘಾತ ಜಾಗದಲ್ಲಿ ಬಿದ್ದಿತ್ತು ಮದ್ಯದ ಬಾಟಲಿಗಳು

    Live Tv
    [brid partner=56869869 player=32851 video=960834 autoplay=true]

  • ವ್ಯಕ್ತಿ ಗಂಟಲಿನಿಂದ ತೆಂಗಿನಕಾಯಿ ಗಾತ್ರದ ಗಡ್ಡೆ ತೆಗೆದ ವೈದ್ಯರು

    ವ್ಯಕ್ತಿ ಗಂಟಲಿನಿಂದ ತೆಂಗಿನಕಾಯಿ ಗಾತ್ರದ ಗಡ್ಡೆ ತೆಗೆದ ವೈದ್ಯರು

    ಪಾಟ್ನಾ: ಥೈರಾಯ್ಡ್‌ನಿಂದ (hyroid gland) ಬಳಲುತ್ತಿದ್ದ ಬಿಹಾರದ 72 ವರ್ಷದ ರೈತನ ಗಂಟಲಿನಿಂದ “ತೆಂಗಿನಕಾಯಿ (Coconut) ಗಾತ್ರದ” ಗೆಡ್ಡೆಯನ್ನು ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಿದ್ದಾರೆ.

    ಬೇಗುಸರಾಯ್ (Begusarai) ಜಿಲ್ಲೆಯ ನಿವಾಸಿಯಾಗಿರುವ ರೋಗಿ ಕಳೆದ ಆರು ತಿಂಗಳಿನಿಂದ ಉಸಿರಾಟವಾಡಲು ಮತ್ತು ಆಹಾರವನ್ನು ನುಂಗಲು ತೊಂದರೆ ಅನುಭವಿಸುತ್ತಿದ್ದರು. ಸಮಸ್ಯೆ ಎಷ್ಟರಮಟ್ಟಿಗೆ ಉಲ್ಬಣಗೊಂಡಿತು ಎಂದರೆ ಥೈರಾಯ್ಡ್ ಅವರ ಜೀವನದ ಮೇಲೆಯೇ ಅಡ್ಡ ಪರಿಣಾಮ ಬೀರಿತು. ಹೀಗಾಗಿ ಕಳೆದ ತಿಂಗಳು ರೋಗಿಯನ್ನು ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ (Sir Ganga Ram Hospital) ಇಎನ್‍ಟಿ ಮತ್ತು ಹೆಡ್, ನೆಕ್ ಆಂಕೊ ಸರ್ಜರಿ ವಿಭಾಗಕ್ಕೆ ಕರೆದೊಯ್ಯಲಾಯಿತು. ಇದನ್ನೂ ಓದಿ: ಏರ್‌ಬಸ್‌ ಜೊತೆಗೂಡಿ ವಾಯುಸೇನೆಗೆ ವಿಮಾನ ತಯಾರಿಸಲಿದೆ ಟಾಟಾ ಸಮೂಹ

    ಈ ಬಗ್ಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಹೆಡ್ ಮತ್ತು ನೆಕ್ ಆಂಕೊ ಸರ್ಜರಿ ತಜ್ಞ ಡಾ ಸಂಗೀತ್ ಅಗರ್ವಾಲ್ ಅವರು, ಹಲವಾರು ವರ್ಷಗಳಿಂದ ನಾನು ಇಂತಹ 250ಕ್ಕೂ ಹೆಚ್ಚು ಬೃಹತ್ ಥೈರಾಯ್ಡ್ ಗೆಡ್ಡೆಗಳ ಪ್ರಕರಣಗಳನ್ನು ನಿಭಾಯಿಸಿದ್ದೇನೆ. ಆದರೆ ತೂಕದ ವಿಚಾರಕ್ಕೆ ಬಂದರೆ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಗಡ್ಡೆಯನ್ನು ಹೊರತೆಗೆದಿದ್ದೇನೆ. ಸಾಮಾನ್ಯವಾಗಿ ಚಿಟ್ಟೆ-ಆಕಾರದ ಥೈರಾಯ್ಡ್ ಗ್ರಂಥಿ 10-15 ಗ್ರಾಂ ತೂಕವಿರುತ್ತದೆ ಮತ್ತು 3-4 ಸೆಂ ಗಾತ್ರವನ್ನು ಹೊಂದಿರುತ್ತದೆ. ಆದರೆ ಈ ವ್ಯಕ್ತಿಯ ಗಂಟಲಿನಿಂದ ತೆಗೆದ ಗಡ್ಡೆ 18-20 ಸೆಂ.ಮೀ ಗಾತ್ರದ ತೆಂಗಿನಕಾಯಿಗಿಂತ ದೊಡ್ಡದಾಗಿದೆ. ಗಡ್ಡೆ ತೆಗೆಯುವಾಗ ರೋಗಿಯ ಧ್ವನಿಯನ್ನು ಉಳಿಸುವುದು ಹೇಗೆ ಎಂಬುವುದು ದೊಡ್ಡ ಸವಾಲಾಗಿತ್ತು. ಆದರೆ ಅದೃಷ್ಟವಶಾತ್ ಧ್ವನಿ ವ್ಯಕ್ತಿಗೆ ಮತ್ತೆ ಮರಳಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಸ್ಕ್‌ ತೆಕ್ಕೆಗೆ ಟ್ವಿಟ್ಟರ್‌ – ಸಿಇಒ ಪರಾಗ್‌ ಅಗರ್‌ವಾಲ್‌ ಸೇರಿದಂತೆ ಪ್ರಮುಖರು ವಜಾ

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಿನ ವೈದ್ಯೆ ಹೆಸರಲ್ಲಿ ಮಹಿಳೆಯರಿಗೆ ಅಶ್ಲೀಲ ಫೋಟೋ – ಆರೋಪಿಗಳು ಅರೆಸ್ಟ್

    ಬೆಂಗ್ಳೂರಿನ ವೈದ್ಯೆ ಹೆಸರಲ್ಲಿ ಮಹಿಳೆಯರಿಗೆ ಅಶ್ಲೀಲ ಫೋಟೋ – ಆರೋಪಿಗಳು ಅರೆಸ್ಟ್

    ಬೆಂಗಳೂರು: ಖ್ಯಾತ ವೈದ್ಯೆ (Doctor) ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ಮಹಿಳೆಗೆ (Women) ಅಶ್ಲೀಲ ಫೋಟೋ ಕಳಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಲೈಂಗಿಕವಾಗಿ ತೊಂದರೆ ಇರುವ ಮಹಿಳೆಯರಿಗೆ ಸೂಕ್ತ ಸಲಹೆ ನೀಡುತ್ತಿದ್ದ ವೈದ್ಯೆ ಡಾ.ಪದ್ಮಿನಿ ಪ್ರಸಾದ್ ಅವರ ಹೆಸರಿನಲ್ಲಿ ಇತರ ಮಹಿಳೆಯರಿಗೆ ಫೋಟೋ ಕಳಿಸಲಾಗುತ್ತಿತ್ತು. ಕಿಡಿಗೇಡಿಗಳ ಕೃತ್ಯದ ಬಗ್ಗೆ ಬೆಂಗಳೂರು (Bengaluru) ಉತ್ತರ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ (CEN Police Station) ಪದ್ಮಿನಿ ಪ್ರಸಾದ್ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ಕಾಪಿ ಚೀಟಿಯನ್ನು ಲವ್ ಲೆಟರ್ ಎಂದು ತಪ್ಪಾಗಿ ಭಾವಿಸಿದ ವಿದ್ಯಾರ್ಥಿನಿ- ವಿದ್ಯಾರ್ಥಿಯ ಬರ್ಬರ ಕೊಲೆ

    ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದ ಮಗುವಿಗೆ ಮರುಜೀವ ಕೊಟ್ಟ ಬೆಂಗಳೂರಿನ ವೈದ್ಯರು

    ಪಾಕಿಸ್ತಾನದ ಮಗುವಿಗೆ ಮರುಜೀವ ಕೊಟ್ಟ ಬೆಂಗಳೂರಿನ ವೈದ್ಯರು

    ಬೆಂಗಳೂರು: ಪಾಕಿಸ್ತಾನದ ಮಗುವಿಗೆ (Baby) ಬೆಂಗಳೂರಿನ (Bengaluru) ನಾರಾಯಣ ಹೆಲ್ತ್ ಸಿಟಿ ವೈದ್ಯರು (Doctor) ಮರುಜೀವವನ್ನು ನೀಡುವ ಮೂಲಕ ಆತಂಕದಲ್ಲಿದ್ದ ತಾಯಿಯ ನೋವಿಗೆ ಮುಲಾಮು ಹಚ್ಚುವ ಕೆಲಸ ಮಾಡಿದ್ದಾರೆ.

    ಪಾಕಿಸ್ತಾನದ (Pakistan) ಮಗು ಅಮೈರಾ(2)ಗೆ ಎಂಪಿಎಸ್ ಎನ್ನುವ ವಿಚಿತ್ರ ಕಾಯಿಲೆ ಕಾಡಿತ್ತು. ಕಣ್ಣು ಮೆದುಳು ಅಂಗಗಳ ಕಾರ್ಯನಿರ್ವಹಣೆಯ ಮೇಲೆ ಇದ್ರಿಂದ ಪರಿಣಾಮ ಬೀರುತ್ತಿದೆ. ಅಮೈರಾ ತಂದೆ, ತಾಯಿ ಪಾಕಿಸ್ತಾನ ಸೇರಿದಂತೆ ಭಾರತದ ಬೇರೆ ಭಾಗದ ಆಸ್ಪತ್ರೆ ಸಂಪರ್ಕಿಸಿದ್ದಾರೆ. ಆದರೆ, ಮಗುವಿನ ಜೀವಕ್ಕೆ ಎಲ್ಲೂ ಗ್ಯಾರಂಟಿ ಕೊಟ್ಟಿಲ್ಲ. ಕೊನೆಗೆ ಬೆಂಗಳೂರು ನಾರಾಯಣ ಹೆಲ್ತ್ ಸಿಟಿಯಲ್ಲಿ ಅಮೈರಾಗೆ ಆಕೆಯ ತಂದೆಯಿಂದ ಮೂಳೆ ಮಜ್ಜೆ ಕಸಿಯ ಮೂಲಕ ಟ್ರೀಟ್‍ಮೆಂಟ್ ಕೊಡಲಾಗಿದ್ದು, ಅಮೈರಾ ಚೇತರಿಸಿಕೊಂಡಿದ್ದಾಳೆ. ತನ್ನ ಮಗಳ ಬದುಕಿಗೆ ಹೊಸ ಜೀವ ಕೊಟ್ಟ ವೈದ್ಯರಿಗೆ ಅಮೈರಾ ತಾಯಿ ಧನ್ಯವಾದ ಹೇಳಿದರು. ಇದನ್ನೂ ಓದಿ: ವಾಹನ ಸವಾರರೇ ಎಚ್ಚರ – ಸೀಟ್ ಬೆಲ್ಟ್ ಧರಿಸದಿದ್ರೆ ಇನ್ಮುಂದೆ ದುಪ್ಪಟ್ಟು ದಂಡ

    ವೈದ್ಯರು ಕೂಡ ಅಮೈರಾ ಚೇತರಿಕೆಯ ಬಗ್ಗೆ ಖುಷಿಯಾಗಿದ್ದಾರೆ. ಈ ಬಗ್ಗೆ ಡಾ. ದೇವಿಶೆಟ್ಟಿ ಮಾತನಾಡಿ, ಪಾಕಿಸ್ತಾನದ ಅನೇಕ ರೋಗಿಗಳು ಉತ್ತಮ ಚಿಕಿತ್ಸೆಗಾಗಿ ಭಾರತಕ್ಕೆ ಅದ್ರಲ್ಲೂ ಬೆಂಗಳೂರಿಗೆ ಬರುತ್ತಿದ್ದಾರೆ ಎಂದ ಅವರು, ಪಾಕಿಸ್ತಾನದಲ್ಲಿ ಕೆಲ ವೈದ್ಯರು ಭಾರತದಲ್ಲಿ ನುರಿತ ವೈದ್ಯರಿಂದ ಟ್ರೈನಿಂಗ್ ಕೂಡ ಪಡೆದುಕೊಳ್ಳುತ್ತಿದ್ದಾರೆ. ಹೆಚ್ಚು ವೈದ್ಯರು ತೊಡಗಿಕೊಂಡು ನಾವು ಪಾಕಿಸ್ತಾನದ ವೈದ್ಯರಿಗೆ ಟ್ರೈನಿಂಗ್ ನೀಡಲು ಸಿದ್ಧ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – ಎಲ್ಲೆಲ್ಲಿ ಏನಾಗಿದೆ? ಅತಿ ಹೆಚ್ಚು ಮಳೆ ಎಲ್ಲಿಯಾಗಿದೆ?

    Live Tv
    [brid partner=56869869 player=32851 video=960834 autoplay=true]

  • ಪ್ರೆಗ್ನೆಂಟ್ ಅಂತ ತಿಳಿದ 48 ಗಂಟೆಯಲ್ಲೇ ಮಗುವನ್ನು ಹೆತ್ತ ತಾಯಿ

    ಪ್ರೆಗ್ನೆಂಟ್ ಅಂತ ತಿಳಿದ 48 ಗಂಟೆಯಲ್ಲೇ ಮಗುವನ್ನು ಹೆತ್ತ ತಾಯಿ

    ವಾಷಿಂಗ್ಟನ್: ಅಮೇರಿಕಾದ (United States) ದಂಪತಿಯೊಬ್ಬರಿಗೆ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಇದಾದ 48 ಗಂಟೆಗಳಲ್ಲಿಯೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

    23 ವರ್ಷದ ಪೇಟನ್ ಸ್ಟೋವರ್ ಅವರು ಒಮಾಹಾದಲ್ಲಿ (Omaha) ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮೊದಲಿಗೆ ಕೆಲಸದ ಒತ್ತಡದಿಂದ ಯಾವಾಗಲೂ ಆಯಾಸವಾಗುತ್ತದೆ ಎಂದು ಭಾವಿಸಿದ್ದರು. ಆದರೆ ದೇಹದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಲು ಪ್ರಾರಂಭಿಸಿದಾಗ, ಅವರ ಕಾಲುಗಳಲ್ಲಿ ಊತವುಂಟಾಗುತ್ತಿದ್ದರಿಂದ ವೈದ್ಯರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ವೈದ್ಯರು ನೀವು ಗರ್ಭಿಣಿಯಾಗಿದ್ದೀರಾ ಎಂದು ತಿಳಿಸಿದ್ದಾರೆ.

    ಇದರಿಂದ ಅನುಮಾನಗೊಂಡ ಮಹಿಳೆಯ ಪತಿ, ಮತ್ತೊಮ್ಮೆ ಟೆಸ್ಟ್ ಮಾಡಿಸಿಕೊಂಡಗಲೂ ಗರ್ಭಿಣಿಯಾಗಿರುವುದು ದೃಢವಾಗಿದೆ. ಅಲ್ಲದೇ ಸ್ಕ್ಯಾನಿಂಗ್ ವೇಳೆ ಹೊಟ್ಟೆಯಲ್ಲಿ ಮಗು ಇರುವುದನ್ನು ನೋಡಿರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ನನ್ನನ್ನು ಪ್ಯಾಕೇಜ್ ಸ್ಟಾರ್ ಅನ್ನೋರಿಗೆ ಚಪ್ಪಲೀಲಿ ಹೊಡೀತೀನಿ: ಪವನ್ ಕಲ್ಯಾಣ್ ಆನ್ ಫೈಯರ್

    ಪೇಟನ್ ಸ್ಟೋವರ್ ತನ್ನ ಮೂತ್ರಪಿಂಡಗಳು ಮತ್ತು ಯಕೃತ್ (ಲಿವರ್) ಸರಿಯಾಗಿ ಕೆಲಸ ಮಾಡುವುದನ್ನು ನಿಲ್ಲಿಸಿದೆ ಎಂದು ಹೇಳಿದಾಗ ವೈದ್ಯರು ತಮ್ಮನ್ನು ಭೇಟಿಯಾಗುವಂತೆ ತಿಳಿಸಿದ್ದರು. ಆದರೆ ಗರ್ಭಿಣಿಯಾಗಿರುವ ಬಗ್ಗೆ ಮಾಹಿತಿ ನೀಡಿದ ಅದೇ ರಾತ್ರಿ ಮಹಿಳೆ ಮಗುವಿಗೆ ಜನ್ಮ ನೀಡಿರುವುದಾಗಿ ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಿಂದ ಶ್ರೀಲಂಕಾಗೆ ಶ್ರೀರಾಮ ನಡೆದದ್ದಕ್ಕಿಂತ ಹೆಚ್ಚು ರಾಹುಲ್‌ ಗಾಂಧಿ ಪಾದಯಾತ್ರೆ ಮಾಡ್ತಿದ್ದಾರೆ – ಕಾಂಗ್ರೆಸ್‌ ನಾಯಕ

    ದಂಪತಿ ತಮಗೊಂದು ಮಗು ಬೇಕು ಅಂದುಕೊಂಡಿದ್ದರು. ಆದರೆ ಅವರು ಅಂದುಕೊಂಡಿದ್ದಕ್ಕಿಂತ ಬೇಗನೇ ಮಗು ಜನಿಸಿದ್ದು, ಈ ವಿಚಾರವಾಗಿ ಸಖತ್ ಥ್ರಿಲ್ ಆಗಿದ್ದಾರೆ. ನಾನು ಅವನನ್ನು ಎತ್ತಿಕೊಂಡಿದ್ದೆ. ಅವನಿಗೆ ಹಾಲುಣಿಸಿದೆ. ನಿಜಕ್ಕೂ ನನಗೆ ಬಹಳ ಸಂತೋಷವಾಗುತ್ತಿದೆ ಎಂದು ಪೇಟನ್ ಸ್ಟೋವರ್ ಸಂತಸ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • Rx ಬದಲಿಗೆ ಪ್ರಿಸ್ಕ್ರಿಪ್ಷನ್‍ನಲ್ಲಿ ‘ಶ್ರೀ ಹರಿ’ ಅಂತ ಹಿಂದಿಯಲ್ಲಿ ಬರೆದ ವೈದ್ಯ

    Rx ಬದಲಿಗೆ ಪ್ರಿಸ್ಕ್ರಿಪ್ಷನ್‍ನಲ್ಲಿ ‘ಶ್ರೀ ಹರಿ’ ಅಂತ ಹಿಂದಿಯಲ್ಲಿ ಬರೆದ ವೈದ್ಯ

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಸತ್ನಾ (Satna) ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಪ್ರಿಸ್ಕ್ರಿಪ್ಷನ್‍ನಲ್ಲಿ (Prescriptions) ‘ಶ್ರೀ ಹರಿ’ (Shri Hari) ಎಂದು ಹಿಂದಿಯಲ್ಲಿ ಬರೆಯುವ ಮೂಲಕ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರ ಹೇಳಿಕೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದ್ದಾರೆ.

    ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಹಿಂದಿಯಲ್ಲಿ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿದ ದಿನವೇ ಕೋಟಾರ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‍ಸಿ) ವೈದ್ಯಕೀಯ ಅಧಿಕಾರಿ ಡಾ.ಸರ್ವೇಶ್ ಸಿಂಗ್ (Dr Sarvesh Singh) ಹಿಂದಿಯಲ್ಲಿ ಬರೆದ ಪ್ರಿಸ್ಕ್ರಿಪ್ಷನ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಭೋಪಾಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಭಾಷಣದ ವೇಳೆ ವೈದ್ಯರು ಪ್ರಿಸ್ಕ್ರಿಪ್ಷನ್ ಸ್ಲಿಪ್‍ಗಳ ಮೇಲೆ ಆರ್‌ಎಕ್ಸ್ ಎಂಬ (ಲ್ಯಾಟಿನ್ ಪದದ ಚಿಹ್ನೆ) ಬದಲಿಗೆ ‘ಶ್ರೀ ಹರಿ’ ಎಂದು ಬರೆಯಬಹುದು ಎಂದು ಹೇಳಿದ್ದರು. ಇದನ್ನೂ ಓದಿ: ದಾದಾ ಪರ ದೀದಿ ಬ್ಯಾಟಿಂಗ್ – ICC ಚುನಾವಣೆಗೆ ಅವಕಾಶ ಕೊಡುವಂತೆ ಮೋದಿಗೆ ಪತ್ರ

    2017ರಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ ಡಾ.ಸರ್ವೇಶ್ ಸಿಂಗ್ ಅವರು, ಪಠ್ಯಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಲೈವ್ ಆಗಿ ನೋಡಿದ್ದು, ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳು ಹಿಂದಿಯಲ್ಲಿ ಪ್ರಿಸ್ಕ್ರಿಪ್ಷನ್ ಬರೆಯಲು ಪ್ರಯತ್ನಿಸುವಂತೆ ಒತ್ತಾಯಿಸಿದರು. ಹಾಗಾಗಿ ಅದೇ ದಿನ ಪ್ರಿಸ್ಕ್ರಿಪ್ಷನ್ ಅನ್ನು ಹಿಂದಿಯಲ್ಲಿ ಬರೆಯಬೇಕು ಎಂದು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

    ಅದರಂತೆ ಹೊಟ್ಟೆನೋವು ಎಂದು ಭಾನುವಾರ ಆಸ್ಪತ್ರೆಗೆ ಬಂದ ಮೊದಲ ರೋಗಿ ರಶ್ಮಿ ಸಿಂಗ್ ಅವರಿಗೆ ನಾನು ಪ್ರಿಸ್ಕ್ರಿಪ್ಷನ್ ಅಲ್ಲಿ Rx ಬದಲಿಗೆ ‘ಶ್ರೀ ಹರಿ’ ಎಂದು ಬರೆಯಲು ಆರಂಭಿಸಿದೆ. ನಂತರ ಔಷಧಿಗಳ ಹೆಸರನ್ನು ಹಿಂದಿಯಲ್ಲಿ ಬರೆದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 2ನೇ ಪೋಕ್ಸೋ ಕೇಸಲ್ಲಿ ಮುರುಘಾಶ್ರೀಗೆ ಸಂಕಷ್ಟ- ಮೈಸೂರಲ್ಲಿ ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

    Live Tv
    [brid partner=56869869 player=32851 video=960834 autoplay=true]

  • ಪರೀಕ್ಷೆಗೆ ತೆರಳುತ್ತಿದ್ದಾಗ ಅಪಘಾತ – ವಿದ್ಯಾರ್ಥಿನಿ ಕಾಲನ್ನೇ ತೆಗೆದ ವೈದ್ಯರು

    ಪರೀಕ್ಷೆಗೆ ತೆರಳುತ್ತಿದ್ದಾಗ ಅಪಘಾತ – ವಿದ್ಯಾರ್ಥಿನಿ ಕಾಲನ್ನೇ ತೆಗೆದ ವೈದ್ಯರು

    ಲಕ್ನೋ: ಅಂಬೇಡ್ಕರ್ ನಗರದಲ್ಲಿ (Ambedkar Nagar) ನಡೆಯುತ್ತಿದ್ದ ಪೂರ್ವಭಾವಿ ಅರ್ಹತಾ ಪರೀಕ್ಷೆ (Preliminary Eligibility Test)(ಪಿಇಟಿ)ಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬರು ಕಾಲು ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh)  ಗೋರಖ್‍ಪುರದಲ್ಲಿ (Gorakhpur) ನಡೆದಿದೆ.

    ಭಾನುವಾರ ಬೆಳಗ್ಗೆ ಕಾಲೇಸರ್ ಪ್ರದೇಶದಲ್ಲಿ (Kaalesar area) ಬೆಳಗ್ಗೆ 9:30ಕ್ಕೆ ಈ ಅಪಘಾತ ಸಂಭವಿಸಿದೆ. ವಿದ್ಯಾರ್ಥಿನಿ ಮತ್ತು ಆಕೆಯ ತಂದೆ ಹೋಗುತ್ತಿದ್ದ ಬೈಕ್‍ಗೆ ಹಿಂದಿನಿಂದ ಬಂದು ಸಿಎನ್‍ಜಿ ಟ್ರಕ್ ಡಿಕ್ಕಿ ಹೊಡೆದಿದೆ. ಇದರಿಂದ ಯುವತಿಯ ಬಲಗಾಲಿಗೆ ಗಂಭೀರವಾಗಿ ಗಾಯವಾಗಿತ್ತು. ಇದನ್ನೂ ಓದಿ: ನಾಪತ್ತೆಯಾಗಿರೋ ಸಂತ್ರಸ್ತೆಯೊಂದಿಗೆ ವರ್ಷದೊಳಗೆ ಮದ್ವೆಯಾಗ್ಬೇಕು- ರೇಪ್ ಆರೋಪಿಗೆ ಬಾಂಬೆ ಹೈಕೋರ್ಟ್ ಆದೇಶ

    ಕೂಡಲೇ ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಯುವತಿಯ ಕಾಲಿಗೆ ತೀವ್ರವಾಗಿ ಹಾನಿಯಾಗಿದ್ದರಿಂದ ವೈದ್ಯರು ಕಾಲನ್ನೇ ಕತ್ತರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೀಪಾವಳಿಗೆ ಸಿಹಿ ಸುದ್ದಿ- ರೈತರ ಖಾತೆಗೆ 2 ಸಾವಿರ ಹಣ ಬಿಡುಗಡೆ ಮಾಡಿದ ಪ್ರಧಾನಿ

    Live Tv
    [brid partner=56869869 player=32851 video=960834 autoplay=true]

  • ಹೆರಿಗೆ ಶಸ್ತ್ರಚಿಕಿತ್ಸೆ ಬಳಿಕ ಬಾಣಂತಿ ಸಾವು – ಸರ್ಕಾರಿ ಆಸ್ಪತ್ರೆ ಎದುರು ಮೃತದೇಹವಿಟ್ಟು ಪ್ರತಿಭಟನೆ

    ಹೆರಿಗೆ ಶಸ್ತ್ರಚಿಕಿತ್ಸೆ ಬಳಿಕ ಬಾಣಂತಿ ಸಾವು – ಸರ್ಕಾರಿ ಆಸ್ಪತ್ರೆ ಎದುರು ಮೃತದೇಹವಿಟ್ಟು ಪ್ರತಿಭಟನೆ

    ಚಿಕ್ಕಬಳ್ಳಾಪುರ: ಹೆರಿಗೆ ಶಸ್ತ್ರ ಚಿಕಿತ್ಸೆಯಾದ (Surgery) ಒಂದು ತಿಂಗಳ ನಂತರ ಬಾಣಂತಿ ಸಾವನ್ನಪ್ಪಿದ್ದು, ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ಸರ್ಕಾರಿ ಆಸ್ಪತ್ರೆಯ (Hospital) ವೈದ್ಯೆ (Doctor) ಕಾರಣ ಎಂದು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ (Government Hospital) ಎದುರು ಇಟ್ಟು ಪ್ರತಿಭಟನೆ (Protest) ನಡೆಸಿದ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.

    ಚಿಂತಾಮಣಿ ತಾಲೂಕು ನೀಲಂಪಲ್ಲಿ ನಿವಾಸಿ ನೇತ್ರಾವತಿ (25) ಮೃತ ಬಾಣಂತಿಯಾಗಿದ್ದು, ಕಳೆದ ತಿಂಗಳು ಸೆಪ್ಟೆಂಬರ್ 9 ರಂದು ಗೋಪಾಲಗೌಡ ತಮ್ಮ ಪತ್ನಿ ನೇತ್ರಾವತಿಯನ್ನು ಹೆರಿಗೆಗೆಂದು ಚಿಂತಾಮಣಿಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರಿ ರೋಗ ತಜ್ಞೆ ಡಾ. ಎನ್.ಆರ್. ಜಯಂತಿ, ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ನೇತ್ರಾವತಿಗೆ ಸಿಜೇರಿಯನ್ ಆಗಿ ಮೂರು ದಿನಗಳ ನಂತರ ಇದ್ದಕ್ಕಿದಂತೆ ಜಾಂಡೀಸ್ ಕಾಣಿಸಿಕೊಂಡಿದೆ. ಇದರಿಂದ ಇನ್ಫೆಕ್ಷನ್ ಆಗಿ ಲಿವರ್ ಸಮಸ್ಯೆ, ಕಿಡ್ನಿ ವೈಫಲ್ಯ ಮತ್ತು ನರದೌರ್ಬಲ್ಯ ಉಂಟಾಗಿದೆ. ಹೊಲಿಗೆಯನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಬೇರೆ ಆಸ್ಪತ್ರೆಯ ವೈದ್ಯರು ಮೃತಳ ಸಂಬಂಧಿಕರಿಗೆ ಮನವರಿಕೆ ಮಾಡಿದ್ದಾರೆ. ನೇತ್ರಾವತಿಗೆ ಇನ್ಫೆಕ್ಷನ್‌  ಅಗಿ ಗಾಯದಲ್ಲಿ ನೀರು, ಕೀವು ತುಂಬಿಕೊಂಡು ಮಲ್ಟಿ ಆರ್ಗನ್ ಸಮಸ್ಯೆಯಿಂದ ನೇತ್ರಾವತಿ ಮೃತ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪೊಲೀಸರಿಗೆ ಹೆದರಿ ನಡು ರಸ್ತೆಯಲ್ಲೇ ಲಾರಿ ಬಿಟ್ಟು ಚಾಲಕ ಪರಾರಿ

    ಇದರಿಂದ ಆಕ್ರೋಶಗೊಂಡಿರುವ ನೇತ್ರಾವತಿ ಸಂಬಂಧಿಕರು ಸರ್ಕಾರಿ ಆಸ್ಪತ್ರೆ ವೈದ್ಯೆ ಜಯಂತಿಯನ್ನು ಅಮಾನತು ಮಾಡೊವರೆಗೂ ಶವ ಎತ್ತುವುದಿಲ್ಲವೆಂದು ಧರಣಿ ನಡೆಸಿದರು. ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಬಂದ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್, ಪ್ರಸೂತಿ ಹಾಗೂ ಸ್ತ್ರಿರೋಗ ತಜ್ಞೆ ಡಾ.ಎನ್.ಆರ್.ಜಯಂತಿಯನ್ನು ಆರೋಗ್ಯ ಇಲಾಖೆ ಆಯುಕ್ತ ಕಚೇರಿಗೆ ವರ್ಗಾವಣೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಸಿಜೇರಿಯನ್ ಮಾಡಿ ಮೂರು ದಿನಗಳ ನಂತರ ನೇತ್ರಾವತಿ ಆರೋಗ್ಯ ಹದಗೆಟ್ಟ ಕಾರಣ ಆಕೆಯ ಪತಿ ಸರ್ಕಾರಿ ವೈದ್ಯೆ ಡಾ.ಜಯಂತಿಯ ಖಾಸಗಿ ಕ್ಲಿನಿಕ್ ಬಳಿ ಹೋಗಿ ಹೇಳಿದ್ರೆ ವೈದ್ಯೆ ಅವಾಚ್ಯವಾಗಿ ಬೈದು ಉಡಾಫೆ ವರ್ತನೆ ತೋರಿದ್ರಂತೆ, ರೋಗಿಗೆ ಸಮರ್ಪಕವಾಗಿ ಗೈಡ್ ಮಾಡುವುದರ ಬದಲು ವೈದ್ಯೆ ಉದ್ಧಟತನ ತೋರಿದ ಕಾರಣ ಬಾಣಂತಿಗೆ ಚಿಕಿತ್ಸೆ ಫಲಕಾರಿಯಾಗದೆ ಒಂದು ತಿಂಗಳ ಗಂಡು ಮಗು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ: ಮೇಲುಗಡೆ ಟೊಮೆಟೊ ಬಾಕ್ಸ್‌ ಕೆಳಗಡೆ ರಕ್ತಚಂದನ ಸಾಗಾಟ – ಐವರು ಅರೆಸ್ಟ್‌

    Live Tv
    [brid partner=56869869 player=32851 video=960834 autoplay=true]