Tag: doctor

  • ಅಶ್ಲೀಲ ಸಂಭಾಷಣೆ ವೀಡಿಯೋ ಕಾಲ್ ಇಟ್ಟುಕೊಂಡು ವೈದ್ಯನಿಗೆ ಬ್ಲಾಕ್ ಮೇಲ್

    ಅಶ್ಲೀಲ ಸಂಭಾಷಣೆ ವೀಡಿಯೋ ಕಾಲ್ ಇಟ್ಟುಕೊಂಡು ವೈದ್ಯನಿಗೆ ಬ್ಲಾಕ್ ಮೇಲ್

    ಹುಬ್ಬಳ್ಳಿ: ಅಶ್ಲೀಲ ವೀಡಿಯೋ(Porn Video) ಇಟ್ಟುಕೊಂಡು ವೈದ್ಯರೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಬ್ಲಾಕ್ ಮೇಲ್(Black Mail) ಮಾಡಿ ಲಕ್ಷಾಂತರ ರೂಪಾಯಿ ವರ್ಗಾಯಿಸಿಕೊಂಡಿದ್ದಾರೆ.

    ನಗರದ ವೈದ್ಯ(Doctor) ಕಾಡಸಿದ್ಧೇಶ್ವರ ಜಿ.ಬಿ ಅವರಿಗೆ ಮೂವರು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಹೆದರಿಸುವ ಮೂಲಕ 3.61 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಪ್ರಕರಣ ಸೈಬರ್ ಪೊಲೀಸ್(Cyber Police) ಠಾಣೆಯಲ್ಲಿ ದಾಖಲಾಗಿದೆ.  ಇದನ್ನೂ ಓದಿ: ಉಕ್ರೇನ್‌ನಲ್ಲಿ ಓದಿದ ವಿದ್ಯಾರ್ಥಿಗಳಿಗೆ ಭಾರತದಲ್ಲಿ ವೈದ್ಯಕೀಯ ಸೀಟ್‌ ನೀಡಲು ಸಾಧ್ಯವಿಲ್ಲ: ಕೇಂದ್ರ

    ಕಾಡಸಿದ್ಧೇಶ್ವರ್‌ಗೆ ನಿಶಾ ಎಂಬ ಹೆಸರಿನ ಮಹಿಳೆ ವಾಟ್ಸಪ್‍ನಲ್ಲಿ(Whatsapp) ವೀಡಿಯೋ ಕಾಲ್ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾಳೆ. ವೈದ್ಯರು ಸಹ ಆಕೆಯ ಜೊತೆಗೆ ಸಲುಗೆಯಿಂದ ಮಾತಾಡಿದ್ದು ಇದನ್ನು ಮಹಿಳೆ ಸ್ಕ್ರೀನ್ ರೆಕಾರ್ಡ್(Screen Record) ಮಾಡಿಕೊಂಡಿದ್ದಾಳೆ. ಕೆಲವು ದಿನಗಳ ಬಳಿಕ ವೈದ್ಯರಿಗೆ ಕರೆ ಮಾಡಿ ಅಶ್ಲೀಲ ಸಂಭಾಷಣೆ ವೀಡಿಯೋವನ್ನು ನಿಮ್ಮ ಸಂಬಂಧಿಕರಿಗೆ ಕಳುಹಿಸುತ್ತೇನೆ ಎಂದು ಹೆದರಿಸಿ ಮೊದಲಿಗೆ 10 ಸಾವಿರ, ಆದಾದ ಬಳಿಕ 70,10 ಸಾವಿರ ಹಣ ವರ್ಗಾಯಿಸಿ ಕೊಂಡಿದ್ದಾಳೆ.

    ಅಷ್ಟೇ ಅಲ್ಲದೇ ಬಳಿಕ ಸಂಜೀವ ಹೆಸರಿನ ವ್ಯಕ್ತಿ ಯೂಟೂಬ್ ವಾಹಿನಿಯ ವರದಿಗಾರ ಹಾಗೂ ವಿಕ್ರಮ್ ಎಂಬುವವರು ದೆಹಲಿಯ ಕ್ರೈಂ ಬ್ರ್ಯಾಂಚ್ ಅಧಿಕಾರಿ ಎಂದು ಹೆದರಿಸಿ ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ಕೇವಲ ಧರ್ಮಾಧಾರಿತ ಅಲ್ಲ, ಇದು ಲಿಂಗಾಧಾರಿತ ತಾರತಮ್ಯ – ಹಿಜಬ್‌ಗೆ ಅನುಮತಿ ನೀಡಿ

    Live Tv
    [brid partner=56869869 player=32851 video=960834 autoplay=true]

  • ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟರು – 3 ಕಿ.ಮೀ ಓಡಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಯ ಪ್ರಾಣ ಉಳಿಸಿದ ಡಾಕ್ಟರ್

    ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟರು – 3 ಕಿ.ಮೀ ಓಡಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಯ ಪ್ರಾಣ ಉಳಿಸಿದ ಡಾಕ್ಟರ್

    ಬೆಂಗಳೂರು: ಮಳೆಯಿಂದ ಕಾರು ಟ್ರಾಫಿಕ್‍ನಲ್ಲಿ ಸಿಲುಕಿಕೊಂಡು ಡಾಕ್ಟರ್ (Doctor) ಒಬ್ಬರು 3 ಕಿ.ಮೀ ಓಡಿಕೊಂಡು ಆಸ್ಪತ್ರೆಗೆ (Hospital) ತೆರಳಿ ರೋಗಿಗೆ ಶಸ್ತ್ರಚಿಕಿತ್ಸೆ (Surgery) ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಟ್ರಾಫಿಕ್‍ನಲ್ಲಿ ಸಿಲುಕಿದ್ದ ಡಾ. ಗೋವಿಂದ ನಂದಕುಮಾರ್ ಬೆಂಗಳೂರಿನ ಸರ್ಜಾಪುರದ ಮಣಿಪಾಲ್ ಆಸ್ಪತ್ರೆಯಲ್ಲಿ (Manipal Hospital) ಸರ್ಜನ್ ಆಗಿ ಕೆಲಸ ಮಾಡುತ್ತಿದ್ದು, ಸಕಾಲಕ್ಕೆ ರೋಗಿಗೆ ಚಿಕಿತ್ಸೆ ಸಿಗಬೇಕು ಎಂದು ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟು ಓಡಿ ಶಸ್ತ್ರಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ಗುಂಡಿ ಮುಚ್ಚಲು ಕಟ್ಟಡ ತ್ಯಾಜ್ಯ ಬಳಸಿದ ಪಾಲಿಕೆ – BBMP ಕಳಪೆ ಕಾಮಗಾರಿಗೆ ಜನರ ಛೀಮಾರಿ

    ಘಟನೆಯ ಹಿನ್ನೆಲೆ:
    ಆಗಸ್ಟ್ 30 ರಂದು ರೋಗಿಯೊಬ್ಬರಿಗೆ ಲ್ಯಾಪ್ರೋ ಸ್ಕೋಪಿಕ್ ಗ್ಲಾಡ್ ಬ್ಲಡರ್ ಚಿಕಿತ್ಸೆ ಮಾಡಬೇಕಾಗಿತ್ತು. ಹಾಗಾಗಿ ಡಾ. ಗೋವಿಂದ ನಂದಕುಮಾರ್ ಕನ್ನಿಂಗ್ ಹ್ಯಾಮ್‍ನಿಂದ ಸರ್ಜಾಪುರದ ಮಣಿಪಾಲ್ ಆಸ್ಪತ್ರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಅಂದು ವಿಪರೀತ ಮಳೆಯಾಗಿತ್ತು. ಪರಿಣಾಮ ಮಾರತಹಳ್ಳಿ ಮತ್ತು ಸರ್ಜಾಪುರದ ರಸ್ತೆ ಕಂಪ್ಲೀಟ್ ಜಾಮ್ ಆಗಿತ್ತು. ಬೆಳ್ಳಗ್ಗೆ 10 ಗಂಟೆಗೆ ಶಸ್ತ್ರಚಿಕಿತ್ಸೆ ನಿಗದಿಯಾಗಿತ್ತು. ಟ್ರಾಫಿಕ್ ಇದ್ದ ಪರಿಣಾಮ ಆಸ್ಪತ್ರೆ ತಲುಪಲು 1 ಗಂಟೆ ಸಮಯ ಹಿಡಿಯುತ್ತಿತ್ತು. ಹೀಗಾಗಿ ವೈದ್ಯರು ಕಾರನ್ನು ಆಸ್ಪತ್ರೆಗೆ ತರುವಂತೆ ಕಾರು ಚಾಲಕನಿಗೆ ಹೇಳಿ 3 ಕಿ.ಮೀ ಓಡಿಹೋಗಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಇದನ್ನೂ ಓದಿ: ಗುಂಡಿ ಮುಚ್ಚಲು ಕಟ್ಟಡ ತ್ಯಾಜ್ಯ ಬಳಸಿದ ಪಾಲಿಕೆ – BBMP ಕಳಪೆ ಕಾಮಗಾರಿಗೆ ಜನರ ಛೀಮಾರಿ

    ವೈದ್ಯರು ಓಡಿಹೋಗಿ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ರೋಗಿಯು ಆರೋಗ್ಯವಾಗಿ ಇದ್ದಾರೆ. ಇದೀಗ ವೈದ್ಯರ ಈ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಬಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯುತ್ ಕಡಿತ – ಮೊಬೈಲ್ ಟಾರ್ಚ್ ಬಳಸಿ ವೈದ್ಯರಿಂದ ರೋಗಿಗೆ ಚಿಕಿತ್ಸೆ

    ವಿದ್ಯುತ್ ಕಡಿತ – ಮೊಬೈಲ್ ಟಾರ್ಚ್ ಬಳಸಿ ವೈದ್ಯರಿಂದ ರೋಗಿಗೆ ಚಿಕಿತ್ಸೆ

    ಲಕ್ನೋ: ಉತ್ತರಪ್ರದೇಶ(Uttar Pradesh) ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ವಿದ್ಯುತ್ ಕಡಿತಗೊಳಿಸಿದ್ದ ಹಿನ್ನೆಲೆ ವೈದ್ಯರು ಮೊಬೈಲ್ ಟಾರ್ಚ್ (Mobile Torch) ಬಳಸಿ ರೋಗಿಗೆ ಚಿಕಿತ್ಸೆ ನೀಡಿದ್ದಾರೆ.

    ಧಾರಾಕಾರ ಮಳೆ ಸುರಿದ ಹಿನ್ನೆಲೆ ಬಲಿಯಾ(Balia) ಜಿಲ್ಲೆಯ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಳಿಸಲಾಗಿತ್ತು. ಹೀಗಾಗಿ ರೋಗಿಗಳಿಗೆ ಒಂದು ಗಂಟೆಗೂ ಹೆಚ್ಚು ಕಾಲ ಮೊಬೈಲ್ ಟಾರ್ಚ್ ಲೈಟ್‍ನಲ್ಲಿಯೇ ಚಿಕಿತ್ಸೆ ನೀಡಿದ್ದಾರೆ. ಇದನ್ನೂ ಓದಿ: ಬಾರ್‌ನಲ್ಲಿ ಝಳಪಿಸಿದ ಲಾಂಗ್-ಮಚ್ಚು: ಕುಡಿಯಲು ಬಂದವರಿಂದ ಏಕಾಏಕಿ ಅಟ್ಯಾಕ್

    ಹಲವಾರು ಜನರು ಮಹಿಳೆಯರು ಕತ್ತಲೆಯಲ್ಲಿ ಸ್ಟ್ರೆಚರ್ ಮೇಲೆ ಕುಳಿತಿದ್ದು, ವ್ಯಕ್ತಿಯೋರ್ವ ಮೊಬೈಲ್ ಫೋನ್ ಅನ್ನು ಹಿಡಿದಿಟ್ಟುಕೊಂಡಿದ್ದರೆ, ವೈದ್ಯರು ಮಹಿಳೆಯನ್ನು ಚೆಕ್‍ಆಪ್ ಮಾಡುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಬ್ರಿಟನ್ ರಾಣಿಯ ಕಿರೀಟದಲ್ಲಿದ್ದ ಕೊಹಿನೂರು ವಜ್ರದ ಮೂಲ ಯಾದಗಿರಿ!

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಮತ್ತು ಪ್ರಭಾರ ಮುಖ್ಯಾಧಿಕಾರಿ ಡಾ.ಆರ್.ಡಿ.ರಾಮ್ ಜನರೇಟರ್‌ಗಾಗಿ(Generator) ಬ್ಯಾಟರಿಗಳನ್ನು ಪಡೆಯುತ್ತಿದ್ದರಿಂದ 15-20 ನಿಮಿಷಗಳ ಕಾಲ ವ್ಯತ್ಯಯವಾಗಿದೆ. ಆಸ್ಪತ್ರೆಯಲ್ಲಿ ಬ್ಯಾಕ್‍ಅಪ್‍ಗಾಗಿ ಜನರೇಟರ್ ಇದೆ. ಆದರೆ ಬ್ಯಾಟರಿಗಳನ್ನು ಪಡೆಯಲು ಸಮಯ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಜನರೇಟರ್ ಬ್ಯಾಟರಿ ಇಲ್ಲದೇ ಇರಲು ಕಾರಣವೇನು ಎಂಬ ಪ್ರಶ್ನಿಸಿದಾಗ, ಯಾವಾಗಲೂ ಬ್ಯಾಟರಿಗಳು ಕಳ್ಳತನವಾಗುವ ಭಯ ಇದ್ದೇ ಇರುತ್ತದೆ. ಹಾಗಾಗಿ ತೆಗೆದಿಡಲಾಗಿತ್ತು ಎಂದಿದ್ದಾರೆ. ಆದರೆ ಈ ಘಟನೆ ಬಗ್ಗೆ ರಾಜ್ಯ ಸರ್ಕಾರ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಕ್ಲಿನಿಕ್ ಬಾಗಿಲು ತೆಗೆಯಲು ತಡ- ಡಾಕ್ಟರ್ ಮೇಲೆ ಹಲ್ಲೆ

    ಕ್ಲಿನಿಕ್ ಬಾಗಿಲು ತೆಗೆಯಲು ತಡ- ಡಾಕ್ಟರ್ ಮೇಲೆ ಹಲ್ಲೆ

    ಮುಂಬೈ: ಕ್ಲಿನಿಕ್(Clinic) ಬಾಗಿಲನ್ನು ತೆರೆಯಲು ತಡ ಮಾಡಿದ್ದಕ್ಕೆ ಗುಂಪೊಂದು ವೈದ್ಯರಿಗೆ ಥಳಿಸಿದ ಘಟನೆ ಮಹಾರಾಷ್ಟ್ರದ(Maharashtra) ಬಾರಾಮತಿಯಲ್ಲಿ ನಡೆದಿದೆ.

    ಯುವರಾಜ್ ಗಾಯಕ್ವಾಡ್ ಅವರ ಮನೆಯಿಂದ ಹೊರಗಿರುವ ಕ್ಲಿನಿಕ್‍ನಲ್ಲಿ ಈ ಘಟನೆ ನಡೆದಿದೆ. ವೈದ್ಯರು(Doctor) ಕ್ಲಿನಿಕ್‍ನ ಬಾಗಿಲನ್ನು ಸ್ವಲ್ಪ ತಡವಾಗಿ ತೆರೆದಿದ್ದರಿದ್ದಾರೆ. ಇದರಿಂದಾಗಿ ರೋಗಿಯ ಸಂಬಂಧಿಗಳು ಸೇರಿ ವೈದ್ಯರಿಗೂ ಹಾಗೂ ಅವರ ಮಗನ ಮೇಲೂ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧಿಸಿ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

    crime

    ಘಟನೆಗೆ ಸಂಬಂಧಿಸಿ ಗಾಯಕ್ವಾಡ್ ಕುಟುಂಬಸ್ಥರು ದೂರು ನೀಡಿದ್ದಾರೆ. ದೂರಿನಲ್ಲಿ ಗಾಯಕ್ವಾಡ್ ಅವರು, ತಮ್ಮ ಕುಟುಂಬದೊಂದಿಗೆ ರಾತ್ರಿ ಊಟ ಮಾಡುತ್ತಿದ್ದಾಗ ಅವರ ಮನೆಯ ಬಾಗಿಲನ್ನು ಯಾರೋ ಜೋರಾಗಿ ಬಡಿಯುತ್ತಿರುವುದು ಕೇಳಿದ್ದಾರೆ. ಆದರೆ ಬಾಗಿಲು ತೆರೆಯಲು ತಡವಾಗಿತ್ತು. ಇದರಿಂದಾಗಿ ಗುಂಪೊಂದು ಕಿಟಕಿಯ ಗಾಜು ಒಡೆದರು. ಆದರೂ ವೈದ್ಯರು ಬಾಗಿಲನ್ನು ತೆರೆದಾಗ, ಆನಂದ್ ಅಲಿಯಾಸ್ ಅನಿಲ್ ಜಗತಾಪ್, ವಿಶ್ವಜೀತ್ ಜಗತಾಪ್, ಅಶೋಕ್ ಜಗತಾಪ್ ಮತ್ತು ಭೂಷಣ್ ಜಗತಾಪ್ ಅವರ ಮನೆಗೆ ನುಗ್ಗಿ ಅವರನ್ನು ಥಳಿಸಲು ಪ್ರಾರಂಭಿಸಿದರು. ಇದನ್ನೂ ಓದಿ: ರಸ್ತೆ ಪಕ್ಕದ ಚರಂಡಿಗೆ ಬಿದ್ದು ಯುವತಿ ದುರ್ಮರಣ

    ಸಿಸಿಟಿವಿಯಲ್ಲಿ ಏನಿದೆ?: ಗಾಯಕ್ವಾಡ ತಮ್ಮ ಕ್ಲಿನಿಕ್ ಬಾಗಿಲನ್ನು ತೆರೆದಿದ್ದಾರೆ. ಆಗ ಕ್ಲಿನಿಕ್‍ನೊಳಗೆ ಪ್ರವೇಶಿಸಿದ 4-5 ಮಂದಿ ಗಾಯಕ್ವಾಡ್‍ಗೆ ಹೊಡೆಯಲು ಪ್ರಾರಂಭಿಸುತ್ತಾರೆ. ಅಧೆ ಸಮಯಕ್ಕೆ ಮನೆಯಿಂದ ಹೊರ ಬಂದ ಮಗನನ್ನು ನೋಡಿ ಅವನ ಶರ್ಟ್‍ನ್ನು ಹಿಡಿದು ಅವನ ಮೇಲೂ ಹಲ್ಲೆ ನಡೆಸುತ್ತಾರೆ. ಇಬ್ಬರೂ ತಪ್ಪಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಪಡುತ್ತಾರೆ. ಅಷ್ಟೇ ಅಲ್ಲದೇ ಕೊಣೆಯಲ್ಲಿ ಇಬ್ಬರು ಮಹಿಳೆಯರು ಘಟನೆಯನ್ನು ವೀಕ್ಷಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆ ಆಗಿದೆ. ಘಟನೆಗೆ ಸಂಬಂಧಿಸಿ ಮಾಲೆಗಾಂವ್ ಪೊಲೀಸರು ವೈದ್ಯರ ಮೇಲೆ ಹಲ್ಲೆ ನಡೆಸಿದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ‘ಕುದುರೆ ವ್ಯಾಪಾರ’ ಆರೋಪ – ಕಾಂಗ್ರೆಸ್ ಶಾಸಕ, ಬಿಜೆಪಿ ನಾಯಕಿಯ ಹಾದಿಬೀದಿ ರಂಪಾಟ

    Live Tv 
    [brid partner=56869869 player=32851 video=960834 autoplay=true]

  • ವ್ಯಕ್ತಿಯ ಗುದದ್ವಾರಕ್ಕೆ ಸ್ಟೀಲ್ ಗ್ಲಾಸ್ ತುರುಕಿದ ಸ್ನೇಹಿತರು – ಮಲ ವಿಸರ್ಜನೆ ಮಾಡಲಾಗದೇ ಪರದಾಡಿದ

    ವ್ಯಕ್ತಿಯ ಗುದದ್ವಾರಕ್ಕೆ ಸ್ಟೀಲ್ ಗ್ಲಾಸ್ ತುರುಕಿದ ಸ್ನೇಹಿತರು – ಮಲ ವಿಸರ್ಜನೆ ಮಾಡಲಾಗದೇ ಪರದಾಡಿದ

    ಭುವನೇಶ್ವರ್: ಕುಡಿದ ಅಮಲಿನಲ್ಲಿ ವ್ಯಕ್ತಿಯ ಗುದದ್ವಾರಕ್ಕೆ ಸ್ಟೀಲ್ ಗ್ಲಾಸ್ ಅನ್ನು ಆತನ ಸ್ನೇಹಿತರೇ ತುರುಕಿರುವ ಘಟನೆ ಒಡಿಶಾದ ಬೆಹ್ರಾಂಪುರದಲ್ಲಿ ನಡೆದಿದೆ.

    ಭಾನುವಾರ ಬೆಹಾರ್ಂಪುರ ನಗರದ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯರು ವ್ಯಕ್ತಿಯ ಕರುಳಿನಿಂದ ಸ್ಟೀಲ್ ಗ್ಲಾಸ್ ಅನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದು ಹಾಕಿದ್ದಾರೆ. ಇದನ್ನೂ ಓದಿ: ಸಂಗೀತ ಕಾರ್ಯಕ್ರಮದಲ್ಲಿ ಬಿಯರ್ ಬಾಟಲಿ, ಕಲ್ಲು ತೂರಿ ಪೊಲೀಸರ ಮೇಲೆ ಹಲ್ಲೆ

    ಗುಜರಾತ್‍ನ ಸೂರತ್‍ನಲ್ಲಿ ಕೆಲಸ ಮಾಡುತ್ತಿರುವ 45 ವರ್ಷದ ಕೃಷ್ಣ ರೌತ್, 10 ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಅವನ ಸ್ನೇಹಿತರು ಕುಡಿದ ಅಮಲಿನಲ್ಲಿ ಗುದದ್ವಾರದೊಳಗೆ ಸ್ಟೀಲ್ ಗ್ಲಾಸ್ ಅನ್ನು ತುರುಕಿದ್ದಾರೆ. ಮರುದಿನದಿಂದ ಕೃಷ್ಣ ರೌತ್ ಕರುಳಿನಲ್ಲಿ ನೋವಿ ಕಾಣಿಸಿಕೊಂಡು ಬಳಲುತ್ತಿದ್ದರೂ, ಈ ವಿಚಾರವನ್ನು ತನ್ನ ಕುಟುಂಬ ಸದಸ್ಯರೊಂದಿಗೆ ಹೇಳಿಕೊಂಡಿರಲಿಲ್ಲ. ಆದರೆ ನೋವು ತೀವ್ರವಾಗುತ್ತಿದ್ದಂತೆ ಸೂರತ್ ತೊರೆದು ಗಂಜಾಂನ ತಮ್ಮ ಹಳ್ಳಿಗೆ ತೆರಳಿದ್ದಾರೆ.

    ಕೃಷ್ಣ ರೌತ್ ಗ್ರಾಮಕ್ಕೆ ತಲುಪುತ್ತಿದ್ದಂತೆ, ಅವರ ಹೊಟ್ಟೆಯಲ್ಲಿ ಊತ ಹೆಚ್ಚಾಗಿದೆ ಮತ್ತು ಮಲವಿಸರ್ಜನೆ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ನಂತರ ಅವರ ಕುಟುಂಬಸ್ಥರ ಸಲಹೆಯ ಮೇರೆಗೆ, ತಪಾಸಣೆಗಾಗಿ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದರು. ಇದನ್ನೂ ಓದಿ: ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ, ಶಕ್ತಿ ಪ್ರದರ್ಶನ ಸರಿಯಲ್ಲ: ವಿಶ್ವನಾಥ್

    ಎಕ್ಸ್-ರೇ ನಡೆಸಿದ ವೈದ್ಯರಿಗೆ ಕರುಳಿನೊಳಗೆ ಕ್ಲಾಸ್ ಸೇರಿಕೊಂಡಿರುವುದು ತಿಳಿದುಬಂದಿದೆ. ನಂತರ ವೈದ್ಯರು ಮೊದಲು ಗುದನಾಳದ ಮೂಲಕ ಗ್ಲಾಸ್ ಅನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ತಮ್ಮ ಪ್ರಯತ್ನ ವಿಫಲವಾದಾಗ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಪ್ರೊ.ಚರಣ್ ಪಾಂಡಾ ಅವರ ಸಲಹೆ ಮೇರೆಗೆ ಸಹಾಯಕ ಪ್ರಾಧ್ಯಾಪಕ ಸಂಜಿತ್ ಕುಮಾರ್ ನಾಯಕ್, ಡಾ.ಸುಬ್ರತ್ ಬರಲ್, ಡಾ.ಸತ್ಯಸ್ವರೂಪ್, ಡಾ.ಪ್ರತಿಭಾ ಅವರನ್ನೊಳಗೊಂಡ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಗ್ಲಾಸ್ ಹೊರತೆಗೆದಿದ್ದಾರೆ. ಇದೀಗ ವ್ಯಕ್ತಿ ಚೇತರಿಸಿಕೊಳ್ಳುತ್ತಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ವೈದ್ಯನ ಮೇಲೆ ಹಲ್ಲೆ ನಡೆಸಿದ ಮಿಜೋರಾಂ ಸಿಎಂ ಪುತ್ರಿ – ತಂದೆಯಿಂದಲೇ ಸಾರ್ವಜನಿಕವಾಗಿ ಕ್ಷಮೆ

    ವೈದ್ಯನ ಮೇಲೆ ಹಲ್ಲೆ ನಡೆಸಿದ ಮಿಜೋರಾಂ ಸಿಎಂ ಪುತ್ರಿ – ತಂದೆಯಿಂದಲೇ ಸಾರ್ವಜನಿಕವಾಗಿ ಕ್ಷಮೆ

    ಐಜ್ವಾಲ್: ಮಿಜೋರಾಂ ಮುಖ್ಯಮಂತ್ರಿಯ ಪುತ್ರಿ ಏಕಾಏಕಿ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ ವೀಡಿಯೋ ವೈರಲ್ ಆಗಿದೆ. ಈ ಹಿನ್ನೆಲೆ ಆಕೆಯ ತಂದೆ, ಮಿಜೋರಾಂನ ಸಿಎಂ ಝೋರಂತಂಗ ಅವರು ಖುದ್ದಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.

    ಸಿಎಂ ಪುತ್ರಿ ಮಿಲಾರಿ ಚಾಂಗ್ಟೆ ರಾಜ್ಯದ ರಾಜಧಾನಿ ಐಜ್ವಾಲ್‌ನಲ್ಲಿ ಚರ್ಮರೋಗ ತಜ್ಞನನ್ನು ಭೇಟಿಯಾಗಲು ಬಯಸಿದ್ದರು. ಆದರೆ ಭೇಟಿಗೂ ಮೊದಲು ಅಪಾಯಿಂಟ್‌ಮೆಂಟ್ ತೆಗೆದುಕೊಂಡು ಬರುವಂತೆ ಸೂಚಿಸಲಾಗಿತ್ತು. ಇದರಿಂದ ಕೋಪಗೊಂಡ ಚಾಂಗ್ಟೆ ವೈದ್ಯನ ಮೇಲೆ ಹಲ್ಲೆ ನಡೆಸಿದ್ದಾರೆ.

    ಘಟನೆ ಬುಧವಾರ ನಡೆದಿರುವುದಾಗಿ ತಿಳಿದುಬಂದಿದ್ದು, ಹಲ್ಲೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೋದಲ್ಲಿ ಮುಖ್ಯಮಂತ್ರಿಗಳ ಮಗಳು ವೈದ್ಯರ ಬಳಿ ಹೋಗುವುದು ಹಾಗೂ ವೈದ್ಯನಿಗೆ ಹೊಡೆದಿರುವುದು ಕಂಡುಬಂದಿದೆ. ಈ ವೀಡಿಯೋ ಕಳೆದ 2 ದಿನಗಳಿಂದ ವೈರಲ್ ಆಗುತ್ತಿದ್ದು, ಬಳಿಕ ಮುಖ್ಯಮಂತ್ರಿ ಹಾಗೂ ಅವರ ಕುಟುಂಬದ ಸದಸ್ಯರು ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಜೀವ ಬೆದರಿಕೆ- ತನಿಖೆ ಮಾಡಿಸ್ತೀವಿ ಎಂದ ಸಿಎಂ

    ಈ ಘಟನೆಯ ವಿರುದ್ಧ ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಿಜೋರಾಂ ಘಟಕ ಪ್ರತಿಭಟನೆ ಆರಂಭಿಸಿದ್ದು, ವೈದ್ಯರು ಕಪ್ಪು ಬ್ಯಾಡ್ಜ್ ಧರಿಸಿ ಕೆಲಸ ಮಾಡಿರುವುದಾಗಿ ವರದಿಯಾಗಿದೆ.

    ಅಂತಿಮವಾಗಿ ಮಿಜೋರಾಂ ಸಿಎಂ ಇನ್‌ಸ್ಟಾಗ್ರಾಮ್‌ನ ಅಧಿಕೃತ ಖಾತೆ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಐಜ್ವಾಲ್ ಮೂಲದ ಚರ್ಮರೋಗ ವೈದ್ಯರೊಂದಿಗೆ ತಮ್ಮ ಮಗಳು ತೋರಿದ ದುರ್ವರ್ತನೆಗೆ ನಾನು ಕ್ಷಮೆ ಯಾಚಿಸುತ್ತೇನೆ. ನಾನು ಯಾವುದೇ ರೀತಿಯಲ್ಲೂ ಆಕೆಯ ನಡವಳಿಕೆಯನ್ನು ಸಮರ್ಥಿಸುವುದಿಲ್ಲ ಎಂದು ಬರೆದಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ಅವರೇ ದೆಹಲಿ ಮದ್ಯ ಅಕ್ರಮದ ಕಿಂಗ್‌ಪಿನ್, ಬಂಧನ ಹತ್ತಿರದಲ್ಲೇ ಇದೆ: ಬಿಜೆಪಿ

    Live Tv
    [brid partner=56869869 player=32851 video=960834 autoplay=true]

  • ಮಹಿಳೆಯ ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್‍ನ್ನು ಹೊರತೆಗೆದ ವೈದ್ಯರು

    ಮಹಿಳೆಯ ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್‍ನ್ನು ಹೊರತೆಗೆದ ವೈದ್ಯರು

    ಹುಬ್ಬಳ್ಳಿ: ಅಪರೂಪದ ಶಸ್ತ್ರ ಚಿಕಿತ್ಸೆವೊಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರು 28 ವರ್ಷದ ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್‍ವೊಂದನ್ನು ಹೊರ ತೆಗೆದಿದ್ದಾರೆ.

    ಹಾವೇರಿ ಜಿಲ್ಲೆ ಹಾನಗಲ್ ಬಳಿಯ ಹಿರೂರು ಗ್ರಾಮದ ಗೃಹಿಣಿ ವಿನೋದಾ ತಳವರ್ (28) ಅವರ 4 ವರ್ಷದ ಮಗಳು ಆ. 14ರಂದು ಬೆಳಗ್ಗೆ ಹಲ್ಲು ಉಜ್ಜುವಾಗ ಇದ್ದಕ್ಕಿದ್ದಂತೆ ಟೂತ್ ಬ್ರಶ್, ಆಕೆಯ ತಾಯಿಯ ಎಡಗಣ್ಣಿನ ಕೆಳಗೆ ಸಿಲುಕಿದೆ. ನಂತರ ಕುಟುಂಬ ಸದಸ್ಯರು ಅದನ್ನು ತೆಗೆಯಲು ಪ್ರಯತ್ನಿಸಿದಾಗ ಬ್ರಶ್ ಮುರಿದಿದೆ.

    ಕುಟುಂಬಸ್ಥರು ಕೂಡಲೇ ಮಹಿಳೆಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೋಗಿಯನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಶಿಫಾರಸ್ಸು ಮಾಡಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಮಹಿಳೆಯನ್ನು ದಾಖಲಿಸಲಾಗಿತ್ತು. ವೈದ್ಯರು ಮುಖದ ಸಿಟಿ ಸ್ಕ್ಯಾನ್, ಸಿಟಿ ಆಂಜಿಯೋಗ್ರಾಮ್ ಮಾಡಿದಾಗ ಕಣ್ಣಿನ ಕೆಳಗೆ ಬ್ರಶ್ ಸಿಲುಕಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಪರಿಶಿಷ್ಟ ಜಾತಿಗೆ ಸೇರಿದವಳೆಂದು ತಿಳಿದು ಆಕೆ ದೇಹ ಮುಟ್ಟುತ್ತಾನೆಂಬುದು ನಂಬಲಸಾಧ್ಯ: ಕೋರ್ಟ್‌

    ಸ್ಕ್ಯಾನ್ ವರದಿ ತನಿಖೆ ವೇಳೆ ಎಡಗಣ್ಣು ಸಂಪೂರ್ಣವಾಗಿ ಹಾನಿಯಾಗಿರುವುದು ಕಂಡುಬಂದಿತ್ತು. ನಂತರ ನೇತ್ರಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಕೂಡಲೇ ಶಸ್ತ್ರ ಚಿಕಿತ್ಸೆ ಮಾಡಲು ನಿರ್ಧರಿಸಿದ್ದಾಗಿ ಹಿರಿಯ ವೈದ್ಯರೊಬ್ಬರು ತಿಳಿಸಿದರು. ಇದನ್ನೂ ಓದಿ: ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಫ್ಯಾಮಿಲಿ ಆತ್ಮಹತ್ಯೆಗೆ ಶರಣು

    ಸಂಪೂರ್ಣ ಅಧ್ಯಯನ ನಂತರ, ಬುಧವಾರ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಲಾಯಿತು. ಡಾ. ಮಂಜುನಾಥ್ ವಿಜಯಪುರ, ಡಾ. ವಸಂತ್ ಕಟ್ಟಿಮನಿ, ಡಾ. ಅನುರಾಧ ನಾಗನಗೌಡರ್, ಡಾ. ಸ್ಫೂರ್ತಿ ಶೆಟ್ಟಿ ಮತ್ತು ಅರವಳಿಕೆ ಮತ್ತು ನೇತ್ರಶಾಸ್ತ್ರ ವಿಭಾಗದ ಸಿಬ್ಬಂದಿಯ ನೆರವಿನಿಂದ ಬುಧವಾರ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಫ್ಲ್ಯಾಶ್‌ಲೈಟ್‌ನಲ್ಲಿ ಇಸಿಜಿ ಟೆಸ್ಟ್ ಮಾಡಿದ ಸರ್ಕಾರಿ ಆಸ್ಪತ್ರೆ ವೈದ್ಯರು

    ಫ್ಲ್ಯಾಶ್‌ಲೈಟ್‌ನಲ್ಲಿ ಇಸಿಜಿ ಟೆಸ್ಟ್ ಮಾಡಿದ ಸರ್ಕಾರಿ ಆಸ್ಪತ್ರೆ ವೈದ್ಯರು

    ರಾಂಚಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಬೇಕಾಗಿರುವ ಸೌಲಭ್ಯಗಳು ಸಿಗುತ್ತಿಲ್ಲ ಎಂಬುದಕ್ಕೆ ಇಂದೊಂದು ದೊಡ್ಡ ಉದಾಹರಣೆಯಾಗಿದೆ. ಜಾರ್ಖಂಡ್‍ನ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ವಿದ್ಯುತ್ ಇಲ್ಲದೇ ಫ್ಲ್ಯಾಶ್‌ಲೈಟ್‌ನಲ್ಲಿ ಯೇ ಇಸಿಜಿ ಟೆಸ್ಟ್ ಮಾಡಿರುವ ಸುದ್ದಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

    ಜಾರ್ಖಂಡ್‍ನ ಶೇಖ್ ಭಿಖಾರಿ ಆಸ್ಪತ್ರೆಯ ವೈದ್ಯರು ಕಟ್ಟಡದಲ್ಲಿನ ವಿದ್ಯುತ್ ಸ್ಥಗಿತಗೊಂಡ ನಂತರ ಮೊಬೈಲ್ ಬ್ಯಾಟರಿ ಬೆಳಕಿನಲ್ಲಿ ಎಲೆಕ್ಟ್ರೋಕಾರ್ಡಿಯೋಗ್ರಾಮ್(ಇಸಿಜಿ) ಪರೀಕ್ಷೆಯನ್ನು ಮಾಡಿದ್ದಾರೆ. ಪರೀಕ್ಷೆ ಮಾಡುತ್ತಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಈ ಫೋಟೋ ನೋಡಿದ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ‘ಚಿಕನ್ ಕಥಿ’ ಆಯ್ತು.. ಇಂದು ‘ಚಿಕನ್ ಕಾಲು ಸೂಪ್’ ಮಾಡಿ ಸವಿಯಿರಿ 

    ಮಹುಗಾಂವ್ ಗ್ರಾಮದ ನಿವಾಸಿ ಸಾಗರ್ ಕುಮಾರ್ ಯಾದವ್ ಅವರನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ. ತುರ್ತು ಪರಿಸ್ಥಿತಿಯ ಹಿನ್ನೆಲೆ ಕರೆಟ್ ಇಲ್ಲದ ಕಾರಣ ಬೇರೆ ವಿಧಿಯಿಲ್ಲದೇ ವೈದ್ಯರು ಫ್ಲ್ಯಾಶ್‌ಲೈಟ್‌ ಬೆಳಕಿನಲ್ಲಿ ಪರೀಕ್ಷೆ ನಡೆಸಬೇಕಾಯಿತು.

    ಆದರೆ ಮಾಹಿತಿಗಳ ಪ್ರಕಾರ ಈ ಆಸ್ಪತ್ರೆಯು ಬ್ಯಾಕ್‍ಅಪ್‍ಗಾಗಿ ಎರಡು ಜನರೇಟರ್‌ಗಳನ್ನು ಹೊಂದಿರುವುದರಿಂದ ವಿದ್ಯುತ್ ಕೊರತೆಯಿಲ್ಲ. ಜನರೇಟರ್‌ಗಳಿಗಾಗಿ ಪ್ರತಿದಿನ 100 ರಿಂದ 150 ಲೀಟರ್ ಡೀಸೆಲ್ ಬಳಸಲಾಗುತ್ತೆ. ಈ ಹಿಂದೆಯೂ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸೋಲಾರ್ ಪ್ಯಾನಲ್ ಅಳವಡಿಸಲಾಗಿತ್ತು. ಆಸ್ಪತ್ರೆಯಲ್ಲಿ ಇನ್ವರ್ಟರ್ ಕೂಡ ಇದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿ ಆರೋಪಿ ಪರಾರಿ 

    Live Tv
    [brid partner=56869869 player=32851 video=960834 autoplay=true]

  • ಈತನ ಹೊಟ್ಟೆಯಲ್ಲಿತ್ತು 1 ರೂಪಾಯಿಯ 63 ನಾಣ್ಯಗಳು – ಎಕ್ಸ್‌ರೇ ನೋಡಿ ವೈದ್ಯರೂ ಶಾಕ್

    ಈತನ ಹೊಟ್ಟೆಯಲ್ಲಿತ್ತು 1 ರೂಪಾಯಿಯ 63 ನಾಣ್ಯಗಳು – ಎಕ್ಸ್‌ರೇ ನೋಡಿ ವೈದ್ಯರೂ ಶಾಕ್

    ಜೈಪುರ: ಮನುಷ್ಯರು ಹೊಟ್ಟೆಗೆ ಹಣ್ಣು, ತರಕಾರಿ, ಅನ್ನ ಮತ್ತು ಹೆಚ್ಚು ಆಧುನಿಕತೆಗೆ ಹೊಂದಿಕೊಡವರು ಪಿಜ್ಜಾ ಇನ್ನು ಮುಂತಾದ ಬಾಯಿಗೆ ರುಚಿ ಇರುವ ಪದಾರ್ಥಗಳನ್ನು ತಿನ್ನುತ್ತಾರೆ. ಆದರೆ ರಾಜಸ್ಥಾನದ ಜೋಧ್‍ಪುರದಲ್ಲಿ 36 ವರ್ಷದ ವ್ಯಕ್ತಿಯೊಬ್ಬ 1 ರೂಪಾಯಿಯ 63 ನಾಣ್ಯಗಳನ್ನು ನುಗ್ಗಿರುವ ವಿಲಕ್ಷಣ ಘಟನೆ ನಡೆದಿದೆ.

    ಜುಲೈ 27 ರಂದು ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ವ್ಯಕ್ತಿಯೊಬ್ಬನನ್ನು ಕುಟುಂಬದವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಆತನ ಸ್ಥಿತಿ ಕಂಡು ವೈದ್ಯರು ಸ್ಕ್ಯಾನ್ ಮಾಡಿಸುವಂತೆ ಸೂಚನೆ ಕೊಟ್ಟಿದ್ದಾರೆ. ಈ ವೇಳೆ ಆತನ ಹೊಟ್ಟೆಯಲ್ಲಿ ಲೋಹದ ಗಡ್ಡೆಯನ್ನು ಕಂಡುಹಿಡಿದಿದ್ದಾರೆ. ಆದರೆ, ವೈದ್ಯರು ಎಕ್ಸ್‌ರೇ ನೋಡಿದಾಗ ಸತ್ಯ ಬಯಲಿಗೆ ಬಂದಿದೆ. ಇದನ್ನೂ ಓದಿ: ಜಿಮ್‍ನಲ್ಲಿದ್ದ ಎಎಪಿ ಮುಖಂಡನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

    ಈ ಹಿನ್ನೆಲೆ ಎಂಡಿಎಂ ಆಸ್ಪತ್ರೆಯ ವೈದ್ಯರ ತಂಡವು ‘ಎಂಡೋಸ್ಕೋಪಿಕ್ ಕಾರ್ಯವಿಧಾನ’ದ ಸಹಾಯದಿಂದ ಎರಡು ದಿನಗಳ ಸುದೀರ್ಘ ಚಿಕಿತ್ಸೆಯಲ್ಲಿ ವ್ಯಕ್ತಿಯ ಹೊಟ್ಟೆಯಿಂದ ನಾಣ್ಯಗಳನ್ನು ಹೊರತೆಗೆದಿದೆ.

    Desperately seeking surgeons | AAMC

    ಮಾಧ್ಯಮಗಳೊಂದಿಗೆ ಮಾತನಾಡಿದ ವೈದ್ಯ ನರೇಂದ್ರ ಭಾರ್ಗವ್ ಅವರು, ಹೊಟ್ಟೆ ನೋವಿನಿಂದ ವ್ಯಕ್ತಿಯೊಬ್ಬ ನಮ್ಮ ಆಸ್ಪತ್ರೆಗೆ ಬಂದಿದ್ದ. ಅದಕ್ಕೆ ಅವನ ಎಕ್ಸ್-ರೇ ಮಾಡಿಸಿದಾಗ ಅವನು ನಾಣ್ಯಗಳನ್ನು ನುಗ್ಗಿರುವುದು ಪತ್ತೆಯಾಗಿದೆ. ಈ ಕುರಿತು ವಿಚಾರಿಸಿದಾಗ ಆತ 10-15 ನಾಣ್ಯಗಳನ್ನು ನುಗ್ಗಿರುವುದನ್ನು ತಿಳಿಸಿದ್ದಾನೆ. ನಾವು ವ್ಯಕ್ತಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಆತ ಸುಧಾರಿಸಿಕೊಂಡಿದ್ದಾನೆ ಎಂದು ವಿವರಿಸಿದರು. ಇದನ್ನೂ ಓದಿ:  ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಪರ ವಾದ ಮಂಡಿಸಿದ್ದ ವಕೀಲ ಹೃದಯಾಘಾತದಿಂದ ಸಾವು

    ಆತನ ಖಿನ್ನತೆಯಿಂದ ನಾಣ್ಯಗಳನ್ನು ನುಗ್ಗುವ ಅಭ್ಯಾಸ ಮಾಡಿಕೊಂಡಿದ್ದ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆ ಊಟ ಬೇಡ, ಹೋಟೆಲ್ ಊಟ, ಚಿಕನ್ ಬಿರಿಯಾನಿ ಬೇಕು- ವೈದ್ಯರೊಂದಿಗೆ ನವ್ಯಶ್ರೀ ಕಿರಿಕ್

    ಆಸ್ಪತ್ರೆ ಊಟ ಬೇಡ, ಹೋಟೆಲ್ ಊಟ, ಚಿಕನ್ ಬಿರಿಯಾನಿ ಬೇಕು- ವೈದ್ಯರೊಂದಿಗೆ ನವ್ಯಶ್ರೀ ಕಿರಿಕ್

    ಬೆಳಗಾವಿ: ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀಗೆ ಆಸ್ಪತ್ರೆ ಊಟ ಬೇಡ್ವಂತೆ, ಹೋಟೆಲ್ ಊಟ, ಚಿಕನ್ ಬಿರಿಯಾನಿ ಬೇಕು ಎಂದು ಆಸ್ಪತ್ರೆ ಸಿಬ್ಬಂದಿ ಜೊತೆಗೆ ವಾಗ್ವಾದ ನಡೆಸಿದ್ದಾರೆ.

    ನಗರದ ಚೆನ್ನಮ್ಮ ವೃತ್ತದ ಸಮೀಪದಲ್ಲಿರುವ ಬೀಮ್ಸ್ ಆಸ್ಪತ್ರೆಯಲ್ಲಿರುವ ನವ್ಯಶ್ರೀ ಆರ್ ರಾವ್ ಸಿಬ್ಬಂದಿ ಜೊತೆಗೆ ಕಿರಿಕ್ ಮಾಡಿಕೊಂಡಿದ್ದಾರೆ. ಚೆನ್ನಪಟ್ಟಣ ಮೂಲದ ನವ್ಯಶ್ರೀ ಬೆಳಗಾವಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ವಿರುದ್ಧ ಅತ್ಯಾಚಾರ, ಗರ್ಭಪಾತ, ದೈಹಿಕ ಹಲ್ಲೆ ಸೇರಿ ಹತ್ತು ಸೆಕ್ಷನಡಿ ಕೇಸ್ ದಾಖಲಿಸಿದ್ದರು.

    ಇತ್ತ ಪ್ರಕರಣ ದಾಖಲಿಸಿಕೊಂಡ ಎಪಿಎಂಸಿ ಪೊಲೀಸರು ನವ್ಯಶ್ರೀ ಅವರನ್ನು ವೈದ್ಯಕೀಯ ತಪಾಸಣೆ ನಡೆಸಲು ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನವ್ಯಶ್ರೀ ಆಸ್ಪತ್ರೆ ಊಟ ಬೇಡ, ಹೋಟೆಲ್ ಊಟ, ಚಿಕನ್ ಬಿರಿಯಾನಿ ಬೇಕು. ಬೆಳಗ್ಗೆ ಸ್ನಾನ ಮಾಡಲು ಬಿಸಿನೀರು ಬೇಕು ಎಂದು ಪಟ್ಟು ಹಿಡಿದಿದ್ದಲ್ಲದೇ, ನಾನು ಹೊರಗಡೆ ಹೋಗುವುದಾಗಿ ಆಸ್ಪತ್ರೆ ಸಿಬ್ಬಂದಿ ಜೊತೆಗೆ ನವ್ಯಶ್ರೀ ವಾಗ್ವಾದ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯಸ್ಥಿಕೆ ವಹಿಸಿ ನವ್ಯಶ್ರೀ ಕಿರಿಕ್‍ಗೆ ಸ್ನಾನ ಬಿಸಿನೀರು, ಹೋಟೆಲ್‍ನಿಂದ ಪಲಾವ್ ತಂದುಕೊಟ್ಟಿದ್ದಾರೆ. ವಿಧಾನಪರಿಷತ್ ಚುನಾವಣೆ – ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮಠಾಧೀಶರಿಂದ ಬಿಜೆಪಿ ಹೈಕಮಾಂಡ್‍ಗೆ ಪತ್ರ

    Live Tv
    [brid partner=56869869 player=32851 video=960834 autoplay=true]