Tag: doctor

  • ಯುವಕನ ಅಂಗಾಂಗ ದಾನ: ಜಿರೋ ಟ್ರಾಫಿಕ್‍ನಲ್ಲಿ ಹೈದರಾಬಾದ್‍ಗೆ ರವಾನೆ

    ಯುವಕನ ಅಂಗಾಂಗ ದಾನ: ಜಿರೋ ಟ್ರಾಫಿಕ್‍ನಲ್ಲಿ ಹೈದರಾಬಾದ್‍ಗೆ ರವಾನೆ

    ಕಲಬುರಗಿ: ಜಿರೋ ಟ್ರಾಫಿಕ್ ಮೂಲಕ ಮೃತ ಯುವಕನ ಅಂಗಾಗವನ್ನು ಕಲಬುರಗಿಯಿಂದ ಹೈದರಾಬಾದ್‍ಗೆ ಕಳಿಸಿ, ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಕಳುಹಿಸಲಾಗಿದೆ.

    ಇತ್ತೀಚೆಗೆ ಅಂಗಾಗ ದಾನದ ಪರಿಕಲ್ಪನೆ ಹೆಚ್ಚಾಗುತ್ತಿದೆ. ಮೃತ ವ್ಯಕ್ತಿಯ ಕೆಲ ಅಂಗಾಗಗಳನ್ನು ನಿಗದಿತ ಸಮಯದಲ್ಲಿ ತೆಗೆದು, ಬೇರೆಯವರಿಗೆ ಹಾಕಿದರೆ ಅನೇಕರ ಜೀವ ಉಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಇಂದು ಕಲಬುರಗಿ ನಗರದ ಚಿರಾಯು ಆಸ್ಪತ್ರೆಯ ವೈದ್ಯರು ಕೆಲಸ ಮಾಡಿದ್ದು, ಜಿರೋ ಟ್ರಾಫಿಕ್‍ನಲ್ಲಿ ಮೃತ ಯುವಕನ ಅಂಗಾಗವನ್ನು ಹೈದರಾಬಾದ್‍ಗೆ ಕಳುಹಿಸಿ ಅಲ್ಲಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ರವಾನೆ ಮಾಡಲಾಗಿದೆ.ಇದನ್ನೂ ಓದಿ:ಕಾಬೂಲ್‍ನಲ್ಲಿ ಎಟಿಎಂಗಳ ಮುಂದೆ ಜನಸಾಗರ – ಬ್ಯಾಂಕ್ ಸಿಬ್ಬಂದಿಯಿಂದ ಪ್ರತಿಭಟನೆ

    ಏನಿದು ಘಟನೆ?
    ಹತ್ತೊಂಬತ್ತು ವರ್ಷದ ಯುವಕ ಮಹಡಿ ಮೇಲಿಂದ ಕಾಲು ಜಾರಿ ಬಿದ್ದಿದ್ದು, ಆತನನ್ನು ಕಲಬುರಗಿ ನಗರದ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎರಡು ದಿನದ ಹಿಂದೆ ಆತನ ಮೆದುಳು ನಿಷ್ಕ್ರಿಯವಾಗಿತ್ತು. ಈ ಬಗ್ಗೆ ವೈದ್ಯರು ಆತನ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಜೊತೆಗೆ ಅಂಗಾಂಗ ದಾನದ ಬಗ್ಗೆಯೂ ಮಾಹಿತಿ ನೀಡಿದ್ದರು. ವೈದ್ಯರ ಮಾತಿಗೆ ಯುವಕನ ಕುಟುಂಬದವರು ಒಪ್ಪಿಗೆಯನ್ನು ನೀಡಿದ್ದರು. ಹೀಗಾಗಿ ಕಳೆದ ಎರಡು ದಿನಗಳಿಂದ ಅನೇಕ ಪರೀಕ್ಷೆಗಳನ್ನು ನಡೆಸಲಾಗಿತ್ತು.

    ಯುವಕನ ಮೆದುಳು ನಿಷ್ಕ್ರಿಯವಾಗಿದ್ದನ್ನು ಖಚಿತಪಡಿಸಿಕೊಂಡು, ಸರ್ಕಾರಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿರುವ ರೋಗಿಯೊಬ್ಬರಿಗೆ ಲಿವರ್ ಅವಶ್ಯಕತೆ ಇತ್ತು. ಹೀಗಾಗಿ ಇಂದು ಮುಂಜಾನೆ ಮೃತ ಯುವನಕ ಲಿವರ್‍ನನ್ನು ತೆಗೆದು ಹೈದರಾಬಾದ್‍ಗೆ ಕಳುಹಿಸಲಾಗಿದೆ. ನಂತರ ಹೈದರಾಬಾದ್‍ನಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ.ಇದನ್ನೂ ಓದಿ:ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

    ಜಿರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಲಿವರ್ ರವಾನೆ!
    ಕಲಬುರಗಿಯಿಂದ ಹೈದರಾಬಾದ್‍ವರಗೆ ಸುಮಾರು 221 ಕಿಲೋಮೀಟರ್‍ವರಗೆ ಕಲಬುರಗಿ ಪೆÇಲೀಸರು ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು. ಮುಂದೆ ತೆಲಂಗಾಣ ಪೆÇಲೀಸರಿಗೆ ಮಾಹಿತಿ ನೀಡಿದ್ದು, ಅವರು ಕೂಡಾ ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು. ಸಾಮಾನ್ಯವಾಗಿ ಹೈದರಾಬಾದ್ ವಿಮಾನ ನಿಲ್ದಾಣ ಮುಟ್ಟಲು ನಾಲ್ಕು ಗಂಟೆ ಸಮಯಬೇಕು. ಆದರೆ ಜಿರೋ ಟ್ರಾಫಿಕ್‍ನಿಂದಾಗಿ ಕೇವಲ ಎರಡೂವರೆ ಗಂಟೆಯಲ್ಲಿ ಹೈದರಾಬಾದ್‍ಗೆ ತಲುಪಲಾಗಿದೆ.

    ಚಿರಾಯು ಆಸ್ಪತ್ರೆ ವೈದ್ಯ ಡಾ.ಮಂಜುನಾಥ್ ಈ ಕುರಿತು ಮಾತನಾಡಿದ್ದು, ಇಂದು ಬೆಂಗಳೂರಿನಿಂದ ಬಂದಿದ್ದ ನುರಿತ ವೈದ್ಯರ ತಂಡ, ಯುವಕನ ಲಿವರ್ ತಗೆದು ಅದನ್ನು ಬೆಂಗಳೂರಿಗೆ ತಗೆದುಕೊಂಡು ಹೋಗಿದ್ದಾರೆ. ಲಿವರ್ ಸಾಗಿಸಲು ಪೆÇಲೀಸರು ಮತ್ತು ರಾಜ್ಯ ಸರ್ಕಾರ ಸಹಾಯ ಮಾಡಿದೆ ಎಂದು ತಿಳಿಸಿದರು.ಇದನ್ನೂ ಓದಿ:ಪೊಲೀಸರಿಗೆ ಒತ್ತಡ ಇದೆ, ಬೆಳಗ್ಗೆಯಿಂದ ರಾತ್ರಿಯವರೆಗೂ ಕೆಲಸ ಮಾಡ್ತಾರೆ: ಸತೀಶ್ ಜಾರಕಿಹೊಳಿ

    ಈ ಕುರಿತು ಪ್ರತಿಕ್ರಿಯಿಸಿದ ಯುವಕನ ಪೋಷಕರು, ನಮ್ಮ ಮಗನನ್ನು ಉಳಿಸಿಕೊಳ್ಳಲು ನಾವು ಅನೇಕ ರೀತಿಯ ಪ್ರಯತ್ನಗಳನ್ನು ಮಾಡಿದೆವು. ಆದರೆ ಅದು ಸಾಧ್ಯವಾಗಲಿಲ್ಲ. ಆತನಿಂದ ಬೇರೆಯವರಿಗೆ ಅನುಕೂಲವಾಗಲೆಂದು ಅಂಗಾಂಗ ದಾನ ಮಾಡಿದ್ದೇವೆ ಎಂದು ಭಾವುಕರಾದರು.

  • ಭದ್ರೆಯ ಒಡಲಲ್ಲಿ 4 ದಿನಗಳ ಬಳಿಕ ಸಿಕ್ತು ಬೆಂಗಳೂರು ವೈದ್ಯನ ಮೃತದೇಹ

    ಭದ್ರೆಯ ಒಡಲಲ್ಲಿ 4 ದಿನಗಳ ಬಳಿಕ ಸಿಕ್ತು ಬೆಂಗಳೂರು ವೈದ್ಯನ ಮೃತದೇಹ

    ಚಿಕ್ಕಮಗಳೂರು: ಫೋಟೋ ತೆಗೆಯುವ ವೇಳೆ ಕಾಲು ಜಾರಿ ಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ವೈದ್ಯನ ಮೃತದೇಹ ನಾಲ್ಕು ದಿನಗಳ ಬಳಿಕ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಪತ್ತೆಯಾಗಿದೆ.

    ಮೃತನನ್ನ 36 ವರ್ಷದ ರುದ್ರೇಶ್ ಎಂದು ಗುರುತಿಸಲಾಗಿದೆ. ನಾಲ್ಕು ದಿನದ ಹಿಂದೆ ಜಿಲ್ಲೆಯ ಕಳಸ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದ ರುದ್ರೇಶ್ ಸ್ಥಳೀಯ ಹೋಂ ಸ್ಟೇನಲ್ಲಿ ತಂಗಿದ್ದರು. ಈ ವೇಳೆ ಭದ್ರಾ ನದಿಯ ವಸಿಷ್ಠ ತೀರ್ಥದಲ್ಲಿ ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದರು. ಮೃತದೇಹ ಕೂಡ ಸಿಕ್ಕಿರಲಿಲ್ಲ. ಕಳೆದ ನಾಲ್ಕು ದಿನಗಳಿಂದ ಎಸ್.ಡಿ.ಆರ್.ಎಫ್, ಮುಳುಗು ತಜ್ಞರು, ಅಗ್ನಿಶಾಮಕ ಸಿಬ್ಬಂದಿ, ಶೌರ್ಯ ಸಿಬ್ಬಂದಿ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದರು. ಮೃತದೇಹ ಪತ್ತೆಯಾಗಿರಲಿಲ್ಲ.

    ಸುಮಾರು 70 ಜನ ಸಿಬ್ಬಂದಿ ನಾಲ್ಕು ದಿನದಿಂದ ನಿರಂತರವಾಗಿ ಹುಡುಕಿದ ಪರಿಣಾಮ ಬುಧವಾರ ಮೃತದೇಹ ಪತ್ತೆಯಾಗಿದೆ. ಅವರು ಬಿದ್ದ ಜಾಗದಿಂದ ಸುಮಾರು ಐದು ಕಿ.ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಆಗಾಗ್ಗೆ ಮಳೆ ಸುರಿಯುತ್ತಲೇ ಇದೆ. ಕಳಸ ಭಾಗದ ಕುದುರೆಮುಖ ಸುತ್ತಮುತ್ತ ಮಳೆ ಕಡಿಮೆ ಆಗಿಲ್ಲ. ಭದ್ರಾ ನದಿ ಕೂಡ ವೇಗವಾಗಿ ಹರಿಯುತ್ತಿದೆ. ವೇಗವಾಗಿ ಹರಿಯುತ್ತಿರೋ ಭದ್ರೆಯ ಒಡಲಲ್ಲೇ ನಾಲ್ಕು ದಿನದಿಂದ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಇದನ್ನೂ ಓದಿ: ಇನ್‍ಸೈಡ್ ಸ್ಟೋರಿ – ಕೊನೆಯ ಹಂತದಲ್ಲಿ ವಿಜಯೇಂದ್ರಗೆ ಸಚಿವ ಸ್ಥಾನ ತಪ್ಪಿದ್ದೇಗೆ?

    ಪ್ರವಾಸಿಗರಿಗೆ ಹಾಗೂ ನದಿ ದಡದಲ್ಲಿ ನಿಲ್ಲುವವರಿಗೆ ಸ್ಥಳಿಯರು ಮನವಿ ಮಾಡುತ್ತಲೇ ಇರುತ್ತಾರೆ. ತುಂಬಾ ಹತ್ತಿರ ಹೋಗಬೇಡಿ. ಬಂಡೆಗಳು ಜಾರುತ್ತವೆ. ಈ ಹಿಂದೆ ತುಂಬಾ ಅನಾಹುತಗಳು ನಡೆದಿವೆ. ಹತ್ತಿರ ಹೋಗಬೇಡಿ ಎಂದು ಎಷ್ಟೇ ಮನವಿ ಮಾಡಿದರೂ ಪ್ರವಾಸಿಗರು ಸ್ಥಳೀಯರ ಮಾತು ಕೇಳದೇ ಜಾಗದ ಪರಿಚಯ ಇಲ್ಲದೇ ಹೋಗಿ ಈ ರೀತಿ ಅನಾಹುತ ಮಾಡಿಕೊಳ್ಳುತ್ತಾರೆ ಎಂದು ಸ್ಥಳೀಯರು ನೊಂದುಕೊಳ್ಳುತ್ತಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂತ್ರಿಸ್ಥಾನ ನೀಡದಿದ್ರೆ ಮತ್ತೊಂದು ಆಪರೇಷನ್ ನಡೆಸುವ ಎಚ್ಚರಿಕೆ ನೀಡಿದರಂತೆ ಎಂಟಿಬಿ ನಾಗರಾಜ್!

  • 45 ಕೆಜಿ ತೂಕವಿದ್ದ 2ವರ್ಷದ ಬಾಲಕಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

    45 ಕೆಜಿ ತೂಕವಿದ್ದ 2ವರ್ಷದ ಬಾಲಕಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

    ನವದೆಹಲಿ: ಸುಮಾರು 45 ಕೆಜಿ ತೂಕವಿದ್ದ 2ವರ್ಷದ ಬಾಲಕಿಗೆ ದೆಹಲಿಯ ಆಸ್ಪತ್ರೆಯೊಂದರಲ್ಲಿ ತೂಕ ಕಡಿಮೆ ಮಾಡುವ ಬ್ಯಾರಿಯಾಟ್ರಿಕ್ ಸರ್ಜರಿಯನ್ನು ಯಶಸ್ವಿಯಾಗಿ ಮಾಡಲಾಗಿದೆ.

    ಬಾಲಕಿಗೆ ಅತಿಯಾಗಿ ತೂಕವಿದ್ದ ಕಾರಣ ವೀಲ್‍ಚೇರ್ ಬಿಟ್ಟು ಕೆಳಗೆ ಇಳಿಯುತ್ತಿರಲಿಲ್ಲ. ಆಕೆಗೀಗ ದೆಹಲಿಯ ಮ್ಯಾಕ್ಸ್ ಸೂಪರ್​ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಲಾಗಿದೆ. ಮತ್ತು ಕಳೆದ ಒಂದು ದಶಕದಲ್ಲಿ ಬ್ಯಾರಿಯಾಟ್ರಿಕ್ ಸರ್ಜರಿಗೆ ಒಳಗಾದ ದೇಶದ ಅತ್ಯಂತ ಕಿರಿಯ ರೋಗಿಯಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

    ಬ್ಯಾರಿಯಾಟ್ರಿಕ್ ಸರ್ಜರಿ ಎಂದರೇನು?
    ತೂಕ ಇಳಿಸಲು ಈ ಬ್ಯಾರಿಯಾಟ್ರಿಕ್ ಸರ್ಜರಿ ಮಾಡಲಾಗುತ್ತದೆ. ಆದರೆ ಈ ಶಸ್ತ್ರಚಿಕಿತ್ಸೆ ಮಕ್ಕಳಲ್ಲಿ ತೀರ ಕಡಿಮೆ. ಈ ಸರ್ಜರಿ ಮೂಲಕ ಹಸಿವು ಕಡಿಮೆ ಆಗುವಂತೆ ಮಾಡಲಾಗುತ್ತದೆ. ಇದರಿಂದ ತೂಕ ನಷ್ಟ ಆಗುವ ಜತೆ ಆರೋಗ್ಯದಲ್ಲೂ ಸುಧಾರಣೆಯಾಗುತ್ತದೆ. ಸರ್ಜರಿಯ ಮೂಲಕ ಮಾಡುವ ಬದಲಾವಣೆಗಳಿಂದ ಆಹಾರ ತೆಗೆದುಕೊಳ್ಳುವ ಪ್ರಮಾಣವೂ ಕಡಿಮೆ ಆಗುತ್ತದೆ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.

    ಬಾಲಕಿ ಜನಿಸುವಾಗ 2.5 ಕೆಜಿ ತೂಕವಿದ್ದಳು. ಆದರೆ ಕೆಲವೇ ದಿನಗಳಲ್ಲಿ ವಿಪರೀತವಾಗಿ ತೂಕ ಜಾಸ್ತಿಯಾಯಿತು. ಆರು ತಿಂಗಳ ಹೊತ್ತಿಗೆ 14 ಕೆಜಿಯಾಗಿದ್ದಳು.  2 ವರ್ಷ ತುಂಬುವ ಹೊತ್ತಿಗೆ 45 ಕೆಜಿ ಆಗಿದ್ದಳು. ಆದರೆ ಆಕೆಯ ಸಹೋದರನಿಗೆ 8ವರ್ಷ. ಆತ ತನ್ನ ವಯಸ್ಸಿಗೆ ತಕ್ಕಂತೆ ಬೆಳೆಯುತ್ತಿದ್ದಾನೆ. ತೂಕವೂ ಸಹಜವಾಗಿದೆ ಎಂದು ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಮನ್‍ಪ್ರೀತ್ ಸೇಥಿ ಹೇಳಿದ್ದಾರೆ. ಇದನ್ನೂ ಓದಿ:  ಒಂದೇ ಚಾರ್ಜರ್ ಎರಡು ಮೊಬೈಲ್- ಚಾರ್ಜ್‍ಗಾಗಿ ಬಡಿದಾಟ, ಕೊಲೆ

    ಮಗುವಿಗೆ ಸರ್ಜರಿ ಮಾಡಲಾಗಿದೆ. ಆದರೆ ಇಷ್ಟಕ್ಕೇ ಮುಗಿಯುವುದಿಲ್ಲ. ಬಾಲಕಿಗೆ ವಿಶೇಷವಾಗಿ, ಕಟ್ಟುನಿಟ್ಟಾಗಿ ಡಯಟ್ ಮಾಡಿಸಬೇಕು. ಅವಳಿಗೆ ನೀಡಲಾಗುವ ಪೋಷಕಾಂಶಗಳ ಅಳತೆಯ ಬಗ್ಗೆ ನಿಗಾ ಇರಬೇಕು. ಮುಂದಿನ ವರ್ಷದ ಹೊತ್ತಿಗೆ ಅವಳ ತೂಕ ಕಡಿಮೆಯಾಗುತ್ತದೆ ಮತ್ತು ಅಲ್ಲಿಂದ ಸಹಜವಾಗಿ ಬೆಳೆಯುತ್ತಾಳೆಂದು ನಿರೀಕ್ಷೆ ಇದೆ. ಆದರೆ ವೈದ್ಯಕೀಯ ತಂಡ ಅವಳ ಆರೋಗ್ಯದ ಬಗ್ಗೆ ಗಮನ ಇಟ್ಟೇ ಇಡುತ್ತದೆ. ಕಾಲಕಾಲಕ್ಕೆ ತಪಾಸಣೆ ಆಗಬೇಕಾಗುತ್ತದೆ. ದೇಹದಲ್ಲಿ ಶಕ್ತಿಯೂ ಬರಬೇಕಿದೆ ಎಂದು ಅವರು ವಿವರಿಸಿದ್ದಾರೆ ವೈದ್ಯರು ತಿಳಿಸಿದ್ದಾರೆ.

  • ರೋಗಿಗಳಿಗೆ ಊಟ ಕೊಟ್ಟು ಸ್ನೇಹಿತರ ದಿನಾಚರಣೆ ಆಚರಿಸಿದ ವೈದ್ಯ

    ರೋಗಿಗಳಿಗೆ ಊಟ ಕೊಟ್ಟು ಸ್ನೇಹಿತರ ದಿನಾಚರಣೆ ಆಚರಿಸಿದ ವೈದ್ಯ

    ನೆಲಮಂಗಲ: ವಿಶ್ವ ಸ್ನೇಹಿತರ ದಿನಾಚರಣೆಯ ಅಂಗವಾಗಿ ವೈದ್ಯರಾದ ಡಾಕ್ಟರ್ ದಿವಾಕರ್ ಅವರು, ಬೆಂಗಳೂರು ಹೊರವಲಯದ ನೆಲಮಂಗಲ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಊಟದ ವ್ಯವಸ್ಥೆಯನ್ನು ಆಯೋಜಿಸುವ ಮೂಲಕವಾಗಿ ವಿಭಿನ್ನವಾಗಿ ಆಚರಿಸಿದ್ದಾರೆ.

    ದೇಶದಲ್ಲಿ ಸ್ನೇಹಿತರ ದಿನಾಚರಣೆಯನ್ನು ಹಲವಾರು ರೀತಿಗಳಿಂದ ಆಚರಣೆ ಮಾಡುವ ಈ ಸಮಾಜದಲ್ಲಿ, ಡಾಕ್ಟರ್ ದಿವಾಕರ್ ವಿಭಿನ್ನವಾಗಿ ವೈದ್ಯ ಮಿತ್ರರು ಹಾಗೂ ಸಿಬ್ಬಂದಿ ವರ್ಗದವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಜೊತೆಯಲ್ಲಿ ಸ್ನೇಹಿತರ ದಿನಾಚರಣೆಯನ್ನು ನೆರವೇರಿಸಿ ಕೊಂಡಿದ್ದಾರೆ.  

    ಈ ಒಂದು ಕಾರ್ಯಕ್ರಮದ ಭೋಜನವನ್ನು ಸ್ವೀಕರಿಸಿದ ವೈದ್ಯರಾದ ಡಾ.ಸೋನಿಯಾ ಮಾತನಾಡಿ ಡಾಕ್ಟರ್ ದಿವಾಕರ್ ಅವರು ತುಂಬಾ ಉತ್ತಮವಾದ ಹಾಗೂ ವಿಭಿನ್ನವಾದ ಸ್ನೇಹಿತರ ದಿನಾಚರಣೆಯನ್ನು ನಮ್ಮ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅವರ ಜೊತೆಯಲ್ಲಿ ಹಂಚಿಕೊಳ್ಳುತ್ತಿರುವುದು ತುಂಬಾ ಸಂತೋಷವಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ವಲಯದಲ್ಲಿ ಉತ್ತಮ ಸೇವೆ ಸಲ್ಲಿಸಿ ಉನ್ನತ ಸ್ಥಾನಕ್ಕೆ ಏರಲಿ ಎಂದು ಹರಸಿದರು. ಇದನ್ನೂ ಓದಿ: ಮೋದಿಗೆ ಸ್ನೇಹಿತರ ದಿನಾಚರಣೆಯ ಶುಭಕೋರಿ ಕಾಲೆಳೆದ ರಾಹುಲ್

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸರ್ಕಾರಿ ಆಸ್ಪತ್ರೆಯ ಸಿಇಓ. ನರಸಿಂಹಯ್ಯ ಅವರು ಊಟದ ವ್ಯವಸ್ಥೆ ಮಾಡಿಕೊಟ್ಟಂತಹ ಡಾಕ್ಟರ್ ದಿವಾಕರ್ ಅವರ ಸ್ನೇಹ ಬಾಂಧವ್ಯ ನಮ್ಮೆಲ್ಲರ ಜೊತೆ ಸದಾಕಾಲ ಇರಲಿ. ಮುಂದಿನ ದಿನಗಳಲ್ಲಿ ಅವರು ಮಾಡುವ ಎಲ್ಲಾ ಒಳ್ಳೆಯ ಕೆಲಸಗಳಲ್ಲಿ ನಾವು ಅವರ ಜೊತೆಯಲ್ಲಿ ಇರುತ್ತೇವೆ ಹಾಗೂ ನಮ್ಮ ಸರ್ಕಾರಿ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ರೋಗಿಗಳ ಪರವಾಗಿ ನಾನು ದಿವಾಕರ್ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು. ಸ್ನೇಹಿತ ಸಹಪಾಠಿಗಳ ಜೊತೆಗೆ ತಾವೇ ಊಟ ಬಡಿಸಿ, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ನೇಹಿತರ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಿದರು.

  • ಹೊಟ್ಟೆ ನೋವಿನಿಂದ ರೋಗಿ ಸಾವು – ರಿಮ್ಸ್ ತರಬೇತಿ ವೈದ್ಯರ ಮೇಲೆ ಹಲ್ಲೆ

    ಹೊಟ್ಟೆ ನೋವಿನಿಂದ ರೋಗಿ ಸಾವು – ರಿಮ್ಸ್ ತರಬೇತಿ ವೈದ್ಯರ ಮೇಲೆ ಹಲ್ಲೆ

    – ವೈದ್ಯರಿಂದ ಆಸ್ಪತ್ರೆ ಮುಂದೆ ಪ್ರತಿಭಟನೆ

    ರಾಯಚೂರು: ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಹೊಟ್ಟೆ ನೋವಿನಿಂದ ದಾಖಲಾಗಿದ್ದ ರೋಗಿಯೊಬ್ಬ ನಿನ್ನೆ ತಡರಾತ್ರಿ ಸಾವನ್ನಪ್ಪಿದ್ದರು. ಬಳಿಕ ರೋಗಿಯ ಕಡೆಯವರು ವೈದ್ಯರ ಮೇಲೆ ಹಲ್ಲೆ ಮಾಡಿದ್ದರು. ಇಂದು ರೋಗಿಯ ಕಡೆಯವರು ಹಲ್ಲೆ ಮಾಡಿರುವುದನ್ನು ಖಂಡಿಸಿ ಆಸ್ಪತ್ರೆಯ ತರಬೇತಿ ವೈದ್ಯರು ಕರ್ತವ್ಯಕ್ಕೆ ಗೈರಾಗಿ ಹೋರಾಟ ನಡೆಸಿದ್ದಾರೆ.

    ರಿಮ್ಸ್ ಆಸ್ಪತ್ರೆಯಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ಹಿನ್ನೆಲೆ ರೋಗಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ತರಬೇತಿ ವೈದ್ಯರ ಮೇಲೆ ರೋಗಿ ಸಂಬಂಧಿಕರು ಹಲ್ಲೆ ಮಾಡಿದ್ದರು. ಹಲ್ಲೆ ಖಂಡಿಸಿ ರಿಮ್ಸ್ ಆಸ್ಪತ್ರೆ ಎದುರು ತರಬೇತಿ ವೈದ್ಯರು ಪ್ರತಿಭಟನೆ ನಡೆಸಿದ್ದಾರೆ. ರೋಗಿಗೆ ಚಿಕಿತ್ಸೆ ನೀಡುವಾಗಲೇ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಆಗ್ರಹಿಸಿದ್ದಾರೆ.

    ಹಲ್ಲೆ ಮಾಡಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೈಗಳಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಮಾಡುತ್ತಿದ್ದ ವೈದ್ಯರನ್ನು ಸಮಾಧಾನ ಪಡಿಸಲು ಬಂದ ರಿಮ್ಸ್ ನಿರ್ದೇಶಕ ಡಾ.ಬಸವರಾಜ್ ಪೀರಾಪುರ ಜೊತೆ ವೈದ್ಯರು ವಾಗ್ವಾದ ನಡೆಸಿ, ಆಸ್ಪತ್ರೆಯಲ್ಲಿ ವೈದ್ಯರಿಗೆ ರಕ್ಷಣೆ ಇಲ್ಲದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವೈದ್ಯರಿಗೆ ಕೋವಿಡ್ ಕರ್ತವ್ಯ ನೆಪ – ಚಿಕಿತ್ಸೆ ಸಿಗದೆ ವಂಚಿತರಾಗುತ್ತಿರೋ ರೋಗಿಗಳು

    ತರಬೇತಿ ವೈದ್ಯರ ಒತ್ತಾಯಕ್ಕೆ ಮಣಿದ ರಿಮ್ಸ್ ಆಸ್ಪತ್ರೆಯ ನಿರ್ದೇಶಕ ಬಸವರಾಜ್ ಪೀರಾಪುರ ಹಲ್ಲೆ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ದೂರು ನೀಡಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ವೈದ್ಯರು ತಾತ್ಕಾಲಿಕವಾಗಿ ಹೋರಾಟ ಹಿಂಪಡೆದಿದ್ದಾರೆ.

  • ಐಸಿಯುನಿಂದ ಹೊರಬರ್ತಿದ್ದಂತೆ ಆಸ್ಪತ್ರೆ ಆವರಣದಲ್ಲಿ ಕುಸಿದು ಸ್ವಾಮೀಜಿ ಸಾವು

    ಐಸಿಯುನಿಂದ ಹೊರಬರ್ತಿದ್ದಂತೆ ಆಸ್ಪತ್ರೆ ಆವರಣದಲ್ಲಿ ಕುಸಿದು ಸ್ವಾಮೀಜಿ ಸಾವು

    – ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ

    ಆನೇಕಲ್: ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ, ಐಸಿಯುನಿಂದ ಹೊರ ನಡೆದುಕೊಂಡು ಬಂದು ಆಸ್ಪತ್ರೆ ಆವರಣದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಹುಸ್ಕೂರ ಗೇಟ್ ನಲ್ಲಿರುವ ಶಸ್ತ್ರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ.

    ಐಸಿಯುನಿಂದ ರೋಗಿ ಹೊರ ಬರಲು ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಸಂಬಂಧಿಕರು ಆರೋಪಿಸಿ ಆಸ್ಪತ್ರೆ ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತರನ್ನು ನಾರಾಯಣರೆಡ್ಡಿ (80) ಎಂದು ಗುರುತಿಸಲಾಗಿದ್ದು, ಇವರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ವೇಮನ ಆಶ್ರಮದಲ್ಲಿ ಸ್ವಾಮೀಜಿಯಾಗಿದ್ದು, ಇತ್ತೀಚೆಗೆ ಮಧುಮೇಹ ರೋಗದಿಂದ ಬಳಲುತ್ತಿದ್ದರು. ಎರಡು ದಿನದ ಹಿಂದೆ ಉಸಿರಾಟದ ಸಮಸ್ಯೆಯಾದಾಗ ಹೊಸೂರು ರಸ್ತೆ ಹುಸ್ಕೂರದ ಗೇಟ್ ನಲ್ಲಿರುವ ಶಸ್ತ್ರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

    ಚಿಕಿತ್ಸೆಯಿಂದ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿತ್ತು. ಆದರೆ ಸಂಜೆ ಐಸಿಯುನಲ್ಲಿ ಯಾವುದೇ ಸಿಬ್ಬಂದಿ ಇಲ್ಲದೇ ಇದ್ದಾಗ ರೋಗಿ ನಡೆದುಕೊಂಡು ಹೊರ ಬಂದು ಎಡವಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಕರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದು, ವದ್ಯರು ಮತ್ತು ಸಿಬ್ಬಂದಿ ಪರಾರಿಯಾಗಿದ್ದಾರೆ. ನಮ್ಮ ತಂದೆ ಸಾವಿಗೂ ಮುನ್ನ ಚೆನ್ನಾಗಿಯೇ ಮಾತಾನಾಡಿದ್ದರು. ಐಸಿಯುನಿಂದ ಹೊರಬರಲು ಆಸ್ಪತ್ರೆ ವೈದ್ಯರು ಸಿಬ್ಬಂದಿಯ ನಿರ್ಲಕ್ಷ್ಯ ಕಾರಣವೆಂದು ಮೃತರ ಮಕ್ಕಳು ಆಕ್ರೋಶ ವ್ಯಕ್ತಪಡಿಸಿದರು, ಪರಿಸ್ಥಿತಿ ಬಿಗಾಡಾಯಿಸುತ್ತಿದ್ದಂತೆ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ:ವಿಷಯುಕ್ತ ಆಹಾರ ಸೇವಿಸಿ ನಾಲ್ವರು ಸಾವನ್ನಪ್ಪಿದ್ದ ಕುಟುಂಬಕ್ಕೆ ಶಾಸಕರಿಂದ 2 ಲಕ್ಷ ಪರಿಹಾರ

  • ಸಾವಿರಕ್ಕೂ ಹೆಚ್ಚು ರೋಗಿಗಳನ್ನು ಉಳಿಸಿದ ವೈದ್ಯರಿಗೆ ಸನ್ಮಾನ

    ಸಾವಿರಕ್ಕೂ ಹೆಚ್ಚು ರೋಗಿಗಳನ್ನು ಉಳಿಸಿದ ವೈದ್ಯರಿಗೆ ಸನ್ಮಾನ

    ಬೆಳಗಾವಿ: ಕೊರೊನಾ ವೈರಸ್ ಹರಡುವಿಕೆಯಿಂದ ಕೋವಿಡ್ -19 ಸೋಂಕಿತ ರೋಗಿಗಳಿಗೆ ನಿರಂತರ ಸೇವೆಯನ್ನು ನೀಡುತ್ತಿರುವ ಸತೀಶ್ ಚೌಲಿಗರ್ ಅವರನ್ನು ಭಾರತೀಯ ಜನತಾ ಪಕ್ಷದ ಒಬಿಸಿ ಮೋರ್ಚಾ ಫ್ರಂಟ್ ರಾಜ್ಯ ಕಾರ್ಯದರ್ಶಿ ಡಾ. ಕಿರಣ್ ಜಾಧವ್ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗಜೇಶ್ ನಂದಗಡ್ಕರ್ ಮತ್ತು ಅಭಿಷೇಕ್ ವರ್ನೇಕರ್ ಉಪಸ್ಥಿತರಿದ್ದರು.

    ಹೋಮಿಯೋಪತಿ ತಜ್ಞರಾದ ಡಾ. ಚೌಲಿಗರ್ ಬೆಲ್ಗಾಂನ ಶನಿವಾರ್ ಕೂಟ್ ಪ್ರದೇಶದ ನವಜೀವನ್ ಆಸ್ಪತ್ರೆಯ ನಿರ್ದೇಶಕರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಕೋವಿಡ್ -19 ರ ಜಾಗತಿಕ ಸಾಂಕ್ರಾಮಿಕ ಮತ್ತು ಮೊದಲ ತರಂಗವಾದ ಎರಡನೇ ತರಂಗದಲ್ಲಿ ಅವರು ಕನಿಷ್ಠ ಒಂದು ಸಾವಿರ ರೋಗಿಗಳ ಜೀವವನ್ನು ಉಳಿಸಿದ್ದಾರೆ.

    ಇದು ಮನೆ ಪ್ರತ್ಯೇಕ ಸೌಲಭ್ಯಗಳನ್ನು ಒದಗಿಸುವ ಮೂಲಕ 200ಕ್ಕೂ ಹೆಚ್ಚು ರೋಗಿಗಳನ್ನು ಗುಣಪಡಿಸಿತು. ವೈದ್ಯಕೀಯ ವೃತ್ತಿಯ ನೈತಿಕತೆಗೆ ಎಚ್ಚರಗೊಂಡು ಡಾ. ಚೌಲಿಗರ್ ಹಗಲು-ರಾತ್ರಿ ನಿರಂತರ ವೈದ್ಯಕೀಯ ಸೇವೆಗಳನ್ನು ಒದಗಿಸುವ ಮೂಲಕ ಹೊಸ ಮಾನದಂಡವನ್ನು ನಿಗದಿಪಡಿಸಿದ್ದಾರೆ ಎಂದು ನವೀನನ್ ಆಸ್ಪತ್ರೆಗೆ ಭೇಟಿ ನೀಡಿದಾಗ ಕಿರಣ್ ಜಾಧವ್ ಹೇಳಿದರು.

    ಒಂದು ರೀತಿಯಲ್ಲಿ ಯೋಧನಂತೆಯೇ ವೈದ್ಯರು ತಮ್ಮ ಪ್ರದೇಶದ ಎಲ್ಲೆಡೆ ಪ್ರಶಂಸೆಗೆ ಒಳಗಾಗುತ್ತಿದ್ದಾರೆ. ಬೆಳಗಾವಿಯಲ್ಲಿ ಗಜೇಶ್ ನಂದಗಡ್ಕರ್ ಮತ್ತು ಅಭಿಷೇಕ್ ವರ್ನೆಕರ್ ಅವರೊಂದಿಗೆ ಕಿರಣ್ ಜಾಧವ್, ಸಂಜೀವನ್ ಆಸ್ಪತ್ರೆಯಲ್ಲಿ ಸತೀಶ್ ಕೌಲಿಗರ್ ಅವರನ್ನು ಸನ್ಮಾನಿಸಿದರು.

  • ಕೊರೊನಾ ತಡೆಗಾಗಿ ಅಕ್ಕಿ ತೊಳೆದ ನೀರು ಕುಡಿಯುತ್ತಿರುವ ಮಹಿಳೆಯರು

    ಕೊರೊನಾ ತಡೆಗಾಗಿ ಅಕ್ಕಿ ತೊಳೆದ ನೀರು ಕುಡಿಯುತ್ತಿರುವ ಮಹಿಳೆಯರು

    ಕೊಪ್ಪಳ: ಸಾಮಾನ್ಯವಾಗಿ ಅಡುಗೆ ಮಾಡುವ ಮುನ್ನ ಅಕ್ಕಿಯನ್ನು ಚೆನ್ನಾಗಿ ತೊಳೆದು, ತೊಳೆದ ಅಕ್ಕಿಯ ನೀರು ವೆಸ್ಟ್ ಎಂದು ಚೆಲ್ಲುವುದು ವಾಡಿಕೆ. ಆದರೆ ಈಗ ತೊಳೆದ ಅಕ್ಕಿ ನೀರನ್ನು ಯಾರು ಚೆಲ್ಲಬೇಡಿ ಬದಲಾಗಿ ಕುಡಿಯಿರಿ ಎಂದು ವೈದ್ಯರು ಹೇಳುತ್ತಿದ್ದಾರೆ.

    ಭತ್ತದ ಕಣಜವಾಗಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ಭಾಗದಲ್ಲಿ ಈಗ ಹೊಸ ಟ್ರೆಂಡ್ ಆರಂಭವಾಗಿದೆ. ಮಹಿಳೆಯರು ಅಡುಗೆಯ ಮುನ್ನ ಅಕ್ಕಿಯನ್ನು ತೊಳೆದು ಅದೇ ನೀರನ್ನು ಕುಡಿಯುತ್ತಿದ್ದಾರೆ. ಈ ನೀರು ಕುಡಿಯುವುದರಿಂದ ದೇಹದಲ್ಲಿ ಇಮ್ಯುನಿಟಿ ಪವರ್ ಹೆಚ್ಚಾಗುತ್ತೆ ಅನ್ನೋ ಸುದ್ದಿ ಹರಿದಾಡುತ್ತಿದೆ.

    ಈ ನೀರು ಕುಡಿಯುವುದರಿಂದ ನೆಗಡಿ, ಕೆಮ್ಮು, ಜ್ವರ ಮತ್ತು ವೈರಲ್ ಸೋಂಕು ಬರುವುದಿಲ್ಲ. ಅಷ್ಟೇ ಅಲ್ಲದೇ ಕೊರೊನಾ ಬರದಂತೆ ಕೂಡ ಎಚ್ಚರವಹಿಸಬಹುದಾಗಿದೆ. ಇದೇ ನೀರನ್ನು ಮುಖಕ್ಕೆ ಹಾಕಿಕೊಂಡರೆ ಮುಖದಲ್ಲಿ ಕಾಂತಿ ಹೆಚ್ಚಿಸುತ್ತದೆ ಎಂದು ಗಂಗಾವತಿಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ್ ಸವಡಿ ಹೇಳುತ್ತಾರೆ.

    ಅಕ್ಕಿಯ ಮೇಲ್ಪದರಿನಲ್ಲಿ ಕ್ಯಾಲ್ಸಿಯಂ, ಪೊಟ್ಯಾಶಿಯಮ್ ಅಧಿಕವಾಗಿರುತ್ತದೆ. ಅಕ್ಕಿ ತೊಳೆದಾಗ ಮೇಲ್ಪದರಿನಲ್ಲಿರುವ ಪೋಷಕಾಂಶಗಳು ನೀರಿನಲ್ಲಿ ತೊಳೆದುಕೊಂಡು ವ್ಯರ್ಥವಾಗುತ್ತದೆ. ಅದಕ್ಕಾಗಿ ಅಡುಗೆ ಮಾಡುವ ಮಹಿಳೆಯರು ಅಕ್ಕಿ ತೊಳೆದ ನೀರನ್ನು ಚೆಲ್ಲದೆ ಕುಡಿಯಿರಿ. ದೇಹದಲ್ಲಿ ಇಮ್ಯುನಿಟಿ ಬೆಳೆಯುವುದರಿಂದ ದೇಹದಲ್ಲಿ ಕೊರೊನಾ ಸೋಂಕು ನಿಯಂತ್ರಸಿಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ :ದುಡ್ಡಿಲ್ಲ ಅಂದ್ರೆ ಫೈಲ್ ಮುಟ್ಟಲ್ಲ – ಬೆಸ್ಕಾಂ ಅಧಿಕಾರಿಯ ಲಂಚಾವತಾರ ವೀಡಿಯೋ ವೈರಲ್

  • ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿ ಹೊರತೆಗೆದ ವೈದ್ಯರು

    ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿ ಹೊರತೆಗೆದ ವೈದ್ಯರು

    ಕೊಪ್ಪಳ: ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದ್ದ ಮೆಂತೋಪ್ಲಸ್ ಡಬ್ಬಿಯನ್ನು ಸರ್ಕಾರಿ ವೈದ್ಯರು ಯಶಸ್ವಿಯಾಗಿ ಹೊರತೆಗೆದು ಅಪಾಯದಿಂದ ಪಾರು ಮಾಡಿದ್ದಾರೆ.

    ಈ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ ಎಂಬ (8) ತಿಂಗಳ ಮಗು ಆಟವಾಡುತ್ತಾ ಮೆಂತೋಪ್ಲಸ್ ಡಬ್ಬಿ ನುಂಗಿತ್ತು. ಕೂಡಲೇ ಇದನ್ನು ಅರಿತ ಮಗುವಿನ ಪೋಷಕರು, ಕೊಪ್ಪಳದ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಯತಿರಾಜ್ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್: ಎಸ್‌ಪಿ ಮಿಥುನ್ ಕುಮಾರ್

    ಮಗುವನ್ನು ಪರೀಕ್ಷಿಸಿದ ವೈದ್ಯರು, ಮಗುವಿನ ಗಂಟಲಿನಲ್ಲಿ ಡಬ್ಬಿ ಸಿಲುಕಿಕೊಂಡಿದೆ. ಹೀಗಾಗಿ ಉಸಿರಾಟಕ್ಕೆ ತೊಂದರೆಯಾಗಿ ಅಪಾಯದಲ್ಲಿದೆ ಎಂದು ತಿಳಿಸಿದ್ದಾರೆ. ಕೂಡಲೇ ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಿಸುವಂತೆ ಹೇಳಿದ್ದಾರೆ. ಪೋಷಕರ ಅನುಮತಿಯಂತೆ ಕೂಡಲೇ ಜಿಲ್ಲಾಸ್ಪತ್ರೆಯ ಇಎನ್‍ಟಿ ವಿಭಾಗದ ವೈದ್ಯರಾದ ಡಾ. ಮಲ್ಲಿಕಾರ್ಜುನ ಅವರು ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈ ಮೂಲಕ ಭಾರೀ ಅಪಾಯದಿಂದ ಪುಟ್ಟ ಕಂದಮ್ಮನನ್ನು ಪಾರು ಮಾಡಿದ್ದಾರೆ.

  • ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಓಡಿದ ಆಸ್ಪತ್ರೆ ವೈದ್ಯ, ಸಿಬ್ಬಂದಿ

    ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಓಡಿದ ಆಸ್ಪತ್ರೆ ವೈದ್ಯ, ಸಿಬ್ಬಂದಿ

    ಹುಬ್ಬಳ್ಳಿ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯೊಬ್ಬರು ಮೃತಪಟ್ಟ ಪರಿಣಾಮ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಹುಬ್ಬಳ್ಳಿಯಲ್ಲಿ ನಡೆದಿದೆ.

    ಹುಬ್ಬಳ್ಳಿಯ ನಗರದ ಜನತಾ ಬಜಾರದಲ್ಲಿರುವ ಭಾಸ್ಕರ ರಾವ್ ಅವರ ಎಲುಬು ಕೀಲು ಮತ್ತು ಅಪಘಾತ ಚಿಕಿತ್ಸಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಉಣಕಲ್ ಗ್ರಾಮದ ಶಾಂತಮ್ಮ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ನಂತರ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಹಲ್ಲೆಗೆ ಮುಂದಾಗಿದ್ದಾರೆ.

    ಈ ವೇಳೆ ಸಂಬಂಧಿಕರ ಆಕ್ರೋಶ ಕಂಡು ಬೆದರಿದ ವೈದ್ಯರು ಮತ್ತು ಸಿಬ್ಬಂದಿ ಪಕ್ಕದಲ್ಲಿದ್ದ ಠಾಣೆಗೆ ಓಡಿ ಹೋಗಿ ರಕ್ಷಣೆ ಪಡೆದುಕೊಂಡಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಉಪನಗರ ಪೊಲೀಸರು ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.