Tag: doctor

  • ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡು ಯುವ ವೈದ್ಯೆ ಸಾವು

    ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡು ಯುವ ವೈದ್ಯೆ ಸಾವು

    – ಮದುವೆಯಾಗಿ ವರ್ಷಕ್ಕೆ ಆತ್ಮಹತ್ಯೆ..?

    ತಿರುವನಂತಪುರಂ: ವರ್ಷದ ಹಿಂದಷ್ಟೇ ವಿವಾಹವಾಗಿದ್ದ 24 ವರ್ಷದ ಯುವ ವೈದ್ಯೆ ಪತಿಯ ಮನೆಯಲ್ಲೇ ಸಾವನ್ನಪ್ಪಿದ್ದು, ಇದಕ್ಕೂ ಮುನ್ನ ತನಗೆ ನೀಡಿದ ಕಿರುಕುಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾಳೆ.

    ಕೇರಳದ ಕೊಲ್ಲಂ ಜಿಲ್ಲೆಯ ಸಾಸ್ತಂಕೋಟಾ ಬಳಿಯ ಸಾಸ್ತಮ್ನಾಡದಲ್ಲಿ ಘಟನೆ ನಡೆದಿದ್ದು, ಸಾವನ್ನಪ್ಪಿದ 24 ವರ್ಷದ ಯುವ ವೈದ್ಯೆಯನ್ನು ವಿಸ್ಮಯ.ವಿ.ನೈಯರ್ ಎಂದು ಗುರುತಿಸಲಾಗಿದೆ. ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಆ್ಯಂಡ್ ಸರ್ಜರಿ ವಿದ್ಯಾರ್ಥಿನಿಯಾಗಿದ್ದ ವಿಸ್ಮಯ 2020ರ ಮೇ ತಿಂಗಳಲ್ಲಿ ಮೋಟಾರು ವಾಹನ ಇಲಾಖೆಯ ಅಧಿಕಾರಿ ಎಸ್.ಕಿರಣ್‍ಕುಮಾರ್ ಜೊತೆ ವಿವಾಹವಾಗಿದ್ದರು. ಮನೆಯವರು ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ದಂಪತಿ ಕೇರಳದ ಕೊಲ್ಲಂನಲ್ಲಿ ವಾಸವಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

    ಘಟನೆ ನಡೆಯುವುದಕ್ಕೂ 2 ದಿನ ಮುಂಚೆ ತನ್ನ ಸೋದರ ಸಂಬಂಧಿಗೆ ಈ ಕುರಿತು ತಿಳಿಸಿದ್ದು, ವರದಕ್ಷಿಣೆ ಸಂಬಂಧ ಪತಿ ಕಿರುಕುಳ ನೀಡುತ್ತಿದ್ದು, ಹಲವು ಬಾರಿ ಹೊಡೆದಿದ್ದಾನೆ ಎಂದು ವಿವರಿಸಿದ್ದಾಳೆ.

    ಸೋಮವಾರ ಬೆಳಗ್ಗೆ ಗಂಡನ ಮನೆಯಲ್ಲಿ ವಿಸ್ಮಯ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ದೇಹದ ಮೇಲೆ ಗಾಯದ ಗುರುತುಗಳಿವೆ. ಸಾವಿಗೂ ಮುನ್ನನ ವಿಸ್ಮಯ ತನ್ನ ಸೋದರ ಸಂಬಂಧಿ ಜೊತೆ ನೋವನ್ನು ತೋಡಿಕೊಂಡಿದ್ದು, ಪತಿಯ ಚಿತ್ರ ಹಿಂಸೆಯನ್ನು ಸಹಿಸಲಾಗುತ್ತಿಲ್ಲ, ವರದಕ್ಷಿಣೆ ಬೇಕೆಂದು ನಿತ್ಯ ಹಿಂಸೆ ನಿಡುತ್ತಿದ್ದಾನೆ ಎಂದು ತಿಳಿಸಿದ್ದಾಳೆ. ಈ ಕುರಿತು ಭಾನುವಾರ ರಾತ್ರಿ ಸಹ ಸೋದರಸಂಬಂಧಿ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಫೋಟೋಗಳನ್ನು ಹಂಚಿಕೊಂಡಿದ್ದು, ಕಿರುಕುಳ ಸಹಿಸಲಾಗುತ್ತಿಲ್ಲ. ಬಹುಶಃ ಇದೇ ಕೊನೆಯ ಮೆಸೇಜ್ ಆಗಬಹುದು ಎಂದು ಹೇಳಿಕೊಂಡಿದ್ದಳು. ಮರುದಿನ ಬೆಳಗ್ಗೆ ವಿಸ್ಮಯ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

    ವಿಸ್ಮಯ ತಂದೆ ತ್ರಿವಿಕ್ರಮನ್ ನೈಯರ್ ಈ ಕುರಿತು ಮಾಹಿತಿ ನೀಡಿದ್ದು, ಈ ಹಿಂದೆ ಸಹ ಆತನ ಹಲ್ಲೆ ಮಾಡಿದ್ದ, ಒಮ್ಮೆ ಅವಳೊಂದಿಗೆ ನಾನು ಮನೆಗೆ ತೆರಳಿದಾಗ ಪಾರ್ಟಿ ಮಾಡಿ, ಎಲ್ಲರೂ ಕುಡಿದಿದ್ದರು. ನಾವು ಮನೆಗೆ ಪ್ರವೇಶಿಸುತ್ತಿದ್ದಂತೆ ಆತ ವಿಸ್ಮಯಳನ್ನು ಹೊಡೆಯಲು ಆರಂಭಿಸಿದ. ಈ ಕುರಿತು ನನ್ನ ಮಗ ಪ್ರಶ್ನಿಸಲು ಹೋದಾಗ ಅವನನ್ನೂ ಹೊಡೆದಿದ್ದ. ಆಗಲೂ ಈ ಕುರಿತು ನಾವು ಪ್ಯಾಟ್ರೋಲ್ ಪೊಲೀಸರಿಗೆ ತಿಳಿಸಿದ್ದೆವು. ಪೊಲೀಸರು ಆತನನ್ನು ಠಾಣೆಗೆ ಕರೆದೊಯ್ದಿದ್ದೆವು. ಸರ್ಕಲ್ ಇನ್‍ಸ್ಪೆಕ್ಟರ್ ಕಿರಣ್ ಕುಟುಂಬಸ್ಥರನ್ನು ಕರೆದು ಸಂಧಾನ ನಡೆಸಿದ್ದರು. ಬಳಿಕ ನನ್ನ ಮಗ ಇದೊಂದು ಬಾರಿ ಬಿಟ್ಟುಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದ. ಬಳಿಕ ನನ್ನ ಮಗಳು ನಮ್ಮ ಮನೆಯಲ್ಲೇ ಇದ್ದಳು. ಆದರೆ ಎರಡು ತಿಂಗಳ ಹಿಂದೆ ಅವಳು ಬಿಎಎಂಎಸ್ ಪರೀಕ್ಷೆ ಬರೆಯಲು ಕಾಲೇಜಿಗೆ ಹೋಗುವಾಗ ಕಿರಣ್ ಅವಳನ್ನು ಮನೆಗೆ ಕರೆದೊಯ್ದಿದ್ದ. ಬಳಿಕ ಅವಳು ನಮ್ಮ ಮನೆಗೆ ಬಂದಿರಲಿಲ್ಲ ಎಂದು ವಿವರಿಸಿದ್ದಾರೆ.

    ಈ ಘಟನೆ ನಡೆದ ಬಳಿಕ ವಿಸ್ಮಯ ತನ್ನ ತಾಯಿಗೆ ಮಾತ್ರ ಕರೆ ಮಾಡುತ್ತಿದ್ದಳು. ತಂದೆ, ಸಹೋದರನಿಗೆ ಕರೆ ಮಾಡುತ್ತಿರಲಿಲ್ಲ. ಇದೆಲ್ಲ ನನಗೆ ಈಗ ತಿಳಿದಿದೆ. ಕಿರಣ್ ಹಲ್ಲೆ ಮಾಡಿರುವುದನ್ನು ಅವಳು ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಳು. ಅಲ್ಲದೆ ಎರಡು ದಿನಗಳ ಹಿಂದೆ ನನ್ನ ಸೋದರ ಸಂಬಂಧಿಗೂ ಮೆಸೇಜ್ ಮಾಡಿ, ಕಿರಣ್ ಕೆಲಸಕ್ಕೆ ಹೋದಾಗ ನನ್ನನ್ನು ಮನೆಯಿಂದ ಕರೆದುಕೊಂಡು ಹೋಗು ಎಂದು ತಿಳಿಸಿದ್ದಳು ಎಂದು ವಿವರಿಸಿದ್ದಾರೆ.

    ಮರುದಿನ ಬೆಳಗ್ಗೆ ವಿಸ್ಮಯ ದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಗಳ ಸಾವಿಗೆ ಆಕೆಯ ಪತಿಯೇ ಕಾರಣ, ಮದುವೆ ಸಮಯದಲ್ಲಿ ಒಂದು ಎಕರೆ ಭೂಮಿ, ಒಂದು ಕಾರನ್ನು ನೀಡಲಾಗಿದೆ. ಆದರೂ ಅಳಿಯನ ಹಣದಾಹ ಕಡಿಮೆಯಾಗಿರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದೀಗ ಆರೋಪಿ ಕಿರಣ್ ಕುಮಾರ್‍ನನ್ನು ಬಂಧಿಸಲಾಗಿದೆ.

  • ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ

    ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ

    ಕೋಲಾರ: ಮೂರು ಜನ ಗಂಡು ಮಕ್ಕಳಿಗೆ ತಾಯಿಯೊಬ್ಬಳು ಜನ್ಮ ನೀಡಿದ್ದಾಳೆ. 3 ಜನ ಮಕ್ಕಳು ಆರೋಗ್ಯವಾಗಿದ್ದು ಅಚ್ಚರಿ ಮೂಡಿಸಿದ ಘಟನೆ ಕೋಲಾರದಲ್ಲಿ ವರದಿಯಾಗಿದೆ.

    ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಗೊಲ್ಲಹಳ್ಳಿ ನಿವಾಸಿ ಶ್ರೀರಾಮ್ ಹಾಗೂ ಮುನಿರತ್ನ ದಂಪತಿಗಳಿಗೆ ಮೂರು ಜನ ಮಕ್ಕಳಾಗಿದ್ದು ಇವರಲ್ಲಿ ಸಂತೋಷ ಮಡುಗಟ್ಟಿದೆ. ಮೂರು ಮಕ್ಕಳು ಹುಟ್ಟಿರುವ ಸಂತೋಷ ಒಂದೆಡೆಯಾದ್ರೆ ಮಕ್ಕಳನ್ನ ಪೋಷಣೆ ಮಾಡೋದು ಕೂಡ ವ್ಯವಸಾಯ ಮಾಡಿಕೊಂಡಿರುವ ಬಡ ಕುಟುಂಬಕ್ಕೆ ಸವಾಲಾಗಿದೆ. ಇದನ್ನೂ ಓದಿ:  ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಜಗದೀಶ್ ಶೆಟ್ಟರ್

    ಬಡ ರೈತನಾಗಿರುವ ಶ್ರೀರಾಮ್ ಹಾಗೂ ಮುನಿರತ್ನ ದಂಪತಿಗಳಗೆ ಮೊದಲು ಒಂದು ಹೆಣ್ಣು ಮಗುವಾಗಿದೆ. ಎರಡನೆ ಬಾರಿ ಗರ್ಭವತಿಯಾದಾಗ ವೈದ್ಯರ ಬಳಿ ಪರೀಕ್ಷೆ ಮಾಡಿದಾಗ ಅವಳಿ-ಜವಳಿ ಮಕ್ಕಳಾಗುತ್ತೆ ಎಂದು ಸ್ಕ್ಯಾನಿಂಗ್ ರಿಪೋರ್ಟ್ ನೋಡಿ ವೈದ್ಯರು ದೃಢಪಡಿಸಿದ್ದರು. ಬಳಿಕ ಹೆರಿಗೆಗೆ ಇದೆ ಬುಧವಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಅಂದೆ ಮದ್ಯಾಹ್ನ ಆಪರೇಷನ್ ಮಾಡುವ ಮೂಲಕ ಮಕ್ಕಳನ್ನ ಹೊರ ತೆಗೆದಿದ್ದು, ಟ್ವಿನ್ಸ್ ಮಕ್ಕಳಾಗುವ ಮೂಲಕ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಮುಂದಿನ ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಿಎಂ ಯಡಿಯೂರಪ್ಪ

    ಇತ್ತೀಚೆಗಿನ ವರದಿಗಳ ಪ್ರಕಾರ ಸಾಕಷ್ಟು ದಂಪತಿಗಳಲ್ಲಿ ಬಂಜೇತನ ಹೆಚ್ಚಾಗಿದ್ದು, 10 ರಲ್ಲಿ 7 ಜನರಿಗೆ ಮಾತ್ರ ಮಕ್ಕಳಾಗುತ್ತಿವೆ. ಉಳಿದಂತೆ 3 ಜನ ದಂಪತಿಗಳು ಮಕ್ಕಳಿಲ್ಲದೆ ಮಕ್ಕಳಿಲ್ಲ ಅನ್ನೋ ಕೊರಗಿನಲ್ಲಿದ್ದಾರೆ. ಆದರೆ ಶ್ರೀರಾಮ್ ದಂಪತಿಗಳ ಅದೃಷ್ಟವೇನೋ ಮೂರು ಜನ ಗಂಡು ಮಕ್ಕಳಾಗಿದ್ದು, 3 ಮಕ್ಕಳು ಆರೋಗ್ಯ ವಾಗಿದ್ದಾರೆ. ಇದೆ ಬುಧವಾರ ಹೆರಿಗೆಗೆಂದು ಆಸ್ಪತ್ರೆಗೆ ದಾಖಲು ಮಾಡಿದಾಗ ವೈದ್ಯರಿಗೂ ಇದೊಂದು ಅಚ್ಚರಿಯ ಜೊತೆಗೆ ಸವಾಲಾಗಿತ್ತು. ಇದನ್ನೂ ಓದಿ: ಆಭರಣ ಧರಿಸಿ ಮಿಯಾ ಖಲೀಫಾ ಹಾಟ್ ಫೋಟೋಶೂಟ್

    ಯಾಕಂದ್ರೆ 3 ಮಕ್ಕಳ ಜೊತೆಗೆ ತಾಯಿ ಜೀವ ರಕ್ಷಣೆ ಮಾಡೋದು ಕೂಡ ವೈದ್ಯರಿಗೆ ಸವಾಲಾಗಿತ್ತು. ಹಾಗಾಗಿ ಸಾಕಷ್ಟು ಪರಿಶ್ರಮ ಹಾಕುವ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿರುವ ಜಿಲ್ಲಾಸ್ಪತ್ರೆ ವೈದ್ಯೆ ಡಾ,ನಾಗವೇಣಿ ಮಕ್ಕಳ ಆರೈಕೆ ಮಾಡಿದ್ದಾರೆ. 3 ಜನ ಗಂಡು ಮಕ್ಕಳು 2 ಕೆಜಿ ಯಷ್ಟು ತೂಕವಿದ್ದು, 3 ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಬಡ ಕುಟುಂಬಕ್ಕೆ 3 ಮಕ್ಕಳ ಆಗಮನ ಖುಷಿಯಾಗಿದ್ದು, ಜಿಲ್ಲಾಸ್ಪತ್ರೆಯ ತಾಯಿ ಮಕ್ಕಳ ಆಸ್ಪತ್ರೆ ಸಧ್ಯ ಅಚ್ಚರಿಯ ತಾಣವಾಗಿದೆ. ಮಕ್ಕಳ ಆರೈಕೆ ಹಾಗೂ ಪೋಷಣೆ ಪೋಷಕರಿಗೂ ಸವಾಲಾಗಿ ಪರಿಣಮಿಸಿದ್ದು, 3 ಮಕ್ಕಳನ್ನ ಚನ್ನಾಗಿ ನೋಡಿಕೊಳ್ಳುತ್ತೇವೆ ಎಂದು ಪೋಷಕರು ಹೇಳಿದ್ದಾರೆ.

  • ಕಾಣೆಯಾಗಿದ್ದ ಚಿನ್ನದ ಸರ ನಾಯಿ ಮಲದಲ್ಲಿ ಪತ್ತೆ

    ಕಾಣೆಯಾಗಿದ್ದ ಚಿನ್ನದ ಸರ ನಾಯಿ ಮಲದಲ್ಲಿ ಪತ್ತೆ

    ಕೊಪ್ಪಳ: ಮನೆಯಲ್ಲಿ ಬಿಚ್ಚಿಟ್ಟಿದ್ದ ಬಂಗಾರ ಸರವನ್ನು ಸಾಕಿದ ನಾಯಿ ಮರಿಯೇ ತಿಂದು ಹಾಕಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದಿದೆ.

    ಸದ್ಯ ತಿಂದಿರುವ ಚಿನ್ನದ ಸರದ ಒಂದಿಷ್ಟು ತುಂಡುಗಳು ನಾಯಿಯ ಮಲದಲ್ಲಿ ತುಂಡುಗಳು ಹೊರಗೆ ಬಂದಿದೆ. ಕಾರಟಗಿಯ ದಿಲೀಪ ಕುಮಾರ್ ಹಿರೇಮಠ ಎಂಬವರು ಮನೆಯಲ್ಲಿ ಪಮೋರಿಯನ್ ತಳಿಯ ನಾಯಿಯನ್ನು ಸಾಕಿದ್ದಾರೆ. ಸುಮಾರು ಮೂರು ತಿಂಗಳ ವಯಸ್ಸಿನ ಈ ನಾಯಿ ಮರಿ 20 ಗ್ರಾಂ ತೂಕದ ಚಿನ್ನದ ಸರವನ್ನು ತಿಂದಿದೆ. ಇದರ ಮೌಲ್ಯ ಒಂದು ಲಕ್ಷ ರೂಪಾಯಿಯಾಗಿದೆ ಎಂದು ಮನೆಯವರು ಹೇಳುತ್ತಿದ್ದಾರೆ. ಇದನ್ನೂ ಓದಿ: ಸೆಲ್ಫಿ ಕ್ರೇಜ್ – ಸಮುದ್ರದ ಪಾಲಾದ ಯುವಕ

    ದಿಲೀಪ್ ನಿನ್ನೆ ರಾತ್ರಿ ತಮ್ಮ ಕೊರಳಲ್ಲಿದ್ದ ಚಿನ್ನದ ಚೈನ್‍ನನ್ನು ಮನೆಯಲ್ಲಿನ ಗಾಡ್ರೇಜ್ ಕೆಳಗೆ ಬಿಚ್ಚಿಟ್ಟಿದ್ದರಂತೆ. ಬೆಳಗ್ಗೆ ನೋಡಿದಾಗ ಚಿನ್ನದ ಚೈನ್ ತುಂಡೊಂದು ಬಿದ್ದಿರುವುದು ಕಾಣಿಸಿದೆ. ಬಿಚ್ಚಿಟ್ಟಿದ್ದ ಚಿನ್ನದ ಚೈನ್‍ನನ್ನು ದಿಲೀಪ್ ಅವರು ಹುಡುಕಾಡಿದ್ದಾರೆ. ಸರ ಸಿಗದೆ ಇದ್ದಾಗ ನಾಯಿ ಗುಳುಂ ಮಾಡಿರಬಹುದು ಎಂಬ ಅನುಮಾನದ ಮೇಲೆ ಸ್ಥಳೀಯ ಪಶುವೈದ್ಯರ ಬಳಿ ಕರೆದುಕೊಂಡು ಹೋಗಿ ತಪಾಸಣೆ ಮಾಡಿಸಿದ್ದಾರೆ.

    ತಪಾಸಣೆ ವೇಳೆ ನಾಯಿ ಮರಿಯೇ ಚಿನ್ನದ ಸರವನ್ನು ತಿಂದು ಮುಗಿಸಿರುವುದು ಪಕ್ಕಾ ಆಗಿದೆ. ಸದ್ಯ ನಾಯಿಯು ಮಲ ಮಾಡಿದಾಗ ಅದರ ಮಲದಲ್ಲಿ ಚಿನ್ನದ ಸರದ ತುಂಡುಗಳು ಪತ್ತೆಯಾಗಿವೆ. ಇನ್ನುಳಿದ ಚಿನ್ನದ ಸರದ ತುಂಡುಗಳು ನಾಯಿಯ ಹೊಟ್ಟೆಯಲ್ಲಿದ್ದು ಮಲದ ಮೂಲಕ ಹೊರ ಬರುತ್ತದೆಯೇನೋ ಎಂದು ನಿರೀಕ್ಷೆಯಲ್ಲಿದ್ದಾರೆ. ನಾಯಿ ಮರಿ ಮಲ ಹಾಕುವುದನ್ನು ಮನೆಯವರು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಟ- ಚಿಕಿತ್ಸೆ ಸಿಗದೆ ಖಾಸಗಿ ಆಸ್ಪತ್ರೆಗೆ ದಾಖಲು

  • ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಟ- ಚಿಕಿತ್ಸೆ ಸಿಗದೆ ಖಾಸಗಿ ಆಸ್ಪತ್ರೆಗೆ ದಾಖಲು

    ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಟ- ಚಿಕಿತ್ಸೆ ಸಿಗದೆ ಖಾಸಗಿ ಆಸ್ಪತ್ರೆಗೆ ದಾಖಲು

    ಕೋಲಾರ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಗರ್ಭಿಣಿ ನರಳಾಡಿದ ಘಟನೆ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

    ಕೋಲಾರ ತಾಲೂಕಿನ ಶಿವರಾಮಪುರ ಗ್ರಾಮ ಮಹಿಳೆ ಹೆರಿಗೆ ನೋವಿನಿಂದ ಬೆಳಿಗ್ಗೆ 6 ಗಂಟೆಯಿಂದಲೂ ನರಳಾಡುತ್ತಿದ್ದಳು. ತುಂಬು ಗರ್ಭಿಣಿ ಸುಮ ಹೊಟ್ಟೆಯಲ್ಲಿ ಮಗು ಸತ್ತು ಹೋಗಿತ್ತು. ಮಗು ತೀರಿ ಹೋಗಿದೆ, ತಾಯಿ ಆದರೂ ಬದುಕಿಸಿ ಎಂದು ಗರ್ಭೀಣಿ ಪೋಷಕರು ಹಾಗೂ ಪತಿ ಸುಬ್ರಮಣಿ ಕೇಳಿಕೊಳ್ಳುತ್ತಿದ್ದರು. ಆದರೆ ಆಸ್ಪತ್ರೆ ಸಿಬ್ಬಂದಿ ಮಾತ್ರ ಕ್ಯಾರೆ ಅಂದಿಲ್ಲ. ಇದನ್ನೂ ಓದಿ: ಸೋಕಿನಿಂದ ಹಲವು ಕುಟುಂಬಗಳು ವಿನಾಶದ ಅಂಚಿನಲ್ಲಿವೆ – ಸಂಸದ ಎ.ನಾರಾಯಣ ಸ್ವಾಮಿ

    ನಮ್ಮಲ್ಲಿ ಚಿಕಿತ್ಸೆ ಲಭ್ಯವಿಲ್ಲ ಹಾಗಾಗಿ ನೀವು ಮೆಡಿಕಲ್ ಕಾಲೇಜಿಗೆ ಕರೆದುಕೊಂಡು ಹೋಗಿ ಎಂದು ಸಿಬ್ಬಂದಿ ಹೇಳಿದ್ದಾರೆ. ನಮಗೆ ಇಲ್ಲೇ ಅಂದ್ರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿ ಎಂದು ಸಂಬಂಧಿಕರು ಪಟ್ಟು ಹಿಡಿದಿದ್ದರು. ಹೊಟ್ಟೆಯಲ್ಲಿ ಮಗು ಮೃತಪಟ್ಟಿರುವ ವಿಚಾರವನ್ನ ತಾಯಿಗೂ ತಿಳಿಸದೆ ಪತಿ ಹಾಗೂ ಪೋಷಕರು ಆಕೆಯನ್ನ ಕಾಯಿಸುತ್ತಿದ್ದರು. ಆದರೆ ಗರ್ಭೀಣಿ ಮಾತ್ರ ನನ್ನ ಮಗು ಇನ್ನು ಬದುಕಿದೆ ಎಂದು ಆಸೆಯಲ್ಲಿ ಇದ್ದಳು.

    ಗರ್ಭೀಣಿ ನರಳಾಟ ಎಂತಹ ಕಲ್ಲು ಮನಸ್ಸನ್ನು ಮೃದು ಮಾಡುವಂತ್ತಿದ್ದು, ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರು ಚಿಕಿತ್ಸೆ ನೀಡದೆ ತಡ ಮಾಡಿದ್ದಾರೆ. ಈ ಘಟನೆ ಆಸ್ಪತ್ರೆಗೆ ಬಂದಿದ್ದ ಸಾಕಷ್ಟು ಜನರ ಕೆಂಗಣ್ಣಿಗೆ ಗುರಿಯಾಗಿತ್ತು. ನಂತರ ಮಹಿಳೆಯನ್ನು ಅರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

  • ಒಂದೇ ಬಾರಿಗೆ 10 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

    ಒಂದೇ ಬಾರಿಗೆ 10 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

    ಕೇಪ್‍ಟೌನ್: ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬಳು ಹತ್ತು ಮಕ್ಕಳಿಗೆ ಜನ್ಮ ನೀಡಿ ವಿಶ್ವದಾಖಲೆ ನಿರ್ಮಿಸಿದ್ದಾರೆ

    ಈಗಾಗಲೇ ಅವಳಿ ಮಕ್ಕಳಿಗೆ ತಾಯಿಯಾಗಿರುವ, ಗೋಸಿಯಮ್ ತಮಾರಾ ಸಿಥೋಲ್(37) ಇದೀಗ ಪ್ರಿಟೋರಿಯಾದ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಏಳು ಗಂಡು ಹಾಗೂ ಮೂವರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ ಅವರ ಪತಿ ತಿಳಿದ್ದಾರೆ.

    ಪ್ರಸ್ತುತ ನಿರುದ್ಯೋಗಿ ಟೆಬೋಗೊ ತ್ಸೊಟೆಟ್ಸಿ ಸೋಮವಾರ ತಡರಾತ್ರಿ ತಮಗೆ ಮಗು ಜನಿಸಿರುವ ಬಗ್ಗೆ ಮಾದ್ಯಮಗಳಿಗೆ ತಿಳಿಸಿದ್ದು, ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಈ ಮುನ್ನ ಗೋಸಿಯಮ್ ತಮಾರಾ ಸಿಥೋಲ್ ಗರ್ಭಿಣಿಯಾಗಿದ್ದಾಗ ಸ್ವಾಭಾವಿಕ ಹೆರಿಗೆಯಾಗಿತ್ತು. ಆದರೆ ಚಿಕಿತ್ಸೆಯ ಪರಿಣಾಮ ಮಹಿಳೆ ಇಷ್ಟು ಭ್ರೂಣಗಳಿಗೆ ಗರ್ಭಧರಿಸಿದ್ದಾರೆ. ಇದನ್ನು ಓದಿ: ಒಂದೇ ಬಾರಿಗೆ 9 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

    ಈ ಮುನ್ನ ಮೊರೊಕ್ಕೊದ ಆಸ್ಪತ್ರೆಯಲ್ಲಿ ಮಾಲಿಮನ್ ಮಹಿಳೆ-ಹಲೀಮಾ ಸಿಸ್ಸೆ ಒಂಬತ್ತು ಮ್ಕಕಳಿಗೆ ಜನ್ಮ ನೀಡಿದ್ದರು. ಇದಕ್ಕೆ ಆಕೆ ಪಡೆದ ಚಿಕಿತ್ಸೆ ಕಾರಣ ಎಂದು ಹೇಳಲಾಗಿತ್ತು. ಇದೀಗ ದಕ್ಷಿಣ ಆಫ್ರಿಕಾದ ಮಹಿಳೆ 10 ಮಕ್ಕಳಿಗೆ ಜನ್ಮ ನೀಡುವ ಮೂಲಕ ಹಳೆಯ ಎಲ್ಲಾ ದಾಖಲೆಗಳನ್ನು ಮುರಿದಿದ್ದಾರೆ. ಇದನ್ನು ಓದಿ: ಇಂಟರ್ನೆಟ್‌ ನಿಲುಗಡೆ – ವಿಶ್ವದ ಟಾಪ್ ವೆಬ್‍ಸೈಟ್‍ಗಳು ಡೌನ್

  • ಮಧ್ಯಪ್ರದೇಶದಲ್ಲಿ 3 ಸಾವಿರಕ್ಕೂ ಅಧಿಕ ಕಿರಿಯ ವೈದ್ಯರ ರಾಜೀನಾಮೆ

    ಮಧ್ಯಪ್ರದೇಶದಲ್ಲಿ 3 ಸಾವಿರಕ್ಕೂ ಅಧಿಕ ಕಿರಿಯ ವೈದ್ಯರ ರಾಜೀನಾಮೆ

    ಭೋಪಾಲ್: ಮಧ್ಯಪ್ರದೇಶದಲ್ಲಿ ವಿವಿಧ ಬೇಡಿಕೆಯನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದ ಕಿರಿಯ ವೈದ್ಯರಿಗೆ ಮಧ್ಯಪ್ರದೇಶ ಹೈಕೋರ್ಟ್ 24 ಗಂಟೆಗಳ ಒಳಗಾಗಿ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಈ ಸೂಚನೆಯ ಬೆನ್ನಲ್ಲೇ 3 ಸಾವಿರಕ್ಕೂ ಅಧಿಕ ವೈದ್ಯರು ರಾಜೀನಾಮೆ ನೀಡಿದ್ದಾರೆ.

    ಕೊರೊನಾ ಸಂಕಷ್ಟದ ನಡುವೆ ಮಧ್ಯಪ್ರದೇಶದಲ್ಲಿ ಕಿರಿಯ ವೈದ್ಯರು ವಿವಿಧ ಬೇಡಿಕೆಯನ್ನು ಮುಂದಿಟ್ಟುಕೊಂಡು ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಯನ್ನು ಕಾನೂನು ಬಾಹಿರ ಮತ್ತು 24 ಗಂಟೆಯ ಒಳಗಾಗಿ ವೈದ್ಯರು ಕರ್ತವ್ಯಕ್ಕೆ ಹಾಜರಾಗಬೇಕೆಂದು ಹೈಕೋರ್ಟ್ ಸೂಚನೆ ಹೊರಡಿಸಿತ್ತು. ಇದರಿಂದ ಅಸಮಾಧಾನಗೊಂಡ 3000ಕ್ಕೂ ಅಧಿಕ ವೈದ್ಯರು ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಲ್ಲಿ ಕನ್ನಡದಲ್ಲೇ ಕ್ಷಮೆ ಕೇಳಿದ ಗೂಗಲ್

    ಕಿರಿಯ ವೈದ್ಯರು ತಮಗೆ ಹೆಚ್ಚಿನ ಭತ್ಯೆ, ಕೊರೊನಾ ಕಷ್ಟಕಾಲದಲ್ಲಿ ಸೇವೆ ಮಾಡಿದ ವೈದ್ಯರ ಕುಟುಂಬದವರಿಗೆ ಉಚಿತ ಚಿಕಿತ್ಸೆ ಸೇರಿದಂತೆ, ವಿವಿಧ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದರು.

    6 ವಿವಿಧ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 3 ಸಾವಿರಕ್ಕೂ ಅಧಿಕ ಮಂದಿ ವೈದ್ಯರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದು, ಈಗಾಗಲೇ ರಾಜೀನಾಮೆ ಪತ್ರವನ್ನು ಕಾಲೇಜಿನ ಡೀನ್‍ಗಳಿಗೆ ಕಳುಹಿಸಿದ್ದಾರೆ ಎಂದು ಮಧ್ಯಪ್ರದೇಶದ ಕಿರಿಯ ವೈದ್ಯರ ಸಂಘದ(ಎಂಪಿಜೆಡಿಎ) ಅಧ್ಯಕ್ಷರಾದ ಅರವಿಂದ್ ಮೀನಾ ಹೇಳಿದ್ದಾರೆ.

    ನಮ್ಮ ಬೇಡಿಕೆ ಈಡೇರುವವರೆಗೆ ನಾವು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ. ಸರ್ಕಾರ ಈಗಾಗಲೇ ನಮ್ಮ 3ನೇ ವರ್ಷದ ಪದವಿಯ ಪರೀಕ್ಷೆಗಳನ್ನು ರದ್ದು ಮಾಡಿ ನಮ್ಮನ್ನು ಕೊರೊನಾ ಸೇವೆಗೆ ಹಾಕಿಕೊಂಡಿದೆ. ಆದರೆ ನಮ್ಮ ಬೇಡಿಕೆ ಮಾತ್ರ ಈಡೇರಿಸಲು ಒಪ್ಪುತ್ತಿಲ್ಲ. ನಾವು ಇದರ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸುತ್ತೇವೆ ಎಂದರು.

    ನಮ್ಮ ಪ್ರತಿಭಟನೆಗೆ ಕೇರಳ, ಕರ್ನಾಟಕ, ಉತ್ತರ ಪ್ರದೇಶ, ರಾಜಸ್ಥಾನ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯದ ಕಿರಿಯ ವೈದ್ಯರು ಬೆಂಬಲ ಸೂಚಿಸಿದ್ದಾರೆ. ನಾವು ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

  • ಕೊರೊನಾ ವಾರಿಯರ್ಸ್‌ಗೆ ಸಚಿವ ಪ್ರಭು ಚವ್ಹಾಣ್ ಸನ್ಮಾನ

    ಕೊರೊನಾ ವಾರಿಯರ್ಸ್‌ಗೆ ಸಚಿವ ಪ್ರಭು ಚವ್ಹಾಣ್ ಸನ್ಮಾನ

    ಬೀದರ್: ಚಿಟಗುಪ್ಪಾ ತಾಲ್ಲೂಕಿಗೆ ಭೇಟಿ ನೀಡಿ ಅಲ್ಲಿನ ಕೊರೊನಾ ಕೊರೊನಾ ವಾರಿಯರ್ಸ್‌ಗೆ ಸಚಿವ ಸನ್ಮಾನ ಪ್ರಭು ಚವ್ಹಾಣ್ ಸನ್ಮಾನ ಮಡಿದ್ದಾರೆ.

    ವೈದ್ಯಾಧಿಕಾರಿಗಳು, ಶುಶ್ರೂಷಕರು, ಡಾಟಾ ಎಂಟ್ರಿ ಆಪರೇಟರ್, ಲ್ಯಾಬ್ ಟೆಕ್ನಿಷಿಯನ್, ಪೊಲೀಸ್, ಕಂದಾಯ ಇಲಾಖೆಯ ಕೊರೊನಾ ವಾರಿಯರ್ಸ್ ಸೇರಿದಂತೆ ಒಟ್ಟು 64 ಜನರಿಗೆ ಸಚಿವರು ಶಾಲು ಹೋದಿಸಿ,ಗೌರವಿಸಲಾಗಿದೆ. ಇದನ್ನೂ ಓದಿ:  ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ 2 ದಿನ ಆಸ್ಪತ್ರೆಗೆ ದಾಖಲು

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಳೆದ ವರ್ಷ 2020ರಲ್ಲಿ ಒಕ್ಕರಿಸಿದ ಕೊರೊನಾ ವೈರಸ್ ಜನರಲ್ಲಿ ಸಾಕಷ್ಟು ಆತಂಕವನ್ನು ಸೃಷ್ಟಿಸಿದೆ. ಅದೇ ರೀತಿ ಈ ವರ್ಷವು ಕೂಡ 2ನೇ ಅಲೆಯ ರೂಪದಲ್ಲಿ ಜನರನ್ನು ಕಾಡುತ್ತಿದೆ. ಈ ಕೊರೊನಾ ವೈರಸ್ ಮಹಾಮಾರಿಯಿಂದಾಗಿ ನಾವು ಕೆಲವರನ್ನು ಕಳೆದುಕೊಂಡಿದ್ದೇವೆ. ಈ ವೈರಸ್‍ನ್ನು ನಿಯಂತ್ರಿಸಲು ಜಿಲ್ಲಾಡಳಿತ, ತಾಲೂಕಾ ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಬಹಳಷ್ಟು ಇಲಾಖೆಗಳು ಮಂಚೂಣಿಯಲ್ಲಿ ನಿಂತು ಕೆಲಸ ಮಾಡಿವೆ ಎಂದಿದ್ದಾರೆ.

    ತಮ್ಮ ಜೀವಕ್ಕೆ ಹೆದರದೆ ಕೊರೊನಾ ಸೋಂಕಿತರ ಸೇವೆ ಮಾಡಿದ ಹಲವಾರು ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವೈಖರಿಗೆ ಗೌರವಿಸಿ ನಾವು ಅವರನ್ನು ಕೊರೊನಾ ವಾರಿಯರ್ಸ್ ಎಂದು ಸನ್ಮಾನ ಮಾಡುತ್ತಿದ್ದೇವೆ ಎಂದು ಪ್ರಭು ಚವ್ಹಾಣ್ ತಿಳಿಸಿದರು.

    ಹುಮ್ನಬಾದ್ ಶಾಸಕರಾದ ರಾಜಶೇಖರ ಪಾಟೀಲ್, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ, ಬಿಜೆಪಿ ಮುಖಂಡರಾದ ಸುಭಾಷ್ ಕಲ್ಲೂರ ಹಾಗೂ ಪುರಸಭೆಯ ಅಧಿಕಾರಿಗಳು,ತಹಸೀಲ್ದಾರರು ಸೇರಿದಂತೆ ಇನ್ನೀತರರು ಉಪಸ್ಥಿತಿ ಇದ್ದರು.

  • ನನ್ನ 5 ತಿಂಗಳ ಮಗುವನ್ನು ಒಬ್ಬರೂ ತಪಾಸಣೆ ಮಾಡಲಿಲ್ಲ,ಜೀವವೇ ಹೋಯ್ತು-ತಂದೆ ಕಣ್ಣೀರು

    ನನ್ನ 5 ತಿಂಗಳ ಮಗುವನ್ನು ಒಬ್ಬರೂ ತಪಾಸಣೆ ಮಾಡಲಿಲ್ಲ,ಜೀವವೇ ಹೋಯ್ತು-ತಂದೆ ಕಣ್ಣೀರು

    ಲಕ್ನೋ: ಸರ್ಕಾರಿ ಆಸ್ಪತ್ರೆಯ ಹೊರಗೆ ವ್ಯಕ್ತಿಯೊಬ್ಬ ತನ್ನ 5 ತಿಂಗಳ ಮಗುವಿನ ಮೃತದೇಹವನ್ನು ತೋಳಲ್ಲಿ ಅಪ್ಪಿಕೊಂಡು, ಅಳುತ್ತ ನನ್ನ ಮಗುವಿಗೆ ಚಿಕಿತ್ಸೆ ನೀಡಿಲ್ಲ, ಜೀವವೇ ಹೋಯ್ತು ಎಂದು ತೋಳಲ್ಲಿ ಅಪ್ಪಿ ತಂದೆಯ ಕಣ್ಣೀರು  ಹಾಕಿದ್ದಾರೆ.

    ಉತ್ತರ ಪ್ರದೇಶದ ಬಾಬರ್ಂಕಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಬಳಿ ವ್ಯಕ್ತಿ ನನ್ನ ಮಗುವಿನ ಆರೋಗ್ಯ ಗಂಭೀರ ಸ್ಥಿತಿ ತಲುಪಿದ್ದರು, ಕೊರೊನಾ ಭಯದಿಂದ ಯಾರೊಬ್ಬರೂ ರೋಗಿಗಳನ್ನು ಮುಟ್ಟಲು ಬರುವುದಿಲ್ಲ. ಎರಡು ತಾಸುಗಳ ಬಳಿಕ ವೈದ್ಯರು ನೋಡಿದರೂ, ಅಷ್ಟರಲ್ಲಿ ನನ್ನ ಹೆಣ್ಣುಮಗುವಿನ ಜೀವ ಹೋಗಿತ್ತು. ಇದ್ಯಾವ ವ್ಯವಸ್ಥೆ ಎಂದು ತಂದೆ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಆಡಿಯೋಗೂ ನಮಗೂ ಯಾವುದೇ ಸಂಬಂಧವಿಲ್ಲ – ತನಿಖೆಗೆ ಆಗ್ರಹಿಸಿ ಆಸ್ಪತ್ರೆಯಿಂದ ದೂರು ದಾಖಲು

    ಆಸ್ಪತ್ರೆ ಹೊರಗಡೆ ಅಳುತ್ತ ನಿಂತಿದ್ದ ವ್ಯಕ್ತಿಯ ಬಳಿ ಪೊಲೀಸ್ ಒಬ್ಬರು, ಏನಿದು ನಾಟಕ? ಎಂದು ಪ್ರಶ್ನಿಸುತ್ತಾರೆ. ನನ್ನ ಮಗು ಸಾವನ್ನಪ್ಪಿದೆ.. ನಾನ್ಯಾಕೆ ಡ್ರಾಮಾ ಮಾಡಲಿ ಎಂದು ಮಗುವಿನ ತಂದೆ ಹೇಳುವಂತ ವಿಡಿಯೋಗಳು ವೈರಲ್ ಆಗಿವೆ. ಅದಕ್ಕೆ ಪ್ರತಿಯಾಗಿ ಪೊಲೀಸರು ಒಂದು ಲಿಖಿತ ದೂರು ನೀಡುವಂತೆ ಕೇಳಿದ್ದಾರೆ. ಇದನ್ನೂ ಓದಿ: 1,200 ಕಿ.ಮೀ ಸೈಕಲಿನಲ್ಲೇ ಮಗಳೊಂದಿಗೆ ಕ್ರಮಿಸಿ ಸುದ್ದಿಯಾಗಿದ್ದ ವ್ಯಕ್ತಿ ಸಾವು

    ಆಸ್ಪತ್ರೆ ವ್ಯಕ್ತಿಯ ಆರೋಪವನ್ನು ತಳ್ಳಿ ಹಾಕಿದೆ. ಈ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗಲೇ ಮೃತಪಟ್ಟಿತ್ತು ಎಂದು ಹೇಳಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಬಂದ ಮಗುವನ್ನು ತಪಾಸಣೆ ಮಾಡಲಾಯಿತು. ಆದರೆ ಮನೆಯಿಂದ ಕರೆದುಕೊಂಡು ಬರುವಷ್ಟರಲ್ಲಿಯೇ ಮಗು ಮೃತಪಟ್ಟಾಗಿತ್ತು. ವೈದ್ಯರು ಮತ್ತು ಪ್ಯಾರಾಮೆಡಿಕಲ್ ಸಿಬ್ಬಂದಿ ಇಬ್ಬರೂ ಮಗುವನ್ನು ಪರೀಕ್ಷೆ ಮಾಡಿದ್ದಾರೆ ಎಂದು ನನಗೆ ಆಸ್ಪತ್ರೆಯ ಸೂಪರಿಂಟೆಂಡೆಂಟ್ ತಿಳಿಸಿದ್ದಾರೆ. ಈ ಮಗು ಟೆರೇಸ್‍ನಿಂದ ಕೆಳಗೆ ಬಿದ್ದಿತ್ತು ಎಂದು  ಪಾಲಕರೇ ತಿಳಿಸಿದ್ದಾರೆ ಎಂದು ಬಾಬರ್ಂಕಿ ಮುಖ್ಯ ವೈದ್ಯಾಧಿಕಾರಿ ಬಿಕೆಎಸ್ ಚೌಹಾಣ್ ತಿಳಿಸಿದ್ದಾರೆ.

  • ಸೊಂಕಿತರೊಂದಿಗೆ ವೈದ್ಯೆ ಡ್ಯಾನ್ಸ್ – ಐಡಿಯಾಗೆ ಜನರಿಂದ ಮೆಚ್ಚುಗೆ

    ಸೊಂಕಿತರೊಂದಿಗೆ ವೈದ್ಯೆ ಡ್ಯಾನ್ಸ್ – ಐಡಿಯಾಗೆ ಜನರಿಂದ ಮೆಚ್ಚುಗೆ

    ಚಿತ್ರದುರ್ಗ: ಆತ್ಮಸ್ಥೈರ್ಯ ತುಂಬಲು ಜಿಲ್ಲೆಯ ವೈದ್ಯರು ಸೋಂಕಿತರ ಜೊತೆ ನೃತ್ಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಕೋವಿಡ್ ಕೇರ್ ಕೇಂದ್ರದಲ್ಲಿ ಕಳೆದ ಹತ್ತು ದಿನಗಳಿಂದ ಕೊರೊನಾ ಸೋಂಕಿತರಿಗೆ ವೈದ್ಯೆ ಶೃತಿ ನೃತ್ಯ ವ್ಯಾಯಾಮ ಮಾಡಿಸುತ್ತಿದ್ದಾರೆ.

    ಪ್ರತಿ ದಿನ ಹಿಂದಿ ಹಾಡೋಂದಕ್ಕೆ ನೃತ್ಯ ಮಾಡಿಸುವ ವೈದ್ಯೆ ಶೃತಿ, ನಾಗಿನಿ ನಾಗಿನಿ ಹಾಡಿಗೆ ಕೊರೊನಾ ಸೋಂಕಿತರೊಟ್ಟಿಗೆ ಹೆಜ್ಜೆ ಹಾಕಿಸುವ ಮೂಲಕ ಗಮನ ಸೆಳೆದಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದೆ ಎಂದು ಬಾರಿ ಆತಂಕ ಹಾಗೂ ಭಯದಿಂದ ಬದುಕುವ ಸೋಂಕಿತರಿಗೆ ಮಾನಸಿಕವಾಗಿ ಆತ್ಮಸ್ಥೈರ್ಯ ತುಂಬಲು ಡ್ಯಾನ್ಸ್ ಪ್ರಯೋಗ ಮಾಡಿದ್ದಾರೆ.

    ವೈದ್ಯರು ಸಹ ಎಲ್ಲರೊಟ್ಟಿಗೆ ಒಂದಾಗಿ ನಯ, ನಾಜುಕಿಲ್ಲದೇ ಸ್ವಲ್ಪವೂ ಮುಜುಗರ ಪಡದೇ ಸ್ಟೆಪ್ ಹಾಕಿ ಸೋಂಕಿತರನ್ನು ಸಂಪೂರ್ಣ ಆಕ್ಟೀವ್ ಆಗಿರುವಂತೆ ಮಾಡಿದ್ದಾರೆ. ಸದ್ಯ ವೈದ್ಯರು ಮಾಡಿರುವ ಈ ಐಡಿಯಾ ಫುಲ್ ವರ್ಕೌಟ್ ಆಗಿದ್ದು, ಅತೀ ಬೇಗನೇ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳುವಂತಾಗಿದೆ. ಹೀಗಾಗಿ ಡಾಕ್ಟರ್ ಶೃತಿಯವರ ಕಾರ್ಯಕ್ಕೆ ಎಲ್ಲೆಡೆ ಸೋಂಕಿತರು ಹಾಗೂ ಅವರ ಕುಟುಂಬಸ್ಥರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

  • ಆಸ್ಪತ್ರೆಯಲ್ಲಿ ಮಗು ಕದ್ದಿದ್ದ ವೈದ್ಯೆ ಬರೋಬ್ಬರಿ ವರ್ಷದ ಬಳಿಕ ಖಾಕಿ ಬಲೆಗೆ

    ಆಸ್ಪತ್ರೆಯಲ್ಲಿ ಮಗು ಕದ್ದಿದ್ದ ವೈದ್ಯೆ ಬರೋಬ್ಬರಿ ವರ್ಷದ ಬಳಿಕ ಖಾಕಿ ಬಲೆಗೆ

    – ಕದ್ದಿದ್ದು ಮೇ 29, 2020, ಅರೆಸ್ಟ್ ಆಗಿದ್ದು ಮೇ 29, 2021

    ಬೆಂಗಳೂರು: ಚಾಮರಾಜಪೇಟೆ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಿಂದ ಮಗು ಕಳ್ಳತನ ಮಾಡಿಕೊಂಡು ಎಸ್ಕೇಪ್ ಆಗಿದ್ದ ಮನೋವೈದ್ಯೆ ಬರೋಬ್ಬರಿ ಒಂದು ವರ್ಷದ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾಳೆ.

    ಕಾಕತಾಳೀಯ ಎಂಬಂತೆ ಕಳೆದ ವರ್ಷ ಮೇ 29, 2020ರಲ್ಲಿ ಮಗು ಕಳ್ಳತನ ಮಾಡಿಕೊಂಡು ಎಸ್ಕೇಪ್ ಆಗಿದ್ದ ವೈದ್ಯೆ 2021 ಮೇ 29 ರಂದು ಪೊಲೀಸರ ಬಲೆಗೆ ಬಿದ್ದಿರೋದು ವಿಶೇಷ. ಘಟನೆ ಬಳಿಕ ಆರೋಪಿಯನ್ನ ಎಲ್ಲಿ ಹುಡುಕಿದರೂ ಮಾಹಿತಿ ಸಿಗುತ್ತಿರಲಿಲ್ಲ. ಪೊಲೀಸರು ಆರು ತಿಂಗಳ ಬಳಿಕ ಆರೋಪಿಯ ರೇಖಾ ಚಿತ್ರವನ್ನ ಬಿಡುಗಡೆ ಮಾಡಿ ಹುಡುಕಿದರೂ ಪತ್ತೆಯಾಗಿರಲಿಲ್ಲ.

    ಕಳೆದ ಮೂರ್ನಾಲ್ಕು ದಿನದಿಂದ ಆರೋಪಿ ಟವರ್ ಲೊಕೇಷನ್ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿದೆ. ಟವರ್ ಲೊಕೇಷನ್ ಆಧಾರದ ಮೇಲೆ ಆರೋಪಿ ರೇಷ್ಮಾಳನ್ನ ತಲಘಟ್ಟಪುರ ಪಿಎಸ್ ಐ ಶ್ರೀನಿವಾಸ್ ಅಂಡ್ ಟೀಂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ರೇಷ್ಮಾ ದಂಪತಿಗೆ ಮಗು ಮಾಡಿಕೊಡೊದಾಗಿ 15 ಲಕ್ಷ ರೂಪಾಯಿ ಹಣ ಪಡೆದಿದ್ದಳು. ದಂಪತಿಯ ಮೊದಲ ಮಗು ಬುದ್ದಿ ಮಾಂದ್ಯತೆಯಿಂದ ಕೂಡಿರುತ್ತೆ. ಆ ಮಗುವಿಗೆ ಆರೋಪಿ ಡಾಕ್ಟರ್ ರೇಷ್ಮಾ ಚಿಕಿತ್ಸೆ ನೀಡುತ್ತಿರುತ್ತಾರೆ. ಆಗ ನಿಮ್ಮದೇ ಮಗು ಮಾಡಿಕೊಡೊದಾಗಿ ಪತಿ, ಪತ್ನಿಯ ವೀರ್ಯಾಣು ಮತ್ತು ಅಂಡಾಣು ತೆಗೆದುಕೊಂಡಿದ್ದಳು.

    ಅಂಡಾಣು ಮತ್ತು ವೀರ್ಯಾಣು ಬೇರೆ ಮಹಿಳೆಗೆ ಇಂಜೆಕ್ಟ್ ಮಾಡಿದ್ದೇನೆ. ಮಗು ಬೆಳೆಯುತ್ತಿದೆ ಎಂದು ಹೇಳುತ್ತಲೇ ಬರ್ತಿದ್ದ ವೈದ್ಯೆ, ದಂಪತಿಯ ಒತ್ತಡ ಹೆಚ್ಚಾದಾಗ ಮಗು ಕಳ್ಳತನ ಮಾಡಿಕೊಂಡು ಹೋಗಿ ದಂಪತಿ ಮಡಿಲಿಗೆ ಸೇರಿಸಿದ್ದಳು ಎನ್ನಲಾಗಿದೆ. ಕಳ್ಳತನ ಮಾಡಿಕೊಂಡು ಮಗು ದಂಪತಿಗೆ ಕೊಟ್ಟ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂಧಿಸಲಾಗಿದೆ.

    ಸದ್ಯ ಕಳ್ಳತನ ಮಾಡಿಕೊಂಡು ಹೋಗಿದ್ದ ಮಗುವನ್ನ ಮಗುವಿನ ತಂದೆ ತಾಯಿಗೆ ತಲುಪಿಸಲಾಗಿದೆ. ಸದ್ಯ ಪೊಲೀಸರ ವಶದಲ್ಲಿರೋ ಆರೋಪಿಗೆ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಯ ಸಂಪೂರ್ಣ ತನಿಖೆಯ ಬಳಿಕ ಮತ್ತಷ್ಟು ಮಾಹಿತಿ ಬಹಿರಂಗ ಆಗುವ ಸಾಧ್ಯತೆಗಳಿವೆ.