Tag: doctor

  • ವೈದ್ಯನ ನಿರ್ಲಕ್ಷ್ಯದಿಂದ ಮೃತ ಶಿಶುವಿಗೆ ಜನ್ಮ ಕೊಟ್ಟ ಮಹಿಳೆ!

    ವೈದ್ಯನ ನಿರ್ಲಕ್ಷ್ಯದಿಂದ ಮೃತ ಶಿಶುವಿಗೆ ಜನ್ಮ ಕೊಟ್ಟ ಮಹಿಳೆ!

    ಶ್ರೀನಗರ: ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಕ್ಕೆ ವೈದ್ಯನಿಂದ ಒಂದು ಹಸುಗೂಸು ಪ್ರಾಣಬಿಟ್ಟಿರುವ ಮನಕಲಕುವ ಘಟನೆ ಜಮ್ಮು- ಕಾಶ್ಮೀರದ ಕುಪವಾರ ಜಿಲ್ಲೆಯಲ್ಲಿ ನಡೆದಿದೆ.

    ಗುರುವಾರ ರಾತ್ರಿ ಕುಪವಾರ ಜಿಲ್ಲೆಯ ಮೋರಿ ಪ್ರದೇಶದ ನಿವಾಸಿಯಾದ ಸುರಾಯ ಬೇಗಮ್ ಎನ್ನುವ ಗರ್ಭಿಣಿ ನೋವು ಕಾಣಿಸಿಕೊಂಡಿತ್ತು. ಸ್ಥಳೀಯ ಆಸ್ಪತ್ರೆಗೆ ಕರೆದುಕೊಂದು ಹೋದಾಗ, ಅಲ್ಲಿನ ವೈದ್ಯರು ಆಕೆಗೆ ಶ್ರೀನಗರದ ಲಾಲ್ ದೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಎಂದು ಸೂಚಿಸಿದ್ದಾರೆ. ಆದರಿಂದ ಮಹಿಳೆಯನ್ನು ಆಕೆಯ ಪತಿ ಹಾಗೂ ಕುಟುಂಬಸ್ಥರು ಸುಮಾರು 130 ಕಿ.ಮಿ ದೂರದಿಂದ ಶ್ರೀನಗರದ ಆಸ್ಪತ್ರೆ ಕರೆತಂದಿದ್ದರು.

    ಅಲ್ಲಿನ ವೈದ್ಯನೊಬ್ಬರು ಗರ್ಭಿಣಿಗೆ ಚಿಕಿತ್ಸೆ ನೀಡಿ ಮನೆಗೆ ತೆರೆಳುವಂತೆ ಹೇಳಿದ್ದಾರೆ. ಆದರೆ ಹಿಮ ಬೀಳುವ ಪ್ರದೇಶವಾಗಿದ್ದರಿಂದ ಹೊರಗಡೆ ಕೊರೆಯುವ ಚಳಿಯಿದೆ ಪತ್ನಿಯನ್ನು ಇಲ್ಲೇ ದಾಖಲಿಸಿಕೊಳ್ಳಿ. ನಾವು ದೂರದ ಊರಿನಿಂದ ಬಂದಿದ್ದೇವೆ ಎಂದು ಪತಿ ವೈದ್ಯರ ಬಳಿ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಇದ್ಯಾವುದಕ್ಕು ಒಪ್ಪದ ವೈದ್ಯ ಗರ್ಭಿಣಿ ಹಾಗೂ ಅವರ ಕುಟುಂಬಸ್ಥರಿಗೆ ಮನಬಂದತೆ ಬೈದು ಆಸ್ಪತ್ರೆಯಿಂದ ಹೊರ ಕಳುಹಿಸಿದ್ದಾರೆ.

    ಬಳಿಕ ಬೇರೆ ದಾರಿಯಿಲ್ಲದೆ ಆ ಕೊರೆಯುವ ಚಳಿಯಲ್ಲಿಯೇ ಗರ್ಭಿಣಿಯನ್ನು ಮನೆಗೆ ಕರೆದುಕೊಂಡು ಹೋಗಲು ಪತಿ ನಿರ್ಧರಿಸಿದ್ದಾರೆ. ಆದರೆ ಮಧ್ಯ ದಾರಿಯಲ್ಲೇ ಮಹಿಳೆಗೆ ಹೆರಿಗೆಯಾಗಿದ್ದು, ಕೊರೆಯುವ ಚಳಿಯ ಕಾರಣ ಮಗು ಜನಿಸುವ ಮೊದಲೇ ಸಾವನ್ನಪ್ಪಿದೆ. ಈ ಪ್ರಕರಣ ಶುಕ್ರವಾರದಂದು ಬೆಳಕಿಗೆ ಬಂದಿದ್ದು, ಶನಿವಾರ ನಿರ್ಲಕ್ಷ್ಯ ತೋರಿದ ವೈದ್ಯನನ್ನು ಅಲ್ಲಿನ ಸರ್ಕಾರ ಅಮಾನತುಗೊಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪವಾಡ ರೀತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ನಡೆದಾಡುವ ದೇವರು

    ಪವಾಡ ರೀತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ನಡೆದಾಡುವ ದೇವರು

    ತುಮಕೂರು: ಅನಾರೋಗ್ಯದಿಂದ ಬಳಲುತ್ತಿರುವ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ಸಿದ್ದಗಂಗಾ ಮಠದಲ್ಲೇ ಚಿಕಿತ್ಸೆ ಮುಂದುವರಿಸಲಾಗುತ್ತಿದ್ದು, ಪವಾಡ ರೀತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರ ತಂಡ ತಿಳಿಸಿದೆ.

    ಶ್ರೀಗಳಿಗೆ ಸಿದ್ದಗಂಗಾ ಮಠದಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಉಸಿರಾಟದ ತೊಂದರೆ ಇರೋದ್ರಿಂದ ಕೃತಕ ಉಸಿರಾಟದ ವ್ಯವಸ್ಥೆಯನ್ನು ಮಾಡಲಾಗಿದೆ. ಡಾ. ರೇಲಾ, ಬಿಜಿಎಸ್ ಆಸ್ಪತ್ರೆ ವೈದ್ಯರು ಹಾಗೂ ಸಿದ್ದಗಂಗಾ ಆಸ್ಪತ್ರೆ ವೈದ್ಯರು ಶ್ರೀಗಳಿಗೆ ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ಕೂಡ ವಿವಿಧ ಗಣ್ಯರು ರಾಜಕೀಯ ಮುಖಂಡರು ಶ್ರೀಗಳ ಭೇಟಿಗೆ ಆಗಮಿಸಿದ್ದಾರೆ. ಡಿಸಿಎಂ ಪರಮೇಶ್ವರ್, ಬಿ.ಎಸ್ ಯಡಿಯೂರಪ್ಪ ಸೇರಿದಂತೆ ವಿವಿಧ ರಾಜಕೀಯ ಪ್ರಮುಖರು ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದಾರೆ. ಎಂದಿನಂತೆ ಮಠದ ಸುತ್ತಲೂ ಪೊಲೀಸರು ಬಿಗಿ ಭದ್ರತೆಯನ್ನು ಒದಗಿಸಿದ್ದಾರೆ.

    ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್  ಮಾತನಾಡಿ, ಶ್ರೀಗಳ ಆರೋಗ್ಯದಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಉಸಿರಾಟದ ಸಮಸ್ಯೆ ಹಾಗೆ ಇದೆ. ಶ್ವಾಸಕೋಶದ ಸೋಂಕು, ಕಫದ ಸಮಸ್ಯೆ ಕಡಿಮೆಯಾಗಿದೆ. ಬೆಳಗಿನ ಜಾವ ರಕ್ತ ಪರೀಕ್ಷೆ ಮಾಡಲಾಗಿದ್ದು, ಎಲ್ಲವು ಸರಿಯಾಗಿದೆ. ನಿನ್ನೆ ರಾತ್ರಿ ಶ್ರೀಗಳ ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಉಂಟಾಗಿತ್ತು. ಹಾಗಾಗಿ ಆತಂಕಗೊಂಡಿದ್ದೇವು. ಸದ್ಯ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ. 2-3 ಗಂಟೆ ನಿದ್ರೆಯಲ್ಲಿ ಇರುತ್ತಾರೆ. ಬಳಿಕ ಆಗ ಆಗಾಗ ಕಣ್ಣು ಬಿಟ್ಟು ನೋಡುತ್ತಿದ್ದಾರೆ. ಇಷ್ಟಲಿಂಗ ಪೂಜೆಯನ್ನು ಶ್ರೀಗಳಿಗೆ ಮಾಡಲಾಗುತ್ತಿಲ್ಲ, ಆದ್ರೆ ಕಿರಿಯ ಶ್ರೀಗಳು ಅವರ ಎದುರಲ್ಲೆ ಪೂಜೆ ಮಾಡಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಸಿದ್ದಗಂಗಾ ಶ್ರೀಗಳ ಆರೋಗ್ಯ ವೈದ್ಯ ಲೋಕಕ್ಕೂ ಅಚ್ಚರಿ ಮೂಡಿಸುತ್ತಿದೆ. ಶ್ರೀಗಳು ಪವಾಡ ರೀತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸುತಿದ್ದಾರೆ ಎಂದು ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ನೀಡುವ ವೈದ್ಯರ ತಂಡ ವರದಿಯಲ್ಲಿ ಉಲ್ಲೇಖಿಸಿದ. “He has always Proved us wrong ” ಎಂದು ವೈದ್ಯರು ವರದಿಯಲ್ಲಿ ಒಕ್ಕಣೆ ಬರೆದಿದ್ದಾರೆ. ಈ ವಯಸ್ಸಿನಲ್ಲೂ ಎಲ್ಲಾ ರೀತಿಯ ಚಿಕಿತ್ಸೆಗೆ ಸ್ಪಂದಿಸುತ್ತಿರುವುದಕ್ಕೆ ಖುದ್ದು ವೈದ್ಯರೇ ಚಕಿತಗೊಂಡಿದ್ದಾರೆ ಅಂತ ಬಿಜಿಎಸ್ ಹಾಗೂ ಸಿದ್ದಗಂಗಾ ಆಸ್ಪತ್ರೆ ವೈದ್ಯರ ತಂಡ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾವಿಬ್ಬರು ಮದುವೆ ಆಗ್ತೀವಿ ಎಂದು ನಂಬಿಸಿ ವೈದ್ಯನಿಂದ ಲೈಂಗಿಕ ದೌರ್ಜನ್ಯ

    ನಾವಿಬ್ಬರು ಮದುವೆ ಆಗ್ತೀವಿ ಎಂದು ನಂಬಿಸಿ ವೈದ್ಯನಿಂದ ಲೈಂಗಿಕ ದೌರ್ಜನ್ಯ

    ಬೆಂಗಳೂರು: ವೈದ್ಯನೊಬ್ಬ ವೈದ್ಯೆಗೆ ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನ ಬಾಣಸವಾಡಿಯ ಎಚ್‍ಬಿಆರ್ ಬಡವಾಣೆಯಲ್ಲಿ ನಡೆದಿದೆ.

    ಡಾ. ವಿ.ಎಲ್ ಮನೋಜ್ ಕುಮಾರ್ ವೈದ್ಯನ ವಿರುದ್ಧ ಸಂತ್ರಸ್ತೆ ಆರೋಪ ಮಾಡಿದ್ದಾರೆ. ಮನೋಜ್ ಕುಮಾರ್ ಮ್ಯಾಟ್ರಿಮೋನಿಯಲ್ಲಿ ವೈದ್ಯೆಯನ್ನು ಪರಿಚಯ ಮಾಡಿಕೊಂಡಿದ್ದನು. ಇಬ್ಬರು ಪರಿಚಯವಾದ ಬಳಿಕ ಮದುವೆಯಾಗಲು ನಿರ್ಧರಿಸಿದ್ದರು. ಈ ವೇಳೆ ಮನೋಜ್ ಯುವತಿಯನ್ನು ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

    ಈ ಬಗ್ಗೆ ಯುವತಿ ಡಾ. ಮನೋಜ್ ಕುಮಾರ್ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಮನೋಜ್ ವಿರುದ್ಧ ಐಪಿಸಿ ಸೆಕ್ಷನ್ 417 ಮತ್ತೆ 376 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ದೂರಿನಲ್ಲಿ ಏನಿದೆ?
    ನನ್ನ ತಾಯಿ 2016ರ ಫೆಬ್ರವರಿಯಲ್ಲಿ ಮದುವೆ ಮಾಡಲು ಹುಡುಗನನ್ನು ಹುಡುಕುತ್ತಿದ್ದರು. ಅಲ್ಲದೇ ನನ್ನ ವಿವರವನ್ನು ಮ್ಯಾಟ್ರಿಮೋನಿಯಲ್ಲಿ ಪೋಸ್ಟ್ ಮಾಡಿದ್ದರು. ಈ ಸಮಯದಲ್ಲಿ ಎಂ.ವಿ.ಎಲ್ ಮನೋಜ್ ಕುಮಾರ್ ನನ್ನನ್ನು ಮದುವೆ ಮಾಡಿಕೊಳ್ಳಲು ಒಪ್ಪಿಕೊಂಡಿದ್ದಾನೆ. ನಂತರ ಇಬ್ಬರು ಜೊತೆಯಾಗಿ ಓಡಾಡಿಕೊಂಡು ಇದ್ದೀವಿ. ಮನೋಜ್ ಎಚ್‍ಬಿಆರ್ ಲೇಔಟ್‍ನ ಕಲ್ಯಾಣನಗರದಲ್ಲಿ ಮನೆ ಮಾಡಿಕೊಂಡಿದ್ದನು. ಅಲ್ಲದೇ ಪದೇ ಪದೇ ನನ್ನನ್ನು ಮನೆಗೆ ಕರೆಸಿಕೊಂಡು ಹೇಗಿದ್ದರು ನಾವಿಬ್ಬರು ಮದುವೆ ಆಗುತ್ತೇವೆ ಎಂದು ನಂಬಿಸಿ ನನ್ನ ಇಚ್ಚೆಗೆ ವಿರುದ್ಧವಾಗಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಮನೋಜ್ ತಂದೆ-ತಾಯಿ ಹಾಗೂ ಅವರ ಅಕ್ಕ ಇವರೆಲ್ಲರೂ ಮನೋಜ್ ಜೊತೆ ನನ್ನ ಮದುವೆ ಮಾಡಿಸುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಪರೇಷನ್ ಥಿಯೇಟರ್‌ನಲ್ಲಿ ನರ್ಸ್‌ಗೆ ಕಿಸ್ ಮಾಡಿದ ವೈದ್ಯ: ವಿಡಿಯೋ ವೈರಲ್

    ಆಪರೇಷನ್ ಥಿಯೇಟರ್‌ನಲ್ಲಿ ನರ್ಸ್‌ಗೆ ಕಿಸ್ ಮಾಡಿದ ವೈದ್ಯ: ವಿಡಿಯೋ ವೈರಲ್

    ಉಜ್ಜೈನಿ: ವೈದ್ಯನೊಬ್ಬ ಆಪರೇಷನ್ ಥಿಯೇಟರ್‌ನಲ್ಲೇ ನರ್ಸ್‌ಗೆ ಕಿಸ್ ಮಾಡಿದ ಘಟನೆಯೊಂದು ಮಧ್ಯಪ್ರದೇಶದ ಉಜ್ಜೈನಿಯ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯ ನರ್ಸ್‌ಗೆ ಕಿಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆತನನ್ನು ಕೆಲಸದಿಂದ ವಜಾ ಮಾಡಲಾಗಿದೆ.

    49 ವರ್ಷದ ಸಿವಿಲ್ ಸರ್ಜನ್‍ನ ವರ್ತನೆಯಿಂದ ಆತನನ್ನು ಕೆಲಸದಿಂದ ವಜಾ ಮಾಡಲಾಗಿದ್ದು, ಘಟನೆ ಬಗ್ಗೆ ವಿವರಣೆ ನೀಡಬೇಕೆಂದು ಆತನಿಗೆ ನೋಟಿಸ್ ಜಾರಿ ಮಾಡಿದ್ದೇನೆ ಎಂದು ಜಿಲ್ಲಾಧಿಕಾರಿ ಶಶಾಂಕ್ ಮಿಶ್ರಾ ತಿಳಿಸಿದ್ದಾರೆ.

    ಡಿವಿಶನಲ್ ಕಮಿಷನರ್ ಈ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಾರೆ. ವೈದ್ಯ, ನರ್ಸ್‌ಗೆ ಕಿಸ್ ಮಾಡುತ್ತಿರುವ ವಿಡಿಯೋ ಆಸ್ಪತ್ರೆಯಲ್ಲೇ ತೆಗೆದಿರುವುದೋ ಇಲ್ಲವೋ ಎನ್ನುವುದು ಖಚಿತವಾಗಿಲ್ಲ ಎಂದು ಜಿಲ್ಲಾ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ಮೋಹನ್ ಮಾಳವಿಯಾ ತಿಳಿಸಿದ್ದಾರೆ.

    ನರ್ಸಿಂಗ್ ಸ್ಟಾಫ್ ವಾಟ್ಸಪ್ ಗ್ರೂಪಿನಲ್ಲಿ ಈ ಅಸಭ್ಯ ವಿಡಿಯೋ ಬಂತು ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ. ಈ ವಿಡಿಯೋ ಆಕಸ್ಮಿಕವಾಗಿ ಗ್ರೂಪಿನಲ್ಲಿ ಸೆಂಡ್ ಆಯ್ತೇ ಅಥವಾ ಉದ್ದೇಶಪೂರ್ವಕವಾಗಿಯೇ ಸೆಂಡ್ ಮಾಡಿದ್ದಾರಾ ಎನ್ನುವುದರ ಬಗ್ಗೆ ಜಿಲ್ಲಾಧಿಕಾರಿ ತನಿಖೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೋಗಿಗಳಂತೆ ಬಂದು 40 ಸಾವಿರ, ಚಿನ್ನಾಭರಣ ದೋಚಿದ್ರು..!

    ರೋಗಿಗಳಂತೆ ಬಂದು 40 ಸಾವಿರ, ಚಿನ್ನಾಭರಣ ದೋಚಿದ್ರು..!

    ಭುವನೇಶ್ವರ್: ರೋಗಿಗಂತೆ ನಟಿಸಿ ಆಸ್ಪತ್ರೆಗೆ ಬಂದು ವೈದ್ಯರ ಬಳಿಯಿಂದ ಹಣ, ಮೊಬೈಲ್ ಹಾಗೂ ಚಿನ್ನಾಭರಣಗಳನ್ನು ದೋಚಿದ ಪ್ರಕರಣವೊಂದು ಒಡಿಶಾದಲ್ಲಿ ನಡೆದಿದೆ.

    ಈ ಘಟೆನೆ ಜಿಲ್ಲೆಯ ಇಂದ್ರಾವತಿ ನಗರದಲ್ಲಿ ಶುಕ್ರವಾರ ರಾತ್ರಿ 11.30ರ ಸುಮಾರಿಗೆ ನಡೆದಿದೆ.

    ದುಷ್ಕರ್ಮಿಗಳಿಬ್ಬರು ತಮಗೆ ಹುಷಾರಿಲ್ಲವೆಂದು ಹೇಳಿ ರಾತ್ರೋ ರಾತ್ರಿ ಇಂದ್ರಾವತಿಯಲ್ಲಿರುವ ಸರ್ಕಾರಿ ಆಸ್ಪತ್ರೆ ಪಕ್ಕದಲ್ಲಿರುವ ಡಾ. ಪ್ರದಿಪ್ತಾ ಕುಮಾರ್ ಪ್ರಹರಾಜ್ ಅವರ ಮನೆಗೆ ಬಂದಿದ್ದಾರೆ. ಈ ಇಬ್ಬರು ಕುಳಿತ ಕೆಲ ಹೊತ್ತಿನಲ್ಲೇ ಮತ್ತಿಬ್ಬರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಏಕಾಏಕಿ ಮನೆಗೆ ನುಗಿದ್ದಾರೆ. ಅಲ್ಲದೇ ವೈದ್ಯರಿಗೆ ಪಿಸ್ತೂಲ್ ತೋರಿಸುವ ಮೂಲಕ ಬೆದರಿಸಿ ಮನೆಯೆಲ್ಲಾ ಹುಡುಕಾಡಿ 40 ಸಾವಿರ ನಗದು, 55 ಗ್ರಾಂ ತೂಕದ ಚಿನ್ನಾಭರಣ ಹಾಗೂ 4 ಮೊಬೈಲ್ ಗಳನ್ನು ದೋಚಿದ್ದಾರೆ.

    ಪ್ರಕರಣ ಸಂಬಂಧ ಇಂದು ಬೆಳಗ್ಗೆ ಇಂದ್ರಾವತಿ ಪೊಲೀಸ್ ಠಾಣೆಗೆ ತೆರಳಿ ವೈದ್ಯರು ದೂರು ದಾಖಲಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾನವೀಯತೆ ಮೆರೆದ ಸೆಕ್ಯೂರಿಟಿ ಗಾರ್ಡ್ ಕೆಲಸದಿಂದ ವಜಾ..!

    ಮಾನವೀಯತೆ ಮೆರೆದ ಸೆಕ್ಯೂರಿಟಿ ಗಾರ್ಡ್ ಕೆಲಸದಿಂದ ವಜಾ..!

    – ಸತೀಶ್‍ಗೆ ಕೆಲಸ ಕೊಡಿಸಿದ್ದರು ಸಚಿವ ಪುಟ್ಟರಂಗಶೆಟ್ಟಿ

    ಚಾಮರಾಜನಗರ: ವೈದ್ಯರು ಹಾಗೂ ನರ್ಸ್ ಇಲ್ಲದ ವೇಳೆ ಗ್ಲುಕೋಸ್ ಬಾಟಲ್ ಬದಲಿಸಿ ಮಾನವೀಯತೆ ಮೆರೆದಿದ್ದ ಸೆಕ್ಯೂರಿಟಿ ಗಾರ್ಡ್ ನನ್ನು ಆಸ್ಪತ್ರೆ ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿದೆ.

    ಸತೀಶ್ ಕೆಲಸ ಕಳೆದುಕೊಂಡ ಸೆಕ್ಯೂರಿಟಿ ಗಾರ್ಡ್. ಜನವರಿ 8ರಂದು ವೈದ್ಯರು ಹಾಗೂ ನರ್ಸ್ ಇಲ್ಲದ ವೇಳೆ ಸತೀಶ್ ರೋಗಿಗೆ ಗ್ಲುಕೋಸ್ ಬಾಟಲ್ ಬದಲಾಯಿಸಿದ್ದರು. ಈ ಮೂಲಕ ನರ್ಸ್ ಮಾಡುವ ಕೆಲಸವನ್ನು ಮಾಡಿ ಸತೀಶ್ ಮಾನವೀಯತೆ ಮೆರೆದಿದ್ದರು.

    ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಜಿಲ್ಲಾಸ್ಪತ್ರೆಯ ಆಡಳಿತ ಮಂಡಳಿ ಸತೀಶ್ ಅವರನ್ನು ಸೆಕ್ಯೂರಿಟಿ ಗಾರ್ಡ್ ಕೆಲಸದಿಂದ ತೆಗೆದು ಹಾಕಿದೆ. ಸತೀಶ್ ತನ್ನ ಕುಟುಂಬ ನಿರ್ವಹಣೆಗೆ ಸೆಕ್ಯೂರಿಟಿ ಗಾರ್ಡ್ ಕೆಲಸವನ್ನು ಮೆಚ್ಚಿಕೊಂಡಿದ್ದರು. ಅಲ್ಲದೇ ಸಚಿವ ಪುಟ್ಟರಂಗಶೆಟ್ಟಿ ಅವರೇ ಸತೀಶ್‍ಗೆ ಸೆಕ್ಯೂರಿಟಿ ಗಾರ್ಡ್ ಕೆಲಸ ಕೊಡಿಸಿದ್ದರು. ಈಗ ಜಿಲ್ಲಾಸ್ಪತ್ರೆಯ ಡೀನ್ ರಾಜೇಂದ್ರ ಹಾಗೂ ಸರ್ಜನ್ ರಘುರಾಮ್ ಅವರಿಂದಾಗಿ ಇದೀಗ ಸತೀಶ್ ತಮ್ಮ ಕೆಲಸವನ್ನು ಕಳೆದುಕೊಂಡಿದ್ದಾರೆ. ಡೀನ್ ಹಾಗೂ ಸರ್ಜನ್ ಏಜೆನ್ಸಿಗೆ ಒತ್ತಡ ತರಿಸಿ ಸತೀಶ್‍ರನ್ನು ಕೆಲಸದಿಂದ ತೆಗೆಸಿದ್ದಾರೆ.

    ಮಾಧ್ಯಮ ವಿರುದ್ಧ ಕಿಡಿ:
    ಈ ಬಗ್ಗೆ ಡೀನ್ ರಾಜೇಂದ್ರ ಅವರನ್ನು ಪ್ರಶ್ನಿಸಿದಾಗ, ಆಸ್ಪತ್ರೆಯಲ್ಲಿ ನಡೆಯುವ ಘಟನೆಯ ಬಗ್ಗೆ ಸ್ಪಷ್ಟನೆ ಕೊಡುವ ಆಗತ್ಯ ಇಲ್ಲ. ಸರ್ಕಾರ ನಿಮಗೆ ಸ್ಪಷ್ಟನೆ ಕೊಡಿ ಎಂದು ನನ್ನಲ್ಲಿ ಹೇಳಿಲ್ಲ. ನನಗೆ ನಿಮ್ಮ ಜೊತೆ ಮಾತಾನಾಡುವುದಕ್ಕೆ ಇಷ್ಟ ಇಲ್ಲ. ಸ್ಪಷ್ಟನೆ ಕೇಳಿದರೆ ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡ್ತೀರಾ. ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಕೇಳಿದರೆ ನನಗೆ ಮಾತನಾಡಲು ಇಷ್ಟ ಇಲ್ಲ. ನೀವು ನನಗೆ ತೊಂದರೆ ಕೊಡುತ್ತಿದ್ದೀರಾ ಎಂದು ಡೀನ್ ರಾಜೇಂದ್ರ ಮಾಧ್ಯಮದವರ ವಿರುದ್ಧ ಕಿಡಿಕಾರಿದ್ದಾರೆ.

    https://www.youtube.com/watch?v=aJGIl36QcOI

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಗನ ಕಾಯಿಲೆಗೆ ಮತ್ತಿಬ್ಬರು ಬಲಿ – ಮಗ ಸತ್ತ ವಾರಕ್ಕೆ ತಾಯಿ ಸಾವು

    ಮಂಗನ ಕಾಯಿಲೆಗೆ ಮತ್ತಿಬ್ಬರು ಬಲಿ – ಮಗ ಸತ್ತ ವಾರಕ್ಕೆ ತಾಯಿ ಸಾವು

    ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತಿಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಈ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ.

    ಸಾಗರ ತಾಲೂಕು ಅರಲಗೋಡು ಗ್ರಾಮದ ಶ್ವೇತಾ (17) ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದು, ಮಧ್ಯಾಹ್ನ ವಾಟೆಮಕ್ಕಿ ಗ್ರಾಮದ ರಾಮಕ್ಕ ಎಂಬ ಮಹಿಳೆ ಮೃತಪಟ್ಟಿದ್ದಾರೆ.

    ಕಳೆದ ಒಂದು ವಾರದಿಂದ ಇಬ್ಬರು ಮಂಗನ ಕಾಯಿಲೆಯಿಂದ ಜ್ವರದಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭಿಸಿದ್ದು, ಮೃತ ರಾಮಕ್ಕನ ಮಗ ಮಂಜುನಾಥ್ ಕಳೆದ ವಾರ ಹಿಂದೆಯಷ್ಟೇ ಮಂಗನ ಕಾಯಿಲೆಗೆ ಬಲಿಯಾಗಿದ್ದ. ಪ್ರಮುಖವಾಗಿ ಸಾಗರ ತಾಲೂಕಿನ ಐದು ಜನ ಮಂಗನ ಕಾಯಿಲೆಗೆ ಮೃತಪಟ್ಟಿದ್ದಾರೆ, ತೀರ್ಥಹಳ್ಳಿ ತಾಲೂಕಿನ ಇಬ್ಬರು ಮೃತಪಟ್ಟಿದ್ದರು.

    ಜಿಲ್ಲೆಯ ಸಾಗರ, ತೀರ್ಥಹಳ್ಳಿ ತಾಲೂಕಿನ ಐವತ್ತಕ್ಕೂ ಹೆಚ್ಚು ಜನ ಸ್ಥಳೀಯ ಹಾಗೂ ಶಿವಮೊಗ್ಗ, ಮಣಿಪಾಲ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು, ಪ್ರತಿ ವರ್ಷ ಬೇಸಿಗೆಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಈ ಕಾಯಿಲೆ ಪ್ರಸಕ್ತ ವರ್ಷ ಮುಂಚಿತವಾಗಿಯೇ ಕಾಣಿಸಿಕೊಂಡಿದೆ. ಅಂದಹಾಗೇ ಕಾಡಿನಲ್ಲಿ ಸತ್ತು ಬೀಳುತ್ತಿರುವ ಮಂಗಗಳಿಂದ ಮನುಷ್ಯರಿಗೆ ಈ ಸೋಂಕು ಹರಡುತ್ತಿದ್ದು, ಸೂಕ್ತ ಮುಂಜಾಗ್ರತಾ ವಹಿಸುವಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ವಿಫಲವಾಗಿದೆ. ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಸಾಗರ, ತೀರ್ಥಹಳ್ಳಿ ತಾಲೂಕಿನ ಜನರಲ್ಲಿ ಆತಂಕ ಹೆಚ್ಚಾಗಿದೆ.

    ಕ್ಯಾಸಣೂರ್ ಫಾರೆಸ್ಟ್ ಡಿಸೀಸ್ (ಕೆಎಫ್‍ಡಿ) ಅಥವಾ ಮಂಗನ ಕಾಯಿಲೆ ಎಂದು ಇದನ್ನು ಕರೆಯುತ್ತಾರೆ. ಪ್ರತಿ ವರ್ಷ ಈ ಭಾಗದಲ್ಲಿ ಸುಮಾರು 400ಕ್ಕೂ ಹೆಚ್ಚು ಕೆಎಫ್‍ಡಿ ಪ್ರಕರಣಗಳು ಇಲ್ಲಿ ಪತ್ತೆಯಾಗುತ್ತದೆ. ಜ್ವರ, ವಾಂತಿ, ಅತಿಸಾರ ಮತ್ತು ರಕ್ತಸ್ರಾವ ಈ ಕಾಯಿಲೆಯ ಲಕ್ಷಣಗಳಾಗಿದೆ. ಅಂದಹಾಗೇ ಈ ಮಂಗನ ಕಾಯಿಲೆ 1957 ರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತ್ತು. ಕಾಯಿಲೆಗೆ ಕಾರಣವಾದ ವೈರಾಣು ಶಿವಮೊಗ್ಗ ಜಿಲ್ಲೆಯ ಕ್ಯಾಸನೂರು ಕಾಡಿನಲ್ಲಿ ಮೊದಲ ಬಾರಿಗೆ ಗುರುತಿಸಿದ್ದ ಕಾರಣ ಇಕ್ಕೆ ಕ್ಯಾಸನೂರು ಫಾರೆಸ್ಟ್ ಡಿಸೀಸ್ ಎಂದು ಹೆಸರು ನೀಡಲಾಗಿದೆ. ಇದು ಸಾಂಕ್ರಾಮಿಕ ರೋಗವಾಗಿದ್ದು, ಮಂಗಗಳಲ್ಲಿದ್ದ ಉಣ್ಣೆಗಳು ಬಂದು ಮನುಷ್ಯರಿಗೆ ಕಚ್ಚಿದಾಗ ಮಂಗನ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಈ ಸೋಂಕಿನಿಂದ ಮಂಗಗಳು ಸಾಯುತ್ತಿದ್ದ ಕಾರಣ ಇದನ್ನು ಮಂಗನ ಕಾಯಿಲೆ ಎಂದು ಕರೆಯಲಾಗಿತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾತ್ರಿ ಜೆಡಿಎಸ್ ಶಾಸಕರ ಮನೆಗೆ ಹೋಗಿ ಚಿಕಿತ್ಸೆ ನೀಡದ ವೈದ್ಯೆಗೆ ವರ್ಗಾವಣೆ ಭಾಗ್ಯ!

    ರಾತ್ರಿ ಜೆಡಿಎಸ್ ಶಾಸಕರ ಮನೆಗೆ ಹೋಗಿ ಚಿಕಿತ್ಸೆ ನೀಡದ ವೈದ್ಯೆಗೆ ವರ್ಗಾವಣೆ ಭಾಗ್ಯ!

    – ಶಾಸಕ ಮಹದೇವ್‍ಗೆ ಚಿಕಿತ್ಸೆ ನೀಡದ್ದಕ್ಕೆ ಶಿಕ್ಷೆ
    – ಸರ್ಕಾರದ ನಡೆಗೆ ಸಾರ್ವಜನಿಕರ ಆಕ್ರೋಶ
    – ಪಿರಿಯಾಪಟ್ಟಣದ ಸರ್ಕಾರಿ ವೈದ್ಯೆ ಚಿತ್ರದುರ್ಗಕ್ಕೆ ವರ್ಗಾವಣೆ

    ಮೈಸೂರು: ಶಾಸಕರಿಗೆ ಮನೆಗೆ ಹೋಗಿ ಚಿಕಿತ್ಸೆ ನೀಡಲು ಒಪ್ಪದ ಸರ್ಕಾರಿ ವೈದ್ಯೆಯನ್ನು ದೂರದ ಊರಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಗಂಭೀರ ಆರೋಪವೊಂದು ಕೇಳಿಬಂದಿದೆ.

    ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಸರ್ಕಾರಿ ಆಸ್ಪತ್ರೆ ವೈದ್ಯೆ ಡಾ. ವೀಣಾ ಸಿಂಗ್ ಅವರನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಕರೆದಾಕ್ಷಣ `ನೈಟ್ ಡ್ಯೂಟಿ’ಗೆ ಬಾರದ ವೈದ್ಯೆ ವಿರುದ್ಧ ಜೆಡಿಎಸ್ ಶಾಸಕ ದೂರು!

    ಈ ಹಿಂದೆ ಪಿರಿಯಾಪಟ್ಟಣದ ಶಾಸಕ ಮಹದೇವ್, ರಾತ್ರಿ ವೇಳೆ ತಮ್ಮ ಮನೆಗೆ ಬಂದು ತಮಗೆ ಚಿಕಿತ್ಸೆ ನೀಡುವಂತೆ ಕೇಳಿದ್ದರು. ಆದರೆ ಡಾ. ವೀಣಾ ಸಿಂಗ್ ಶಾಸಕರ ಮನೆಗೆ ಹೋಗಿ ಚಿಕಿತ್ಸೆ ನೀಡಲು ಒಪ್ಪಲಿಲ್ಲ. ಈ ವಿಚಾರದಲ್ಲಿ ವೈದ್ಯೆ ಮತ್ತು ಶಾಸಕರ ನಡುವೆ ಜಟಾಪಟಿ ನಡೆದಿತ್ತು. ಈ ಕಾರಣಕ್ಕೆ ಶಾಸಕರು ತಮ್ಮ ಪ್ರಭಾವ ಬಳಸಿ ವೈದ್ಯೆಯನ್ನು ಮೈಸೂರು ಜಿಲ್ಲೆಯಿಂದ ಚಿತ್ರದುರ್ಗದ ಚಳ್ಳಕೆರೆ ತಾಲೂಕಿಗೆ ವರ್ಗಾವಣೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

    ವೈದ್ಯೆ ಡಾ. ವೀಣಾ ಸಿಂಗ್ ಅವರು ಪಿರಿಯಾಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಏಕೈಕ ಪ್ರಸೂತಿ ಮತ್ತು ಸ್ತ್ರೀರೋಗ ವೈದ್ಯೆ ಆಗಿದ್ದರು. ಅವರಿಗೆ ಸ್ಥಾನಕ್ಕೆ ಬೇರೆ ಯಾರನ್ನು ನೇಮಕ ಮಾಡದೇ ಏಕಾಏಕಿ ವರ್ಗಾವಣೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಜೆಡಿಎಸ್ ಶಾಸಕನೊಂದಿಗೆ ಕಿರಿಕ್- ಡಾ.ವೀಣಾಸಿಂಗ್ ಪಿರಿಯಾಪಟ್ಟಣದಿಂದ ಎತ್ತಂಗಡಿ?

    ಶಾಸಕರ ನಡುವಿನ ಭಿನ್ನಾಭಿಪ್ರಾಯದಿಂದ ವೀಣಾ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ ಈಗಲೇ ಹಲವು ಕಡೆಗಳಲ್ಲಿ ವೈದ್ಯರ ಕೊರತೆ ಇದೆ. ಸರ್ಕಾರ ಆಫರ್ ನೀಡಿದರೂ ವೈದ್ಯರು ಸರ್ಕಾರಿ ಕೆಲಸಕ್ಕೆ ಬರುತ್ತಿಲ್ಲ. ಹೀಗಿರುವಾಗ ಉತ್ತಮ ವೈದ್ಯೆ ಎಂದು ಹೆಸರು ಪಡೆದಿದ್ದ ವೀಣಾ ಅವರನ್ನು ವರ್ಗಾವಣೆ ಮಾಡಿದ್ದು ಎಷ್ಟು ಸರಿ ಎಂದು ಜನರು ಸರ್ಕಾರವನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

    https://www.youtube.com/watch?time_continue=639&v=LsbzC-2HiOA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv
  • ಬ್ಯಾನ್ ಆದ್ರೂ ನಡೆಯುತ್ತಿದೆ ಆಸ್ಪತ್ರೆ- ಇಲ್ಲದ ರೋಗಗಳ ಹೆಸರು ಹೇಳಿ ಹಗಲು ದರೋಡೆ

    ಬ್ಯಾನ್ ಆದ್ರೂ ನಡೆಯುತ್ತಿದೆ ಆಸ್ಪತ್ರೆ- ಇಲ್ಲದ ರೋಗಗಳ ಹೆಸರು ಹೇಳಿ ಹಗಲು ದರೋಡೆ

    ವಿಜಯಪುರ: ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರ ಸ್ವಂತ ಜಿಲ್ಲೆ ವಿಜಯಪುರದಲ್ಲಿ ಬ್ಯಾನ್ ಆದ ಆಸ್ಪತ್ರೆ ಈಗಲು ನಡೆಯುತ್ತಿದ್ದು, ಜನರಿಗೆ ಇಲ್ಲದ ರೋಗಗಳ ಹೆಸರು ಹೇಳಿ ವೈದ್ಯ ಹಗಲು ದರೋಡೆ ಮಾಡುತ್ತಿದ್ದಾನೆ.

    ಸುರೇಶ್ ಎಂ ಕಾಗಲಕರ ರೆಡ್ಡಿ ಜನರಿಂದ ದರೋಡೆ ಮಾಡುತ್ತಿರುವವರ ವೈದ್ಯ. ಸುರೇಶ್ ಮೂತ್ರ ರೋಗ, ಜನನಾಂಗ ಮತ್ತು ಜನರಲ್ ಸರ್ಜನ್ ಆಗಿದ್ದು, ವಿಜಯಪುರದ ಮೀನಾಕ್ಷಿಚೌಕ್‍ನಲ್ಲಿ ಕಿಡ್ನಿಕೇರ್ ಎಂಬ ಆಸ್ಪತ್ರೆ ತೆರೆದಿದ್ದಾನೆ.

    ಮುರುಗೇಶ್ ಸಂಗಮ ಎಂಬವರು ಈತ ನಡೆಸುತ್ತಿರುವ ಆಸ್ಪತ್ರೆ ಕ್ಲೀನ್ ಇಲ್ಲ, ಒಳರೋಗಿಗಳ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ ಎಂದು ದೂರು ನೀಡಿದ್ದರು. ದೂರಿನ ಅನ್ವಯ ಜಿಲ್ಲಾ ವೈದ್ಯಾಧಿಕಾರಿಗಳು ಜೂನ್ 15ರಂದು ಸುರೇಶ್ ನೊಂದಣಿಯನ್ನು ಅಮಾನತುಗೊಳಿಸಿದ್ದಾರೆ. ಆದರೆ ಇದಕ್ಕೆ ಬೆಲೆ ಕೊಡದ ಸುರೇಶ್ ಆಸ್ಪತ್ರೆ ಮುಂದುವರಿಸಿದ್ದಾನೆ. ನಿಷೇಧಗೊಂಡಿದ್ದರೂ ಆಸ್ಪತ್ರೆ ನಡೆಸುತ್ತಿದ್ದರೂ ಯಾರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜನ ದೂರಿದ್ದಾರೆ.

    ಅಡ್ಮಿಟ್ ಆಗಿ ಎಂದಿದ್ದ:
    ಕಳೆದ ಅಕ್ಟೋಬರ್‍ನಲ್ಲಿ ಬಸವರಾಜ ಎಂಬವರು ನಗರದ ಆಲ್ ಅಮೀನ್ ಎಂಬ ಖಾಸಗಿ ಆಸ್ಪತ್ರೆಯಲ್ಲಿ ತಮಗೆ ಕಿಡ್ನಿ ಸ್ಟೋನ್ ಆಗಿದೆ ಅಂತಾ ತಪಾಸಣೆ ನಡೆಸಿದ್ದರು. ಆದರೆ ಸ್ಕ್ಯಾನಿಂಗ್ ವೇಳೆ ಕಿಡ್ನಿ ಸ್ಟೋನ್ ಇಲ್ಲ ಅಂತಾ ರಿಪೋರ್ಟ್ ಬಂದಿರುತ್ತದೆ. ನಂತರ ಬಸವರಾಜ ಮರುದಿನ ವೈದ್ಯ ಸುರೇಶ್ ಬಳಿ ಬಂದು ಹೊಟ್ಟೆಯ ಕೆಳಭಾಗದಲ್ಲಿ ನೋವಿದೆ ಅಂತಾ ಹೇಳುತ್ತಾರೆ. ಆಗ ತಪಾಸಣೆ ನಡೆಸಿದ ಸುರೇಶ್ ಹೌದು ಒಳಗಡೆ ಕೀವು ತುಂಬಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ದಾಖಲಾಗಿ 40ರಿಂದ 50 ಸಾವಿರ ಹಣ ಖರ್ಚಾಗತ್ತೆ. ಈಗಾಗಲೇ ತುಂಬ ತಡ ಮಾಡಿದ್ದೀರಿ ಅಂತಾ ಸುಳ್ಳು ಹೇಳಿದ್ದಾನೆ. ಇದರಿಂದ ಗಾಬರಿಗೊಂಡ ಬಸವರಾಜ್ ಈತನ ಸಹವಾಸ ಬೇಡ ಎಂದು ತಿಳಿದು ಕಾಲ್ಕಿತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv
  • ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಇಷ್ಟಲಿಂಗ ಪೂಜೆ ನೆರವೇರಿಸಿ, ಮಂತ್ರ ಪಠಿಸಿದ ಶ್ರೀಗಳು

    ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಇಷ್ಟಲಿಂಗ ಪೂಜೆ ನೆರವೇರಿಸಿ, ಮಂತ್ರ ಪಠಿಸಿದ ಶ್ರೀಗಳು

    ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡಿದ್ದು, ಇಂದು ಬೆಳಗ್ಗೆ ಇಷ್ಟಲಿಂಗ ಪೂಜೆ ನೆರವೇರಿಸಿದ ಶ್ರೀಗಳು ಮಂತ್ರ ಪಠಣ ಮಾಡಿ ಅಚ್ಚರಿ ಮೂಡಿಸಿದ್ದಾರೆ.

    ಪೂಜೆ ವೇಳೆ ಶ್ರೀಗಳ ಶಿಷ್ಯವೃಂದ ಜೊತೆ ಗೂಡಿ ಶಿವನಾಮ ಸ್ಮರಣೆ ಮಾಡಿದ ಶ್ರೀಗಳು, ಈ ಮೂಲಕ ಭಕ್ತಾಧಿಗಳಲ್ಲಿ ಇದ್ದಂತ ಆತಂಕ ದೂರ ಮಾಡಿದರು. ಬೆಳಗ್ಗೆ ಶ್ರೀಗಳ ಆರೋಗ್ಯ ತಪಾಸಣೆ ಮಾಡಿ ಮಾಧ್ಯಮಕ್ಕೆ ಮಾಹಿತಿ ನೀಡಿದ ವೈದ್ಯ ಡಾ.ಪರಮೇಶ್, ಶ್ರೀಗಳ ಶ್ವಾಸಕೋಶದಲ್ಲಿನ ಸೋಂಕು ಕಡಿಮೆ ಆಗಿರುವುದು ರಕ್ತ ಪರೀಕ್ಷೆಯಿಂದ ದೃಢಪಟ್ಟಿದೆ. ಆದ್ರು ನಾಲ್ಕು ದಿನಗಳ ಕಾಲ ಆ್ಯಂಟಿ ಬಯಾಟಿಕ್ ನೀಡಬೇಕು ಎಂದು ಸ್ಪಷ್ಟಪಡಿಸಿದ್ದರು.

    ಸಂಜೆ ಬಿಜಿಎಸ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ಅವರ ತಂಡ ಇನ್ನೊಮ್ಮೆ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿತು. ಜೊತೆಗೆ ಜಯದೇವ ಆಸ್ಪತ್ರೆ ವೈದ್ಯ ಡಾ.ನಾಗೇಶ್ ಕೂಡಾ ಶ್ರೀಗಳ ಹೃದಯ ತಪಾಸಣೆ ಮಾಡಿದರು. ಈ ವೇಳೆ ಮಾತನಾಡಿದ ಡಾ.ರವೀಂದ್ರ ಅವರು, ಶ್ರೀಗಳು ಚೇತರಿಸಿಕೊಂಡಿದ್ದಾರೆ. ಆದರೆ ಶ್ರೀಗಳ ಶ್ವಾಸಕೋಶದಲ್ಲಿ ನೀರು ಕಡಿಮೆಯಾಗಿಲ್ಲ. ಹಾಗಾಗಿ ಸ್ವಲ್ಪ ಮಟ್ಟಿನ ಸೋಂಕು ಇದೆ. ಪ್ರೋಟಿನ್ ಅಂಶ ಕಡಿಮೆ ಇರುವುದರಿಂದ ಶ್ವಾಸಕೋಶಕ್ಕೆ ನೀರು ಸೇರಿಕೊಳ್ಳುತ್ತಿದೆ. ಅಲ್ಲದೆ ಸಾಮಾನ್ಯವಾಗಿ ದೇಹದಲ್ಲಿ 3.5 ರಿಂದ 4 ಗ್ರಾಂ ನಷ್ಟು ಪ್ರೋಟಿನ್ ಇರಬೇಕು. ಆದರೆ ಶ್ರೀಗಳ ದೇಹದಲ್ಲಿ ಕೇವಲ 2 ರಿಂದ 2.5 ಗ್ರಾಂ ನಷ್ಟು ಮಾತ್ರ ಪ್ರೋಟಿನ್ ಇದೆ. ಹಾಗಾಗಿ ಬಾಯಿ ಮತ್ತು ಟ್ಯೂಬ್ ಮೂಲಕ  ಪ್ರೋಟಿನ್ ನೀಡಲಾಗುತ್ತಿದೆ ಎಂದರು. ಉಳಿದಂತೆ ಶ್ರೀಗಳ ಪಲ್ಸ್ ಮತ್ತು ಬಿ.ಪಿ. ಸಹಜವಾಗಿದೆ. ಶ್ರೀಗಳು ಎದ್ದು ಓಡಾಡಲು ಇನ್ನು ಕೆಲ ಸಮಯ ಬೇಕಾಗಬಹುದು ಎಂದು ಸ್ಪಷ್ಟಪಡಿಸಿದರು.

    https://www.youtube.com/watch?v=pdPt-TVIzFE

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv