Tag: doctorate

  • ಪುನೀತ್ ಗೆ ಮರಣೋತ್ತರ ಡಾಕ್ಟರೇಟ್ : ಕಾರ್ಯಕ್ರಮದ ಸಂಪೂರ್ಣ ವಿವರ

    ಪುನೀತ್ ಗೆ ಮರಣೋತ್ತರ ಡಾಕ್ಟರೇಟ್ : ಕಾರ್ಯಕ್ರಮದ ಸಂಪೂರ್ಣ ವಿವರ

    ರ್ನಾಟಕ ರತ್ನ ಪುನೀತ್ ರಾಜ್‌ ಕುಮಾರ್( ಮರಣೋತ್ತರ) ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ  ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

    ಮಂಗಳವಾರ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮೊದಲಿಗೆ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

    ನಂತರ ನಟ ಪುನೀತ್ ರಾಜ್‍ಕುಮಾರ್ ಅವರ ಹೆಸರು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಚಪ್ಪಾಳೆ ಸದ್ದು ಕೇಳಿ ಬಂತು. ಎಲ್ ಇಡಿ ಸ್ಕ್ರೀನ್ ನಲ್ಲಿ ಪುನೀತ್ ಬಾಲ್ಯ, ಅವರು ಅಭಿನಯಿಸಿದ ಹಲವು ಚಿತ್ರಗಳ ತುಣುಕು ಪ್ರದರ್ಶಿಸಲಾಯಿತು. ಪುನೀತ್ ರಾಜ್‍ ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ವೇಳೆ ಅವರು ಕೆಲಕಾಲ ಭಾವುಕಗೊಂಡರು. ಈ ಹಿಂದೆ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ಮೈಸೂರು ವಿವಿ ನೀಡಿತ್ತು ಎಂಬುದು ಸ್ಮರಣೀಯ. ಇದನ್ನೂ ಓದಿ : ಪುನೀತ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ನಂತರ ಜಾನಪದ ಮಹಾನ್ ಕಲಾವಿದ ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಷ್ಟ್ರೀಯ ಮೌಲ್ಯಾಂಕ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕ ಡಾ.ಎಸ್.ಸಿ.ಶರ್ಮ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ, ಎ.ಪಿ.ಜ್ಞಾನಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    ರಾಘವೇಂದ್ರ ರಾಜ್ ಕುಮಾರ್ ಭಾವುಕ

    ಸಭೆಯ ಕೆಳಗೆ ಕುಳಿತಿದ್ದ ನಟ ರಾಘವೇಂದ್ರ ರಾಜಕುಮಾರ್ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಪ್ರಶಸ್ತಿ ನೀಡುವಾಗ ಭಾವುಕರಾದರು. ಇದೇ ವೇಳೆ 15 ಚಿನ್ನದ ಪದಕ ಪಡೆದ ಜಿ.ಎಂ.ಭಾವನ ಅವರನ್ನು ಕರೆದು ರಾಘವೇಂದ್ರ ರಾಜಕುಮಾರ್ ಬೆನ್ನು ತಟ್ಟಿ ಅಭಿನಂದಿಸಿದರು.

  • ಮೈಸೂರು ವಿವಿಯಿಂದ ಪುನೀತ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್

    ಮೈಸೂರು ವಿವಿಯಿಂದ ಪುನೀತ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್

    ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ 4 ತಿಂಗಳು ಕಳೆದರೂ ಅವರ ನೆನಪು ಕನ್ನಡಿಗರ ಮನದಲ್ಲಿ ಅಮರವಾಗಿ ಉಳಿದಿದೆ. ಇದೀಗ ದಿವಂಗತ ನಟ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.

    ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಅಪ್ಪುಗೆ ಮರಣೋತ್ತರ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ಘೋಷಿಸಿದ್ದಾರೆ. ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿವಿ ಯ 102ನೇ ಘಟಿಕೋತ್ಸವದಲ್ಲಿ ಕನ್ನಡದ ಯುವರತ್ನನಿಗೆ ಗೌರವ ಡಾಕ್ಟರೇಟ್  ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ 10 ತಂಡಗಳ ಪೈಕಿ 2 ತಂಡಕ್ಕೆ ಕನ್ನಡಿಗರ ನಾಯಕತ್ವ – ಮೂವರು ನೂತನ ನಾಯಕರ ಎಂಟ್ರಿ

    ಪುನೀತ್ ರಾಜ್‌ಕುಮಾರ್‌ರೊಂದಿಗೆ ಒಟ್ಟು ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಿಸಲಾಗಿದೆ. ಹಿರಿಯ ವಿಜ್ಞಾನಿ ಡಾ. ವಿಎಸ್ ಅತ್ರೆ ಹಾಗೂ ಜನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಿಸಲಾಗಿದೆ. ಇದನ್ನೂ ಓದಿ: ಅಪ್ಪು ಬೇಡವೆಂದ ಸಾಂಗ್ ಮತ್ತೆ ಪ್ರೇಕ್ಷಕರ ಮುಂದೆ – ಯಾವುದು ಈ ಸಾಂಗ್?

    ಈ ಹಿಂದೆ ಪುನೀತ್ ಅಭಿಮಾನಿಗಳು ಅಪ್ಪುಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದರು. ಯುವರತ್ನ ತನ್ನ ಸಾವಿನಲ್ಲೂ ನೇತ್ರದಾನ ಮಾಡಿ ಹಲವರಿಗೆ ದೃಷ್ಟಿ ನೀಡಿದ್ದರು. ಇದೀಗ ಅವರ ಸಾವಿರಾರು ಅಭಿಮಾನಿಗಳು ಅಪ್ಪು ನಡೆದಿರುವ ಹಾದಿಯಲ್ಲಿ ನಡೆದು ನೇತ್ರದಾನಕ್ಕೆ ಮುಂದಾಗಿದ್ದಾರೆ.

  • ಸಾಹಿತಿ ನಾಗೆಂದ್ರ ಪ್ರಸಾದ್‍ಗೆ ಡಾಕ್ಟರೇಟ್ ಗೌರವ

    ಸಾಹಿತಿ ನಾಗೆಂದ್ರ ಪ್ರಸಾದ್‍ಗೆ ಡಾಕ್ಟರೇಟ್ ಗೌರವ

    ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮದ ಜನಪ್ರಿಯ ಗೀತರಚನೆಕಾರ ಹಾಗೂ ಸಂಗೀತ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್‍ರವರಿಗೆ ಹಂಪಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿದೆ.

    ಹೌದು ಬಳ್ಳಾರಿಯಲ್ಲಿ ಹಂಪಿ ಕನ್ನಡ ವಿಶ್ವ ವಿದ್ಯಾಲಯದ 29ನೇ ಘಟಕೋತ್ಸವ ಕಾರ್ಯಕ್ರಮ ನಡೆದಿದ್ದು, ಈ ವೇಳೆ ನಾಗೇಂದ್ರ ಪ್ರಸಾದ್ ಅವರ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ.

    ಈ ಬಗ್ಗೆ ನಾಗೆಂದ್ರ ಪ್ರಸಾದ್, ಕನ್ನಡ ಚಲನಚಿತ್ರ ಗೀತೆಗಳ ಸಾಮಾಜಿಕ ಪರಿಣಾಮ: ಒಂದು ಅಧ್ಯಯನ’ ಎಂಬ ವಿಷಯ ಕುರುತು ಡಿ.ಲಿಟ್(ಡಾಕ್ಟರ್ ಆಫ್ ಲಿಟರೇಚರ್) ಪದವಿಗೆ ಸಂಶೋಧನೆ ಅಧ್ಯಯನ ನಡೆಸಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ್ದರು. ಈ ಡಿ. ಲಿಟ್ ಮಹಾಪ್ರಬಂಧಕ್ಕೆ ಕ್ನನಡ ವಿಶ್ವವಿದ್ಯಾಲಯ, ಹಂಪಿಯು, ಇಂದು ತನ್ನ 29ನೇ ನುಡಹಬ್ಬದಲ್ಲಿ ನನಗೆ ಡಾಕ್ಟರೇಟ್ ಪದವಿಯನ್ನು ನೀಡಿತು. ಈ ಸಂತಸದ ವಿಷಯವನ್ನು ತಮ್ಮೊಂದಿಗೆ ಹಂಚಿಕೊಳ್ಳುವ ಮನಸಾಯಿತು. ನಿಮ್ಮ ಒಲುಮೆಯೇ ನನ್ನನ್ನು ಸದಾ ಪೋಷಿಸಿದೆ. ಪ್ರೋತ್ಸಾಹಿಸಿದೆ. ಧನ್ಯವಾದಗಳು ಎಂದು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಫೋಟೋ ಜೊತೆ ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.

    ಆತ್ಮೀಯರೇ,
    *ಕನ್ನಡ ಚಲನಚಿತ್ರ ಗೀತೆಗಳ ಸಾಮಾಜಿಕ ಪರಿಣಾಮ : ಒಂದು ಅಧ್ಯಯನ* ಎಂಬ ವಿಷಯ ಕುರಿತು ಡಿ. ಲಿಟ್ (ಡಾಕ್ಟರ್ ಆಫ್ ಲಿಟರೇಚರ್) ಪದವಿಗೆ…

    Posted by Nagendra Prasad on Friday, April 9, 2021

    ಕನ್ನಡ ಚಿತ್ರರಂಗಕ್ಕೆ ನಾಗೇಂದ್ರ ಪ್ರಸಾದ್ ಪಾದಾರ್ಪಣೆ ಮಾಡಿ 22 ವರ್ಷ ಕಳೆದಿದ್ದು, ಇಲ್ಲಿಯವರೆಗೂ ಸುಮಾರು 3,000ಕ್ಕೂ ಹೆಚ್ಚು ಹಾಡನ್ನು ರಚಿಸಿದ್ದಾರೆ. ಅಲ್ಲದೇ ನಟ, ಗೀತಾ ರಚನೆಕಾರ, ಸಂಗೀತಗಾರ, ನಿರ್ದೇಶಕ, ಸಂಭಾಷಣೆಕಾರ ಹೀಗೆ ಹಲವಾರು ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಕನ್ನಡಗರ ಮನಗೆದ್ದಿದ್ದಾರೆ.

  • ಮಂತ್ರಾಲಯ ಶ್ರೀಗಳಿಗೆ ಗುಲ್ಬರ್ಗಾ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

    ಮಂತ್ರಾಲಯ ಶ್ರೀಗಳಿಗೆ ಗುಲ್ಬರ್ಗಾ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

    ರಾಯಚೂರು: ಮಂತ್ರಾಲಯದ ಶ್ರೀಸುಭುದೇಂದ್ರ ತೀರ್ಥರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಇಂದು ಪ್ರದಾನ ಮಾಡಲಾಯಿತು.

    ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಗುಲ್ಬರ್ಗಾ ವಿವಿ ಪ್ರಭಾರಿ ಕುಲಪತಿ ಚಂದ್ರಕಾಂತ್ ಯಾತನೂರ್ ಶ್ರೀಗಳಿಗೆ ಡಾಕ್ಟರೇಟ್ ನೀಡಿ ಗೌರವಿಸಿದರು.

    ನವೆಂಬರ್ 20ರಂದು ಕಲಬುರಗಿಯ ವಿವಿ ಆವರಣದಲ್ಲಿ ಆಯೋಜಿಸಿದ್ದ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಬೇಕಿತ್ತು. ಆದರೆ ತುಂಗಭದ್ರಾ ಪುಷ್ಕರ ಹಿನ್ನಲೆ ಸ್ವಾಮೀಜಿ ಕಲಬುರಗಿಗೆ ಹೋಗಿರಲಿಲ್ಲ. ಹೀಗಾಗಿ ಸ್ವತಃ ವಿವಿ ಕುಲಪತಿಗಳೇ ಮಠದಲ್ಲಿ ಸ್ವಾಮಿಜಿಯನ್ನು ಗೌರವಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಮಠದ ಭಕ್ತರು ಭಾಗವಹಿಸಿದ್ದರು.

    ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಶ್ರೀಸುಭುದೇಂದ್ರ ತೀರ್ಥರು, ವಿವಿಯು ನಮ್ಮ ಸೇವೆ ಗುರುತಿಸಿ ಗೌರವ ನೀಡಿದೆ. ಆಶ್ರಮ ನೀತಿಯಂತೆ ಪ್ರಶಸ್ತಿ ಸ್ವೀಕರಿಸುವಂತಿಲ್ಲ. ಆದರೆ ಭಗವಂತನಿಗೆ ನೀಡುತ್ತಿದ್ದಾರೆ ಎಂದುಕೊಂಡು ಸ್ವೀಕರಿಸಿ ರಾಯರ ಪಾದಕ್ಕೆ ಸಮರ್ಪಿಸುತ್ತೇನೆ. ಈ ಗೌರವ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದರು.

    ಕಾರ್ಯಕ್ರಮದ ಬಳಿಕ ಮಾತನಾಡಿದ ಶ್ರೀಗಳು, ರಾಜ್ಯದಲ್ಲಿ ಇನ್ನೂ ಚಳಿ ಇದೆ, ಈ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸುವುದು ಬೇಡ. ಈಗ ನಿರ್ಧರಿಸಿದ್ದನ್ನು ಸರ್ಕಾರ ಪರಾಮರ್ಶಿಸಬೇಕು. ಕೊರೊನಾ ಎರಡನೇ ಅಲೆ ಬರುತ್ತಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಚಿಕ್ಕ ಮಕ್ಕಳು ಸಾಮಾಜಿಕ ಅಂತರ, ಕೊರೊನಾ ನಿಯಮಾವಳಿ ಪಾಲಿಸುವುದು ಕಷ್ಟ. ಹೀಗಾಗಿ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವುದನ್ನು ಮುಂದೂಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಗೋ ಹತ್ಯೆ ಮಾತ್ರವಲ್ಲ ಪ್ರಾಣಿ ಹತ್ಯೆಯನ್ನೇ ನಿಲ್ಲಿಸಬೇಕು. ಮೊದಲಿಗೆ ಪ್ರಾಯೋಗಿಕ ಹಂತವಾಗಿ ಗೋ ಹತ್ಯೆ ಸಂಪೂರ್ಣ ನಿಷೇಧಿಸಬೇಕು. ಸರ್ಕಾರ ಗೋ ಹತ್ಯೆ ನಿಷೇಧ ಕಾಯಿದೆಯನ್ನ ಜಾರಿಗೆ ತರಬೇಕು. ಕೇಂದ್ರ ಸರ್ಕಾರದಿಂದ ಎಲ್ಲ ರಾಜ್ಯಗಳಿಗೆ ಅನ್ವಯವಾಗುವಂತೆ ಕಾಯಿದೆ ತರಬೇಕು ಎಂದು ಸುಬುಧೇಂದ್ರತೀರ್ಥ ಸ್ವಾಮೀಜಿ ಹೇಳಿದರು.

  • ಮಂತ್ರಾಲಯದ ಶ್ರೀಗಳಿಗೆ ಗುಲ್ಬರ್ಗ ವಿವಿ ಗೌರವ ಡಾಕ್ಟರೇಟ್

    ಮಂತ್ರಾಲಯದ ಶ್ರೀಗಳಿಗೆ ಗುಲ್ಬರ್ಗ ವಿವಿ ಗೌರವ ಡಾಕ್ಟರೇಟ್

    ರಾಯಚೂರು: ಗುಲ್ಬರ್ಗ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್‍ಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಆಯ್ಕೆ ಮಾಡಲಾಗಿದೆ.

    ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಪಾಂಡಿತ್ಯ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ಗುರುತಿಸಿ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 20ರಂದು ನಡೆಯಲಿರುವ ವಿವಿಯ 38ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.

    ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯ ಗುರುತಿಸಿ ಗೌರವ ಡಾಕ್ಟರೇಟ್ ನೀಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಅಪಾರ ಪಾಂಡಿತ್ಯ ಹೊಂದಿರುವ ಶ್ರೀಗಳು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ಜೊತೆಗೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿದ್ದಾರೆ. ಅವರ ಈ ಸೇವೆ ಗುರತಿಸಿ ಆಯ್ಕೆ ಮಾಡಲಾಗಿದೆ ಅಂತ ಗುಲ್ಬರ್ಗ ವಿವಿ ಸಿಂಡಿಕೇಟ್ ಸದಸ್ಯ ಡಾ.ಶರಣಬಸವ ಪಾಟೀಲ್ ಜೋಳದಹೆಡಗಿ ತಿಳಿಸಿದ್ದಾರೆ.

  • ಗದಗ ಜಿಲ್ಲೆಯ 7 ವರ್ಷದ ಬಾಲಕಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ

    ಗದಗ ಜಿಲ್ಲೆಯ 7 ವರ್ಷದ ಬಾಲಕಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ

    ಗದಗ: ಜಿಲ್ಲೆಯ ನರಗುಂದ ಪಟ್ಟಣದ 7 ವರ್ಷದ ಬಾಲಕಿಗೆ ತಮಿಳುನಾಡು ಯುನಿವರ್ಸಲ್ ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ.

    ವೈದೃತಿ ಕೋರಿಶೆಟ್ಟರ್ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ. ಬಾಲಕಿ ಪಟ್ಟಣದ ಸರ್.ಎಂ ವಿಶ್ವೇಶ್ವರಯ್ಯ ಶಾಲೆಯಲ್ಲಿ 2ನೇ ತರಗತಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಸಚಿವರು, ಶಾಸಕರು, ರಾಜ ಮಹಾರಾಜರ ಆಳ್ವಿಕೆಯ ಕಾಲಾವಧಿ ಕುರಿತು ಕೇಳುವ ಪ್ರಶ್ನೆಗಳಿಗೆ ವೈದೃತಿ ಪಟಾಪಟನೆ ಉತ್ತರಿಸಿದ್ದಾರೆ. ಹೀಗಾಗಿ ಬಾಲಕಿಯ ಅದ್ಬುತ ಸಾಧನೆ ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುತ್ತಿದೆ.

    ತಮಿಳುನಾಡಿನ ಮಧುರೈನಲ್ಲಿ ನಡೆಯುವ ಯುನಿವರ್ಸಲ್ ವಿವಿ ಘಟಿಕೋತ್ಸವದಲ್ಲಿ ಇಂದು ಡಾಕ್ಟರೇಟ್ ಪ್ರಶಸ್ತಿಯನ್ನ ತನ್ನ ಮುಡಿಗೇರಿಸಿಕೊಳ್ಳಲಿದ್ದಾಳೆ. ಈ ಬಾಲಕಿಗೆ ಕರ್ನಾಟಕ ದರ್ಶನ ಮಾಸಪತ್ರಿಕೆ, ಸೇವಾ ಅಭಿವೃದ್ಧಿ ಸಂಸ್ಥೆ ನೀಡುವ ಕರ್ನಾಟಕ ‘ಜ್ಞಾನಚಕ್ರವರ್ತಿ’ ರಾಷ್ಟ್ರೀಯ ಪ್ರಶಸ್ತಿ, ಕರುನಾಡು ರಾಜ್ಯೋತ್ಸವ, ಸಂಗೋಳ್ಳಿ ರಾಯಣ್ಣ ಗೌರವ ಪ್ರಶಸ್ತಿ, ವಿಕ್ರಮಾದಿತ್ಯ ರಾಜ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.

    7 ವರ್ಷದಲ್ಲಿ ಬಾಲಕಿ ಇಷ್ಟೊಂದು ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ. ಜಿಲ್ಲೆಯ ಹೆಸರು ಮತ್ತಷ್ಟು ಉತ್ತುಂಗಕ್ಕೇರುವಂತೆ ಮಾಡಿದ್ದಾಳೆ ಎಂದು ಸ್ಥಳೀಯರು ಹಾಗೂ ಸ್ಥಳಿಯ ಸರ್.ಎಂ.ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಯವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತೇನೆ: ರವಿಚಂದ್ರನ್

    ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತೇನೆ: ರವಿಚಂದ್ರನ್

    ಬೆಂಗಳೂರು: ತಪ್ಪಿರುವ ದಾರಿಯನ್ನು ಸರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತೇನೆ ಎಂದು ನಟ, ನಿರ್ಮಾಪಕ ಮತ್ತು ನಿರ್ದೇಶಕ ಡಾ. ವಿ ರವಿಚಂದ್ರನ್ ಅವರು ಹೇಳಿದ್ದಾರೆ.

    ಇಂದು ಸಿಎಂಆರ್ ಯುನಿರ್ವಸಿಟಿ 4ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ನಟ ರವಿಚಂದ್ರನ್‌ಗೆ ಡಾಕ್ಟರೇಟ್ ಗೌರವ ನೀಡಲಾಯಿತು. ಬೆಂಗಳೂರಿನ ಸಿಎಂಆರ್ ಕಾಲೇಜಿನಲ್ಲಿ ಅವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರವಿಚಂದ್ರನ್ ಅವರ ಪತ್ನಿ ಸುಮತಿ, ಮಗಳು ಗೀತಾಂಜಲಿ, ಅಳಿಯ ಅಜಯ್, ಮಕ್ಕಳಾದ ವಿಕ್ರಂ ಮತ್ತು ಮನೋರಂಜನ್ ಭಾಗಿಯಾಗಿದ್ದರು.

    ಈ ವೇಳೆ ಡಾಕ್ಟರೇಟ್ ಗೌರವ ಪಡೆದು ಮಾತನಾಡಿದ ರವಿಚಂದ್ರನ್, ಇನ್ನೂ ಮುಂದೆ ತಪ್ಪಿರುವ ದಾರಿಯನ್ನು ಸರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತೇನೆ. ಡಾಕ್ಟರೇಟ್ ಗೌರವ ಸ್ವೀಕರಿಸಿ, ಇನ್ಮುಂದೆ ಹೊಸ ದಾರಿಯನ್ನು ಹಿಡಿಯುತ್ತೇನೆ. ನನ್ನನ್ನು ಗುರುತಿಸಿ ಸಿಎಂಆರ್ ಯುನಿವರ್ಸಿಟಿಯವರು ಡಾಕ್ಟರೇಟ್ ಗೌರವ ನೀಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

    ಈ ಹಿಂದೆಯೇ ಮೂರು ದಶಕಗಳಿಂದ ಚಿತ್ರರಂಗದಲ್ಲಿ ರವಿಚಂದ್ರನ್ ಅವರು ಮಾಡಿದ ಸೇವೆಗೆ ಗೌರವ ಡಾಕ್ಟರೇಟ್ ನೀಡಬೇಕು ಎಂದು ಅಭಿಮಾನಿಗಳು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದರು. ಅವರ ಬಹುದಿನದ ಆಸೆ ಈಡೇರಿರುವುದರಿಂದ ಅಭಿಮಾನಿಗಳು ಖುಷಿಯಾಗಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ರವಿಚಂದ್ರನ್ ಅವರು ನಟ, ನಿರ್ದೇಶಕ, ನಿರ್ಮಾಪಕ, ಗೀತ ರಚನೆ, ಸಂಗೀತ, ಸಂಭಾಷಣೆ ಸೇರಿದಂತೆ ಹಲವು ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ 85ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ನಟರಾಗಿ ಅಭಿನಯಿಸಿದ್ದಾರೆ.

    ಭಾರತೀಯ ಚಿತ್ರರಂಗದಲ್ಲಿ ವರನಟ ರಾಜ್‌ಕುಮಾರ್ ಅವರು ಮೊದಲು ಡಾಕ್ಟರೇಟ್ ಪದವಿಯನ್ನು ಪಡೆದಿದ್ದು, ಆ ಬಳಿಕ ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್ ಸೇರಿದಂತೆ ಹಲವರು ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಾಲಿಗೆ ಈಗ ರವಿಚಂದ್ರನ್ ಅವರು ಕೂಡ ಸೇರ್ಪಡೆಯಾಗಿದ್ದಾರೆ.

  • ಕ್ರೇಜಿಸ್ಟಾರ್ ರವಿಚಂದ್ರನ್‍ಗೆ ಒಲಿದು ಬಂದ ಗೌರವ ಡಾಕ್ಟರೇಟ್

    ಕ್ರೇಜಿಸ್ಟಾರ್ ರವಿಚಂದ್ರನ್‍ಗೆ ಒಲಿದು ಬಂದ ಗೌರವ ಡಾಕ್ಟರೇಟ್

    ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಒಲಿದು ಬಂದಿದೆ.

    ಸಿಎಂಆರ್ ಯೂನಿವರ್ಸಿಟಿ ರವಿಚಂದ್ರನ್‍ವರಿಗೆ ಡಾಕ್ಟರೇಟ್ ಘೋಷಿಸಿದೆ. ನವೆಂಬರ್ 3ರಂದು ನಡೆಯುವ ದೊಡ್ಡ ಕಾರ್ಯಕ್ರಮದಲ್ಲಿ ಸಿಎಂಆರ್ ವಿಶ್ವವಿದ್ಯಾಲಯ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ಎಲ್ಲ ತಯಾರಿ ಮಾಡಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಹಿಂದೆಯೇ ಚಿತ್ರರಂಗದಲ್ಲಿ ರವಿಚಂದ್ರನ್ ಅವರು ಮಾಡಿದ ಸೇವೆಗೆ ಗೌರವ ಡಾಕ್ಟರೇಟ್ ನೀಡಬೇಕು ಎಂದು ಅಭಿಮಾನಿಗಳು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದರು. ತಮ್ಮ ಬಹುದಿನದ ಆಸೆ ಈಡೇರಿತ್ತಿರುವುದರಿಂದ ಅಭಿಮಾನಿಗಳು ಖುಷಿಯಾಗಿದ್ದಾರೆ.

    ಸ್ಯಾಂಡಲ್‍ವುಡ್‍ನಲ್ಲಿ ರವಿಚಂದ್ರನ್ ಅವರು ನಟ, ನಿರ್ದೇಶಕ, ನಿರ್ಮಾಪಕ, ಗೀತಾ ರಚನೆ, ಸಂಗೀತ, ಸಂಭಾಷಣೆ ಸೇರಿದಂತೆ ಹಲವು ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ 85ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ನಟರಾಗಿ ಅಭಿನಯಿಸಿದ್ದಾರೆ.

    ಭಾರತೀಯ ಚಿತ್ರರಂಗದಲ್ಲಿ ವರನಟ ರಾಜ್‍ಕುಮಾರ್ ಅವರು ಮೊದಲು ಡಾಕ್ಟರೇಟ್ ಪದವಿಯನ್ನು ಪಡೆದಿದ್ದು, ಆ ಬಳಿಕ ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್ ಸೇರಿದಂತೆ ಹಲವರು ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಸದ್ಯ ಈ ಸಾಲಿಗೆ ಈಗ ರವಿಚಂದ್ರನ್ ಅವರು ಕೂಡ ಸೇರ್ಪಡೆಯಾಗಿದ್ದಾರೆ.

  • ಲಾ ಟ್ರೋಬ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದ ಶಾರೂಕ್ ಖಾನ್

    ಲಾ ಟ್ರೋಬ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದ ಶಾರೂಕ್ ಖಾನ್

    ಕ್ಯಾನ್ಬೆರಾ: ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ಅವರು ಮೆಲ್ಬೋರ್ನ್ ಮೂಲದ ಲಾ ಟ್ರೋಬ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ.

    ಭಾರತೀಯ ಚಿತ್ರರಂಗ ಹೊರತುಪಡಿಸಿ ಶಾರೂಕ್ ಖಾನ್ ಅವರು ಮೀರ್ ಫೌಂಡೇಶನ್ ಮೂಲಕ ದೀನದಲಿತ ಮಕ್ಕಳು ಮತ್ತು ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸಿದ್ದಕ್ಕೆ ಈ ಡಾಕ್ಟರೇಟ್ ನೀಡಲಾಗಿದೆ. ಈ ಬಗ್ಗೆ ಲಾ ಟ್ರೋಬ್ ವಿಶ್ವವಿದ್ಯಾಲಯ ತನ್ನ ಟ್ವಿಟ್ಟರ್ ಖಾತೆಯಲ್ಲಿ ಶಾರೂಕ್ ಖಾನ್ ಡಾಕ್ಟರೇಟ್ ಪಡೆಯುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಬಳಿಕ ಮಾತನಾಡಿದ ಶಾರೂಕ್ ಖಾನ್, ಭಾರತೀಯ ಸಂಸ್ಕೃತಿಯೊಂದಿಗೆ ಸುದೀರ್ಘ ಒಡನಾಟ ಮತ್ತು ಮಹಿಳಾ ಸಮಾನತೆಗಾಗಿ ಪ್ರತಿಪಾದಿಸುವಲ್ಲಿ ಪ್ರಭಾವಶಾಲಿ ದಾಖಲೆಯನ್ನು ಹೊಂದಿರುವ ಲಾ ಟ್ರೋಬ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆಯಲು ಹೆಮ್ಮೆಯಾಗುತ್ತಿದೆ. ಈ ಗೌರವ ಡಾಕ್ಟರೇಟ್ ಸ್ವೀಕರಿಸಲು ನನಗೆ ನಿಜವಾಗಿಯೂ ಖುಷಿಯಾಗುತ್ತಿದೆ. ನನ್ನ ಸಾಧನೆಗಳನ್ನು ಗುರುತಿಸಿದ್ದಕ್ಕಾಗಿ ಲಾ ಟ್ರೋಬ್‍ಗೆ ಪ್ರಾಮಾಣಿಕವಾಗಿ ಧನ್ಯವಾದ ತಿಳಿಸುತ್ತೇನೆ” ಎಂದು ಹೇಳಿದ್ದಾರೆ.

    ಲಾ ಟ್ರೋಬ್ ವಿಶ್ವವಿದ್ಯಾಲಯವು ಶಾರೂಖ್ ಖಾನ್ ಅವರಿಗೆ ಡಾಕ್ಟರ್ ಆಫ್ ಲೆಟರ್ಸ್ ಜೊತೆ ಗೌರವ ನೀಡಿದ ಮೊದಲ ಆಸ್ಟ್ರೇಲಿಯಾ ವಿಶ್ವವಿದ್ಯಾಲಯವಾಗಿದೆ. ಚಲನಚಿತ್ರೋತ್ಸವದಲ್ಲಿ ಶಾರೂಕ್ ಅವರಿಗೆ ‘ಎಕ್ಸಲೆನ್ಸ್ ಇನ್ ಸಿನಿಮಾ’ ಪ್ರಶಸ್ತಿ ಕೂಡ ದೊರೆತಿದೆ.

    ಈ ಮೊದಲು ಶಾರೂಕ್ ಖಾನ್ ಅವರಿಗೆ ನಾಲ್ಕು ವಿಶ್ವವಿದ್ಯಾಲಯ ಡಾಕ್ಟರೇಟ್ ನೀಡಿ ಗೌರವಿಸಿದೆ. 2009 ಬೆಡ್‍ಫೋಡ್ರ್ಶೈರ್ ವಿಶ್ವವಿದ್ಯಾಲಯ, 2015ರಲ್ಲಿ ಎಡಿನ್‍ಬರ್ಗ್ ವಿಶ್ವವಿದ್ಯಾಲಯ, 2016ರಲ್ಲಿ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ, 2019ರಲ್ಲಿ ಯೂನಿವರ್ಸಿಟಿ ಆಫ್ ಲಾನಿಂದ ಡಾಕ್ಟರೇಟ್ ಪಡೆದಿದ್ದಾರೆ.

  • ಹಣ ಕೊಟ್ಟು ಡಾಕ್ಟರೇಟ್ ಪಡೆದ ರೌಡಿಶೀಟರ್ ಯಶಸ್ವಿನಿ ಗೌಡ?

    ಹಣ ಕೊಟ್ಟು ಡಾಕ್ಟರೇಟ್ ಪಡೆದ ರೌಡಿಶೀಟರ್ ಯಶಸ್ವಿನಿ ಗೌಡ?

    ಬೆಂಗಳೂರು: ಶಿಕ್ಷಣ ಪಡೆದು ಡಾಕ್ಟರೇಟ್ ಪದವಿ ಪಡೆಯುವುದು ನೋಡಿದ್ದೇವೆ, ಆದರೆ ಹಣ ಕೊಟ್ಟರೆ ರೌಡಿ ಶೀಟರ್ ಗೂ ಡಾಕ್ಟರ್ ನೀಡುವ ದಂಧೆ ನಗರದಲ್ಲಿ ನಡೆಯುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ರೌಡಿಶೀಟರ್ ಹೊಂದಿರುವ ಯಶಸ್ವಿನಿ ಗೌಡ ಅವರ ಸಾಮಾಜಿಕ ಸೇವೆ ಮೆಚ್ಚಿ ವಿಶ್ವವಿದ್ಯಾಲಯವೊಂದು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

    ಅಮೆರಿಕ ಮೂಲದ `ಇಂಟರ್‍ನ್ಯಾಷನಲ್ ಗ್ಲೋಬಲ್ ಪೀಸ್ ಯೂನಿವರ್ಸಿಟಿ’ ಮೂಲಕ ಯಶಸ್ವಿನಿ ಗೌಡ ಡಾಕ್ಟರೇಟ್ ಪಡೆದಿದ್ದಾರೆ. ಯಶಸ್ವಿನಿ ಗೌಡ ಅವರ ಸಾಮಾಜಿಕ ಸೇವೆ ಮೆಚ್ಚಿ ಡಾಕ್ಟರೇಟ್ ನೀಡಿದ್ದಾಗಿ ಯೂನಿವರ್ಸಿಟಿ ತಿಳಿಸಿದೆ. ಆದರೆ ಇಂಟರ್‍ನ್ಯಾಷನಲ್ ಗ್ಲೋಬಲ್ ಪೀಸ್ ಯೂನಿವರ್ಸಿಟಿಗೆ ದುಡ್ಡು ಕೊಟ್ಟು ಡಾಕ್ಟರೇಟ್ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

    ಬೆಂಗಳೂರಲ್ಲಿ ಡಾಕ್ಟರೇಟ್ ಕೊಡಿಸಲು ಗ್ಯಾಂಗ್ ಒಂದು ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದ್ದು, ಒಂದು ಡಾಕ್ಟರೇಟ್ ಪದವಿ ನೀಡಲು 75 ಸಾವಿರ ರೂ. ನಿಂದ 1.50 ಲಕ್ಷದವರೆಗೂ ವಸೂಲಿ ಮಾಡುತ್ತಾರೆ. ಹೆಚ್ಚು ಸುದ್ದಿಯಾಗುವ ಜನರನ್ನೇ ಟಾರ್ಗೆಟ್ ಮಾಡುವ ಈ ‘ಡಾಕ್ಟರೇಟ್ ಗ್ಯಾಂಗ್’, ಅರ್ಜಿ ಕೊಟ್ಟು ನಿಮ್ಮ ಅವರ ಮಾಹಿತಿ ಪಡೆದುಕೊಂಡು ಡಾಕ್ಟರೇಟ್ ಕೊಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆಯಂತೆ.

    ಭಾರತದಲ್ಲಿ ಈ ಹಿಂದೆ ಇಂತಹ ಅಕ್ರಮದಲ್ಲಿ ತೊಡಗಿದ್ದ ಕೆಲ ಯೂನಿವರ್ಸಿಟಿಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಕಡಿವಾಣ ಹಾಕಿತ್ತು. ಆದರೆ ವಿದೇಶಿ ವಿಶ್ವವಿದ್ಯಾಲಯಗಳಿಂದ ಸದ್ಯ ಡಾಕ್ಟರೇಟ್ ಪಡೆದುಕೊಳ್ಳುತ್ತಿರುವ ದಂಧೆಗೆ ಸರ್ಕಾರ ಕಡಿವಾಣ ಹಾಕುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv