Tag: doctors

  • ಸಿಎಂ ಮನವೊಲಿಕೆ-ಷರತ್ತು ವಿಧಿಸಿ ಪ್ರತಿಭಟನೆ ಹಿಂಪಡೆದ ವೈದ್ಯರು

    ಸಿಎಂ ಮನವೊಲಿಕೆ-ಷರತ್ತು ವಿಧಿಸಿ ಪ್ರತಿಭಟನೆ ಹಿಂಪಡೆದ ವೈದ್ಯರು

    ಮೈಸೂರು: ನಂಜನಗೂಡು ಟಿಹೆಚ್‍ಒ ಆತ್ಮಹತ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಮೈಸೂರಿನಲ್ಲಿ ವೈದ್ಯಾಧಿಕಾರಿಗಳು ನಡೆಸುತ್ತಿದ್ದ ಪ್ರತಿಭಟನೆ ಸಿಎಂ ಮನವೊಲಿಕೆ ಹಿನ್ನೆಲೆ ವೈದ್ಯರ ಸಂಘ ಮುಷ್ಕರ ಹಿಂಪಡೆದಿದೆ. ಈ ಬಗ್ಗೆ ಸಂಘದ ಜಿಲ್ಲಾಧ್ಯಕ್ಷ ಡಾ.ದೇವಿ ಆನಂದ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ವೈದ್ಯರ ಕುರಿತ ಸಚಿವ ಡಾ. ಸುಧಾಕರ್ ಹೇಳಿಕೆ ಖಂಡಿಸಿದ ಅವರು ಸರ್ಕಾರದ ಮುಂದೆ ಹಲವು ಷರತ್ತು ಇಟ್ಟಿದ್ದಾರೆ. ಸಿಇಓ ಪ್ರಶಾಂತ್ ಮಿಶ್ರಾ ವಿಚಾರದಲ್ಲಿ ಹೇಗೆ ಸರ್ಕಾರ ವಿಚಾರಣೆ ಮುಗಿಯುವರೆಗೂ ಅಮಾನತ್ತು ಇಲ್ಲ ಎಂಬುದಕ್ಕೆ ಬದ್ಧವಾಗಿದೆಯೋ. ಅದು ಎಲ್ಲಾ ಸರಕಾರಿ ವೈದ್ಯರಿಗೂ ಅನ್ವಯವಾಗಬೇಕು.

    ಆರೋಗ್ಯ ಇಲಾಖೆ ಅಧಿಕಾರಿಗಳೇ ನಮಗೆ ನೋಡಲ್ ಅಧಿಕಾರಿಗಳಾಗಬೇಕು. ಕೆಎಎಸ್, ಐಎಎಸ್ ಅಧಿಕಾರಿಗಳು ಕೊರೊನಾ ನೊಡಲ್ ಆಫಿಸರ್ ಆಗುವುದು ಬೇಡ. ಗುತ್ತಿಗೆ ಆಧಾರದ ಮೇಲೆ ಅರೆಕಾಲಿಕ ವೈದ್ಯಕೀಯ ಸಿಬ್ಬಂದಿ ಹಾಗೂ ಗ್ರೂಪ್ ಡಿ ನೌಕರರನ್ನ ನೇಮಕ ಮಾಡಿಕೊಳ್ಳಬೇಕು ಎಂಬ ಷರತ್ತುಗಳನ್ನು ಸರ್ಕಾರದ ಮುಂದೆ ಇರಿಸಿದ್ದಾರೆ. ಪ್ರಕರಣ ವರದಿ ಬರೋವರೆಗು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಲು ವೈದ್ಯರ ಸಂಘ ನಿರ್ಧರಿಸಿದೆ.

    ಸಚಿವ ಸುಧಾಕರ ಹೇಳಿದ್ದೇನು?: ಮಂತ್ರಿಯಾಗಿ ನಾನೇ ಇಷ್ಟು ಟೆಸ್ಟ್ ಮಾಡಿ ಅಂತ ಡಿಸಿ ಹಾಗೂ ಸಿಇಒಗಳಿಗೆ ಟಾರ್ಗೆಟ್ ಕೊಡುತ್ತೇನಿ. ಯಾರನ್ನ ಅಮಾನತು ಮಾಡಬೇಕು. ಕಾರ್ಯದ ಒತ್ತಡ ಸ್ವೀಕಾರ ಮಾಡಿ ಕೆಲಸ ಮಾಡೋವರು ಸರ್ಕಾರದಲ್ಲಿರಬೇಕು. ಇಲ್ಲ ಅಂದ್ರೆ ಅವರು ಸ್ವತಂತ್ರರಿದ್ದಾರೆ. ಖಾಸಗಿಯಲ್ಲಿ ಕೆಲಸ ಮಾಡಲಿ. ಎಲ್ಲದಕ್ಕೂ ಲಿಮಿಟ್ ಇದೆ ಅಂತ ಪ್ರತಿಭಟನಾ ನಿರತ ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದರು.

    ನಾಗೇಂದ್ರ ಅವರ ಕುಟುಂಬವೇ ಸರ್ಕಾರದ ತೀರ್ಮಾನಕ್ಕೆ ಒಪ್ಪಿದೆ. ಕಾರ್ಯವೈಖರಿಗೆ ಹೊಗಳಿದೆ. ಆದರೆ ಕೆಲವರು ಅಮಾಯಕರನ್ನು ಕೂರಿಸ್ಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಪರದೆ ಹಿಂದೆ ಪ್ರೇರೇಪಣೆ ಕೊಡಬೇಡಿ. ಗಣೇಶ ಅವರಿಗೆ ಸದ್ಬುದ್ಧಿ ಕೊಡ್ಲಿ ಅಂತ ಪ್ರತಿಭಟನಾನಿರತ ವೈದ್ಯರ ವಿರುದ್ಧ ಸಚಿವ ಸುಧಾಕರ್ ಕಿಡಿಕಾರಿದ್ದರು. ಹೇಳಿಕೆಗೂ ಇದಕ್ಕೂ ಮುನ್ನ ಟ್ವೀಟ್ ಮಾಡಿ, ನಾಗೇಂದ್ರ ಅವರ ಸಾವಿನ ವಿಷಯದಲ್ಲಿ ಸರ್ಕಾರಕ್ಕೆ ಯಾರನ್ನೂ ರಕ್ಷಿಸುವ ಇಚ್ಛೆಯಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಕ್ಷಮೆಯಿಲ್ಲ. ಪ್ರತಿಭಟಿಸುವುದನ್ನು ನಿಲ್ಲಿಸಿ. ಜನ ಸೇವೆಯೇ ಜನಾರ್ಧನ ಸೇವೆ. ತನಿಖೆಯ ನಂತರ ಸತ್ಯ ತಿಳಿದೇ ತಿಳಿಯುತ್ತೆ ಅಂದಿದ್ದರು.

  • ಕೊರೊನಾ ರೋಗಿಗಳಿಗೆ ತಾಲೂಕು ವೈದ್ಯಾಧಿಕಾರಿಗಳಿಂದ ಪಾಯಸದೂಟ

    ಕೊರೊನಾ ರೋಗಿಗಳಿಗೆ ತಾಲೂಕು ವೈದ್ಯಾಧಿಕಾರಿಗಳಿಂದ ಪಾಯಸದೂಟ

    – ಕೊರೊನಾ ಆಸ್ಪತ್ರೆಯಲ್ಲಿ ಗಣೇಶ ಚತುರ್ಥಿ ಆಚರಣೆ

    ಉಡುಪಿ: ಕೊರೊನಾ ಪಾಸಿಟಿವ್ ರೋಗಿಗಳಿಗೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನಲ್ಲಿ ಹಬ್ಬದೂಟ ಬಡಿಸಲಾಗಿದೆ. ಸ್ವತಃ ತಾಲೂಕು ವೈದ್ಯಾಧಿಕಾರಿ ಡಾ.ನಾಗಭೂಷಣ್ ಈ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

    ಗಣೇಶನ ಹಬ್ಬ ನಾಡಿನಾದ್ಯಂತ ಸರಳವಾಗಿ ಆಚರಿಸಲಾಗಿದೆ. ಗಣೇಶ ಚತುರ್ಥಿ ಸಂದರ್ಭದಲ್ಲಿ ಕೊರೊನಾ ಪಾಸಿಟಿವ್ ಬಂದವರಿಗೆ ಚೌತಿ ಆಚರಿಸುವ ಅವಕಾಶ ಸಿಗಲಿಲ್ಲ. ಉಡುಪಿಯ ಆರೋಗ್ಯ ಇಲಾಖೆ ಇಂದು ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕುಂದಾಪುರದ ಕೋವಿಡ್ ಹೋಂ ಕೇರ್ ಸೆಂಟರ್ ನಲ್ಲಿ ಇಲಾಖೆಯಿಂದಲೇ ಸೋಂಕಿತರಿಗೆ ಮಧ್ಯಾಹ್ನದ ಊಟ ವ್ಯವಸ್ಥೆ ಮಾಡಲಾಗಿತ್ತು.

    ದೈನಂದಿನ ಊಟಕ್ಕೆ ಬದಲಾಗಿ ಹಬ್ಬದ ಊಟದ ಪ್ಯಾಕೆಟ್ ಜೊತೆಗೆ ಸಿಹಿತಿಂಡಿಯನ್ನು ಕೂಡ ನೀಡಲಾಯಿತು. ತಾಲೂಕು ವೈದ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಅವರ ಈ ವಿಶೇಷ ಕಾಳಜಿಯ ಬಗ್ಗೆ ಸೋಂಕಿತರು ಮೆಚ್ಚುಗೆ ಮಾತನಾಡಿದ್ದಾರೆ. ಕೋವಿಡ್ ಸೋಂಕಿತರು ಬೇಸರದ ನೆಡುವೆ ನಕ್ಕಿದ್ದಾರೆ. ಮನೆಯಿಂದ, ಜನರ ಮನಸ್ಸಿಂದ ದೂರಾಗಿದ್ದೇವೆ ಎಂಬ ನೋವನ್ನು ಪಾಯಸದೂಟ ಮಾಡಿ ಕೆಲಕಾಲ ಮರೆತಿದ್ದಾರೆ.

    ವೈದ್ಯಾಧಿಕಾರಿಗಳು ಕೂಡ ಹಬ್ಬವನ್ನು ರೋಗಿಗಳ ಜೊತೆ ಆಚರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಕಷ್ಟದಲ್ಲಿ ಇರುವವರಲ್ಲಿ, ನೋವಿನಲ್ಲಿರುವವರಲ್ಲಿ ನಗು ಮೂಡಿಸುವುದೇ ಒಂದು ಹಬ್ಬ. ನೆಮ್ಮದಿ ಕೊಡುವ ಕೆಲಸ ಮಾಡಿದ್ದೇನೆ ಎಂದರು.

  • ಕೋವಿಡ್ ಆಸ್ಪತ್ರೆ ಎಡವಟ್ಟು – ಊಟದ ಸ್ಥಳದಲ್ಲೇ ಮೃತದೇಹದ ಆತಂಕ

    ಕೋವಿಡ್ ಆಸ್ಪತ್ರೆ ಎಡವಟ್ಟು – ಊಟದ ಸ್ಥಳದಲ್ಲೇ ಮೃತದೇಹದ ಆತಂಕ

    ರಾಯಚೂರು: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನ ಕೂಡಲೇ ಶವಾಗಾರಕ್ಕೆ ಸಾಗಿಸಬೇಕು. ಆದರೆ ರಾಯಚೂರಿನ ಕೋವಿಡ್ ಆಸ್ಪತ್ರೆಯಲ್ಲಿ ಸುಮಾರು ಗಂಟೆಗಳ ಕಾಲ ಸೋಂಕಿತರ ಪಕ್ಕದಲ್ಲೇ ಶವವನ್ನು ಇಡಲಾಗಿತ್ತು.

    ಸೋಂಕಿತರಿಗೆ ಊಟ ನೀಡುವ ಸ್ಥಳದಲ್ಲಿಯೇ ಮೃತದೇಹವನ್ನ ಪ್ಯಾಕ್ ಮಾಡಿ ಇಡಲಾಗಿತ್ತು. ಹೀಗಾಗಿ ಊಟ ತೆಗೆದುಕೊಂಡು ಹೋಗಲು, ಬರುವ ಪ್ರತಿಯೊಬ್ಬರು ಮೃತದೇಹದ ಪಕ್ಕದಲ್ಲೇ ನಿಂತುಕೊಂಡು ಊಟ ತೆಗೆದುಕೊಳ್ಳಬೇಕಾದ ಅವ್ಯವಸ್ಥೆಗೆ ಜನರನ್ನು ಹೈರಾಣಾಗಿಸಿದೆ.

    ಸಾಮಾಜಿಕ ಅಂತರ ಕಾಪಾಡಲು ಹೇಳುವ ವೈದ್ಯರೇ ಈ ರೀತಿಯ ಕೆಲಸ ಮಾಡುತ್ತಾರೆ. ರೋಗಿಗಳನ್ನ ನೋಡಲು ಸಹ ಪ್ರತಿದಿನ ಬರುವುದಿಲ್ಲ. ಮೃತದೇಹವನ್ನ ಮಾತ್ರ ಗಂಟೆಗಟ್ಟಲೇ ಆಸ್ಪತ್ರೆಯಲ್ಲಿ ಎಲ್ಲಂದರಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಊಟಕ್ಕಾಗಿ ಕೊರೊನಾ ಸೋಂಕಿತರು ಗ್ರೌಂಡ್ ಫ್ಲೋರ್ ಗೆ ಬರಬೇಕು. ಒಂದೊಂದು ಸಾರಿ ಸಮಯಕ್ಕೆ ಊಟ ಸಿಗುತ್ತೆ. ಮತ್ತೆ ಒಂದೊಂದು ಬಾರಿ ಸರಿಯಾಗಿ ಸಿಗಲ್ಲ. ಕೋವಿಡ್ ವಾರ್ಡಿನ ಗೇಟ್ ಯಾವಾಗಲೂ ತೆರೆದಿರುತ್ತೆ. ರೋಗಿಗಳು, ಸೋಂಕು ಅಲ್ಲದೆ ಇರುವವರು ಸಹ ಹೊರಗೆ ಒಳಗೆ ಓಡಾಡುತ್ತಲೇ ಇರುತ್ತಾರೆ. ಕೊರೊನಾ ಸೋಂಕಿತರು ಬಂದು ಎರಡು ಗಂಟೆಗಳಾದರೂ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯವಹಿಸುತ್ತದೆ ಎಂದು ಸೋಂಕಿತ ವ್ಯಕ್ತಿ ಹೇಳಿದ್ದಾರೆ.

    ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಜೊತೆಗೆ ಧೈರ್ಯ ತುಂಬಿ ಗುಣಮುಖರನ್ನಾಗಿ ಮಾಡಬೇಕಾದ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಕನಿಷ್ಠ ಸೌಲಭ್ಯ ಒದಗಿಸುವುದರ ಜೊತೆ ಆಸ್ಪತ್ರೆಯ ಪರಿಸ್ಥಿತಿ ಸುಧಾರಿಸಬೇಕಿದೆ ಎಂದು ಸೋಂಕಿತರು ಹೇಳುತ್ತಿದ್ದಾರೆ.

  • ಭಾರತದಲ್ಲಿ ಕೊರೊನಾಗೆ 196 ವೈದ್ಯರ ಸಾವು – ಪ್ರಧಾನಿ ಮೋದಿಗೆ ಐಎಂಎ ಪತ್ರ

    ಭಾರತದಲ್ಲಿ ಕೊರೊನಾಗೆ 196 ವೈದ್ಯರ ಸಾವು – ಪ್ರಧಾನಿ ಮೋದಿಗೆ ಐಎಂಎ ಪತ್ರ

    ನವದೆಹಲಿ: ಕೊರೊನಾ ಸೋಂಕಿನಿಂದ ಈವರೆಗೂ ಭಾರತದಲ್ಲಿ 196 ವೈದ್ಯರು ಪ್ರಾಣ ಕಳೆದುಕೊಂಡಿದ್ದು, ಈ ವಿಚಾರದ ಬಗ್ಗೆ ಗಮನ ಹರಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

    ಐಎಂಎ ಬರೆದ ಪತ್ರದಲ್ಲಿ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ವೈದ್ಯರ ಸಾವುಗಳು ಹೆಚ್ಚುತ್ತಿರುವ ಬಗ್ಗೆ ಕಳವಳಗಳ ವ್ಯಕ್ತಪಡಿಸಲಾಗಿದೆ. ಕೊರೊನಾದಿಂದಾಗಿ ವೈದ್ಯರು ಸೋಂಕಿಗೆ ಒಳಗಾಗುವ ಮತ್ತು ಪ್ರಾಣ ಕಳೆದುಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಅವರಲ್ಲಿ ಅನೇಕ ಸಾಮಾನ್ಯ ವೈದ್ಯರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಲಾಗಿದೆ.

    ಐಎಂಎ ದೇಶಾದ್ಯಂತ 3.5 ಲಕ್ಷ ವೈದ್ಯರನ್ನು ಪ್ರತಿನಿಧಿಸುತ್ತದೆ, ಅವರು ಕೈಗೆಟುಕುವ ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ. ಇದರಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯದ ನಡುವೆ ವ್ಯತ್ಯಾಸವನ್ನು ತೋರಿಸುವುದಿಲ್ಲ. ಈವರೆಗೂ ಭಾರತದಲ್ಲಿ 196 ವೈದ್ಯರನ್ನು ಕಳೆದುಕೊಂಡಿದ್ದೇವೆ, ವೈದ್ಯರು ಮತ್ತು ಅವರ ಕುಟುಂಬಗಳಿಗೆ ಕೊರೊನಾ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗುತ್ತಿಲ್ಲ ಎಂದು ವರದಿಯಾಗುತ್ತಿದೆ ಚಿಕಿತ್ಸೆಯ ಕೊರತೆಯಿಂದ ವೈದ್ಯರು ಸಾವನ್ನಪ್ಪುತ್ತಿರುವುದು ಕಳವಳಕಾರಿ ಎಂದು ಉಲ್ಲೇಖಿಸಲಾಗಿದೆ.

    ಹೀಗಾಗಿ ವಿಶೇಷ ಅಪಾಯದ ಗುಂಪಿನ ವೈದ್ಯರು ಮತ್ತು ಅವರ ಕುಟುಂಬಗಳಿಗೆ ಸಮರ್ಪಕ ಆರೋಗ್ಯ ಸೌಲಭ್ಯಗಳನ್ನು ಒದಗಿಸುವಂತೆ ನೋಡಿಕೊಳ್ಳಬೇಕು, ವೈದ್ಯರ ಜೀವ ಉಳಿಸುವುದರಿಂದ ಸಾವಿರಾರು ಜನರ ಪ್ರಾಣ ಉಳಿಸಬಹುದು ಎಂದು ಐಎಂಎ ಪತ್ರದ ಮೂಲಕ ಮನವಿ ಮಾಡಿದೆ.

  • ಕೊರೊನಾ ಡ್ಯೂಟಿ ಮಾಡಿ – ಸೋಂಕಿತ ವೈದ್ಯನಿಗೆ ಅಧಿಕಾರಿಗಳ ಸೂಚನೆ

    ಕೊರೊನಾ ಡ್ಯೂಟಿ ಮಾಡಿ – ಸೋಂಕಿತ ವೈದ್ಯನಿಗೆ ಅಧಿಕಾರಿಗಳ ಸೂಚನೆ

    – ಆರೋಗ್ಯ ಇಲಾಖೆಯಿಂದ ಮತ್ತೊಂದು ಎಡವಟ್ಟು

    ಬೆಂಗಳೂರು: ಬಿಬಿಎಂಪಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, ಕೊರೊನಾ ಸೋಂಕಿತ ವೈದ್ಯರಿಗೆ ಡ್ಯೂಟಿ ಮಾಡಿ ಎಂದು ಸೂಚಿಸಿದ್ದಾರೆ

    ಮಿನಾಜ್ ನಗರದ ನಿವಾಸಿ ಹನುಮಂತನಗರ ಡಿಸ್ಪೆನ್ಸರಿ ಬಿಬಿಎಂಪಿ ಆಸ್ಪತ್ರೆಯ ಗುತ್ತಿಗೆ ಡಾಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಇವರಿಗೆ ಕೊರೊನಾ ಪಾಸಿಟಿವ್‌ ಬಂದಿದೆ. ಪಾಸಿಟಿವ್ ಇರುವವರು ಹೋಂ ಐಸೋಲೇಷನ್ ಇರಬೇಕು. ಇಲ್ಲ ಕೋವಿಡ್ ಕೇರ್ ಸೆಂಟರ್ ನಲ್ಲಿರಬೇಕು. ಆದರೆ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

    ಕೊರೊನಾ ಸೋಂಕಿತ ವೈದ್ಯ ಕೆಲಸ ಮಾಡಲು ಬಂದಿರುವುದರಿಂದ ಅಲ್ಲಿ ಸಿಬ್ಬಂದಿ ಕೆಲಸ ಮಾಡಲು ಹಿಂಜರಿಯುತ್ತಿದ್ದಾರೆ. ಜೊತೆಗೆ ನೀವು ಮನೆಗೆ ಹೋಗಿ ಹೋಂ ಐಸೊಲೇಷನ್ ಆಗಿ ಎಂದು ಪಟ್ಟುಹಿಡಿದಿದ್ದಾರೆ. ಆದರೆ ಸೋಂಕಿತ ವೈದ್ಯ ಮಾತ್ರ ಹಿರಿಯ ಅಧಿಕಾರಿಗಳು ನನಗೆ ಡ್ಯೂಟಿ ಮಾಡಲು ಸೂಚಿಸಿದ್ದಾರೆ. ಬೇಕಿದ್ದರೆ ನೀವು ಮನೆಗೆ ಹೋಗಿ ಎಂದು ಮೊಂಡುವಾದ ಮಾಡುತ್ತಿದ್ದಾರೆ.

  • ನಾಣ್ಯ ನುಂಗಿ 3 ವರ್ಷದ ಬಾಲಕ ಸಾವು – ಕಂಟೈನ್ಮೆಂಟ್ ವಲಯದಲ್ಲಿ ಮನೆ ಇದ್ದುದ್ದೇ ತಪ್ಪಾಯ್ತು

    ನಾಣ್ಯ ನುಂಗಿ 3 ವರ್ಷದ ಬಾಲಕ ಸಾವು – ಕಂಟೈನ್ಮೆಂಟ್ ವಲಯದಲ್ಲಿ ಮನೆ ಇದ್ದುದ್ದೇ ತಪ್ಪಾಯ್ತು

    ತಿರುವನಂತಪುರಂ: ಆಕಸ್ಮಿಕವಾಗಿ ನಾಣ್ಯವನ್ನು ನುಂಗಿ ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಆದರೆ ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ.

    ಅಲುವಾ ಬಳಿಯ ಕೊಡುಂಗಲ್ಲೂರ್‌ನಲ್ಲಿ ಬಾಲಕ ವಾಸಿಸುತ್ತಿದ್ದನು. ಆದರೆ ಕೋವಿಡ್ 19 ನಿಂದಾಗಿ ಬಾಲಕ ವಾಸಿಸುತ್ತಿದ್ದ ಮನೆ ಕಂಟೈನ್ಮೆಂಟ್ ವಲಯದಲ್ಲಿತ್ತು. ಹೀಗಾಗಿ ಕಂಟೈನ್ಮೆಂಟ್ ವಲಯದಿಂದ ಬಂದಿದ್ದರಿಂದ ಆಸ್ಪತ್ರೆಯಲ್ಲಿ ಬಾಲಕನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದರು. ಆದ್ದರಿಂದ ಚಿಕಿತ್ಸೆ ಸಿಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

    ಶನಿವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾಲಕ ನಾಣ್ಯವನ್ನು ನುಂಗಿದ್ದಾನೆ. ಸ್ವಲ್ಪ ಸಮಯದ ನಂತರ ಬಾಲಕ ಅಸ್ವಸ್ಥನಾಗಿದ್ದಾನೆ. ತಕ್ಷಣ ಪೋಷಕರು ಮಗುವನ್ನು ಅಲುವಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಎಕ್ಸ ರೇ ಮಾಡಿದ್ದು, ನಾಣ್ಯವಿರುವ ಬಗ್ಗೆ ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ.

    ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಮಕ್ಕಳ ಶಸ್ತ್ರಚಿಕಿತ್ಸಕರಿಲ್ಲದ ಕಾರಣ ಬಾಲಕನನ್ನು ದಾಖಲಿಸಿಕೊಂಡಿಲ್ಲ. ಆದ್ದರಿಂದ ಬಾಲಕನನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿನ ವೈದ್ಯರು ಮಗುವನ್ನು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಲೆಪ್ಪಿಯದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸಲಹೆ ನೀಡಿದ್ದಾರೆ. ಅಲ್ಲಿಯೂ ಬಾಲಕನ್ನು ಅಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿದ್ದರು ಎಂದು ಸಂಬಂಧಿಕರು ಆರೋಪಿಸಿದ್ದಾರೆ.

    ವೈದ್ಯರು ಮಗುವಿಗೆ ಹಣ್ಣುಗಳನ್ನು ನೀಡುವಂತೆ ಪೋಷಕರಿಗೆ ಸಲಹೆ ನೀಡಿದ್ದಾರೆ. ಕೊನೆಗೆ ಪೋಷಕರು ಮಗುವನ್ನು ಮತ್ತೆ ತಮ್ಮ ಮನೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಸಂಜೆಯ ವೇಳೆಗೆ ಬಾಲಕನ ಸ್ಥಿತಿ ಗಂಭೀರವಾಗಿದೆ. ಇದರಿಂದ ಗಾಬರಿಯಾದ ಪೋಷಕರು ಮತ್ತೆ ಅಲುವಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಮಾರ್ಗದಲ್ಲಿಯೇ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುವುದು. ಕೋವಿಡ್ ಟೆಸ್ಟ್‌ಗೆ ಬಾಲಕನಿಂದ ಸ್ವ್ಯಾಬ್ ಸಂಗ್ರಹಿಸಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಬಗ್ಗೆ ತಿಳಿದು ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಕೆ.ಕೆ. ಶೈಲಜಾ. “ನಾಣ್ಯ ನುಂಗಿ ಬಾಲಕ ಮೃತಪಟ್ಟ ಘಟನೆ ಅತ್ಯಂತ ದುರದೃಷ್ಟಕರ ಎಂದು ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಈ ಪ್ರಕರಣ ಕುರಿತು ಸಮಗ್ರ ವಿಚಾರಣೆಯ ನಂತರ ವರದಿಯನ್ನು ಸಲ್ಲಿಸುವಂತೆ ಪ್ರಧಾನ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. ಜೊತೆಗೆ ಸಂಬಂಧಿಕರು ಮಾಡುತ್ತಿರುವ ಆರೋಪ ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ರಾಜ್ಯದಲ್ಲೇ ಮೊದಲ ಬಾರಿಗೆ ಕೋವಿಡ್ ಸೋಂಕಿತ ಗರ್ಭಿಣಿಗೆ ಅವಳಿ ಮಕ್ಕಳು ಜನನ

    ರಾಜ್ಯದಲ್ಲೇ ಮೊದಲ ಬಾರಿಗೆ ಕೋವಿಡ್ ಸೋಂಕಿತ ಗರ್ಭಿಣಿಗೆ ಅವಳಿ ಮಕ್ಕಳು ಜನನ

    ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಗರ್ಭಿಣಿ ಅವಳಿ-ಜವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

    ಬಳ್ಳಾರಿಯ ಡಾ.ರಾಜ್ ರಸ್ತೆಯಲ್ಲಿರುವ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ (ಕೋವಿಡ್ ಕೇರ್) ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿಯವರ ನೇತೃತ್ವದಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಗೆ ಹೆರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇಂದು ಬೆಳಗ್ಗೆ ಸುಮಾರು 8.35ಕ್ಕೆ ಒಂದು ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಕೋವಿಡ್ ಸೋಂಕಿತ ಗರ್ಭಿಣಿಯು ಕಾರ್ಮಿಕ ವಲಯದಲ್ಲಿ ಕೆಲಸ ಮಾಡುತ್ತಿದ್ದು, ಎಲ್.ಎಸ್.ಸಿ.ಎಸ್ (Lower segment Caesarean section) ತಂತ್ರಜ್ಞಾನದ ಮೂಲಕ ತುರ್ತು ಹೆರಿಗೆ ಶಸ್ತ್ರಚಿಕಿತ್ಸೆಯನ್ನ ಮಾಡಲಾಗಿದೆ.

    ನವಜಾತ ಹೆಣ್ಣು ಶಿಶು 1.8 ಕೆ.ಜಿಯಷ್ಟು ಹಾಗೂ ನವಜಾತ ಗಂಡು ಶಿಶು 2.5 ಕೆ.ಜಿ ಯಷ್ಟು ತೂಕವಿರುತ್ತದೆ. ಮಹಿಳೆಗೆ ಇದು ಮೊದಲನೇಯ ಹೆರಿಗೆಯಾಗಿದೆಂದು ಡಿಸಿ ನಕುಲ್ ತಿಳಿಸಿದ್ದಾರೆ. ಇಡೀ ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಕೋವಿಡ್ ಸೋಂಕಿತ ಗರ್ಭಿಣಿ ಅವಳಿ-ಜವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದು ಬಂದಿದೆ.

  • ಬೆಕ್ಕಿನ ಮೇಲೆ ಅತ್ಯಾಚಾರಗೈದ 15ರ ಪೋರ

    ಬೆಕ್ಕಿನ ಮೇಲೆ ಅತ್ಯಾಚಾರಗೈದ 15ರ ಪೋರ

    -ಪೋರನ ಕೃತ್ಯಕ್ಕೆ ಗೆಳೆಯರು ಸಾಥ್

    ಇಸ್ಲಾಮಾಬಾದ್: 15 ವರ್ಷದ ಪೋರ ಬೆಕ್ಕಿನ ಮೇಲೆ ಅತ್ಯಾಚಾರಗೈದಿರುವ ಘಟನೆ ಪಾಕಿಸ್ತಾನದ ಲಾಹೋರ್ ನಲ್ಲಿ ನಡೆದಿದೆ. 15 ವರ್ಷದ ಪೋರ ಮತ್ತು ಆತನ ಗೆಳೆಯರು ನಿರಂತರವಾಗಿ ಬೆಕ್ಕಿನ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ. ಕೃತ್ಯಕ್ಕೊಳಗಾದ ಬೆಕ್ಕಿನ ಅಂಗಾಂಗಗಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದೆ.

    ಸಾಂದರ್ಭಿಕ ಚಿತ್ರ

    ಸೋಶಿಯಲ್ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್ ವೈರಲ್ ಆಗಿದ್ದು, ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಕಾಮುಕರ ಕೃತ್ಯಕ್ಕೊಳಗಾಗಿರುವ ಬೆಕ್ಕಿಗೆ ಕುಳಿತುಕೊಳ್ಳಲು ಆಗುತ್ತಿಲ್ಲ. ಬೆಕ್ಕನ್ನು ವೈದ್ಯರ ಬಳಿ ಕರೆದುಕೊಂಡು ಹೋದಾಗ ಅದರೊಳಗಿಂದ ಸ್ಪರ್ಮ್, ರಕ್ತ ಮತ್ತು ಪ್ಲಾಸ್ಟಿಕ್ ಬ್ಯಾಗ್ ಹೊರ ತೆಗೆಯಲಾಗಿದೆ. ಈ ಪ್ಲಾಸ್ಟಿಕ್ ಬ್ಯಾಗ್ ಬಳಸಿ ಹುಡುಗರು ರೇಪ್ ಮಾಡಿದ್ದಾರೆ.

    ಸಾಂದರ್ಭಿಕ ಚಿತ್ರ

    ಬೆಕ್ಕಿನ ಮೇಲೆ ಅತ್ಯಾಚಾರ ಆಗಿರೋದನ್ನು ವೈದ್ಯರು ದೃಢಪಡಿಸಿದ್ದು, ಈ ಬಗ್ಗೆ ವೈದ್ಯಕೀಯ ವರದಿ ನೀಡಲು ಡಾಕ್ಟರ್ ಹಿಂದೇಟು ಹಾಕಿದ್ದಾರೆ ಎಂದು ವರದಿ ಬಿತ್ತರವಾಗಿದೆ. ಪಾಕಿಸ್ತಾನದ ಮಕ್ಕಳಿಗೆ ಲೈಂಗಿಕ ಶಿಕ್ಷಣದ ಕೊರತೆಯಿದೆ. ಹಾಗಾಗಿ ಇಂತಹ ಕೃತ್ಯಗಳು ಬೆಳಕಿಗೆ ಬರುತ್ತಿರುತ್ತವೆ.

    ಸಾಂದರ್ಭಿಕ ಚಿತ್ರ

    ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬಾಲಕರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇದರ ಜೊತೆಗೆ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ನೀಡುವ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು. ಬಾಲಕರ ಕೃತ್ಯಕ್ಕೆ ಬಲಿಯಾದ ಬೆಕ್ಕಿಗೆ ನ್ಯಾಯ ಸಿಗಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

  • ಮಧ್ಯರಾತ್ರಿ ನಟಿ ಸುಧಾರಾಣಿಯನ್ನು ಕಾಯಿಸಿದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ: ಸಚಿವ ಸುಧಾಕರ್

    ಮಧ್ಯರಾತ್ರಿ ನಟಿ ಸುಧಾರಾಣಿಯನ್ನು ಕಾಯಿಸಿದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ: ಸಚಿವ ಸುಧಾಕರ್

    ಬೆಂಗಳೂರು: ನಟಿ ಸುಧಾರಾಣಿ ಅವರು ಆಸ್ಪತ್ರೆಗೆ ತೆರಳಿದ್ದ ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿ, ಕಾಯಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ನಟಿ ಸುಧಾರಾಣಿ ಆರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಖಾಸಗಿ ಆಸ್ಪತ್ರೆಯ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

    ನಡೆದಿದ್ದೇನು?
    ನಟಿ ಸುಧಾರಾಣಿ ಅವರ ಅಣ್ಣನ ಮಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪರಿಣಾಮ ತಡರಾತ್ರಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ನಗರ ಖಾಸಗಿ ಆಸ್ಪತ್ರೆಯ ಬಳಿ ತೆರಳಿದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಪ್ರಥಮ ಚಿಕಿತ್ಸೆಯನ್ನು ನೀಡಲು ನಿರಾಕರಿಸಿದ್ದರು. ಅಲ್ಲದೇ ಆಸ್ಪತ್ರೆಯ ಒಳಗೂ ಪ್ರವೇಶ ನೀಡದೆ ತಡೆದಿದ್ದರು. ಕೊನೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್‍ಗೆ ಕರೆ ಮಾಡಿ ಸುಧಾರಾಣಿ ಅವರು ಸಹಾಯ ಪಡೆದುಕೊಂಡಿದ್ದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸುಧಾರಾಣಿ ಅವರು, ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದ ಯುವತಿಯನ್ನು ಸೌಜನ್ಯಕ್ಕೂ ಚೆಕ್ ಮಾಡದೇ ವೆಂಟಿಲೇಟರ್ ಮತ್ತು ಬೆಡ್‍ಗಳಿಲ್ಲ ಅಂತ ಗಂಟೆಗಳ ಕಾಲ ಆಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಿದ್ದಾರೆ. ಪ್ರಥಮ ಚಿಕಿತ್ಸೆಯಾದರೂ ನೀಡಿ ಎಂದರೇ ವೆಂಟಿಲೇಟರ್ ಇಲ್ಲ, ಬೆಡ್ ಇಲ್ಲ ಎಂಬುದನ್ನೇ ಹೇಳುತ್ತಾರೆ. ವೈದ್ಯರೇ ಹೀಗೆ ಮಾಡಿದರೆ ಸಾಮಾನ್ಯ ಜನರಿಗೆ ಯಾವ ಸ್ಥಿತಿ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

  • ಖಾಸಗಿ ಆಸ್ಪತ್ರೆಯ ‘ಕರ್ಮಕಾಂಡ’ ಬಿಚ್ಚಿಟ್ಟ ನಟಿ ಸುಧಾರಾಣಿ

    ಖಾಸಗಿ ಆಸ್ಪತ್ರೆಯ ‘ಕರ್ಮಕಾಂಡ’ ಬಿಚ್ಚಿಟ್ಟ ನಟಿ ಸುಧಾರಾಣಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸುಧಾರಾಣಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅಣ್ಣನ ಮಗಳಿಗೆ ಚಿಕಿತ್ಸೆ ಕೊಡಿಸಲು ತಡರಾತ್ರಿ ಪರದಾಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅಣ್ಣನ ಮಗಳನ್ನು ಕರೆತಂದ ಸುಧಾರಾಣಿ ಅವರಿಗೆ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ.

    ಸುಧಾರಾಣಿ ಅವರ ಅಣ್ಣನ ಮಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪರಿಣಾಮ ತಡರಾತ್ರಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ನಗರ ಖಾಸಗಿ ಆಸ್ಪತ್ರೆಯ ಬಳಿ ತೆರಳಿದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಪ್ರಾಥಮಿಕ ಚಿಕಿತ್ಸೆಯನ್ನು ನೀಡಲು ನಿರಾಕರಿಸಿದ್ದಾರೆ. ಅಲ್ಲದೇ ಆಸ್ಪತ್ರೆಯ ಒಳಗೂ ಪ್ರವೇಶ ನೀಡದೆ ತಡೆದಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸುಧಾರಾಣಿ ಅವರು, ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದ ಯುವತಿಯನ್ನು ಸೌಜನ್ಯಕ್ಕೂ ಚೆಕ್ ಮಾಡದೆ ವೆಂಟಿಲೇಟರ್ ಮತ್ತು ಬೆಡ್‍ಗಳಿಲ್ಲ ಅಂತ ಗಂಟೆಗಳ ಕಾಲ ಆಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಿದ್ದಾರೆ. ಪ್ರಥಮ ಚಿಕಿತ್ಸೆಯಾದರೂ ನೀಡಿ ಎಂದರೇ ವೆಂಟಿಲೇಟರ್ ಇಲ್ಲ, ಬೆಡ್ ಇಲ್ಲ ಎಂಬುದನ್ನೇ ಹೇಳುತ್ತಾರೆ. ವೈದ್ಯರೇ ಹೀಗೆ ಮಾಡಿದರೆ ಸಾಮಾನ್ಯ ಜನರಿಗೆ ಯಾವ ಸ್ಥಿತಿ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಖಾಸಗಿ ಆಸ್ಪತ್ರೆಯ ವೈದ್ಯರ ಮೊಂಡಾಟದಿಂದ ರೋಸಿ ಹೋದ ಸುಧಾರಾಣಿ ಅವರು ಕೊನೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್‍ಗೆ ಕರೆ ಮಾಡಿ ಸಹಾಯ ಪಡೆದಿದ್ದಾರೆ. ಕಮೀಷನರ್ ಅವರಿಗೆ ಮಾತನಾಡುತ್ತಿದ್ದಂತೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.