Tag: doctors

  • ಕೊರೊನಾ ನಂತ್ರ ಗ್ಯಾಂಗ್ರೀನ್ ಕಾಣಿಸಿಕೊಂಡ ವ್ಯಕ್ತಿಗೆ ಕಿಮ್ಸ್‌ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

    ಕೊರೊನಾ ನಂತ್ರ ಗ್ಯಾಂಗ್ರೀನ್ ಕಾಣಿಸಿಕೊಂಡ ವ್ಯಕ್ತಿಗೆ ಕಿಮ್ಸ್‌ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

    ಹುಬ್ಬಳ್ಳಿ: ಕೊರೊನಾ ಸೋಂಕು ತಗುಲಿ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿ ಬಳಿಕ ಗ್ಯಾಂಗ್ರೀನ್ ಕಾಣಿಸಿಕೊಂಡಿದ್ದ ರೋಗಿಯೊಬ್ಬರಿಗೆ ಕಿಮ್ಸ್ ನಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

    ಕೊರೊನಾ ಕಾರಣದಿಂದ 69 ವರ್ಷದ ವ್ಯಕ್ತಿಯನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನದ ಹಿಂದೆ ಕಾಲು ನೋವು ಕಾಣಿಸಿಕೊಂಡಿದ್ದರಿಂದ ಕಪ್ಪು ಬಣ್ಣಕ್ಕೆ ತಿರುಗಿತ್ತು. ಹೀಗಾಗಿ ಕಳೆದ ಗುರುವಾರ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

    ಈ ವೇಳೆ ತಪಾಸಣೆ ಮಾಡಿದಾಗ ಗ್ಯಾಂಗ್ರೀನ್ ಆಗಿರುವುದು ಪತ್ತೆಯಾಗಿತ್ತು. ಹೀಗಾಗಿ ಇಲ್ಲಿನ ವೈದ್ಯರು ಅಗತ್ಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ರೋಗಿ ಗುಣಮುಖರಾಗಿದ್ದಾರೆ. ಡಾ.ಎಸ್ ವೈ ಮುಲ್ಕಿಪಾಟೀಲ್, ಡಾ.ಸಂಜಯ್ ಜಿ. ಡಾ.ರಾಕೇಶ್ ಪಾಟೀಲ್ ಹಾಗೂ ಡಾ.ಅಭಿಚಂದ್ರನ್ ಶಸ್ತ್ರಚಿಕಿತ್ಸೆ ನಡೆಸಿದ್ದರು.

    ಗ್ಯಾಂಗ್ರೀನ್:
    ಗ್ಯಾಂಗ್ರೀನ್ ಎಂದರೆ ನಮ್ಮ ದೇಹದ ಒಂದು ಅಂಗಕ್ಕೆ ರಕ್ತ ಸಂಚಾರದ ಕೊರತೆಯಾಗುತ್ತಿದೆ. ಅಂಗಕ್ಕೆ ರಕ್ತ ಸಂಚಾರ ಆಗಿಲ್ಲ ಎಂದರೆ ಪೋಷಕಾಂಶ ಕೊರತೆ ಆಗುತ್ತದೆ. ಪೋಷಕಾಂಶ, ಆಕ್ಸಿಜನ್, ನ್ಯೂಟ್ರಿಶನ್ಸ್ ಕೊರತೆ ಆಗುತ್ತದೆಯೋ ಅಲ್ಲಿ ಅಂದರೆ ಆ ಭಾಗದಲ್ಲಿ ಆ ಅಂಗ ಕೊಳೆಯುತ್ತ ಹೋಗುತ್ತದೆ. ಇದನ್ನೇ ಗ್ಯಾಂಗ್ರೀನ್ ಎಂದು ಕರೆಯುತ್ತಾರೆ.

  • ಸಂಬಳ ನೀಡದೆ ಕೊರೊನಾ ವಾರಿಯರ್ಸ್‍ಗೆ ಸರ್ಕಾರ ಅವಮಾನಿಸಿದೆ: ಯು.ಟಿ.ಖಾದರ್

    ಸಂಬಳ ನೀಡದೆ ಕೊರೊನಾ ವಾರಿಯರ್ಸ್‍ಗೆ ಸರ್ಕಾರ ಅವಮಾನಿಸಿದೆ: ಯು.ಟಿ.ಖಾದರ್

    ಮಂಗಳೂರು: ವೈದ್ಯರು ಹಾಗೂ ನರ್ಸ್ ಗಳಿಗೆ ಎರಡು ತಿಂಗಳಿನಿಂದ ಸಂಬಳ ಆಗಿಲ್ಲ. ಕೊರೊನಾ ಸಂದರ್ಭದಲ್ಲೇ ವೇತನ ನೀಡದೆ ಸತಾಯಿಸಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಆರೋಪಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವಾರಿಯರ್ಸ್‍ಗೆ ಸಂಬಳ ನೀಡದೆ ಸರ್ಕಾರ ನಿರ್ಲಕ್ಷಿಸಿದೆ. ವಾರಿಯರ್‍ಗಳಿಗೇ ಸಂಬಳ ನೀಡಿಲ್ಲ ಎಂದಮೇಲೆ ರಾಜ್ಯದಲ್ಲಿ ಕೊರೋನಾ ರೋಗಿಗಳ ಸ್ಥಿತಿ ಹೇಗಿರಬೇಡ ಎಂದು ಪ್ರಶ್ನಿಸಿದ ಅವರು, ತಕ್ಷಣ ಸಂಬಳ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

    ನ್ಯಾಷನಲ್ ಹೆಲ್ತ್ ಮಿಷನ್ ಅಡಿಯಲ್ಲಿ ಬರುವ ವೈದ್ಯರು, ನರ್ಸ್, ಲ್ಯಾಬ್ ಟೆಕ್ನೀಷಿಯನ್ಸ್ ಗೂ ಸಂಬಳ ಆಗಿಲ್ಲ. ಅಂದರೆ ರಾಜ್ಯದಲ್ಲಿ ಒಟ್ಟು 26 ಸಾವಿರ ಮಂದಿಗೆ ಸರ್ಕಾರ ಸಂಬಳ ನೀಡಿಲ್ಲ. ಎರಡು ತಿಂಗಳು ಬಿಡುವಿಲ್ಲದೆ ವೈದ್ಯರು ಕೆಲಸ ಮಾಡಿದ್ದಾರೆ. ಪಿಎಂ ಕೇರ್ ನಲ್ಲಿ ಸಂಗ್ರಹವಾದ ಹಣವನ್ನು ಕೊಡಲಿ. ಜೊತೆಗೆ ಪಿಎಂ ಫಂಡ್ ನಲ್ಲಿ ಸಂಗ್ರಹವಾದ ಹಣದ ಲೆಕ್ಕ ಕೊಡಲಿ. ಯಾವುದಕ್ಕೆ ಖರ್ಚು ಮಾಡಿದ್ದಾರೆ ಎಂದು ಬಹಿರಂಗಪಡಿಸಲಿ. ಸರ್ಕಾರ ತಕ್ಷಣ ವೈದ್ಯರಿಗೆ ಸಂಬಳ ನೀಡದಿದ್ದರೆ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಯು.ಟಿ.ಖಾದರ್ ಎಚ್ಚರಿಕೆ ನೀಡಿದ್ದಾರೆ.

  • ಹಾಸನದಲ್ಲಿ ಕೊರೊನಾ ಮಹಾಮಾರಿ ಗೆದ್ದವರ ಭಾವುಕ ಮಾತು

    ಹಾಸನದಲ್ಲಿ ಕೊರೊನಾ ಮಹಾಮಾರಿ ಗೆದ್ದವರ ಭಾವುಕ ಮಾತು

    ಹಾಸನ: ಚಿಕ್ಕ ಮಕ್ಕಳು ಔಷಧಿ ನೀಡಿದರೆ ಕುಡಿಯಲ್ಲ. ಆರಂಭದಲ್ಲಿ ಏನಾಗುತ್ತೋ ಎಂಬ ಭಯ ಕಾಡಿತ್ತು ಆದರೆ ವೈದ್ಯರ ಸೇವೆಯಿಂದ ಗುಣಮುಖರಾಗಿದ್ದೇವೆ ಎಂದು ಕೊರೊನಾ ಗೆದ್ದು ಬಂದವರು ಭಾವುಕರಾಗಿ ವೈದ್ಯಕೀಯ ಸಿಬ್ಬಂದಿಗೆ ಕೈಮುಗಿದು ಗೌರವ ಸಲ್ಲಿಸಿದ ಸನ್ನಿವೇಶ ಹಾಸನದಲ್ಲಿ ಕಂಡು ಬಂದಿತ್ತು.

    ಕೊರೊನಾದಿಂದ ಗುಣಮುಖರಾದ 29 ಜನರನ್ನು ಹಾಸನದ ಹಿಮ್ಸ್ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಆರ್.ಗಿರೀಶ್, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಜನಪ್ರತಿನಿಧಿಗಳು ಹಾಜರಿದ್ದರು. ಕೊರೊನಾದಿಂದ ಗುಣಮುಖರಾಗಿ ಬಂದವರಿಗೆ ಹೂ ಕೊಟ್ಟು, ಚಪ್ಪಾಳೆ ತಟ್ಟಿ ಆತ್ಮಸ್ಥೈರ್ಯ ತುಂಬಲಾಯಿತು.

    ಮನೆಗೆ ತೆರಳುವ ಮುನ್ನ ಮಾತನಾಡಿದ ಕೊರೊನಾ ವಿನ್ನರ್ಸ್, ನಮ್ಮನ್ನು ಆಸ್ಪತ್ರೆಯಲ್ಲಿ ತುಂಬಾ ಚೆನ್ನಾಗಿ ನೋಡಿಕೊಂಡರು. ಕೊರೊನಾವನ್ನು ನಾವು ಹೆದರಿಸಬೇಕು. ನಾವು ಕೊರೊನಾಕ್ಕೆ ಹೆದರಬಾರದು ಎಂದು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ವೈದ್ಯರು ಮಾತನಾಡಿ, ವೈದ್ಯರಿಗೆ ನಿಜವಾದ ಖುಷಿ ಸಿಗುವುದು ನಾವು ಚಿಕಿತ್ಸೆ ಮಾಡಿದವರು ಗುಣಮುಖರಾದಾಗ. ಇವತ್ತು ಕೊರೊನಾ ಸೋಂಕಿತರು ಸಂಭ್ರಮಿಸುತ್ತಿರುವುದರಿಂದ ಎರಡು ಪಟ್ಟು ಸಂತೋಷ ಆಗುತ್ತಿದೆ ಎಂದರು.

  • ಕ್ವಾರೆಂಟೈನ್‍ನಲ್ಲಿದ್ದ ಗರ್ಭಿಣಿಗೆ ಸಿಗದ ಸೂಕ್ತ ಚಿಕಿತ್ಸೆ- ಹೊಟ್ಟೆಯಲ್ಲೇ ಪ್ರಾಣ ಬಿಟ್ಟ ಕಂದಮ್ಮ

    ಕ್ವಾರೆಂಟೈನ್‍ನಲ್ಲಿದ್ದ ಗರ್ಭಿಣಿಗೆ ಸಿಗದ ಸೂಕ್ತ ಚಿಕಿತ್ಸೆ- ಹೊಟ್ಟೆಯಲ್ಲೇ ಪ್ರಾಣ ಬಿಟ್ಟ ಕಂದಮ್ಮ

    ಮಂಗಳೂರು: ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ ಎಂಬ ಆರೋಪವೊಂದು ವೈದ್ಯರ ವಿರುದ್ಧ ಕೇಳಿಬಂದಿದೆ.

    ಮೇ 12ರಂದು ದುಬೈನಿಂದ ಗರ್ಭಿಣಿ ಏರ್ ಲಿಫ್ಟ್ ಆಗಿದ್ದರು. ಮಂಗಳೂರು ವಿಮಾನ ನಿಲ್ದಾಣದಿಂದ ಆಕೆಯನ್ನು ಹೊಟೇಲ್ ಕ್ವಾರಂಟೈನ್ ಆಗಿದ್ದರು. ಮರುದಿನ ನಡೆದ ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

    ಗರ್ಭಿಣಿಯ ಆರೋಗ್ಯ ತಪಾಸಣೆ ವಿಚಾರದಲ್ಲಿ ವೈದ್ಯರು ನಿರ್ಲಕ್ಷ್ಯ ವಹಿಸಿದ್ದು, ವರದಿ ನೆಗೆಟಿವ್ ಬಂದರೂ ಗರ್ಭಿಣಿಗೆ ಹೋಂ ಕ್ವಾರಂಟೈನ್ ಸಿಗಲಿಲ್ಲ. ಇಷ್ಟು ಮಾತ್ರವಲ್ಲದೆ ಮಂಗಳೂರಿನ ಕೆಲ ಖಾಸಗಿ ಆಸ್ಪತ್ರೆ ವೈದ್ಯರು ಕೂಡ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ.

    ಒಟ್ಟಿನಲ್ಲಿ ಎರಡನೇ ಟೆಸ್ಟ್ ನಲ್ಲಿ ಕೋವಿಡ್ ನೆಗೆಟಿವ್ ಬಂದರೂ ಚಿಕಿತ್ಸೆ ಸಿಗದೇ ಮಗು ಸಾವನ್ನಪ್ಪಿದೆ. ಇದಕ್ಕೆ ವೈದ್ಯರೇ ನೇರ ಹೊಣೆ ಎಂದು ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿ ಹಾವಿನ ಬೆನ್ನು ಮೂಳೆ ಮುರಿತ- ಶಸ್ತ್ರಚಿಕಿತ್ಸೆ ಮಾಡಿಸಿದ ರೈತ

    ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿ ಹಾವಿನ ಬೆನ್ನು ಮೂಳೆ ಮುರಿತ- ಶಸ್ತ್ರಚಿಕಿತ್ಸೆ ಮಾಡಿಸಿದ ರೈತ

    ಚಿಕ್ಕಮಗಳೂರು: ಜಮೀನು ಉಳುಮೆ ಮಾಡುವಾಗ ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿದ ಭಾರೀ ಗಾತ್ರದ ನಾಗರಹಾವಿಗೆ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ರೈತರೊಬ್ಬರು ಮಾನವೀಯತೆ ಮೆರೆದಿದ್ದಾರೆ.

    ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ರೈತ ಗೋಪಾಲಾಚಾರ್ ಅವರು ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ನೇಗಿಲಿಗೆ ಭೂಮಿಯೊಳಗಿದ್ದ ಬೃಹತ್ ಗಾತ್ರದ ನಾಗರಹಾವು ಸಿಲುಕಿಕೊಂಡಿದೆ. ನೇಗಿಲಿಗೆ ಸಿಕ್ಕ ನಾಗರಹಾವು ಬಿಡಿಸಿಕೊಳ್ಳಲಾಗದೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸಿದೆ. ಹಾವಿನ ಸ್ಥಿತಿ ಕಂಡ ಜಮೀನಿನ ಮಾಲೀಕ ಗೋಪಾಲಾಚಾರ್, ಕೂಡಲೇ ಕುದುರೆಗುಂಡಿಯ ಉರಗತಜ್ಞ ಹರೀಂದ್ರಾಗೆ ವಿಷಯ ಮುಟ್ಟಿಸಿದ್ದಾರೆ.

    ಸ್ಥಳಕ್ಕೆ ಬಂದ ಹರೀಂದ್ರ, ನೇಗಿಲಿಗೆ ಸಿಲುಕಿಕೊಂಡಿದ್ದ ನಾಗರಹಾವನ್ನು ಬಿಡಿಸಿ ಸ್ಥಳೀಯರಾದ ಅರುಣ್ ಹಾಗೂ ಸಾಜು ಅವರ ಸಹಾಯದಿಂದ ಎನ್.ಆರ್.ಪುರದ ಪಶು ಆಸ್ಪತ್ರೆಗೆ ತಂದಿದ್ದಾರೆ. ಪಶು ಆಸ್ಪತ್ರೆ ವೈದ್ಯ ವಿಜಯ್ ಕುಮಾರ್ ಹಾಗೂ ಶಿವಕುಮಾರ್ ಸುಮಾರು ಅರ್ಧ ಗಂಟೆಗಳ ಕಾಲ ಹಾವಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿದ ಹಾವು ಸುಮಾರು 11 ವರ್ಷದ್ದು. ಈ ಬೃಹತ್ ನಾಗರಹಾವು ಹಾವು ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿದ್ದರಿಂದ ಹಾವಿನ ತಲೆ, ಹೊಟ್ಟೆ ಭಾಗಕ್ಕೆ ತೀವ್ರ ಪೆಟ್ಟಾಗಿತ್ತು. ಹೀಗಾಗಿ ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಹಾವಿನ ಹೊಟ್ಟೆ ಭಾಗದಲ್ಲಿ ಸುಮಾರು ಒಂದು ಇಂಚಿನಷ್ಟು ಹೊಲಿಗೆ ಹಾಕಿದ್ದಾರೆ.

    ಬೆನ್ನಿನ ಒಂದು ಎಲುಬು ಮುರಿದಿದ್ದಕ್ಕೆ ಶಸ್ತ್ರ ಚಿಕಿತ್ಸೆ ಮಾಡಿದ್ದರಿಂದ ಹಾವಿಗೆ ಸುಮಾರು ಮೂರ್ನಾಲ್ಕು ದಿನಗಳ ಚಿಕಿತ್ಸೆಯ ಅಗತ್ಯವಿದ್ದು, ಪಶು ಆಸ್ಪತ್ರೆಯಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಸ್ತ್ರ ಚಿಕಿತ್ಸೆಯ ಬಳಿಕ ಹಾವನ್ನು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೇ ಇಡಬೇಕು, ಹಾವಿಗೆ ಮೂರು ಆ್ಯಂಟಿಬಯೋಟಿಕ್ ಹಾಕಬೇಕೆಂದು ಎಂದು ವೈದ್ಯರು ಹರೀಂದ್ರಾ ಅವರಿಗೆ ತಿಳಿಸಿದ್ದಾರೆ.

  • ಕಾಲಿನ ಬೆರಳುಗಳಲ್ಲಿ ಉರಿಯೂತ ಕೊರೊನಾದ ಹೊಸ ಲಕ್ಷಣ – ತಜ್ಞರ ಮಾಹಿತಿ

    ಕಾಲಿನ ಬೆರಳುಗಳಲ್ಲಿ ಉರಿಯೂತ ಕೊರೊನಾದ ಹೊಸ ಲಕ್ಷಣ – ತಜ್ಞರ ಮಾಹಿತಿ

    ನವದೆಹಲಿ: ಕೆಮ್ಮು, ನೆಗಡಿ, ಜ್ವರ, ಅಸ್ವಸ್ಥತೆ ಸೇರಿ ಹಲವು ಗುಣ ಲಕ್ಷಣಗಳನ್ನು ಹೊಂದಿರುವ ಕೊರೊನಾ ವೈರಸ್ ಸೋಂಕಿನ ಪಟ್ಟಿಗೆ ಮತ್ತೊಂದು ಹೊಸ ಲಕ್ಷಣವೊಂದು ಸೇರ್ಪಡೆಗೊಂಡಿದೆ. ಕಾಲು ಅಥಾವ ಕಾಲಿನ ಬೆರಳುಗಳಲ್ಲಿ ಉರಿಯೂತ ಕಂಡು ಬಂದರೆ ಅದು ಕೊರೊನಾ ವೈರಸ್‍ನ ಮತ್ತೊಂದು ಲಕ್ಷಣ ಎಂದು ತಜ್ಞರು ಹೇಳಿದ್ದಾರೆ.

    ಯುರೋಪ್ ಮತ್ತು ಅಮೆರಿಕದ ಚರ್ಮರೋಗದ ತಜ್ಞರು ಕೊರೊನಾ ವೈರಸ್ ಸೋಂಕಿನ ಹೊಸ ಲಕ್ಷಣವೊಂದನ್ನು ಗುರುತಿಸಿದ್ದಾರೆ. ನಿರಂತರ ಅಧ್ಯಯನದ ಬಳಿಕ ಈ ತಿರ್ಮಾನಕ್ಕೆ ಬರಲಾಗಿದೆ. ಇಟಲಿಯಲ್ಲಿ ಕೆಲವು ಮಕ್ಕಳು ಮತ್ತು ಮಧ್ಯವಯಸ್ಕ ರೋಗಿಗಳ ಬೆರಳು ಮತ್ತು ಕಾಲುಗಳಲ್ಲಿ ಉರಿಯೂತ ಕಂಡ ಬಳಿಕ ಈ ಬಗ್ಗೆ ಅಧ್ಯಯನ ನಡೆಸಲಾಗಿತ್ತು. ಈ ವೇಳೆ ಹೊಸ ಲಕ್ಷಣದ ಬಗ್ಗೆ ಮಾಹಿತಿ ತಿಳಿದುಬಂದಿದೆ.

    ಈ ಸ್ಥಿತಿಯನ್ನು ಫ್ರಾಸ್ಟ್ ಬೈಟ್ ಅಥವಾ ಪೆರ್ನಿಯೊ ಎಂದು ವೈದ್ಯರು ಕರೆದಿದ್ದಾರೆ. ಚಳಿ ಹೆಚ್ಚಿರುವ ಪ್ರದೇಶದಲ್ಲಿ ವಾಸಿಸುವ ಜನರ ಕಾಲುಗಳಲ್ಲಿ ಹೀಗೆ ಉರಿಯೂತ ಕಂಡುಬರುತ್ತದೆ. ಕಾಲಿನ ಬೆರಳುಗಳಲ್ಲಿನ ರಕ್ತನಾಳಗಳಲ್ಲಿ ಉಲ್ಬಣಗೊಳ್ಳುವ ಉರಿಯೂತ ಗಂಭೀರವಾದ ಸೆಳೆತವನ್ನು ಹೊಂದಿರುತ್ತದೆ.

    ಇಟಲಿಯಲ್ಲಿ ಕೋವಿಡ್-19 ರೋಗಿಗಳ ಹೆಚ್ಚಿನ ಸಾಂದ್ರತೆಯಿರುವ ಪ್ರದೇಶಗಳಲ್ಲಿ ಚರ್ಮರೋಗ ತಜ್ಞರು ಕಾಲು ಅಥವಾ ಕಾಲಿನ ಬೆರಳುಗಳಲ್ಲಿ ಉರಿಯೂತ ಸಮಸ್ಯ ಹೆಚ್ಚು ಪ್ರಚಲಿತದಲ್ಲಿ ಇರುವುದನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ ಈ ಸ್ಥಿತಿಗೆ ‘ಕೋವಿಡ್ ಟೋಸ್’ ಎಂದು ಅಡ್ಡ ಹೆಸರು ಇಟ್ಟಿದ್ದಾರೆ. ಅಮೆರಿಕನ್ ಅಕಾಡೆಮಿ ಆಫ್ ಡರ್ಮಾಟಾಲಜಿಸ್ಟ್ ಗೆ ಸಂಬಂಧಿಸಿದ ವೈದ್ಯರು ಕಾಲಿನ ಬೆರಳಲ್ಲಿ ಉರಿಯೂತ ಕಂಡು ಬಂದರೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಸಲಹೆ ನೀಡಿದ್ದಾರೆ.

  • ಮಹಾರಾಷ್ಟ್ರದಿಂದ ಬಂದ ವ್ಯಕ್ತಿ ಸಂಶಯಾಸ್ಪದ ಸಾವು

    ಮಹಾರಾಷ್ಟ್ರದಿಂದ ಬಂದ ವ್ಯಕ್ತಿ ಸಂಶಯಾಸ್ಪದ ಸಾವು

    – ಆತಂಕದಲ್ಲಿ ಕೆಎಂಸಿ ಮಣಿಪಾಲ ಆಸ್ಪತ್ರೆ

    ಉಡುಪಿ: ಮೇ ಮೊದಲ ವಾರದಲ್ಲಿ ಮಹಾರಾಷ್ಟ್ರದಿಂದ ಬಂದ ವ್ಯಕ್ತಿ ಅನಾರೋಗ್ಯದಿಂದ ಮೃತಪಟ್ಟಿದ್ದು, ಉಡುಪಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಕುಂದಾಪುರ ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಎರಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

    ಜಿಲ್ಲೆಯ ಕುಂದಾಪುರ ತಾಲೂಕಿನ ವ್ಯಕ್ತಿಯೊಬ್ಬರು ಮಹಾರಾಷ್ಟ್ರದಲ್ಲಿ ಹಲವು ವರ್ಷಗಳಿಂದ ನೆಲೆಸಿದ್ದರು. ಮೇ ಮೊದಲ ವಾರದಲ್ಲಿ ಅವರು ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ವಾಪಸ್ಸಾಗಿದ್ದಾರೆ. ಮನೆಯಲ್ಲಿದ್ದ ಸಂದರ್ಭ ವ್ಯಕ್ತಿಗೆ ಅನಾರೋಗ್ಯ ಬಾಧಿಸಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದರಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ವ್ಯಕ್ತಿಯನ್ನು ಶಿಫ್ಟ್ ಮಾಡಲಾಗಿತ್ತು. ಆದರೆ ಎರಡು ದಿನದ ಹಿಂದೆ ವ್ಯಕ್ತಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಹೀಗಾಗಿ ಮೃತ ವ್ಯಕ್ತಿಯ ಗಂಟಲ ದ್ರವವನ್ನು ತಪಾಸಣೆಗೆ ಮಂಗಳೂರಿಗೆ ಕಳುಹಿಸಲಾಗಿದೆ. ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ವರದಿ ವೈದ್ಯಾಧಿಕಾರಿಗಳ ಕೈ ಸೇರುವ ಸಾಧ್ಯತೆ ಇದೆ.

    ಕೊರೊನಾ ಪಾಸಿಟಿವ್ ಯಾವುದೇ ಲಕ್ಷಣಗಳು ವ್ಯಕ್ತಿಗೆ ಆರಂಭದ ಹಂತದಲ್ಲಿ ಇರಲಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಮೃತ ವೃದ್ಧನ ಗಂಟಲ ದ್ರವ ತಪಾಸಣೆ ವರದಿಗಾಗಿ ಉಡುಪಿ ಜಿಲ್ಲಾಡಳಿತ ಕಾಯುತ್ತಿದೆ. ಚಿಕಿತ್ಸೆ ಕೊಟ್ಟ ಮಣಿಪಾಲ ಕೆಎಂಸಿ ಸಿಬ್ಬಂದಿಯನ್ನು ಗುರುತಿಸುವ ಕೆಲಸ ಆಗುತ್ತಿದೆ.

  • ಬೆಂಗ್ಳೂರಲ್ಲಿ ಕೊರೊನಾ ಸೋಂಕಿತೆಗೆ ಹೆರಿಗೆ – ಜನ್ಮ ಕೊಟ್ಟ ತಕ್ಷಣ ತಾಯಿ, ಮಗು ಪ್ರತ್ಯೇಕಿಸಿ ಚಿಕಿತ್ಸೆ

    ಬೆಂಗ್ಳೂರಲ್ಲಿ ಕೊರೊನಾ ಸೋಂಕಿತೆಗೆ ಹೆರಿಗೆ – ಜನ್ಮ ಕೊಟ್ಟ ತಕ್ಷಣ ತಾಯಿ, ಮಗು ಪ್ರತ್ಯೇಕಿಸಿ ಚಿಕಿತ್ಸೆ

    ಬೆಂಗಳೂರು: ಪಾದರಾಯನಪುರ ನಿವಾಸಿ 34 ವರ್ಷದ ಕೊರೊನಾ ಸೋಂಕಿತ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಹುಟ್ಟಿದ ಮಗುವನ್ನು ವೈದ್ಯರು ತಾಯಿಯಿಂದ ಬೇರೆ ಮಾಡಿದ್ದಾರೆ. ಇದೀಗ ಒಂದು ದಿನದ ಮಗುವಿಗೂ ಕೋವಿಡ್ ಟೆಸ್ಟ್ ಮಾಡುತ್ತಿದ್ದು, ಮಗುವಿನ ಗಂಟಲು ದ್ರವ ತೆಗೆದುಕೊಂಡು ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ.

    ಮಗುವನ್ನ ಐಸೂಲೇಷನ್ ವಾರ್ಡಿನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ತಾಯಿಯನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡಿನಲ್ಲಿ ಇರಿಸಲಾಗಿದೆ. ಈ ಮೂಲಕ ಕೊರೊನಾ ಮಹಾ ಮಾರಿಯಿಂದ ತಾಯಿ, ಮಗು ದೂರ ದೂರವಾಗಿದ್ದಾರೆ. ತಂದೆ-ತಾಯಿ ಅಪ್ಪುಗೆಯಲ್ಲಿ ಇರಬೇಕಾದ ಮಗು ಈಗ ಐಸೂಲೇಷನ್ ವಾರ್ಡಿನಲ್ಲಿದೆ.

    ಮಗುವಿಗೆ ಚಿಕಿತ್ಸೆ ಹೇಗೆ?
    ಮೊದಲಿಗೆ ಮಗುವಿನ ಗಂಟಲು ದ್ರವವನ್ನು ತೆಗೆದುಕೊಂಡು ವೈದ್ಯರು ಪರೀಕ್ಷೆ ಮಾಡಿದ್ದಾರೆ. ಗಂಟಲು ದ್ರವ ಪರೀಕ್ಷೆ ಬಳಿಕ ಎರಡನೇ ಹಂತವಾಗಿ ಕಂದಮ್ಮನ ರಕ್ತವನ್ನು ತೆಗೆದುಕೊಂಡು ಪರೀಕ್ಷೆಗೆ ಕಳಿಸಲಿದ್ದಾರೆ. ಅಲ್ಲದೇ ಉಸಿರಾಟದ ಸಮಸ್ಯೆ ಇದಿಯಾ ಎಂದು ಪರೀಕ್ಷೆ ಮಾಡುತ್ತಾರೆ. ನಂತರ ನ್ಯೂಮೋನಿಯಾ ಚೆಕ್ ಮಾಡಲಿದ್ದಾರೆ. ಒಂದು ದಿನದ ಕಂದಮ್ಮನಿಗೆ ಯಾವ ಸಮಸ್ಯೆ ಪತ್ತೆಯಾಗುತ್ತೋ ಆ ಸಮಸ್ಯೆಗೆ ವೈದ್ಯರು ಚಿಕಿತ್ಸೆ ನೀಡುತ್ತಾರೆ.

    ಅಮ್ಮನ ಅಪ್ಪುಗೆಯಲ್ಲಿ ಇರಬೇಕಾದ ಒಂದು ದಿನದ ಮಗುವಿಗೆ ಹೈ ಟ್ರೀಟ್‍ಮೆಂಟ್ ನೀಡಲಾಗುತ್ತದೆ. ಈ ಸಮಯದಲ್ಲಿ ತಾಯಿ ಎದೆ ಹಾಲಿನಿಂದ ಕೊರೊನಾ ಹರಡಲ್ಲ. ಬದಲಾಗಿ ತಾಯಿ ಹತ್ತಿರದಿಂದ ಮಗುವಿಗೆ ಹಾಲು ಕೊಡುವುದರಿಂದ ಉಸಿರಾಟದ ಮೂಲಕ ಕೊರೊನಾ ಹರಡುತ್ತೆ. ಹೀಗಾಗಿ ತಾಯಿ ಮಗುವನ್ನ ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಮಗುವಿಗೆ ಹಾಲಿನ ಪೌಡರ್ ನೀಡಲಾಗುತ್ತಿದ್ದು, ಮಗು ಹುಟ್ಟಿದಾಗಲೇ 3 ಕೆ.ಜಿ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

  • ಶಸ್ತ್ರಚಿಕಿತ್ಸೆಗೆ ಬಂದವನಿಗೆ ಕೊರೊನಾ- ವೈದರೂ ಸೇರಿ 22 ಮಂದಿ ಕಿಮ್ಸ್ ಸಿಬ್ಬಂದಿ ಕ್ವಾರಂಟೈನ್

    ಶಸ್ತ್ರಚಿಕಿತ್ಸೆಗೆ ಬಂದವನಿಗೆ ಕೊರೊನಾ- ವೈದರೂ ಸೇರಿ 22 ಮಂದಿ ಕಿಮ್ಸ್ ಸಿಬ್ಬಂದಿ ಕ್ವಾರಂಟೈನ್

    ಹುಬ್ಬಳ್ಳಿ: ಧಾರವಾಡದ ಹೊಸಯಲ್ಲಾಪೂರ ಕೋಳಿಕೆರೆಯ 35 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಪ್ರಕರಣ ದೊಡ್ಡ ಅವಾಂತರವನ್ನೇ ಸೃಷ್ಟಿಸಿದ್ದು, ಕಿಮ್ಸ್ ಸಿಬ್ಬಂದಿಗೂ ಆತಂಕವನ್ನು ತಂದೊಡ್ಡಿದೆ.

    ಒಂದೆಡೆ ಸೋಂಕಿತನಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿದ್ದರೂ ಈ ಸೋಂಕು ದೃಢಪಟ್ಟಿರುವುದು ಅಚ್ಚರಿ ಮೂಡಿಸಿದೆ. ಕಳೆದ ಏಪ್ರಿಲ್ 30ರಂದು ಬೇರೆ ರೋಗ ಲಕ್ಷಣಗಳುಳ್ಳ ಈ ವ್ಯಕ್ತಿ ಸಿವಿಲ್ ಆಸ್ಪತ್ರೆಯಲ್ಲಿ ಒಂದು ದಿನದ ಚಿಕಿತ್ಸೆ ಪಡೆದಿದ್ದಾನೆ. ಅಲ್ಲದೆ ಹೊಟ್ಟೆ ಹಾಗೂ ಲಿವರ್ ಸಂಬಂಧಿಸಿದ ಕಾಯಿಲೆ ಹಿನ್ನೆಲೆಯಲ್ಲಿ ಮೇ 01ರಂದು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಗೆ ಮೇ 07ರಂದು ಸೋಂಕು ದೃಢಪಟ್ಟಿದ್ದು, ಕಿಮ್ಸ್ ಸಿಬ್ಬಂದಿಗೆ ಆತಂಕವನ್ನುಂಟು ಮಾಡಿದೆ.

    ಸೋಂಕಿತನಿಗೆ ಪಿರಿನೋನೈಟಸ್ (ಹೊಟ್ಟೆ ಹಾಗೂ ಲಿವರ್ ಸಂಬಂಧಿತ ಕಾಯಿಲೆ) ಆಪರೇಷನ್ ಮಾಡಿದ ವೈದ್ಯರಲ್ಲಿ ಆತಂಕ ಹೆಚ್ಚಾಗಿದ್ದು, ಸೋಂಕಿತನಿಗೆ ಆಪರೇಷನ್ ಮಾಡಿದ 12 ಡಾಕ್ಟರ್ ಹಾಗೂ 6 ಪಿಜಿ ವಿದ್ಯಾರ್ಥಿಗಳು ಹಾಗೂ ನಾಲ್ಕು ನರ್ಸ್ ಗಳನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

    ಅಲ್ಲದೆ ಶಸ್ತ್ರಚಿಕಿತ್ಸೆ ಮಾಡಿದ ಶಸ್ತ್ರಚಿಕಿತ್ಸೆ ವಿಭಾಗವನ್ನು ಕೂಡ ಸಿಲ್‍ಡೌನ್ ಮಾಡಲಾಗಿದೆ. ಧಾರವಾಡದ ಹೊಸ ಯಲ್ಲಾಪೂರದ 35 ವರ್ಷದ ವ್ಯಾಪಾರಿಯಿಂದ ಕಿಮ್ಸ್ ಸಿಬ್ಬಂದಿಗೆ ಆತಂಕ ಸೃಷ್ಟಿಯಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೋಂಕಿತನಿಗೆ ಆಪರೇಷನ್ ನಂತರ ಕೊರೊನಾ ಸೋಂಕು ದೃಢಪಟ್ಟಿದ್ದು, ಈಗ ಕಿಮ್ಸ್ ಸಿಬ್ಬಂದಿಗೆ ಕೊರೊನಾ ಭಯ ನಿರ್ಮಾಣವಾಗಿದೆ.

  • ಕೊರೊನಾ ರೋಗಿಗಳಿಗೆ ಆಕ್ಸಿಜನ್ ಹೆಲ್ಮೆಟ್- ಮಂಗ್ಳೂರು ವೈದ್ಯರ ಸಾಧನೆ

    ಕೊರೊನಾ ರೋಗಿಗಳಿಗೆ ಆಕ್ಸಿಜನ್ ಹೆಲ್ಮೆಟ್- ಮಂಗ್ಳೂರು ವೈದ್ಯರ ಸಾಧನೆ

    -ಕೊರೋನಾ ವಾರಿಯರ್ಸ್‍ಗೂ ಸಹಕಾರಿಯಾಗಲಿದೆ ರಕ್ಷಾ ಕವಚ

    ಮಂಗಳೂರು: ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ರೋಗಿಗಳ ನೆರವಿಗಾಗಿ ಜೀವ ರಕ್ಷಕ ಸಾಧನವೊಂದನ್ನು ಮಂಗಳೂರಿನ ವೈದ್ಯರ ತಂಡ ಅವಿಷ್ಕಾರಿಸಿದೆ.

    ನಗರದ ಮಂಗಳಾ ಹಾಸ್ಪಿಟಲ್‍ನ ಮೆಡಿಕಲ್ ಡೈರೆಕ್ಟರ್ ಡಾ.ಗಣಪತಿ ಅವರ ತಂಡ ಆಕ್ಸಿಜನ್ ಬಬ್ಬಲ್ ಹೆಲ್ಮೆಟ್‍ನ್ನು ರೆಡಿ ಮಾಡಿದೆ. ವೆಂಟಿಲೇಟರ್ ಅಳವಡಿಸಿ ಕೃತಕ ಉಸಿರಾಟ ನೀಡಬೇಕಾದ ರೋಗಿಗಳಿಗೆ ಈ ಸಾಧನ ಬಹಳಷ್ಟು ಉಪಯೋಗಕಾರಿಯಾಗಲಿದೆ. ಕೊರೊನಾ ಸೋಂಕಿನಿಂದ ರೋಗಿಯ ಆರೋಗ್ಯ ಸ್ಥಿತಿ ಗಂಭೀರ ಆಗಿ ಉಸಿರಾಟ ಸಮಸ್ಯೆ ಎದುರಾದಾಗ ಕೃತಕ ಉಸಿರಾಟದ ವ್ಯವಸ್ಧೆ ಮಾಡಬೇಕಾಗುತ್ತದೆ. ಈ ಸಂದರ್ಭ ಶ್ವಾಸನಾಳಕ್ಕೆ ಟ್ಯೂಬ್ ಹಾಕಿ ವೆಂಟಿಲೇಟರ್ ಅಳವಡಿಸಬೇಕಾಗುತ್ತದೆ. ಆದರೆ ಈ ರೀತಿ ಮಾಡಿದ ಪ್ರಕರಣದಲ್ಲಿ ಮರಣ ಪ್ರಮಾಣ ಹೆಚ್ಚಾಗಿದೆ. ಇದಕ್ಕಾಗಿ ಆಕ್ಸಿಜನ್ ಬಬ್ಬಲ್ ಹೆಲ್ಮೆಟ್ ಬಳಕೆ ಮಾಡಿದರೆ ರೋಗಿ ಚೇತರಿಕೆಗೆ ಹೆಚ್ಚು ಸಹಕಾರಿಯಾಗಲಿದೆ ಎಂಬುವುದು ವೈದ್ಯರ ಮಾತು.

    ಶ್ವಾಸನಾಳಕ್ಕೆ ಟ್ಯೂಬ್ ಅಳವಡಿಸುವ ಬದಲು ಬಬ್ಬಲ್ ಹೆಲ್ಮೆಟ್ ಒಳಗೆ ಆಕ್ಸಿಜನ್ ಸಪ್ಲೈ ಮಾಡುವ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್ ಹೊರಗೆ ಹೋಗದಾಗೆ ರಬ್ಬರ್ ಶೀಟ್‍ನ್ನು ಹೆಲ್ಮೆಟ್‍ನಲ್ಲಿ ಅಳವಡಿಸಲಾಗಿದೆ. ವಿದೇಶಗಳಲ್ಲಿ ಇದು ಬಳಕೆಯಲ್ಲಿದ್ದು, ಆದರೆ ಇದೀಗ ಅಲ್ಲಿಂದ ಅಮದು ಮಾಡಿ ಭಾರತಕ್ಕೆ ತರಿಸುವುದು ಕಷ್ಟಸಾಧ್ಯ. ಆದ್ದರಿಂದ ಅದೇ ಮಾಡೆಲ್‍ನ್ನು ಇಟ್ಟುಕೊಂಡು ಸ್ಥಳೀಯವಾಗಿ ಸಿಗುವ ವಸ್ತುಗಳನ್ನು ಬಳಸಿಕೊಂಡು ವೈದ್ಯರ ತಂಡ ಸಾಧನವನ್ನು ಸಿದ್ಧಪಡಿಸಿದೆ.

    ಬಬ್ಬಲ್ ಹೆಲ್ಮೆಟ್‍ನಲ್ಲಿ ರೋಗಿಗೆ ಸುಲಭವಾಗಿ ಉಸಿರಾಡಬಹುದು. ಕೊರೊನಾ ರೋಗಿಯಿಂದ ಐಸಿಯುನಲ್ಲಿರುವ ಇತರ ರೋಗಿಗಳಿಗೆ, ಚಿಕಿತ್ಸೆ ನೀಡುವ ವೈದ್ಯರಿಗೆ, ದಾದಿಯರಿಗೆ ಸೋಂಕು ಹರಡುವ ಸಾಧ್ಯತೆಯೂ ತುಂಬಾ ಕಡಿಮೆಯಿದೆ. ಇದರ ಜೊತೆ ಈ ವೈದ್ಯರ ತಂಡ ಕೂಡ ಸ್ಮಾಕ್ಲಿಂಗ್ ಮಾಸ್ಕ್ ನ್ನು ಸಹ ಕೃತಕ ಉಸಿರಾಟ ವ್ಯವಸ್ಥೆಗೆ ಬಳಸುವಂತೆ ಸಿದ್ಧಪಡಿಸಿದ್ದಾರೆ. ಇದೀಗ ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ರಕ್ಷಾ ಕವಚ ಸುಮಾರು 6 ಸಾವಿರ ರೂ.ಗೆ ಲಭ್ಯವಾಗಲಿದೆ. ಈಗಾಗಲೇ ಸದ್ಯದ ಸ್ಥಿತಿಯಲ್ಲಿ ಇವುಗಳ ಅಗತ್ಯವಿರುವ ಕಾರಣ ವೈದರ ತಂಡ ಹೆಚ್ಚಿನ ಸಂಖ್ಯೆಯಲ್ಲಿ ಇವುಗಳನ್ನು ತಯಾರಿ ಮಾಡುತ್ತಿರುವುದಾಗಿ ಬಬ್ಬಲ್ ಹೆಲ್ಮೆಟ್ ತಯಾರಕ ಕೃಷ್ಣದಾಸ್ ಕಾಮತ್ ತಿಳಿಸಿದ್ದಾರೆ.