Tag: doctors

  • ಆಸ್ಪತ್ರೆಗೆ ಶಾಸಕ ದಿಢೀರ್ ಭೇಟಿ – ಅವ್ಯವಸ್ಥೆ ಕಂಡು ವೈದ್ಯರಿಗೆ ಕ್ಲಾಸ್

    ಆಸ್ಪತ್ರೆಗೆ ಶಾಸಕ ದಿಢೀರ್ ಭೇಟಿ – ಅವ್ಯವಸ್ಥೆ ಕಂಡು ವೈದ್ಯರಿಗೆ ಕ್ಲಾಸ್

    ರಾಯಚೂರು: ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸಿಇಒ ಹಾಗೂ ಶಾಸಕ ದಿಢೀರ್ ಭೇಟಿ ನೀಡಿ ವೈದ್ಯರಿಗೆ ತರಾಟೆ ತೆಗೆದುಕೊಂಡರು.

    ಜಿಲ್ಲಾ ಪಂಚಾಯ್ತಿ ಸಿಇಒ ಲಕ್ಷ್ಮೀಕಾಂತ ರೆಡ್ಡಿ ಹಾಗೂ ಶಾಸಕ ಡಿ.ಎಸ್ ಹೂಲಗೇರಿ ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಆಸ್ಪತ್ರೆ ಅವ್ಯವಸ್ಥೆ ಕಂಡು ಶಾಸಕ ಹೂಲಗೇರಿ ವೈದ್ಯರಿಗೆ ಕ್ಲಾಸ್ ತೆಗೆದುಕೊಂಡರು.

    ಆಸ್ಪತ್ರೆಯ ಅಶುಚಿತ್ವದ ಬಗ್ಗೆ ಡಿ.ಎಸ್ ಹೂಲಗೇರಿ ಅವರು ಸಿಡಿಮಿಡಿಗೊಂಡರು. ಕೆಲ ದಿನಗಳ ಹಿಂದಷ್ಟೇ ಡಿಎಚ್‍ಓ ಭೇಟಿ ನೀಡಿ ಸ್ವಚ್ಚತೆಯ ಬಗ್ಗೆ ಆಸ್ಪತ್ರೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದರು. ಆದರೆ ಆಸ್ಪತ್ರೆ ಸಿಬ್ಬಂದಿ ಮೇಲಾಧಿಕಾರಿಗಳ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ಕೊಡಲಿಲ್ಲ.

    100 ಹಾಸಿಗೆಗಳನ್ನು ಹೊಂದಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಕನಿಷ್ಟ ಸೌಲಭ್ಯಗಳಿಲ್ಲ. ಈ ಆಸ್ಪತ್ರೆಯಲ್ಲಿ ಇರುವ 6 ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಾರೆ. ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಲ್ಲದೇ ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗೆ ತೆರಳಬೇಕು. ಹೀಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಡಿ.ಎಸ್ ಹೂಲಗೇರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ನಿರ್ಲಕ್ಷ್ಯಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

  • ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ- ಆಸ್ಪತ್ರೆಯಿಂದ ಡಿಸ್ಚಾರ್ಜ್

    ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ- ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮೈಸೂರು: ಹಲ್ಲೆಗೆ ಒಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ವೀರ್ ಸೇಠ್ ಅವರು ಸೋಮವಾರ ರಾತ್ರಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ವೈದ್ಯರು ಡಿಸ್ಚಾರ್ಜ್ ಆಗುವಂತೆ ಸೂಚಿಸಿದ್ದು, ಮನೆಯಲ್ಲೆ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ.

    ಕಳೆದ ಎಂಟು ದಿನಗಳಿಂದ ಶಾಸಕರು ಚಿಕಿತ್ಸೆ ಪಡೆಯುತ್ತಿದ್ದರು. ಕೊಲೆ ಯತ್ನದಿಂದಾಗಿ ಶಾಸಕರ ಕುತ್ತಿಗೆ ಹಾಗೂ ಕಿವಿ ಭಾಗಕ್ಕೆ ಗಾಯವಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ನವೆಂಬರ್ 18ರ ರಾತ್ರಿಯಿಂದ ಶಾಸಕರಿಗೆ ಅಳವಡಿಸಿದ್ದ ವೆಂಟಿಲೇಟರ್ ತೆಗೆಯಲಾಗಿತ್ತು. ಇದೀಗ ತನ್ವೀರ್ ಆರೋಗ್ಯದಲ್ಲಿ ಆಸ್ಪತ್ರೆಯಿಂದ ಚೇತರಿಕೆ ಕಂಡಿದ್ದು, ಡಿಸ್ಚಾರ್ಜ್ ಆಗಿದ್ದಾರೆ.

    ಈ ವಿಚಾರವಾಗಿ ಅಂದು ಮಾತನಾಡಿದ್ದ ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯ ಡಾ.ಉಪೇಂದ್ರ ಶಣೈ, ಕುತ್ತಿಗೆ ಭಾಗಕ್ಕೆ ಚಾಕು ಹಾಕಿರುವ ಕಾರಣ ತೀವ್ರವಾಗಿ ಪೆಟ್ಟಾಗಿದೆ. ತನ್ವೀರ್ ಸೇಠ್ ಅವರ ರಕ್ತನಾಳ ನರಗಳಿಗೆ ತೀವ್ರ ಗಾಯವಾಗಿದೆ. ಬಿಪಿ, ಶುಗರ್ ಸಮಾನ್ಯ ಸ್ಥಿತಿಗೆ ತರಲು ಪ್ರಯತ್ನ ಪಡುತ್ತಿದ್ದೇವೆ. ಆಗಲೇ ಒಂದು ಶಸ್ತ್ರ ಚಿಕಿತ್ಸೆಯನ್ನು ಮಾಡಿದ್ದೇವೆ. ಮುಂದಿನ 48 ಗಂಟೆಯವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.

    ನವೆಂಬರ್ 17ರ ರಾತ್ರಿ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

  • ಹೊಟ್ಟೆ ಸೇರಿದ್ದ ಪೊರಕೆಯ ಹಿಡಿ ತೆಗೆದ ವೈದ್ಯರು

    ಹೊಟ್ಟೆ ಸೇರಿದ್ದ ಪೊರಕೆಯ ಹಿಡಿ ತೆಗೆದ ವೈದ್ಯರು

    ರಾಮನಗರ: ಜಿಲ್ಲೆಯಲ್ಲಿ ಯುವಕನೊಬ್ಬನ ಹೊಟ್ಟೆಯ ಒಳಗಿದ್ದ ಪೊರಕೆಯ ಹಿಡಿಯನ್ನು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿ ಹೊರತೆರೆದಿರುವ ಘಟನೆ ನಡೆದಿದೆ.

    ಮೆಹಬೂಬ್ ನಗರದ ನಿವಾಸಿ ಇರ್ಫಾನ್ ಷರೀಫ್ (26) ಹೊಟ್ಟೆಗೆ ಪೊರಕೆಯ ಹಿಡಿ ಸೇರಿತ್ತು. ರಾಮನಗರದ ನಾರಾಯಣ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಪೊರಕೆಯ ಹಿಡಿಯನ್ನು ಹೊರತೆಗೆದಿದ್ದಾರೆ.

    ಮೂರು ದಿನದ ಹಿಂದೆ ಗುದದ್ವಾರದ ಮೂಲಕ ಇರ್ಫಾನ್ ಷರೀಫ್ ಹೊಟ್ಟೆಗೆ 21 ಸೆಂ.ಮೀ. ಪೊರಕೆಯ ಹಿಡಿ ಹೊಕ್ಕಿತ್ತು. ಹೊಟ್ಟೆ ಸೇರಿದ್ದ ಪೊರಕೆಯ ಹಿಡಿ ಕರುಳಿನವರೆಗೂ ತಲುಪಿತ್ತು. ಇದರಿಂದ ಕರುಳಿನ ಭಾಗಕ್ಕೆ ತುಂಬಾ ತೊಂದರೆಯಾಗುತ್ತಿತ್ತು. ಹೀಗಾಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದಾಗ ಹೊಟ್ಟೆಗೆ ಪೊರಕೆ ಹಿಡಿ ಸೇರಿರುವುದು ಕಂಡು ಬಂದಿದೆ.

    ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ ಡಾ.ಎಸ್.ವಿ. ನಾರಾಯಣಸ್ವಾಮಿರವರು ಪೊರಕೆಯ ಹಿಡಿಯನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಬೇರೆ ಹುಡುಗರು ಕರೆದುಕೊಂಡು ಹೋಗಿ ಹಾಕಿದ್ದಾರೆ ಎಂದು ಪೋಷಕರು ವೈದ್ಯರ ಬಳಿ ಹೇಳಿದ್ದಾರೆ.

  • ಸಾವು ಬದುಕಿನ ಮಧ್ಯೆ ಹೋರಾಟ – ತಂದೆಗೆ ಲಿವರ್ ನೀಡಿ ಮರುಜನ್ಮ ನೀಡಿದ ಮಗಳು

    ಸಾವು ಬದುಕಿನ ಮಧ್ಯೆ ಹೋರಾಟ – ತಂದೆಗೆ ಲಿವರ್ ನೀಡಿ ಮರುಜನ್ಮ ನೀಡಿದ ಮಗಳು

    ಚೆನ್ನೈ: ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ.

    ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಲಿವರ್ ಡ್ಯಾಮೇಜ್ ಆಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ತಂದೆಗೆ ಮಗಳ ಲಿವರ್ ನ ಒಂದು ಭಾಗವನ್ನು ಕಸಿ ಮಾಡುವಲ್ಲಿ ಚೆನ್ನೈನ ಜಿಇಎಂ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯಲ್ಲಿ ಕೇವಲ ಪಿತ್ತಜನಕಾಂಗದ ಒಂದು ಭಾಗವನ್ನು ಮಾತ್ರ ಕಸಿ ಮಾಡಲಾಗಿದೆ.

    ಈ ವಿಚಾರದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಇಎಂ ಆಸ್ಪತ್ರೆಯ ವೈದ್ಯರು, ರೋಗಿಗೆ ಲಿವರ್ ನ ಒಂದು ಭಾಗ ಮಾತ್ರ ಡ್ಯಾಮೇಜ್ ಆಗಿ ಕೊನೆಯ ಹಂತ ತಲುಪಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಲಿವರ್ ಸಿಗುತ್ತಾ ಅಂತ ದಾನಿಗಳಿಗೆ ಕಾಯುತ್ತಿದ್ದೆವು. ಆದರೆ ದಾನಿಗಳು ಸಿಗದ ಕಾರಣ ಮಗಳು ಹತಾಶೆಗೊಂಡು ತಂದೆಯ ಸ್ಥಿತಿಯನ್ನು ನೋಡಿ ನಾನೇ ನನ್ನ ಅಂಗವನ್ನು ದಾನ ಮಾಡುತ್ತೇನೆ ಎಂದು ಮಗಳು ಮುಂದೆ ಬಂದಳು ಎಂದು ಹೇಳಿದ್ದಾರೆ.

    ಮಗಳು ಈ ನಿರ್ಧಾರಕ್ಕೆ ಕುಟುಂಬದ ಸದಸ್ಯರು ಒಪ್ಪಲಿಲ್ಲ. ಆಕೆ ಇನ್ನೂ ಮದುವೆಯಾಗಿಲ್ಲ. ಶಸ್ತ್ರಚಿಕಿತ್ಸೆ ಮಾಡಿದರೆ ಹೊಟ್ಟೆ ಭಾಗದಲ್ಲಿ ಮಾರ್ಕ್ ಆಗುತ್ತದೆ. ಈ ರೀತಿ ಆದರೆ ಮುಂದೆ ಈಕೆಯನ್ನು ಯಾರು ವಿವಾಹ ಆಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು. ಆದರೆ ನಾವು ಆಕೆ ಕುಟುಂಬದವರಿಗೆ ಶಸ್ತ್ರಚಿಕಿತ್ಸೆಯ ವಿಧಾನವನ್ನು ವಿವರಿಸಿದ್ದೇವೆ. ಮತ್ತು ಆದರ ಕಾರ್ಯ ವಿಧಾನದ ಬಗ್ಗೆಯೂ ಅರ್ಥವಾಗುವಂತೆ ವಿವರಿಸಿ ಹೇಳಿದಾಗ ಅವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದರು ಎಂದು ವೈದ್ಯರು ಹೇಳಿದ್ದಾರೆ.

    ಇದೇ ಮೊದಲ ಬಾರಿಗೆ ಭಾರತದಲ್ಲಿ ಡಾ. ಸಿ ಪಳನಿವೆಲು ಮತ್ತು ಅವರ ತಂಡವು ಲ್ಯಾಪರೊಸ್ಕೋಪಿಕ್ ಪಿತ್ತಜನಕಾಂಗದ ಕಸಿ ಮಾಡಿದೆ. ಲಿವರಿನ ಬಲ ಅರ್ಧವನ್ನು ಮೂರೂವರೆ ಗಂಟೆಗಳಲ್ಲಿ ಯಶಸ್ವಿಯಾಗಿ ಬೇರ್ಪಡಿಸಿ ನಂತರ ತಂದೆಗೆ ಮಗಳ ಪಿತ್ತಜನಕಾಂಗದ ಅರ್ಧ ಭಾಗವನ್ನು ಜೋಡಣೆ ಮಾಡಲಾಗಿದೆ ಎಂದು ವೈದ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ವೈದ್ಯರ ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಭೇಟಿಯಾಗಿ ಈ ಕೆಲಸದ ಬಗ್ಗೆ ವಿವರಿಸಿದ್ದಾರೆ. ವೈದ್ಯರ ಈ ಸಾಧನೆಯನ್ನು ಮೆಚ್ಚಿರುವ ಪಳನಿಸ್ವಾಮಿ ಅವರು ವೈದ್ಯರ ಜೊತೆ ತಂದೆಗೆ ಅಂಗವನ್ನು ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿಯನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

  • 16 ದಿನದಲ್ಲಿ ಒಂದೇ ಗ್ರಾಮದ 11 ಜನರ ನಿಗೂಢ ಸಾವು- ಗ್ರಾಮಸ್ಥರಲ್ಲಿ ಶುರುವಾಯ್ತು ಆತಂಕ

    16 ದಿನದಲ್ಲಿ ಒಂದೇ ಗ್ರಾಮದ 11 ಜನರ ನಿಗೂಢ ಸಾವು- ಗ್ರಾಮಸ್ಥರಲ್ಲಿ ಶುರುವಾಯ್ತು ಆತಂಕ

    ಕೋಲಾರ: ಗ್ರಾಮದಲ್ಲಿ ಕಳೆದ 16 ದಿನಗಳಿಂದ ನಡೆಯುತ್ತಿರುವ ಸರಣಿ ನಿಗೂಢ ಸಾವು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದ ಘಟನೆ ಮುಳಬಾಗಿಲು ತಾಲೂಕಿನಲ್ಲಿ ನಡೆದಿದೆ.

    ಆಂಧ್ರಪ್ರದೇಶ ಗಡಿಭಾಗಕ್ಕೆ ಹೊಂದಿಕೊಂಡಿರುವ ಚಮಕಲಹಳ್ಳಿಯಲ್ಲಿ 16 ದಿನದಲ್ಲಿ 11 ಜನರು ನಿಗೂಢವಾಗಿ ಮೃತಪಟ್ಟಿದ್ದಾರೆ. ಆರೋಗ್ಯವಾಗಿದ್ದ ಜನರೇ ಕೆಲವು ದಿನಗಳ ಹಿಂದೆ ಕಾಣಿಸಿಕೊಂಡ ಸಣ್ಣ-ಪುಟ್ಟ ಕಾಯಿಲೆ ನೆಪ ಹೇಳಿಕೊಂಡು ಆಸ್ಪತ್ರೆಗಳಿಗೆ ಹೋಗುವ ಮುನ್ನವೇ ಜನರು ಸಾವನ್ನಪ್ಪುತ್ತಿದ್ದಾರೆ.

    ಮುಳಬಾಗಿಲು ತಾಲೂಕಿನಲ್ಲಿ ಚಮಕಲಹಳ್ಳಿಯ ನಿವಾಸಿ ನಿಸ್ಸಾರ್ (38), ಖಾದರ್ (46), ಶಹೀದಾ (23), ಅಕ್ಬರ್ ಬೇಗ್ (40), ಮಂಜುನಾಥ್ (28), ಹೈದರ್ (90), ಅಮೀನ್ ತಾಜ್ (95), ಖಾದರ್ ಪಾಷಾ (65), ನಜೀಬ್ (68), ನವಾಜ್ ಬೇಗ್ (52), ಫಯಾಜ್ (37) ಮೃತ ದುರ್ದೈವಿಗಳು. ಈ ಪೈಕಿ ಕೆಲವರು ಹೊಟ್ಟೆನೋವು ಬಂದು ಪ್ರಾಣಬಿಟ್ಟರೆ, ಮತ್ತೆ ಕೆಲವರು ವಾಂತಿ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಇಬ್ಬರು ದೀರ್ಘಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

    ಗ್ರಾಮದಲ್ಲಿ ನಡೆಯುತ್ತಿರುವ ನಿಗೂಢ ಸರಣಿ ಸಾವಿನಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಯಾವಾಗ ಯಾರ ಮನೆಯಲ್ಲಿ ಸಾವು ಸಂಭವಿಸುತ್ತದೆಯೋ ಎನ್ನುವ ಭಯದಲ್ಲಿ ಜೀವನ ಕಳೆಯುತ್ತಿದ್ದಾರೆ. ಸಂಜೆಯಾದರೆ ಮನೆಯಿಂದ ಹೊರಗೆ ಹೋಗಲು ಚಮಕಲಹಳ್ಳಿಯ ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದಾರೆ.

    ಜಿಲ್ಲಾ ಆರೋಗ್ಯಾಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಚಮಕಲಹಳ್ಳಿಯ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಅವರ ಕ್ಷೇತ್ರವಾದ ಚಮಕಲಹಳ್ಳಿ ಗ್ರಾಮದಲ್ಲಿ ಸುಮಾರು 800 ಮನೆಗಳಿವೆ. ಅಲ್ಪಸಂಖ್ಯಾತರೆ ಹೆಚ್ಚಿರುವ ಈ ಗ್ರಾಮದಲ್ಲಿ, ಮೃತಪಟ್ಟವರಲ್ಲಿ ಹೆಚ್ಚಿನ ಜನರು ಕೂಡ ಮುಸ್ಲಿಂ ಸಮುದಾಯದವರೇ ಆಗಿದ್ದಾರೆ.

    ಗ್ರಾಮದಲ್ಲಿ ಸ್ವಚ್ಛತೆ ಕೊರತೆ ಅಥವಾ ಬೇರೆ ಯಾವುದೋ ಸಾಂಕ್ರಾಮಿಕ ರೋಗದಿಂದ ಸಾವು ಸಂಭವಿಸುತ್ತಿರಬಹುದು ಎಂಬ ಶಂಕೆ ವ್ಯಕ್ತವಾಗಿಲ್ಲ. ಈ ವಿಷಯ ತಿಳಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯಕುಮಾರ್ ಸೇರಿದಂತೆ ವೈದ್ಯರ ತಂಡ ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ ಗ್ರಾಮದಲ್ಲಿ ಸಣ್ಣ ಪುಟ್ಟ ರೋಗ ಲಕ್ಷಣ ಇರುವವರ ರಕ್ತ ಹಾಗೂ ನೀರಿನ ಮಾದರಿಗಳನ್ನು ಸಂಗ್ರಹಿಸಿಕೊಂಡು ಹೋಗಿದ್ದಾರೆ. ಜೊತೆಗೆ ನಾಳೆಯಿಂದ ಗ್ರಾಮದಲ್ಲಿ ವೈದ್ಯರ ತಂಡ ಕಳಿಸಿ ಸಂಪೂರ್ಣ ಪರೀಕ್ಷೆ ನಡೆಸುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

  • ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ

    ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ

    ಮೈಸೂರು: ಹಲ್ಲೆಗೆ ಒಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ನಿನ್ನೆ ರಾತ್ರಿಯಿಂದ ಶಾಸಕರಿಗೆ ಅಳವಡಿಸಿದ್ದ ವೆಂಟಿಲೇಟರ್ ತೆಗೆದು ಹಾಕಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

    ಭಾನುವಾರ ರಾತ್ರಿ ಮದುವೆ ಸಮಾರಂಭಕ್ಕೆ ಹೋಗಿದ್ದ ತನ್ವೀರ್ ಸೇಠ್ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿತ್ತು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರಗೆ ದಾಖಲು ಮಾಡಲಾಗಿತ್ತು. ತುರ್ತು ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯರು ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟಿದ್ದರು.

    ಈ ವಿಚಾರವಾಗಿ ಸೋಮವಾರ ಮಾತನಾಡಿದ್ದ ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯ ಡಾ ಉಪೇಂದ್ರ ಶಣೈ, ಅವರಿಗೆ ಕುತ್ತಿಗೆ ಭಾಗಕ್ಕೆ ಚಾಕು ಹಾಕಿರುವ ಕಾರಣ ತೀವ್ರವಾಗಿ ಪೆಟ್ಟಾಗಿದೆ. ಅವರ ರಕ್ತನಾಳ ನರಗಳಿಗೆ ತೀವ್ರ ಗಾಯವಾಗಿದೆ. ಬಿಪಿ ಶುಗರ್ ಅನ್ನು ಸಮಾನ್ಯ ಸ್ಥಿತಿಗೆ ತರಲು ಪ್ರಯತ್ನ ಪಡುತ್ತಿದ್ದೇವೆ. ಆಗಲೇ ಒಂದು ಶಸ್ತ್ರಚಿಕಿತ್ಸೆಯನ್ನು ಮಾಡಿದ್ದೇವೆ. ಮುಂದಿನ 48 ಗಂಟೆಯವರೆಗೂ ಏನನನ್ನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.

    ಇಂದು ಆರೋಗ್ಯ ಸ್ಥಿತಿ ಸುಧಾರಿಸಿದ್ದು, ನಿನ್ನೆ ರಾತ್ರಿಯಿಂದ ತನ್ವೀರ್ ಸೇಠ್‍ಗೆ ಅಳವಡಿಸಿದ್ದ ವೆಂಟಿಲೇಟರ್ ತೆರವು ಮಾಡಲಾಗಿದೆ. ಸೇಠ್ ಅವರು ವೆಂಟೆಲೇಟರ್ ಇಲ್ಲದೆ ಸ್ವತಂತ್ರವಾಗಿ ಉಸಿರಾಡುತ್ತಿದ್ದಾರೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿದೆ. ಇಂದು ಇಡೀ ದಿನ ತೀವ್ರ ನಿಗಾಘಟಕದಲ್ಲಿ ಇರಿಸಿ ಚಿಕಿತ್ಸೆ ಮಾಡಿ ಆರೋಗ್ಯದಲ್ಲಿ ಚೇತರಿಕೆ ಕಂಡರೆ ವಾರ್ಡ್‍ಗೆ ಶಿಫ್ಟ್ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ವೈದ್ಯರು ಹೇಳಿದ್ದಾರೆ.

    ಭಾನುವಾರ ರಾತ್ರಿ ಮೈಸೂರಿನ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

  • ಶಾಸಕ ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಗಂಭೀರ

    ಶಾಸಕ ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಗಂಭೀರ

    ಮೈಸೂರು: ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಮುಖ್ಯಸ್ಥ ಡಾ.ಉಪೇಂದ್ರ ಶೆಣೈ ಹೇಳಿದ್ದಾರೆ.

    ತನ್ವೀರ್ ಸೇಠ್ ಅವರ ಕುತ್ತಿಗೆ ಭಾಗದಲ್ಲಿ ಗಾಯವಾಗಿದೆ. ಕುತ್ತಿಗೆಯಲ್ಲಿರುವ ರಕ್ತನಾಳ, ನರಗಳಿಗೆ ಪೆಟ್ಟಾಗಿದೆ. ಕುತ್ತಿಗೆ ಭಾಗವು ಮೆದುಳಿಗೆ ಮತ್ತು ಹೃದಯಕ್ಕೆ ಸಂಬಂಧಿಸಿದೆ. ಆದ್ದರಿಂದ ಅವರ ಅರೋಗ್ಯ ಸ್ಥಿತಿ ಸದ್ಯಕ್ಕೆ ಗಂಭೀರ ವಾಗಿದೆ. ಇನ್ನು 48 ಗಂಟೆಗಳ ಕಾಲ ಏನನ್ನು ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

    ಒಳಗಿನ ನರಗಳು ಮತ್ತು ಬೆನ್ನು ಹುರಿಗೆ ಯಾವ ರೀತಿ ಹಾನಿಯಾಗಿದೆ ಎಂಬುದು ಮುಂದಿನ ಹಂತದ ಚಿಕಿತ್ಸೆಯಲ್ಲಿ ತಿಳಿಯಲಿದೆ. ರಾತ್ರಿ ಅವರ ಗಾಯಗಳಿಗೆ ರಕ್ತಸ್ರಾವಾಗದ ರೀತಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕಿಡ್ನಿ ಸ್ವಲ್ಪ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದೆ. ಬಿಪಿ, ಶುಗರ್ ಸಾಮಾನ್ಯ ಸ್ಥಿತಿಗೆ ತರಲು ಪ್ರಯತ್ನ ಪಡುತ್ತಿದ್ದೇವೆ. ಅದರ ಹೊರತಾಗಿ ಯಾವುದೇ ರೀತಿಯ ಆರೋಗ್ಯ ಏರುಪೇರಿಲ್ಲ. ಜನರು ಪ್ರಾರ್ಥನೆ ಮಾಡಲಿ. ಆಸ್ಪತ್ರೆಗೆ ಬರುವುದು ಬೇಡ. ಬರುವವರನ್ನು ಒಳಗೆ ನೋಡಲು ಬಿಡುತ್ತಿಲ್ಲ ಎಂದು ಡಾ.ಉಪೇಂದ್ರ ಶೆಣೈ ಅವರು ಹೇಳಿದ್ದಾರೆ. ಇದನ್ನು ಓದಿ: ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದಾನೆ ಎಂದುಕೊಂಡ್ವಿ, ಆದ್ರೆ ಮಚ್ಚಿನಿಂದ ಹೊಡೆದು ಓಡಿ ಹೋದ: ಪ್ರತ್ಯಕ್ಷದರ್ಶಿ

    ನಡೆದಿದ್ದೇನು?
    ಭಾನುವಾರ ರಾತ್ರಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

  • ಹಣ ಕಟ್ಟಿದ್ರೆ ಚಿಕಿತ್ಸೆ ಎಂದ ವೈದ್ಯರು- ದುಡ್ಡಿಲ್ಲದೆ ಕಣ್ಣೀರಿಡುತ್ತಿರುವ ತಾಯಿ

    ಹಣ ಕಟ್ಟಿದ್ರೆ ಚಿಕಿತ್ಸೆ ಎಂದ ವೈದ್ಯರು- ದುಡ್ಡಿಲ್ಲದೆ ಕಣ್ಣೀರಿಡುತ್ತಿರುವ ತಾಯಿ

    ಬೆಳಗಾವಿ: ನೆರೆಯಲ್ಲಿ ಮನೆ ಕಳೆದುಕೊಂಡ ತಾಯಿಯೊಬ್ಬರಿಗೆ ಈಗ ಮಗನನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಆಸ್ಪತ್ರೆಗೆ ಹಣ ಕಟ್ಟಿಲ್ಲ ಎಂಬ ಕಾರಣಕ್ಕೆ ವೈದ್ಯರು ಚಿಕಿತ್ಸೆ ಸ್ಥಗಿತಗೊಳಿಸಿದ್ದು, ದುಡ್ಡಿಲ್ಲದೆ ತಾಯಿ ಕಣ್ಣೀರಿಡುತ್ತಿದ್ದಾರೆ.

    ಜಿಲ್ಲೆಯ ಗೋಕಾಕ್ ನಗರದ ಗುರುವಾರ ಪೇಟೆ ನಿವಾಸಿ ಸುಜಾತಾ ಅವರು ತಮ್ಮ ಹದಿನೇಳು ತಿಂಗಳ ಮಗ ಸುಪ್ರಜ್‍ಗೆ ಚಿಕಿತ್ಸೆ ಕೊಡಿಸಲಾಗದೇ ಪರದಾಡುತ್ತಿದ್ದಾರೆ. ಕಳೆದ 1 ವಾರದಿಂದ ಮಗು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, 2 ದಿನಗಳ ಹಿಂದೆ ಮಗನನ್ನ ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಅಲ್ಲಿ ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಹಣ ಕಟ್ಟದ ಕಾರಣಕ್ಕೆ ಮಗುವಿಗೆ ಚಿಕಿತ್ಸೆ ಕೊಡುವುದನ್ನು ವೈದ್ಯರು ನಿಲ್ಲಿಸಿದ್ದಾರೆ. ಹಣ ಕಟ್ಟದಿದ್ದರೆ ಚಿಕಿತ್ಸೆ ನೀಡುವುದಿಲ್ಲ, ಸದ್ಯ ಆಗಿರುವ ಬಿಲ್ ಕಟ್ಟಿ ಮಗನನ್ನ ಕರೆದುಕೊಂಡು ಹೋಗುವಂತೆ ವೈದ್ಯರು ತಾಕೀತು ಮಾಡಿದ್ದಾರೆ. ಆದರೆ ನನ್ನ ಬಳಿ ಹಣವಿಲ್ಲ ಎಂದು ತಾಯಿ ಅಳಲನ್ನು ತೋಡಿಕೊಂಡಿದ್ದಾರೆ.

    ಕಳೆದ ಎಂಟು ತಿಂಗಳ ಹಿಂದೆ ಪತಿಯನ್ನು ಕಳೆದುಕೊಂಡ ಸುಜಾತಾ ಅವರು, ಮೂರು ತಿಂಗಳ ಹಿಂದೆ ಘಟಪ್ರಭಾ ನದಿ ಪ್ರವಾಹಕ್ಕೆ ಇದ್ದ ಒಂದು ಮನೆಯನ್ನೂ ಕೂಡ ಕಳೆದುಕೊಂಡಿದ್ದಾರೆ. ಸದ್ಯ ತಗಡಿನ ಶೆಡ್‍ನಲ್ಲಿ ಸುಜಾತಾ ಹಾಗೂ ಅವರ ಮಗ ಜೀವನ ಸಾಗಿಸುತ್ತಿದ್ದಾರೆ. ಭೀಕರ ನೆರೆಯಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ಇತರೆ ದಾಖಲೆಗಳು ಕೊಚ್ಚಿಹೋಗಿದೆ. ಹೀಗಾಗಿ ದಾಖಲೆ ನೀಡದೆ ಸರ್ಕಾರಿ ಸ್ಕಿಮ್ ಅನ್ವಯಿಸದ ಕಾರಣಕ್ಕೆ ಆಸ್ಪತ್ರೆ ಆಡಳಿತ ಮಂಡಳಿ, ಮೊದಲು ಹಣ ಕಟ್ಟಿ ಆಮೇಲೆ ಚಿಕಿತ್ಸೆ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಇತ್ತ ಹಣವಿಲ್ಲದೆ, ಅತ್ತ ಮಗುವನ್ನು ಕಳೆದುಕೊಳ್ಳುವ ಭೀತಿಯಲ್ಲಿ ತಾಯಿ ಜೀವಿ ಪರದಾಡುತ್ತಿದೆ.

    ಭೀಕರ ಪ್ರವಾಹ ಉಂಟು ಮಾಡಿದ ಅವಾಂತರ ಇನ್ನು ಸರಿಹೋಗಿಲ್ಲ. ಒಂದೆಡೆ ಮನೆಮಠ ಕಳೆದುಕೊಂಡು ಸಂತ್ರಸ್ತರ ಬದುಕು ಮೂರಾಬಟ್ಟೆಯಾಗಿದೆ. ಬಂದ ನೆರೆಯಲ್ಲಿ ಅವರು ತಮ್ಮ ಜೀವವನ್ನ ಉಳಿಸಿಕೊಳ್ಳಲು ಸಾಕಷ್ಟು ಕಷ್ಟ ಪಟ್ಟಿದ್ದಾರೆ. ಹೀಗಿರುವಾಗ ಪ್ರವಾಹದಲ್ಲಿ ಕೊಚ್ಚಿಹೋದ ದಾಖಲೆಗಳನ್ನು ಎಲ್ಲಿಂದ ತರುತ್ತಾರೆ ಎನ್ನುವ ಬಗ್ಗೆ ಆಸ್ಪತ್ರೆ ಆಡಳಿತ ಯೋಚಿಸಬೇಕು. ಮೊದಲೇ ನೊಂದು ಸುಣ್ಣವಾಗಿರುವ ಸಂತ್ರಸ್ತರ ಬಳಿ ಹಣ ಕೇಳಿದರೆ ಎಲ್ಲಿಂದ ತರುತ್ತಾರೆ ಎನ್ನುವುದನ್ನು ಯೋಚಿಸಬೇಕು. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಂಡು ಸಂತ್ರಸ್ತ ಕುಟುಂಬಕ್ಕೆ ನೆರವಾಗಬೇಕು ಎಂದು ಜನರು ಆಗ್ರಹಿಸಿದ್ದಾರೆ.

  • ಅಶ್ವಿನಿಗೌಡ ಸೇರಿ 12 ಮಂದಿ ಕರವೇ ಕಾರ್ಯಕರ್ತರು ಅರೆಸ್ಟ್

    ಅಶ್ವಿನಿಗೌಡ ಸೇರಿ 12 ಮಂದಿ ಕರವೇ ಕಾರ್ಯಕರ್ತರು ಅರೆಸ್ಟ್

    ಬೆಂಗಳೂರು: ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಸೇರಿದಂತೆ 12 ಮಂದಿ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆಗೆ ಒಳಗಾಗಿ ಕೆಲವರು ದೃಷ್ಟಿ ಕಳೆದುಕೊಂಡಿದ್ದರು. ಇದನ್ನು ಪ್ರಶ್ನಿಸಲು ಅಶ್ವಿನಿ ಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿದ್ದರು. ಆಗ ಕರವೇ ಕಾರ್ಯಕರ್ತರು ವೈದ್ಯರ ವಾಗ್ವಾದ ಇಂಗ್ಲಿಷ್, ಕನ್ನಡ ಹೋರಾಟದ ರೂಪ ಪಡೆದಿತ್ತು. ಅಲ್ಲದೆ ಕರವೇ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಮಿಂಟೋ ಆಸ್ಪತ್ರೆ ಸಿಬ್ಬಂದಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಇಂದು ಕರವೇ ಕಾರ್ಯಕರ್ತರು ಶರಣಾಗಿದ್ದು ವಿವಿ ಪುರಂ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಈ ವಿಚಾರವಾಗಿ ಇಂದು ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಯ ಒಪಿಡಿಗಳನ್ನು ಬಂದ್ ಮಾಡಿ ವೈದ್ಯರು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ತಡರಾತ್ರಿ ಸಭೆ ನಡೆಸಿ ಅಶ್ವಿನಿ ಗೌಡ ಸೇರಿದಂತೆ 15 ಜನ ಕಾರ್ಯಕರ್ತರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ದಕ್ಷಿಣ ಡಿಸಿಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗುವ ಬಗ್ಗೆ ತೀರ್ಮಾನ ಮಾಡಿದ್ದರು.

    ಅದರಂತೆ ಇಂದು ಬೆಳಗ್ಗೆ ವಿವಿಪುರಂ ಪೊಲೀಸ್ ಠಾಣೆಗೆ ಬಂದ ಅಶ್ವಿನಿ ಗೌಡ ಮಧುಸೂದನ್ ಯಾದವ್, ಮನು, ಗಾಯಿತ್ರಿ, ಸಂಗೀತಾ ಶೆಟ್ಟಿ ಸೇರಿದಂತೆ 12 ಕಾರ್ಯಕರ್ತರು ಶರಣಾಗಿದ್ದಾರೆ. ಈ 12 ಜನರನ್ನು ಬಂಧಿಸಿರುವ ಪೊಲೀಸರು ಮೊದಲಿಗೆ ವೈದ್ಯಕೀಯ ಪರಿಕ್ಷೇ ಮಾಡಿಸಿ ನಂತರ ಅವರನ್ನು ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಈ ಬಗ್ಗೆ ಬೆಳಗ್ಗೆ ಮಾತನಾಡಿದ್ದ ನಾರಾಯಣಗೌಡ ಹಾಗೂ ಹಲ್ಲೆ ಆರೋಪಿ ಅಶ್ವಿನಿಗೌಡ, ವೈದ್ಯರಿಗೆ ಹೆದರಿ ಈ ತೀರ್ಮಾನ ತೆಗೆದುಕೊಂಡಿಲ್ಲ. ಜನರಿಗೆ ತೊಂದರೆಯಾಗಬಾರದೆಂದು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

  • ಒಂದೇ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ

    ಒಂದೇ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ

    – ಗ್ರಾಮ ತೊರೆಯುತ್ತಿರುವ ಜನರು

    ಬೆಳಗಾವಿ: ಒಂದೇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ ಬಂದಿರುವ ಕಾರಣ ಸೊಳ್ಳೆಗಳ ಕಾಟಕ್ಕೆ ಜನರು ಊರು ತೊರೆಯುವ ಸ್ಥಿತಿ ನಿರ್ಮಾಣವಾಗಿದೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಡೆಂಗ್ಯೂ ಬಂದಿದ್ದು, ಜನರು ಗ್ರಾಮವನ್ನು ತೊರೆಯುತ್ತಿದ್ದಾರೆ. ಜನ ಗ್ರಾಮ ಬಿಟ್ಟು ಹೋಗುತ್ತಿದ್ದರು ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

    ಈ ಗ್ರಾಮದಲ್ಲಿ ಹೆಚ್ಚು ಬಡಕುಟುಂಬಗಳೇ ವಾಸವಿದ್ದು, ಡೆಂಗ್ಯೂ ರೋಗದಿಂದ ಖಾಸಗಿ ಆಸ್ಪತ್ರೆಗಳ ಬಿಲ್ ಪಾವತಿಸಲಾಗದೇ ಪರದಾಡುತ್ತಿದ್ದಾರೆ. ಡೆಂಗ್ಯೂ ಎಂದು ಖಚಿತ ವರದಿ ಬಂದರೂ ಅಲ್ಲಗಳೆಯುತ್ತಿರುವ ತಾಲೂಕು ವೈದ್ಯಾಧಿಕಾರಿಗಳು, ಡೆಂಗ್ಯೂ ಅಂಕಿ ಅಂಶಗಳ ದಾಖಲೆಯಲ್ಲಿ ವಿಫಲರಾಗಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರದಲ್ಲಿ ಅಧಿಕಾರಿಗಳ ಅಸಡ್ಡೆ ನೋಡಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.