Tag: doctors

  • ಇಂಟರ್‌ನೆಟ್  ನೋಡಲ್ಲ, ಅದು ಕೇವಲ ಮಾಹಿತಿ ನೀಡುತ್ತೆ: ಸುಧಾಮೂರ್ತಿ

    ಇಂಟರ್‌ನೆಟ್  ನೋಡಲ್ಲ, ಅದು ಕೇವಲ ಮಾಹಿತಿ ನೀಡುತ್ತೆ: ಸುಧಾಮೂರ್ತಿ

    -ಯಶಸ್ವಿ ಮಹಿಳೆ ಹಿಂದೆ ಒಬ್ಬ ಸ್ಪಂದಿಸುವ ಪುರುಷ ಇರ್ತಾನೆ

    ಬೆಂಗಳೂರು: ಪ್ರತಿಯೊಂದು ಯಶಸ್ವಿ ಮಹಿಳೆ ಹಿಂದೆ ಒಬ್ಬ ಪುರಷ ಇರುತ್ತಾನೆ ಎಂದು ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿ ಅವರು ಹೇಳಿದ್ದಾರೆ.

    ಇಂದು ಕಿದ್ವಾಯಿ ಆಸ್ಪತ್ರೆಯ 5 ಸುಸಜ್ಜಿತ ಶಸ್ತ್ರಚಿಕಿತ್ಸಾ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಬ್ಬ ಒಳ್ಳೆಯ ವೈದ್ಯನಿಂದ ಮಾತ್ರ ರೋಗಿ ಗುಣಪಡಿಸಲು ಸಾಧ್ಯ ಎಂದು ವೈದ್ಯರಿಗೆ ಕಿವಿ ಮಾತು ಹೇಳಿದರು.

    ನನಗೆ ಸರ್ಕಾರಿ ಆಸ್ಪತ್ರೆ ಮೇಲೆ ವಿಶೇಷ ಪ್ರೀತಿ ಇದೆ. ಏಕೆಂದರೆ ನನ್ನ ತಂದೆ ಕೂಡ ಒಬ್ಬ ಸರ್ಕಾರಿ ಆಸ್ಪತ್ರೆ ವೈದ್ಯರಾಗಿದ್ದರು. ವೈದ್ಯರ ಮೇಲೆ ಆಗ ಹಲ್ಲೆ ಎಲ್ಲಿಯೂ ಆಗುತ್ತಿರಲಿಲ್ಲ. ವೈದ್ಯರನ್ನು ದೇವರು ಎಂದು ಕಾಣುತ್ತಿದ್ದರು. ನಾನು ಇಂಟರ್‌ನೆಟ್ ನೋಡಲ್ಲ. ಅದು ಬರೀ ಮಾಹಿತಿ ನೀಡುತ್ತೆ ಅಷ್ಟೇ ಆದರೆ ನಾವು ವೈದ್ಯರ ಮೇಲೆ ವಿಶ್ವಾಸ ಇಡಬೇಕು. ಅದರಿಂದಲೇ ನಾವು ಆರೋಗ್ಯವಂತರಾಗಬಹುದು. ಒಬ್ಬ ಒಳ್ಳೆಯ ವೈದ್ಯನಿಂದ ಮಾತ್ರ ರೋಗಿ ಗುಣಪಡಿಸಲು ಸಾಧ್ಯ ಎಂದು ಹೇಳಿದರು.

    ಕಾರವಾರದಲ್ಲಿ ಒಂದು ರಸ್ತೆ ಸಮಸ್ಯೆ ಇತ್ತು ಅದನ್ನು ಸಿಎಂ ಅವರಿಗೆ ಹೇಳಿದ್ದೆ. ಅವರು ನಾವು ಸರಿ ಮಾಡ್ತೀವಿ ಅಮ್ಮ ಎಂದು ಹೇಳಿದ್ದರು. ಆದರೆ ನಮಗೆ ಸರ್ಕಾರದಿಂದ ಅನುಮತಿ ಕೊಟ್ಟರೆ ನಾವೇ ಅದನ್ನು ಸರಿ ಮಾಡುತ್ತೇವೆ. ನಮ್ಮ ಸಂಸ್ಥೆಯಿಂದ 400 ಕೋಟಿ ವರ್ಷಕ್ಕೆ ಖರ್ಚು ಮಾಡುತ್ತೇವೆ. ಅದರೊಳಗೆ ಈ ರಸ್ತೆ ಕಾರ್ಯವನ್ನು ಮಾಡುತ್ತೇವೆ ಎಂದು ಹೇಳಿದರು.

    ಈ ಎಲ್ಲಾ ಕೆಲಸಗಳಲ್ಲೂ ನನ್ನ ಜೊತೆ 7 ಜನ ಕೆಲಸ ಮಾಡುತ್ತಾರೆ. ನನಗೆ ಉತ್ತಮವಾದ ಸೆಕ್ಯೂರಿಟಿ ಮತ್ತು ಚಾಲಕರು ಇದ್ದಾರೆ ಮತ್ತು ನಾರಾಯಣಮೂರ್ತಿ ಅಂತಹ ಗಂಡ ನನ್ನ ಜತೆ ಇದ್ದಾರೆ. ಹೆಂಡತಿಯರ ಸಾಧನೆ ಹಿಂದೆ ಪತಿ ಇರುತ್ತಾರೆ “ಬಿಹೈಂಡ್ ದ ಸಕ್ಸಸ್ ಆಫ್ ವುಮೆನ್ ದೇರ್ ಇಸ್ ಎ ಅಂಡರ್‌ಸ್ಟಾಡಿಂಗ್ ಮೆನ್” ಎಂದು ಹೇಳಿದ್ದಾರೆ.

    ಇನ್ನೂ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವ ಇ. ತುಕಾರಾಂ, ಆರೋಗ್ಯ ಸಚಿವ ಶಿವಾನಂದ ಪಾಟೀಲ್, ಜಯದೇವ ಆಸ್ಪತ್ರೆ ಮುಖಸ್ಥ ಡಾ.ಮಂಜುನಾಥ್ ಉಪಸ್ಥಿತರಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ವೈದ್ಯರ ನಿರ್ಲಕ್ಷ್ಯತನಕ್ಕೆ 4 ದಿನದ ಹಸುಗೂಸು ಬಲಿ

    ವೈದ್ಯರ ನಿರ್ಲಕ್ಷ್ಯತನಕ್ಕೆ 4 ದಿನದ ಹಸುಗೂಸು ಬಲಿ

    ಲಕ್ನೋ: ಉತ್ತರಪ್ರದೇಶ ರಾಜ್ಯದ ಬರೇಲಿಯ ಆಸ್ಪತ್ರೆಯೊಂದರಲ್ಲಿ ವೈದ್ಯರು ಚಿಕಿತ್ಸೆ ನೀಡದೇ ವಿನಾಕಾರಣ ಸುತ್ತಾಡಿಸಿದ ಪರಿಣಾಮ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಾಲ್ಕು ದಿನದ ಹಸುಗೂಸು ಸಾವನ್ನಪ್ಪಿದೆ.

    ಜೂನ್ 15 ರಂದು ಜನಿಸಿದ್ದ ಊರ್ವಶಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಳು. ಇದರಿಂದ ಗಾಬರಿಗೊಂಡ ಪೋಷಕರು ಮಗುವನ್ನು ಅಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆ ಮಗುವನ್ನು ಮಹಿಳಾ ವಿಭಾಗದಿಂದ ಪುರುಷರ ವಿಭಾಗಕ್ಕೆ, ಮತ್ತೆ ಪುರುಷರ ವಿಭಾಗದಿಂದ ಮಹಿಳಾ ವಿಭಾಗಕ್ಕೆ ಚಿಕಿತ್ಸೆ ನೀಡದೆ ಮೂರು ಗಂಟೆಗಳವರೆಗೆ ಅಲೆದಾಡಿಸಿದ್ದಾರೆ. ದುರಾದೃಷ್ಟವಶಾತ್ ಮಗು ಆಸ್ಪತ್ರೆಯ ಮೆಟ್ಟಿಲಿನ ಮೇಲೆಯೇ ಪ್ರಾಣ ಬಿಟ್ಟಿದೆ.

    ಮಹಾರಣ ಪ್ರತಾಪ್ ಜಂಟಿ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಗುವನ್ನು ಮೊದಲು ಪುರುಷರ ವಿಭಾಗದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿ, ಮಹಿಳಾ ವಿಭಾಗಕ್ಕೆ ಕಳುಹಿಸಿದ್ದಾರೆ. ಆದರೆ ಮಹಿಳಾ ವಿಭಾಗದಲ್ಲಿ ಹಾಸಿಗೆ ಕೊರತೆಯ ಕಾರಣವೊಡ್ಡಿ ಮಗುವನ್ನು ಮತ್ತೆ ಪುರುಷರ ವಿಭಾಗಕ್ಕೆ ಕರೆದುಕೊಂಡು ಹೋಗಲು ವೈದ್ಯರು ಸೂಚಿಸಿದ್ದಾರೆ. ಈ ರವಾನೆಯ ಮಾರ್ಗ ಮಧ್ಯೆಯಲ್ಲಿ ಮಗು ಸಾವನ್ನಪ್ಪಿದ್ದು, ಪ್ರಕರಣ ಸಂಬಂಧ ಓರ್ವ ವೈದ್ಯನನ್ನು ಅಮಾನತು ಮಾಡಲಾಗಿದೆ. ಘಟನೆಗೆ ಕಾರಣಕರ್ತರಾದ ಉಳಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

    ಮಗುವಿಗೆ ಚಿಕಿತ್ಸೆ ನೀಡದೆ ವಿನಾಕಾರಣ ಮೂರು ಗಂಟೆಗಳ ಕಾಲ ಸುತ್ತಾಡಿಸಿದರು. ಕೊನೆಗೆ ಮಗುವನ್ನು ಮನೆಗೆ ಕರೆದೊಯ್ಯಲು ತೀರ್ಮಾನಿಸಿದೆವು. ಆದರೆ ಮಗು ಆಸ್ಪತ್ರೆಯ ಮೆಟ್ಟಿಲಿನ ಮೇಲೆಯೇ ಅಸುನೀಗಿತು ಎಂದು ಮಗುವಿನ ಅಜ್ಜಿ ಕುಸುಮಾದೇವಿ ಕಣ್ಣೀರು ಹಾಕಿದರು.

    ಮಗುವಿನ ಸಾವಿನ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ ಎರಡು ವಿಭಾಗದ ವೈದ್ಯರ ನಡುವೆ ವಾಗ್ವಾದ ನಡೆಯಿತು. ಅಮಾನತುಗೊಂಡ ವೈದ್ಯ ಕಲ್ಮೆಂದ್ರ ಸ್ವರೂಪ್ ಗುಪ್ತ, ಮೊದಲು ಮಗುವನ್ನು ಹೊರರೋಗಿಗಳ ವಿಭಾಗಕ್ಕೆ ಕರೆದೊಯ್ಯಲಾಗಿದೆ. ಅಲ್ಲಿಂದ ಮಗುವನ್ನು ಮಹಿಳಾ ವಿಭಾಗದ ಮಕ್ಕಳ ವಿಶೇಷ ನಿಗಾ ಘಟಕಕ್ಕೆ ರವಾನಿಸಲಾಗಿದೆ. ಅಲ್ಲಿ ವೈದ್ಯರು ಏನು ಹೇಳಿದರೋ ಪೋಷಕರು ಸುತ್ತಾಡುತ್ತಲೇ ಇದ್ದರು. ಅವರು ತುರ್ತು ಪರಿಸ್ಥಿತಿಗೆ ತಲುಪಿದಾಗ ದಾಖಲಾತಿಗಾಗಿ ಕೆಳಗಡೆ ಕಳುಹಿಸಲಾಯಿತು ಎಂದಿದ್ದಾರೆ.

    ಮಹಿಳಾ ವಿಭಾಗದಲ್ಲಿ ಮಗುವಿನ ಉಷ್ಣತೆ ಕಾಪಾಡುವ ನಾಲ್ಕು ಹಾಸಿಗೆಗಳು ಮಾತ್ರ ಇದ್ದು, ಈಗಾಗಲೇ ನಾಲ್ಕು ಹಾಸಿಗೆಗಳಲ್ಲಿ 8 ಮಕ್ಕಳಿದ್ದಾರೆ. ಅದಕ್ಕಾಗಿ ನಾವು ಈ ಮಗುವನ್ನು ಪುರುಷರ ವಿಭಾಗಕ್ಕೆ ಕಳುಹಿಸಿದೆವು. ಯಾವಾಗಲೂ ಪುರುಷರ ವಿಭಾಗದ ವೈದ್ಯರು ಕುರುಡರಂತೆ ಎಲ್ಲರನ್ನೂ ಇಲ್ಲಿಗೆ ಕಳುಹಿಸುತ್ತಾರೆ. ನಮ್ಮಲಿದ್ದ ವಾರ್ಮರ್(ಉಷ್ಣತೆ ಕಾಪಾಡುವ ಬೆಡ್)ಗಳನ್ನು ಸರ್ಕಾರಕ್ಕೆ ಹಿಂದಿರುಗಿಸಲಾಗಿದೆ. ಒಂದು ವೇಳೆ ಹೆಚ್ಚಿನ ವಾರ್ಮರ್ ಇದ್ದಿದ್ದರೆ ಮಗುವಿಗೆ ಚಿಕಿತ್ಸೆ ನೀಡಬಹುದಿತ್ತು ಎಂದು ಮಹಿಳಾ ವಿಭಾಗದ ವೈದ್ಯೆ ಅಲ್ಕಾ ಶರ್ಮ ತಿಳಿಸಿದ್ದಾರೆ.

    ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯತನ ತೋರಿದ ಕಲ್ಮೇಂದ್ರ ಸ್ವರೂಪರನ್ನು ಅಮಾನತು ಮಾಡಲು ಆದೇಶಿಸಿದ್ದು, ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯತನವನ್ನು ನಾವು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

    ದೇಶದಲ್ಲಿ ಅತೀ ಹೆಚ್ಚು ಜನಸಂಖ್ಯೆಯಿರುವ ಉತ್ತರಪ್ರದೇಶ ಸರ್ಕಾರಿ ವೈದ್ಯರು ಮತ್ತು ಆಸ್ಪತ್ರೆ ಹಾಸಿಗೆಗಳ ಕೊರತೆಯನ್ನು ಎದುರಿಸುತ್ತಿದೆ. ಕೇಂದ್ರದ ಪ್ರಕಾರ ರಾಜ್ಯದಲ್ಲಿ ಪ್ರತಿ ವೈದ್ಯರಿಂಂದ ಸರಾಸರಿ 19,962 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಲೆಕ್ಕಾಚಾರದಲ್ಲಿ ಬಿಹಾರ ಮೊದಲ ಸ್ಥಾನದಲ್ಲಿದ್ದು ಅಲ್ಲಿ ಪ್ರತಿ ವೈದ್ಯರು 28,391 ಜನರಿಗೆ ಚಿಕಿತ್ಸೆ ನೀಡುತ್ತಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಹುಟ್ಟಿದ ಮಗು ನೋಡೋಕೆ ಕೊಡ್ಬೇಕು 2 ಸಾವಿರ ಲಂಚ- ದಾವಣಗೆರೆಯಲ್ಲಿದ್ದಾರೆ ಧನದಾಹಿ ಡಾಕ್ಟರ್ಸ್

    ಹುಟ್ಟಿದ ಮಗು ನೋಡೋಕೆ ಕೊಡ್ಬೇಕು 2 ಸಾವಿರ ಲಂಚ- ದಾವಣಗೆರೆಯಲ್ಲಿದ್ದಾರೆ ಧನದಾಹಿ ಡಾಕ್ಟರ್ಸ್

    ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳು ಅಂದರೆ ಸಾಕು ಕೆಲ ವೈದ್ಯಾಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಅಕ್ಷಯ ಪಾತ್ರೆ ಇದ್ದಂತೆ. ಬಡ ರೋಗಿಗಳಿಗಾಗಿ ಸರ್ಕಾರದಿಂದ ಬರುವ ಅನುದಾನವನ್ನು ನುಂಗಿ ನೀರು ಕುಡಿದಿರುವುದಲ್ಲದೇ, ಚಿಕಿತ್ಸೆಗಾಗಿ ಸಾವಿರಾರು ರೂಪಾಯಿ ಹಣವನ್ನು ಬಡ ರೋಗಿಗಳಿಂದ ಕಸಿಯುತ್ತಿದ್ದಾರೆ. ಹರಿಗೆಯಾದ ನಂತರ ಪೋಷಕರು ಮಗುವನ್ನು ನೋಡಲು ಇಲ್ಲಿ ಹಣ ಇಟ್ಟರೆ ಮಾತ್ರ ಮಗುವಿನ ಮುಖ ನೋಡಲು ಸಾಧ್ಯ. ಅಲ್ಲದೆ ತಾಲೂಕು ಆಸ್ಪತ್ರೆಯ ವಾರ್ಡ್ ಗಳಲ್ಲಿ ಸುವ್ಯವಸ್ಥಿತವಾದ ಆಸನಗಳ ದಿಂಬು ಹಾಗೂ ಮ್ಯಾಟ್ ಗಳ ಖರೀದಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ಮಾಡಿದ್ದಾರೆ ಎನ್ನುವ ಆರೋಪ ಸಾಕಷ್ಟು ಕೇಳಿ ಬರುತ್ತಿದೆ.

    ಹೌದು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಆಸ್ಪತ್ರೆಯಲ್ಲಿ ದುಡ್ಡಿಲ್ಲ ಅಂದರೆ ಏನು ಕೆಲಸನೂ ಆಗಲ್ಲ. ಪ್ರಾಣ ಉಳಿಸೋ ವೈದ್ಯರುಗಳೇ ಇಲ್ಲಿ ಲಂಚ ಪಡೆಯುತ್ತಿದ್ದಾರೆ. ಹೆರಿಗೆ ವೈದ್ಯರಾದ ಹನುಮಂತಪ್ಪ ಹಾಗೂ ವೈದ್ಯ ಚಂದ್ರಪ್ಪ ಇವರಿಬ್ಬರೂ ಆಸ್ಪತ್ರೆಯ ಲಂಚ ತೆಗೆದುಕೊಳ್ಳುವವರು. ಯಾರಿಗಾದರು ಹೆರಿಗೆಯಾದರೆ ಬಳಿಕ ಮಗು ನೋಡಬೇಕು ಅಂದರೆ ಸಾವಿರಾರು ರೂಪಾಯಿ ಹಣ ಕೊಡಬೇಕಂತೆ. ಇಲ್ಲವೆಂದರೆ ಮಗುನಾ ನೋಡೋಕೆ ಬಿಡಲ್ವಂತೆ. ಇವರ ಲಂಚಾವತಾರಕ್ಕೆ ಇಲ್ಲಿನ ರೋಗಿಗಳು ಹೈರಾಣಾಗಿ ಹೋಗಿದ್ದಾರೆ. ವೈದ್ಯರ ಈ ಲಂಚಾವತಾರವನ್ನು ಸಾರ್ವಜನಿಕರೊಬ್ಬರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಇಷ್ಟೇ ಅಲ್ಲ, ಸರ್ಕಾರ ರೋಗಿಗಳಿಗಾಗಿ ಪ್ರತಿ ವರ್ಷ ನೀಡೋ ದಿಂಬು ಮ್ಯಾಟ್‍ಗಳಲ್ಲೂ ಇಲ್ಲಿನ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಹಣ ಲಪಟಾಯಿಸ್ತಿದ್ದಾರೆ. ಈ ಬಗ್ಗೆ ತಾಲೂಕು ಮುಖ್ಯವೈದ್ಯಾಧಿಕಾರಿಗಳನ್ನು ಕೇಳಿದರೆ ಅದ್ಯಾವುದೋ ವೀಡಿಯೋ ಬಂದಿತ್ತು ಅಷ್ಟೇ. ಅದರ ಬಗ್ಗೆ ಮಾಹಿತಿ ಇಲ್ಲ ಎಂದು ಬೇಜಾವಾಬ್ದಾರಿ ಉತ್ತರ ನೀಡಿದ್ದಾರೆ.

    ಒಟ್ಟಿನಲ್ಲಿ ಬಡವರಿಗಾಗಿ ಎಂದು ಸರ್ಕಾರ ಆಸ್ಪತ್ರೆಗಳನ್ನ ನೀಡಿದರೆ, ಈ ವೈದ್ಯಾಧಿಕಾರಿಗಳು ಹಣಕ್ಕಾಗಿ ರೋಗಿಗಳ ರಕ್ತ ಹೀರುತ್ತಿದ್ದಾರೆ. ಇನ್ನಾದರೂ ಹೊನ್ನಾಳಿ ತಾಲೂಕು ಆಸ್ಪತ್ರೆಯಲ್ಲಿ ನಡೆಯುತ್ತಿರುವ ಲಂಚಾವತಾರ ಹಾಗೂ ಭ್ರಷ್ಟಾಚಾರದ ಬಗ್ಗೆ ಮೇಲಾಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿನ ಜನ ಆಗ್ರಹಿಸುತ್ತಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕಕ್ಕೆ ಆಗಲ್ವಾ – ಕ್ಯೂ ನಿಂತಿದ್ದ ಗರ್ಭಿಣಿಯರನ್ನ ನೋಡಿ ಸಚಿವರ ತರಾಟೆ

    ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕಕ್ಕೆ ಆಗಲ್ವಾ – ಕ್ಯೂ ನಿಂತಿದ್ದ ಗರ್ಭಿಣಿಯರನ್ನ ನೋಡಿ ಸಚಿವರ ತರಾಟೆ

    ಬೀದರ್: ಸ್ಕ್ಯಾನಿಂಗ್ ಗಾಗಿ ಎರಡು ಗಂಟೆಗಳಿಂದ ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರು ಹಾಗೂ ರೋಗಿಗಳನ್ನು ನೋಡಿ ಕೆಂಡಾಮಂಡಲರಾದ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಬ್ರಿಮ್ಸ್ ನಿರ್ದೇಶಕರಿಗೆ ಫುಲ್ ತರಾಟೆ ತೆಗೆದುಕೊಂಡು ಘಟನೆ ನಡೆದಿದೆ.

    ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರಿಗೆ ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕುವುದಕ್ಕೆ ಆಗಲ್ವಾ. ಗರ್ಭಿಣಿಯರು ಬೆಳಗ್ಗೆಯಿಂದಲೂ ನಿಂತಿದ್ದರು ಕುರ್ಚಿ ಹಾಕಲು ನಿಮ್ಮ ಬಳಿ ಹಣ ಇಲ್ವಾ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಬ್ರಿಮ್ಸ್ ನಿರ್ದೇಶಕರಿಗೆ ರೋಗಿಗಳ ಮುಂದೆಯೇ ಫಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಸಚಿವರು ಗರಂ ಆದ ತಕ್ಷಣ ಬ್ರಿಮ್ಸ್ ನಿರ್ದೇಶಕ ಕ್ಷೀರಸಾಗರ ಇನ್ನು ಟೆಂಡರ್ ಆಗಬೇಕು ಸರ್ ಎಂದಿದ್ದಾರೆ. ಅದಕ್ಕೆ ಸಚಿವರು ಟೆಂಡರ್ ಬಿಡ್ರೀ ಒಂದು ಗಂಟೆಯಲ್ಲಿ ಇಲ್ಲಿ ಕುರ್ಚಿ ಹಾಕಬೇಕು ಎಂದು ಸಚಿವರು ತಾಕೀತು ಮಾಡಿದ್ದಾರೆ. ಬೆಳಗ್ಗೆಯಿಂದ ನಾವು ಸ್ಕ್ಯಾನಿಂಗ್‍ಗಾಗಿ ಕ್ಯೂ ನಿಂತಿದ್ದೇವೆ. ನಮಗೆ ಹೋಗಲಿ ಗರ್ಭಿಣಿಯರು ಕ್ಯೂನಲ್ಲಿ ನಿಂತರೂ ಆರೋಗ್ಯ ಅಧಿಕಾರಿ ಸ್ಕ್ಯಾನಿಂಗ್ ಮಾಡಲು ರೆಡಿ ಇಲ್ಲಾ ಎಂದು ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ರೋಗಿಯ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ನೋಡಿ ದಂಗಾದ ವೈದ್ಯರು

    ರೋಗಿಯ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ನೋಡಿ ದಂಗಾದ ವೈದ್ಯರು

    ಜೈಪುರ್: ರಾಜಸ್ಥಾನದ ಉದಯ್‍ಪುರ್ ನ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಾನಸಿಕ ರೋಗಿಯ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ಕಂಡು ದಂಗಾಗಿದ್ದಾರೆ.

    ಹೌದು.. ಸೋಮವಾರ ನಾಲ್ವರು ವೈದ್ಯರ ತಂಡವು 90 ನಿಮಿಷಗಳ ಕಾಲ ಆಪರೇಷನ್ ಮಾಡಿದೆ. ಈ ವೇಳೆ ವ್ಯಕ್ತಿಯ ಹೊಟ್ಟೆಯಲ್ಲಿ ಚುಟ್ಟಾ, ಕೀಗಳು ಮತ್ತು ನಾಣ್ಯಗಳು ಸೇರಿದಂತೆ ಸುಮಾರು 80 ವಸ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಹೊರ ತೆಗೆದಿದ್ದಾರೆ.

    ಇದನ್ನು ವಿಚಿತ್ರ ಕೇಸ್ ಎಂದು ಪರಿಗಣಿಸಲಾಗಿದೆ. ವ್ಯಕ್ತಿ ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದನು. ನಂತರ ನಾವು ವ್ಯಕ್ತಿಗೆ ಎಕ್ಸ್-ರೇ ಮಾಡಿಸಿದ್ದೆವು. ಆಗ ಆತನ ಹೊಟ್ಟೆಯೊಳಗೆ ಉಗುರುಗಳು ಸೇರಿದಂತೆ ಸಣ್ಣ ಮತ್ತು ದೊಡ್ಡ ಮೆಟಲ್ ವಸ್ತುಗಳನ್ನು ಕಂಡು ಬಂದಿದ್ದು, ನಮಗೆ ನಿಜಕ್ಕೂ ಅಚ್ಚರಿಯಾಯಿತು ಎಂದು ಡಾ.ಡಿ.ಕೆ ಶರ್ಮಾ ತಿಳಿಸಿದ್ದಾರೆ.

    ವೈದ್ಯರು ತಡಮಾಡದೆ ತಕ್ಷಣ ಶಸ್ತ್ರಚಿಕಿತ್ಸೆಗೆ ರೋಗಿಯನ್ನು ಒಳಪಡಿಸಿ ಒಟ್ಟು 800 ಗ್ರಾಂ ತೂಕದ ವಸ್ತುಗಳನ್ನು ಹೊರ ತೆಗೆದಿದ್ದಾರೆ. ರೋಗಿಯು ಮಾನಸಿಕ ಅಸ್ವಸ್ಥ ಮತ್ತು ವ್ಯಸನಿಯಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ

    ರೋಗಿ ಮಾನಸಿಕ ಅಸ್ವಸ್ಥ, ವ್ಯಸನಿಯಾಗಿದ್ದನು. ಆತನಿಗೆ ನಿರಂತರವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಕುಟುಂಬದವರು ಅವನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು ಎಂದು ಶರ್ಮಾ ಹೇಳಿದ್ದಾರೆ.

    ಸದ್ಯಕ್ಕೆ ರೋಗಿಯ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಕಳೆದ ತಿಂಗಳು 40 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನ ಹೊಟ್ಟೆಯಲ್ಲೂ ವೈದ್ಯರು 116 ಉಗುರುಗಳು, ಉದ್ದನೆಯ ತಂತಿಯನ್ನು ಆಪರೇಷನ್ ಮಾಡಿ ಹೊರ ತೆಗೆದಿದ್ದರು.

  • ವೈದ್ಯರ ರಕ್ಷಣೆಗೆ 10 ಭದ್ರತಾ ಅಂಶಗಳಿಗೆ ದೀದಿ ಸಮ್ಮತಿ

    ವೈದ್ಯರ ರಕ್ಷಣೆಗೆ 10 ಭದ್ರತಾ ಅಂಶಗಳಿಗೆ ದೀದಿ ಸಮ್ಮತಿ

    – ಏಳು ದಿನಗಳ ಬಳಿಕ ಅಂತ್ಯ ಕಂಡ ವೈದ್ಯರ ಪ್ರತಿಭಟನೆ

    ಕೋಲ್ಕತ್ತಾ: ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆಗೆ ಸಂಬಂಧಿಸಿದ 10 ಭದ್ರತಾ ಅಂಶಗಳಿಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸಮ್ಮತಿ ಸೂಚಿಸಿದ್ದಾರೆ. ಈ ಮೂಲಕ ಏಳು ದಿನಗಳ ಹೋರಾಟವು ತೆರೆ ಕಂಡಿದೆ.

    ಮಮತಾ ಬ್ಯಾನರ್ಜಿ ಅವರು ಇಂದು 24 ಕಿರಿಯ ವೈದ್ಯರ ಜೊತೆ ನೇರ ಪ್ರಸಾರದ ಮೂಲಕ ಸಭೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ 10 ಭದ್ರತಾ ಅಂಶಗಳನ್ನು ಪ್ರಸ್ತಾಪಿಸಿದರು. ವೈದ್ಯರ ರಕ್ಷಣೆಗಾಗಿ ನಿರ್ದೇಶನ ಮಾಡಲು ಎಲ್ಲ ಆಸ್ಪತ್ರೆಗಳಲ್ಲಿ ಪೊಲೀಸ್ ಇಲಾಖೆಯ ಒಬ್ಬರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು. ಜೊತೆಗೆ ವೈದ್ಯರ ಮೇಲೆ ಸುಳ್ಳು ದೂರು ದಾಖಲಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

    ವಿಧಾನಸಭೆಯಲ್ಲಿ ವೈದ್ಯಕೀಯ ಸ್ಥಾಪನಾ ಕಾಯ್ದೆಗೆ ತಿದ್ದುಪಡಿ ಕುರಿತು ಚರ್ಚೆ ನಡೆಸಲಾಗುತ್ತದೆ. ಪ್ರತಿಯೊಂದು ಆಸ್ಪತ್ರೆಗಳಲ್ಲಿ ಕುಂದುಕೊರತೆ ಘಟಕ ಸ್ಥಾಪಿಸಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಚಿಕಿತ್ಸೆ ಬಗ್ಗೆ ಅತೃಪ್ತಿ ಇದ್ದರೆ ದೂರು ದಾಖಲಿಸಲು ಘಟಕ ಸ್ಥಾಪನೆಗೆ ಮಮತಾ ಬ್ಯಾನರ್ಜಿ ಒಪ್ಪಿಗೆ ಸೂಚಿಸಿದ್ದಾರೆ.

    ಯಾವುದೇ ಸರ್ಕಾರವು ಇಂತಹ ಘಟನೆಯಾಗಬೇಕು ಎಂದು ಬಯಸುವುದಿಲ್ಲ. ಉದ್ವಿಗ್ನ ಪರಿಸ್ಥಿತಿಯಿಂದಾಗಿ ಘಟನೆ ನಡೆದಿದ್ದು, ಮತ್ತೆ ಇದು ಸಂಭವಿಸದಂತೆ ನೋಡಿಕೊಳ್ಳಬೇಕಿದೆ. ಎನ್‍ಆರ್‍ಎಸ್ ಪ್ರಕರಣದ ಐವರು ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು.

    ಮಮತಾ ಬ್ಯಾನರ್ಜಿ ಅವರು ಪ್ರಸ್ತಾಪಿಸಿದ 10 ಅಂಶಗಳಿಗೆ ಕಿರಿಯ ವೈದ್ಯರು ಒಪ್ಪಿದ್ದಾರೆ. ಈ ಮೂಲಕ ಮುಷ್ಕರವನ್ನು ಹಿಂಪಡೆದಿದ್ದಾರೆ.

  • ವೈದ್ಯರ ಮುಷ್ಕರಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ಸಾಥ್

    ವೈದ್ಯರ ಮುಷ್ಕರಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ಸಾಥ್

    ಗದಗ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ದೇಶಾದ್ಯಂತ ಖಾಸಗಿ ವೈದ್ಯರು ಕರೆ ನೀಡಿರುವ ಪ್ರತಿಭಟನೆಗೆ ಬೆಂಬಲವಾಗಿ ಗದಗ ಜಿಲ್ಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

    ಜೂನ್ 10 ರಂದು ಕೋಲ್ಕತ್ತಾದಲ್ಲಿ ಜೂನಿಯರ್ ಡಾಕ್ಟರ್ ಪರಿಭಾ ಮುಖರ್ಜಿ ಎಂಬವವರ ಮೇಲೆ ಮಾರಣಾಂತಿಕ ಹಲ್ಲೆಯಾಗಿತ್ತು. ಈ ಘಟನೆಯನ್ನು ಖಂಡಿಸಿ ಇಂದು ಗದಗಿನ ಜಿಮ್ಸ್ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳು ಹಣೆಗೆ ಪಟ್ಟಿ ಹಾಗೂ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

    ಈ ವೇಳೆ ಕರ್ನಾಟಕ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಅನ್ನದಾನಿ ಮೇಟಿ ಮಾತನಾಡಿ, ವೈದ್ಯರ ಮೇಲಿನ ಹಲ್ಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಈಗ ನಡೆದಿರೋ ಘಟನೆಯಲ್ಲಿ ಭಾಗಿಯಾದವರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೈದ್ಯಾಧಿಕಾರಿಗಳಿಂದ ವಸಂತನಗರ ಡರ್ಟಿ ಕಿಚನ್ ಮೇಲೆ ದಾಳಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೈದ್ಯಾಧಿಕಾರಿಗಳಿಂದ ವಸಂತನಗರ ಡರ್ಟಿ ಕಿಚನ್ ಮೇಲೆ ದಾಳಿ

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆನ್‍ಲೈನ್ ಫುಡ್ ಆರ್ಡರ್ ಮಾಫಿಯಾ ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಬಗ್ಗೆ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಡೆಸಿತ್ತು. ಈ ಡರ್ಟಿ ಕಿಚನ್‍ಗಳ ಬಗ್ಗೆ ಇಂದು ಬೆಳಗ್ಗಿನಿಂದಲೇ ವಿಸ್ತೃತವಾದ ವರದಿ ಕೂಡ ಪ್ರಸಾರ ಮಾಡಿತ್ತು. ಈ ಸುದ್ದಿ ಪ್ರಸಾರವಾದ ಬೆನ್ನಲ್ಲೇ ವಸಂತನಗರದ ವೈದ್ಯಾಧಿಕಾರಿಗಳು ಎಚ್ಚೆತ್ತು ದಾಳಿ ಮಾಡಿದ್ದಾರೆ.

    ಬೆಂಗಳೂರಿನ ವಸಂತನಗರ ತಡ್ಕವಾಲಾ, ಬನ್ನೆರುಗಟ್ಟದ ಶುದ್ಧ್ ದೇಸಿ ಖಾನ, ಲೆಟ್ ನೈಟ್ ಕಿಚನ್‍ಗಳಿಂದ ಅರ್ಧ ಬೆಂಗಳೂರಿಗೆ ಫುಡ್ ಡೆಲಿವರಿ ಆಗುತ್ತಿತ್ತು. ಆದರೆ ಇಲ್ಲಿ ಸ್ವಚ್ಛತೆ ಅನ್ನೋದೇ ಇರಲಿಲ್ಲ. ಅದರಲ್ಲೂ ವಸಂತನಗರ ತಡ್ಕವಾಲಾ ಕಿಚನ್‍ನಲ್ಲಿ ಟಾಯ್ಲೆಟ್ ರೂಮಿನಲ್ಲಿ ಕಡಾಯಿ ಇಟ್ಟುಕೊಂಡು ಅಡುಗೆ ಮಾಡಲಾಗುತ್ತಿತ್ತು. ಇದೀಗ ಈ ಡರ್ಟಿ ಕಿಚನ್‍ನ ಮೇಲೆ ಪಾಲಿಕೆಯ ವೈದ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡೋ ಮುನ್ನ ಹುಷಾರ್

    ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ರೇಡ್ ಮಾಡಿ ವಸಂತನಗರದ ತಡ್ಕವಾಲಾ ಡರ್ಟಿ ಕಿಚನ್‍ಗೆ ಶಿವಾಜಿನಗರದ ಆರೋಗ್ಯ ವೈದ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ವಸಂತನಗರ ಹೆಲ್ತ್ ಇನ್ಸ್ ಪೆಕ್ಟರ್ ರೇಣುಕಾಂಬ, ಹಿರಿಯ ಆರೋಗ್ಯ ಪರಿವೀಕ್ಷಕರು ಹಾಗೂ ಸಿಬ್ಬಂದಿ ಕೂಡ ಇದ್ದರು.

    ದಾಳಿ ವೇಳೆ ಕಿಚನ್‍ನಲ್ಲಿ ಸಿಕ್ಕಿದ ಪ್ಲಾಸ್ಟಿಕ್ ಹಾಗೂ ಕೊಳೆತ ವಸ್ತುಗಳು, ಅವಧಿ ಮುಗಿದ ಚಿಲ್ಲಿ, ಟೊಮೆಟೋ ಸಾಸ್ ಮೊದಲಾದವುಗಳನ್ನು ವೈದ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವೈದ್ಯಾಧಿಕಾರಿಗಳ ದಾಳಿಯಿಂದ ಸಿಬ್ಬಂದಿ ಹೆದರಿದ್ದು, ಈ ಬಗ್ಗೆ ಮಾಹಿತಿ ತಿಳಿದರೂ ಕಿಚನ್ ಮಾಲೀಕ ಮಾತ್ರ ಸ್ಥಳಕ್ಕೆ ಬಂದಿಲ್ಲ.

  • ನಿಮ್ಹಾನ್ಸ್ ಓಪಿಡಿ ಬಂದ್- ಚಿಕಿತ್ಸೆಗಾಗಿ ರೋಗಿಗಳು ನರಳಾಟ, ಇತ್ತ ವೈದ್ಯರ ಹೋರಾಟ

    ನಿಮ್ಹಾನ್ಸ್ ಓಪಿಡಿ ಬಂದ್- ಚಿಕಿತ್ಸೆಗಾಗಿ ರೋಗಿಗಳು ನರಳಾಟ, ಇತ್ತ ವೈದ್ಯರ ಹೋರಾಟ

    ಬೆಂಗಳೂರು: ಸಾರ್ವಜನಿಕರಿಗೆ ನಿಮ್ಹಾನ್ಸ್ ಆಸ್ಪತ್ರೆಯ ಓಪಿಡಿ ಇಂದು ಬಂದ್ ಆಗಿರುತ್ತದೆ ಎನ್ನುವ ಬಗ್ಗೆ ಮಾಹಿತಿ ಇರದ ಹಿನ್ನೆಲೆ ಆಸ್ಪತ್ರೆಯಲ್ಲಿ ರೋಗಿಗಳು ಕಿಕ್ಕಿರಿದು ತುಂಬಿದ್ದು, ವೈದ್ಯರಿಲ್ಲದೆ ಚಿಕಿತ್ಸೆಗಾಗಿ ನರಳಾಡುತ್ತಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಸ್ಥೆ ಪ್ರತಿಭಟನೆಗೆ ಕರೆಕೊಟ್ಟಿದ್ದು, ರಾಜ್ಯದಲ್ಲೂ ವೈದ್ಯಕೀಯ ಸೇವೆ ವ್ಯತ್ಯಯವಾದ ಪರಿಣಾಮ ರೋಗಿಗಳು ಪರಡಾಡುತ್ತಿದ್ದಾರೆ.

    ನಿಮ್ಹಾನ್ಸ್ ಆಸ್ಪತ್ರೆ ಓಪಿಡಿ ಬಂದ್ ವಿಚಾರವಾಗಿ ಸಾರ್ವಜನಿಕರಿಗೆ ಮಾಹಿತಿ ಇರಲಿಲ್ಲ. ಹೀಗಾಗಿ ರೋಗಿಗಳು ಚಿಕಿತ್ಸೆಗೆಂದು ದೂರದ ಊರುಗಳಿಂದ ಬಂದಿದ್ದು, ವೈದ್ಯರು ಸಿಗದೆ ಗೋಳಾಡುತ್ತಿದ್ದಾರೆ. ಆದರೆ ಇಂದು ನಿಮ್ಹಾನ್ಸ್ ವೈದ್ಯರು ಹಾಗೂ ಸಿಬ್ಬಂದಿಗೆ ರಜೆ ಇರಲಿಲ್ಲ. ಆದರೂ ಕೂಡ ಹಲವು ವೈದ್ಯರು ಕರ್ತವ್ಯಕ್ಕೆ ಬಂದಿಲ್ಲ. ಹೀಗಾಗಿ ಓಪಿಡಿ ಕ್ಲೋಸ್ ಆಗಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ.

    ಈ ಬಗ್ಗೆ ಮಾಹಿತಿ ಇಲ್ಲದೆ ದೂರದ ಗುಲ್ಬರ್ಗ, ಹುಬ್ಬಳ್ಳಿ ಹಾಗೂ ಇತರೆ ನಗರಗಳಿಂದ ರೋಗಿಗಳು ಬಂದು ವೈದ್ಯರು ಸಿಗದೇ ರೋಗಿಗಳು ಕಂಗಲಾಗಿದ್ದಾರೆ. ಭಾನುವಾರ ತಡರಾತ್ರಿಯಿಂದ ವೈದ್ಯರಿಗಾಗಿ ರೋಗಿಗಳು ಕಾದು ಕುಳಿತಿದ್ದಾರೆ.

    ಅಷ್ಟೇ ಅಲ್ಲದೆ ಆಸ್ಪತ್ರೆ ಒಳಗಿರುವ ರೋಗಿಗಳಿಗೂ ಕೂಡ ವೈದ್ಯರು ಚಿಕಿತ್ಸೆ ನೀಡುತ್ತಿಲ್ಲ ಎಂದು ನಿಮ್ಹಾನ್ಸ್ ಆಸ್ಪತ್ರೆ ಬಳಿ ವೈದ್ಯರ ವಿರುದ್ಧ ರೋಗಿಗಳು ಹಾಗೂ ಅವರ ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಕ್ಕಳು, ವಯಸ್ಸಾದವರ ಗೋಳು ಕೇಳೋರಿಲ್ಲದಂತಾಗಿದೆ. ಹೀಗಾಗಿ ಚಿಕಿತ್ಸೆಗಾಗಿ ರೋಗಿಗಳು ಕಲ್ಲುಗಳ ಮೇಲೆ ಕಾದು ಕುಳಿತಿದ್ದಾರೆ. ಅಲ್ಲದೆ ವೈದ್ಯರೇ ಒಪ್ಪಿ ನಮಗೆ ಚಿಕಿತ್ಸೆ ಕೊಡಿ ಪ್ಲೀಸ್. ವೈದ್ಯೋ ನಾರಾಯಣ ಹರೇ ಎನ್ನುವುದನ್ನ ಮರೆಯಬೇಡಿ ಎಂದು ರೋಗಿಗಳು ಮನವಿ ಮಾಡಿಕೊಂಡಿದ್ದಾರೆ.

    ಚಿಕಿತ್ಸೆಗಾಗಿ ರೋಗಿಗಳು ನರಳುತ್ತಿದ್ದರೆ ಅತ್ತ ವೈದ್ಯರು ನಿಮ್ಹಾನ್ಸ್ ಆಸ್ಪತ್ರೆ ಆವರಣದಲ್ಲಿ ರ್ಯಾಲಿ ಮಾಡುತ್ತಿದ್ದಾರೆ. ಹೊರ ರೋಗಿಗಳು ಚಿಕಿತ್ಸೆಗಾಗಿ ಪರದಾಡುತ್ತಿರುವುದನ್ನ ನೋಡಿದರೂ, ನೋಡದಂತೆ ವೈದ್ಯರು ಹೋಗುತ್ತಿದ್ದಾರೆ. ಜೀವ ಅಮೂಲ್ಯವಾದದ್ದು, ರಕ್ಷಿಸಿ ಎಂದು ಬೋರ್ಡ್ ಹಿಡಿದು ವೈದ್ಯರು ರ್ಯಾಲಿ ನಡೆಸುತ್ತಿದ್ದು, ನಿರ್ದೇಶಕರ ಭೇಟಿ ಮಾಡಿ ಮನವಿ ನೀಡಿದ ನಂತರ ಇಂದು ಕೆಲಸ ಮಾಡಬೇಕಾ ಇಲ್ಲವಾ ಎಂದು ತೀರ್ಮಾನ ಮಾಡಲಾಗುತ್ತದೆ ಎನ್ನಲಾಗಿದೆ.

  • ಚಾಮರಾಜನಗರದ ಕಾಡಂಚಿನಲ್ಲಿ ವಿಚಿತ್ರ ಕಾಯಿಲೆ

    ಚಾಮರಾಜನಗರದ ಕಾಡಂಚಿನಲ್ಲಿ ವಿಚಿತ್ರ ಕಾಯಿಲೆ

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದ್ದು, ಇದರಿಂದ ಇಲ್ಲಿನ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

    ಹನೂರು ತಾಲೂಕಿನ ಕಾಡಂಚಿನ ಗ್ರಾಮಗಳಾದ ಟಿ.ಜಿ.ದೊಡ್ಡಿ, ಆರ್ ಬಿ ತಾಂಡದ ಗ್ರಾಮದ ಜಾಗೇರಿ ತಾಂಡ ಜನಾಂಗದ 450ಕ್ಕೂ ಹೆಚ್ಚು ಜನರಿಗೆ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದೆ. ಮೊದಲಿಗೆ ತಲೆ ನೋವು, ಜ್ವರ, ಕೀಲು ನೋವು, ತಲೆ ಸುತ್ತು ಕಾಣಿಸಿಕೊಂಡು ಸುಸ್ತಿನಿಂದ ಇಲ್ಲಿನ ಜನ ಬಳಲುತ್ತಿದ್ದಾರೆ.

    ಜನರು ಆಸ್ಪತ್ರೆಗೆ ಹೋದರೆ ಇದು ಯಾವ ಕಾಯಿಲೆ ಎಂದು ವೈದ್ಯರು ಹೇಳುತ್ತಿಲ್ಲ. ವೈದ್ಯರು ಕೊಡುವ ಔಷಧಿಯನ್ನು ತೆಗೆದುಕೊಂಡರೂ ಕಾಯಿಲೆ ಮಾತ್ರ ಗುಣ ಮುಖವಾಗುತ್ತಿಲ್ಲ. ಹೀಗಾಗಿ ಸದ್ಯ ಇಲ್ಲಿನ ಜನ ಆಸ್ಪತ್ರೆಗೂ ಹೋಗದ ಸ್ಥಿತಿ ನಿರ್ಮಾಣವಾಗಿದೆ.

    ಈ ಬಗ್ಗೆ ಸ್ಥಳೀಯ ಕಾಂಗ್ರೆಸ್ ಶಾಸಕ ಆರ್.ನರೇಂದ್ರಗೆ ತಿಳಿಸಿದರೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತು ಕತೆ ನಡೆಸಿಲ್ಲ. ಹೀಗಾಗಿ ಇಲ್ಲಿನ ಜನ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.