Tag: doctors

  • ಅಂತ್ಯಕ್ರಿಯೆಯಲ್ಲಿ ಗೊತ್ತಾಯ್ತು ರಿಮ್ಸ್ ಎಡವಟ್ಟು – ಆಸ್ಪತ್ರೆಯಲ್ಲಿ `ಪದ್ಮ’ ತಾಯಂದಿರ ಗಲಾಟೆ!

    ಅಂತ್ಯಕ್ರಿಯೆಯಲ್ಲಿ ಗೊತ್ತಾಯ್ತು ರಿಮ್ಸ್ ಎಡವಟ್ಟು – ಆಸ್ಪತ್ರೆಯಲ್ಲಿ `ಪದ್ಮ’ ತಾಯಂದಿರ ಗಲಾಟೆ!

    ರಾಯಚೂರು: ತಾಯಿ ಹೆಸರು ಒಂದೇ ಆಗಿದ್ದರಿಂದ ರಾಯಚೂರಿನ ರಿಮ್ಸ್ ಆಸ್ಪತ್ರೆ ವೈದ್ಯರು ಮಕ್ಕಳನ್ನು ಬದಲಿಸಿ ಎಡವಟ್ಟು ಮಾಡಿದ್ದಾರೆ.

    ಪದ್ಮ ಜಯಪ್ಪ ಜನವರಿ 28ರಂದು ಮನೆಯಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ತೂಕ ಕಡಿಮೆ ಇದ್ದ ಕಾರಣ ಅವರು ಮಗುವನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಪದ್ಮ ಮೋಹನ್ ಎಂಬವರು ಕೂಡ ಇಂದು ನಸುಕಿನ ಜಾವ 1.00 ಗಂಟೆಗೆ ಹೆಣ್ಣು ಮಗುವಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಜನನದ ಬಳಿಕ ಹೆಣ್ಣು ಮಗುವಿನ ಜನ್ಮ ದಾಖಲಾತಿ ಕೂಡ ನೀಡಿದ್ದು, ಆದರೆ ಆ ಮಗು ಪಾಶ್ರ್ವವಾಯುನಿಂದ ಬಳುತ್ತಿತ್ತು.

    ಎಡವಟ್ಟು ಆಗಿದ್ದು ಎಲ್ಲಿ?
    ಪದ್ಮ ಜಯಪ್ಪ ಹಾಗೂ ಪದ್ಮ ಮೋಹನ್ ಅವರ ಗಂಡು ಮತ್ತು ಹೆಣ್ಣು ಮಗುವನ್ನು ಮಕ್ಕಳನ್ನು ಎನ್‍ಐಸಿಯುನಲ್ಲಿ ಇರಿಸಲಾಗಿತ್ತು. ಆಸ್ಪತ್ರೆಯ ಸಿಬ್ಬಂದಿ ಎರಡು ಕಡೆಯೂ ಪದ್ಮ ಮಗು (Baby of Padma) ಎಂದು ಬರೆದುಕೊಂಡಿದ್ದರು. ಈ ಮಧ್ಯೆ ಇಂದು ನಸುಕಿನ ಜಾವ 3.50ರ ಸುಮಾರಿಗೆ ಪದ್ಮ ಜಯಪ್ಪ ಅವರ ಗಂಡು ಮಗು ಮೃತಪಟ್ಟಿದೆ.

    ಆಸ್ಪತ್ರೆ ಸಿಬ್ಬಂದಿ ಪದ್ಮ ಜಯಪ್ಪ ಅವರ ಮಗುವನ್ನು ಪದ್ಮ ಮೋಹನ್ ಅವರಿಗೆ ನೀಡಿ ನಿಮ್ಮ ಮಗು ಮೃತಪಟ್ಟಿದೆ ಎಂದು ಶಿಶುವನ್ನು ಬಟ್ಟೆಯಿಂದ ಸುತ್ತಿ ನೀಡಿದ್ದಾರೆ. ಪದ್ಮ ಮೋಹನ್ ಹಾಗೂ ಅವರ ಕುಟುಂಬದವರು ತಮ್ಮದೇ ಮಗು ಎಂದು ತಿಳಿದು ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುವಾಗ ಹೆಣ್ಣು ಮಗು ಬದಲಾಗಿ ಗಂಡು ಮಗುವನ್ನು ವೈದ್ಯರು ನೀಡಿರುವ ವಿಚಾರ ಬೆಳಕಿಗೆ ಬಂದಿದೆ.

    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪದ್ಮ ಮೋಹನ್ ಆಸ್ಪತ್ರೆಗೆ ತೆರಳಿ ಇದು ನಮ್ಮ ಮಗು ಅಲ್ಲ ಎಂದು ವೈದ್ಯರಿಗೆ ಹೇಳಿದ್ದಾರೆ. ಈ ವೇಳೆ ಪದ್ಮ ಜಯಪ್ಪ ಅವರಿಗೆ ತಮ್ಮ ಗಂಡು ಶಿಶು ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಹೆಣ್ಣು ಮಗು ನಮ್ಮದು ಎಂದು ವೈದ್ಯರ ಬಳಿ ಗಲಾಟೆ ಮಾಡಿದ್ದಾರೆ. ಪದ್ಮ ಮೋಹನ್ ಅವರ ಹೆಣ್ಣು ಮಗು ಈಗ ಎನ್‍ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ.

  • ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು – ಆಸ್ಪತ್ರೆಗೆ ಕಲ್ಲು ಎಸೆದು, ಶವವಿಟ್ಟು ಪ್ರತಿಭಟನೆ

    ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು – ಆಸ್ಪತ್ರೆಗೆ ಕಲ್ಲು ಎಸೆದು, ಶವವಿಟ್ಟು ಪ್ರತಿಭಟನೆ

    ಶಿವಮೊಗ್ಗ: ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಆಕೆಯ ಸಂಬಂಧಿಗಳು ಆಸ್ಪತ್ರೆಗೆ ಕಲ್ಲು ಎಸೆದು, ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.

    ಭದ್ರಾವತಿ ತಾಲೂಕು ಬಾರಂದೂರು ಗ್ರಾಮದ ರಾಧಾ ಎಂಬವರು ಹೆರಿಗೆಗಾಗಿ ಕಳೆದ ಭಾನುವಾರ ಭದ್ರಾವತಿಯ ನಿರ್ಮಲಾ ಆಸ್ಪತ್ರೆಗೆ ದಾಖಲಾಗಿದ್ದರು. ರಾಧಾ ಅವರು ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಸಂದರ್ಭದಲ್ಲಿ ಹೆಚ್ಚು ರಕ್ತ ಸ್ರಾವವಾಗಿದ್ದರಿಂದ ಬಾಣಂತಿಯನ್ನು ಬೇರೆ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗುವಂತೆ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ರಾಧಾ ಅವರನ್ನು ನಿನ್ನೆ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಧಾ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ.

    ರಾಧಾ ಸಾವಿಗೆ ಮೊದಲು ಚಿಕಿತ್ಸೆ ನೀಡಿದ ನಿರ್ಮಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಕೆಯ ಸಂಬಂಧಿಕರು ಆರೋಪ ಮಾಡಿದ್ದಾರೆ. ಈ ವೇಳೆ ರಾಧಾ ಮೃತ ದೇಹವನ್ನು ಆಸ್ಪತ್ರೆ ಮುಂದೆ ಇಟ್ಟು ಪ್ರತಿಭಟನೆ ನಡೆಸಿದರು. ವೈದ್ಯರು ಹಾಗೂ ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯ ಸಂದರ್ಭದಲ್ಲಿ ಆಕ್ರೋಶಗೊಂಡ ಸಂಬಂಧಿಗಳು ಆಸ್ಪತ್ರೆಗೆ ಕಲ್ಲು ತೂರಾಟ ನಡೆಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಓಲ್ಡ್ ಟೌನ್ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸ್ ಮಧ್ಯಪ್ರವೇಶದ ವೇಳೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಮೃತ ರಾಧಾ ಸಂಬಂಧಿಕರ ನಡುವೆ ವಾಗ್ದಾಳಿ ನಡೆಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮುರಿದ ಕೈಗೆ ಮರುಜೀವ ಕೊಟ್ಟ ವಿಮ್ಸ್ ವೈದ್ಯರು

    ಮುರಿದ ಕೈಗೆ ಮರುಜೀವ ಕೊಟ್ಟ ವಿಮ್ಸ್ ವೈದ್ಯರು

    ಬಳ್ಳಾರಿ: ಅಪಘಾತದಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ ಕೈಯನ್ನು ವೈದ್ಯರು ಮರುಜೋಡಣೆ ಮಾಡಿರುವ ಅಪರೂಪದ ಘಟನೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಸಾಕ್ಷಿಯಾಗಿದ್ದು, ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ಉಚಿತವಾಗಿ ಆಪರೇಷನ್ ಮಾಡಿ ಯಶಸ್ವಿಯಾಗಿದ್ದಾರೆ.

    ಕೈ ಕಳೆದುಕೊಂಡು ಜೀವನವೇ ಮುಗಿದು ಹೋಯ್ತು ಎಂದುಕೊಂಡಿದ್ದ ಮಹಿಳೆಗೆ ಇದೀಗ ಮರು ಜೀವ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮುಮ್ತಾಜ್ ಎಂಬವರು ಬಿಸಿಯೂಟ ಅಡುಗೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಡಿಸೆಂಬರ್ ನಲ್ಲಿ ಎರಡು ಟ್ರಾಕ್ಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಅಪಘಾತವಾದ ಪರಿಣಾಮ ಮಮ್ತಾಜ್ ತಮ್ಮ ಕೈಯನ್ನು ಮುರಿದುಕೊಂಡಿದ್ದರು. ಅಪಘಾತವಾದ ತಕ್ಷಣ ಮಹಿಳೆಯನ್ನು ಮೊಳಕಾಲ್ಮೂರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು.

    ಮುಮ್ತಾಜ್ ಅವರ ಕೈ ಜೋಡಣೆಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಹತ್ತು ವೈದ್ಯರ ತಂಡ ಚಾಲೆಂಜ್ ರೀತಿಯಲ್ಲಿ ತೆಗೆದುಕೊಂಡಿದ್ದರು. ಹಾಗೆಯೇ ಸತತ ಮೂರು ಗಂಟೆಗಳ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಮುಮ್ತಾಜ್ ಅವರಿಗೆ ಕೈ ಮರುಜೋಡಣೆ ಮಾಡಿದ್ದಾರೆ. ಇದೊಂದು ಅಪರೂಪದ ಆಪರೇಷನ್ ಆಗಿದ್ದು, ಲಕ್ಷಕ್ಕೊಬ್ಬರಿಗೆ ಈ ರೀತಿಯ ಆಪರೇಷನ್ ಯಶಸ್ವಿಯಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೆಸಾರ್ಟಿನಲ್ಲಿ ಕೈ ಶಾಸಕರ ಬಡಿದಾಟಕ್ಕೆ ಖಾಕಿ ಎಂಟ್ರಿ?

    ರೆಸಾರ್ಟಿನಲ್ಲಿ ಕೈ ಶಾಸಕರ ಬಡಿದಾಟಕ್ಕೆ ಖಾಕಿ ಎಂಟ್ರಿ?

    ಬೆಂಗಳೂರು: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ಕಂಪ್ಲಿ ಶಾಸಕ ಗಣೇಶ್ ಇಬ್ಬರ ನಡುವಿನ ಗಲಾಟೆಗೆ ಈಗ ಪೊಲೀಸರು ಎಂಟ್ರಿ ಕೊಟ್ಟಿದ್ದು, ತನಿಖೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

    ಈಗಲ್‍ಟನ್ ರೆಸಾರ್ಟಿನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೆ ಒಳಗಾದ ಆನಂದ್ ಸಿಂಗ್ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪೋಲೋ ಆಸ್ಪತ್ರೆ ತನ್ನ ಮೆಡಿಕೋ ಲೀಗಲ್ ಕೇಸ್(ಎಂಎಲ್‍ಸಿ) ವರದಿಯಲ್ಲಿ ಹಲ್ಲೆಯಾಗಿದೆ ಎಂದು ಉಲ್ಲೇಖಿಸಿದೆ. ಅಷ್ಟೇ ಅಲ್ಲದೇ ಆಸ್ಪತ್ರೆ ಎಂಎಲ್‍ಸಿ ವರದಿಯನ್ನು ಸ್ಥಳೀಯ ಪೊಲೀಸರಿಗೆ ನೀಡಿದೆ.

    ಆಸ್ಪತ್ರೆ ನೀಡಿರುವ ಎಂಎಲ್‍ಸಿ ವರದಿ ಹಿನ್ನೆಲೆಯಲ್ಲಿ ಹಲ್ಲೆಗೊಳಗಾದ ಶಾಸಕ ಆನಂದ್ ಸಿಂಗ್ ಅವರಿಂದ ಘಟನೆಯ ಬಗ್ಗೆ ಮಾಹಿತಿ ಸಂಗ್ರಹ ದಾಖಲಿಸಲು ಪೊಲೀಸರು ಮುಂದಾಗಿದ್ದರು. ಆದರೆ ಗಾಯಗೊಂಡಿದ್ದ ಆನಂದ್ ಸಿಂಗ್ ಆರೋಗ್ಯದಲ್ಲಿ ಇನ್ನೂ ಚೇತರಿಕೆ ಕಂಡಿರಲಿಲ್ಲ. ಹೀಗಾಗಿ ಆಸ್ಪತ್ರೆ ವೈದ್ಯರು ಆನಂದ್ ಸಿಂಗ್ ವಿಚಾರಣೆಗೆ ಅವಕಾಶ ನೀಡಲಿಲ್ಲ ಎನ್ನುವ ವಿಚಾರ ತಿಳಿದುಬಂದಿದೆ.

    ಆನಂದ್ ಸಿಂಗ್ ಆರೋಗ್ಯದಲ್ಲಿ ಇನ್ನೂ ಚೇತರಿಕೆ ಕಾಣಬೇಕಿದೆ. ಆದ್ದರಿಂದ ಸದ್ಯಕ್ಕೆ ಅವರ ಬಳಿ ಯಾರನ್ನು ಬಿಡುವುದಿಲ್ಲ ಎಂದು ವೈದ್ಯರು ಪೊಲೀಸರಿಗೆ ಹೇಳಿದ್ದಾರೆ. ವೈದ್ಯರ ಸೂಚನೆಯಂತೆ ಪೊಲೀಸರು ಆನಂದ್ ಸಿಂಗ್ ಹೇಳಿಕೆ ದಾಖಲಿಸದೇ ವಾಪಸ್ಸಾಗಿದ್ದಾರೆ. ಇಂದು ಮಧ್ಯಾಹ್ನ ಮತ್ತೆ ಶಾಸಕ ಆನಂದ್ ಸಿಂಗ್ ಹೇಳಿಕೆಯನ್ನು ಪೊಲೀಸರು ಪಡೆಯವ ಸಾಧ್ಯತೆಯಿದೆ.

    ಒಂದು ವೇಳೆ ಈ ಘಟನೆ ಬಗ್ಗೆ ಆನಂದ್ ಸಿಂಗ್ ಹೇಳಿಕೆ ದಾಖಲಿಸಿದರೆ ಕಂಪ್ಲಿ ಶಾಸಕ ಗಣೇಶ್ ಗೆ ಹೊಸ ಸಂಕಷ್ಟ ಶುರುವಾಗಲಿದೆ. ಈಗಾಗಲೇ ಎಂಎಲ್‍ಸಿ ವರದಿಯಲ್ಲಿ ಗಂಭೀರವಾಗಿ ಹಲ್ಲೆಯಾಗಿದೆ ಎಂದು ನಮೂದಿಸಲಾಗಿದೆ. ಸದ್ಯಕ್ಕೆ ಆನಂದ್ ಸಿಂಗ್ ವಿಚಾರಣೆ ಬಳಿಕ ಪೊಲೀಸರು ದೂರು ಸ್ವೀಕರಿಸಿ ಪ್ರಕರಣ ದಾಖಲಿಸುತ್ತಾರೆ. ನಂತರ ಶಾಸಕ ಗಣೇಶ್ ವಿಚಾರಣೆ ನಡೆಸುವ ಸಾಧ್ಯತೆ ಇದೆ.

    ಕಾಂಗ್ರೆಸ್ ಸರ್ಕಸ್?
    ಗಣೇಶ್ ವಿರುದ್ಧ ಕ್ರಮ ಕೈಗೊಳ್ಳಿ ಅಥವಾ ದೂರಿಗೆ ಅವಕಾಶ ಕೊಡಿ ಎಂದು ಆನಂದ್ ಸಿಂಗ್ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಕುಟುಂಬಸ್ಥರು ಪಟ್ಟು ಹಿಡಿಯುತ್ತಿದ್ದಂತೆ ಅವರ ಮನವೊಲಿಕೆಗೆ ಕೈ ನಾಯಕರು ರಾತ್ರಿಯಿಂದ ಸರ್ಕಸ್ ಆರಂಭಿಸಿದ್ದಾರೆ. ದೂರು, ತನಿಖೆ ಎಂದು ಹೋದರೆ ಎಲ್ಲರಿಗೂ ಮುಜುಗರ ಆಗುತ್ತದೆ ಎಂದು ಹೇಳಿ ಆನಂದ್ ಸಿಂಗ್ ಜೊತೆ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ. ಆದರೆ ಕುಟುಂಬದವರು ದೂರು ದಾಖಲಿಸಲೇಬೇಕು. ಗಣೇಶ್ ಮೇಲೆ ಕಾನೂನು ರೀತಿಯ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹೀಗಾಗಿ ಕುಟುಂಬದವರ ಮನವೊಲಿಸಲು ಕೈ ನಾಯಕರು ಮುಂದಾಗಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ತಿಳಿದುಬಂದಿದೆ.

    https://www.youtube.com/watch?v=9xgPiNXdmxU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಜಯದೇವ ಹೃದ್ರೋಗ ತಜ್ಞರಿಂದ ತಪಾಸಣೆ

    ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಜಯದೇವ ಹೃದ್ರೋಗ ತಜ್ಞರಿಂದ ತಪಾಸಣೆ

    ತುಮಕೂರು: ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಮಂಜುನಾಥ್ ನೇತೃತ್ವದ ನುರಿತ ವೈದ್ಯರ ತಂಡ ಸಿದ್ದಗಂಗಾ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದೆ. ಒಟ್ಟು ಐದು ಜನ ತಜ್ಞರ ತಂಡ ಸುಮಾರು 1 ಗಂಟೆಗಳ ಕಾಲ ಶ್ರೀಗಳ ತಪಾಸಣೆ ನಡೆಸಿ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ತಿಳಿಸಿದೆ.

    ಶ್ರೀಗಳ ಆರೋಗ್ಯ ತಪಾಸಣೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಾ. ಮಂಜುನಾಥ್ ಅವರು, ಶ್ರೀಗಳ ರಕ್ತದೊತ್ತಡ, ಹೃದಯ ಬಡಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದು, ಶ್ವಾಸಕೋಶದ ಸೋಂಕು ಕೂಡಾ ಕಡಿಮೆಯಾಗಿದೆ. ಆದರೆ ಶ್ರೀಗಳಿಗೆ ನಿಶ್ಯಕ್ತಿ ಇದ್ದು, ಬೆನ್ನು ಬಾಗಿರುವುದರಿಂದ ಶ್ವಾಸ ಕೋಶದ ಮೇಲೆ ಪರಿಣಾಮ ಬೀರುತ್ತಿದೆ. ಪರಿಣಾಮ ಉಸಿರಾಟಕ್ಕೆ ತೊಂದರೆಯಾಗುತ್ತಿರುವ ಕಾರಣ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ. ಆದ್ರೂ ಶ್ರೀಗಳು ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದರು.

    ಶ್ರೀಗಳು ಕಣ್ಣು ಬಿಟ್ಟು ನೋಡುತ್ತಿದ್ದು, ಸಿದ್ದಗಂಗಾ ಆಸ್ಪತ್ರೆಯಲ್ಲಿ ವಿಶ್ವ ದರ್ಜೆಯ ಐಸಿಯು ವ್ಯವಸ್ಥೆ ಇದೆ. ಇದರಿಂದ ಬೇರೆ ಕಡೆ ಶಿಪ್ಟ್ ಮಾಡುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರದ ನಿರ್ದೇಶನದಂತೆ ನಾವು ಐದು ಜನ ವೈದ್ಯರು ಬಂದಿದ್ದೇವೆ. ಶ್ರೀಗಳ ದೇಹದಲ್ಲಿ ಪ್ರೊಟೀನ್ ಅಂಶ ಏರಿಕೆಯಾಗಿರುವುದರಿಂದ ಅವರ ಆರೋಗ್ಯ ಗುಣವಾಗುತ್ತೆ ಎಂಬ ಆಶಾಭಾವನೆ ಇದೆ ಎಂದರು.

    ಸಿದ್ದಗಂಗಾ ಶ್ರೀ ಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನ ಆಸ್ಪತ್ರೆಗೆ ಸುತ್ತೂರು ಶ್ರೀ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವೈದ್ಯರ 1 ಇಂಜೆಕ್ಷನ್‍ಗೆ ಏಳು ತಿಂಗಳ ಗರ್ಭಿಣಿ ಸಾವು!

    ವೈದ್ಯರ 1 ಇಂಜೆಕ್ಷನ್‍ಗೆ ಏಳು ತಿಂಗಳ ಗರ್ಭಿಣಿ ಸಾವು!

    ಚಾಮರಾಜನಗರ: ವೈದ್ಯರ ನಿರ್ಲಕ್ಷ್ಯದಿಂದ ದಿಂದ 7 ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ನಡೆದಿದೆ.

    ನಗರದ ಅಂಬೇಡ್ಕರ್ ಬಡಾವಣೆಯ ನಿವಾಸಿ ಬಸವಣ್ಣ ಎಂಬವರ ಪುತ್ರಿ ನೇತ್ರಾವತಿ ಮೃತ ದುರ್ದೈವಿ. ನೇತ್ರಾವತಿ ಅವರು ತಿಂಗಳ ಚೆಕಪ್‍ಗಾಗಿ ಜಿಲ್ಲಾಸ್ಪತ್ರೆಗೆ ಬಂದಿದ್ದರು. ಈ ವೇಳೆ ತಪಾಸಣೆ ಮಾಡಿದ ವೈದ್ಯರು ಇಂಜೆಕ್ಷನ್ ನೀಡಿದ್ದಾರೆ.

    ಇಂಜೆಕ್ಷನ್ ನೀಡಿದ ಬಳಿಕ ಲೋ ಬಿಪಿಗೆ ಒಳಗಾದ ನೇತ್ರಾವತಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ವೈದ್ಯರು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇತ್ರಾವತಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.

    ಮಗಳನ್ನು ಕಳೆದುಕೊಂಡ ತಂದೆ, ತಾಯಿ ಹಾಗೂ ಸಂಬಂಧಿಕರು ಕಣ್ಣೀರಿಡುತ್ತಾ ವೈದ್ಯರಿಗೆ ಈಗ ಶಾಪ ಹಾಕುತ್ತಿದ್ದಾರೆ. ಮಗಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ನೇತ್ರಾವತಿ ತಂದೆ ಬಸವಣ್ಣ ವೈದ್ಯರ ವಿರುದ್ಧ ಆರೋಪಿಸಿದ್ದಾರೆ. ಕೆಲ ಹೊತ್ತು ಆಸ್ಪತ್ರೆಯ ಮುಂಭಾಗದಲ್ಲಿ ಕುಳಿತ ನೇತ್ರಾವತಿ ಸಂಬಂಧಿಕರು ವೈದ್ಯರ ವಿರುದ್ಧ ಧಿಕ್ಕಾರ ಕೂಗಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನರ್ಸ್, ವೈದ್ಯರು ಇಲ್ಲದ ವೇಳೆ ರೋಗಿ ಪ್ರಾಣ ಉಳಿಸಿದ ಸೆಕ್ಯುರಿಟಿ ಗಾರ್ಡ್

    ನರ್ಸ್, ವೈದ್ಯರು ಇಲ್ಲದ ವೇಳೆ ರೋಗಿ ಪ್ರಾಣ ಉಳಿಸಿದ ಸೆಕ್ಯುರಿಟಿ ಗಾರ್ಡ್

    ಚಾಮರಾಜನಗರ: ವೈದ್ಯರು ಹಾಗೂ ನರ್ಸ್ ಇಲ್ಲದ ವೇಳೆ ರೋಗಿಯೊಬ್ಬರ ಗ್ಲುಕೋಸ್ ಬಾಟಲಿಯನ್ನು ಬದಲಾಯಿಸುವ ಮೂಲಕ ಸೆಕ್ಯುರಿಟಿ ಗಾರ್ಡ್ ಸತೀಶ್ ಮಾನವೀಯತೆ ಮೆರೆದಿರುವ ಘಟನೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

    ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರಿಗೆ ಗ್ಲುಕೋಸ್ ಬಾಟಲ್ ಅಳವಡಿಸಲಾಗಿತ್ತು. ಗ್ಲುಕೋಸ್ ಮುಗಿಯುವ ಹಂತಕ್ಕೆ ಬಂದಿತ್ತು. ಆದರೆ ಆ ಸಂದರ್ಭದಲ್ಲಿ ವೈದ್ಯರಾಗಲಿ, ದಾದಿಯರಾಗಲಿ ಅಲ್ಲಿ ಇರಲಿಲ್ಲ. ರೋಗಿಯ ಸಂಬಂಧಿಕರು ನರ್ಸ್ ಗಾಗಿ ಹುಡುಕಾಡಿದ್ದಾರೆ. ಆದರೆ ಆ ಸಂದರ್ಭದಲ್ಲಿ ಅವರು ಹೊರಹೋಗಿದ್ದರು ಎನ್ನಲಾಗಿದೆ.

    ಇದನ್ನು ಗಮನಿಸಿದ ಅಲ್ಲಿಯೇ ಇದ್ದ ಸೆಕ್ಯುರಿಟಿ ಗಾರ್ಡ್ ತಕ್ಷಣ ಧಾವಿಸಿ ಗ್ಲುಕೋಸ್ ಬಾಟಲಿ ಬದಲಿಸಿ ನರ್ಸ್ ಮಾಡಬೇಕಾದ ಕೆಲಸವನ್ನು ತಾನೇ ಮಾಡಿದ್ದಾರೆ. ಒಂದು ವೇಳೆ ಖಾಲಿಯಾಗಿದ್ದ ಗ್ಲುಕೋಸ್ ಬಾಟಲಿಯನ್ನು ತಕ್ಷಣ ಬದಲಿಸದೆ ಇದ್ದಿದ್ದರೆ ಅದು ರೋಗಿಯ ರಕ್ತವನ್ನೇ ವಾಪಸ್ ಎಳೆದು ರೋಗಿಗೆ ಅಪಾಯ ಉಂಟಾಗುವ ಸಾಧ್ಯತೆಗಳಿದ್ದವು.

    ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಪ್ರಮಾಣದಲ್ಲಿ ವೈದ್ಯರು ಹಾಗು ನರ್ಸ್ ಗಳಿದ್ದರು ಇಂತಹ ಘಟನೆಗಳು ಆಗಾಗ ನಡೆಯುತ್ತಿರುತ್ತವೆ. ಈ ಬಗ್ಗೆ ಅಧಿಕಾರಿಗಳಿಗೆ ಅನೇಕ ಬಾರಿ ದೂರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ರೋಗಿಗಳ ಪ್ರಾಣದೊಂದಿಗೆ ಚಲ್ಲಾಟವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    https://www.youtube.com/watch?v=aJGIl36QcOI&feature=youtu.be

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪತ್ನಿ ಜೊತೆ ಸೆಕ್ಸ್ ಮಾಡುತ್ತಿದ್ದಾಗ ಹೀಗಾಗಿದ್ದಕ್ಕೆ ಆಪರೇಷನ್ ಮಾಡಬೇಕಾಯ್ತು!

    ಪತ್ನಿ ಜೊತೆ ಸೆಕ್ಸ್ ಮಾಡುತ್ತಿದ್ದಾಗ ಹೀಗಾಗಿದ್ದಕ್ಕೆ ಆಪರೇಷನ್ ಮಾಡಬೇಕಾಯ್ತು!

    ಸ್ಯಾಂಟೋ ಡೊಮಿಂಗೊ: ವ್ಯಕ್ತಿಯೊಬ್ಬ ಪತ್ನಿಯ ಜೊತೆ ವಿಲಕ್ಷಣವಾಗಿ ಸೆಕ್ಸ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಆತನ ಪೃಷ್ಠದ ಒಳಗಡೆ ಏರ್‌ಫ್ರೆಶ್‌ನರ್ ಬಾಟಲಿ ಸಿಕ್ಕಿಕೊಂಡಿದ್ದ ಘಟನೆ ಡೊಮಿನಿಕನ್ ರಿಪಬ್ಲಿಕ್ ದೇಶದಲ್ಲಿ ನಡೆದಿದೆ.

    40 ವರ್ಷದ ವ್ಯಕ್ತಿ ಸ್ಯಾಂಟೋ ಡೊಮಿಂಗೋದಲ್ಲಿನ ಫ್ರಾನ್ಸಿಸ್ಕೋ ಮೆಸ್ಕೋಸಾ ಪುಲ್ಲೊ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ತುರ್ತು ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆತನ ಪೃಷ್ಠದ ಒಳಗಡೆ ಸಿಲುಕಿಕೊಂಡಿದ್ದ ಏರ್‌ಫ್ರೆಶ್‌ನರ್ ಬಾಟಲಿಯನ್ನು ಹೊರ ತೆಗೆದಿದ್ದಾರೆ.

    ವ್ಯಕ್ತಿ ತನ್ನ ಪತ್ನಿಯೊಂದಿಗೆ ಸೆಕ್ಸ್ ಆಟವಾಡುವಾಗ ಆಕಸ್ಮಿಕವಾಗಿ ಆತನ ಹಿಂಭಾಗದೊಳಗೆ ಏರ್‌ಫ್ರೆಶ್‌ನರ್ ಬಾಟಲಿ ಸಿಲುಕಿಕೊಂಡಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಸಮಾರು ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿ ಅದನ್ನು ಹೊರಗೆ ತೆಗೆದಿದ್ದಾರೆ.

    ಪತಿ ಜೊತೆ ಸೆಕ್ಸ್ ಗೇಮ್ ಆಟವಾಡುತ್ತಿದ್ದ ಸಂದರ್ಭದಲ್ಲಿ ಅವರು ಗುದನಾಳದೊಳಕ್ಕೆ ಅಲ್ಲೇ ಇದ್ದ ಏರ್‌ಫ್ರೆಶ್‌ನರ್ ಬಾಟಲಿಯನ್ನು ಹಾಕುವಂತೆ ನನ್ನಲ್ಲಿ ಮನವಿ ಮಾಡಿಕೊಂಡರು. ಹೀಗಾಗಿ ನಾನು ಬಾಟಲಿ ಹಾಕಿದ್ದು, ಅದು ಅರ್ಧದಲ್ಲೇ ಸಿಲುಕಿಕೊಂಡಿತ್ತು ಅಂತ ಪತ್ನಿ ನಡೆದ ಘಟನೆಯನ್ನು ವಿವರಿಸಿದ್ದಾರೆ.

    ಸದ್ಯ ವ್ಯಕ್ತಿಯ ದೇಹಕ್ಕೆ ಯಾವುದೇ ತೊಂದರೆ ಇಲ್ಲ. ಆರೋಗ್ಯವಾಗಿದ್ದಾರೆ. ಈ ರೀತಿ ಪ್ರಕರಣಗಳು ಅಸಾಮಾನ್ಯವಲ್ಲ, ಸೆಕ್ಸ್ ಗೇಮ್ ಆಡುವಾಗ ಮರದ ವಸ್ತು, ವಿವಿಧ ಬಾಟಲ್ ಗಳು, ಪ್ಲಾಸ್ಟಿಕ್ ವಸ್ತುಗಳು ಮತ್ತು ಬದನೆಕಾಯಿಯಂತಹ ತರಕಾರಿಗಳು ಸಿಕ್ಕಿ ಹಾಕಿಕೊಂಡವರು ನಮ್ಮ ಆಸ್ಪತ್ರೆಗೆ ಬಂದಿದ್ದಾರೆ. ಅನೇಕ ಮಂದಿ ಸೆಕ್ಸ್ ಗೆ ಸಂಬಂಧಿಸಿದ ಗಾಯಗಳಾದರೂ ಇಲ್ಲಿಗೆ ಬರುತ್ತಾರೆ ಎಂದು ವೈದ್ಯರು ಹೇಳಿದ್ದಾರೆ.

    ಸೆಕ್ಸ್ ಗೇಮ್ ಆಡುವಾಗ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಯಾಕೆಂದರೆ ಇಂತಹ ಘಟನೆಯಲ್ಲಿ ರಕ್ತಸ್ರಾವ, ಕರುಳಿಗೆ ಹಾನಿ ಅಥವಾ ಇತರ ಗಾಯಗಳಿಗೆ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಂದೇ ಕೊಠಡಿಯಲ್ಲಿ ವೈದ್ಯಾಧಿಕಾರಿಗಳಿಬ್ಬರ ಪೈಪೋಟಿ – ಸಿಬ್ಬಂದಿಗೆ ಗೊಂದಲ, ರೋಗಿಗಳು ಪರದಾಟ

    ಒಂದೇ ಕೊಠಡಿಯಲ್ಲಿ ವೈದ್ಯಾಧಿಕಾರಿಗಳಿಬ್ಬರ ಪೈಪೋಟಿ – ಸಿಬ್ಬಂದಿಗೆ ಗೊಂದಲ, ರೋಗಿಗಳು ಪರದಾಟ

    ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿರುವ ಕೆ.ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹುದ್ದೆಗೆ ಇಬ್ಬರು ವೈದ್ಯರುಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಒಂದೇ ಕೊಠಡಿಯಲ್ಲಿ ಇಬ್ಬರು ತಾವೇ ವೈದ್ಯಾಧಿಕಾರಿ ಎಂದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಸಿಬ್ಬಂದಿಗೆ ಗೊಂದಲವನ್ನುಂಟು ಮಾಡಿದೆ.

    ಡಾ.ಶಶಿಕಲಾ ಮತ್ತು ಡಾ.ಮುರುಳಿ ಇಬ್ಬರು ವೈದ್ಯರು ತಾವೇ ವೈದ್ಯಾಧಿಕಾರಿ ಎಂದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡೂವರೆ ವರ್ಷಗಳಿಂದ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ.ಶಶಿಕಲಾ ಅವರ ಸ್ಥಾನಕ್ಕೆ ವೈದ್ಯಾಧಿಕಾರಿಯಾಗಿ ಡಾ. ಮುರುಳಿ ಕೃಷ್ಣ ಪಿ.ವಿ ಅವರನ್ನು ಆರೋಗ್ಯ ಇಲಾಖೆ ನೇಮಿಸಿದ್ದು, ಇದೀಗ ಇಬ್ಬರ ನಡುವಿನ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ.

    ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯಾಗಿ ಡಾ. ಶಶಿಕಲಾ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ವೈದ್ಯಾಧಿಕಾರಿಗಳ ಪ್ರಭಾರ ಹುದ್ದೆಯನ್ನು ಮುರುಳಿ ಕೃಷ್ಣರಿಗೆ ವಹಿಸಿಕೊಡಲಾಗಿತ್ತು. ಅದರಂತೆ ಅವರು ಪ್ರಭಾರ ವೈದ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆಯ ಏಕಾಏಕಿ ನಿರ್ಧಾರದ ವಿರುದ್ಧ ಡಾ. ಶಶಿಕಲಾ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಮೊರೆ ಹೋಗಿದ್ದಾರೆ.

    ನಾನು ಸೀನಿಯರ್ ಆಗಿದ್ದು, ಕೆಎಟಿಯಲ್ಲಿ ಅರ್ಜಿ ಸಲ್ಲಿಸಿದ್ದೇನೆ ಅಲ್ಲಿನ ತೀರ್ಪು ಹೊರ ಬರುವವರೆಗೂ ನಾನೇ ಆಡಳಿತ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಯಾರಿಗೂ ಅಧಿಕಾರ ಹಸ್ತಾಂತರಿಸುವುದಿಲ್ಲ ಎಂದು ಡಾ.ಶಶಿಕಲಾ ಪಟ್ಟು ಹಿಡಿದಿದ್ದಾರೆ. ಇತ್ತ ಹಿರಿಯ ಅಧಿಕಾರಿಗಳ ಆದೇಶದಂತೆ ಮುಖ್ಯ ವೈದ್ಯಾಧಿಕಾರಿ ಹುದ್ದೆಯ ಪ್ರಭಾರ ವಹಿಸಿಕೊಂಡಿದ್ದೇನೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಡಾ. ಶಶಿಕಲಾ, ಓಪಿಡಿ ಕೊಠಡಿ ಸಂಖ್ಯೆ ನಾಲ್ಕರಲ್ಲಿ ರೋಗಿಗಳನ್ನು ಪರೀಕ್ಷಿಸುವಂತೆ ಆದೇಶಿಸಲಾಗಿದ್ದು, ಅವರು ಅದನ್ನು ಪಾಲನೆ ಮಾಡಬೇಕು ಎಂದು ಡಾ. ಮುರುಳಿ ಕೃಷ್ಣ ಹೇಳುತ್ತಿದ್ದಾರೆ.

    ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹುದ್ದೆಗೆ ಇಬ್ಬರು ಪೈಪೋಟಿಗೆ ಬಿದ್ದಿದ್ದು, ಆಸ್ಪತ್ರೆಯ ಸಿಬ್ಬಂದಿ ಗೊಂದಲಕ್ಕೊಳಗಾಗಿ ಯಾವ ಅಧಿಕಾರಿಯ ಸೂಚನೆ ಪಾಲಿಸಬೇಕು ಎಂಬ ವಿಚಾರವಾಗಿ ದಿಕ್ಕು ತೋಚದಂತಾಗಿದ್ದಾರೆ. ಇತ್ತ ರೋಗಿಗಳು ಕೂಡ ಇಬ್ಬರ ಜಗಳದಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ವಿಐಪಿಗಳ ಭೇಟಿ ನಿಲ್ಲಿಸಬೇಕು: ವೈದ್ಯರ ಮನವಿ

    ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ವಿಐಪಿಗಳ ಭೇಟಿ ನಿಲ್ಲಿಸಬೇಕು: ವೈದ್ಯರ ಮನವಿ

    ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಆಗುತ್ತಿದ್ದು, ಆದರೆ ಪದೇ ಪದೇ ವಿಐಪಿಗಳು ಭೇಟಿ ನೀಡುವುದನ್ನು ನಿಲ್ಲಿಸಬೇಕು ಎಂದು ಬಿಜಿಎಸ್ ಆಸ್ಪತ್ರೆಯ ಡಾ.ರವೀಂದ್ರ ಮನವಿ ಮಾಡಿಕೊಂಡಿದ್ದಾರೆ.

    ಮಾಧ್ಯಮಗಳಿಗೆ ಶ್ರೀ ಗಳ ಆರೊಗ್ಯದ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಅವರು, ಶ್ರೀಗಳ ಆರೋಗ್ಯ ದಿನದಿಂದ ದಿನಕ್ಕೆ ಹೆಚ್ಚು ಉತ್ತಮವಾಗುತ್ತಿದ್ದು, ನಿನ್ನೆಗಿಂತ ಇಂದು ಸುಧಾರಣೆ ಆಗಿದೆ. ಆದರೆ ಶ್ರೀಗಳ ದರ್ಶನ ಪಡೆಯಲು ವಿಐಪಿಗಳು ಪದೇ ಪದೇ ಮಠಕ್ಕೆ ಭೇಟಿ ನೀಡುವುದನ್ನು ನಿಲ್ಲಿಸಬೇಕು. ಆ ಮೂಲಕ ಶ್ರೀಗಳ ಚಿಕಿತ್ಸೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

    ಇದೇ ವೇಳೆ ಚೆನ್ನೈ ಮೂಲದ ಸೋಂಕು ತಜ್ಞ ಡಾ.ಸುಬ್ರಾ ಅವರು ಮಾತನಾಡಿ, ಶ್ರೀಗಳು ನಿಧಾನವಾಗಿ ಚೇತರಿಸಿಕೊಳ್ಳುತ್ತಿದು, ಅವರಿಗೆ ವಯಸ್ಸಾಗಿರುವುದರಿಂದ ಚೇತರಿಕೆ ನಿಧಾನವಾಗುತ್ತಿದೆ. ಶ್ವಾಸಕೋಶ ಸೋಂಕು ಕೂಡ ಕಡಿಮೆಯಾಗುತ್ತಿದ್ದು, ಆಹಾರ ಸ್ವೀಕರಿಸಿಸುವುದು ನಿಧಾನವಾಗಿ ಹೆಚ್ಚುತ್ತಿದೆ. ಮಠದಲ್ಲೇ ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಲಭ್ಯ ಇರುವುದರಿಂದ ಅತ್ಯಂತ ಕಾಳಜಿಯಿಂದ ನೋಡಿಕೊಳ್ಳಲಾಗುತ್ತಿದೆ. ಜನರ ಪ್ರಾರ್ಥನೆ ಹಾಗೂ ಶ್ರೀಗಳ ವಿಲ್ ಪವರ್ ನಿಂದ ಬಹುಬೇಗ ಚೇತರಿಸಿಕೊಳ್ಳಲಿದ್ದಾರೆ. ಮಠದಲ್ಲೇ ಎಲ್ಲಾ ವೈದ್ಯಕೀಯ ವ್ಯವಸ್ಥೆ ಇರುವುದರಿಂದ, ಅವರನ್ನು ಬೇರೆ ಎಲ್ಲೂ ಶಿಫ್ಟ್ ಮಾಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟ ಪಡಿಸಿದರು.

    ಶ್ರೀಗಳನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ನೀಡುತ್ತಿಲ್ಲ, ಇದರಲ್ಲೇ ಅವರ ಆರೋಗ್ಯ ಪ್ರಗತಿಯ ಬಗ್ಗೆ ತಿಳಿಯುತ್ತದೆ. ಜನರ ಪ್ರಾರ್ಥನೆಯೇ ಅವರ ಚೇತರಿಕೆ ಪ್ರಮುಖ ಕಾರಣವೂ ಆಗಲಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv