Tag: doctors

  • ರಾಧಿಕಾ ಕೆಜಿಎಫ್ ನೋಡಿಲ್ಲ – ರಾಕಿ ಭಾಯ್ ಸ್ಪಷ್ಟನೆ

    ರಾಧಿಕಾ ಕೆಜಿಎಫ್ ನೋಡಿಲ್ಲ – ರಾಕಿ ಭಾಯ್ ಸ್ಪಷ್ಟನೆ

    ಬೆಂಗಳೂರು: ಭಾರತದಾದ್ಯಂತ ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಸಿನಿಮಾವನ್ನು ನೋಡಿ ಜನರು ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಆದರೆ ಯಶ್ ಪತ್ನಿ ರಾಧಿಕಾ ಪಂಡಿತ್ ಇನ್ನೂ ಕೆಜೆಎಫ್ ಸಿನಿಮಾವನ್ನು ನೋಡಿಲ್ಲ.

    ಹೌದು.. ನಟಿ ರಾಧಿಕಾ ಪಂಡಿತ್ ಇನ್ನೂ ಕೆಜಿಎಫ್ ಸಿನಿಮಾವನ್ನು ನೋಡಿಲ್ಲ. ಈ ಬಗ್ಗೆ ಯಶ್ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಕೆಜಿಎಫ್ ಸಿನಿಮಾವನ್ನು ಹೊಸ ಸೌಂಡ್‍ನಲ್ಲಿ ನೋಡುವುದಕ್ಕೆ ಓರಾಯನ್ ಮಾಲ್‍ ಗೆ ಹೋಗಿದ್ದರು. ಈ ವೇಳೆ ಅಭಿಮಾನಿಗಳ ಜೊತೆ ಸಿನಿಮಾ ನೋಡಿದ ಯಶ್, ರಾಧಿಕಾ ಪಂಡಿತ್ ಇನ್ನೂ ಸಿನಿಮಾ ನೋಡಿಲ್ಲಾ ಎಂದು ಹೇಳಿದ್ದಾರೆ. ಇದನ್ನೂ ಓದಿ: 150 ಕೋಟಿಯ ಕ್ಲಬ್ ಸೇರಿ ದಾಖಲೆ ಬರೆದ ಕೆಜಿಎಫ್!

    ರಾಧಿಕಾ ಅವರಿಗೂ ಸಿನಿಮಾ ನೋಡಬೇಕೆಂಬ ಆಸೆ ಇದೆ. ಆದರೆ ನೋಡಲು ಸಾಧ್ಯವಾಗಿಲ್ಲ. ಎಲ್ಲರೂ ಇಷ್ಟೊಂದು ಇಷ್ಟ ಪಡುತ್ತಿದ್ದಾರೆ. ನಾನು ಸಿನಿಮಾ ನೋಡಲೇಬೇಕು ಎಂದು ಪ್ರತಿದಿನ ಕೇಳುತ್ತಿದ್ದಾರೆ. ಆದರೆ ರಾಧಿಕಾ ಇನ್ನೂ ಸ್ವಲ್ಪ ದಿನ ಕಾಯಬೇಕಾಗುತ್ತದೆ. ಯಾಕೆಂದರೆ ವೈದ್ಯರು ಮನೆಯಲ್ಲಿ ವಿಶ್ರಾಂತಿ ಪಡೆಯಬೇಕು ಎಂದು ಹೇಳಿದ್ದಾರೆ. ಹಾಗಾಗಿ ಸದ್ಯಕ್ಕೆ ರಾಧಿಕಾ ಸಿನಿಮಾ ನೋಡಲು ಆಗುವುದಿಲ್ಲ ಎಂದು ಯಶ್ ಅಭಿಮಾನಿಗಳ ಬಳಿ ಹೇಳಿದ್ದಾರೆ.

    ರಾಧಿಕಾ ಅವರು ಡಿಸೆಂಬರ್ 2 ಭಾನುವಾರದಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯಕ್ಕೆ ರಾಧಿಕಾ ಅವರು ಮಗಳ ಲಾಲನೆ-ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಮಗಳ ಜೊತೆ ಹೊಸ ಜಗತ್ತಿನಲ್ಲಿ ಹೊಸ ಅನುಭವಗಳನ್ನ ಪಡೆಯುತ್ತಿದ್ದಾರೆ.

    ರಾಧಿಕಾಗೆ ಡಾಕ್ಟರ್ ರೆಸ್ಟ್ ಮಾಡಲು ಸೂಚಿಸಿದ್ದಾರೆ. ಆದರೂ ನಾನು ಸಿನಿಮಾ ನೋಡಬೇಕು ಎಂದು ಯಶ್ ಬಳಿ ತುಂಬಾ ಸಾರಿ ಹೇಳಿದ್ದಾರಂತೆ. ಆದರೆ ಡಾಕ್ಟರ್ ಸದ್ಯಕ್ಕೆ ಹೊರಗಡೆ ಹೋಗೋದು ಬೇಡ ಅಂತ ಕೆಜಿಎಫ್ ವೀಕ್ಷಣೆಗೆ ಬ್ರೇಕ್ ಹಾಕಿದ್ದಾರೆ. ಸದ್ಯದಲ್ಲೇ ತಾಯಿ, ಮಗು ಇಬ್ಬರು ಕೆಜಿಎಫ್ ಸಿನಿಮಾವನ್ನು ವೀಕ್ಷಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ಊಹಾಪೋಹಗಳಿಗೆ ಕಿವಿಗೊಡಬೇಡಿ – ಬಿಜಿಎಸ್ ವೈದ್ಯರು

    ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ಊಹಾಪೋಹಗಳಿಗೆ ಕಿವಿಗೊಡಬೇಡಿ – ಬಿಜಿಎಸ್ ವೈದ್ಯರು

    ತುಮಕೂರು: ನಡೆದಾಡುವ ದೇವರಾದ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯವಾಗಿದ್ದಾರೆ. ಭಕ್ತಾದಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಬಿಜಿಎಸ್ ವೈದ್ಯರಾದ ಡಾ.ರವೀಂದ್ರ ಹಾಗೂ ಡಾ.ವೆಂಕಟರಮಣ ಹೇಳಿದ್ದಾರೆ.

    ಶ್ರೀಗಳ ಅನಾರೋಗ್ಯ ಹಿನ್ನೆಲೆಯಲ್ಲಿ ಬಿಜಿಎಸ್ ವೈದ್ಯ ರವೀಂದ್ರ ನೇತೃತ್ವದ ತಂಡವು ಸಿದ್ದಗಂಗಾ ಮಠಕ್ಕೆ ಆಗಮಿಸಿ, ಶ್ರೀಗಳ ಆರೋಗ್ಯ ತಪಾಸಣೆ ಮಾಡಿದರು. ಬಳಿಕ ಮಾತನಾಡಿದ ವೈದ್ಯರು, ಶ್ರೀಗಳ ದೇಹದಲ್ಲಿ ಪ್ರೋಟಿನ್ ಅಂಶ ಕಡಿಮೆ ಇರುವುದರಿಂದ ತೊಂದರೆಯಾಗಿತ್ತು. ಈಗ ಚೇರಿಸಿಕೊಂಡಿದ್ದಾರೆ ಎಂದು ತಿಳಿಸಿದರು.

    ಶಿವಕುಮಾರ ಸ್ವಾಮೀಜಿಗಳು ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ. ಮಠದಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳ ಶ್ವಾಸಕೋಶದಲ್ಲಿ ತುಂಬಿಕೊಂಡಿರುವ ನೀರನ್ನು 150 ರಿಂದ 200 ಎಂಎಲ್ ನಂತೆ ಎರಡು ದಿನಕ್ಕೊಮ್ಮೆ ತೆಗೆಯಲಾಗುತ್ತಿದೆ. ಶಿವಕುಮಾರ ಸ್ವಾಮೀಜಿಗಳ ನಾಡಿ ಮಿಡಿತ (ಪಲ್ಸ್ ರೇಟ್) ಕೂಡ 75 ಇರುವುದರಿಂದ ಆತಂಕ ದೂರವಾಗಿದೆ ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಹಾಗೂ ಎಸ್‍ಪಿ ದಿವ್ಯಾ ಗೋಪಿನಾಥ್ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ಶ್ರೀಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾತನಾಡಿದ ಡಾ.ರಾಕೇಶ್ ಕುಮಾರ್, ಶಿವಕುಕುಮಾರ ಸ್ವಾಮೀಜಿಗಳು ಕ್ಷೇಮವಾಗಿದ್ದಾರೆ. ಭಕ್ತಾದಿಗಳು ಊಹಾಪೋಹಗಳಿಗೆ ಕಿವಿಗೊಡಬಾರದು. ಶ್ವಾಸಕೋಶದಲ್ಲಿ ಕಫ ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗರ್ಭಪಾತದ ವೇಳೆ ಹೊರ ಬಂತು ಭ್ರೂಣ – ಆಶಾ ಕಾರ್ಯಕರ್ತೆಯ ಸ್ಥಿತಿ ಗಂಭೀರ

    ಗರ್ಭಪಾತದ ವೇಳೆ ಹೊರ ಬಂತು ಭ್ರೂಣ – ಆಶಾ ಕಾರ್ಯಕರ್ತೆಯ ಸ್ಥಿತಿ ಗಂಭೀರ

    ಮಂಡ್ಯ: ಗರ್ಭಪಾತದ ವೇಳೆ ತುರುವೇಕೆರೆಯ ಸರ್ಕಾರಿ ವೈದ್ಯರ ಎಡವಟ್ಟಿನಿಂದಾಗಿ 5 ತಿಂಗಳ ಗರ್ಭಿಣಿಯೊಬ್ಬರು ಈಗ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

    ಮೂಲತಃ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದೊಡ್ಡಬೀರನಕೆರೆ ಗ್ರಾಮದ 5 ತಿಂಗಳ ಗರ್ಭಿಣಿ ರಾಧಾ, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಬುಧವಾರ ತುರುವೇಕೆರೆ ತಾಲೂಕಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ರಾಧಾ ಅವರಿಗೆ ವೈದ್ಯ ದಂಪತಿ ಪುರುಷೋತ್ತಮ್ ಮತ್ತು ಅವರ ಪತ್ನಿ ಸುಜಾತ ಗರ್ಭಪಾತ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ವೈದ್ಯರು ಗರ್ಭಪಾತ ಮಾಡುವಾಗ ಬೆಳವಣಿಗೆಯಾಗದ ಭ್ರೂಣ ಹೊರ ಬಂದಿದೆ. ರಾಧಾ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ವೈದ್ಯರು ರಾಧಾರನ್ನು ನಾಗಮಂಗಲ ತಾಲೂಕಿನ, ಬೆಳ್ಳೂರು ಕ್ರಾಸ್‍ನಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ಸೇರಿಸಿ ಹೊರಟು ಹೋಗಿದ್ದಾರೆ.

    ಇತ್ತ ನನ್ನ ಅನುಮತಿಯಿಲ್ಲದೇ ವೈದ್ಯರು ನನ್ನ ಮಗುವನ್ನು ಗರ್ಭಪಾತ ಮಾಡಿದ್ದಾರೆ. ಅಷ್ಟೇ ಅಲ್ಲದೇ ಈ ಬಗ್ಗೆ ದೂರು ನೀಡಿದರೂ ತುರುವೇಕೆರೆ ಪೊಲೀಸರು ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ ಎಂದು ರಾಧಾ ಪತಿ ಬಸವರಾಜು ಆರೋಪ ಮಾಡಿದ್ದಾರೆ.

    12 ವರ್ಷಗಳ ಹಿಂದೆ ಸೋದರಮಾವ ಬಸವರಾಜು ಜೊತೆ ರಾಧಾ ಮದುವೆಯಾಗಿದ್ದರು. ಈಗಾಗಲೇ ರಾಧಾಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆಶಾ ಕಾರ್ಯಕರ್ತೆಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯಕ್ಕೆ ವೈದ್ಯರ ಎಡವಟ್ಟಿನ ಹಿಂದೆ ಹೆಣ್ಣು ಭ್ರೂಣ ಹತ್ಯೆಯ ಅನುಮಾನ ಕೂಡ ವ್ಯಕ್ತವಾಗುತ್ತಿದ್ದು, ವ್ಯಾಪಕ ತನಿಖೆಯಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈಲಿಬಾಯಿ ಸಾವಿಗೆ ಕಾರಣ ಬಿಚ್ಚಿಟ್ಟ ಜೆಎಸ್‍ಎಸ್ ಆಸ್ಪತ್ರೆಯ ಅಧೀಕ್ಷಕರು

    ಮೈಲಿಬಾಯಿ ಸಾವಿಗೆ ಕಾರಣ ಬಿಚ್ಚಿಟ್ಟ ಜೆಎಸ್‍ಎಸ್ ಆಸ್ಪತ್ರೆಯ ಅಧೀಕ್ಷಕರು

    ಮೈಸೂರು: ಸುಳ್ವಾಡಿ ದೇವಾಲಯ ಪ್ರಸಾದ ತಿಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಮೈಲಿಬಾಯಿ ಅವರ ಸಾವಿಗೆ ನಿಖರವಾದ ಕಾರಣವನ್ನು ಜೆಎಸ್‍ಎಸ್ ಆಸ್ಪತ್ರೆಯ ಅಧೀಕ್ಷಕರಾದ ಡಾ. ಗುರುಸ್ವಾಮಿ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಗುರುಸ್ವಾಮಿ ಅವರು, ಶುಕ್ರವಾರ ಮೈಲಿಬಾಯಿ ತಮ್ಮ ಪತಿ ಮತ್ತು ಮಗಳ ಜೊತೆ ಆಸ್ಪತ್ರೆಗೆ ಬಂದಿದ್ದರು. ದಂಪತಿ ಒಟ್ಟಿಗೆ ಪ್ರಸಾದ ತಿಂದಿದ್ದು, ಮೈಲಿಬಾಯಿ ಅವರ ಪತಿ ಆಸ್ಪತ್ರೆಗೆ ಬರುತ್ತಿದ್ದಂತೆ ಮೃತಪಟ್ಟಿದ್ದರು. ಮೈಲಿಬಾಯಿ ಸ್ಥಿತಿ ಸಹ ಗಂಭೀರವಾಗಿದ್ದ ಕಾರಣ ಬಿಪಿ ಚೆಕ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಜೊತೆಗೆ ಉಸಿರಾಡಲು ತುಂಬಾ ತೊಂದರೆ ಪಡುತ್ತಿದ್ದರು. ನಾವು ತಕ್ಷಣ ಅವರನ್ನು ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ಆರಂಭಿಸಿದೇವು ಎಂದು ತಿಳಿಸಿದರು.

    ಇಂದು ಐಜಿಪಿ ಅವರು ಹೇಳಿದ ಆರ್ಗಾನ್ ಪಾಸ್ಪಾರಸ್ ಕಾಂಪೌಂಡ್ ಮೊನೊ ಕ್ರೋಟೋ ಫೋಸ್ ಕ್ರಿಮಿನಾಶಕ ಮಿಶ್ರಣದ ಪರಿಣಾಮ ಘೋರವಾಗಿರುತ್ತದೆ. ವಿಷ ಆಹಾರ ಸೇವಿಸಿ ಆರೇಳು ಗಂಟೆ ನಂತರ ಮೈಲಿಬಾಯಿ ಅವರು ಆಸ್ಪತ್ರೆಗೆ ಬಂದಿದ್ದರು. ಅಷ್ಟರಲ್ಲಿ ಅವರ ದೇಹದ ರಕ್ತದಲ್ಲಿ ವಿಷ ಸೇರಿ ಹೋಗಿತ್ತು. ನಂತರ ಅಂಗಾಂಗಗಳು ಒಂದೊಂದಾಗಿ ವೈಫಲ್ಯವಾಗತೊಡಗಿತು. ಮೈಲಿಬಾಯಿ ಉಳಿಸಿಕೊಳ್ಳಲು ಶತ ಪ್ರಯತ್ನ ಮಾಡಿದ್ದರೂ ಸಾಧ್ಯವಾಗಲಿಲ್ಲ. ಪ್ರಸಾದ ಸೇವಿಸಿದ ಎರಡು ಗಂಟೆ ಒಳಗಡೆ ಆಸ್ಪತ್ರೆಗೆ ದಾಖಲಾಗಿದ್ದರೆ ಅವರನ್ನು ಉಳಿಸಬಹುದಿತ್ತು ಎಂದು ಗುರುಸ್ವಾಮಿ ಹೇಳಿದರು.

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಯಲದಲ್ಲಿ ಪೂಜೆ ಮಾಡಿ ಭಕ್ತರಿಗೆ ರೈಸ್ ಬಾತ್ ಪ್ರಸಾದವನ್ನು ನೀಡಲಾಗಿತ್ತು. ಅದನ್ನು ತಿಂದ ತಕ್ಷಣ ಸುಮಾರು 80 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದಲ್ಲೇ ವೈದ್ಯರು ಪ್ರಸಾದದಲ್ಲಿ ಕ್ರಿಮಿನಾಶಕ ಮಿಶ್ರಣವಾಗಿರುವ ಶಂಕೆಯನ್ನು ವ್ಯಕ್ತಪಡಿಸಿದ್ದರು. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಚಿಕಿತ್ಸೆ ನೀಡಲು ತಡ ಮಾಡಿದ ವೈದ್ಯರಿಗೆ ಶಾಸಕ ತರಾಟೆ

    ಚಿಕಿತ್ಸೆ ನೀಡಲು ತಡ ಮಾಡಿದ ವೈದ್ಯರಿಗೆ ಶಾಸಕ ತರಾಟೆ

    ಮೈಸೂರು: ಚಾಮರಾಜನಗರದ ಹನೂರು ತಾಲೂಕಿನ ಮಾರಮ್ಮ ದೇವಾಲಯದ ವಿಷ ಪ್ರಸಾದ ತಿಂದು ಅಸ್ವಸ್ಥರಾಗಿದ್ದ ಮಹಿಳೆಗೆ ಚಿಕಿತ್ಸೆ ನೀಡದೆ ತಡ ಮಾಡಿದ ವೈದ್ಯರಿಗೆ ಶಾಸಕ ನಾಗೇಂದ್ರ ತರಾಟೆ ತೆಗೆದುಕೊಂಡಿದ್ದಾರೆ.

    ತಮಿಳುನಾಡು ಮೂಲದ ಲಕ್ಷೀ ಎಂಬವರ ಸ್ಥಿತಿ ಗಂಭೀರವಾಗಿತ್ತು, ಇದರಿಂದ ಅವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ವೈದ್ಯರು ಮೊದಲು ಅಸ್ವಸ್ಥಗೊಂಡ ಮಹಿಳೆಗೆ ಚಿಕಿತ್ಸೆ ಕೊಡದೆ ಅವರ ಬಳಿಯೇ ಮಾಹಿತಿ ಪಡೆಯಲು ವೈದ್ಯರು ಮುಂದಾಗಿದ್ದಾರೆ. ಇದನ್ನು ಗಮನಿಸಿದ ನಾಗೇಂದ್ರ ಅವರು ವೈದ್ಯರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ಮೊದಲು ರೋಗಿಗೆ ಚಿಕಿತ್ಸೆ ನೀಡಿ ಆ ಬಳಿಕ ಮಾಹಿತಿ ಪಡೆಯಿರಿ. ಇಂತಹ ಸಂದರ್ಭದಲ್ಲಿ ರೋಗಿಗಳ ಆರೋಗ್ಯ ಮುಖ್ಯ ಎಂದು ಶಾಸಕ ನಾಗೇಂದ್ರ ಅವರು ತಿಳಿಸಿದ್ದಾರೆ. ಬಳಿಕ ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಆಸ್ಪತ್ರೆಯಲ್ಲಿ ಸೇರಿರುವ ಎಲ್ಲಾ ರೋಗಿಗಳಿಗೂ ಚಿಕಿತ್ಸೆ ನೀಡಲಾಗಿದೆ. ಆದರೆ ಹೆಚ್ಚಿನ ಅವಶ್ಯಕತೆ ಇರುವ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲು ಸಹ ಸೂಚನೆ ನೀಡಲಾಗಿದೆ ಎಂದರು.

    ಯಾವುದೇ ರೋಗಿಯ ಜಾತಿ, ಹೆಸರು ಬಗ್ಗೆ ತಿಳಿಯುವ ಮೊದಲು ಚಿಕಿತ್ಸೆ ನೀಡುವುದು ಮುಖ್ಯ. ಆದ್ದರಿಂದ ವೈದ್ಯರಿಗೆ ಈ ಕುರಿತು ಸ್ವಲ್ಪ ಏರು ಧ್ವನಿಯಲ್ಲಿ ಸೂಚನೆ ನೀಡಿದ್ದೇನೆ ಅಷ್ಟೇ. ಕೆ. ಆರ್ ಆಸ್ಪತ್ರೆಗೆ ಸಂಬಂಧಿಸಿದಂತೆ ಹೆಚ್ಚಿನ ಸೌಲಭ್ಯ ನೀಡಲು ಸದನದಲ್ಲೂ ಪ್ರಸ್ತಾಪ ಮಾಡಿದ್ದೇನೆ. ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ನೋಡಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ. ಎಲ್ಲಾ ರೋಗಿಗಳಿಗೂ ಉತ್ತಮ ಚಿಕಿತ್ಸೆ ನೀಡುತ್ತೇವೆ ಎಂದು ನಾಗೇಂದ್ರ ಅವರು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಆಸ್ಪತ್ರೆಗಳಿಗೆ ಅಲ್ಪಸಂಖ್ಯಾತರು ಅನ್ನೋ ಭೇದಭಾವ ಯಾಕೆ ತರಬೇಕು: ಸಿದ್ದಗಂಗಾ ಕಿರಿಯ ಶ್ರೀ

    ಆಸ್ಪತ್ರೆಗಳಿಗೆ ಅಲ್ಪಸಂಖ್ಯಾತರು ಅನ್ನೋ ಭೇದಭಾವ ಯಾಕೆ ತರಬೇಕು: ಸಿದ್ದಗಂಗಾ ಕಿರಿಯ ಶ್ರೀ

    ತುಮಕೂರು: ನಡೆದಾಡುವ ದೇವರ ಚಿಕಿತ್ಸೆಯಲ್ಲೂ ಸಚಿವ ಡಿ.ಕೆ. ಶಿವಕುಮಾರ್ ಅವರು ಧರ್ಮವನ್ನು ಕೆದಕಿದ್ದು, ಮುಸ್ಲಿಂ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಇದೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಇವರ ಹೇಳಿಕೆಗೆ ಸಿದ್ದಗಂಗಾ ಮಠದ ಕಿರಿಯ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.

    ಈ ಕುರಿತು ಮಾಧ್ಯಮದವ ಜೊತೆ ಮಾತನಾಡಿದ ಸಿದ್ದಗಂಗಾ ಮಠದ ಕಿರಿಯ ಶ್ರೀಗಳು, ಆಸ್ಪತ್ರೆಗಳಿಗೆ ಅಲ್ಪಸಂಖ್ಯಾತರು ಅನ್ನೋ ಭೇದಭಾವ ಯಾಕೆ ತರಬೇಕು. ಶಾಲೆ, ಆಸ್ಪತ್ರೆಗಳಿಗೆಲ್ಲಾ ಈ ರೀತಿ ಭೇದಭಾವ ತರಬಾರದು. ಅವುಗಳು ಸರ್ವರಿಗೂ ಸೇರಿರುವಂತದ್ದಾಗಿದೆ ಎಂದು ಹೇಳಿದರು.

    ಆರೋಗ್ಯ ಎಲ್ಲರಿಗೂ ಕೆಡುತ್ತದೆ. ಎಲ್ಲಾ ಆಸ್ಪತ್ರೆಗಳಲ್ಲೂ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ವೈದ್ಯರು ಇರುತ್ತಾರೆ. ಇಂದು ವೈದ್ಯ ವೃತ್ತಿಯನ್ನ ಎಲ್ಲರೂ ಓದಿರುತ್ತಾರೆ. ಆದ್ದರಿಂದ ಆ ರೀತಿ ಭೇದಭಾವ ಇಲ್ಲ. ವೈದ್ಯರ ಹೆಸರು ರೇಲಾ ಆಗಿದ್ದರಿಂದ ಆ ರೀತಿಯ ಭಾವನೆಯಿಂದ ಹೇಳಿರಬಹುದು. ಅಲ್ಲಿ ವೈದ್ಯರ ಜೊತೆ ಆರೈಕೆ ಮಾಡುವ ತಂಡವೂ ಕೂಡ ಇರುತ್ತಾರೆ. ಯಾರೇ ಹೋದರು ಆರೈಕೆ ಮಾಡುತ್ತಾರೆ ಎಂದ್ರು.

    ಮೊಹಮ್ಮದ್ ರೇಲಾ ಒಬ್ಬ ವೈದ್ಯರು, ವೈದ್ಯೋ ನಾರಾಯಣ ಹರಿ ಅಂತಾರೆ. ನಾವು ಅವರನ್ನ ವೈದ್ಯರಾಗಿಯೇ ನೋಡಿದ್ದೇವೆ. ಅದನ್ನ ಹೊರತು ಬೇರೆ ಏನಿಲ್ಲ ಎಂದು ಶ್ರೀಮಠದಲ್ಲಿ ಕಿರಿಯ ಶ್ರೀ ಸಿದ್ದಲಿಂಗಸ್ವಾಮೀಜಿ ಉತ್ತರ ಕೊಟ್ಟಿದ್ದಾರೆ.

    ಡಿಕೆಶಿ ಹೇಳಿದ್ದೇನು?
    ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಸ್ಲಿಮ್ ಆಡಳಿತವಿದ್ದರೂ ಶ್ರೀಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಪಸಂಖ್ಯಾತ ಆಡಳಿತ ಮಂಡಳಿ ಇದ್ದರೂ ಶ್ರೀಗಳನ್ನ ಚೆನ್ನಾಗಿ ನೋಡ್ಕೊಂಡಿದ್ದಾರೆ. ಡಾಕ್ಟರ್ ಮೊಹಮ್ಮದ್ ರೆಲಾ ಮಾಲೀಕತ್ವದ ರೆಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿವಾದತ್ಮಾಕ ಹೇಳಿಕೆ ನೀಡಿದ್ದರು.

    ನನಗೆ ಬಹಳ ಸಂತೋಷವಾಯ್ತು. ನಿಜವಾಗಲೂ ಕರ್ನಾಟಕ ರಾಜ್ಯದಲ್ಲಿ ಅಂತಹ ಆಸ್ಪತ್ರೆಯನ್ನು ನಾನು ನೋಡಿಲ್ಲ. ಜಾತಿ-ಧರ್ಮದ ಬಗ್ಗೆ ಮಾತನಾಡುತ್ತಿರುವ ನಾವು ಒಂದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಮೊಹಮ್ಮದ್ ರೇಲಾ ಎಂಬಂತಹ ಮುಸಲ್ಮಾನ ಅಲ್ಪಸಂಖ್ಯಾತರು. ಅವರ ಹೆಸರಿನಲ್ಲಿ ರೇಲಾ ಅನ್ನುವ ಆಸ್ಪತ್ರೆಯೊಂದನ್ನು ಮಾಡಿದ್ದಾರೆ. ಅವರು ಒಬ್ಬ ಜಗತ್ತಿನ ಫೇಮಸ್ ಸರ್ಜನ್ ಆಗಿದ್ದಾರೆ. ನಮ್ಮ ಶ್ರೀಗಳಿಗೆ ಅವರು ಶಸ್ತ್ರಚಿಕಿತ್ಸೆಯನ್ನು ಮಾಡಿದ್ದಾರೆ ಅಂತ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಹೆಲ್ತ್ ಬುಲೆಟಿನ್ – ದೇವರ ಸ್ಪಂದನೆ ನೋಡಿ ವೈದ್ಯರಿಗೇ ಆಶ್ಚರ್ಯ

    ಸಿದ್ದಗಂಗಾ ಶ್ರೀಗಳ ಹೆಲ್ತ್ ಬುಲೆಟಿನ್ – ದೇವರ ಸ್ಪಂದನೆ ನೋಡಿ ವೈದ್ಯರಿಗೇ ಆಶ್ಚರ್ಯ

    ಚೆನ್ನೈ: ಸಿದ್ದಗಂಗಾ ಶ್ರೀಗಳಿಗೆ ನಡೆಸಲಾದ ಶಸ್ತ್ರಚಿಕಿತ್ಸೆ ಯಶಸ್ವಿ ಆಗಿದೆ. ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ವೈದ್ಯ ಮೊಹಮ್ಮದ್ ರೇಲಾ ನೇತೃತ್ವದ ತಂಡ 4 ಗಂಟೆಗಳ ಕಾಲ ಪಿತ್ತಕೋಶ ಸೋಂಕಿನ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿತು.

    ಶ್ರೀಗಳಿಗೆ ಈ ಹಿಂದೆ ಅಳವಡಿಸಲಾಗಿದ್ದ ಲೋಹ ಮತ್ತು ಸ್ಟೆಂಟ್‍ಗಳನ್ನು ತೆಗೆದು ಹಾಕಲಾಗಿದೆ. ಸದ್ಯ ಶ್ರೀಗಳನ್ನ ಐಸಿಯು ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು, ಐಸಿಯುನಲ್ಲೇ 3 ದಿನ ಇರಲಿದ್ದಾರೆ. ಬಳಿಕ ವಿಐಪಿ ವಾರ್ಡ್‍ಗೆ ಶಿಫ್ಟ್ ಮಾಡಿ. ಅವರಲ್ಲಿ ಮತ್ತಷ್ಟು ಚೇತರಿಕೆ ಕಂಡ ಬಳಿಕವಷ್ಟೇ ಡಿಸ್ಚಾರ್ಜ್ ಮಾಡುವ ಬಗ್ಗೆ ವೈದ್ಯರು ನಿರ್ಧರಿಸಲಿದ್ದಾರೆ ಅಂತ ಪಬ್ಲಿಕ್ ಟಿವಿಗೆ ಮಾಹಿತಿ ಸಿಕ್ಕಿದೆ.

    ಸಾಮಾನ್ಯವಾಗಿ ಅನಸ್ತೇಶಿಯಾ ಕೊಟ್ಟರೆ ಆಯಾಸ ಆಗುತ್ತೆ. ಆದರೆ ಶ್ರೀಗಳಿಗೆ ಆ ಮಟ್ಟದಲ್ಲಿ ಆಯಾಸವೇ ಆಗಿಲ್ಲ. ಅರವಳಿಕೆಯಿಂದ ಶ್ರೀಗಳು ಎಚ್ಚರಗೊಂಡು 111 ವರ್ಷಗಳ ವಯಸ್ಸಿನಲ್ಲಿ ಈ ಪಾಟಿ ಲವಲವಿಕೆಯಿಂದ ಇರುವುದನ್ನು ಕಂಡ ರೇಲಾ ಆಸ್ಪತ್ರೆ ವೈದ್ಯರೇ ಅಚ್ಚರಿಗೊಂಡಿದ್ದಾರೆ. ಐಸಿಯುನಲ್ಲಿ ಯಾರೂ ಇಲ್ಲದೆ ಮೌನ ಆವರಿಸಿದ್ದನ್ನು ಕಂಡ ಶ್ರೀಗಳು, ಎಲ್ಲಿ ಯಾರೂ ಕಾಣಿಸುತ್ತಿಲ್ಲ ಎಂದು ವೈದ್ಯರನ್ನ ಪ್ರಶ್ನಿಸಿದ್ದು, ಗ್ಲೂಕೋಸ್ ಪೈಪ್ ತೆಗೆಯುವಂತೆಯೂ ಹೇಳಿದ್ದಾರೆ ಎನ್ನಲಾಗಿದೆ.

    ಬಿಜಿಎಸ್ ಖ್ಯಾತ ವೈದ್ಯ ಡಾ.ರವೀಂದ್ರ, ಕಿರಿಯ ಶ್ರೀಗಳು ಈ ವೇಳೆ ಚೆನ್ನೈ ಆಸ್ಪತ್ರೆಯಲ್ಲಿ ಉಪಸ್ಥಿತರಿದ್ದಾರೆ. ಈ ನಡುವೆ ರೇಲಾ ಆಸ್ಪತ್ರೆಗೆ ಸುತ್ತೂರಿನ ಶಿವಕುಮಾರ್ ದೇಶೀಕೇಂದ್ರ ಸ್ವಾಮೀಜಿಗಳು, ಶಾಸಕರಾದ ಸೋಮಣ್ಣ ಮತ್ತು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಶ್ರೀಗಳ ಆರೋಗ್ಯ ವಿಚಾರಿಸಲು ಸಚಿವ ಡಿ.ಕೆ.ಶಿವಕುಮಾರ್ ಚೆನ್ನೈನ ರೇಲಾ ಆಸ್ಪತ್ರೆ ತಲುಪಿದ್ದಾರೆ. ನಾಳೆ ಸಿಎಂ ಕುಮಾರಸ್ವಾಮಿ ಅವರು ಸಹ ಚೆನ್ನೈಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚೆನ್ನೈನಲ್ಲಿಂದು ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ – ರಾತ್ರಿ ಪ್ರಸಾದ ಸೇವಿಸಿ, ವಾಕಿಂಗ್ ಮಾಡಿದ್ರು ನಡೆದಾಡುವ ದೇವ್ರು

    ಚೆನ್ನೈನಲ್ಲಿಂದು ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ – ರಾತ್ರಿ ಪ್ರಸಾದ ಸೇವಿಸಿ, ವಾಕಿಂಗ್ ಮಾಡಿದ್ರು ನಡೆದಾಡುವ ದೇವ್ರು

    ಚೆನ್ನೈ: ಪಿತ್ತಕೋಶದ ಸೋಂಕಿನಿಂದ ಬಳಲುತ್ತಿರುವ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಇಂದು ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ವಿವಿಧ ಬಗೆಯ ಚಿಕಿತ್ಸೆ ನಡೆಯಲಿದೆ.

    ಈ ಬಗ್ಗೆ ಚರ್ಚೆ ಮಾಡಿರುವ ವೈದ್ಯರು ಇಂದು ಬೆಳಗ್ಗೆ 8.30ಕ್ಕೆ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ. ಮೊದಲನೆಯದಾಗಿ ಅಲ್ಟ್ರಾ ಲೆಪ್ಟೋಸ್ಕೋಪ್, ಎರಡನೆಯದಾಗಿ ಎಂಡೋಸ್ಕೋಪಿ ಈ ಎರಡು ಆಗದೆ ಇದ್ದ ಪಕ್ಷದಲ್ಲಿ ಸರ್ಜರಿ ಮಾಡಬೇಕಾಗುತ್ತೆ ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ.

    ಅಕಸ್ಮಾತ್ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿರ್ವಾಯತೆ ಸೃಷ್ಟಿಯಾದರೆ ಡಾ.ರೇಲಾ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಶುಕ್ರವಾರ ರಾತ್ರಿ ಪ್ರಸಾದ ಸೇವಿಸಿದ ಶ್ರೀಗಳು ವಾಕಿಂಗ್ ಮಾಡಿದ್ದರು. ಸುತ್ತೂರು ಶ್ರೀಗಳು ಚೆನ್ನೈನ ರೇಲಾ ಆಸ್ಪತ್ರೆಗೆ ತೆರಳಿ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.

    ಶುಕ್ರವಾರ ಶ್ರೀಗಳನ್ನು ತುಮಕೂರಿನ ಸಿದ್ದಗಂಗಾ ಮಠದಿಂದ ರಸ್ತೆಮಾರ್ಗವಾಗಿ ಬೆಂಗಳೂರಿನ ಹೆಚ್‍ಎ ಎಲ್ ವಿಮಾನ ನಿಲ್ದಾಣಕ್ಕೆ ಹೋಗಿದ್ದು, ಬಳಿಕ ಬೆಂಗಳೂರಿನಿಂದ ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಗಿದೆ. ವಿಶೇಷ ಏರ್ ಅಂಬುಲೆನ್ಸ್ ಮೂಲಕ ಚೆನ್ನೈನಲ್ಲಿರುವ ಪ್ರತಿಷ್ಠಿತ ರೆಲಾ ವೈದ್ಯಕೀಯ ಸಂಸ್ಥೆಗೆ ಹೋಗಿದ್ದಾರೆ. ಸ್ವಾಮೀಜಿಗಳಿಗೆ ಈಗಾಗಲೇ 5 ಸ್ಟಂಟ್ ಅಳವಡಿಸಲಾಗಿದ್ದು, ಮತ್ತೆ ಸ್ಟಂಟ್ ಅಳವಡಿಸಲು ಸಾಧ್ಯವಿಲ್ಲ. ಹೀಗಾಗಿ ಶಾಶ್ವತ ಪರಿಹಾರಕ್ಕಾಗಿ ಚೆನ್ನೈನಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಶ್ರೀಗಳಿಗೆ ಭಾರತದ ಖ್ಯಾತ ಲಿವರ್ ಸ್ಪೆಷಲಿಸ್ಟ್ ಡಾ. ಮೊಹಮ್ಮದ್ ರೇಲಾ ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೀಮ್ಸ್ ವೈದ್ಯರ ನಿರ್ಲಕ್ಷ್ಯ- ಹೊಟ್ಟೆಯಲ್ಲೇ ಮಗು ಸಮೇತ ಗರ್ಭಿಣಿ ಸಾವು

    ಬೀಮ್ಸ್ ವೈದ್ಯರ ನಿರ್ಲಕ್ಷ್ಯ- ಹೊಟ್ಟೆಯಲ್ಲೇ ಮಗು ಸಮೇತ ಗರ್ಭಿಣಿ ಸಾವು

    ಬೀದರ್: ಬೀಮ್ಸ್ ವೈದ್ಯರ ನಿರ್ಲಕ್ಷ್ಯದಿಂದಾಗಿ ಹೊಟ್ಟೆಯಲ್ಲೇ ಮಗು ಸಮೇತ ಗರ್ಭಿಣಿ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದರು.

    ಕಮಲಮ್ಮ (32) ಮೃತ ಗರ್ಭಿಣಿ. ಮೂಲತಃ ಹುಮನಾಬಾದ್ ತಾಲೂಕಿನ ಸಿಂದನಕೇರಾ ಗ್ರಾಮದರಾಗಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಕಮಲಮ್ಮರನ್ನು ಕುಟುಂಬದವರು ಬೀಮ್ಸ್ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ವೈದ್ಯರು ಹೆರಿಗೆ ಬಂದಿದ್ದ ಗರ್ಭಿಣಿಗೆ ಚಿಕಿತ್ಸೆ ನೀಡದ್ದರಿಂದ, ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಗರ್ಭಿಣಿ ಸಾವಿಗೆ ಬೀಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಸ್ಪತ್ರೆಯ ಬಳಿ ಮೃತ ಕಮಲಮ್ಮರ ಶವವನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಶವದ ಮುಂದೆ ಪತಿ ಹಾಗೂ ಕುಟುಂಬಸ್ಥರು ಕಣ್ಣೀರಿಡುತ್ತಿರುವ ದೃಶ್ಯ ಮನಕಲಕುವಂತಿದೆ. ಪ್ರತಿಭಟನೆ ನಡೆಸುತ್ತಿರುವ ಕುಟುಂಬಸ್ಥರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವೈದ್ಯಾಧಿಕಾರಿಗಳ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದಾರೆ.

    ಸ್ಥಳಕ್ಕೆ ಕೂಡಲೇ ಜಿಲ್ಲಾಧಿಕಾರಿಗಳು ಬರುವಂತೆ ಆಗ್ರಹಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಹರಸಾಹಸ ಪಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವೆಂಟಿಲೇಟರ್ ಸಮಸ್ಯೆಯಿಂದಾಗಿ 29 ದಿನದ ಹಸುಗೂಸು ಸಾವು

    ವೆಂಟಿಲೇಟರ್ ಸಮಸ್ಯೆಯಿಂದಾಗಿ 29 ದಿನದ ಹಸುಗೂಸು ಸಾವು

    ಮಂಡ್ಯ: ವೆಂಟಿಲೇಟರ್ ಸಮಸ್ಯೆಯಿಂದಾಗಿ 29 ದಿನದ ಹಸುಗೂಸು ಮೃತಪಟ್ಟ ಘಟನೆ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

    ಮದ್ದೂರು ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ಶಶಿಕುಮಾರ್ ಮತ್ತು ಶೃತಿ ದಂಪತಿಯ ಗಂಡು ಮಗು ಮೃತಪಟ್ಟಿದೆ. ಗುರುವಾರ ಬೆಳಗ್ಗೆ ಮಗುವಿಗೆ ಉಸಿರಾಟ ಸಮಸ್ಯೆ ಕಂಡುಬಂದಿತ್ತು. ಕೂಡಲೇ ಪೋಷಕರು ಮಗುವನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಮಸ್ಯೆ ಇದ್ದರಿಂದ ಮಗುವನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದರು.

    ವೈದ್ಯರು ನಿರಾಕರಿಸುತ್ತಿದ್ದಂತೆ ಮಗುವನ್ನು ಆ್ಯಂಬುಲೆನ್ಸ್ ಮುಖಾಂತರ ಮೈಸೂರು ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಈಗಾಗಲೇ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

    ಮಿಮ್ಸ್ ಆಸ್ಪತ್ರೆಯ ವೈದ್ಯರು ಮಗುವನ್ನು ತಕ್ಷಣವೇ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದರೇ ಮಗು ಬದುಕುಳಿಯುತ್ತಿತ್ತು ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ. ಗಂಭೀರ ಪರಿಸ್ಥಿತಿಯಲ್ಲಿದ್ದ ಮಗವನ್ನು ತಕ್ಷಣವೇ ದಾಖಲಿಸಿಕೊಳ್ಳದೇ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ. ಮಗುವಿನ ಸಾವಿಗೆ ಮಿಮ್ಸ್ ವೈದ್ಯರುಗಳೇ ಕಾರಣವೆಂದು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv