Tag: Doddaballapur

  • ಆನೆಯ ಮೇಲೆ ಅಂಬಾರಿ ಕಂಡೆ.. ಅಂಬಾರಿಯೊಳಗೆ ಗಣೇಶನ ಕಂಡೆ..!

    ಆನೆಯ ಮೇಲೆ ಅಂಬಾರಿ ಕಂಡೆ.. ಅಂಬಾರಿಯೊಳಗೆ ಗಣೇಶನ ಕಂಡೆ..!

    – ಅಂಬಾರಿ ಗಣೇಶನ ಮೆರವಣಿಗೆಗೆ ಸಚಿವ ಮುನಿಯಪ್ಪ ಚಾಲನೆ

    ಚಿಕ್ಕಬಳ್ಳಾಪುರ/ ಬೆಂಗಳೂರು: ದೊಡ್ಡಬಳ್ಳಾಪುರದ (Doddaballapur) ತೂಬಗೆರೆ ಗ್ರಾಮದಲ್ಲಿ ಗ್ರಾಮಸ್ಥರು ಗಣೇಶನನ್ನು ಆನೆಯ ಮೇಲೆ ಅಂಬಾರಿಯ (Ambari Ganesha) ಅಲಂಕಾರ ಮಾಡಿ ಮೆರವಣಿಗೆ ಮಾಡಿ ವಿಸರ್ಜನೆ ಮಾಡಿದ್ದಾರೆ. ನಾಡಹಬ್ಬ ದಸರಾ ಮಾದರಿಯಲ್ಲಿಯೇ ಗಣೇಶನ ಮೆರವಣಿಗೆ ಮಾಡಲಾಗಿದೆ.

    ಗ್ರಾಮದ ಚಾವಡಿ ಗಣೇಶೋತ್ಸವ ಸಮಿತಿಯವರು ಇದೇ ಮೊದಲ ಬಾರಿಗೆ ಅಂಬಾರಿ ಗಣೇಶನ ಮೆರವಣಿಗೆ ಆಯೋಜನೆ ಮಾಡಿದ್ದು, ಜನರ ಗಮನ ಸೆಳೆಯಿತು. ದಸರಾ ಆನೆಯಂತೆ ಅಲಂಕೃತಗೊಂಡು ಸಿಂಗಾರಗೊಂಡಿದ್ದ ಲಕ್ಷ್ಮೀ ಹೆಸರಿನ ಆನೆಯ ಮೇಲೆ ಅಂಬಾರಿಯಲ್ಲಿ ಗಣೇಶನನ್ನು ಕೂರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಆನೆಯ ಮೆರವಣಿಗೆಯೊಂದಿಗೆ, ನಾದಸ್ವರದ ಮೇಳ, ಡೊಳ್ಳು-ಕುಣಿತ, ಜಾನಪದ ತಂಡಗಳ ಸೊಗಸು ಎಲ್ಲವೂ ಸೇರಿ ದಸರಾ ವೈಭವವದ ಕಳೆಯನ್ನು ತಂದಿತ್ತು. ಇದನ್ನೂ ಓದಿ: ಸೊರಬದ ಅತಿ ಎತ್ತರದ ಗಣೇಶ ʻಕುಬಟೂರು ಮಹಾರಾಜʼನಿಗೆ ವಿಶೇಷ ಪೂಜೆ ಸಲ್ಲಿಸಿದ ಮಧು ಬಂಗಾರಪ್ಪ

    ಈ ಅಂಬಾರಿ ಗಣೇಶನ ಮೆರವಣಿಗೆಗೆ ಸಚಿವ ಕೆ.ಎಚ್ ಮುನಿಯಪ್ಪ ಪುಷ್ಪನಮನದ ಮೂಲಕ ಚಾಲನೆ ನೀಡಿದ್ದರು. ಇದನ್ನೂ ಓದಿ: ʻಪಬ್ಲಿಕ್‌ ಟಿವಿʼ 13ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ತೆರೆ – ಜೆಪಿ ಪಾರ್ಕ್‌ ಕೆರೆಯಲ್ಲಿ ಗಣೇಶ ವಿಸರ್ಜನೆ

  • ನಟ ಪ್ರಥಮ್‌ಗೆ ಜೀವ ಬೆದರಿಕೆ ಕೇಸ್ – ಆರೋಪಿಗಳಾದ ಬೇಕರಿ ರಘು, ಯಶಸ್ವಿನಿಗೆ ಜಾಮೀನು ಮಂಜೂರು

    ನಟ ಪ್ರಥಮ್‌ಗೆ ಜೀವ ಬೆದರಿಕೆ ಕೇಸ್ – ಆರೋಪಿಗಳಾದ ಬೇಕರಿ ರಘು, ಯಶಸ್ವಿನಿಗೆ ಜಾಮೀನು ಮಂಜೂರು

    ದೊಡ್ಡಬಳ್ಳಾಪುರ: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳಾದ ಬೇಕರಿ ರಘು ಹಾಗೂ ಯಶಸ್ವಿನಿಗೆ ದೊಡ್ಡಬಳ್ಳಾಪುರದ (Doddaballapur) ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ಎ1 ಆರೋಪಿ ರೌಡಿಶೀಟರ್ ಬೇಕರಿ ರಘು ಹಾಗೂ ಎ2 ಆರೋಪಿ ಯಶಸ್ವಿನಿ ಗುರುವಾರ (ಜು.31) ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ವಿಚಾರಣೆಗಾಗಿ ಹಾಜರಾಗಿದ್ದರು. ಬಳಿಕ ದೊಡ್ಡಬಳ್ಳಾಪುರದ ಸೆಷನ್ಸ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ಸ್ವೀಕರಿಸಿದ್ದ ನ್ಯಾಯಾಲಯ 3 ಗಂಟೆಗೆ ತೀರ್ಪು ಕಾಯ್ದಿರಿಸಿತ್ತು. ಆನಂತರ ಜಾಮೀನು ಮಂಜೂರು ಮಾಡಿದೆ.ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದವ್ರಿಗೆ ಶಿಕ್ಷೆ ಆಗ್ಬೇಕು: ರಾಕ್‍ಲೈನ್ ವೆಂಕಟೇಶ್

    ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
    ಜುಲೈ 22ರ ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್‌ಬಾಸ್ ವಿನ್ನರ್, ನಟ ಪ್ರಥಮ್ ಬಂದಿದ್ದರು. ಈ ವೇಳೆ ಪ್ರಥಮ್‌ರನ್ನ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆ ನಡೆದು ಹಲವು ದಿನಗಳ ನಂತರ ಖುದ್ದು, ಪ್ರಥಮ್ ನೇರವಾಗಿ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಪ್ರಥಮ್ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪ್ರಥಮ್ ನೀಡಿದ ದೂರಿನಲ್ಲೇನಿದೆ?
    ಜುಲೈ 22 ರಂದು ಮಹೇಶ್ ಎಂಬ ಸಿನಿಮಾ ಪ್ರೊಮೋಟರ್ ಅವರು ನನಗೆ ದೊಡ್ಡಬಳ್ಳಾಪುರದ ಯಲ್ಲಮ್ಮ ದೇವಸ್ಥಾನದ ಪೂಜೆಗೆ ಕರೆದಿದ್ದರು. ಪೂಜೆ ಮುಗಿಸಿ ಮಧ್ಯಾಹ್ನ ಸುಮಾರು 3:50ಕ್ಕೆ ನಾನು ವಾಪಸ್ ಬರುವ ವೇಳೆ ಯಶಸ್ವಿನಿ ಮತ್ತು ಬೇಕರಿ ರಘು ಹಾಗೂ ಒಂದಷ್ಟು ಅಪರಿಚಿತರು ನನ್ನ ಕಾರನ್ನು ಸುತ್ತುವರೆದು ಅಜ್ಞಾತ ಸ್ಥಳಕ್ಕೆ (ಗ್ರಾಮದ ಹೆಸರು ತಿಳಿದಿರುವುದಿಲ್ಲ. ಸ್ಥಳವನ್ನು ಗುರ್ತಿಸುತ್ತೇನೆ) ಕರೆದೊಯ್ದಿದ್ದರು. ದರ್ಶನ್ ಅವರನ್ನ ಕುರಿತು, ನನ್ನ ಬಾಸ್ ಬಗ್ಗೆ ಮಾತನಾಡಿದ್ದೀಯ ಅಂತ ಅವಾಚ್ಯ ಶಬ್ದಗಳಿಂದ ಬೈಯ್ದು, ಅವರ ಬಳಿ ಇದ್ದ ಡ್ಯಾಗರ್ ಮತ್ತು ಚಾಕು ತೋರಿಸಿ ಚುಚ್ಚಲು ಮುಂದಾಗಿದ್ದರು. ಇವರು ನನ್ನ ಬಳಿ ಗಲಾಟೆ ಮಾಡುವಾಗ, ಜೈಲಿನಲ್ಲಿ ದರ್ಶನ್ ಜೊತೆ ಇದ್ದ ಬ್ಯಾರಕ್ ಪೋಟೋವನ್ನ ತೋರಿಸಿದ್ದರು. ಆ ನಂತರ ಅಲ್ಲಿಂದ ಬಹಳ ಉಪಾಯದಿಂದ ಪ್ರಾಣ ಉಳಿಸಿಕೊಂಡು ಬಂದಿದ್ದೆ ದೊಡ್ಡ ವಿಚಾರ. ನನ್ನ ಜೊತೆ ಇದ್ದ ಸ್ನೇಹಿತರಾದ ಮಹೇಶ್, ಪ್ರಮೋದ್ ಮತ್ತು ಚಾಲಕ ಪ್ರಕಾಶ್ ಈ ಘಟನೆಗೆ ಸಾಕ್ಷಿಯಾಗಿದ್ದಾರೆ. ನನಗೆ ಜೀವ ಭಯವಿರುವುದರಿಂದ ರಕ್ಷಣೆ ನೀಡಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದರು.ಇದನ್ನೂ ಓದಿ: ಭಾರತದ ಮೇಲೆ 25% ಟ್ಯಾರಿಫ್‌ ಹಾಕಿ ಪಾಕಿಸ್ತಾನ ಜೊತೆ ಅಮೆರಿಕ ತೈಲ ಒಪ್ಪಂದ

  • ಜೀವ ಬೆದರಿಕೆ ಕೇಸ್ – ಸ್ಥಳ ಮಹಜರಿಗೆ ಬರುವಂತೆ ಪ್ರಥಮ್, ರಕ್ಷಕ್‌ಗೆ ನೋಟಿಸ್

    ಜೀವ ಬೆದರಿಕೆ ಕೇಸ್ – ಸ್ಥಳ ಮಹಜರಿಗೆ ಬರುವಂತೆ ಪ್ರಥಮ್, ರಕ್ಷಕ್‌ಗೆ ನೋಟಿಸ್

    – ಎ1, ಎ2 ಆರೋಪಿಗಳಿಗೆ ವಿಚಾರಣೆ ಹಾಜರಾಗುವಂತೆ ಬುಲಾವ್

    ದೊಡ್ಡಬಳ್ಳಾಪುರ: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ನಟ ಪ್ರಥಮ್ (Pratham) ಹಾಗೂ ರಕ್ಷಕ್‌ಗೆ (Rakshak Bullet) ಸ್ಥಳ ಮಹಜರಿಗೆ ಬರುವಂತೆ ನೋಟಿಸ್ ನೀಡಿದ್ದಾರೆ.

    ಇಂದು (ಗುರುವಾರ) 11 ಗಂಟೆಗೆ ದೊಡ್ಡಬಳ್ಳಾಪುರ (Doddaballapura) ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಸ್ಥಳ ಮಹಜರಿಗೆ ಹಾಜರಾಗುವಂತೆ ನಟ ಪ್ರಥಮ್, ರಕ್ಷಕ್ ಹಾಗೂ ಜಮೀನು ಮಾಲೀಕ ಮಹೇಶ್‌ಗೆ ನೋಟಿಸ್ ನೀಡಿದ್ದಾರೆ. ಸಾಕ್ಷಿಗಳ ಸಮ್ಮುಖದಲ್ಲಿ ಸ್ಪಾಟ್ ಮಹಜರು ಮಾಡುವ ಅವಶ್ಯಕತೆಯಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬೆಂಗ್ಳೂರಿನ ಪ್ರತಿಷ್ಠಿತ ಕಂಪನಿಯ ಸರ್ವರ್ ಹ್ಯಾಕ್ – 378 ಕೋಟಿ ಕ್ರಿಪ್ಟೋ ಕರೆನ್ಸಿ ಕಳ್ಳತನ

    ಸ್ಥಳ ಮಹಜರು ಬಳಿಕ ಪೊಲೀಸರು ಮತ್ತೊಂದಿಷ್ಟು ಸಾಕ್ಷಿಗಳನ್ನ ಸಂಗ್ರಹ ಮಾಡಿ ಆರೋಪಿತ ವ್ಯಕ್ತಿಗಳಾದ ರೌಡಿಶೀಟರ್ ಬೇಕರಿ ರಘು ಹಾಗೂ ಯಶಸ್ವಿನಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಬುಧವಾರ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಅವರ ಮುಂದೆ ಹಾಜರಾಗುವಂತೆ ತಿಳಿಸಿದ್ದಾರೆ.

    ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
    ಜುಲೈ 22ರ ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ ಪ್ರಥಮ್ ಬಂದಿದ್ದರು. ಈ ವೇಳೆ ಪ್ರಥಮ್ ರನ್ನ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆ ನಡೆದು ಹಲವು ದಿನಗಳ ನಂತರ ಖುದ್ದು, ಪ್ರಥಮ್ ನೇರವಾಗಿ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಅವರನ್ನು ಭೇಟಿಯಾಗಿ ದೂರು ನೀಡಿದ್ದರು.

    ಪ್ರಥಮ್ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಜೀವ ಬೆದರಿಕೆ ಹಾಕಲಾಗಿದ್ದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    ಪ್ರಥಮ್ ನೀಡಿದ ದೂರಿನಲ್ಲೇನಿದೆ.?
    ಜುಲೈ 22 ರಂದು ಮಹೇಶ್ ಎಂಬ ಸಿನಿಮಾ ಪ್ರೊಮೋಟರ್ ಅವರು ನನಗೆ ದೊಡ್ಡ ಬಳ್ಳಾಪುರದ ಯಲ್ಲಮ್ಮ ದೇವಸ್ಥಾನದ ಪೂಜೆಗೆ ಕರೆದಿದ್ದರು. ಪೂಜೆ ಮುಗಿಸಿ ಮಧ್ಯಾಹ್ನ ಸುಮಾರು 3:50 ಗಂಟೆಗೆ ನಾನು ವಾಪಸ್ ಬರುವ ವೇಳೆ ಯಶಸ್ವಿನಿ ಮತ್ತು ಬೇಕರಿ ರಘು ಹಾಗೂ ಒಂದಷ್ಟು ಅಪರಿಚಿತರು ನನ್ನ ಕಾರನ್ನು ಸುತ್ತುವರೆದು ಅಜ್ಞಾತ ಸ್ಥಳಕ್ಕೆ (ಗ್ರಾಮದ ಹೆಸರು ತಿಳಿದಿರುವುದಿಲ್ಲ. ಸ್ಥಳವನ್ನು ಗುರ್ತಿಸುತ್ತೇನೆ) ಕರೆದೊಯ್ದಿದ್ದರು. ದರ್ಶನ್ ಅವರನ್ನ ಕುರಿತು ನನ್ನ ಬಾಸ್ ಬಗ್ಗೆ, ಮಾತನಾಡಿದ್ದೀಯ ಅಂತ ಅವಾಚ್ಯ ಶಬ್ದಗಳಿಂದ ಬೈಯ್ದು, ಅವರ ಬಳಿ ಇದ್ದ ಡ್ರ‍್ಯಾಗರ್ ಮತ್ತು ಚಾಕು ತೋರಿಸಿ ಚುಚ್ಚಲು ಮುಂದಾಗಿ ಭಯಪಡಿಸಿರುತ್ತಾರೆ. ಇವರು ನನ್ನ ಬಳಿ ಗಲಾಟೆ ಮಾಡುವಾಗ, ಜೈಲಿನಲಿ.. ದರ್ಶನ್ ಜೊತೆ ಇದ್ದ ಬ್ಯಾರಕ್ ಪೋಟೋವನ್ನ ತೋರಿಸಿರುತ್ತಾರೆ. ಆ ನಂತರ ಅಲ್ಲಿಂದ ಬಹಳ ಉಪಾಯದಿಂದ ಪ್ರಾಣ ಉಳಿಸಿಕೊಂಡು ಬಂದಿದ್ದೆ ದೊಡ್ಡ ವಿಚಾರ. ಈ ವಿಚಾರವನ್ನ ನನ್ನ ಜೊತೆ ಇದ್ದ ನನ್ನ ಸ್ನೇಹಿತರಾದ ಮಹೇಶ್, ಪ್ರಮೋದ್ ಮತ್ತು ಚಾಲಕ ಪ್ರಕಾಶ್ ಇವರು ಖುದ್ದು ಮೇಲ್ಕಂಡ ವಿಚಾರಕ್ಕೆ ಸಾಕ್ಷಿಯಾಗಿರುತ್ತಾರೆ. ನನಗೆ ಜೀವ ಭಯವಿರುವುದರಿಂದ ರಕ್ಷಣೆ ನೀಡಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.ಇದನ್ನೂ ಓದಿ: Uttar Pradesh | ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯ ಕಿಡ್ನ್ಯಾಪ್ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

  • ಡಿ-ಕಂಪನಿಗೆ ಡುಬಾಕ್ ಅಂತ ಕ್ಲಾಸ್ – ದರ್ಶನ್ ಫ್ಯಾನ್ಸ್‌ಗೆ ಬೆಂಡೆತ್ತಿದ ಒಳ್ಳೆ ಹುಡ್ಗ ಪ್ರಥಮ್

    ಡಿ-ಕಂಪನಿಗೆ ಡುಬಾಕ್ ಅಂತ ಕ್ಲಾಸ್ – ದರ್ಶನ್ ಫ್ಯಾನ್ಸ್‌ಗೆ ಬೆಂಡೆತ್ತಿದ ಒಳ್ಳೆ ಹುಡ್ಗ ಪ್ರಥಮ್

    ಬೆಂಗಳೂರು: ಡಿ ಕಂಪನಿ ಅದೊಂದು ಡುಬಾಕ್ ಕಂಪನಿ, ದರ್ಬೇಸಿಗಳ ಕಂಪನಿ ಅಂತಾ ಹೆಸರಿಟ್ಕೊಳ್ಳಿ ಎಂದು ದರ್ಶನ್ ಫ್ಯಾನ್ಸ್‌ಗೆ (Darshan Fans) ಒಳ್ಳೆ ಹುಡ್ಗ ಪ್ರಥಮ್ (Olle Hudga Pratham) ತರಾಟೆಗೆ ತೆಗೆದುಕೊಂಡಿದ್ದಾರೆ.

    ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿರುವ ಅವರು, ರಾಷ್ಟ್ರೀಯ ತನಿಖಾ ಸಂಸ್ಥೆ, ಇಂಟರ್‌ಪೋಲ್, ಸೈಬರ್ ಕ್ರೈಮ್, ಇಂಟಲಿಜೆನ್ಸ್ ಇವೆಲ್ಲಾ ದೇಶದ ಬಹಳ ದೊಡ್ಡ ಬೇಹುಗಾರಿಗೆ ಕಂಪನಿಗಳು. ಇವನ್ನೆಲ್ಲಾ ಮುಚ್ಚಿ ಎಲ್ಲಾ ಕೇಸ್‌ಗಳನ್ನು ಆ ಡಿ-ಕಂಪನಿ, ಡುಬಾಕ್ ಕಂಪನಿಗೆ ಕೊಡಿ. ಪರಿಹರಿಸ್ತಾರೆ. ಅವತ್ತು ದೊಡ್ಡಬಳ್ಳಾಪುರದಲ್ಲಿ ನಾನು ರೌಡಿಗಳ ಬಳಿ ಚಿಪ್ಸು-ಪಪ್ಸ್ ತಿನ್ನೋಕೆ ಹೋಗಿದ್ನಂತೆ. ಸುಮ್ನೆ ತಪ್ಪು ಮಾಹಿತಿ ಹಬ್ಬಿಸಬೇಡಿ. ಮೊದಲು ಶಿಕ್ಷಣ ಮುಖ್ಯ. ಸುಮ್ನಿದ್ದು ನಿಮ್ಮ ಅಮ್ಮ-ಅಪ್ಪನಿಗೆ ದುಡಿದು ತಂದು ಸಾಕಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.ಇದನ್ನೂ ಓದಿ: ಸಂಸತ್‌ನಲ್ಲಿ ʻಸಿಂಧೂರʼ ಸಮರ – ವಿಪಕ್ಷಗಳಿಗೆ ಇಂದು ಮೋದಿ ಉತ್ತರ

    ಈ ಡುಬಾಕ್ ಕಂಪನಿಯ ಇಂಟಲಿಜೆನ್ಸ್ ಪ್ರಕಾರ ಇನ್ವೇಸ್ಟಿಕೇಷನ್ ಮಾಡಿ ಹೇಳಿದ್ರಂತೆ ಅವತ್ತು ಹಲ್ಲೆ ಮಾಡೋಕೆ ಚಿಪ್ಸು-ಪಪ್ಸು ಮ್ಯಾಟರಂತೆ. ಜೊತೆಗೆ ಅಲ್ಲಿರುವವರು ದರ್ಶನ್ ಫ್ಯಾನ್ಸ್ ಅಲ್ವಂತೆ ಅಂತ ಹೇಳ್ತಿದ್ದಾರೆ. ಸುಮ್ಮನೇ ಡಿ-ಕಂಪನಿ ಅಂತ ಹೆಸರಿಟ್ಕೊಂಡು ಪುಂಡಾಟ ಮಾಡ್ತಾರೆ. ಅಲ್ಲಿ ಏನಾಯ್ತು ಅಂತ ಎಸ್‌ಪಿಯವರು ಹೇಳ್ತಾರೆ. ನಿಮಗೆ ಒಂದು ಚೂರಾದರೂ ಬುದ್ಧಿ ಇದ್ರೆ, ತಪ್ಪು ಮ್ಯಾಟರ್ ಹಬ್ಬಿಸೋದು ಬಿಡಿ. ನಾನು ಅಲ್ಲೇನೂ ಚಿಪ್ಸು ತಿನ್ನಕ್ಕೆ ಹೋಗಿರಲಿಲ್ಲ ಎಂದು ಸೆಲ್ಫಿ ವಿಡಿಯೋ ಮಾಡಿ ಟಾಂಗ್ ಕೊಟ್ಟಿದ್ದಾರೆ.

    ಏನಿದು ಪ್ರಕರಣ? ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
    ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ ಅನ್ನೋ ಆಡಿಯೋವೊಂದು ಸ್ಫೋಟಗೊಂಡಿತ್ತು. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿತ್ತು. ಈ ಕುರಿತು ವ್ಯಕ್ತಿಯೊಬ್ಬರೊಂದಿಗೆ ಪ್ರಥಮ್ ಮಾತನಾಡಿರುವ ಆಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದರು. ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದು, ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಹಲ್ಲೆಗೆ ಯತ್ನಿಸಿ ಅವಾಚ್ಯವಾಗಿ ನಿಂದಿಸಿ ಬೆದರಿಸಿದ್ದರು. ಆ ಸ್ಥಳದಲ್ಲಿ ಬುಲೆಟ್ ರಕ್ಷಕ್ ಕೂಡ ಇರುವುದಾಗಿ ಹೇಳಿದ್ದರು. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡು ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದರು. ಬಳಿಕ ಎಸ್ಪಿ ಸಂಬಂಧಪಟ್ಟ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಎಸ್ಪಿ ಸಿಕೆ ಬಾಬಾ, ನಟ ಪ್ರಥಮ್ ಮೇಲೆ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ದೇವಸ್ಥಾನಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಅವರನ್ನ ಈಗಾಗಲೇ ಕರೆದು ಮಾತನಾಡಿದ್ದೀನಿ. ಅವರಿಗೆ ದೂರು ಕೊಡೋಕೆ ಹೇಳಿದ್ದೀನಿ. ಇಲ್ಲಿವರೆಗೂ ಯಾವುದೇ ದೂರು ನೀಡಿಲ್ಲ. ದೂರು ಕೊಟ್ಟ ನಂತರ ತನಿಖೆ ಮಾಡಿ ಕ್ರಮ ಕೈಗೊಳ್ತಿವಿ ಎಂದು ಹೇಳಿದ್ದರು.ಇದನ್ನೂ ಓದಿ: ನಾಗಮಂಡಲ ಎಂದರೇನು? ಇದರ ಆಚರಣೆ, ಮಹತ್ವವೇನು?

  • ಕರ್ಮ ಯಾರ ಮನೆ ಬಾಗಿಲನ್ನು ಬಿಡಲ್ಲ, ನಂದೇನಾದ್ರೂ ತಪ್ಪಿದ್ರೆ ದೇವ್ರು ನೋಡಿಕೊಳ್ಳಲಿ – ರಕ್ಷಕ್ ಬುಲೆಟ್

    ಕರ್ಮ ಯಾರ ಮನೆ ಬಾಗಿಲನ್ನು ಬಿಡಲ್ಲ, ನಂದೇನಾದ್ರೂ ತಪ್ಪಿದ್ರೆ ದೇವ್ರು ನೋಡಿಕೊಳ್ಳಲಿ – ರಕ್ಷಕ್ ಬುಲೆಟ್

    ಬೆಂಗಳೂರು: ಕರ್ಮ ಯಾರ ಮನೆ ಬಾಗಿಲನ್ನು ಬಿಡಲ್ಲ, ನನ್ನದೇನಾದರೂ ತಪ್ಪಿದ್ರೆ ದೇವರು ನೋಡಿಕೊಳ್ಳಲಿ ಎಂದು ನಟ ರಕ್ಷಕ್ ಬುಲೆಟ್ (Rakshak Bullet) ಕಿಡಿಕಾರಿದ್ದಾರೆ.

    ದೊಡ್ಡಬಳ್ಳಾಪುರ (Doddaballapur) ದೇವಸ್ಥಾನಕ್ಕೆ ಹೋಗಿದ್ದ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿತ್ತು. ದುಷ್ಕರ್ಮಿಗಳ ಗುಂಪೊಂದು ಡ್ರ‍್ಯಾಗರ್ ತೋರಿಸಿ ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿತ್ತು. ಘಟನೆ ವೇಳೆ ರಕ್ಷಕ್ ಬುಲೆಟ್ ಕೂಡ ಇದ್ದರು. ಈ ಕುರಿತು `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನನ್ನನ್ನು ಒಬ್ಬರು ಕರೆದಿದ್ದರು. ಅದಕ್ಕೆ ಅಲ್ಲಿಗೆ ಹೋಗಿದ್ದೆ. ಹೋದೆ, ನನ್ನ ಕೆಲಸ ಮುಗಿಸಿ ಬಂದೆ. ಕೆಲವು ಕಡೆ ನಾನೇ ಬೆದರಿಕೆ ಹಾಕಿಸಿದ್ದೇನೆ, ಸುಪಾರಿ ಕೊಟ್ಟಿದೀನಿ ಅಂತ ಹೇಳಿದ್ದಾರೆ. ಆದರೆ ನಾನು ಇಲ್ಲಿ ರೌಡಿಸಂ, ಬೇರೆ ವ್ಯವಹಾರ ಮಾಡೋಕೆ ಬಂದಿಲ್ಲ. ನಿಯತ್ತಾಗಿ ನಾನು ನನ್ನ ಕೆಲಸ ಅಂತ ಇದೀನಿ. ಘಟನೆ ನಡೆದ ಜಾಗದಲ್ಲಿ ನಾನಿದ್ದೆ. ಆದರೆ ನನಗೂ ಇದ್ಯಾವುದಕ್ಕೂ ನನಗೆ ಸಂಬಂಧ ಇಲ್ಲ. ನಾನು ಮಧ್ಯದಲ್ಲಿ ಹೋದ್ರೆ ನನ್ನ ಮೇಲೆ ಬರುತ್ತೆ ಅಂತ ಹೋಗಿಲ್ಲ ಎಂದರು.ಇದನ್ನೂ ಓದಿ: ಏಯ್‌.. ಗೂಂಡಾಗಿರಿ ಬಿಟ್ಟುಬಿಡಿ, ಬಾಸಿಸಂ ನಡೆಯಲ್ಲ – ದರ್ಶನ್‌ ಫ್ಯಾನ್ಸ್‌ಗೆ ಒಳ್ಳೆ ಹುಡ್ಗ ಪ್ರಥಮ್‌ ವಾರ್ನಿಂಗ್‌

    ಈ ಘಟನೆ ವೇಳೆ ನಾನು ಆ ಜಾಗದಲ್ಲಿದ್ದೆ ಎನ್ನುವ ಕಾರಣದಿಂದಲೇ ಇಷ್ಟೆಲ್ಲಾ ಆಗ್ತಿದೆ. ಪ್ರಥಮ್ ನನಗೆ ಅಣ್ಣನ ತರ. ಬೇರೆಯವರಿಗೆ ತೊಂದರೆ ಕೊಡೋಕೆ ಬಂದಿಲ್ಲ. ಕಲಾವಿದರಾಗಿ ಕೆಲಸ ಮಾಡೋಕೆ ಬಂದಿದೀನಿ. ಅದನ್ನೇ ಮಾಡ್ತೀನಿ. ಇದರಲ್ಲಿ ನನ್ನ ಪಾತ್ರ ಇಲ್ಲ. ಹೀಗಾಗಿ ಯಾರೇ ಏನೇ ಕೇಳಿದರೂ ನಾನು ನಡೆದಿದ್ದನ್ನು ಹೇಳ್ತೀನಿ. ಏನೇ ಆದರೂ ನಾನು ಎದುರಿಸುತ್ತೇನೆ ಎಂದು ಖಡಕ್ಕಾಗಿ ತಿಳಿಸಿದರು.

    ಈ ಘಟನೆ ದೇವಸ್ಥಾನದ ಮುಂದೆ ನಡೆದಿದೆ. ಅಲ್ಲಿದ್ದವರು ದೇವಸ್ಥಾನಕ್ಕೆ ಬರಲಿ, ನಾನು ಹೋಗ್ತೀನಿ. ಎಲ್ಲರೂ ಒಂದು ಕರ್ಪೂರ ಹಚ್ಚೋಣ. ನಾನೇನಾದ್ರೂ ತಪ್ಪು ಮಾಡಿದ್ರೆ ಆ ದೇವ್ರು ನಂಗೆ ಶಿಕ್ಷೆ ಕೊಡಲಿ. ಆ ತಾಯಿ ನನ್ನ ನೋಡಿಕೊಳ್ಳಲಿ. ಕರ್ಮ ಅನ್ನೋದು ಯಾರ ಮನೆ ಬಾಗಿಲನ್ನೂ ಬಿಡಲ್ಲ. ಪ್ರಥಮ್ ಅಣ್ಣನಿಗೆ ನಾನೇನಾದ್ರೂ ತೊಂದರೆ ಕೊಟ್ಟಿದ್ರೆ ಆ ದೇವ್ರು ನಂಗೆ ಶಿಕ್ಷೆ ಕೊಡಲಿ. ಅದನ್ನು ನಾನು ಸ್ವೀಕರಿಸುತ್ತೇನೆ ಎಂದು ಹೇಳಿದರು.

    ಕೆಲವರಿಗೆ ನಾನೇನು ಮಾಡಿದ್ರೂ ಸಮಸ್ಯೆ, ಇಲ್ಲಿ ನನ್ನ ಪಾತ್ರವೇ ಇಲ್ಲ. ನನ್ನ ಬಗ್ಗೆ ಸುಮ್ಮನೇ ಅಪಪ್ರಚಾರ ಮಾಡ್ತಿದ್ದಾರೆ. ನನ್ನದಲ್ಲದ ತಪ್ಪಿಗೆ ನನ್ನ ಬಗ್ಗೆ ಮಾತಾಡ್ತಿದ್ದಾರೆ. ರಕ್ಷಕ್ ಜೊತೆ ಹುಡುಗರಿದ್ದರು ಅಂತ ಹೇಳ್ತಿದ್ದಾರೆ. ಇದ್ರಿಂದ ನಂಗೆ ತುಂಬಾ ನೋವಾಗಿದೆ. ನನ್ನ ಮನೆಯವರಿಗೂ ತುಂಬಾ ನೋವಾಗಿದೆ. ಘಟನೆಯ ಬಳಿಕ ನಾನು ಹಾಗೂ ಪ್ರಥಮ್ ಒಟ್ಟಿಗೆ ಚೆನ್ನಾಗಿ ಮಾತನಾಡಿದ್ದೇವೆ ಎಂದು ತಿಳಿಸಿದರು.

    ಏನಿದು ಪ್ರಕರಣ? ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
    ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ ಅನ್ನೋ ಆಡಿಯೋವೊಂದು ಸ್ಫೋಟಗೊಂಡಿತ್ತು. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿತ್ತು. ಈ ಕುರಿತು ವ್ಯಕ್ತಿಯೊಬ್ಬರೊಂದಿಗೆ ಪ್ರಥಮ್ ಮಾತನಾಡಿರುವ ಆಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದರು. ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದು, ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಹಲ್ಲೆಗೆ ಯತ್ನಿಸಿ ಅವಾಚ್ಯವಾಗಿ ನಿಂದಿಸಿ ಬೆದರಿಸಿದ್ದರು. ಆ ಸ್ಥಳದಲ್ಲಿ ಬುಲೆಟ್ ರಕ್ಷಕ್ ಕೂಡ ಇರುವುದಾಗಿ ಹೇಳಿದ್ದರು. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡು ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದರು. ಬಳಿಕ ಎಸ್ಪಿ ಸಂಬಂಧಪಟ್ಟ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಎಸ್ಪಿ ಸಿಕೆ ಬಾಬಾ, ನಟ ಪ್ರಥಮ್ ಮೇಲೆ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ದೇವಸ್ಥಾನಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಅವರನ್ನ ಈಗಾಗಲೇ ಕರೆದು ಮಾತನಾಡಿದ್ದೀನಿ. ಅವರಿಗೆ ದೂರು ಕೊಡೋಕೆ ಹೇಳಿದ್ದೀನಿ. ಇಲ್ಲಿವರೆಗೂ ಯಾವುದೇ ದೂರು ನೀಡಿಲ್ಲ. ದೂರು ಕೊಟ್ಟ ನಂತರ ತನಿಖೆ ಮಾಡಿ ಕ್ರಮ ಕೈಗೊಳ್ತಿವಿ ಎಂದು ಹೇಳಿದ್ದರು.ಇದನ್ನೂ ಓದಿ: ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌

  • ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಮಗು ಸೇರಿ ಮೂವರಿಗೆ ತೀವ್ರ ಗಾಯ

    ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಮಗು ಸೇರಿ ಮೂವರಿಗೆ ತೀವ್ರ ಗಾಯ

    ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ತುಮಕೂರು (Tumkur) ಜಿಲ್ಲೆಯ ಶಿರಾದ (Sira) ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ನಡೆಯುತ್ತಿದ್ದ ನಾಮಕರಣ ಕಾರ್ಯಕ್ರಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: Champions Trophy 2025 | ಟಾಸ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ

    ಮಗು ಸೇರಿ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಬಸ್ಸಿನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಇವತ್ತೇ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ – ಗೋವಿಂದ ಕಾರಜೋಳ

  • ಪುಷ್ಪ-2 ಸಿನಿಮಾ ನೋಡುವ ಆತುರ ತಂದ ಸಾವು; ರೈಲಿಗೆ ಸಿಲುಕಿ ಅಭಿಮಾನಿ ಸಾವು

    ಪುಷ್ಪ-2 ಸಿನಿಮಾ ನೋಡುವ ಆತುರ ತಂದ ಸಾವು; ರೈಲಿಗೆ ಸಿಲುಕಿ ಅಭಿಮಾನಿ ಸಾವು

    ಚಿಕ್ಕಬಳ್ಳಾಪುರ: ಅಲ್ಲು ಅರ್ಜುನ್ ಅಭಿಮಾನಿಯೊಬ್ಬ ಪುಷ್ಪ-2 ಸಿನಿಮಾ ನೋಡಲು ಆತುರುತುರವಾಗಿ ಹೋಗುತ್ತಿದ್ದಾಗ ರೈಲಿಗೆ ಸಿಲುಕಿ ಸಾವಿಗೀಡಾಗಿದ್ದಾನೆ.

    ಶ್ರೀಕಾಕುಳಂ ಮೂಲದ ಪ್ರವೀಣ್ ಮೃತ ದುರ್ದೈವಿ. ರೈಲು ಹಳಿ ಕ್ರಾಸಿಂಗ್ ಮಾಡುವ ವೇಳೆ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಅಂತ ತಿಳಿದುಬಂದಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡ್ತಿದ್ದ. ಅಲ್ಲೇ ಸ್ನೇಹಿತರೊಂದಿಗೆ ರೂಂ ಮಾಡಿಕೊಂಡಿದ್ದ. ಇಂದು ಸ್ನೇಹಿತರ ಜೊತೆ ಸೇರಿ ದೊಡ್ಡಬಳ್ಳಾಪುರ ನಗರದ ಚಿತ್ರಮಂದಿರಕ್ಕೆ ತೆರಳುವ ವೇಳೆ ಬಾಶೆಟ್ಟಿಹಳ್ಳಿ ಬಳಿ ರೈಲ್ವೆ ಹಳಿಗಳನ್ನ ದಾಟುವ ಸಮಯದಲ್ಲಿ ಎರಡು ರೈಲುಗಳು ಏಕಕಾಲದಲ್ಲಿ ಆಗಮಿಸಿದ್ದು‌, ಇದನ್ನರಿಯದ ಪ್ರವೀಣ್ ಎರಡು ರೈಲುಗಳ ಮಧ್ಯೆ ಸಿಲುಕಿ ಸಾವನ್ನಪ್ಪಿದ್ದಾನೆ.

    ಸ್ನೇಹಿತರ ಕಣ್ಣು ಎದುರೇ ಘಟನೆ ನಡೆದಿದ್ದು, ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಹೊರ ಠಾಣಾ ಪೊಲೀಸರು ಭೇಟಿ ಮಾಡಿ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ಮೋರಿಯಲ್ಲಿ ಮಗುವಿನ ಮೃತದೇಹ ಪತ್ತೆ ಪ್ರಕರಣ – ಅಂತ್ಯಸಂಸ್ಕಾರಕ್ಕೆ ದಿಕ್ಕು ತೋಚದೇ ಬಿಟ್ಟುಹೋಗಿದ್ದ ಪೋಷಕರು

    ಮೋರಿಯಲ್ಲಿ ಮಗುವಿನ ಮೃತದೇಹ ಪತ್ತೆ ಪ್ರಕರಣ – ಅಂತ್ಯಸಂಸ್ಕಾರಕ್ಕೆ ದಿಕ್ಕು ತೋಚದೇ ಬಿಟ್ಟುಹೋಗಿದ್ದ ಪೋಷಕರು

    ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಮೋರಿಯ ಅಂಚಿನಲ್ಲಿ ಪತ್ತೆಯಾದ ಮೃತ ಹೆಣ್ಣು ಮಗುವಿನ (Child Dead Body) ಪೋಷಕರನ್ನು ಪತ್ತೆ ಮಾಡುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

    ಮೃತ ಮಗು ರುಚಿಕುಮಾರಿಯ (1) ತಂದೆ-ತಾಯಿಯನ್ನು ಪ್ರವೇಶ್ ಕುಮಾರ್, ವಿಭಾಕುಮಾರಿ ಎಂದು ಗುರುತಿಸಲಾಗಿದೆ. ಇವರು ಬಿಹಾರ ಮೂಲದವರಾಗಿದ್ದು, ವೀರಾಪುರದಲ್ಲಿ ಕಳೆದ 1 ವಾರದಿಂದ ವಾಸವಿದ್ದರು. ಮಗುವಿಗೆ ಹೃದ್ರೋಗ ಸಮಸ್ಯೆ ಇದ್ದು, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿಬಾಬಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ಪ್ರಯತ್ನಿಸಿದ್ದಾರೆ. ಆದರೆ ಅಲ್ಲಿ ಚಿಕಿತ್ಸೆ ಸಾಧ್ಯವಿಲ್ಲದಾಗ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದರು. ಆಗ ಮರಳಿ ವೀರಾಪುರಕ್ಕೆ ಬರುವ ವೇಳೆ ಮಗು ಸಾವಿಗೀಡಾಗಿದೆ.

    ಈ ವೇಳೆ ಮಗುವಿನ ಅಂತ್ಯಕ್ರಿಯೆ ಮಾಡುವುದರ ಬಗ್ಗೆ ದಿಕ್ಕು ತೋಚದ ತಂದೆ ಮೋರಿ ಕೆಳಗೆ ಮಗುವಿನ ಮೃತದೇಹವನ್ನು ಬಿಟ್ಟು ಹೋಗಿದ್ದರು. ಮೃತ ಮಗುವಿನ ಫೋಟೋ ಬಳಸಿ ಕೈಗಾರಿಕಾ ಪ್ರದೇಶ, ಬಾಶೆಟ್ಟಿಹಳ್ಳಿ ವ್ಯಾಪ್ತಿಯಲ್ಲಿ ಮಗುವಿನ ಪೋಷಕರನ್ನು ಪತ್ತೆಗೆ ಪೊಲೀಸರು ತೀವ್ರ ತಲಾಶ್ ನಡೆಸಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಮಗುವಿನ ಬಗ್ಗೆ ಮಾಹಿತಿ ದೊರೆತಿದ್ದು, ಸಿಸಿಟಿವಿ ಕ್ಯಾಮೆರಾ ದೃಶ್ಯವನ್ನು ಆಧರಿಸಿ ಪೊಲೀಸರು ಪೋಷಕರನ್ನು ಪತ್ತೆ ಮಾಡಿದ್ದಾರೆ.

    ಬೆಂಗಳೂರು-ಹಿಂದೂಪುರ ರಾಜ್ಯ ಹೆದ್ದಾರಿಯ ಬಾಶೆಟ್ಟಿಹಳ್ಳಿ ಗ್ರಾಮದ ಅಂಚಿನಲ್ಲೇ ಇರುವ ಮೋರಿಯ ತಳದಲ್ಲಿ ಶಾಲು ಹೊದಿಸಿ ಮಲಗಿಸಿರುವ ಸ್ಥಿತಿಯಲ್ಲಿ ಒಂದೂವರೆ ವರ್ಷ ಹೆಣ್ಣು ಮಗುವಿನ ಮೃತದೇಹ ಸೋಮವಾರ ಪತ್ತೆಯಾಗಿತ್ತು. ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಶವಾಗಾರಕ್ಕೆ ಸಾಗಿಸಿ ಪೋಷಕರ ಪತ್ತೆಗೆ ಮುಂದಾಗಿದ್ದರು. ಇದನ್ನೂ ಓದಿ: ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ- ಏಮ್ಸ್ ವೈದ್ಯರಿಂದ ಹೊಸ ವರದಿ

    ಕೊನೆಗೆ ಮೃತ ಮಗುವಿನ ಪೋಷಕರನ್ನು ಪತ್ತೆ ಮಾಡುವುದು ಪೊಲೀಸರಿಗೂ ದೊಡ್ಡ ಸವಾಲಾಗಿತ್ತು. ಅಲ್ಲದೆ ಮಗುವಿನ ಮೃತದೇಹ ಮಲಗಿಸಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಮಗು ಮೃತಪಟ್ಟ ನಂತರವೇ ಇಲ್ಲಿ ತಂದು ಇಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದರು.

    ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಬಿಹಾರ ಮೂಲದ ದಂಪತಿ ಮೃತ ಮಗುವಿನ ಅಂತ್ಯಸಂಸ್ಕಾರ ನಡೆಸಲು ಪ್ರಯತ್ನ ನಡೆಸಿದ್ದಾರೆ. ಅದರೆ ಒಂದು ವಾರದ ಹಿಂದಷ್ಟೇ ವೀರಾಪುರಕ್ಕೆ ಬಂದಿದ್ದ ಕಾರಣ ದಿಕ್ಕು ತೋಚದೆ ಯಾರದೋ ಮಾತು ಕೇಳಿ ಮೋರಿ ಕೆಳಗೆ ಮಗುವನ್ನು ಬಿಟ್ಟು ಹೋಗಿದ್ದರು. ಈಗ ಅವರ ಸಂಬಂಧಿಕರನ್ನೆಲ್ಲಾ ಕರೆಸಿದ್ದು, ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಮಗುವಿನ ಅಂತ್ಯಕ್ರಿಯೆ ನಡೆಸಲು ವ್ಯವಸ್ಥೆ ನಾವೇ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಮೀನು ವಿವಾವದವೇ ಕರ್ಣಿ ಸೇನಾ ಮುಖ್ಯಸ್ಥನ ಕೊಲೆಗೆ ಕಾರಣವಾಯ್ತಾ?

  • ಬೆಳೆ ಕಾವಲಿಗೆ ತೆರಳಿದ್ದ ವೃದ್ಧೆಯ ಕೊಲೆ

    ಬೆಳೆ ಕಾವಲಿಗೆ ತೆರಳಿದ್ದ ವೃದ್ಧೆಯ ಕೊಲೆ

    ಚಿಕ್ಕಬಳ್ಳಾಪುರ: ರಾಗಿ ಬೆಳೆ ಕಾವಲಿಗೆ ತೆರಳಿದ್ದ ವೃದ್ಧೆ ಕೊಲೆಯಾಗಿರುವ ಘಟನೆ ದೊಡ್ಡಬಳ್ಳಾಪುರದ (Doddaballapura) ಗುಂಜೂರಿನಲ್ಲಿ ನಡೆದಿದೆ.

    ಮೃತ ವೃದ್ಧೆಯನ್ನು ಗ್ರಾಮದ ಚೌಡಮ್ಮ (75) ಎಂದು ಗುರುತಿಸಲಾಗಿದೆ. ಮೃತ ವೃದ್ಧೆ ತಮ್ಮ ಜಮೀನಿನಲ್ಲಿ ಬೆಳೆದಿದ್ದ ರಾಗಿ ಬೆಳೆಯನ್ನು ದನ-ಕರುಗಳು ಹಾಳು ಮಾಡುತ್ತವೆ ಎಂದು ಕಾವಲಿಗೆ ತೆರಳಿದ್ದರು. ಈ ವೇಳೆ ಜಮೀನಿನ ಬಳಿ ವೃದ್ಧೆಯ ಕತ್ತು ಹಿಸುಕಿ ತಲೆಗೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ವೃದ್ಧೆಯ ತಲೆಗೆ ತೀವ್ರ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ!

    ವೃದ್ಧೆಯ ಕತ್ತಿಗೆ ಆಕೆಯ ಸೀರೆಯ ಸೆರಗನ್ನು ಬಿಗಿದು ಉಸಿರು ಕಟ್ಟಿಸಲಾಗಿದೆ ಎಂದು ಶಂಕಿಸಲಾಗಿದೆ. ಮಹಿಳೆಯ ಮಾಂಗಲ್ಯ ಸರ ಮತ್ತು ಕಿವಿಯ ಓಲೆ ಹಾಗೆಯೇ ಇದೆ. ಬೆಳೆದಿರುವ ರಾಗಿ ಬೆಳೆಯನ್ನು ದನ ಕರುಗಳು ತಿನ್ನುತ್ತಿವೆ ಎಂದು ಚೌಡಮ್ಮ ಇತ್ತೀಚೆಗೆ ಕೆಲವರೊಂದಿಗೆ ಜಗಳವಾಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಇನ್ಸ್‍ಪೆಕ್ಟರ್ ಮುನಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಫೋಟೋ ಎಡಿಟ್ ಮಾಡಿ ಬ್ಲಾಕ್‍ಮೇಲ್ – ಆರೋಪಿ ಅರೆಸ್ಟ್

  • ಬಾಗಿಲಿಲ್ಲದ ದೇವಾಲಯಕ್ಕೆ ನುಗ್ಗಿ ಕಾಣಿಕೆ ಡಬ್ಬಿ, 100 ಘಂಟೆಗಳನ್ನು ದೋಚಿದ ಕಳ್ಳರು

    ಬಾಗಿಲಿಲ್ಲದ ದೇವಾಲಯಕ್ಕೆ ನುಗ್ಗಿ ಕಾಣಿಕೆ ಡಬ್ಬಿ, 100 ಘಂಟೆಗಳನ್ನು ದೋಚಿದ ಕಳ್ಳರು

    – ಬೆಳ್ಳಿಯ ನಾಗಾಭರಣ ಮೂರ್ತಿ ಪಕ್ಕದಲ್ಲೇ ಇದ್ರೂ ಮುಟ್ಟದೇ ಹೋದರು

    ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಇತಿಹಾಸ ಪ್ರಸಿದ್ಧವಾದ, ಬಾಗಿಲು ಇಲ್ಲದ ದೇವಾಲಯವೆಂದೇ (Temple) ಪ್ರಸಿದ್ಧಿ ಪಡೆದಿರುವ ತೋಪನಯ್ಯ ಸ್ವಾಮಿ ದೇವಾಲಯದಲ್ಲಿ (Topanaiah Swamy Temple) ಭಾನುವಾರ ರಾತ್ರಿ ಕಳ್ಳತನ (Theft) ನಡೆದಿದೆ.

    ಭಕ್ತರಹಳ್ಳಿ ಸಮೀಪದ ತೋಪನಯ್ಯ ಸ್ವಾಮಿ ದೇವಾಲಯ ಬಾಗಿಲು ಇಲ್ಲದ ದೇವಾಲಯವಾಗಿದ್ದು, ಪುರಾತನ ದೇವಾಲಯವಾಗಿದೆ. ಭಾನುವಾರ ರಾತ್ರಿ ಈ ದೇವಾಲಯಕ್ಕೆ ನುಗ್ಗಿರುವ ಕಳ್ಳರು, ಸುಮಾರು 30 ಸಾವಿರ ರೂ. ಹುಂಡಿಯಲ್ಲಿದ್ದ ಕಾಣಿಕೆ ಹಣವನ್ನು ದೋಚಿದ್ದಾರೆ. ಅಲ್ಲದೇ ದೇವಾಲಯಕ್ಕೆ ಅಳವಡಿಸಿದ್ದ 100ಕ್ಕೂ ಹೆಚ್ಚು ಘಂಟೆಗಳನ್ನು ಕದ್ದೊಯ್ದಿದ್ದಾರೆ. ಇದನ್ನೂ ಓದಿ: ಗಣಿ ಅಧಿಕಾರಿ ಪ್ರತಿಮಾ ಕೊಲೆ ಕೇಸ್‌ನಲ್ಲಿ ಸುಳಿವು ಸಿಕ್ಕಿದೆ: ಪರಮೇಶ್ವರ್

    ಇಷ್ಟೆಲ್ಲಾ ಕಳ್ಳತನ ಮಾಡಿದರೂ ಖದೀಮರು ಹುಂಡಿ ಪಕ್ಕದಲ್ಲಿಯೇ ಇದ್ದ ಬೆಳ್ಳಿಯ ಬೃಹತ್ ನಾಗಾಭರಣವನ್ನು ಮುಟ್ಟದೆ ಇರುವುದು ಭಕ್ತರ ಆಶ್ಚರ್ಯಕ್ಕೆ ಕಾರಣವಾಗಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜೂಜು ಅಡ್ಡೆ ಮೇಲೆ ಪೊಲೀಸ್ ರೈಡ್ – 70 ಜನ ಅರೆಸ್ಟ್