Tag: Dog Meat

  • ಬೆಂಗ್ಳೂರಿಗೆ ಮಾರಾಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಸರ್ಕಾರದ ಕೈ ಸೇರಿದ ರಿಪೋರ್ಟ್

    ಬೆಂಗ್ಳೂರಿಗೆ ಮಾರಾಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಸರ್ಕಾರದ ಕೈ ಸೇರಿದ ರಿಪೋರ್ಟ್

    – ನಾಯಿ ಮಾಂಸ ದಂಧೆ ಆರೋಪ; ವರದಿಯಲ್ಲಿ ಏನಿದೆ?

    ಬೆಂಗಳೂರು: ನಾಯಿ ಮಾಂಸ (Dog Meat) ಮಾರಾಟ ದಂಧೆ ಪ್ರಕರಣಕ್ಕೆ ಸಂಬಂಧಿಸಿದ ಅಧಿಕೃತ ರಿಪೋರ್ಟ್ ಸರ್ಕಾರದ ಕೈ ಸೇರಿದೆ. ಮಾಂಸ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (FSL) ಆಯುಕ್ತ ಕೆ ಶ್ರೀನಿವಾಸ್, ಆಹಾರ ಇಲಾಖೆ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ವರದಿ ಸಲ್ಲಿಸಿದ್ದಾರೆ.

    ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ಮಾರಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ಆಹಾರ ಮತ್ತು ಗುಣಮಟ್ಟ ಆಯುಕ್ತಾಲಯ ವರದಿ ನೀಡಿದೆ. ಹೈದ್ರಾಬಾದ್ ಐಸಿಎಆರ್ ರಿಪೋರ್ಟ್ ಗುಣಮಟ್ಟ ಇಲಾಖೆ ಈ ವರದಿ ನೀಡಿದೆ. ಐಸಿಎಆರ್ ರಿಪೋರ್ಟ್‌ಲ್ಲಿ ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ವರದಿಯಾಗಿದೆ. ಸ್ಯಾಂಪಲ್ ಪರಿಶೀಲಿಸಿ ಐಸಿಎಆರ್ ವರದಿ ನೀಡಿದೆ. ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಡಿಕೆಶಿ – ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ

    ಈ ಕುರಿತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಮಾತನಾಡಿ, ಕುರಿ ಮಾಂಸ ಎಂದು ವರದಿ ಬಂದಿದೆ. ಪ್ರಾಥಮಿಕ ಹಂತದಲ್ಲಿ 9 ಜನರಿಗೆ ಲೈಸೆನ್ಸ್ ಪಡೆದಿದ್ದರು ಎಂಬ ಹಿನ್ನೆಲೆ ನೋಟಿಸ್ ನೀಡಿ ವಿಚಾರಣೆ ಮಾಡಲಾಯಿತು. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಲೈಸೆನ್ಸ್ ಇದೆ. ಹೀಗಾಗಿ ರಾಜಸ್ಥಾನದಿಂದ ಕುರಿ ತಂದು ಮಾರಾಟ ಮಾಡುತ್ತಿದ್ದರು. ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ಕುಮಾರಸ್ವಾಮಿ ಕಿಡಿ

    ಇನ್ನು ನಾಯಿ ಮಾಂಸ ಎಂದು ವದಂತಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ಅವರ ಮೇಲೆ ಕ್ರಮ ಕೈಗೊಳ್ಳುತ್ತದೆ. ನಾವು ಪೊಲೀಸರಿಗೆ ವರದಿ ನೀಡುತ್ತೇವೆ. ವದಂತಿ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದರು. ಇದನ್ನೂ ಓದಿ: Wayanad Landslide |ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಘೋಷಣೆ

  • ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ – ಪರಮೇಶ್ವರ್

    ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ – ಪರಮೇಶ್ವರ್

    – ಅನಾವಶ್ಯಕ ದುರುದ್ದೇಶದಿಂದ ದೂರು: ಗೃಹಸಚಿವ

    ದಾವಣಗೆರೆ: ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ಬಂದ್ದದ್ದು, ನಾಯಿ ಮಾಂಸ (Dog Meat) ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ (G Parmeshwar) ಸ್ಪಷ್ಟಪಡಿಸಿದ್ದಾರೆ.

    ದಾವಣಗೆರೆಯಲ್ಲಿ (Davanagere) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಲ್ಯಾಬ್‌ನಲ್ಲಿ ಅದು ಮೇಕೆ ಮಾಂಸ ಎಂದು ವರದಿ ಬಂದಿದೆ. ಅನಾವಶ್ಯಕವಾಗಿ ದುರುದ್ದೇಶದಿಂದ ದೂರು ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ಮೇಕೆ ಮಾಂಸ?

    ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಮಾಂಸ ಮಾರಾಟ ಮಾಡುವುದು ವೃತ್ತಿ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಕೆಶಿ ಮನವಿ

    ರಾಜ್ಯದ ಸಂಪತ್ತು ಹಾಳಾಗುತ್ತಿದೆ, ಸಂಪತ್ತು ಲೂಟಿ ಆಗುತ್ತಿದೆ ಅಂತ ಬಿಜೆಪಿಯವರು ಪಾದಯಾತ್ರೆ ಮಾಡುತ್ತಿರುವುದಾಗಿ ಬಿಜೆಪಿಯವರು ಹೇಳಿದ್ದಾರೆ. ಅವರ ಪಾದಯಾತ್ರೆ ಅನವಶ್ಯಕವಾಗಿದೆ. ಸಿಎಂ ಮೇಲೆ ಅನಾವಶ್ಯಕ ಆರೋಪ ಮಾಡಿ ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಆಗಿಲ್ಲ. ಕಾನೂನು ಉಲ್ಲಂಘನೆ ಆಗಿಲ್ಲದಿದ್ದರೂ ಆಗಿದೆ ಎಂದು ಬಿಂಬಿಸಲು ಬಿಜೆಪಿಯವರು ಹೊರಟಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ ಸಿಬಿಐ ತನಿಖೆ ಮಾಡಿದ್ರೆ ಬಿಎಸ್‌ವೈ ಇದ್ದಾನೋ, ಬಿವೈವಿ ಇದ್ದಾನೋ ಎಂದು ಗೊತ್ತಾಗುತ್ತೆ: ಯತ್ನಾಳ್

    ನಾವು ರಾಜ್ಯದ ಜನತೆಗೆ ಸತ್ಯ ತಿಳಿಸುವ ಪ್ರಯತ್ನ ಮಾಡುತ್ತೇವೆ. ಅದಕ್ಕಾಗಿ ಮುಖ್ಯಮಂತ್ರಿಗಳು ಒಂದು ಆಯೋಗ ನೇಮಕ ಮಾಡಿದ್ದಾರೆ. ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಕಾನೂನು ಬಾಹಿರ ಕೆಲಸ ಆಗಿಲ್ಲ. ವಾಲ್ಮೀಕಿ ಹಗರಣವನ್ನು ನಾವು ಜಸ್ಟಿಫೈ ಮಾಡುತ್ತಿಲ್ಲ. ವಾಲ್ಮೀಕಿ ಹಗರಣದ ಬಗ್ಗೆ ಎಸ್‌ಐಟಿ, ಸಿಬಿಐ ತನಿಖೆಯಾಗುತ್ತಿದೆ. ಅದರ ವರದಿ ಬರಲಿ. ಒಂದು ವೇಳೆ ವಾಲ್ಮೀಕಿ ಹಗರಣದಲ್ಲಿ ಮಂತ್ರಿಗಳ ಅಕೌಂಟ್ ಹಣ ಹೋಗಿದೆ ಎಂದು ಸಾಬೀತಾದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: 2010 ರಲ್ಲೇ ಸಿಎಂ ಆಗಬೇಕಿತ್ತು, ಆಗ ಅವಕಾಶ ಕೈ ತಪ್ಪಿತ್ತು: ವಿಜಯ್‌ ಶಂಕರ್‌

  • ನಾಯಿ ಮಾಂಸದ ವದಂತಿ – ಮಟನ್ ಶಾಪ್‌ಗಳ ಪರಿಶೀಲನೆಗೆ ಮುಂದಾದ ಆಹಾರ ಸುರಕ್ಷತಾ ಇಲಾಖೆ

    ನಾಯಿ ಮಾಂಸದ ವದಂತಿ – ಮಟನ್ ಶಾಪ್‌ಗಳ ಪರಿಶೀಲನೆಗೆ ಮುಂದಾದ ಆಹಾರ ಸುರಕ್ಷತಾ ಇಲಾಖೆ

    ಬೆಂಗಳೂರು: ನಗರದಲ್ಲಿ (Bengaluru) ನಾಯಿ ಮಾಂಸದ (Dog Meat) ವದಂತಿ ಹರಡುತ್ತಿದ್ದಂತೆ, ಮಾಂಸ ಎಂದರೆ ಒಂದು ಕ್ಷಣ ಯೋಚಿಸುವ ಪರಿಸ್ಥಿತಿ ಜನರ ಮನಸ್ಸಲ್ಲಿ ನಿರ್ಮಾಣವಾಗಿದೆ. ಇನ್ನೂ ವದಂತಿ ಬೆನ್ನಲ್ಲೇ ಆಹಾರ ಸುರಕ್ಷತಾ ಇಲಾಖೆ (Health and Food Safety Department) ಅಗತ್ಯ ಕ್ರಮಕ್ಕೆ ಮುಂದಾಗಿದ್ದು, ಬೆಂಗಳೂರಿನ ಮಟನ್ ಅಂಗಡಿಗಳಲ್ಲಿ ಪರಿಶೀಲನೆ ನಡೆಸಲು ತೀರ್ಮಾನಿಸಿದೆ.

    ಮಟನ್ ಸ್ವಚ್ಚತೆ ಮತ್ತು ಅಂಗಡಿಗಳಲ್ಲಿಡೋ ಕೋಲ್ಡ್ ಸ್ಟೋರೇಜ್‌ನಲ್ಲಿರೋ ಮಾಂಸ ಎಷ್ಟು ಸೇಫ್? ಎಂಬ ಬಗ್ಗೆ ಪರಿಶೀಲನೆ ಮಾಡಲು ಇಲಾಖೆ ಸಿದ್ಧತೆ ನಡೆಸಿದೆ. ಅದಕ್ಕಾಗಿ ಬೆಂಗಳೂರಿನ ಕೆಲವೆಡೆ ಸ್ಯಾಂಪಲ್‌ಗಳನ್ನು ಸಹ ಸಂಗ್ರಹಿಸಲಾಗಿದೆ. ಇನ್ನೂ ವದಂತಿ ಬೆನ್ನಲ್ಲೇ ಹೋಟೆಲ್ ಮಾಲೀಕರು ಕಳವಳ ವ್ಯಕ್ತಪಡಿಸಿದ್ದು, ತಾವೇ ಖುದ್ದಾಗಿ ಮಾಂಸ ಖರೀದಿಗೆ ಮುಂದಾಗಿದ್ದಾರೆ.

    ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜಾಗಿದ್ದ ಮಾಂಸ ನಾಯಿಯದ್ದು ಎಂಬ ಆರೋಪವನ್ನು ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ (Puneeth Kerehalli) ಹಾಗೂ ಆತನ ಸಹಚರರು ಮಾಡಿದ್ದರು. ಇದೇ ವಿಚಾರವಾಗಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಮಾಂಸವಿದ್ದ ಬಾಕ್ಸ್‌ಗಳನ್ನು ತಡೆದು  ಪ್ರತಿಭಟಿಸಿದ್ದರು. ಇದಾದ ಬೆನ್ನಲ್ಲೇ ಮಾಂಸದ ಕ್ವಾಲಿಟಿ ಬಗ್ಗೆ ಪ್ರಶ್ನೆ ಎದ್ದಿದೆ. ಈ ಘಟನೆಯಿಂದ ಅಲರ್ಟ್ ಆಗಿರುವ ಆಹಾರ ಮತ್ತು ಸುರಕ್ಷತಾ ಇಲಾಖೆ ಬೆಂಗಳೂರಿನಲ್ಲಿ ಮಟನ್ ಅಂಗಡಿಗಳ ಪರಿಶೀಲನೆಗೆ ಮುಂದಾಗಿದೆ.

    ಬೆಂಗಳೂರಿನ ಎಲ್ಲಾ ಪ್ರದೇಶದ ಮಟನ್ ಅಂಗಡಿಗಳು, ದೊಡ್ಡ ಹೋಟೆಲ್ ಮತ್ತು ದೊಡ್ಡ ಮಟನ್ ಶಾಪ್ ಗಳಲ್ಲಿ ಮಾಂಸವನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಶೇಖರಣೆ ಮಾಡ್ತಾರೆ. ಕೋಲ್ಡ್ ಸ್ಟೋರೇಜ್ ಮಾಂಸದ ಕ್ವಾಲಿಟಿ ಚೆಕ್ ಮಾಡಲಿದ್ದಾರೆ. -18 ಡಿಗ್ರಿ ಸೆಲ್ಸಿಯಸ್ ಇದ್ರೆ 8 ರಿಂದ 10 ತಿಂಗಳುಗಳ ಕಾಲ ತಿನ್ನಬಹುದಂತೆ. 4 ಡಿಗ್ರಿ ಸೆಂಟಿಗ್ರೇಡ್‌ನಲ್ಲಿ ಇದ್ರೆ ಮಾಂಸ ಚೆನ್ನಾಗಿರಲಿದೆ. ಹೀಗಾಗಿ ಕೋಲ್ಡ್ ಸ್ಟೋರೇಜ್ ಮಾಡಲಾಗುತ್ತದೆ.

    ಇದೀಗ ರಾಜಸ್ಥಾನದಿಂದ ಬಂದಿರುವ ಮಾಂಸ ಯಾವ ಪ್ರಾಣಿಯದ್ದು ಎಂದು ತಿಳಿಯಲು ಹೈದರಾಬಾದ್‌ನ ಎಫ್‌ಎಸ್‌ಎಲ್ ಲ್ಯಾಬ್‌ಗೆ ಕಳುಹಿಸಲಾಗಿದೆ. ಈ ಬಗ್ಗೆ ವರದಿ ಬರಲು 10 ರಿಂದ 14 ದಿನ ಬೇಕಾಗಿದ್ದು, ಈ ಅವಧಿಯಲ್ಲಿ ನಗರದ ಮಾಂಸದಂಗಡಿಗಳ ಪರಿಶೀಲನೆ ನಡೆಯಲಿದೆ.

  • ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

    ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

    ಬೆಂಗಳೂರು: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

    ಶನಿವಾರ ಕಾಟನ್ ಪೇಟೆ ಪೊಲೀಸರ (Cottonpet Police) ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದ ಪುನೀತ್‌ ಕೆರೆಹಳ್ಳಿಯನ್ನ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆ ವಿಕ್ಟೋರಿಯಾ ಆಸ್ಪತ್ರೆಯಿಂದ ಕರೆತಂದಿದ್ದ ಪೊಲೀಸರು ಕೋರಮಂಗಲದ ಜ್ಯೂಡಿಷಿಯಲ್ ಬ್ಲಾಕ್ ನಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಈ ವೇಳೆ 5ನೇ ಎಸಿಎಂಎಂ ಕೋರ್ಟ್ (ACMM Court) ನ್ಯಾಯಾಧೀಶ ಶಿವಕುಮಾರ್‌ ಅವರು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಸೋಮವಾರ (ಜು.29) ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

    ಪುನೀತ್‌ ಕೆರೆಹಳ್ಳಿ ಅರೆಸ್ಟ್‌ ಆಗಿದ್ದೇಕೆ?
    ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ (Bengaluru) ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂ ಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು (Cottonpet Police) ಬಂಧಿಸಿದ್ದರು.

    ಬಂಧನವಾಗುತ್ತಿದ್ದಂತೆ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡಿದ್ದರು. ಇನ್ನೂ ಬೆಳಗಿನ ಜಾವ 4:45ರ ವೇಳೆಗೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ಆರೋಗ್ಯ ತಪಾಸಣೆ ವೇಳೆ ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿತ್ತು. ಹಾಗಾಗಿ ಸಂಜೆ ವೇಳೆ ಕರೆದೊಯ್ದು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು.

    ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ.

  • ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ – ಹಿಂದೂ ಸಂಘಟನೆಗಳ ಒಕ್ಕೂಟದಿಂದ ಕಮಿಷನರ್‌ಗೆ ದೂರು

    ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ – ಹಿಂದೂ ಸಂಘಟನೆಗಳ ಒಕ್ಕೂಟದಿಂದ ಕಮಿಷನರ್‌ಗೆ ದೂರು

    ಬೆಂಗಳೂರು: ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ನಾಯಿ ಮಾಂಸ (Dog Meat) ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ (Puneeth Kerehalli) ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಶನಿವಾರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಯಿತು.

    ಹಿಂದೂ ಸಂಘಟನೆಗಳ ಒಕ್ಕೂಟದ (Federation of Hindu Organizations) ಮೋಹನ್ ಗೌಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು. ಶುಕ್ರವಾರ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ (Mejestic Railway Station) ಟನ್‌ಗಟ್ಟಲೆ ಅಕ್ರಮವಾಗಿ ಮಾಂಸ ಬಂದಿದೆ. ಅವರ ಬಳಿ ಲೈಸೆನ್ಸ್ ಇಲ್ಲ ಎಂದು ಫುಡ್ ಕಮಿಷನರ್ ಹೇಳಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಪುನೀತ್ ಕೆರೆಹಳ್ಳಿ ಮೇಲೆ 3 ಎಫ್‌ಐಆರ್ ದಾಖಲು ಮಾಡಿದ್ದಾರೆ. ಸಾಮಾಜಿಕ ಕರ್ತವ್ಯ ಮೆರೆದವರ ಮೇಲೆ ದೂರು ದಾಖಲಾಗಿದೆ. ಹಿಂದೂಗಳ ವಾಕ್ ಸ್ವಾತಂತ್ರ್ಯವನ್ನು ಸರ್ಕಾರ ಹರಣ ಮಾಡುತ್ತಿದೆ. ದೂರುದಾರರಿಂದ ರಕ್ಷಣೆ ಇಲ್ಲದಂತಾಗಿದೆ. ಈ ಕುರಿತು ಸೂಕ್ತ ತನಿಖೆ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕಮರಿಗೆ ಉರುಳಿದ ಕಾರು – ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ದುರ್ಮರಣ!

    ಪ್ರಕರಣ ಏನು?
    ರಾಜಸ್ಥಾನದಿಂದ ಬೆಂಗಳೂರಿಗೆ ಮೇಕೆ, ಕುರಿ ಮಾಂಸದ ಹೆಸರಿನಲ್ಲಿ ಅಕ್ರಮವಾಗಿ ನಾಯಿ ಮಾಂಸ ತರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಶುಕ್ರವಾರ ರೈಲಿನಲ್ಲಿ ಬಂದ 90 ಬಾಕ್ಸ್ ಮಾಂಸವನ್ನು ತಡೆಯಲಾಗಿತ್ತು. ಇದರ ಉಸ್ತುವಾರಿ ಪುನೀತ್ ಕೆರೆಹಳ್ಳಿ ವಹಿಸಿಕೊಂಡಿದ್ದರು. ಬಳಿಕ ಪುನೀತ್ ಕೆರೆಹಳ್ಳಿ ಹಾಗೂ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ನಡುವೆ ವಾಗ್ವಾದ ಕೂಡ ನಡೆದಿತ್ತು. ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಪೊಲೀಸರ ವಶದಲ್ಲಿದ್ದ ಪುನೀತ್ ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

  • ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

    ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

    ಬೆಂಗಳೂರು: ನಾವು ನಾಯಿಯನ್ನೇ ಮುಟ್ಟಲ್ಲ, ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ. ಸ್ನಾನ ಮಾಡಿಕೊಂಡು ಹೋಗ್ತೀವಿ ಅಂತಹದ್ದರಲ್ಲಿ ನಾಯಿ ಮಾಂಸ (Dog Meat) ತಂದು ತಿನ್ನಿಸುತ್ತಿದ್ದಾರೆ ಅಂತ ಆರೋಪಿಸಿದ್ದಾರೆ ಎಂದು ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ (Abdul Razak) ಆಕ್ರೋಶ ಹೊರಹಾಕಿದ್ದಾರೆ.

    ರಾಜಸ್ಥಾನದ ಜೈಪುರದಿಂದ (Rajasthan Jaipur) ಬೆಂಗಳೂರಿಗೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ತರಲಾಗಿದೆ. ಜೊತೆಗೆ ಬೆಂಗಳೂರಿನ ಹೋಟೆಲ್‌ಗಳಿಗೆ ನಾಯಿ ಮಾಂಸ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ್ದಾರೆ. ಇದನ್ನೂ ಓದಿ: ರಾಜ್ಯದ ಜನರಿಗೆ ಮತ್ತೊಂದು ಶಾಕ್‌ – ಬಸ್‌ ಪ್ರಯಾಣ ದರ ಹೆಚ್ಚಿಸಲು KSRTCಯಿಂದ ಪ್ರಸ್ತಾವನೆ ಸಲ್ಲಿಕೆ

    ಎರಡು ದಿನಕ್ಕೆ ಒಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತೆ. ಇವತ್ತು 2,000 ಕೆಜಿ ಮಾಂಸ ಬಂದಿದೆ. 10-12 ವರ್ಷಗಳಿಂದ ಈ ವ್ಯವಹಾರ ನಡೆಯುತ್ತಿದೆ. ರಾಜಸ್ಥಾನದ ಕುರಿಗಳಿಗೆ ಬಾಲ ಇದೇ ರೀತಿ ಇರುತ್ತೆ, ಅದನ್ನ ನಾಯಿ ಅನ್ನುತ್ತಿದ್ದಾರೆ. ಈ ವ್ಯವಹಾರವನ್ನ ನಂಬಿಕೊಂಡು ಸಾವಿರಾರು ಜನ ಜೀವನ ನಡೆಸುತ್ತಿದ್ದಾರೆ. ಪುನೀತ್‌ ಕೆರೆಹಳ್ಳಿ ರೋಲ್‌ಕಾಲ್‌ ಸಿಗಲಿಲ್ಲ ಅಂತ ಈ ರೀತಿ ಆರೋಪ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಿಜೆಪಿ ಶಾಸಕರಿಗೆ ಅನುದಾನ ಕೊಟ್ಟಿಲ್ಲ: ಎಸ್.ಆರ್.ವಿಶ್ವನಾಥ್

    ಶಶಿ, ರಿಜ್ವಾನ್‌, ಹಿಲಾಲ್‌ ಅನ್ನುವವರು ಕಳೆದ ಒಂದೂವರೆ ತಿಂಗಳಿನಿಂದ ನಮ್ಮ ಹಿಂದೆ ಬಿದ್ದಿದ್ದರು. ಮಾಂಸ ಸಾಗಿಸುತ್ತಿರುವ ವಿಚಾರವನ್ನ ಪುನೀತ್‌ ಕೆರೆಹಳ್ಳಿಗೆ ತಿಳಿಸಿ, ರೋಲ್‌ಕಾಲ್‌ ಮಾಡೋದಕ್ಕೆ ಮುಂದಾಗಿದ್ದರು. ಈ ಬಗ್ಗೆ ನಾನು ಕಳೆದ ಜೂನ್‌ 26ರಂದೇ ಪೊಲೀಸ್‌ ಠಾಣೆಗೆ ದೂರು ಕೊಟ್ಟಿದ್ದೆ, ಎನ್‌ಸಿಆರ್‌ ಕೂಡ ಆಗಿದೆ. ನಮಗೆ ಹಿಂಸೆ ಕೊಡ್ತಿದ್ದಾರೆ ಅಂತಾ ಪೊಲೀಸರಿಗೆ ದೂರಿನ ಮೂಲಕ ತಿಳಿಸಿದ್ದೆ. ನಾವು ರೋಲ್‌ಕಾಲ್‌ಗೆ ಆಸ್ಪದ ನೀಡದೇ ಇದ್ದಿದ್ದರಿಂದ ಕುರಿ ಮಾಂಸವನ್ನು ನಾಯಿ ಮಾಂಸ ಅಂತ ಸುಳ್ಳು ಹಬ್ಬಿಸಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ – ಆಹಾರ ಸುರಕ್ಷತಾ ಅಧಿಕಾರಿಗಳಿಂದ ಸ್ಯಾಂಪಲ್ಸ್‌ ಸಂಗ್ರಹ

    ಬೆಂಗಳೂರಲ್ಲಿ ಸುಮಾರು 2 ಕೋಟಿ ಜನ ವಾಸ ಮಾಡ್ತಿದ್ದಾರೆ. ನಮ್ಮ ಬಳಿಕ 2 ಸ್ಲಾಟ್‌ಗಳಿವೆ. ಸುಮಾರು 3 ಸಾವಿರ ಛತ್ರಗಳಿಗೆ ಪ್ರತಿದಿನ ಮಾಂಸ ಬೇಕು. ನಾವು ಎಷ್ಟು ಪೂರೈಸಿದರೂ ಸಾಕಾಗಲ್ಲ. ಅದಕ್ಕಾಗಿ ರಾಜಸ್ಥಾನದ ಜೈಪುರದಿಂದ ಮಾಂಸ ತರಿಸುತ್ತಿದ್ದೇವೆ. ಅಲ್ಲಿನ ಕುರಿಗಳಿಗೆ ಬಾಲ ಉದ್ದವಾಗಿಯೇ ಇರುತ್ತದೆ. ನಾವು ನಾಯಿಯನ್ನೇ ಮುಟ್ಟಲ್ಲ. ಅಪ್ಪಿ ತಪ್ಪಿ ಸ್ವಲ್ಪ ನಾಯಿ ಟಚ್‌ ಆದ್ರೂ ಮಸೀದಿ ಒಳಕ್ಕೇ ಹೋಗಲ್ಲ. ಸ್ನಾನ ಮಾಡಿ, ಬಟ್ಟೆ ಬದಲಿಸಿ ಆಮೇಲೆ ಮಸೀದಿಗೆ ಹೋಗ್ತೀವಿ. ಅಂತಹದ್ದರಲ್ಲಿ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ ಅಂತ ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

    ಈ ವ್ಯವಹಾರವನ್ನು ಸುಮಾರು 20 ಜನ ನಿರ್ವಹಿಸುತ್ತಿದ್ದಾರೆ. ನಾನು ಡಿಸ್ಟ್ರಿಬ್ಯೂಟರ್‌ ಬರುವ ಮಾಂಸವನ್ನ ನಾನು ಆಯಾ ಮಾಲೀಕರಿಗೆ ಡಿಸ್ಟ್ರಿಬ್ಯೂಟ್‌ ಮಾಡ್ತೀನಿ. ರಾಜಸ್ಥಾನದಿಂದ ತರಿಸಿದ್ದ ಮಾಂಸವನ್ನ ಸಂಪೂರ್ಣ ಐಸ್‌ನಲ್ಲಿ ಇಡಲಾಗಿತ್ತು. ಆದ್ರೆ ರೋಲ್‌ಕಾಲ್‌ ಸಿಗಲಿಲ್ಲ ಅಂತ ಇಲ್ಲಿ ಬಂದು ಗಲಾಟೆ ಮಾಡಿದ್ದಾರೆ. ಪುನೀತ್‌ ಕೆರೆಹಳ್ಳಿ ಅಧಿಕಾರಿಯೂ ಅಲ್ಲ. ಈಗ ಅಧಿಕಾರಿಗಳು ಕೇಳಿದ ಪ್ರಶ್ನೆಗೆಲ್ಲಾ ಉತ್ತರ ಕೊಟ್ಟಿದ್ದೇವೆ. ಅಗತ್ಯ ದಾಖಲಾತಿಗಳನ್ನೂ ತೋರಿಸಿದ್ದೇವೆ. ಲ್ಯಾಬ್‌ ವರದಿ ಬಂದ ಬಳಿಕ ಪುನೀತ್‌ ಕೆರೆಹಳ್ಳಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

  • ಬೆಂಗ್ಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ – ಆಹಾರ ಸುರಕ್ಷತಾ ಅಧಿಕಾರಿಗಳಿಂದ ಸ್ಯಾಂಪಲ್ಸ್‌ ಸಂಗ್ರಹ

    ಬೆಂಗ್ಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ – ಆಹಾರ ಸುರಕ್ಷತಾ ಅಧಿಕಾರಿಗಳಿಂದ ಸ್ಯಾಂಪಲ್ಸ್‌ ಸಂಗ್ರಹ

    – ಟೆಸ್ಟಿಂಗ್‌ಗೆ ಹೈದರಾಬಾದ್‌ ಪ್ರಯೋಗಾಲಯಕ್ಕೆ ಮಾಂಸ ಮಾದರಿ ರವಾನೆ
    – ಯಾವ ಪ್ರಾಣಿಯ ಮಾಂಸ ಅಂತ ಪತ್ತೆ ಹಚ್ಚುವುದು ಹೇಗೆ?

    ಬೆಂಗಳೂರು: ನಗರದಲ್ಲಿ ನಾಯಿ ಮಾಂಸ (Dog Meat) ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿದಕೂಡಲೇ ಪೊಲೀಸರು ಹಾಗೂ ಆಹಾರ ಸುರಕ್ಷತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾಕ್ಸ್‌ನಲ್ಲಿ ತರಿಸಲಾಗಿದ್ದ ಮಾಂಸವನ್ನ ಜಪ್ತಿ ಮಾಡಿದ್ದು, ಅಂಗಾಂಗ ಮಾದರಿಗಳನ್ನ ಹೈದರಾಬಾದ್‌ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ.

    ಆಹಾರ ಸುರಕ್ಷತೆ ಅಧಿಕಾರಿಗಳು ಹೇಳಿದ್ದೇನು?
    ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ ಮಾತನಾಡಿ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ್ದೇವೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್ ಆಗಿ ಪಡೆದಿದ್ದೇವೆ. ಇದನ್ನು ವಿಸಿಕ್ಸ್ ಎನ್ನುವ ಲ್ಯಾಬ್‌ಗೆ ರವಾನಿಸಿ ಪರೀಕ್ಷಿಸಲಾಗುತ್ತೆ. ಇದರ ವರದಿ ಬರೋದಕ್ಕೆ 14 ದಿನಗಳ ಕಾಲಾವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಟೆಸ್ಟಿಂಗ್ ನಲ್ಲಿ ಗೊತ್ತಾಗುತ್ತೆ. ಒಂದು ವೇಳೆ ಇದು ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೇ ಮಾಲೀಕನ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಹೇಳಿದ್ದಾರೆ.

    ಬಳಿಕ ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು, ಸದ್ಯಕ್ಕೆ ಬೆಂಗಳೂರಿನಲ್ಲಿ ಮಾಂಸ ಯಾವ ಪ್ರಾಣಿದು ಅಂತ ಪತ್ತೆ ಮಾಡೋಕೆ ಲ್ಯಾಬ್ ಇಲ್ಲ. ಆದಕಾರಣ ಕುರಿ ಮಾಂಸನಾ, ಬೇರೆ ಮಾಂಸನಾ? ಪತ್ತೆ ಮಾಡಲು ಹೈದರಾಬಾದ್‌ಗೆ ಮಾಂಸದ ಮಾದರಿ ಸಂಗ್ರಹವನ್ನ ರವಾನೆ ಮಾಡಲಾಗುತ್ತದೆ. ಕನಿಷ್ಠ 8 ರಿಂದ 10 ದಿನದ ಬಳಿಕ ಮಾಂಸ. ಯಾವ ಪ್ರಾಣಿಯದ್ದು ಅಂತ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.

    ಯಾವ ಪ್ರಾಣಿಯದ್ದು ಮಾಂಸ ಅಂತ ಹೇಗೆ ಗೊತ್ತಾಗಲಿದೆ?
    * ಮಾಂಸದ ಪೀಸ್‌ಗಳಿಗೆ ಕೆಮಿಕಲ್ ಹಾಕಿದಾಗ ಕಲರ್ ಬರುತ್ತದೆ.
    * ಕುರಿ ಮಾಂಸ, ಮೇಕೆ ಮಾಂಸ ಮತ್ತು ನಾಯಿ ಮಾಂಸ ಆದರೆ ಬೇರೆ ಬೇರೆ ಕಲರ್ ಬರಲಿದೆ.
    * ಕಲರ್ ಮುಖಾಂತರ ಯಾವ ಪ್ರಾಣಿಯ ಮಾಂಸ ಅಂತ ತಜ್ಞರು ಪತ್ತೆಮಾಡುತ್ತಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

    ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಅಂತ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಂಡ ಆರೋಪಿದ್ದರು. ಶುಕ್ರವಾರ ರಾತ್ರಿ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿ ಭಾರೀ ಹೈಡ್ರಾಮ ಸೃಷ್ಟಿಸಿದ್ದರು. ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಸಿದ್ದರು. ಆಹಾರ ಸುರಕ್ಷತಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪೊಲೀಸರು ಪುನೀತ್‌ರ ಕೆರೆಹಳ್ಳಿಯನ್ನ ವಶಕ್ಕೆ ಪಡೆದರು.

  • ರಾಜಸ್ಥಾನದಿಂದ ನಾಯಿ ಮಾಂಸ ತಂದು ಬೆಂಗಳೂರಿನಲ್ಲಿ ಮಾರಾಟ ಆರೋಪ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಹೈಡ್ರಾಮ

    ರಾಜಸ್ಥಾನದಿಂದ ನಾಯಿ ಮಾಂಸ ತಂದು ಬೆಂಗಳೂರಿನಲ್ಲಿ ಮಾರಾಟ ಆರೋಪ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಹೈಡ್ರಾಮ

    ಬೆಂಗಳೂರು: ನಗರದಲ್ಲಿ ನಾಯಿ ಮಾಂಸ (Dog Meat) ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ (Rajasthan) ಬೆಂಗಳೂರು (Bengaluru) ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಅಂತ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ತಂಡ ಆರೋಪಿಸಿದೆ. ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಸಿ, ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ.

    ಇದೇ ವೇಳೆ ಸ್ಥಳಕ್ಕಾಗಮಿಸಿದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಜೊತೆಗೂ ವಾಕ್ಸಮರ ನಡೆಸಿದ್ದಾರೆ. ಆರೋಪ ಅಲ್ಲಗಳೆದಿರುವ ಅಬ್ದುಲ್ ರಜಾಕ್, 2 ದಿನಕ್ಕೆ ಒಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತೆ. ಇವತ್ತು 2,000 ಕೆಜಿ ಮಾಂಸ ಬಂದಿದೆ. 12 ವರ್ಷದಿಂದ ಈ ವ್ಯವಹಾರ ನಡೀತಿದೆ. ರಾಜಸ್ಥಾನ ಕುರಿಗಳಿಗೆ ಬಾಲ ಇದೇ ರೀತಿ ಇರುತ್ತೆ, ಅದನ್ನ ನಾಯಿ ಅಂತಿದ್ದಾರೆ. ಯಾವುದೇ ಆಹಾರ ಇಲಾಖೆ ಬಂದು ಚೆಕ್ ಮಾಡಲಿ. ಪುನೀತ್ ಕೆರೆಹಳ್ಳಿ ವಿರುದ್ಧ ದೂರು ಕೊಡ್ತೇನೆ ಅಂದಿದ್ದಾರೆ. ಅಬ್ದುಲ್ ರಜಾಕ್ ಸಂಬಂಧಿ ಮಾಂಸ ಸಾಗಾಟದ ಲೈಸೆನ್ಸ್ ಪಡೆದಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ: ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಗಾ ದಿಢೀರ್ ಭೇಟಿ

     

    ಇನ್ನೂ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪುನೀತ್‌ ಕೆರೆಹಳ್ಳಿ, ಜೈಪುರದಿಂದ ಫಿಶ್ ಮಾಂಸ ಅಂತ ಹೇಳಿ ಬೇರೆ ಮಾಂಸ ತಂದಿದ್ದಾರೆ. ಬೇರೆ ಮಾಂಸದ ಜೊತೆ ನಾಯಿ ಮಾಂಸವನ್ನೂ ತಂದಿದ್ದಾರೆ. ಇದು ರಸಲ್ ಮಾರ್ಕೆಟ್‌ಗೆ ಇದು ಹೋಗುತ್ತೆ ಅಂತಾ ಆರೋಪಿಸಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್‌

    ಮೀನು ಅಂತಾ ಬೋರ್ಡ್ ಹಾಕಿಕೊಂಡು ಮಾಂಸ ಸಾಗಾಟ ಮಾಡ್ತಿದ್ದಾರೆ. ಮೀನು ತಂದಿದ್ದರೇ ಮೀನು ಅಂತಾ ಬೋರ್ಡ್‌ ಇರಬೇಕಿತ್ತು. ಮಾಂಸ ತಂದು ಅದಕ್ಕೆ ಮೀನು ಅಂತಾ ಯಾಕೇ ಬೋರ್ಡ್‌ ಹಾಕಿದ್ದಾರೆ. ನಾಯಿ ಮಾಂಸವೇ ಇರಬೇಕು ಅನ್ನೋ ಅನುಮಾನ, ಬಿಬಿಎಂಪಿ ಅಧಿಕಾರಿಗಳು ಬರಬೇಕು. ಇಲ್ಲೇ ಮಾಂಸ ಸೀಜ್ ಮಾಡಬೇಕು. ಯಾವ ಮಾಂಸ ಅಂತಾ ಗೊತ್ತಾಗಬೇಕು. ಕನಿಷ್ಠ 4 ದಿನದ ಹಿಂದೆ ಕಟ್ ಮಾಡಿರೋ ಮಾಂಸವಿದು. ಇದನ್ನ ಐಸ್ ಬಾಕ್ಸ್‌ನಲ್ಲಿ ತಂದಿರೋದಕ್ಕೆ ಅನುಮತಿ ಇದೆಯಾ? ಇದರ ಬಗ್ಗೆ ಅನುಮಾನ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್

    ಇದು ಕುರಿ ಮಾಂಸ ಅನ್ನೋದರ ಬಗ್ಗೆ ಅನುಮಾನ ಇದೆ, ಮರಿ ಮಾಂಸವನ್ನ 550 ರೂಪಾಯಿಗೆ ಹೇಗೆ ಕೊಡಲು ಸಾಧ್ಯ? ಅಬ್ದುಲ್ ರಜಾಕ್ ಇದು ನಂದು ಅಂತಾ ಬಂದಿದ್ದಾರೆ. ಅದ್ರೇ ಬಿಲ್ ಬಂದಿರೋದು ಬೇರೆಯವರ ಹೆಸರಿನಲ್ಲಿ. ಕೇವಲ 550 ರೂಪಾಯಿಗೆ ಮಾಂಸ ಗ್ರಾಹಕರಿಗೆ ನೀಡ್ತಾರೆ ಅಂದ್ರೆ ಇವರಿಗೆ ಎಷ್ಟಕ್ಕೆ ಸಿಗುತ್ತೆ? ಎಂದೆಲ್ಲಾ ಪುನೀತ್‌ ಕೆರೆಹಳ್ಳಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್ ತಿರುಗೇಟು

  • ನಾಯಿ ಮಾಂಸ ಮಾರಾಟ ನಿಷೇಧ – ಮಸೂದೆ ಅಂಗೀಕರಿಸಿದ ದಕ್ಷಿಣ ಕೊರಿಯಾ

    ನಾಯಿ ಮಾಂಸ ಮಾರಾಟ ನಿಷೇಧ – ಮಸೂದೆ ಅಂಗೀಕರಿಸಿದ ದಕ್ಷಿಣ ಕೊರಿಯಾ

    ಸಿಯೋಲ್: ನಾಯಿ ಮಾಂಸ (Dog Meat) ಸೇವನೆ ತೆಗೆದುಹಾಕುವ ಮಸೂದೆಯನ್ನು ದಕ್ಷಿಣ ಕೊರಿಯಾ (South Korea) ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

    ದಕ್ಷಿಣ ಕೊರಿಯಾದ ಸಂಸತ್ತು ಅಧ್ಯಕ್ಷ ಯೂನ್ ಸುಕ್ ಯೆಲ್ ಅವರು ಈ ಮಸೂದೆಯನ್ನು ಕಾನೂನಾಗಿ ಜಾರಿಗೆ ತರಲು ಪ್ರತಿಜ್ಞೆ ಮಾಡಿದ್ದರು. ಸರ್ವಾನುಮತದ ಮತದ ಮೂಲಕ ನಾಯಿ ಮಾಂಸ ನಿಷೇಧಿಸುವ ಮಸೂದೆ ಅಂಗೀಕಾರಗೊಂಡಿದೆ. ಇದನ್ನೂ ಓದಿ: ಭಾರತಕ್ಕೆ ಬರಲು ಮುಂದಾದ ಮಾಲ್ಡೀವ್ಸ್‌ ಅಧ್ಯಕ್ಷ – ವಿಪಕ್ಷದಿಂದ ಅವಿಶ್ವಾಸ ನಿರ್ಣಯ ಸಾಧ್ಯತೆ

    ಆಹಾರದ ಉದ್ದೇಶಕ್ಕಾಗಿ ನಾಯಿಯನ್ನು ಕಡಿಯುವುದು ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 19.12 ಲಕ್ಷ ರೂ. (30 ಮಿಲಿಯನ್ ವಾನ್) ವರೆಗೆ ದಂಡ ವಿಧಿಸುತ್ತದೆ. ನಾಯಿ ಸಂತಾನಾಭಿವೃದ್ಧಿ ಮಾಡುವುದು ಅಥವಾ ಆಹಾರಕ್ಕಾಗಿ ವಿತರಿಸುವುದು ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸಲಾಗುತ್ತದೆ.

    ಮೂರು ವರ್ಷಗಳ ಗ್ರೇಸ್ ಅವಧಿಯ ನಂತರ 2027 ರಲ್ಲಿ ಕಾನೂನು ಜಾರಿಯಾಗಲಿದೆ. ನಾಯಿ ಮಾಂಸ ಉದ್ಯಮದಲ್ಲಿರುವವರಿಗೆ ವ್ಯಾಪಾರ ಬದಲಾಯಿಸಲು ಸಹಾಯ ಮಾಡಲು ಸಬ್ಸಿಡಿ ನೀಡಲಾಗುವುದು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ. ಯೂನ್ ತನ್ನ ಅಧ್ಯಕ್ಷೀಯ ಪ್ರಚಾರದಲ್ಲಿ ನಾಯಿ ಮಾಂಸದ ಸೇವನೆಯನ್ನು ಕೊನೆಗೊಳಿಸಲು ವಾಗ್ದಾನ ಮಾಡಿದ್ದರು. ಇದನ್ನೂ ಓದಿ: ಲೆಬನಾನ್‌ ಗುರಿಯಾಗಿಸಿ ಇಸ್ರೇಲ್‌ನ ಭಾರೀ ದಾಳಿಯಲ್ಲಿ ಹಿಜ್ಬುಲ್ಲಾ ಸೀನಿಯರ್‌ ಕಮಾಂಡರ್‌ ಬಲಿ

    ನಾಯಿ ಮಾಂಸ ಸೇವಿಸುವ ಹಲವು ರಾಷ್ಟ್ರಗಳಲ್ಲಿ ದಕ್ಷಿಣ ಕೊರಿಯಾ ಕೂಡ ಒಂದು. ಪ್ರಾಣಿಗಳನ್ನು ಬ್ಲಡ್ಜಿಯನಿಂಗ್, ನೇಣು ಮತ್ತು ವಿದ್ಯುದಾಘಾತದ ಮೂಲಕ ಕೊಲ್ಲುವುದು ಸೇರಿದಂತೆ ವ್ಯಾಪಾರದ ಭಾಗವಾಗಿ ಮಾಡಿಕೊಂಡಿದ್ದಕ್ಕೆ ಅಂತರರಾಷ್ಟ್ರೀಯ ವಲಯದಲ್ಲಿ ಟೀಕೆ ವ್ಯಕ್ತವಾಗಿತ್ತು.

    ಸಾಕುಪ್ರಾಣಿಗಳ ಮಾಲೀಕತ್ವ ಬೆಳೆದಿದೆ. ಸಾರ್ವಜನಿಕರು ನಾಯಿ ಮಾಂಸದಿಂದ ದೂರ ಸರಿದಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಸೇವನೆಯು ತೀವ್ರವಾಗಿ ಕುಸಿಯುತ್ತಿದೆ. ಶ್ವಾನಗಳನ್ನು ಸಾಕುತ್ತಿದ್ದ ರೈತರು ಮತ್ತು ರೆಸ್ಟೋರೆಂಟ್‌ ಮಾಲೀಕರು ನಿಷೇಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಅವರಿಗೆ ಹಿನ್ನಡೆಯಾಗಿದೆ. ಇದನ್ನೂ ಓದಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ – ದಾಖಲೆ ಜಯದೊಂದಿಗೆ ಸತತ 5ನೇ ಬಾರಿಗೆ ಮರು ಆಯ್ಕೆ

    ದಕ್ಷಿಣ ಕೊರಿಯಾದ ಸರ್ಕಾರದ ಅಂಕಿಅಂಶಗಳ ಪ್ರಕಾರ, ಪ್ರಸ್ತುತ 1,600 ರೆಸ್ಟೋರೆಂಟ್‌ಗಳಲ್ಲಿ ನಾಯಿ ಮಾಂಸವನ್ನು ಖಾದ್ಯವಾಗಿ ನೀಡಲಾಗುತ್ತಿದೆ. ಕೆಲವು 1,150 ನಾಯಿ ಸಾಕಣೆ ಕೇಂದ್ರಗಳು ದೇಶದಲ್ಲಿ ಉದ್ಯಮ ನಡೆಸುತ್ತಿವೆ.