Tag: Domestic Worker

  • ಶಾಸಕ ಅಜಯ್ ಸಿಂಗ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆ ಕೆಲಸದಾತನ ಶವ ಪತ್ತೆ

    ಶಾಸಕ ಅಜಯ್ ಸಿಂಗ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆ ಕೆಲಸದಾತನ ಶವ ಪತ್ತೆ

    ಕಲಬುರಗಿ: ಜೇವರ್ಗಿ (Jewargi) ಶಾಸಕ ಡಾ. ಅಜಯ್ ಸಿಂಗ್ (Ajay Singh) ನಿವಾಸದಲ್ಲಿ ಮನೆ ಕೆಲಸದ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಕಲಬುರಗಿ (Kalaburagi) ನಗರದ ಶರಣ ನಗರ ಬಡಾವಣೆಯಲ್ಲಿ ಶಾಸಕರ ನಿವಾಸದಲ್ಲಿರುವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ದೇವೇಂದ್ರ ಪಟ್ಟೆದಾರ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದುಬಂದರೂ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಪಿ ಅಡ್ಡೂರು ಶ್ರೀನಿವಾಸಲು, ಅಜಯ್ ಸಿಂಗ್ ಅವರ ಮನೆಯಲ್ಲಿ ಕೆಲಸದಾತ ದೇವೇಂದ್ರನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳಗ್ಗೆ 6 ಗಂಟೆಗೆ ನಮಗೆ ಈ ಬಗ್ಗೆ ಮಾಹಿತಿ ಬಂದಿದೆ. ಎಫ್‌ಎಸ್‌ಎಲ್ ತಂಡದವರು, ನಮ್ಮ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವು

    ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿದ್ದ ದೇವೇಂದ್ರ, ಅಜಯ್ ಸಿಂಗ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಘಟನೆ ನಡೆದ ಸಂದರ್ಭದಲ್ಲಿ ಅಜಯ್ ಸಿಂಗ್ ಅವರು ಮನೆಯಲ್ಲಿ ಇದ್ದ ಬಗ್ಗೆ ಮಾಹಿತಿ ಇಲ್ಲ. ಸಾವಿಗೆ ನಿಖರವಾದ ಯಾವುದೇ ಕಾರಣ ಸದ್ಯ ತಿಳಿದುಬಂದಿಲ್ಲ. ತನಿಖೆ ನಡೆದ ಬಳಿಕವಷ್ಟೇ ಸಾವಿನ ಹಿಂದಿರುವ ಕಾರಣ ಬಯಲಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಪೊಲೀಸ್ ಕಾನ್ಸ್‌ಟೇಬಲ್ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗ್ಳೂರಲ್ಲಿ ನೇಪಾಳಿಗಳನ್ನ ಮನೆ ಕೆಲಸಕ್ಕೆ ಸೇರಿಸಿಕೊಳ್ಳೊ ಮುನ್ನ ಎಚ್ಚರ – ಪೊಲೀಸರ ಸಲಹೆ

    ಬೆಂಗ್ಳೂರಲ್ಲಿ ನೇಪಾಳಿಗಳನ್ನ ಮನೆ ಕೆಲಸಕ್ಕೆ ಸೇರಿಸಿಕೊಳ್ಳೊ ಮುನ್ನ ಎಚ್ಚರ – ಪೊಲೀಸರ ಸಲಹೆ

    ಬೆಂಗಳೂರು: ಮನೆ ಕೆಲಸಕ್ಕೆ ನೇಪಾಳ ಮೂಲದ ಜನರನ್ನ (Nepalese) ನೇಮಿಸಿಕೊಂಡಿದ್ದೀರಾ, ಹಾಗಾದ್ರೆ ಹುಷಾರಾಗಿರಿ. ಬೆಂಗಳೂರು ಪೊಲೀಸರೇ (Bengaluru Police) ಈ ಮಾತು ಹೇಳ್ತಿದ್ದಾರೆ.

    ಹೌದು. ಕಡಿಮೆ ಸಂಬಳ, ಹೇಳಿದಷ್ಟು ಕೆಲಸ ಮಾಡ್ತಾರೆ. ಯಾವುದೇ ಕಿರಿಕ್ ಇರಲ್ಲ, ಅವರ ಪಾಡಿಗೆ ಕೆಲಸ ಮಾಡ್ಕೊಂಡು ಹೋಗ್ತಾರೆ. ಇದು ನೇಪಾಳ ಮೂಲದ ಕೆಲಸಗಾರರ ಮೇಲೆ ಜನರಿಗೆ ಇರುವ ಅಭಿಪ್ರಾಯ. ಆದ್ರೆ ಪೊಲೀಸರ ಅಂಕಿ ಅಂಶ, ಕ್ರೈಂ ಸ್ಟೋರಿಗಳು, ಹೇಳೋದೆ ಬೇರೆ. ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೆಸರು ಉಲ್ಟಾ ಹಾಕಿದ ರಶ್ಮಿಕಾ ಮಂದಣ್ಣ

    ಈ ವರ್ಷದ 11 ತಿಂಗಳಲ್ಲಿ ಬರೋಬ್ಬರಿ 30ಕ್ಕೂ ಹೆಚ್ಚು ಶ್ರೀಮಂತರ ಮನೆಗಳಲ್ಲಿ ಕಳ್ಳತನವಾಗಿದೆ. ಅವುಗಳಲ್ಲಿ ಬಹುತೇಕ ಮನೆಗಳಲ್ಲಿ ಕಳ್ಳತನ ಮಾಡಿರೋದು ನೇಪಾಳಿ (Nepalese) ಮೂಲದವರೇ ಅನ್ನೋದು ಒಪ್ಪಿಕೊಳ್ಳಲೇಬೇಕಾದ ಸತ್ಯ ಸಂಗತಿ. ತುಂಬಾ ನಂಬಿಕಸ್ಥರಂತೆ ವರ್ತಿಸೋ ನೇಪಾಳಿ ಮೂಲದ ಕೆಲವರು, ಬೆಳಗಾಗೊ ಹೊತ್ತಿಗೆ ಮನೆಯನ್ನೆಲ್ಲಾ ಗುಡಿಸಿ ಗುಂಡಾತರ ಮಾಡಿ ಎಸ್ಕೇಪ್ ಆಗಿರ್ತಾರೆ. ದರೋಡೆ ವಿಚಾರ ಪೊಲೀಸರ ಕಿವಿ ತಲುಪೋ ಹೊತ್ತಿಗೆ ಆರೋಪಿಗಳು ಅರಾಮಾಗಿ ನೇಪಾಳ ಬಾರ್ಡರ್ ಕ್ರಾಸ್ ಆಗಿರ್ತಾರೆ. ಹಾಗಾಗಿ ನೇಪಾಳಕ್ಕೆ ಹೋದ ಕಳ್ಳರು, ಕದ್ದ ಐಟಂ ವಾಪಸ್ ಸಿಗೋದು ಬಹುತೇಕ ಡೌಟು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯಾರೂ ಯಾರನ್ನು ಮುಗಿಸಲು ಸಾಧ್ಯವಿಲ್ಲ, ನನಗೆ ನನ್ನದೇ ಆದ ಶಕ್ತಿ ಇದೆ: ಬಿಎಸ್‍ವೈ

    ಆಶ್ಚರ್ಯ ಅನ್ನಿಸಿದ್ರು ಇದು ನಿಜ. ಬೆಂಗಳೂರಿನ ಹನುಮಂತ ನಗರದಲ್ಲಿ (Hanumantha Nagar Police) ಇಂತಹದ್ದೊಂದು ಘಟನೆ ನಡೆದಿದೆ. ಇಲ್ಲಿನ ಶ್ರೀಮಂತ ಉದ್ಯಮಿಯೊಬ್ಬರ ಮನೆಯಲ್ಲಿ ನೇಪಾಳ ಮೂಲದ ಲಲಿತ್ ಮತ್ತು ಬಹದ್ದೂರ್ ಅನ್ನೋರು ಕೆಲಸಕ್ಕಿದ್ರು. ತುಂಬಾ ನಂಬಿಕಸ್ಥರಾಗಿದ್ದ ಕಾರಣ ಮನೆಯವರಿಗೆ ಯಾವುದೇ ಡೌಟ್ ಬಂದಿರಲಿಲ್ಲ. ಕಳೆದ ವಾರ ಉದ್ಯಮಿ ಕುಟುಂಬ ಸಮೇತ ಸಿಂಗಾಪುರ್ ಟ್ರಿಪ್ ಹೋಗಿದ್ರು. ಅವರು ವಿದೇಶಕ್ಕೆ ಹಾರುತ್ತಿದ್ದಂತೆ, ದಂಪತಿ ಮನೆಯಲ್ಲಿಟ್ಟಿದ್ದ 75 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು, ಡೈಮಂಡ್ ರಿಂಗ್, ವಜ್ರದ ವಸ್ತುಗಳು ಸೇರಿ ಬರೋಬ್ಬರಿ ಎರಡೂವರೆ ಕೋಟಿಯಷ್ಟು ಮೌಲ್ಯದ ವಸ್ತುಗಳನ್ನು ದೋಚಿ ಸೈಲೆಂಟ್ ಆಗಿ ನೇಪಾಳ ಸೇರ್ಕೊಂಡಿದ್ದಾರೆ. ವಾಪಸು ಮನೆಗೆ ಬಂದು ನೋಡುವಷ್ಟರಲ್ಲಿ ಕೆಲಸಗಾರರ ಕೈಚಳಕ ಗೊತ್ತಾಗಿ ಸಿಸಿಟಿವಿ ಚೆಕ್ ಮಾಡಿದ್ದಾರೆ. ಎರಡು ಬ್ಯಾಗ್‌ಗಳಲ್ಲಿ ಲೆಗೇಜ್ ರೀತಿಯಲ್ಲಿ ಹಣ, ಚಿನ್ನಾಭರಣ ತುಂಬಿಕೊಂಂಡು ಎಸ್ಕೇಪ್ ಆಗಿರೋದು ಪತ್ತೆಯಾಗಿದೆ.

    CRIME

    ಈ ಸಂಬಂಧ ಹನುಮಂತನಗರದಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹಾಗಾಗಿ ದೂರದ ನೇಪಾಳಿಗಳು, ಸೇರಿದಂತೆ ಅಪರಿಚಿತರನ್ನು ಮನೆ ಕೆಲಸಕ್ಕೆ ನೇಮಿಸುವ ಮುನ್ನ ಎಚ್ಚರವಾಗಿರುವಂತೆ ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತನ್ನ ಪತಿಯನ್ನು ಖುಷಿಯಾಗಿರಿಸಲು ಮೂವರು ಸುಂದರಿಯರನ್ನ ಕೆಲಸಕ್ಕೆ ನೇಮಿಸಿದ ಪತ್ನಿ!

    ತನ್ನ ಪತಿಯನ್ನು ಖುಷಿಯಾಗಿರಿಸಲು ಮೂವರು ಸುಂದರಿಯರನ್ನ ಕೆಲಸಕ್ಕೆ ನೇಮಿಸಿದ ಪತ್ನಿ!

    ಬ್ಯಾಂಕಾಕ್: ಸತಿ-ಪತಿಗಳಿಬ್ಬರು ಒಬ್ಬರಿಗೊಬ್ಬರು ಅರ್ಥಮಾಡಿಕೊಂಡು ಸುಖವಾಗಿದ್ದರೆ ಸಂಸಾರ ಹಾಲು-ಜೇನು ಎಂದು ಎಲ್ಲರೂ ಹೇಳುತ್ತಾರೆ. ಇದಕ್ಕೆ ಥಾಯ್‌ಲ್ಯಾಂಡ್‌ನ ಮಹಿಳೆಯೊಬ್ಬರು ಸಾಕ್ಷಿಯಾಗಿ ನಿಲ್ಲುತ್ತಾಳೆ.

    ಹೌದು.. ಬ್ಯಾಂಕಾಕ್‌ನ 44 ವರ್ಷದ ಪಾತೀಮಾ ಚಮ್ನಾನ್, ತನ್ನ ಪತಿಯನ್ನು ಸಂತೋಷವಾಗಿಡಲು ಮೂವರು ಸುಂದರ ಹಾಗೂ ವಿದ್ಯಾವಂತ ಪ್ರೇಯಸಿಯರನ್ನ ಕೆಲಸಕ್ಕೆ ನೇಮಿಸಿಕೊಂಡಿದ್ದಾಳೆ. ತನ್ನ ಪತಿಯೊಂದಿಗೆ ಆಕೆ ಹೆಚ್ಚು ಸಮಯ ಕೊಡಲು ಆಗುತ್ತಿಲ್ಲ ಎಂಬ ಕಾರಣಕ್ಕೆ ಪ್ರೇಯಸಿಯನ್ನ ಕೆಲಸಕ್ಕೆ ನೇಮಿಸಿಕೊಂಡಿರುವುದಾಗಿ ಹೇಳಿದ್ದಾಳೆ. ಇದನ್ನೂ ಓದಿ: ವಾಮನ ಟೀಸರ್ ರಿಲೀಸ್, ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್

    ಇತ್ತೀಚೆಗೆ ಚಮ್ನಾನ್ ಅವರು ಕಾಲೇಜು ಡಿಪ್ಲೋಮಾ ಹೊಂದಿರುವ ಯುವ ಹಾಗೂ ಏಕಾಂಗಿ ಮಹಿಳೆಯರನ್ನು ಕೆಲಸಕ್ಕಾಗಿ ಹುಡುಕುವ ಬಗ್ಗೆ ವೀಡಿಯೋ ಜಾಹೀರಾತನ್ನು ಜಾಲತಾಣದಲ್ಲಿ ಪ್ರಕಟಿಸಿದ್ದರು. ಅದಕ್ಕಾಗಿ 15 ಸಾವಿರ ಬಹ್ತ್ (33,800 ರೂ.) ವೇತನ ನೀಡುವುದಾಗಿಯೂ ಹೇಳಿದ್ದರು. ಇದರೊಂದಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ನೀವು ನನಗೆ ಸಹಾಯ ಮಾಡಬೇಕು. ನನ್ನ ಕಚೇರಿಯಲ್ಲಿ ದಾಖಲೆಗಳ ಸಿದ್ಧತೆಗಾಗಿ ಇಬ್ಬರು ಹಾಗೂ ನಾನು, ನನ್ನ ಪತಿ-ಮಗುವನ್ನು ನೋಡಿಕೊಳ್ಳಲು ಒಬ್ಬರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ವೀಡಿಯೋನಲ್ಲಿ ಹೇಳಿದ್ದರು.

    ನನ್ನ ನಿಮ್ಮ ನಡುವೆ ಯಾವುದೇ ಜಗಳ ನಡೆಯುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ನನ್ನ ಪತಿ ಏಕಾಂಗಿಯಾಗಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾನೆ. ನಾನು ಅವನನ್ನು ಸಂತೋಷವಾಗಿಡಲು ಬಯಸುತ್ತೇನೆ. ಮನೆಗೆ ಸ್ನೇಹಿತರು ಬಂದಾಗ ನಾನು ಅವನೊಂದಿಗೆ ಇರಲು ಬಯಸುತ್ತೇನೆ. ಹಾಗಾಗಿ ಮಹಿಳೆಯರ ಅಗತ್ಯವಿದೆ. ಆದರೆ ಕೆಲಸಕ್ಕೆ ಬರುವವರು ಮಕ್ಕಳನ್ನು ಹೊಂದಿರಬಾರದು, ಉತ್ತಮ ಸಂವಹನ ಕೌಶಲ ಇರಬೇಕು. ಜೊತೆಗೆ ಪ್ರೇಯಸಿಯರು ನನ್ನ ಪತಿಯನ್ನು ಮೆಚ್ಚಿಸಲು, ಅವನನ್ನು ಸಂತೋಷಪಡಿಸಲು ಹಾಗೂ ಒಡನಾಟದಲ್ಲಿ ಸಮರ್ಥರಾಗಿರುವಂತಹವರು ಆಗಿರಬೇಕು ಎಂದು ಷರತ್ತು ವಿಧಿಸಿದ್ದಾರೆ. ಇದನ್ನೂ ಓದಿ: ದೇಶ ವಿಭಜನೆ ಒಪ್ಪಿಕೊಳ್ಳದಿದ್ರೆ ಭಾರತ ಛಿದ್ರವಾಗ್ತಿತ್ತು- ಪಟೇಲ್ ಹೇಳಿಕೆ ಪುನರುಚ್ಚರಿಸಿದ ಸೋನಿಯಾ

    ಅದರಂತೆ ಮೂವರನ್ನು ನೇಮಕ ಮಾಡಿಕೊಳ್ಳಲಾಗಿದೆ. ಕಚೇರಿ ಕೆಲಸ ಮಾಡಲು ಇಬ್ಬರು ಹಾಗೂ ಮನೆಯಲ್ಲಿ ಗಂಡ-ಹೆಂಡತಿ ಮಕ್ಕಳನ್ನು ನೋಡಿಕೊಳ್ಳಲು 33 ವರ್ಷದ ಮಹಿಳೆ ಒಪ್ಪಿಕೊಂಡಿದ್ದಾಳೆ. ಆದರೆ ಆಕೆ ಚಮ್ಮಾನ್ ಸ್ನೇಹಿತೆಯೇ ಆಗಿದ್ದಾಳೆ ಎಂಬುದಾಗಿ ಮಾಧ್ಯಮಗಳು ವರದಿ ಮಾಡಿವೆ.

    Live Tv