Tag: donald trump

  • ಯುರೋಪ್‌ನಿಂದ ಹೆಚ್ಚಿನ ವಾಯು ರಕ್ಷಣೆ ಪಡೆಯಲು ಝೆಲೆನ್ಸ್ಕಿಗೆ ಟ್ರಂಪ್ ಸಹಾಯ: ಶ್ವೇತಭವನ ಮಾಹಿತಿ

    ಯುರೋಪ್‌ನಿಂದ ಹೆಚ್ಚಿನ ವಾಯು ರಕ್ಷಣೆ ಪಡೆಯಲು ಝೆಲೆನ್ಸ್ಕಿಗೆ ಟ್ರಂಪ್ ಸಹಾಯ: ಶ್ವೇತಭವನ ಮಾಹಿತಿ

    – ಝೆಲೆನ್ಸ್ಕಿಗೆ ದೂರವಾಣಿ ಕರೆ ಮಾಡಿ ಜೊತೆ 2 ಗಂಟೆಗೂ ಕಾಲ ಟ್ರಂಪ್‌ ಮಾತುಕತೆ

    ವಾಷಿಂಗ್ಟನ್‌: ಯುರೋಪ್‌ನಿಂದ ಹೆಚ್ಚಿನ ವಾಯು ರಕ್ಷಣೆ ಪಡೆಯಲು ಝೆಲೆನ್ಸ್ಕಿಗೆ ಟ್ರಂಪ್ ಸಹಾಯ ಮಾಡುತ್ತಾರೆ ಎಂದು ಶ್ವೇತಭವನ ಹೇಳಿದೆ.

    ಬುಧವಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಫೋನ್‌ನಲ್ಲಿ ಮಾತನಾಡಿದ ನಂತರ ಈ ಮಾಹಿತಿ ಹೊರಬಿದ್ದಿದೆ.

    ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಉತ್ತಮ ದೂರವಾಣಿ ಕರೆ ಮಾಡಿ ಮಾತನಾಡಿದೆ. ರಷ್ಯಾ ಮತ್ತು ಉಕ್ರೇನ್ ದೇಶಗಳ ವಿನಂತಿಗಳು ಮತ್ತು ಅಗತ್ಯ ವಿಷಯದಲ್ಲಿ ಹೊಂದಾಣಿಕೆ ಮಾಡಲು ನಿನ್ನೆ ಅಧ್ಯಕ್ಷ ಪುಟಿನ್ ಅವರೊಂದಿಗೆ ಮಾತನಾಡಿದ್ದೆ. ಅದರ ಆಧಾರದ ಮೇಲೆ ಹೆಚ್ಚಿನ ಚರ್ಚೆ ನಡೆಯಿತು. ನಾವು ತುಂಬಾ ಸರಿಯಾದ ಹಾದಿಯಲ್ಲಿದ್ದೇವೆ. ಚರ್ಚಿಸಿದ ಅಂಶಗಳ ನಿಖರವಾದ ವಿವರಣೆಯನ್ನು ನೀಡಲು ನಾನು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಜ್ ಅವರಿಗೆ ತಿಳಿಸಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

  • Explainer | ಯಾರಿದು ಹೌತಿ ಉಗ್ರರು? ಅಮೆರಿಕ ದಾಳಿ ನಡೆಸಿದ್ದು ಯಾಕೆ? ವಿಶ್ವಕ್ಕೆ ಸಮಸ್ಯೆ ಏನು?

    Explainer | ಯಾರಿದು ಹೌತಿ ಉಗ್ರರು? ಅಮೆರಿಕ ದಾಳಿ ನಡೆಸಿದ್ದು ಯಾಕೆ? ವಿಶ್ವಕ್ಕೆ ಸಮಸ್ಯೆ ಏನು?

    ಷ್ಯಾ-ಉಕ್ರೇನ್‌, ಹಮಾಸ್‌-ಇಸ್ರೇಲ್‌ ಮಧ್ಯೆ ಕದನ ವಿರಾಮದ ಬಗ್ಗೆ ಮಾತುಕತೆ ನಡೆಯುತ್ತಿದ್ದರೆ ಇನ್ನೊಂದು ಕಡೆ ಹೌತಿ ಉಗ್ರರ ಕಿರಿಕ್‌ ಮತ್ತೆ ಆರಂಭವಾಗುವ ಸಾಧ್ಯತೆಯಿದೆ. ಈ ಉಗ್ರರು ಈಗ ಮತ್ತೆ ನಾವು ವಾಣಿಜ್ಯ ಹಡುಗುಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ಬೆನ್ನಲ್ಲೇ ಅಮೆರಿಕ (USA) ಈಗ ಹೌತಿ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ (Air Strike) ಮಾಡಿದೆ. ಹೀಗಾಗಿ ಇಲ್ಲಿ ಹೌತಿ ಉಗ್ರರು ಯಾರು? ಕೆಂಪು ಸಮುದ್ರ ಮಾರ್ಗ ಯಾಕೆ ಫೇಮಸ್‌? ಹೌತಿ ಉಗ್ರರು ದಾಳಿ ಮಾಡಿದರೆ ಭಾರತ (India) ಮತ್ತು ವಿಶ್ವದ ಮೇಲೆ ಆಗುವ ಪರಿಣಾಮ ಏನು ಇತ್ಯಾದಿ ವಿವರಗಳನ್ನು ಇಲ್ಲಿ ನೀಡಲಾಗಿದೆ.

    ಹೌತಿ ಉಗ್ರರು ಯಾರು?
    1990ರಲ್ಲಿ ಯೆಮೆನ್‌ ಅಧ್ಯಕ್ಷ ಅಲಿ ಅಬ್ದುಲ್ಲಾ ಸಲೇಹ್ ವಿರುದ್ಧ ಭ್ರಷ್ಟಾಚಾರದ ಆರೋಪ ಬರುತ್ತದೆ. ಈ ವೇಳೆ ಧಾರ್ಮಿಕ ನಾಯಕ ಹುಸೇನ್‌ ಅಲಿ ಹೌತಿ ನೇತೃತ್ವದಲ್ಲಿ ಒಂದು ಚಳುವಳಿ ಆರಂಭವಾಗುತ್ತದೆ. ಈ ಚಳುವಳಿ ಈಗ ಹೌತಿ ಉಗ್ರ ಸಂಘಟನೆಯಾಗಿ ಮಾರ್ಪಾಡಾಗಿದೆ.

    ರಷ್ಯಾದ (Russia) ವಿರುದ್ಧ ಹೋರಾಡಲು ಅಮೆರಿಕ ತಾಲಿಬಾನ್‌ ಹೇಗೆ ಬೆಳೆಸಿತೋ ಅದೇ ರೀತಿ ಇರಾನ್‌ ತನ್ನ ವಿರುದ್ಧ ಇರುವ ದೇಶಗಳ ವಿರುದ್ಧ ಹೋರಾಡಲು ಹೌತಿ ಬಂಡುಕೋರರಿಗೆ ಸಹಾಯ ನೀಡುತ್ತದೆ. ಈಗ ಯೆಮೆನ್‌ನ ಒಂದು ಕಡೆ ಸೌದಿ ಅರೇಬಿಯಾ ಮತ್ತು ಅಮೆರಿಕದ ಬೆಂಬಲ ಇರುವ ಒಂದು ಸರ್ಕಾರ ಇದ್ದರೆ ಇನ್ನೊಂದು ಕಡೆ ಇರಾನ್‌ ಬೆಂಬಲಿತ ಹೌತಿ ಉಗ್ರರು ಇದ್ದಾರೆ. ಅಮೆರಿಕ, ಇಸ್ರೇಲ್‌, ಸೌದಿ ಅರೇಬಿಯಾ ಮತ್ತು ಪಾಶ್ಚಿಮಾತ್ಯ ದೇಶಗಳೇ ಹೌತಿ ಉಗ್ರರ ಶತ್ರುಗಳು.

    ಕೆಂಪು ಸಮುದ್ರ ಮಾರ್ಗ ಎಲ್ಲಿದೆ?
    ಯುರೋಪ್‌ ಮತ್ತು ಏಷ್ಯಾದ ವ್ಯಾಪಾರದ ಕೊಂಡಿಯೇ ಕೆಂಪು ಸಮುದ್ರ ಮಾರ್ಗ. ಯುರೋಪ್‌ನಿಂದ ಮೆಡಿಟರೆನಿಯನ್‌ ಸಮುದ್ರದ ಮೂಲಕ ಬರುವ ಹಡಗುಗಳು ಸೂಯೆಜ್‌ ಕಾಲುವೆ ಮೂಲಕ ಕೆಂಪು ಸಮುದ್ರಕ್ಕೆ (Red Sea) ಆಗಮಿಸಿ ಯೆಮನ್‌ ಬಳಿ ಬಾಬ್‌ ಎಲ್‌ ಮಂಡೇಬ್‌ ಚೋಕ್‌ ಪಾಯಿಂಟ್‌ ಮೂಲಕ ಅರಬ್ಬಿ ಸಮುದ್ರಕ್ಕೆ ಬಂದು ಏಷ್ಯಾದ ದೇಶಗಳಿಗೆ ಹೋಗುತ್ತದೆ. ಪ್ರತಿ ದಿವಸ ಈ ಮಾರ್ಗದಲ್ಲಿ ಅಂದಾಜು 385 ಕಾರ್ಗೋ ಹಡಗುಗಳು ಸಂಚರಿಸುತ್ತವೆ.

     

    ಹೌತಿ ಉಗ್ರರು ದಾಳಿ ನಡೆಸುತ್ತಿರುವುದು ಯಾಕೆ?
    ಮೊದಲೇ ಹೇಳಿದಂತೆ ಹೌತಿ ಬಂಡುಕೋರರಿಗೆ ಮೊದಲಿನಿಂದಲೂ ಇಸ್ರೇಲ್‌ ವಿರೋಧಿ. ಅಷ್ಟೇ ಅಲ್ಲದೇ ಹಮಾಸ್‌ ಉಗ್ರರ ಜೊತೆ ಉತ್ತಮ ಸಂಬಂಧವನ್ನು ಹೌತಿ ಇಟ್ಟುಕೊಂಡಿದೆ. ಯಾವಾಗ ಇಸ್ರೇಲ್‌ ಹಮಾಸ್‌ ಉಗ್ರರ ಮೇಲೆ ದಾಳಿ ಮಾಡಿತೋ ಅದಕ್ಕೆ ಪ್ರತಿಯಾಗಿ ಹೌತಿ ಕೆಂಪು ಸಮುದ್ರದಲ್ಲಿ ಸಂಚರಿಸುವ ಇಸ್ರೇಲ್‌ ಹಡಗುಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಆರಂಭಿಸಿತು.

    ಇಸ್ರೇಲ್‌ ನಡೆಸಿದ ದಾಳಿ ಅಮೆರಿಕ ಮತ್ತು ಯುರೋಪ್‌ ರಾಷ್ಟ್ರಗಳು ಬೆಂಬಲ ನೀಡಿದ್ದವು. ಇಸ್ರೇಲ್‌ಗೆ ನೀಡಿದ ಬೆಂಬಲಕ್ಕೆ ಪ್ರತಿಯಾಗಿ ಹೌತಿ ಉಗ್ರರು ಕೆಂಪು ಸಮುದ್ರದಲ್ಲಿ ಸಂಚರಿಸುವ ಅಮೆರಿಕ ಮತ್ತು ಯುರೋಪ್‌ ಕಾರ್ಗೋ ಹಡಗುಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ದಾಳಿ ನಡೆಸಿದರೆ ಇಸ್ರೇಲ್‌ ಮೇಲೆ ಈ ದೇಶಗಳು ಒತ್ತಡ ಹಾಕಿ ಯುದ್ಧ ನಿಲ್ಲಸಬಹುದು ಎಂಬ ಲೆಕ್ಕಾಚಾರ ಹೌತಿ ಉಗ್ರರದ್ದು.

     

     

    ಈಗ ಅಮೆರಿಕ ದಾಳಿ ನಡೆಸಿದ್ದು ಯಾಕೆ?
    2023 ರ ಅಂತ್ಯದಿಂದ ಹೌತಿಗಳು ಕೆಂಪು ಸಮುದ್ರ, ಅಡೆನ್ ಕೊಲ್ಲಿ ಮತ್ತು ಇತರ ಪ್ರಮುಖ ಸಮುದ್ರ ಮಾರ್ಗಗಳಲ್ಲಿ ವಾಣಿಜ್ಯ ಮತ್ತು ಮಿಲಿಟರಿ ಹಡಗುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಈಗ ಗಾಜಾದಲ್ಲಿ ಕದನ ವಿರಾಮದ ಹೊರತಾಗಿಯೂ ಹೌತಿಗಳು ಇತ್ತೀಚೆಗೆ ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ದಾಳಿಗಳನ್ನು ಪುನರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಕ್ಕೆ ಅಮೆರಿಕ ಈಗ ಯುದ್ಧ ವಿಮಾನಗಳನ್ನು ಬಳಸಿ ಬಾಂಬ್‌ ದಾಳಿ ನಡೆಸಿದೆ.

    ಪ್ರಸಿದ್ಧ ಮಿಲಿಟರಿ ತಾಣವಾದ ಸನಾ ವಿಮಾನ ನಿಲ್ದಾಣ ಸಂಕೀರ್ಣ, ಸೌದಿ ಗಡಿಯ ಬಳಿ ಹೌತಿಗಳ ಉತ್ತರದ ಭದ್ರಕೋಟೆಯಾದ ಸಾದಾ, ನೈಋತ್ಯ ಪ್ರದೇಶದಲ್ಲಿರುವ ಧಮರ್ ಮತ್ತು ಅಬ್ಸ್, ಹೌತಿ ಮಿಲಿಟರಿ ಸೌಲಭ್ಯಗಳ ನೆಲೆಯಾಗಿರುವ ಗೆರಾಫ್ ಮೇಲೆ ಅಮೆರಿಕ ಏರ್‌ಸ್ಟ್ರೈಕ್‌ ಮಾಡಿದೆ.

    ವಿಶ್ವಕ್ಕೆ ಸಮಸ್ಯೆ ಯಾಕೆ?
    ಯೆಮೆನ್‌ ಪಶ್ಚಿಮ ಭಾಗವನ್ನು ಹೌತಿ ಉಗ್ರರು ವಶಪಡಿಸಿಕೊಂಡಿದ್ದಾರೆ. ಪಶ್ಚಿಮ ಭಾಗವನ್ನು ವಶಪಡಿಸಿಕೊಂಡಿದ್ದರೂ ಯಾವುದೇ ಸಮಸ್ಯೆ ಇಲ್ಲ. ಆದರೆ ಅವರು ಈಗ ಕಿರಿಕ್‌ ಮಾಡುತ್ತಿರುವುದು ಬಾಬ್‌ ಎಲ್‌ ಮಂಡೇಬ್‌ ಎಂಬ ಚೋಕ್‌ ಪಾಯಿಂಟ್‌ನಲ್ಲಿ. ಈ ಚೋಕ್‌ ಪಾಯಿಂಟ್‌ 50 ಕಿ.ಮೀ ಉದ್ದ ಇದ್ದರೆ 26 ಕಿ.ಮೀ ಅಗಲ ಹೊಂದಿದೆ. ಈ ಚೋಕ್‌ಪಾಯಿಂಟ್‌ ಬ್ಲಾಕ್‌ ಮಾಡಿ ಕಿರಿಕ್‌ ಮಾಡುವುದು ಹೌತಿ ಉಗ್ರರ ಉದ್ದೇಶ.

    ಈ ಸಮುದ್ರ ಮಾರ್ಗ ಎಷ್ಟು ಮುಖ್ಯ ಅಂದರೆ ವಿಶ್ವದ ಕಂಟೈನರ್‌ ಟ್ರಾಫಿಕ್‌ ಪೈಕಿ ಶೇ.30 ರಷ್ಟು ಹಡಗುಗಳು ಈ ಮಾರ್ಗದಲ್ಲಿ ಸಂಚರಿಸುತ್ತದೆ. ಶೇ.7 ರಿಂದ ಶೇ.10 ರಷ್ಟು ಕಚ್ಚಾ ತೈಲ ಹಡಗುಗಳು ಈ ರೂಟ್‌ನಲ್ಲಿ ಸಾಗುತ್ತದೆ. ಕೆಂಪು ಸಮುದ್ರದ ಮೂಲಕ ವರ್ಷಕ್ಕೆ 1 ಟ್ರಿಲಿಯನ್‌ ಡಾಲರ್‌ ವ್ಯವಹಾರ ನಡೆಯುತ್ತದೆ. ಇದನ್ನೂ ಓದಿ: ಭಾರತದ ಧ್ವಜವುಳ್ಳ ಕಚ್ಚಾತೈಲ ಟ್ಯಾಂಕರ್‌ ಮೇಲೆ ಹೌತಿ ಉಗ್ರರಿಂದ ಡ್ರೋನ್‌ ದಾಳಿ

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಹಿಂದೆ ಸೂಯೆಜ್‌ ಕಾಲುವೆಯಲ್ಲಿ ಕಂಟೈನರ್‌ ಹಡಗು ಅರ್ಧಕ್ಕೆ ನಿಂತಿತ್ತು. 6 ದಿನ ಕಾಲುವೆಯಲ್ಲೇ ನಿಂತ ಕಾರಣ ವಿಶ್ವಕ್ಕೆ ಅಂದಾಜು 54 ಶತಕೋಟಿ ಡಾಲರ್‌ ವ್ಯಾಪಾರ ನಷ್ಟವಾಗಿತ್ತು. ಒಂದು ವಾರಕ್ಕೆ ಇಷ್ಟು ನಷ್ಟವಾದರೆ ತಿಂಗಳು ಕಾಲ ಈ ಜಲ ಮಾರ್ಗದಲ್ಲಿ ಸಮಸ್ಯೆಯಾದರೆ ವಿಶ್ವಕ್ಕೆ ಸಾಕಷ್ಟು ನಷ್ಟವಾಗಲಿದೆ.

    ಹಾಗೆ ನೋಡಿದರೆ ಹಿಂದೆ ಸೌದಿ ಅರೇಬಿಯಾದ ಮೇಲೂ ಹೌತಿ ಉಗ್ರರು ದಾಳಿ ನಡೆಸಿದ್ದರು. ಯಾಕೆಂದರೆ ಸೌದಿಯಲ್ಲಿ ಸುನ್ನಿ ಮುಸ್ಲಿಮರಿಂದ ಹೌತಿಯಲ್ಲಿ ಶಿಯಾ ಮುಸ್ಲಿಮರಿದ್ದಾರೆ. ವಿಶ್ವದ ಅತಿ ದೊಡ್ಡ ತೈಲ ಉತ್ಪಾದನಾ ಕಂಪನಿ ಸೌದಿ ಅರಾಮ್ಕೋದ ತೈಲ ಸಂಸ್ಕರಣ ಘಟಕದ ಮೇಲೆ ಡ್ರೋನ್‌ ದಾಳಿ ನಡೆಸಿದ್ದರು. ಈ ಪರಿಣಾಮ ದಿಢೀರ್‌ ವಿಶ್ವದಲ್ಲಿ ತೈಲ ಬೆಲೆ ಏರಿಕೆಯಾಗಿತ್ತು.

    ಭಾರತದ ಮೇಲೆ ಆಗುವ ಪರಿಣಾಮ ಏನು?
    ಹೇಗೆ ವಾಹನಗಳಿಗೆ ವಿಮೆ ಮಾಡಲಾಗುತ್ತದೋ ಅದೇ ರೀತಿ ಹಡಗಗುಗಳಿಗೆ ವಿಮೆ ಇರುತ್ತೆ. ಮೊದಲು ಈ ಮಾರ್ಗದ ಮೂಲಕ ಸಾಗುವ ಕಾರ್ಗೋ ಶಿಪ್‌ಗಳಿಗೆ 2 ಲಕ್ಷ ಡಾಲರ್‌ ವಿಮೆ ಇದ್ದರೆ ಈಗ 5 ಲಕ್ಷ ಡಾಲರ್‌ಗೆ ಏರಿಕೆಯಾಗಿದೆ.

    ಎರಡನೇಯದಾಗಿ ಕೆಂಪು ಸಮುದ್ರದಲ್ಲಿ ಸಮಸ್ಯೆಯಾದರೆ ಹಡಗುಗಳು ಈಗ ಮಾರ್ಗವನ್ನು ಬದಲಾಯಿಸಿ ಆಫ್ರಿಕಾ ಖಂಡಕ್ಕೆ ಸುತ್ತು ಹಾಕಿ ಏಷ್ಯಾ, ಯುರೋಪ್‌ ದೇಶಗಳನ್ನು ತಲುಪಬೇಕಾಗುತ್ತದೆ. ಕೆಂಪು ಸಮುದ್ರದ 2 ಸಾವಿರ ಕಿ.ಮೀ ಮಾಡಬೇಕಾದ ಹಡಗು ಹತ್ತಿರ ಹತ್ತಿರ 9 ಸಾವಿರ ಕಿ.ಮೀ ಕ್ರಮಿಸಿ ದೇಶಗಳನ್ನು ತಲುಪಬೇಕಾಗುತ್ತದೆ. ಯುರೋಪ್‌ನಿಂದ 5 ವಾರದಲ್ಲಿ ಭಾರತಕ್ಕೆ ಬರುತ್ತಿದ್ದ ಹಡಗುಗಳು ಈ ಮಾರ್ಗ ಬಳಸಿದರೆ 7-8 ವಾರ ಬೇಕಾಗುತ್ತದೆ.

    ಕೆಂಪು ಸಮುದ್ರದಲ್ಲಿ ಯುದ್ಧ ನಿಲ್ಲುತ್ತಾ?
    ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಯಾರ ಮೇಲೆ ಬೇಕಾದರೂ ಭೂಮಿ, ವಾಯು, ಸಮುದ್ರದಿಂದ ದಾಳಿ ಮಾಡಬಹುದು. ಈಗಾಗಲೇ ಅಮೆರಿಕ ಮತ್ತು ಯುಕೆ ಯೆಮೆನ್‌ನಲ್ಲಿರುವ ಹೌತಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೇ ಅಮೆರಿಕ ಮತ್ತು ಯುಕೆಯ ಯುದ್ಧ ನೌಕೆ ಹಡಗುಗಳು ಕೆಂಪು ಸಮುದ್ರದದಲ್ಲಿ ಬಿಡು ಬಿಟ್ಟಿವೆ. ಇರಾನ್‌ ಹೌತಿ ಉಗ್ರರಿಗೆ ಶಸ್ತ್ರಾಸ್ತ್ರ ಸರಬರಾಜು ಮಾಡುವ ಮೂಲಕ ಪ್ರೋತ್ಸಾಹ ನೀಡುತ್ತಿದೆ. ಅಮೆರಿಕ ಮತ್ತು ಪಾಶ್ಚಿಮಾತ್ಯ ದೇಶಗಳು ಮಿಲಿಟರಿಯಲ್ಲಿ ಸೂಪರ್‌ ಪವರ್‌ ದೇಶಗಳಾಗಿವೆ. ಹೀಗಾಗಿ ಹೌತಿ ಉಗ್ರರನ್ನು ಸದೆ ಬಡೆಯುವುದು ಕಷ್ಟದ ಕೆಲಸ ಏನಲ್ಲ. ಈ ಕಿತ್ತಾಟದ ಮಧ್ಯೆ ಇರಾನ್‌ ಮಧ್ಯ ಪ್ರವೇಶ ಮಾಡಿದರೆ ಪರಿಸ್ಥಿತಿ ಉಲ್ಭಣವಾಗುವ ಸಾಧ್ಯತೆಯಿದೆ.

  • ಹೌತಿ ಉಗ್ರರ ಮೇಲೆ ಅಮೆರಿಕ ಏರ್‌ಸ್ಟ್ರೈಕ್‌, 31 ಬಲಿ – ನರಕ ತೋರಿಸ್ತೀವಿ ಎಂದು ಗುಡುಗಿದ ಟ್ರಂಪ್‌

    ಹೌತಿ ಉಗ್ರರ ಮೇಲೆ ಅಮೆರಿಕ ಏರ್‌ಸ್ಟ್ರೈಕ್‌, 31 ಬಲಿ – ನರಕ ತೋರಿಸ್ತೀವಿ ಎಂದು ಗುಡುಗಿದ ಟ್ರಂಪ್‌

    – ಟ್ರಂಪ್‌ ಎರಡನೇ ಅವಧಿಯ ಮೊದಲ ದಾಳಿ
    – ನಿಮ್ಮ ಸಮಯ ಮುಗಿದಿದೆ: ಟ್ರಂಪ್‌ ಎಚ್ಚರಿಕೆ

    ವಾಷಿಂಗ್ಟನ್‌: ಅಮೆರಿಕದ (USA) ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಉಗ್ರರ ಮೇಲೆ ಏರ್‌ಸ್ಟ್ರೈಕ್‌ (Air Strike) ಮಾಡಿಸಿದ್ದಾರೆ. ಯೆಮೆನ್‌ನಲ್ಲಿ ಹೌತಿ ಉಗ್ರರ ನೆಲೆಗಳ (Yemen Houthi Rebels) ಅಮೆರಿಕ ಏರ್‌ಸ್ಟ್ರೈಕ್‌ (Air Strike) ನಡೆಸಿ ಧ್ವಂಸಗೊಳಿಸಿದೆ.

    ಯೆಮೆನ್‌ನ ಇರಾನ್ ಬೆಂಬಲಿತ ಹೌತಿಗಳ ವಿರುದ್ಧ ದೊಡ್ಡ ಪ್ರಮಾಣದ ಮಿಲಿಟರಿ ದಾಳಿಯಿಂದ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ಅಮೆರಿಕ ಯುದ್ಧ ನೌಕೆಗಳಿಂದ ಹಾರಿದ ಯುದ್ಧ ವಿಮಾನಗಳು ಹೌತಿ ಉಗ್ರರ ಪ್ರಮುಖ ಸ್ಥಳಗಳ ಮೇಲೆ ಬಾಂಬ್‌ ದಾಳಿ ನಡೆಸಿದೆ.

    ಕೆಂಪು ಸಮುದ್ರದಲ್ಲಿ ಸರಕು ಸಾಗಾಣಿಕೆ ಹಡಗು ಮೇಲೆ ಹೌತಿ ಉಗ್ರರು ನಡೆಸಿದ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ನಿಮ್ಮ ಸಮಯ ಮುಗಿದಿದೆ ಮತ್ತೆ ದಾಳಿ ಮಾಡಿದರೆ ನಿಮಗೆ ನರಕ ತೋರಿಸಲಾಗುವುದು ಎಂದು ಟ್ರಂಪ್‌ ಗುಡುಗಿದ್ದಾರೆ.

    ಜಾಗತಿಕ ವ್ಯಾಪಾರ ಮತ್ತು ಅಮೆರಿಕ ಸ್ವತ್ತುಗಳನ್ನು ರಕ್ಷಿಸಲು ಈ ದಾಳಿ ಮಾಡಿದ್ದೇವೆ ಎಂದು ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ. ಯಾವುದೇ ಭಯೋತ್ಪಾದಕ ಪಡೆ ಅಮೆರಿಕದ ವಾಣಿಜ್ಯ ಮತ್ತು ನೌಕಾ ಹಡಗುಗಳು ವಿಶ್ವದ ಜಲಮಾರ್ಗಗಳಲ್ಲಿ ಮುಕ್ತವಾಗಿ ನೌಕಾಯಾನ ಮಾಡುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಹೌತಿಗಳಿಗೆ ಇರಾನ್‌ ಬೆಂಬಲ ನೀಡುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ಇರಾನ್‌ ದೇಶವನ್ನು ಸಂಪೂರ್ಣವಾಗಿ ಹೊಣೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೇ ಹೌತಿಗಳ ಬೆದರಿಕೆಗೆ ಮಾಜಿ ಅಧ್ಯಕ್ಷ ಜೋ ಬೈಡನ್‌ ಪ್ರಬಲವಾಗಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಎಂದು ಟೀಕಿಸಿದ್ದಾರೆ.

    ಜೋ ಬೈಡೆನ್ ಸರ್ಕಾರದ ಪ್ರತಿಕ್ರಿಯೆ ಶೋಚನೀಯವಾಗಿ ದುರ್ಬಲವಾಗಿತ್ತು. ಇದರಿಂದಾಗಿ ಹೌತಿಗಳು ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ನಾಲ್ಕು ತಿಂಗಳ ಹಿಂದೆ ಕೆಂಪು ಸಮುದ್ರದ ಮೂಲಕ ಹಾದುಹೋದ ಕೊನೆಯ ಅಮೆರಿಕನ್ ಯುದ್ಧನೌಕೆಯ ಮೇಲೆ ಹೌತಿಗಳು ಒಂದು ಡಜನ್‌ಗಿಂತಲೂ ಹೆಚ್ಚು ಬಾರಿ ದಾಳಿ ಮಾಡಿದ್ದಾರೆ. ಇರಾನ್‌ನಿಂದ ಹಣಕಾಸು ಪಡೆದ ಹೌತಿ ಗೂಂಡಾಗಳು ಯುಎಸ್ ವಿಮಾನಗಳ ಮೇಲೆ ಕ್ಷಿಪಣಿಗಳನ್ನು ಹಾರಿಸಿದ್ದಾರೆ. ಈ ಕಾರಣಕ್ಕೆ ದಾಳಿ ನಡೆಸಲಾಗಿದೆ ಎಂದು ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಬಸ್‌ ಉರುಳಿಸಿ 9 ಮಂದಿ ತೀರ್ಥಯಾತ್ರಿಗಳನ್ನು ಹತೈಗೈದ ಉಗ್ರ ಪಾಕ್‌ನಲ್ಲಿ ಮಟಾಷ್‌

     

    ಈಗ ಅಮೆರಿಕ ದಾಳಿ ನಡೆಸಿದ್ದು ಯಾಕೆ?
    2023 ರ ಅಂತ್ಯದಿಂದ ಹೌತಿಗಳು ಕೆಂಪು ಸಮುದ್ರ, ಅಡೆನ್ ಕೊಲ್ಲಿ ಮತ್ತು ಇತರ ಪ್ರಮುಖ ಸಮುದ್ರ ಮಾರ್ಗಗಳಲ್ಲಿ ವಾಣಿಜ್ಯ ಮತ್ತು ಮಿಲಿಟರಿ ಹಡಗುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಈಗ ಗಾಜಾದಲ್ಲಿ ಕದನ ವಿರಾಮದ ಹೊರತಾಗಿಯೂ ಹೌತಿಗಳು ಇತ್ತೀಚೆಗೆ ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ದಾಳಿಗಳನ್ನು ಪುನರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಕ್ಕೆ ಅಮೆರಿಕ ಈಗ ದಾಳಿ ನಡೆಸಿದೆ.

    ಎಲ್ಲಿಲ್ಲಿ ದಾಳಿ?
    ಪ್ರಸಿದ್ಧ ಮಿಲಿಟರಿ ತಾಣವಾದ ಸನಾ ವಿಮಾನ ನಿಲ್ದಾಣ ಸಂಕೀರ್ಣ, ಸೌದಿ ಗಡಿಯ ಬಳಿ ಹೌತಿಗಳ ಉತ್ತರದ ಭದ್ರಕೋಟೆಯಾದ ಸಾದಾ, ನೈಋತ್ಯ ಪ್ರದೇಶದಲ್ಲಿರುವ ಧಮರ್ ಮತ್ತು ಅಬ್ಸ್, ಹೌತಿ ಮಿಲಿಟರಿ ಸೌಲಭ್ಯಗಳ ನೆಲೆಯಾಗಿರುವ ಗೆರಾಫ್ ಮೇಲೆ ದಾಳಿ ನಡೆದಿದೆ.

     

  • ಕೆನಡಾ ಅಮೆರಿಕದ ಭಾಗವಾಗಲ್ಲ – ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಧಾನಿ ಮಾರ್ಕ್‌ ಕಾರ್ನಿ ಘೋಷಣೆ

    ಕೆನಡಾ ಅಮೆರಿಕದ ಭಾಗವಾಗಲ್ಲ – ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಧಾನಿ ಮಾರ್ಕ್‌ ಕಾರ್ನಿ ಘೋಷಣೆ

    ಒಟ್ಟಾವಾ: ಕೆನಡಾದ 24ನೇ ಪ್ರಧಾನ ಮಂತ್ರಿಯಾಗಿ ಮಾರ್ಕ್ ಕಾರ್ನಿ (Mark Carney) ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಟ್ರಂಪ್‌ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಆಕಾರದಲ್ಲಾಗಲಿ, ರೂಪದಲ್ಲಾಗಲಿ ಕೆನಡಾ (Canada), ಅಮೆರಿಕದ ಭಾಗವಾಗುವುದಿಲ್ಲ ಎಂದರಲ್ಲದೇ ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಸುಂಕ ವಿಧಿಸುವ ಕ್ರಮವನ್ನು ಎದುರಿಸುವುದೇ ನಮ್ಮ ಪ್ರಮುಖ ಆದ್ಯತೆ ಎಂದು ಗುಡುಗಿದ್ದಾರೆ.

    ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಮಾರ್ಕ್‌ ಕಾರ್ನಿ, ಕೆನಡಾ ಆಕಾರ – ಗಾತ್ರದಲ್ಲಿ, ಯಾವುದೇ ರೀತಿಯಲ್ಲಾಗಲಿ ಅಮೆರಿಕದ ಭಾಗವಾಗುವುದಿಲ್ಲ. ಆದ್ರೆ ನಮ್ಮ ಸರ್ಕಾರ ಎರಡೂ ದೇಶದ ಹಿತಾಸಕ್ತಿಯನ್ನು ಹೆಚ್ಚಿಸಲು ವಾಷಿಂಗ್ಟನ್‌ನೊಂದಿಗೆ ಒಟ್ಟಾಗಿ ಕೆಲಸ ಮಾಡಬಹುದು ಭರವಸೆ ನೀಡಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ನು ಮುಂದೆ ಕಸಕ್ಕೂ ಸರ್ವಿಸ್‌ ಚಾರ್ಜ್‌ – ಏ.1 ರಿಂದ ಜಾರಿ

    ಇದೇ ವೇಳೆ ಟ್ರಂಪ್‌ ಅವರನ್ನು ಭೇಟಿಯಾಗುವ ವಿಚಾರ ಕುರಿತು ಪ್ರತಿಕ್ರಿಯಿಸಿ, ಕೆನಡಾ ಅನುಭವಿ ಕ್ಯಾಬಿನೆಟ್‌ ಹೊಂದಿದ್ದು, ಅತ್ಯಂತ ವೇಗವಾಗಿ ಕೆಲಸ ಮಾಡುತ್ತದೆ. ಅಲ್ಲದೇ ಭವಿಷ್ಯವನ್ನು ರಕ್ಷಿಸುತ್ತಾ, ನಮ್ಮ ಆರ್ಥಿಕತೆಯನ್ನು ಸುರಕ್ಷಿತಗೊಳಿಸುತ್ತದೆ. ಕೆನಡಾದ ಸಾರ್ವಭೌಮತ್ವಕ್ಕೆ ಗೌರವ ಕೊಡುವುದಾದರೇ ಟ್ರಂಪ್‌ ಅವರನ್ನು ಭೇಟಿಯಾಗಲು ಒಪ್ಪುತ್ತೇನೆ ಎಂದು ಖಡಕ್ಕಾಗಿ ಹೇಳಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಮನೆಯಿಂದ ಹೊರಗೆ ಬರಬೇಡಿ: ದಿನೇಶ್ ಗುಂಡೂರಾವ್

    ಕಳೆದ ಜನವರಿಯಲ್ಲಿ ಟ್ರಂಪ್‌ ಅಧಿಕಾರ ಸ್ವೀಕರಿಸಿದ ಬಳಿಕ ಒಟ್ಟಾವ ಗಡಿಯಾಚೆಗಿನ ಸಂಬಂಧಗಳು ಕುಸಿದಿವೆ. ಅಲ್ಲದೇ ಕೆನಡಾವನ್ನು 51ನೇ ರಾಜ್ಯವಾಗಿ ಮಾಡಿಕೊಳ್ಳುವ ಚಿಂತನೆ ಹಾಗೂ ಕೆನಡಾ ಉತ್ಪನ್ನಗಳ ಮೇಲೆ ಸುಂಕ ವಿಧಿಸುವ ಟ್ರಂಪ್‌ ಅವರ ನಿರ್ಧಾರಗಳು ಉಭಯ ದೇಶಗಳ ಸಂಬಂಧ ಮತ್ತಷ್ಟು ಹಳಸುವಂತೆ ಮಾಡಿದೆ. ‌ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ವಕ್ಫ್‌ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ – ಅಧ್ಯಕ್ಷರಾಗಿ ಸೈಯದ್ ಹುಸೈನಿ ಆಯ್ಕೆ

  • ವೈಮಾನಿಕ ದಾಳಿಯಲ್ಲಿ ಐಸಿಸ್‌ ಕಮಾಂಡರ್‌ ಅಬು ಖದೀಜಾ ಹತ್ಯೆ – ಬಲದ ಮೂಲಕ ಶಾಂತಿ ಎಂದ ಟ್ರಂಪ್‌

    ವೈಮಾನಿಕ ದಾಳಿಯಲ್ಲಿ ಐಸಿಸ್‌ ಕಮಾಂಡರ್‌ ಅಬು ಖದೀಜಾ ಹತ್ಯೆ – ಬಲದ ಮೂಲಕ ಶಾಂತಿ ಎಂದ ಟ್ರಂಪ್‌

    ಬಾಗ್ದಾದ್: ಇರಾಕ್‌ನ (Iraq) ಅಲ್ ಅನ್ಬರ್ ಪ್ರಾಂತ್ಯದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ (ISIS) ಭಯೋತ್ಪಾದಕ ಗುಂಪಿನ ಜಾಗತಿಕ ಕಾರ್ಯಾಚರಣೆಗಳ ಮುಖ್ಯಸ್ಥ ಅಬ್ದುಲ್ಲಾ ಮಕ್ಕಿ ಮುಸ್ಲಿಹ್ ಅಲ್-ರಿಫಾಯಿ (ಅಬು ಖದೀಜಾ) ಹತ್ಯೆಯಾಗಿದ್ದಾನೆ ಎಂದು ಅಮೆರಿಕ ಘೋಷಿಸಿದೆ.

    ವೈಮಾನಿಕ ದಾಳಿಯ ನಂತರ ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ಮತ್ತು ಇರಾಕ್‌ನ ಸೇನಾ ಪಡೆಗಳು ಸ್ಥಳಕ್ಕೆ ಭೇಟಿ ನೀಡಿ ಅಬು ಖದೀಜಾ (Abu Khadija) ಮತ್ತು ಇತರ ಐಸಿಸ್ ಉಗ್ರರ ಸಾವನ್ನು ದೃಢಪಡಿಸಿವೆ. ಆತನ ಗುರುತನ್ನು ಡಿಎನ್ಎ ಹೋಲಿಕೆಯ ಮೂಲಕ ದೃಢಪಡಿಸಲಾಯಿತು. ಈ ಹಿಂದೆ ನಡೆದ ದಾಳಿಯಲ್ಲಿ ಅವನು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದ. ಉಗ್ರರ ಶವ ಪತ್ತೆಯಾದ ಜಾಗದಲ್ಲಿ ಭಾರೀ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹತ್ಯೆಗೀಡಾದ ಅಬು ಖದೀಜಾ ಐಸಿಸ್‌ ಉಗ್ರ ಸಂಘಟನೆಯ ಎರಡನೇ ಕಮಾಂಡರ್ ಸಹ ಆಗಿದ್ದ. ವಿಶ್ವಾದ್ಯಂತ ಭಯೋತ್ಪಾದಕ ಗುಂಪಿನ ಲಾಜಿಸ್ಟಿಕ್ಸ್, ಯೋಜನೆ ಮತ್ತು ಹಣಕಾಸು ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಎಂದು ಅಮೆರಿಕ ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.

    ಇರಾಕ್‌ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಈ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಬು ಖದೀಜಾ ಇರಾಕ್ ಮತ್ತು ವಿಶ್ವದ ಅತ್ಯಂತ ಅಪಾಯಕಾರಿ ಭಯೋತ್ಪಾದಕರಲ್ಲಿ ಒಬ್ಬ. ಆತನನ್ನು ಅಮೆರಿಕ ಸೇನೆಯ ಬೆಂಬಲದೊಂದಿಗೆ ಹತ್ಯೆಗೈಯ್ಯಲಾಗಿದೆ ಎಂದು ಬರೆದುಕೊಂಡಿದ್ದಾರೆ.

    ಇಂದು ಇರಾಕ್‌ನಲ್ಲಿ ಐಸಿಸ್‌ನ ನಾಯಕನನ್ನು ಕೊಲ್ಲಲಾಯಿತು. ನಮ್ಮ ನಿರ್ಭೀತ ರಣ ಯೋಧರು ಅವರನ್ನು ಬೇಟೆಯಾಡಿದರು. ಬಲದ ಮೂಲಕ ಶಾಂತಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

  • ಪಾಕಿಸ್ತಾನ, ಭೂತಾನ್ ಸೇರಿ 41 ರಾಷ್ಟ್ರಗಳ ಪ್ರಜೆಗಳ ಯುಎಸ್ ಪ್ರಯಾಣಕ್ಕೆ ನಿರ್ಬಂಧ ಸಾಧ್ಯತೆ

    ಪಾಕಿಸ್ತಾನ, ಭೂತಾನ್ ಸೇರಿ 41 ರಾಷ್ಟ್ರಗಳ ಪ್ರಜೆಗಳ ಯುಎಸ್ ಪ್ರಯಾಣಕ್ಕೆ ನಿರ್ಬಂಧ ಸಾಧ್ಯತೆ

    – 41 ರಾಷ್ಟ್ರಗಳನ್ನು 3 ಗುಂಪುಗಳಾಗಿ ವಿಭಜನೆ; 10 ರಾಷ್ಟ್ರಗಳಿಗೆ ಫುಲ್ ವೀಸಾ ಅಮಾನತು

    ವಾಷಿಂಗ್ಟನ್: ಹೊಸ ನಿಷೇಧದ ಭಾಗವಾಗಿ ಅಮೆರಿಕಗೆ (America) ಹಲವು ದೇಶಗಳ ನಾಗರಿಕರಿಗೆ ಪ್ರಯಾಣ ನಿರ್ಬಂಧಗಳನ್ನು ವಿಧಿಸಲು ಟ್ರಂಪ್‌ (Donald Trump) ಸರ್ಕಾರ ಮುಂದಾಗಿದೆ.

    ಪಾಕಿಸ್ತಾನ, ಭೂತಾನ್‌ ಸೇರಿದಂತೆ 41 ದೇಶಗಳ ಪ್ರಜೆಗಳ ಯುಎಸ್‌ ಪ್ರಯಾಣಕ್ಕೆ ನಿರ್ಬಂಧ ವಿಧಿಸುವ ಸಾಧ್ಯತೆ ಇದೆ. 41 ದೇಶಗಳನ್ನು ಮೂರು ಪ್ರತ್ಯೇಕ ಗುಂಪುಗಳಾಗಿ ವಿಭಜಿಸಲಾಗಿದೆ. ಮೊದಲ ಗುಂಪಿನಲ್ಲಿ ಬರುವ ಅಫ್ಘಾನಿಸ್ತಾನ, ಇರಾನ್, ಸಿರಿಯಾ, ಕ್ಯೂಬಾ ಮತ್ತು ಉತ್ತರ ಕೊರಿಯಾ ಸೇರಿದಂತೆ 10 ದೇಶಗಳ ಪೂರ್ಣ ವೀಸಾ ಅಮಾನತುಗೊಳಿಸಲಾಗುವುದು. ಇದನ್ನೂ ಓದಿ: ಹಮಾಸ್‌ ಬೆಂಬಲಿಸಿದ್ದ ಭಾರತೀಯ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಅಮೆರಿಕ

    ಎರಡನೇ ಗುಂಪಿನಲ್ಲಿ, ಎರಿಟ್ರಿಯಾ, ಹೈಟಿ, ಲಾವೋಸ್, ಮ್ಯಾನ್ಮಾರ್ ಮತ್ತು ದಕ್ಷಿಣ ಸುಡಾನ್ ದೇಶಗಳು ಭಾಗಶಃ ಅಮಾನತುಗಳನ್ನು ಎದುರಿಸಬೇಕಾಗುತ್ತದೆ. ಇದು ಕೆಲವು ವಿನಾಯಿತಿಗಳೊಂದಿಗೆ ಪ್ರವಾಸಿ ಮತ್ತು ವಿದ್ಯಾರ್ಥಿ ವೀಸಾಗಳು ಹಾಗೂ ಇತರ ವಲಸೆ ವೀಸಾಗಳ ಮೇಲೆ ಪರಿಣಾಮ ಬೀರುತ್ತದೆ.

    ಮೂರನೇ ಗುಂಪಿನಲ್ಲಿ, ಪಾಕಿಸ್ತಾನ, ಭೂತಾನ್ ಮತ್ತು ಮ್ಯಾನ್ಮಾರ್ ಸೇರಿದಂತೆ ಒಟ್ಟು 26 ದೇಶಗಳ ಸರ್ಕಾರಗಳು 60 ದಿನಗಳಲ್ಲಿ ನ್ಯೂನತೆಗಳನ್ನು ಪರಿಹರಿಸಲು ಮುಂದಾಗಬೇಕು. ಇಲ್ಲದಿದ್ದರೆ, ಅಮೆರಿಕದ ವೀಸಾ ವಿತರಣೆಯನ್ನು ಭಾಗಶಃ ಸ್ಥಗಿತಗೊಳಿಸುವುದನ್ನು ಪರಿಗಣಿಸಲಾಗುವುದು ಎಂದು ಜ್ಞಾಪಕ ಪತ್ರದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್ ಕಾಲ ಸನ್ನಿಹಿತ – ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್ ಉಡಾವಣೆ

  • ರಷ್ಯಾ-ಉಕ್ರೇನ್‌ ಯುದ್ಧ ಸಮಸ್ಯೆ ಬಗೆಹರಿಸಿದ್ದಕ್ಕೆ ಟ್ರಂಪ್‌, ಮೋದಿಗೆ ಥ್ಯಾಂಕ್ಸ್‌: ಪುಟಿನ್‌

    ರಷ್ಯಾ-ಉಕ್ರೇನ್‌ ಯುದ್ಧ ಸಮಸ್ಯೆ ಬಗೆಹರಿಸಿದ್ದಕ್ಕೆ ಟ್ರಂಪ್‌, ಮೋದಿಗೆ ಥ್ಯಾಂಕ್ಸ್‌: ಪುಟಿನ್‌

    ಮಾಸ್ಕೋ: ರಷ್ಯಾ-ಉಕ್ರೇನ್‌ (Russia-Ukraine Conflict) ಸಂಘರ್ಷದಲ್ಲಿ ಕದನ ವಿರಾಮದ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಕ್ಕೆ ಟ್ರಂಪ್‌ ಮತ್ತು ಮೋದಿ ಅವರಿಗೆ ಧನ್ಯವಾದ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಕೃತಜ್ಞತೆ ಸಲ್ಲಿಸಿದ್ದಾರೆ.

    ಉಕ್ರೇನ್‌ನಲ್ಲಿ 30 ದಿನಗಳ ಕದನ ವಿರಾಮಕ್ಕಾಗಿ ವಾಷಿಂಗ್ಟನ್‌ನ ಯೋಜನೆಯ ಕುರಿತು ಪುಟಿನ್ ತಮ್ಮ ಮೊದಲ ಹೇಳಿಕೆಯನ್ನು ನೀಡಿದ್ದಾರೆ. ಉಕ್ರೇನ್ ಸಂಘರ್ಷದ ಬಗ್ಗೆ ಗಮನ ಹರಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಇತರೆ ರಾಷ್ಟ್ರಗಳ ಮುಖ್ಯಸ್ಥರಿಗೆ ಕೃತಜ್ಞತೆ ಸಲ್ಲಿಸುತ್ತೇನೆಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಯುದ್ಧ; ಅಮೆರಿಕದ ಕದನ ವಿರಾಮ ಪ್ರಸ್ತಾಪಕ್ಕೆ ರಷ್ಯಾ ಒಪ್ಪಿಗೆ

    ಮೊದಲನೆಯದಾಗಿ, ಉಕ್ರೇನ್ ಸಂಘರ್ಷ ಇತ್ಯರ್ಥಕ್ಕೆ ಇಷ್ಟೊಂದು ಗಮನ ನೀಡಿದ್ದಕ್ಕಾಗಿ ಅಮೆರಿಕದ ಅಧ್ಯಕ್ಷ ಟ್ರಂಪ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ತಮ್ಮದೇ ದೇಶಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕೆಲಗಳಿವೆ. ಈ ನಡುವೆಯೂ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರು, ಭಾರತದ ಪ್ರಧಾನಿ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದ ಗಣರಾಜ್ಯದ ಅಧ್ಯಕ್ಷರು ನಮ್ಮ ವಿಷಯಕ್ಕೆ ಸಾಕಷ್ಟು ಸಮಯ ನೀಡಿದ್ದಾರೆ. ಅವರಿಗೆ ನಾನು ಆಭಾರಿ. ಏಕೆಂದರೆ, ಇದೆಲ್ಲವೂ ಯುದ್ಧವನ್ನು ನಿಲ್ಲಿಸುವ ಮತ್ತು ಮಾನವ ಸಾವು-ನೋವುಗಳನ್ನು ತಡೆಗಟ್ಟುವ ಉದಾತ್ತ ಯೋಜನೆಯಾಗಿದೆ ಎಂದು ಪುಟಿನ್‌ ಹೇಳಿದ್ದಾರೆ.

    ಕಳೆದ ತಿಂಗಳು ಶ್ವೇತಭವನದಲ್ಲಿ ಟ್ರಂಪ್ ಅವರೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿ, ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷದ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ ಎಂದು ಒತ್ತಿ ಹೇಳಿದ್ದರು. ಭಾರತ ತಟಸ್ಥವಾಗಿಲ್ಲ. ಭಾರತ ಶಾಂತಿಯ ಪರವಾಗಿ ನಿಂತಿದೆ. ಇದು ಯುದ್ಧದ ಯುಗವಲ್ಲ ಎಂದು ನಾನು ಈಗಾಗಲೇ ಅಧ್ಯಕ್ಷ ಪುಟಿನ್ ಅವರಿಗೆ ಹೇಳಿದ್ದೇನೆ. ಈ ವಿಚಾರದಲ್ಲಿ ಟ್ರಂಪ್‌ ನಿಲುವಿಗೆ ನನ್ನ ಬೆಂಬಲ ಇರುತ್ತದೆ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ರಷ್ಯಾ ಜೊತೆ ಅಮೆರಿಕ ಮಾತುಕತೆಗೆ ಸಿದ್ಧರೆ – ಈಗಾಗಲೇ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವ ಉಕ್ರೇನ್

    ಈ ಮಧ್ಯೆ, ಯಾವುದೇ ಷರತ್ತುಗಳಿಲ್ಲದೆ ಕದನ ವಿರಾಮ ಪ್ರಸ್ತಾವನೆಗೆ ರಷ್ಯಾ ಒಪ್ಪಿಗೆ ನೀಡಬೇಕೆಂದು ಅಮೆರಿಕ ಒತ್ತಾಯಿಸಿತ್ತು. ಆದಾಗ್ಯೂ, ಕೆಲವು ಷರತ್ತುಗಳೊಂದಿಗೆ ಕದನ ವಿರಾಮಕ್ಕೆ ಪುಟಿನ್‌ ಒಪ್ಪಿಗೆ ಸೂಚಿಸಿದ್ದಾರೆ.

  • ಕೆಂಪು ಟೆಸ್ಲಾ ಕಾರು ಖರೀದಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

    ಕೆಂಪು ಟೆಸ್ಲಾ ಕಾರು ಖರೀದಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

    ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಎಲಾನ್ ಮಸ್ಕ್ ‌(Elon Musk) ಕಂಪನಿಯ ಕೆಂಪು ಬಣ್ಣದ ಟೆಸ್ಲಾ ಕಾರನ್ನು (Tesla Car) ಖರೀದಿಸಿದ್ದಾರೆ. ಟ್ರಂಪ್ ಅವರು ಟೆಸ್ಲಾ ಮಾಡೆಲ್ S ಪ್ಲೈಡ್ ಕಾರಿನಲ್ಲಿ ಕುಳಿತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ವೈರಲ್‌ ಆಗಿರುವ ವೀಡಿಯೊದಲ್ಲಿ ಮಸ್ಕ್ ಅವರು ಕಾರಿನ ವೈಶಿಷ್ಟ್ಯಗಳನ್ನು ಟ್ರಂಪ್‌ಗೆ ವಿವರಿಸಿದ್ದಾರೆ. ಇನ್ನೂ ಕಾರಿನ ಚಾಲಕನ ಸೀಟ್‌ನಲ್ಲಿ ಟ್ರಂಪ್‌ ಕುಳಿತಿದ್ದು, ಪಕ್ಕದ ಸೀಟ್‌ನಲ್ಲಿ ಮಸ್ಕ್‌ ಕುಳಿತಿದ್ದಾರೆ. ಆದರೆ ಟ್ರಂಪ್‌ ವಾಹನವನ್ನು ಚಾಲನೆ ಮಾಡಿ ಪರೀಕ್ಷಿಸಿಲ್ಲ.

    ಮಂಗಳವಾರ ಮಸ್ಕ್ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ್ದ ಟ್ರಂಪ್, ನನಗೆ ಕಾರನ್ನು ಓಡಿಸಲು ಇಷ್ಟ. ಆದರೆ ಕಾರನ್ನು ಓಡಿಸಲು ಅನುಮತಿ ಇಲ್ಲ. ನಾನು ಬಹಳ ಸಮಯದಿಂದ ಕಾರು ಓಡಿಸಿಲ್ಲ. ಆದರೆ ಕಾರನ್ನು ಶ್ವೇತಭವನದಲ್ಲಿ ಇರಿಸುತ್ತೇನೆ. ನನ್ನ ಸಿಬ್ಬಂದಿಗೆ ಅದನ್ನು ಬಳಸಲು ಬಿಡುತ್ತೇನೆ ಎಂದಿದ್ದರು. ಇನ್ನೂ ಟೆಸ್ಲಾ ವಿರುದ್ಧ ಪ್ರತಿಭಟಿಸುವ ಜನರನ್ನು ದೇಶೀಯ ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟಬೇಕು ಎಂದು ಇದೇ ವೇಳೆ ಹೇಳಿದ್ದರು.

    ಟ್ರಂಪ್‌ಗೆ ವಾಹನ ಚಲಾಯಿಸಲು ಏಕೆ ಅವಕಾಶವಿಲ್ಲ?
    ಅಮೆರಿಕದಲ್ಲಿ ಹಾಲಿ ಅಧ್ಯಕ್ಷರು ಮತ್ತು ಮಾಜಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸಾರ್ವಜನಿಕ ರಸ್ತೆಗಳಲ್ಲಿ ವಾಹನ ಚಲಾಯಿಸುವುದನ್ನು ನಿಷೇಧಿಸಲಾಗಿದೆ. ಭದ್ರತಾ ಕಾರಣಗಳಿಗಾಗಿ ಮತ್ತು ರಾಷ್ಟ್ರದ ಉನ್ನತ ಅಧಿಕಾರಿಗಳನ್ನು ರಕ್ಷಿಸುವ ಜವಾಬ್ದಾರಿಯುತ ಸರ್ಕಾರಿ ಸಂಸ್ಥೆಯಾದ ಯುಎಸ್ ಸೀಕ್ರೆಟ್ ಸರ್ವಿಸ್‌ನಿಂದ ಈ ನಿಯಮ ಜಾರಿಗೊಳಿಸಲಾಗಿದೆ.

    1963 ರಲ್ಲಿ ಜಾನ್ ಎಫ್ ಕೆನಡಿಯವರ ಹತ್ಯೆಯು ಅಧ್ಯಕ್ಷೀಯ ಭದ್ರತೆಯಲ್ಲಿ ಒಂದು ಮಹತ್ವದ ತಿರುವು ನೀಡಿತು. ಇನ್ನೂ ಲಿಂಡನ್ ಜಾನ್ಸನ್ ಸಾರ್ವಜನಿಕ ರಸ್ತೆಗಳಲ್ಲಿ ವಾಹನ ಚಲಾಯಿಸಿದ ಅಮೆರಿಕದ ಕೊನೆಯ ಅಧ್ಯಕ್ಷರಾಗಿದ್ದಾರೆ.

  • ರಷ್ಯಾ ಜೊತೆ ಅಮೆರಿಕ ಮಾತುಕತೆಗೆ ಸಿದ್ಧರೆ – ಈಗಾಗಲೇ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವ ಉಕ್ರೇನ್

    ರಷ್ಯಾ ಜೊತೆ ಅಮೆರಿಕ ಮಾತುಕತೆಗೆ ಸಿದ್ಧರೆ – ಈಗಾಗಲೇ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವ ಉಕ್ರೇನ್

    ಮಾಸ್ಕೋ/ವಾಷಿಂಗ್ಟನ್‌: ರಷ್ಯಾ-ಉಕ್ರೇನ್ (Ukraine Russia War) ನಡುವೆ ಸುದೀರ್ಘ ಅವಧಿಯಿಂದ ನಡೀತಿರೋ ಯುದ್ಧಕ್ಕೆ ಅಂತ್ಯವಾಡಲು ಎಲ್ಲಾ ಪ್ರಯತ್ನಗಳು ನಡೆದಿವೆ. ಸೌದಿಯಲ್ಲಿ ಉಕ್ರೇನ್-ಅಮೆರಿಕ ನಡುವೆ ಮಹತ್ವದ ಚರ್ಚೆ ನಡೆದಿದೆ. ಅಮೆರಿಕ ಪ್ರಸ್ತಾವದಂತೆ ರಷ್ಯಾ ಜೊತೆಗೆ 30 ದಿನಗಳ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲು ಸಿದ್ಧ ಎಂದು ಉಕ್ರೇನ್ ಘೋಷಿಸಿದೆ.

    ಈ ಬೆನ್ನಲ್ಲೇ, ಉಕ್ರೇನ್‌ಗೆ (Ukraine) ಮಿಲಿಟರಿ ನೆರವು ಸ್ಥಗಿತ ಆದೇಶವನ್ನು ಅಮೆರಿಕ ಹಿಂಪಡೆದಿದೆ. ಅಲ್ಲದೇ ಕದನ ವಿರಾಮಕ್ಕೆ ರಷ್ಯಾವನ್ನು ಒಪ್ಪಿಸಲು ಅಮೆರಿಕ ಪ್ರಯತ್ನ ನಡೆಸಿದೆ. ಪುಟಿನ್ ಜೊತೆ ಟ್ರಂಪ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಆದ್ರೆ, ಇದು ಅಂತಿಮ ಹಂತ ತಲುಪಿಲ್ಲ. ಕದನ ವಿರಾಮ ಸಂಬಂಧ ಪುಟಿನ್ ನಿರ್ಣಯ ಬಾಕಿಯಿದೆ. ಗುರುವಾರ (ಮಾ.13) ವ್ಲಾಡಿಮಿರ್‌ ಪುಟಿನ್‌ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸುವುದಾಗಿಯೂ ಎಂದು ಟ್ರಂಪ್ ತಿಳಿಸಿದ್ದಾರೆ.

    ಶ್ವೇತಭವನ ಮತ್ತು ಕೈವ್‌ನ ಜಂಟಿ ಹೇಳಿಕೆಯ ಪ್ರಕಾರ, 2 ಕಡೆಯವರೂ ಒಪ್ಪಿದರೆ ಮಾತ್ರವೇ ತಾತ್ಕಾಲಿಕವಾಗಿ 30 ದಿನಗಳ ವರೆಗೆ ಕದನ ವಿರಾಮ ಏರ್ಪಡಲಿದೆ ಎಂದು ಹೇಳಿದೆ. ಇನ್ನೂ ಟ್ರಂಪ್‌ 2ನೇ ಬಾರಿ ಅಧಿಕಾರ ವಹಿಸಿಕೊಂಡ ಬಳಿಕ ಇದು ಮಹತ್ವದ ಹೆಜ್ಜೆಯಾಗಿದೆ.

  • ಅಮೆರಿಕದ ಮದ್ಯದ ಮೇಲೆ ಭಾರತ 150%, ಕೃಷಿ ಉತ್ಪನ್ನಗಳ ಮೇಲೆ 100% ತೆರಿಗೆ ವಿಧಿಸುತ್ತಿದೆ: ವೈಟ್‌ಹೌಸ್

    ಅಮೆರಿಕದ ಮದ್ಯದ ಮೇಲೆ ಭಾರತ 150%, ಕೃಷಿ ಉತ್ಪನ್ನಗಳ ಮೇಲೆ 100% ತೆರಿಗೆ ವಿಧಿಸುತ್ತಿದೆ: ವೈಟ್‌ಹೌಸ್

    – ಮತ್ತೆ ಭಾರತದ ವಿರುದ್ಧ ʻದೊಡ್ಡಣ್ಣʼ ಕೆಂಗಣ್ಣು

    ವಾಷಿಂಗ್ಟನ್‌: ಸದ್ಯ ವಿಶ್ವದ ದೊಡ್ಡಣ್ಣ ಅಮೆರಿಕ ಸುಂಕದ (tariff) ವಿಚಾರ ಬಿಡುವಂತೆ ಕಾಣುತ್ತಿಲ್ಲ. ಇಂದು ಶ್ವೇತಭವನ ನೀಡಿದ ಹೇಳಿಕೆ ಭಾರತದ ಮೇಲೆ ಕೆಂಗಣ್ಣು ಬೀರಿದಂತೆ ಕಾಣುತ್ತಿದೆ. ಹೌದು. ಭಾರತವು (India) ನಮ್ಮ ಉತ್ಪನ್ನಗಳ ಮೇಲೆ ಭಾರತ ಭಾರಿ ಸುಂಕ ವಿಧಿಸುತ್ತಿದೆ ಎಂದು ಶ್ವೇತಭವನ ಹೇಳಿದೆ.

    ಭಾರತವು ಅಮೆರಿಕದ ಮದ್ಯದ ಮೇಲೆ ಶೇ.150 ಹಾಗೂ ಕೃಷಿ ಉತ್ಪನ್ನಗಳ ಮೇಲೆ ಶೇ.100 ರಷ್ಟು ಸುಂಕ ವಿಧಿಸುತ್ತಿದೆ ಎಂದು ಹೇಳಿದೆ. ಅಮೆರಿಕದ ಉತ್ಪನ್ನಗಳ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸುವ ಬಗ್ಗೆ ಯಾವುದೇ ಭರವಸೆ ನೀಡಿಲ್ಲ ಎಂದು ಭಾರತ ಸ್ಪಷ್ಟನೆ ನೀಡಿದ ಒಂದು ದಿನದ ಬಳಿಕ ಶ್ವೇತಭವನ (White House) ಈ ರೀತಿಯ ಪ್ರತಿಕ್ರಿಯೆ ನೀಡಿದೆ. ಇದನ್ನೂ ಓದಿ: ರಾಜಮನೆತನಕ್ಕೆ ಟಿಡಿಆರ್ ವರ್ಗಾಯಿಸದಂತೆ ಕೋರಿ ರಾಜ್ಯದಿಂದ ಸುಪ್ರೀಂಗೆ ಅರ್ಜಿ ಸಾಧ್ಯತೆ

    ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಏಪ್ರಿಲ್‌ 2ರಿಂದ ಜಾರಿಗೆ ಬರುವಂತೆ ಹೊಸ ಸುಂಕ ಪದ್ಧತಿಯನ್ನು ಘೋಷಿಸಿದ್ದಾರೆ. ವಿವಿಧ ದೇಶಗಳು ಅಮೆರಿಕದ ಉತ್ಪನ್ನಗಳಿಗೆ ವಿಧಿಸುವ ಸುಂಕದಷ್ಟೇ ಅಮೆರಿಕ ಕೂಡ ಆ ದೇಶದ ಉತ್ಪನ್ನಗಳ ಮೇಲೆ ಏಪ್ರಿಲ್‌ 2ರಿಂದ ಸುಂಕವನ್ನು ವಿಧಿಸಲಿದೆ. ಇದರ ಬೆನ್ನಲ್ಲೇ ಮಾತನಾಡಿದ್ದ ಡೊನಾಲ್ಡ್‌ ಟ್ರಂಪ್‌ ಭಾರತ ಸುಂಕವನ್ನು ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದು ಹೇಳಿದ್ದರು. ಆದರೆ, ಸುಂಕ ಕಡಿತದ ಬಗ್ಗೆ ತಾನೂ ಯಾವುದೇ ಭರವಸೆಯನ್ನು ನೀಡಿಲ್ಲ ಎಂದು ಭಾರತ ಸರ್ಕಾರ ಸ್ಪಷ್ಟಪಡಿಸಿತ್ತು.

    ಈ ಬೆನ್ನಲ್ಲೇ ವೈಟ್‌ ಹೌಸ್‌ನ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್‌ ಲೀವಿಟ್‌ (Karoline Leavitt) ಭಾರತ ವಿಧಿಸುತ್ತಿರುವ ಸುಂಕವನ್ನು ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ಹಿಂದೆ ಟ್ರಂಪ್‌ ಕೂಡ ಭಾರತದಲ್ಲಿ ಯಾವುದೇ ಉತ್ಪನ್ನ ಮಾರಾಟ ಮಾಡಲು ಆಗಲ್ಲ ಎಂದು ಟೀಕಿಸಿದ್ದರು. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ನನ್ನು ಪೊಲೀಸರ ವಶದಿಂದ ಬಿಡಿಸಲು ಯತ್ನ – ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾದ ಅಮನ್ ಸಾವೊ!

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೀವಿಟ್‌, ಡೊನಾಲ್ಡ್ ಟ್ರಂಪ್ ಅವರು ಭಾರತದ ಜೊತೆ ಉತ್ತಮ ಸಂಬಂಧ ಕಾಪಾಡಿಕೊಳ್ಳಲು ಬಯಸುತ್ತಿದ್ದಾರೆ. ಆದ್ರೆ ಅದಕ್ಕೆ ನ್ಯಾಯಯುತ ಮತ್ತು ಸಮತೋಲಿತ ವ್ಯಾಪಾರ ಪದ್ಧತಿಯು ಬೇಕೆಂಬುದು ಅವರ ವಾದ ಎಂದಿದ್ದಾರೆ.

    ಇದೇ ವೇಳೆ ಕೆನಡಾ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಕೆನಡಾ ಸಹ ಅಮೆರಿಕ ಉತ್ಪನ್ನಗಳ ಮೇಲೆ ವಿಧಿಸುತ್ತಿರುವ ಸುಂಕವು ದಶಕಗಳಿಂದ ಅಮೆರಿಕ ಹಾಗೂ ಅಮೆರಿಕನ್ನರ ಶ್ರಮವನ್ನು ಹಾಳು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ತಡರಾತ್ರಿ ಮಟನ್ ಸಾರು ಮಾಡಲು ನಿರಾಕರಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ