Tag: donation

  • ಆಂಜನೇಯ ದೇಗುಲ ನಿರ್ಮಾಣಕ್ಕೆ 1.83 ಲಕ್ಷ ದೇಣಿಗೆ ನೀಡಿದ ಭಿಕ್ಷುಕಿ

    ಆಂಜನೇಯ ದೇಗುಲ ನಿರ್ಮಾಣಕ್ಕೆ 1.83 ಲಕ್ಷ ದೇಣಿಗೆ ನೀಡಿದ ಭಿಕ್ಷುಕಿ

    – ದೇವರ ಕಾರ್ಯದಲ್ಲಿ ತನ್ನದೂ ಪಾಲಿರಲಿ ಅಂತ ದೇಣಿಗೆ

    ರಾಯಚೂರು: ಆಂಜನೇಯ ದೇಗುಲ ನಿರ್ಮಾಣಕ್ಕಾಗಿ ವಯಸ್ಸಾದ ಭಿಕ್ಷುಕಿಯೊಬ್ಬರು 1.83 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಅಚ್ಚರಿ ಮೂಡಿಸಿರುವ ಘಟನೆ ರಾಯಚೂರು (Raichuru) ತಾಲೂಕಿನ ಬಿಜನಗೇರಾ ಗ್ರಾಮದಲ್ಲಿ ನಡೆದಿದೆ.

    ಹೌದು, ದಾನ ಮಾಡಲು, ದೇಣಿಗೆ ನೀಡಲು ಶ್ರೀಮಂತರೇ ಆಗಬೇಕಿಲ್ಲ. ಹೃದಯ ಶ್ರೀಮಂತಿಕೆಯಿದ್ರೆ ಭಿಕ್ಷುಕರು ಸಹ ಲಕ್ಷಾಂತರ ರೂಪಾಯಿ ದೇಣಿಗೆ ನೀಡಬಹುದು. ಹಾಗೆಯೇ 60 ವರ್ಷದ ರಂಗಮ್ಮ ಎಂಬುವವರು ಭಿಕ್ಷೆಯಿಂದ ಬಂದ ಹಣದಲ್ಲೇ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದಾರೆ.

    ಸುಮಾರು 30 ವರ್ಷಗಳ ಹಿಂದೆ ಆಂಧ್ರಪ್ರದೇಶದಿಂದ ಬಂದು ಬಿಜನಗೇರಾ ಗ್ರಾಮದಲ್ಲಿ ಏಕಾಂಗಿಯಾಗಿ ವಾಸಿಸುತ್ತಿರುವ ರಂಗಮ್ಮ ಭಿಕ್ಷುಕಿಯಾದ್ರು ಮಹಾದಾನಿಯಾಗಿದ್ದಾಳೆ. ಯಾರ ಬಳಿಯೂ ಮಾತನಾಡದ ವೃದ್ಧೆ ಡಬ್ಬಿ, ಗಂಟುಗಳಲ್ಲಿ ಕೂಡಿಟ್ಟಿದ್ದ ಹಣ ಆಕಸ್ಮಿಕವಾಗಿ ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಗ್ರಾಮಸ್ಥರೇ ಹಣವನ್ನ ಎಣಿಸಿ, ಈ ಹಣ ಏನು ಮಾಡುತ್ತಿಯಾ ಅಂತ ವೃದ್ಧೆಯನ್ನ ಕೇಳಿದ್ದಾರೆ. ಆಗ ಅವರು ದೇವಸ್ಥಾನ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡುವುದಾಗಿ ತಿಳಿಸಿದ್ದಾರೆ.ಇದನ್ನೂ ಓದಿ: ಟ್ಯಾರಿಫ್‌ ವಾರ್‌ಗೆ ಸೆಡ್ಡು| P-8I ವಿಮಾನ ಖರೀದಿಸಲ್ಲ ಎಂದ ಭಾರತ

    ಇದಕ್ಕೂ ಮುನ್ನ ನಾಲ್ಕು ವರ್ಷಗಳ ಹಿಂದೆ ವೃದ್ಧೆಯ ಬಳಿ 30 ಸಾವಿರ ರೂ. ಇರುವುದನ್ನ ಗಮನಿಸಿದ ಗ್ರಾಮಸ್ಥರು ಪುಟ್ಟ ಸೂರನ್ನ ನಿರ್ಮಿಸಿ ಕೊಟ್ಟಿದ್ದರು. 4*5 ಅಡಿ ಸೂರಿನಲ್ಲೇ ಇರುವ ರಂಗಮ್ಮಳಿಗೆ ಜನ ಇದ್ದಲ್ಲಿಗೆ ಬಂದು ಭಿಕ್ಷೆ ಕೊಟ್ಟು ಹೋಗುತ್ತಾರೆ. ಊರಿನವರೇ ಸೀರೆ, ಊಟ ಕೊಡುತ್ತಿದ್ದಾರೆ. ದಾರಿಹೋಕರು, ಆಟೋ ರಿಕ್ಷಾ ಚಾಲಕರು, ಟಂಟಂ ಚಾಲಕರು ವೃದ್ಧೆಗೆ ಹಣ ನೀಡಿದರೆ ತಮ್ಮ ವ್ಯಾಪಾರ ಜೋರಾಗಿ ನಡೆಯುತ್ತದೆ ಎಂದು ನಿತ್ಯ ಹತ್ತು, ಇಪ್ಪತ್ತು, ನೂರು ರೂಪಾಯಿ ಸೇರಿ ತಿಳಿದಷ್ಟು ಕೊಡುತ್ತಾರೆ. ಈ ಭಿಕ್ಷೆಯ ಹಣವನ್ನೇ ವೃದ್ಧೆ ದೇವಸ್ಥಾನದ ನಿರ್ಮಾಣಕ್ಕೆ ತನ್ನ ಸೇವೆಯೂ ಇರಲಿ ಅಂತ ನೀಡಿದ್ದಾರೆ. ದೇವಸ್ಥಾನಗಳ ಮುಂದೆ ಸಾಮಾನ್ಯವಾಗಿ ಭಿಕ್ಷುಕರು ಕಾಣುತ್ತಾರೆ ಆದ್ರೆ ಇಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಭಿಕ್ಷುಕಿಯೊಬ್ಬರು ದೇಣಿಗೆ ನೀಡಿದ್ದಾರೆ.

    ಊಟಕ್ಕಾಗಿ ಮಾತ್ರ ಕೈ ಚಾಚುವ ರಂಗಮ್ಮನ ಬಳಿಯಿದ್ದ ದುಡ್ಡನ್ನ ಕೆಲ ಪುಂಡರು ಕದ್ದಿರುವ ಉದಾಹರಣೆಗಳೂ ಇವೆ. ತೆಲುಗು ಭಾಷೆ ಮಾತನಾಡುವ ರಂಗಮ್ಮ ಯಾರೊಂದಿಗೂ ಬೆರೆಯದೇ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದಾರೆ. ಇತ್ತೀಚಿಗೆ ದೇವಸ್ಥಾನ ಲೋಕಾರ್ಪಣೆಯಾಗಿದ್ದು, ರಂಗಮ್ಮ ಗ್ರಾಮದ ದೈವದ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಗ್ರಾಮಸ್ಥರು ರಂಗಮ್ಮನ ಬಗ್ಗೆ ಈಗ ಹೆಮ್ಮೆ ವ್ಯಕ್ತಪಡಿಸುತ್ತಿದ್ದು, ಸನ್ಮಾನಿಸಿ ಗೌರವಿಸಿದ್ದಾರೆ.ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍್ಯ – ರಾಹುಲ್ ವಿರುದ್ಧ ಹೆಚ್‌ಡಿಕೆ ಕಿಡಿ

  • ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹ

    ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹ

    -ಭಕ್ತರಿಂದ 62 ಗ್ರಾಂ ಚಿನ್ನ, 2.513 ಕೆಜಿ ಬೆಳ್ಳಿ ಅರ್ಪಣೆ

    ಚಾಮರಾಜನಗರ: ಜಿಲ್ಲೆಯ ಹನೂರು (Hanur) ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ (Male Mahadeshwara Temple) ಮತ್ತೆ ಕೋಟ್ಯಧೀಶನಾಗಿದ್ದಾನೆ.

    ಮಹದೇಶ್ವರನ ಹುಂಡಿಯಲ್ಲಿ ಕಳೆದ 27 ದಿನಗಳ ಅವಧಿಯಲ್ಲಿ 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ನಗದು ಹಣ ಜೊತೆಗೆ 62 ಗ್ರಾಂ ಚಿನ್ನ, 2.51 ಕೆಜಿ ಬೆಳ್ಳಿಯನ್ನು ಭಕ್ತರು ಮಲೆ ಮಾದಪ್ಪನಿಗೆ ಅರ್ಪಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್‌ ವಿಧಿವಶ

    ಬಿಗಿ ಬಂದೋಬಸ್ತ್‌ನಲ್ಲಿ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಬಾರಿ ದೀಪಾವಳಿ ಹಬ್ಬ, ಅಮವಾಸ್ಯೆ ಹಾಗೂ ಕಾರ್ತಿಕ ಸೋಮವಾರ ಹಿನ್ನೆಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರನ ದರ್ಶನ ಪಡೆದಿದ್ದರು. ಈ ಹಿನ್ನೆಲೆ ಹುಂಡಿ ಆದಾಯದಲ್ಲೂ ಕೂಡ ಏರಿಕೆಯಾಗಿದೆ. ಇದನ್ನೂ ಓದಿ: ಧಾರವಾಡದಲ್ಲಿ ತಾಯಂದಿರಿಂದಲೇ ಮಕ್ಕಳ ಕಿಡ್ನ್ಯಾಪ್‌ – ತಾಯಂದಿರು, ಅವರ ಪ್ರೇಮಿಗಳು ಅರೆಸ್ಟ್‌

  • ನಿರ್ದೇಶಕರ ಸಂಘಕ್ಕೆ ಲಕ್ಷ ಲಕ್ಷ ದೇಣಿಗೆ ನೀಡಿದ ನಟ ಪ್ರಭಾಸ್

    ನಿರ್ದೇಶಕರ ಸಂಘಕ್ಕೆ ಲಕ್ಷ ಲಕ್ಷ ದೇಣಿಗೆ ನೀಡಿದ ನಟ ಪ್ರಭಾಸ್

    ತೆಲುಗಿನ ಖ್ಯಾತ ನಟ ಪ್ರಭಾಸ್ (Prabhas), ದೇಣಿಗೆ ಕೊಡುವ ಕಾರಣದಿಂದಾಗಿ ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತಾರೆ. ಅದೇ ಕಾರಣಕ್ಕಾಗಿ ಮತ್ತೊಮ್ಮೆ ಸುದ್ದಿ ಆಗಿದ್ದಾರೆ. ತೆಲುಗು ಸಿನಿಮಾ ನಿರ್ದೇಶಕರ ಸಂಘಕ್ಕೆ (Directors Association) ಅವರು ಬರೋಬ್ಬರಿ 35 ಲಕ್ಷ ರೂಪಾಯಿಯನ್ನು ದೇಣಿಗೆಯಾಗಿ (Donation) ನೀಡಿದ್ದಾರೆ. ತಮ್ಮ ಬೆಳವಣಿಗೆಯಲ್ಲಿ ನಿರ್ದೇಶಕರ ಪಾತ್ರ ತುಂಬಾ ಇದೆ ಎನ್ನುವ ಉದ್ದೇಶದಿಂದ ಇಂಥದ್ದೊಂದು ಕೆಲಸ ಮಾಡಿದ್ದಾರೆ.

    ಸದ್ಯ ಪ್ರಭಾಸ್ ಕಲ್ಕಿ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಕಲ್ಕಿ (Kalki) ಸಿನಿಮಾದ ಬಿಡುಗಡೆ ದಿನಾಂಕ ಬದಲಾಗುತ್ತಲೇ ಇದೆ. ಈಗಾಗಲೇ ಎರಡು ಬಾರಿ ಡೇಟ್ ಬದಲಾವಣೆಯ ಬಗ್ಗೆ ಚರ್ಚೆಯಾಗಿದೆ. ಅಂತಿಮವಾಗಿ ಜೂನ್ 20ರಂದು ಚಿತ್ರ ಬಿಡುಗಡೆ (Release) ಮಾಡುವುದಾಗಿ ತಿಳಿದುಬಂದಿದೆ. ಚುನಾವಣೆ, ಫಲಿತಾಂಶ ಎಲ್ಲವೂ ಮುಗಿದ ನಂತರ ಕಲ್ಕಿ ಬಿಡುಗಡೆ ಆಗಲಿದೆ.

     

    ಬಿಡುಗಡೆಗೂ ಮುನ್ನ ಕಲ್ಕಿ ಸಿನಿಮಾ ನೂರು ಕೋಟಿ ಕ್ಲಬ್ ಸೇರಿತಾ? ಹೌದು ಎನ್ನುತ್ತಿದೆ ಬಿಟೌನ್. ಹಿಂದಿ ಭಾಷೆಯಲ್ಲೇ ಕಲ್ಕಿ 175 ಕೋಟಿ ರೂಪಾಯಿಗೆ ಒಟಿಟಿಗೆ (OTT) ಸೇಲ್ ಆಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ದಕ್ಷಿಣದ ಭಾಷೆಗಳಿಗೂ ನೂರಾರು ಕೋಟಿ ಕೊಟ್ಟು ಖರೀದಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸಿನಿಮಾ ರಿಲಿಸ್ ಗೂ ಮುನ್ನ ದಾಖಲೆಯ ಮೊತ್ತ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ.

  • ಅಯೋಧ್ಯೆ ರಾಮಮಂದಿರಕ್ಕೆ 2.51 ಕೋಟಿ ರೂ. ದೇಣಿಗೆ ನೀಡಿದ ಮುಕೇಶ್ ಅಂಬಾನಿ

    ಅಯೋಧ್ಯೆ ರಾಮಮಂದಿರಕ್ಕೆ 2.51 ಕೋಟಿ ರೂ. ದೇಣಿಗೆ ನೀಡಿದ ಮುಕೇಶ್ ಅಂಬಾನಿ

    ಅಯೋಧ್ಯೆ: ರಾಮಮಂದಿರದಲ್ಲಿ (Ram Mandir) ಇಂದು ನಡೆದ ರಾಮಲಲ್ಲಾ (Ram Lalla) ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಾಲರಾಮನ ದರ್ಶನ ಪಡೆದ ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ರಾಮಮಂದಿರಕ್ಕೆ 2.51 ಕೋಟಿ ರೂ. ದೇಣಿಗೆ ನೀಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರದ ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಿರ್ವಿಘ್ನವಾಗಿ ನೇರವೇರಿದೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಮುಖ ನಾಯಕರು ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗುವ ಮೂಲಕ ಬಾಲರಾಮನ ಪ್ರಾಣಪ್ರತಿಷ್ಠೆಯನ್ನು ಕಣ್ತುಂಬಿಕೊಂಡರು. ಈ ಕಾರ್ಯಕ್ರಮದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಲ್ಲದೇ ರಾಮಮಂದಿರಕ್ಕೆ 2.51 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಇದನ್ನೂ ಓದಿ: ಬಾಲ`ರಾಮ’ನ ಪಾದ ಸೇರಿತು `ಕಮಲ’..!

    ಮುಕೇಶ್ ಅಂಬಾನಿ ದೇಣಿಗೆ ನೀಡಿರುವ ಕುರಿತು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮುಕೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ, ಮಗಳು ಇಶಾ ಮತ್ತು ಅಳಿಯ ಆನಂದ್ ಪಿರಾಮಲ್, ಪುತ್ರರಾದ ಆಕಾಶ್ ಮತ್ತು ಅನಂತ್, ಸೊಸೆ ಶ್ಲೋಕಾ ಮೆಹ್ತಾ ಮತ್ತು ರಾಧಿಕಾ ಮರ್ಚೆಂಟ್ ಭಾಗಿಯಾಗಿದ್ದರು. ಇದನ್ನೂ ಓದಿ: ಅಯೋಧ್ಯೆಯಿಂದ ಹಿಂದಿರುಗಿದ ನಂತರ ನನ್ನ ಮೊದಲ ನಿರ್ಧಾರ – ಹೊಸ ಯೋಜನೆ ಘೋಷಿಸಿದ ಮೋದಿ

    ಬಾಲರಾಮನ ಪ್ರಾಣಪ್ರತಿಷ್ಠೆ ಕುರಿತು ಮಾತನಾಡಿದ ಅಂಬಾನಿ, ಇಂದು ಭಗವಾನ್ ರಾಮ ಆಗಮಿಸಿದ್ದಾರೆ. ಜನವರಿ 22 ಇಡೀ ದೇಶಕ್ಕೆ ರಾಮ ದೀಪಾವಳಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಕುರಿತು ಮಾತನಾಡಿದ ನೀತಾ ಅಂಬಾನಿ, ‘ಇದೊಂದು ಐತಿಹಾಸಿಕ ದಿನ’ ಎಂದು ಸಂತಸ ವ್ಯಕ್ತಪಡಿಸಿದರು. ಇನ್ನು ವಿಧಿವಿಧಾನಗಳನ್ನು ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಸಮಾರಂಭವು ಹೊಸ ಯುಗದ ಆಗಮನವನ್ನು ಸೂಚಿಸುತ್ತದೆ ಎಂದರು. ಇದನ್ನೂ ಓದಿ: ಮನೆ-ಮನಗಳಲ್ಲಿ ದೀಪೋತ್ಸವ – ʻರಾಮ ಜ್ಯೋತಿʼ ಬೆಳಗಿಸಿದ ಪ್ರಧಾನಿ ಮೋದಿ

  • ಪರೀಕ್ಷೆ ಶುಲ್ಕ ಪಾವತಿಸದ್ದಕ್ಕೆ ಚಪ್ಪಲಿ ಬಿಡುವ ಜಾಗದಲ್ಲಿ ಮಕ್ಕಳನ್ನು ಕೂರಿಸಿ ಶಿಕ್ಷೆ!

    ಪರೀಕ್ಷೆ ಶುಲ್ಕ ಪಾವತಿಸದ್ದಕ್ಕೆ ಚಪ್ಪಲಿ ಬಿಡುವ ಜಾಗದಲ್ಲಿ ಮಕ್ಕಳನ್ನು ಕೂರಿಸಿ ಶಿಕ್ಷೆ!

    ಕಾರವಾರ: ಪೋಷಕರು ಶಾಲೆಯ ಡೊನೇಷನ್ ಶುಲ್ಕ (Examination Fees) ಪಾವತಿಸದ್ದಕ್ಕೆ ವಿದ್ಯಾರ್ಥಿಗಳಿಗೆ (Students) ಪರೀಕ್ಷೆ ಬರೆಯಲು ನಿರಾಕರಿಸಿ ಶಾಲೆಯ ಮುಖ್ಯೋಪಾಧ್ಯಾಯರ ಕೊಠಡಿಯ ಬಳಿ ಚಪ್ಪಲಿ ಬಿಡುವ ಜಾಗದಲ್ಲಿ ಮಕ್ಕಳನ್ನು ಕೂರಿಸಿ ಶಿಕ್ಷೆ ನೀಡಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ (Karwar) ನಗರದ ಸರ್ಕಾರಿ ಅನುದಾನಿತ ಸೈಂಟ್ ಮೈಕಲ್ ಕಾನ್ವೆಂಟ್ ಶಾಲೆಯಲ್ಲಿ ನಡೆದಿದೆ.

    ಕ್ರಿಶ್ಚಿನ ಜೋಸೆಫ್ ಮಕ್ಕಳಿಗೆ ಪರೀಕ್ಷೆ ನಿರಾಕರಿಸಿದ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದು ಫಾರ್ಮೆಟಿವ್ ಅಸೈನ್ಮೆಂಟ್ ಎಂಬ ಪರೀಕ್ಷೆ ಬರೆಯಲು 6, 7 ಮತ್ತು 8ನೇ ತರಗತಿಯ ಶುಲ್ಕ ಪಾವತಿಸದ ಮಕ್ಕಳಿಗೆ ನಿರಾಕರಣೆ ಮಾಡಿ ಶಿಕ್ಷೆ (Punishment) ನೀಡಲಾಗಿದೆ. ಇದನ್ನೂ ಓದಿ: ಬಾಂಬ್ ಸ್ಫೋಟಕ್ಕೆ ಮುಂದಾಗಿದ್ದ ಬಳ್ಳಾರಿ ಐಸಿಸ್‌ ಟೀಂ – ದಾಳಿಯಲ್ಲಿ ಏನು ಸಿಕ್ಕಿದೆ?

    ಪ್ರತಿ ಮಕ್ಕಳಿಗೆ ವರ್ಷಕ್ಕೆ 20 ಸಾವಿರ ಡೊನೇಷನ್ ಅನ್ನು ಶಾಲಾ ಆಡಳಿತ ಮಂಡಳಿಯು ಪೋಷಕರಿಂದ ಸಂಗ್ರಹಿಸುತ್ತದೆ. ಹಲವು ಜನ ಕಂತಿನ ಮೂಲಕ ನೀಡುವುದರಿಂದ ಕೆಲವು ಪೋಷಕರು ಸಂಪೂರ್ಣ ಹಣ ತುಂಬಿರಲಿಲ್ಲ. ಈ ಹಿನ್ನೆಲೆಯಲ್ಲಿ 6, 7, 8ನೇ ತರಗತಿಯ ಶುಲ್ಕ ಭರಿಸದ ಮಕ್ಕಳಿಗೆ ಪರೀಕ್ಷೆ ನಿರಾಕರಣೆ ಮಾಡಿ ದೌರ್ಜನ್ಯ ಎಸಗಲಾಗಿದೆ. ಇದನ್ನೂ ಓದಿ: ಮಾರತಹಳ್ಳಿ, ಮಲ್ಲೇಶ್ವರಂನಲ್ಲಿ ಅಗ್ನಿ ದುರಂತ – ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ

  • ಮಂತ್ರಾಲಯ ರಾಯರ ಮಠದಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹ

    ಮಂತ್ರಾಲಯ ರಾಯರ ಮಠದಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹ

    ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ (Mantralaya) ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ (Raghavendra Swami Mutt) ಕಳೆದ ಒಂದು ತಿಂಗಳಲ್ಲಿ ಭಕ್ತರಿಂದ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಒಟ್ಟು 3,82,59,839 ರೂ. ಕಾಣಿಕೆ ಸಂಗ್ರಹವಾಗಿದೆ.

    ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ 3,74,85,859 ರೂ. ಕರೆನ್ಸಿ ನೋಟುಗಳು ಹಾಗೂ 7,73,980 ರೂ. ನಾಣ್ಯಗಳ ಸಂಗ್ರಹವಾಗಿದೆ. 53 ಗ್ರಾಂ ಚಿನ್ನ ಹಾಗೂ 1,200 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಿದೇಶಿ ಮಹಿಳೆಯ ಬ್ಯಾಗ್‍ನಲ್ಲಿ ಲಕ್ಷ ಲಕ್ಷ ಹಣ ಪತ್ತೆ!

    ಮುಜರಾಯಿ ಇಲಾಖೆ ಅಧಿಕಾರಿಗಳು, ಗುರುಪಾದ ಕರಸೇವಕರು, ನೂರಾರು ಜನ ಸಿಬ್ಬಂದಿ ಹಾಗೂ ಭಕ್ತರು ಕಾಣಿಕೆ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಆಗಸ್ಟ್ ತಿಂಗಳಲ್ಲಿ ಒಟ್ಟು 3,76,67,469 ರೂ. ಕಾಣಿಕೆ ಸಂಗ್ರಹವಾಗಿತ್ತು. ಈ ಬಾರಿ ಅತಿ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಇದನ್ನೂ ಓದಿ: ಕರ್ನಾಟಕ ಬಂದ್ ದಿನವೇ CWMA ಸಭೆ – ನೀರು ಹಂಚಿಕೆಯಲ್ಲಿ ಸಿಗಲಿದ್ಯಾ ರಿಲೀಫ್?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಂಬೆ ಐಐಟಿಗೆ 315 ಕೋಟಿ ರೂ. ದೇಣಿಗೆ ನೀಡಿದ ಇನ್ಫೋಸಿಸ್ ಸಹ ಸಂಸ್ಥಾಪಕ

    ಬಾಂಬೆ ಐಐಟಿಗೆ 315 ಕೋಟಿ ರೂ. ದೇಣಿಗೆ ನೀಡಿದ ಇನ್ಫೋಸಿಸ್ ಸಹ ಸಂಸ್ಥಾಪಕ

    ನವದೆಹಲಿ: ಇನ್ಫೋಸಿಸ್ (Infosys) ಸಹ ಸಂಸ್ಥಾಪಕ ನಂದನ್ ನಿಲೇಕಣಿ (Nandan Nilekani) ಅವರು ತಾವು ಎಂಜಿನಿಯರಿಂಗ್ ಪದವಿ ಪಡೆದ ‘ಬಾಂಬೆ ಐಐಟಿ’ಗೆ (IIT Bombay) ಬರೋಬ್ಬರಿ 315 ಕೋಟಿ ರೂ. ದೇಣಿಗೆ ನೀಡಿದ್ದಾರೆ.

    ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಉತ್ತೇಜಿಸಲು, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯಲ್ಲಿ ಸಂಶೋಧನೆಗೆ ಸಹಾಯ ಮಾಡಲು ಹಾಗೂ ಬಾಂಬೆಯ ಐಐಟಿಯಲ್ಲಿ ಉತ್ತಮವಾದ ಟೆಕ್ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯನ್ನು ಪೋಷಿಸಲು ಈ ದೇಣಿಗೆಯ (Donation) ಮುಖ್ಯ ಉದ್ದೇಶವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿಲಾಗಿದೆ. ಮಾತ್ರವಲ್ಲದೇ ಇದು ಭಾರತದಲ್ಲಿ ಹಳೆ ವಿದ್ಯಾರ್ಥಿಯೊಬ್ಬರು ನೀಡಿರುವ ಅತಿ ದೊಡ್ಡ ದೇಣಿಗೆಗಳಲ್ಲಿ ಒಂದು ಎನಿಸಿಕೊಂಡಿದೆ.

    ಈ ಬಗ್ಗೆ ತಿಳಿಸಿರುವ ನಿಲೇಕಣಿ, ಬಾಂಬೆ ಐಐಟಿ ನನ್ನ ಜೀವನದ ಮೂಲಾಧಾರವಾಗಿದೆ. ನನ್ನ ಭವಿಷ್ಯವನ್ನು ಉತ್ತಮವಾಗಿ ರೂಪಿಸಿ, ಈ ಪ್ರಯಾಣಕ್ಕೆ ಅಡಿಪಾಯ ಹಾಕಿದೆ. ಈ ಗೌರವಾನ್ವಿತ ಸಂಸ್ಥೆಯೊಂದಿಗೆ ನನ್ನ 50 ವರ್ಷಗಳ ಒಡನಾಟ ಈಗ ಪೂರೈಸಿದ್ದು, ಅದಕ್ಕೆ ಭವಿಷ್ಯ ಹಾಗೂ ಕೊಡುಗೆಯನ್ನು ನೀಡಲು ನಾನು ಕೃತಜ್ಞನಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಟ್ರಕ್‌ಗಳಲ್ಲಿ ಹವಾನಿಯಂತ್ರಿತ ಡ್ರೈವರ್‌ ಕ್ಯಾಬಿನ್‌ಗಳು ಕಡ್ಡಾಯ: ನಿತಿನ್‌ ಗಡ್ಕರಿ

    ಈ ದೇಣಿಗೆ ಕೇವಲ ಹಣಕಾಸಿನ ಕೊಡುಗೆಗಿಂತಲೂ ಹೆಚ್ಚಿನದ್ದಾಗಿದೆ. ಇದು ನನಗೆ ಹೆಚ್ಚಿನದನ್ನು ನೀಡಿರುವ ಸ್ಥಳಕ್ಕೆ ಗೌರವವಾಗಿದ್ದು, ನಾಳೆ ನಮ್ಮ ಜಗತ್ತನ್ನು ರೂಪಿಸುವ ವಿದ್ಯಾರ್ಥಿಗಳಿಗೆ ಬದ್ಧತೆಯಾಗಿದೆ ಎಂದು ಅವರು ಹೇಳಿದ್ದಾರೆ.

    ಐಐಟಿ ಬಾಂಬೆಯ ಹಳೆಯ ವಿದ್ಯಾರ್ಥಿಯಾಗಿರುವ ನಿಲೇಕಣಿ 1973ರಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಂಸ್ಥೆಯೊಂದಿಗಿನ ಒಡನಾಟಕ್ಕೆ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಅವರು ಈಗ 315 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ಹಿಂದೆ ಅವರು 85 ಕೋಟಿ ರೂ. ದೇಣಿಗೆ ನೀಡಿದ್ದರು. ಹೀಗಾಗಿ ಅವರು ಸಂಸ್ಥೆಗೆ ಒಟ್ಟು 400 ಕೋಟಿ ರೂ. ದೇಣಿಗೆ ನೀಡಿದಂತಾಗುತ್ತದೆ. ಇದನ್ನೂ ಓದಿ: ಜಲಾಂತರ್ಗಾಮಿ ನಾಪತ್ತೆ – ಟೈಟಾನಿಕ್ ನೋಡಲು ತೆರಳಿದ್ದ ಪ್ರವಾಸಿಗರಲ್ಲಿದ್ರು ಪಾಕಿಸ್ತಾನದ ಶ್ರೀಮಂತ

  • ಕಾಶ್ಮೀರಿ ಪಂಡಿತರಿಗೆ ಲಕ್ಷಗಳ ರೂಪದಲ್ಲಿ ನೆರವಿನ ಹಸ್ತಚಾಚಿದ ನಟ ಅನುಪಮ್ ಖೇರ್

    ಕಾಶ್ಮೀರಿ ಪಂಡಿತರಿಗೆ ಲಕ್ಷಗಳ ರೂಪದಲ್ಲಿ ನೆರವಿನ ಹಸ್ತಚಾಚಿದ ನಟ ಅನುಪಮ್ ಖೇರ್

    ದಿ ಕಾಶ್ಮೀರ್ ಫೈಲ್ಸ್  (The Kashmiri Files)ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಬಾಲಿವುಡ್ ನಟ ಅನುಪಮ್ ಖೇರ್ (Anupam Kher), ಕಾಶ್ಮೀರಿ ಪಂಡಿತರಿಗೆ (Kashmiri Pandit) ನೆರವಿನ ಹಸ್ತ (Donation)ಚಾಚಿದ್ದಾರೆ. ದೆಹಲಿಯಲ್ಲಿ ನಡೆದ ಗ್ಲೋಬಲ್ ಕಾಶ್ಮೀರಿ ಪಂಡಿತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ‘ನಿಮ್ಮಿಂದ ನಾವು ದುಡ್ಡು ಮಾಡಿದ್ದೇವೆ. ನಿಮಗೆ ಸಹಾಯ ಮಾಡುವುದು ನಮ್ಮ ಕರ್ತವ್ಯ’ ಎಂದಿರುವ ಅವರು ಐದು ಲಕ್ಷ ರೂಪಾಯಿ ದೇಣಿಗೆ ಘೋಷಿಸಿದ್ದಾರೆ.

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ 2022 ಮಾರ್ಚ್ 11ರಂದು ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿತ್ತು. ಈ ಸಿನಿಮಾವನ್ನು ಎಲ್ಲರಿಗೂ ತೋರಿಸುವ ಉದ್ದೇಶದಿಂದ ನಾನಾ ರಾಜ್ಯಗಳ ಸರಕಾರವು ತೆರಿಗೆ ವಿನಾಯತಿ ಕೂಡ ಘೋಷಣೆ ಮಾಡಿದ್ದವು. ಅಲ್ಲದೇ, ಅನೇಕ ರಾಜ್ಯಗಳಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಂಡಿತು. ಫಲವಾಗಿ ಬರೋಬ್ಬರಿ 340 ಕೋಟಿ ರೂಪಾಯಿ ಸಿನಿಮಾ ಸಂಪಾದಿಸಿತು. ಇದನ್ನೂ ಓದಿ: ನಟ ಉಪೇಂದ್ರ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣಾ ಆಯೋಗ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತಾಗಿ ಈಗಲೂ ಭಿನ್ನಾಭಿಪ್ರಾಯಗಳು ಇದ್ದರೂ, ಆ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತು. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಸಿನಿಮಾ ಪ್ರದರ್ಶನವಾಯಿತು. ಅನೇಕ ಪ್ರಶಸ್ತಿಗಳು ಸಿನಿಮಾವನ್ನು ಹುಡುಕಿಕೊಂಡು ಬಂದವು. ಈಗಲೂ ಓಟಿಟಿಯಲ್ಲಿ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಚಿತ್ರ ಸಾಕಷ್ಟು ದುಡ್ಡು ಮಾಡಿದೆ.

    ಈ ಎಲ್ಲ ಕಾರಣದಿಂದಾಗಿ ಕಾಶ್ಮೀರಿ ಪಂಡಿತ್ ಕಾನ್ ಕ್ಲೇವ್ ದಲ್ಲಿ ಮಾತನಾಡಿದ ಅನುಪಮ್ ಖೇರ್, ‘ನಮ್ಮ ಜನರಿಗೆ ನಾನು ನೆರವಿನ ಹಸ್ತ ಚಾಚುವಂತಹ ಸಮಯ ಬಂದಿದೆ. ಈ ಸಮಯದಲ್ಲಿ ನಾವು ಕಾಶ್ಮೀರಿ ಪಂಡಿತರ ಜೊತೆ ನಿಂತುಕೊಳ್ಳಬೇಕು. ಅವರಿಂದ ದುಡ್ಡು ಮಾಡಿದ್ದೇವೆ. ಆ ಎಚ್ಚರಿಕೆ ನಮ್ಮಲ್ಲಿ ಇರಬೇಕು’ ಎಂದು ಅವರು ಭಾವುಕರಾಗಿ ಮಾತನಾಡಿದ್ದಾರೆ.

  • ನಿಮಿಷದಲ್ಲೇ 35 ಲಕ್ಷ ರೂ. ದಾನ ಮಾಡಿದ ಎಂಟಿಬಿ ನಾಗರಾಜ್

    ನಿಮಿಷದಲ್ಲೇ 35 ಲಕ್ಷ ರೂ. ದಾನ ಮಾಡಿದ ಎಂಟಿಬಿ ನಾಗರಾಜ್

    ಚಿಕ್ಕಬಳ್ಳಾಪುರ: ರಾಜ್ಯ ಪೌರಾಡಳಿತ ಇಲಾಖಾ ಸಚಿವ ಹಾಗೂ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ (MTB Nagaraj) ಕೇವಲ ಒಂದೇ ನಿಮಿಷದಲ್ಲಿ ಹಿಂದೆ ಮುಂದೆ ನೋಡದೇ 35 ಲಕ್ಷ ರೂಪಾಯಿ ದಾನ ಮಾಡಿದ್ದಾರೆ.

    ಅಂದಹಾಗೆ ಚಿಕ್ಕಬಳ್ಳಾಪುರ ಹೊರವಲಯದ ಜೈನ್ ಆಸ್ಪತ್ರೆ ಅವರಣದಲ್ಲಿ ದಿವಂಗತ ಮಂಗಿಶೆಟ್ಟಿ ನರಸಿಂಹಯ್ಯ ರಂಗಮ್ಮ ಟ್ರಸ್ಟ್ ಹಾಗೂ ಜೈನ್ ಮಿಷನ್ ಆಸ್ಪತ್ರೆ ನೇತೃತ್ವದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಕಾರದೊಂದಿಗೆ ಉಚಿತ ಕೃತಕ ಕಾಲು ಜೋಡಣಾ ಶಿಬಿರದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಎಂಟಿಬಿ ನಾಗರಾಜ್ ಅವರು ಆಗಮಿಸಿದ್ದರು. ಇದನ್ನೂ ಓದಿ: ‘ಕರ್ನಾಟಕ ರತ್ನ’ದ ಅರ್ಥನೇ ಪುನೀತ್ ರಾಜ್ ಕುಮಾರ್ : ಜ್ಯೂನಿಯರ್ ಎನ್.ಟಿ.ಆರ್

    ಕಾಲಿಲ್ಲದ ವಿಶೇಷಚೇತನರಿಗೆ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಷನ್ ವತಿಯಿಂದ ಉಚಿತವಾಗಿ ಕೃತಕ ಕಾಲು ಜೋಡಣೆ ಶಿಬಿರ ಇದಾಗಿತ್ತು. ಸರಿಸುಮಾರು 200 ಮಂದಿ ಕಾಲಿಲ್ಲದ ಕೈ ಇಲ್ಲದ ವಿಶೇಷಚೇನತರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾಲು ಜೋಡಣೆ ಮಾಡಿಕೊಳ್ಳಲು ಆಗಮಿಸಿದ್ದರು. ಇವರನ್ನು ಕಂಡು ಎಂಟಿಬಿ ನಾಗರಾಜ್‍ರವರ ಮನಸ್ಸು ಕರಗಿದೆ. ಇದನ್ನೂ ಓದಿ: ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಭಾವುಕರಾಗಿ ಸ್ವೀಕರಿಸಿದ ಪುನೀತ್ ಪತ್ನಿ ಅಶ್ವಿನಿ

    ವೇದಿಕೆ ಮೇಲೆ ಭಾಷಣ ಮಾಡಿದ ಎಂಟಿಬಿ ನಾಗರಾಜ್ ಅವರು, ದಿವಂಗತ ಮಂಗಿ ಶೆಟ್ಟಿ ನರಸಿಂಹಯ್ಯನವರ ಸಮಾಜಮುಖಿ ಕಾಯಕಗಳನ್ನು ಕೊಂಡಾಡಿದರು. ಅಂದಹಾಗೆ ದಿವಂಗತ ಮಂಗಶೆಟ್ಟಿ ನರಸಿಂಹಯ್ಯನವರು ಚಿಕ್ಕಬಳ್ಳಾಪುರ ನಗರದಲ್ಲಿ 1881ರಲ್ಲಿ ಜನಿಸಿ, ಕೂಲಿ ಕೆಲಸ ಮಾಡುತ್ತಾ ಆದರ್ಶದ ಜೀವನ ನಡೆಸಿದವರು. ತಮ್ಮ ಸ್ವಂತ ಪರಿಶ್ರಮದಿಂದ ದುಡಿದು ಆಸ್ತಿ ಮಾಡಿದರೂ 1961ರಲ್ಲಿ ತಮ್ಮ ಎಲ್ಲ ಆಸ್ತಿಯನ್ನು ಟ್ರಸ್ಟ್‌ಗೆ ಸೇರಿಸಿ ಅದರ ಮೂಲಕ ಸಮಾಜ ಸೇವೆಯಲ್ಲಿ ತೊಡಗಿದರು. ಇದೇ ಟ್ರಸ್ಟ್ ಮೂಲಕ ಅವರ ನಿಧನದ ತರುವಾಯ ಟ್ರಸ್ಟ್‌ನ ಸದಸ್ಯರು ಸಮಾಜಮುಖಿ ಕಾಯಕಗಳು ಮುಂದುವರೆಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸಿ ಟ್ರಸ್ಟ್‌ನ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ತಿಳಿದುಕೊಂಡ ಎಂಟಿಬಿ ನಾಗರಾಜ್ ಟ್ರಸ್ಟ್‌ನವರು ಮನವಿ ಮಾಡದಿದ್ದರೂ, ಅವರ ಸಮಾಜಮುಖಿ ಕಾಯಕಗಳಿಗೆ ಮನಸೋತು ವೇದಿಕೆ ಮೇಕೆ 10 ಲಕ್ಷ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದರು.

    ಇದೇ ವೇಳೆ ಜೈನ್ ಮಿಷನ್ ಆಸ್ಪತ್ರೆಯವರು ಸಹ ಮನವಿ ಮಾಡಿಕೊಂಡಾಗ ಅವರಿಗೂ ಸಹ 25 ಲಕ್ಷ ರೂ. ಹಣ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದರು. ಸಂಸ್ಥೆಯವರು ಮನವಿ ಮಾಡದಿದ್ದರೂ ಸಮಾಜಮುಖಿ ಸೇವೆಗಳನ್ನು ನೋಡಿ ಹಿಂದೆ, ಮುಂದೆ ನೋಡದೇ ಕೇವಲ ಒಂದೇ ನಿಮಿಷದಲ್ಲಿ 35 ರೂ. ಲಕ್ಷ ದೇಣಿಗೆ ನೀಡುವ ಮೂಲಕ ನೆರೆದಿದ್ದವರಿಗೆ ದಾನವೀರ ಶೂರ ಕರ್ಣ ಎಂಬಂತೆ ಕಂಡರು. ಇನ್ನೂ ಈ ಬಗ್ಗೆ ಮಾತನಾಡಿದ ನಾನು ದುಡಿದಿರೋ ಹಣದಲ್ಲಿ ಪ್ರತಿನಿತ್ಯ ಹತ್ತು ಹಲವು ಮಂದಿಗೆ ಸಹಾಯ ಮಾಡುತ್ತಿದ್ದೇನೆ. ಅದೇ ರೀತಿ ಇವರ ಸಮಾಜಮುಖಿ ಕಾಯಕಗಳು ನನಗೆ ಸಂತೋಷ ತಂದಿವೆ. ಹೀಗಾಗಿ ಬಹಳ ಸಂತೋಷದಿಂದ ಸಹಾಯ ಮಾಡಿದ್ದೇನೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಭಾರತ್ ಜೋಡೋ ಯಾತ್ರೆಗೆ ದೇಣಿಗೆ ಬೆದರಿಕೆ ಪ್ರಕರಣ – ಮೂವರು ಕಾಂಗ್ರೆಸ್ ಕಾರ್ಯಕರ್ತರು ಅಮಾನತು

    ಭಾರತ್ ಜೋಡೋ ಯಾತ್ರೆಗೆ ದೇಣಿಗೆ ಬೆದರಿಕೆ ಪ್ರಕರಣ – ಮೂವರು ಕಾಂಗ್ರೆಸ್ ಕಾರ್ಯಕರ್ತರು ಅಮಾನತು

    ತಿರುವನಂತಪುರಂ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಆರಂಭಿಸಿರುವ ಭಾರತ್ ಜೋಡೋ ಯಾತ್ರೆಗೆ (Bharat Jodo Yatra) 2,000 ರೂ. ದೇಣಿಗೆ ನೀಡುವಂತೆ ತರಕಾರಿ ವ್ಯಾಪಾರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾರ್ಯಕರ್ತರನ್ನು ಅಮಾನತುಗೊಳಿಸಲಾಗಿದೆ.

    ಕಾಂಗ್ರೆಸ್ ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಗೆ ದೇಣಿಗೆ ಸಂಗ್ರಹಿಸುತ್ತಿದ್ದರು. ಈ ವೇಳೆ ಕೊಲ್ಲಂನ (Kollam) ತರಕಾರಿ ಅಂಡಿಯೊಂದಕ್ಕೆ ತೆರಳಿ ಅಂಗಡಿ ಮಾಲೀಕನೊಂದಿಗೆ 2,000 ರೂ. ದೇಣಿಗೆ ನೀಡುವಂತೆ ಕೇಳಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ನಾನು 500 ರೂ. ಕೊಡುವುದಾಗಿ ತಿಳಿಸಿದ್ದಾರೆ. ಆ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಅಂಗಡಿ ಮಾಲೀಕನಿಗೆ ದಮ್ಕಿ ಹಾಕಿ ಬೆದರಿಕೆ ಹಾಕಿರುವುದಾಗಿ ದೂರು ದಾಖಲಾಗಿತ್ತು. ಆ ಬಳಿಕ ಘಟನೆ ಕುರಿತಾಗಿ ಕಾಂಗ್ರೆಸ್ ಕ್ರಮಕ್ಕೆ ಮುಂದಾಗಿದೆ. ಅಂಗಡಿ ಮಾಲೀಕನಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ. ಇವರು ನಮ್ಮ ಸಿದ್ಧಾಂತದ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇಂತಹ ನಡವಳಿಕೆಯನ್ನು ಪಕ್ಷ ಸಹಿಸಿಕೊಳ್ಳುವುದಿಲ್ಲ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ.ಸುಧಾಕರನ್ (K. Sudhakaran) ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ದೇಣಿಗೆಯಾಗಿ 2,000 ರೂ. ಕೊಡದ ತರಕಾರಿ ವ್ಯಾಪಾರಿಗೆ ಬೆದರಿಕೆ

    ಏನಿದು ಘಟನೆ?
    ಕಾಂಗ್ರೆಸ್ ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಗೆ ದೇಣಿಗೆ ಸಂಗ್ರಹಿಸುತ್ತಿದ್ದರು. ಈ ವೇಳೆ ಕೊಲ್ಲಂನ ತರಕಾರಿ ಅಂಡಿಯೊಂದಕ್ಕೆ ತೆರಳಿ ಅಂಗಡಿ ಮಾಲೀಕನೊಂದಿಗೆ 2,000 ರೂ. ದೇಣಿಗೆ ನೀಡುವಂತೆ ಕೇಳಿದ್ದಾರೆ. ಅಂಗಡಿ ಮಾಲೀಕ ನಾನು 500 ರೂ. ಕೊಡುವುದಾಗಿ ತಿಳಿಸಿದ್ದಾನೆ. ಈ ವೇಳೆ ಅಂಗಡಿ ಮಾಲೀಕ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಅಂಗಡಿಯ ತೂಕದ ಯಂತ್ರಕ್ಕೆ ಹಾನಿ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದರಲ್ಲಿ ವರದಿಯಾಗಿದೆ. 

    ಅಲ್ಲದೆ ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು, ದೃಶ್ಯಾವಳಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಗಡಿ ಮಾಲೀಕರ ಬಳಿ ಬಂದು ದೇಣಿಯಾಗಿ 2,000 ರೂ. ಕೊಡುವಂತೆ ಕೇಳಿದ್ದಾರೆ. ಇದಕ್ಕೆ ಅಂಗಡಿ ಮಾಲೀಕರು ಒಪ್ಪದೆ ತಾವು 500 ರೂ. ಕೊಡುವುದಾಗಿ ತಿಳಿಸಿದ್ದಾರೆ. ಬಳಿಕ ಜಗಳ ಆರಂಭಗೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಏರು ಧ್ವನಿಯಲ್ಲಿ ಅಂಗಡಿ ಮಾಲೀಕನಿಗೆ ದಮ್ಕಿ ಹಾಕಿದ್ದಾರೆ. ಇದನ್ನೂ ಓದಿ: ಶಸ್ತ್ರಾಸ್ತ್ರಗಳನ್ನು ತ್ಯಜಿಸಿ – ಉಗ್ರರಿಗೆ ಗುಲಾಂ ನಬಿ ಆಜಾದ್‌ ಮನವಿ

    ಘಟನೆಯ ಬಳಿಕ ಅಂಗಡಿ ಮಾಲೀಕ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಇನ್ನೊಂದು ಪ್ರತಿದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಗ್ಯಾಂಬ್ಲಿಂಗ್ ಗೇಮ್‍ಗಳ ನಿಷೇಧ – ಗೇಮಿಂಗ್ ಕಂಪನಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್

    ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿದ್ದು, ಯಾತ್ರೆಯು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ. ಯಾತ್ರೆಯು 3,500 ಕಿ.ಮೀ ದೂರವನ್ನು ಕ್ರಮಿಸುತ್ತಿದ್ದು 12 ರಾಜ್ಯಗಳನ್ನು ಹಾದುಹೋಗಲಿದೆ.

    Live Tv
    [brid partner=56869869 player=32851 video=960834 autoplay=true]