Tag: Donkeys

  • 40 ಕತ್ತೆಗಳು ನಾಪತ್ತೆ- ಹುಡುಕಿ ಕೊಡುವಂತೆ ಪೊಲೀಸರ ಮೊರೆ ಹೋದ ಗ್ರಾಮಸ್ಥರು

    40 ಕತ್ತೆಗಳು ನಾಪತ್ತೆ- ಹುಡುಕಿ ಕೊಡುವಂತೆ ಪೊಲೀಸರ ಮೊರೆ ಹೋದ ಗ್ರಾಮಸ್ಥರು

    ಜೈಪುರ್: ಗ್ರಾಮದಲ್ಲಿ ಕತ್ತೆ ಕಳವಾಗಿವೆ ಹುಡುಕಿ ಕೊಡಿ ಎಂದು ಸ್ಥಳೀಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ. ಕತ್ತೆಗಳ ಕಳವು ಪ್ರಕರಣ ರಾಜಸ್ಥಾನದ ಹನುಮಾನ್‍ಗಢ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

    ಈ ಜಿಲ್ಲೆಯ ಕಾಲುವೆ ಪ್ರದೇಶದಲ್ಲಿರುವ ಗ್ರಾಮಗಳ ಜನರು ಸರಕುಗಳ ಸಾಗಣೆ, ಮಣ್ಣು ಹೊರುವುದಕ್ಕಾಗಿ ಕತ್ತೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾಕಿದ್ದರು. ಅವುಗಳ ಕೆಲಸ ಮುಕ್ತಾಯವಾದ ನಂತರ ಬಯಲು ಪ್ರದೇಶಗಳಲ್ಲಿಯೇ ಮೇಯಲು ಬಿಡುತ್ತಿದ್ದರು. ಕೆಲವು ದಿನಗಳ ಹಿಂದೆ ಕತ್ತೆಗಳು ಕಾಣೆಯಾಗಿದ್ದು, ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

    ಕಳೆದ ಕೆಲವು ದಿನಗಳಿಂದ 40 ಕ್ಕೂ ಹೆಚ್ಚು ಕತ್ತೆಗಳು ನಾಪತ್ತೆಯಾಗಿದ್ದು, ಸ್ಥಳೀಯ ಕಾರ್ಯಕರ್ತರು ಹಾಗೂ ಕತ್ತೆಗಳ ಮಾಲಿಕರು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. 15 ಕತ್ತೆಗಳನ್ನು ಹುಡುಕಿ ಪೊಲೀಸ್ ಠಾಣೆಗೆ ಕರೆತಂದಿದ್ದರು. ಆದರೆ ಈ ಕತ್ತೆಗಳನ್ನು ಮಾಲೀಕರು ಕರೆದಾಗ ಕತ್ತೆಗಳು ಯಾವುದೇ ಪ್ರತಿಕ್ರಿಯೇ ನೀಡಿಲ್ಲ.

    ಈ ಕತ್ತೆಗಳು ನಮ್ಮವೇ ಆಗಿದ್ದರೆ ಅವುಗಳಿಗೆ ಇಡಲಾಗಿದ್ದ ಹೆಸರನ್ನು ಕೂಗಿದ ತಕ್ಷಣ ಸ್ಪಂದಿಸಬೇಕಿತ್ತು ಇವು ನಮ್ಮ ಕತ್ತೆಗಳಲ್ಲ, ನಮ್ಮ ಕತ್ತೆಗಳು ಮಾತ್ರ ನಮ್ಮ ಕೆಲಸಗಳಿಗೆ ಪಳಗಿದ್ದವು ಬೇರೆ ಕತ್ತೆಗಳನ್ನು ಉಪಯೋಗಿಸುವುದಕ್ಕೆ ಆಗುವುದಿಲ್ಲ ಎಂದು ಮಾಲೀಕರು ತಗಾದೆ ತೆಗೆದಿದ್ದಾರೆ.

    ಯಾವುದೇ ಗುರುತುಗಳಿಲ್ಲದೇ ಕತ್ತೆಗಳನ್ನು ಹುಡುಕುವುದು ಹೇಗೆ ಎಂದು ಪ್ರಶ್ನಿಸುತ್ತಾರೆ ಠಾಣಾಧಿಕಾರಿ ವಿಜಯೇಂದ್ರ ಶರ್ಮ ಆದರೆ ನಮಗೆ ಬೇರೆ ಕಥೆಗಳಲ್ಲೆಲ್ಲಾ ಬೇಡ ನಮಗೆ ನಮ್ಮದೇ ಕತ್ತೆಗಳು ಬೇಕೆಂದು ಮಾಲಿಕರು ಪಟ್ಟು ಬಿಡದೇ ಪೊಲೀಸರನ್ನು ಕಾಡುತ್ತಿದ್ದಾರೆ. ಇದನ್ನೂ ಓದಿ: ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ

    ಚುನಾವಣೆ ಸನಿಹದಲ್ಲೇ ಇರುವುದರಿಂದ ರಾಜಕೀಯ ನಾಯಕರೂ ಕತ್ತೆ ಮಾಲಿಕರಿಗೇ ಬೆಂಬಲವಾಗಿ ನಿಂತಿದ್ದು, ಪೊಲೀಸರಿಗೆ ಇದು ಪೀಕಲಾಟಕ್ಕೆ ಬಂದಿರುವುದರಿಂದ 302, 307, ಎನ್ ಡಿಪಿಎಸ್ ಸೇರಿದಂತೆ ಗಂಭೀರ ಪ್ರಕರಣಗಳನ್ನೂ ಬದಿಗಿರಿಸಿ ಕತ್ತೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಇದಕ್ಕಾಗಿ 4-5 ಸದಸ್ಯರನ್ನೊಳಗೊಂಡ ತಂಡವನ್ನೂ ರಚಿಸಲಾಗಿದೆ.  ಇದನ್ನೂ ಓದಿ: ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಬೇಡಿಕೆ

  • ವರುಣರಾಯನಿಗಾಗಿ ಕತ್ತೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು!

    ವರುಣರಾಯನಿಗಾಗಿ ಕತ್ತೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು!

    ದಾವಣಗೆರೆ: ರಾಜ್ಯದ ವಿವಿದೆಡೆ ಮಳೆ ಸುರಿಯುತ್ತಿದ್ದು. ಕೆರೆ ಕಟ್ಟೆಗಳು ತುಂಬಿದ್ದು ಡ್ಯಾಂಗಳಿಂದ ನೀರನ್ನು ಹೊರ ಬಿಡಲಾಗುತ್ತಿದೆ. ಆದರೆ ದಾವಣಗೆರೆಯ ಸುತ್ತಮುತ್ತಲೂ ಮಳೆಯ ಛಾಯೆ ಇಲ್ಲ. ಹಾಗಾಗಿ ಗ್ರಾಮಸ್ಥರು ಮೂಢನಂಬಿಕೆಯ ಮೊರೆ ಹೋಗಿ ಕತ್ತೆಗಳಿಗೆ ಮದುವೆ ಮಾಡಿಸಿದ್ದಾರೆ.

    ಹರಪ್ಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಪ್ರದೇಶದಲ್ಲಿ ಕತ್ತೆಗಳ ಮದುವೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮಳೆ ಸುಳಿವಿಲ್ಲದ ಕಾರಣ ಮೂಢನಂಬಿಕೆಗಳ ಮೊರೆ ಹೋದ ಗ್ರಾಮಸ್ಥರು, ವರುಣದೇವ ಮುನಿಕೊಂಡಿದ್ದಾನೆ. ಕತ್ತೆಗಳಿಗೆ ಮದುವೆ ಮಾಡಿದರೆ ವರುಣ ದೇವ ಕೃಪೆ ತೋರಿ ರೈತರ ಮೇಲೆ ಕರುಣಿಸುತ್ತಾನೆ ಎನ್ನುವ ನಂಬಿಕೆಯನ್ನು ಹೊಂದಿದ್ದರು. ಇದರಿಂದ ಗ್ರಾಮದ ರೈತರು ಕತ್ತೆಗಳಿಗೆ ಮದುವೆ ಮಾಡಿಸಿ ಮೆರವಣಿಗೆ ನಡೆಸಿದ್ದಾರೆ.

    ಕೈಗೆ ಬಂದ ಫಸಲು ಸಹ ಮಳೆ ಇಲ್ಲದೆ ಒಣಗುತ್ತಿದ್ದು, ಆದಷ್ಟು ಬೇಗ ಮಳೆ ಬಂದರೆ ರೈತರ ಬೆಳೆಗಳು ಉಳಿಯುತ್ತವೆ. ಅದಕ್ಕೆ ವರುಣದೇವಾ ಕರುಣೆ ತೋರಲಿ ಎಂದು ರೈತರು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡರು.

  • ವಾದ್ಯ ಮೇಳಗಳೊಂದಿಗೆ ಕತ್ತೆಗಳ ಮದುವೆ ಮಾಡಿದ ಗ್ರಾಮಸ್ಥರು!

    ವಾದ್ಯ ಮೇಳಗಳೊಂದಿಗೆ ಕತ್ತೆಗಳ ಮದುವೆ ಮಾಡಿದ ಗ್ರಾಮಸ್ಥರು!

    ಬೆಳಗಾವಿ: ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರು ಕತ್ತೆಗಳ ಮದುವೆ ಮಾಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ.

    ಗ್ರಾಮದಲ್ಲಿ ಸತತ ಮೂರು ವರ್ಷಗಳಿಂದ ಬರಗಾಲವಿರುವ ಹಿನ್ನೆಲೆಯಲ್ಲಿ ಈ ವರ್ಷ ಉತ್ತಮ ಮಳೆಗಾಗಿ ಕತ್ತೆಗಳ ಮದುವೆ ಮಾಡಿಸಿದ್ದಾರೆ. ವಾದ್ಯ ಮೇಳಗಳೊಂದಿಗೆ ಗ್ರಾಮಸ್ಥರು ಕತ್ತೆಗಳ ಮದುವೆ ಮಾಡಿಸಿದ್ದಾರೆ.

    ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಈ ಮದುವೆ ಮಾಡಿಸಿದ್ದು, ಗ್ರಾಮದ ಮಹಿಳೆಯರು ಹಾಗೂ ಪುರುಷರು ಮದುವೆಯಲ್ಲಿ ಭಾಗಿಯಾಗಿದ್ದರು.