Tag: DOPT

  • ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಚಾಟೀ ಬೀಸಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು (Government Employees) ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ.

    ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು (Public Work) ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ ಎಂದು ತಿಳಿಸಲಾಗಿದೆ.

    ಕೊವೀಡ್ ಬಳಿಕ ಕೇಂದ್ರ ಸರ್ಕಾರದ ನೌಕರರು ಬಯೋಮೆಟ್ರಿಕ್ (Biometric) ಬಳಕೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಹಿರಿಯ ಅಧಿಕಾರಿಗಳು ಸಹಿತ ಎಲ್ಲರೂ ಬಯೋ ಮೆಟ್ರಿಕ್ ಮೂಲಕವೇ ಹಾಜರಾತಿ ದಾಖಲಿಸಬೇಕು ಎಂದು ಸೂಚಿಸಿದೆ. ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ವೇತನ ಕಡಿತಗೊಳಿಸಲಾಗುವುದು ಎಂದು ಸಹ ಎಚ್ಚರಿಕೆ ನೀಡಿದೆ.

    ಅನಿವಾರ್ಯ ಕಾರಣಗಳಿಂದ ಯಾವುದೇ ಉದ್ಯೋಗಿಗೆ ನಿರ್ದಿಷ್ಟ ದಿನದಂದು ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಅದನ್ನು ಮುಂಚಿತವಾಗಿ ತಿಳಿಸಬೇಕು ಮತ್ತು ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಾಕೀತು ಮಾಡಿದೆ. ಹಿರಿಯ ಅಧಿಕಾರಿಗಳು ನೌಕರರ ಹಾಜರಾತಿ ಮತ್ತು ಸಮಯಪ್ರಜ್ಞೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಸುತ್ತೊಲೆಯಲ್ಲಿ ಹೇಳಲಾಗಿದೆ.

    GOVT EMPLOYEES
    ಸಾಂದರ್ಭಿಕ ಚಿತ್ರ

    2014 ರಲ್ಲಿ ನರೇಂದ್ರ ಮೋದಿ ಮೊದಲ ಬಾರಿ ಪ್ರಧಾನಿಯಾದ ಬಳಿಕ ಕಚೇರಿ ಸಮಯವನ್ನು ಕಡ್ಡಾಯವಾಗಿ ಜಾರಿಗೊಳಿಸಲು ಪ್ರಯತ್ನಿಸಿತು‌. ಇದನ್ನು ನೌಕರರು ವಿರೋಧಿಸಿದ್ದರು. ಅವರಲ್ಲಿ ಹಲವರು ದೂರದ ಪ್ರಯಾಣ ಮಾಡುತ್ತಾರೆ ಎಂದು ವಾದಿಸಿದ್ದರು. ಬಳಿಕ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ, ಹಾಜರಾತಿ ಖಚಿತಪಡಿಸಿಕೊಳ್ಳಲು, ಮೇಲ್ವಿಚಾರಣೆ ಮಾಡಲಾಯಿತು ಸೂಚಿಸಿತ್ತು. ಕೋವಿಡ್ ಬಳಿಕ ಈ ವ್ಯವಸ್ಥೆ ಮತ್ತೆ ಹಾದಿ ತಪ್ಪಿದೆ ಎನ್ನಲಾಗಿದೆ‌.

  • ಹೆರಿಗೆ ಸಮಯದಲ್ಲಿ ಮಗು ಸಾವನ್ನಪ್ಪಿದರೆ ಸರ್ಕಾರಿ ಮಹಿಳಾ ನೌಕರರಿಗೆ 60 ದಿನ ವಿಶೇಷ ರಜೆ: ಕೇಂದ್ರ

    ಹೆರಿಗೆ ಸಮಯದಲ್ಲಿ ಮಗು ಸಾವನ್ನಪ್ಪಿದರೆ ಸರ್ಕಾರಿ ಮಹಿಳಾ ನೌಕರರಿಗೆ 60 ದಿನ ವಿಶೇಷ ರಜೆ: ಕೇಂದ್ರ

    ನವದೆಹಲಿ: ಹೆರಿಗೆ ಸಮಯದಲ್ಲಿ ಅಥವಾ ಮಗು ಹುಟ್ಟಿದ ನಂತರ ಮಗು ಮರಣ ಹೊಂದಿದರೆ ಕೇಂದ್ರ ಸರ್ಕಾರದ ಮಹಿಳಾ ನೌಕರರು 60 ದಿನಗಳ ಕಾಲ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ)  ಆದೇಶ ಹೊರಡಿಸಿದೆ.

    ಹೆರಿಗೆಯ ನಂತರ ಮಗುವಿನ ಮರಣದ ಸಂದರ್ಭದಲ್ಲಿ ರಜೆ ಮಾತೃತ್ವ ರಜೆ ಮಂಜೂರು ಮಾಡುವ ಕುರಿತಾಗಿ ಹಲವು ಪ್ರಶ್ನೆಗಳು ಸಿಬ್ಬಂದಿಗಳಿಂದ ಬಂದಿತ್ತು. ಹಾಗಾಗಿ ಸರ್ಕಾರಿ ಮಹಿಳಾ ನೌಕರಿಗೆ ಅನ್ವಯವಾಗುವಂತೆ ಮಗುವಿನ ಮರಣದ ಕಾರಣದಿಂದ ಉಂಟಾಗುವ ಸಂಭಾವ್ಯ ಭಾವನಾತ್ಮಕ ಆಘಾತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಡಿಒಪಿಟಿ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: KGF ಸಿನಿಮಾ ಸ್ಫೂರ್ತಿ – ದಿಢೀರ್ ಫೇಮಸ್ ಆಗಲು ನಾಲ್ವರನ್ನು ಚಚ್ಚಿಕೊಂದ ಯುವಕ

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ. ವಿಶೇಷ ಹೆರಿಗೆ ರಜೆಯ ಪ್ರಯೋಜನವು ಎರಡಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವ ಮಹಿಳಾ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಮಾತ್ರ ದೊರಕುತ್ತದೆ. ಇದಲ್ಲದೆ ಅಧಿಕೃತ ಆಸ್ಪತ್ರೆಯಲ್ಲಿ ಮಗುವಿನ ಹೆರಿಗೆಗೆ ಮಾತ್ರ ರಜೆ ಸ್ವೀಕಾರಾರ್ಹವಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.

    ಈ ಆದೇಶಗಳು ಕೇಂದ್ರ ನಾಗರಿಕ ಸೇವೆಗಳ ರಜೆ ನಿಯಮಗಳು 1972ರ ನಿಯಮ 2ರ ಪ್ರಕಾರ ಭಾರತದ ಒಕ್ಕೂಟದ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಾಗರಿಕ ಸೇವೆಗಳು ಮತ್ತು ಹುದ್ದೆಗಳಿಗೆ ನೇಮಕಗೊಂಡ ಸರ್ಕಾರಿ ನೌಕರರಿಗೆ ಈ ಆದೇಶ ಬಿಡುಗಡೆಯ ದಿನಾಂಕದಿಂದ ಜಾರಿಗೆ ಬರುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ಅಂತರ್ಜಾತಿ ವಿವಾಹ – ದಲಿತನೆಂದು ಅಳಿಯನನ್ನೇ ಕೊಂದ ಅತ್ತೆ

    Live Tv
    [brid partner=56869869 player=32851 video=960834 autoplay=true]

  • ಗರ್ಭಿಣಿಯರು, ವಿಕಲಚೇತನರು ಮನೆಯಿಂದ್ಲೇ ಸರ್ಕಾರಿ ಕೆಲಸ ಮಾಡ್ಬೋದು: ಜಿತೇಂದ್ರ ಸಿಂಗ್

    ಗರ್ಭಿಣಿಯರು, ವಿಕಲಚೇತನರು ಮನೆಯಿಂದ್ಲೇ ಸರ್ಕಾರಿ ಕೆಲಸ ಮಾಡ್ಬೋದು: ಜಿತೇಂದ್ರ ಸಿಂಗ್

    ನವದೆಹಲಿ: ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಇನ್ನೂ ಮುಂದೆ ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದರು.

    ಧಾರಕ ವಲಯವನ್ನು ಡಿ-ನೋಟಿಫೈ ಮಾಡುವವರೆಗೆ ಕೋವಿಡ್ ಕಂಟೈನ್‍ಮೆಂಟ್ ವಲಯದಲ್ಲಿ ವಾಸಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಬರುವುದರಿಂದ ವಿನಾಯಿತಿ ನೀಡಲಾಗಿದೆ. ಅಧೀನ ಕಾರ್ಯದರ್ಶಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು 50% ಕ್ಕೆ ನಿರ್ಬಂಧಿಸಲಾಗಿದೆ. ಉಳಿದ 50% ರಷ್ಟು ಜನರು ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಸಿಬ್ಬಂದಿ ಸಚಿವಾಲಯ ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನೀವು ಸರಿಯಾಗಿ ಮಾಸ್ಕ್ ಧರಿಸಿದ್ರೆ ಲಾಕ್‍ಡೌನ್ ಮಾಡಲ್ಲ: ಅರವಿಂದ್ ಕೇಜ್ರಿವಾಲ್

    ಈ ಕುರಿತು ಮಾಹಿತಿ ನೀಡಿದ ಸಿಂಗ್ ಅವರು, ಭಾರತದಲ್ಲಿ ಕೋವಿಡ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಅವರು ಮನೆಯಿಂದಲೇ ಕೆಲಸ ಮಾಡಬಹುದು ಎಂದು ತಿಳಿಸಿದರು.

    ಸಂಬಂಧಪಟ್ಟ ಎಲ್ಲ ಇಲಾಖೆಗಳಿಂದ ರೋಸ್ಟರ್‍ಗಳನ್ನು ಸಿದ್ಧಪಡಿಸಲಾಗುವುದು. ಕಚೇರಿಗೆ ಹಾಜರಾಗದ ಮತ್ತು ಮನೆಯಿಂದಲೇ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವಾಗಲೂ ದೂರವಾಣಿ ಮತ್ತು ಇತರ ಎಲೆಕ್ಟ್ರಾನಿಕ್ ಸಂವಹನಗಳ ಮೂಲಕ ಲಭ್ಯವಿರುತ್ತಾರೆ ಎಂದು ಹೇಳಿದರು.

    ದೆಹಲಿಯಲ್ಲಿ ನಿನ್ನೆ ಕೋವಿಡ್‍ನಿಂದಾಗಿ ಏಳು ಸಾವುಗಳು ಮತ್ತು 20,181 ಹೊಸ ಪ್ರಕರಣಗಳು ದಾಖಲಾಗಿದೆ. ಪಾಸಿಟಿವ್ ಪ್ರಮಾಣವು 19.60 ಪ್ರತಿಶತಕ್ಕೆ ಏರಿದೆ. ನವೀಕರಿಸಿದ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇಂದು ದೆಹಲಿಯಲ್ಲಿ ಒಂದೇ ದಿನದಲ್ಲಿ 1,59,632 ಪ್ರಕರಣಗಳು ಮತ್ತು 327 ಸಾವುಗಳು ಸಂಭವಿಸಿವೆ ಎಂದು ಆತಂಕ ವ್ಯಕ್ತಪಡಿಸಿದರು.

    ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ) ಆದೇಶವನ್ನು ಹೊರಡಿಸಿದೆ. ಇದರ ಪ್ರಕಾರ ಸಾಧ್ಯವಾದಷ್ಟು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಅಧಿಕೃತ ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

    ಕಚೇರಿ ಆವರಣದಲ್ಲಿ ನೂಕುನುಗ್ಗಲು ಉಂಟಾಗುವುದನ್ನು ತಪ್ಪಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ಸಮಯ ಪಾಲನೆ ಮಾಡಬೇಕು. ಆಗಾಗ್ಗೆ ಕೈ ತೊಳೆಯುವುದು, ಸ್ವಚ್ಫವಾಗಿರುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಬೇಕು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಟೈರ್ ಕೆಳಗೆ ಸಿಕ್ಕ ನೋಟ್ ತೆಗೆದುಕೊಳ್ಳಲು ವ್ಯಕ್ತಿ ಸರ್ಕಸ್

    ಡಿಒಪಿಟಿ ಆದೇಶದ ಪ್ರಕಾರ, ಪ್ರಸ್ತುತ ಹೊರಡಿಸಲಾದ ಮಾರ್ಗಸೂಚಿಗಳು ಜನವರಿ 31 ರವರೆಗೆ ಜಾರಿಯಲ್ಲಿರುತ್ತವೆ ಎಂದು ಹೇಳಿದರು.