Tag: Dr. ajay singh

  • ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದ ಶಾಸಕ ಅಜಯ್ ಸಿಂಗ್!

    ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದ ಶಾಸಕ ಅಜಯ್ ಸಿಂಗ್!

    -ಮೈತ್ರಿಗೆ ತಲೆನೋವಾದ ಸಂಪುಟ ವಿಸ್ತರಣೆ

    ಕಲಬುರಗಿ: ಬಂಡಾಯ ಶಾಸಕರ ಮನವೊಲಿಸಲು ಮುಂದಾದ ಮೈತ್ರಿ ನಾಯಕರಿಗೆ ಮತ್ತೊಂದು ಶಾಕ್ ಆಗಿದ್ದು, ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರಿಂದ ಸಚಿವ ಸ್ಥಾನಕ್ಕಾಗಿ ಲಾಭಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.

    ನಾವು ಸಾಧು ಸನ್ಯಾಸಿಗಳಲ್ಲ, ನಾವು ಸಚಿವ ಸ್ಥಾನದ ಆಕಾಂಕ್ಷಿ. ಈ ಹಿಂದೆ ಸಚಿವ ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ರಿ. ಲೋಕಸಭೆ ಬಳಿಕ ಸಚಿವ ಸ್ಥಾನ ನೀಡುವುದಾಗಿ ಹೇಳಿ ಮಾತು ಬದಲಿಸಿದ್ದೀರಿ. ಇದೀಗ ಬಂಡಾಯ ಶಾಸಕರಿಗೆ ಮಾತ್ರ ಮಣೆಹಾಕಲು ಮುಂದಾಗಿರುವುದು ಎಷ್ಟು ಸರಿ ಎಂದು ಡಾ.ಅಜಯ್ ಸಿಂಗ್ ಪ್ರಶ್ನೆ ಮಾಡಿದ್ದಾರೆ ಎಂದು ಶಾಸಕರ ಆಪ್ತರಿಂದ ಮಾಹಿತಿ ಲಭ್ಯವಾಗಿದೆ.

    ನಾನು ಎರಡು ಬಾರಿ ಶಾಸಕನಾಗಿ ಅನುಭವ ಹೊಂದಿದ್ದೇನೆ. ನಮ್ಮ ತಂದೆ ದಿವಗಂತ ಧರ್ಮಸಿಂಗ್ ಅವರಿಗೂ ಹಲವು ಜನ ನಿಷ್ಠ ಬೆಂಬಲಿಗರಿದ್ದಾರೆ. ಹೀಗಿರುವಾಗ ಸಚಿವ ಸ್ಥಾನ ನೀಡದಿದ್ದರೆ ನಾನು ಸಹ ಸುಮ್ಮನಿರಲ್ಲ ಎಂದು ಮೈತ್ರಿ ನಾಯಕರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಸದ್ಯಕ್ಕೆ ಅಜಯ್ ಸಿಂಗ್ ಸಚಿವ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮನೆಯಲ್ಲಿ ಠಿಕಾಣಿ ಹೂಡಿದ್ದಾರೆ ಎಂದು ತಿಳಿದು ಬಂದಿದೆ.

  • ರಸ್ತೆ ಅಪಘಾತದ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಶಾಸಕ ಡಾ.ಅಜಯ್‍ಸಿಂಗ್

    ರಸ್ತೆ ಅಪಘಾತದ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಶಾಸಕ ಡಾ.ಅಜಯ್‍ಸಿಂಗ್

    ಕಲಬುರಗಿ: ಬೈಕ್ ಅಪಘಾತದಲ್ಲಿ ರಸ್ತೆಯ ಮೇಲೆ ಬಿದ್ದು ಇಬ್ಬರು ಯುವಕರು ಚಿಕಿತ್ಸೆ ಜನರ ಬಳಿ ಅಂಗಲಾಚಿದ್ರೂ ಸಹಾಯಕ್ಕೆ ಬರದ ಘಟನೆ ಕಲಬುರಗಿ ನಗರದ ಹೊರವಲಯದ ಕೋಟನೂರ ಗ್ರಾಮದ ಬಳಿ ನಡೆದಿದೆ.

    ಇಂದು ಬೆಳಗ್ಗೆ 10.50ಕ್ಕೆ ಫಾರ್ಚೂನರ್ ವಾಹನಕ್ಕೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂತರ ಅಲ್ಲಿನ ಸ್ಥಳೀಯರು 108 ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ ಯಾರು ಕೂಡ ಗಾಯಗೊಂಡವರ ಸಹಾಯಕ್ಕೆ ಮುಂದಾಗಿಲ್ಲ.

    ಈ ವೇಳೆ ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಜೇವರ್ಗಿ ಕಾಂಗ್ರೆಸ್ ಶಾಸಕ ಡಾ.ಅಜಯ್ ಸಿಂಗ್ ಮಾನವೀಯತೆ ಮೆರೆದಿದ್ದು, ಗಾಯಾಳುಗಳ ಸಹಾಯಕ್ಕೆ ಮುಂದಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಅಂಬುಲೆನ್ಸ್ ಕಳುಹಿಸುವುದಿಲ್ಲ ಅಂದರೆ ನನ್ನ ವಾಹನದಲ್ಲಿ ಗಾಯಗೊಂಡವರನ್ನು ಕರೆದುಕೊಂಡು ಹೋಗುವುದಾಗಿ ಎಚ್ಚರಿಸಿದ ಬಳಿಕ ಸ್ಥಳಕ್ಕೆ ಅಂಬುಲೆನ್ಸ್ ಬಂದಿದೆ.

    ಅಂಬುಲೆನ್ಸ್ ಬರುವಷ್ಟರಲ್ಲೇ ನೀರು ಕುಡಿಸಿ ಗಾಯಾಳುಗಳ ಕಾಲನ್ನು ಶಾಲಿನಿಂದ ಕಟ್ಟಿ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

    https://www.youtube.com/watch?v=859q7s4qSd4&feature=youtu.be