Tag: Dr. C.N. Ashwath Narayana

  • ʻಪಬ್ಲಿಕ್ ಟಿವಿʼ ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

    ʻಪಬ್ಲಿಕ್ ಟಿವಿʼ ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

    – ಹಲವು ಕೋರ್ಸ್‌ಗಳ ಬಗ್ಗೆ ಮಾಹಿತಿ, ಗೊಂದಲಗಳಿಗೆ ಪರಿಹಾರ ಕಂಡುಕೊಂಡ ವಿದ್ಯಾರ್ಥಿಗಳು, ಪೋಷಕರು

    ಬೆಂಗಳೂರು: ʻಪಬ್ಲಿಕ್ ಟಿವಿʼ (Public TV) ಪ್ರಸ್ತುತ ಪಡಿಸುವ ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಎರಡನೇ ದಿನವಾದ ಭಾನುವಾರವೂ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು, ಪೋಷಕರು ಮೇಳಕ್ಕೆ ಭೇಟಿ ನೀಡಿ, ಡಿಗ್ರಿ ನಂತರ ಮುಂದೇನು? ಅನ್ನೋ ಗೊಂದಲಗಳಿಗೆ ಸೂಕ್ತ ಪರಿಹಾರ ಕಂಡುಕೊಂಡಿದ್ದಾರೆ.

    ʻಪಬ್ಲಿಕ್ ಟಿವಿʼ ಪ್ರಸ್ತುತಪಡಿಸುವ 3ನೇ ಆವೃತ್ತಿಯ, ವಿದ್ಯಾಮಂದಿರ ಮೆಗಾ ಪಿಜಿ ಶೈಕ್ಷಣಿಕ ಮೇಳಕ್ಕೆ (Vidhya Mandira PG Education Expo) ಭಾನುವಾರ ಅದ್ಧೂರಿ ತೆರೆ ಬಿದ್ದಿದೆ. ಮೊದಲ ದಿನದ ಭರ್ಜರಿ ರೆಸ್ಪಾನ್ಸ್‌ನೊಂದಿಗೆ ಆರಂಭವಾದ ಶೈಕ್ಷಣಿಕ ಮೇಳದಲ್ಲಿ 2ನೇ ದಿನವೂ ಸಾವಿರಾರು ವಿದ್ಯಾರ್ಥಿಗಳು (Bengaluru Students) ಭಾಗಿಯಾಗಿದ್ದರು. ಡಿಗ್ರಿ ಬಳಿಕ ಮುಂದೇನು..? ಯಾವ ಕೋರ್ಸ್ ಭವಿಷ್ಯವನ್ನ ರೂಪಿಸುತ್ತೆ? ಅನ್ನೋ ಹಲವು ಗೊಂದಲಗಳಿಗೆ ಪೋಷಕರು, ವಿದ್ಯಾರ್ಥಿಗಳು ಪರಿಹಾರ ಕಂಡುಕೊಂಡರು. ತಮಗಿಷ್ಟದ ಕೋರ್ಸ್‌ಗಳ ಬಗ್ಗೆ ತಿಳಿದುಕೊಂಡು, ಉದ್ಯೋಗಾವಕಾಶಗಳ ಬಗ್ಗೆಯೂ ಮಾಹಿತಿ ಪಡೆದರು. ಇದನ್ನೂ ಓದಿ: ಮೈಸೂರು ದಸರಾ 2024| ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು

    ಮಲ್ಲೇಶ್ವರದ ಕೆ.ಸಿ ಜನರಲ್ ಆಸ್ಪತ್ರೆ ಮುಂಭಾಗದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ಮೂರನೇ ಆವೃತ್ತಿಯ ಪಿಜಿ ಶೈಕ್ಷಣಿಕ ಮೇಳದಲ್ಲಿ 42ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗಿಯಾಗಿದ್ದವು. 2ನೇ ದಿನದ ಶೈಕ್ಷಣಿಕ ಮೇಳವು ಬೆಳಗ್ಗೆ 9 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆ ವೇಳೆಗೆ ಮುಕ್ತಾಯಗೊಂಡಿತು. ಭಾನುವಾರ ರಜಾದಿನದ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರು ಉತ್ಸಾಹದಿಂದಲೇ ಪಾಲ್ಗೊಂಡಿದ್ದರು. ತಮಗೆ ಯಾವ ಕಾಲೇಜು ಸೂಕ್ತ? ಕೋರ್ಸ್, ಪ್ರವೇಶ ಶುಲ್ಕ ಹೇಗೆ? ಕೋರ್ಸ್ ಬಳಿಕ ಉದ್ಯೋಗಕಾವಕಾಶ ಹೇಗೆ? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಪಡೆದರು. ಪೋಷಕರು ಸಹ ತಮ್ಮ ಮಕ್ಕಳಿಗೆ ಯಾವ ಶಿಕ್ಷಣ ಸಂಸ್ಥೆಗಳು ಸೂಕ್ತ? ಅನ್ನೋ ಬಗ್ಗೆ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆ ಇನ್ಮುಂದೆ 24 ಗಂಟೆ ಓಪನ್

    ಅದೃಷ್ಟಶಾಲಿಗಳಿಗೆ ಲಕ್ಕಿ ಡಿಪ್‌:
    ಇದೇ ವೇಳೆ ಶೈಕ್ಷಣಿಕ ಮೇಳದಲ್ಲಿ ಭಾಗಿಯಾದ 14 ಅದೃಷ್ಟಶಾಲಿಗಳಿಗೆ ಲಕ್ಕಿ ಡಿಪ್ ಮೂಲಕ ಆಯ್ಕೆ ಮಾಡಿ ಚಿನ್ನದ ನಾಣ್ಯವಿರುವ ಗಿಫ್ಟ್‌ ಓಚರ್‌ಗಳನ್ನ ನೀಡಲಾಯಿತು. ಇ‌ನ್ನೂ ಮೇಳದಲ್ಲಿ ಭಾಗಿಯಾದ ಪೋಷಕರು ಕೂಡ ಮೇಳದ ಬಗ್ಗೆ ಸಂತಸ ಹಂಚಿಕೊಂಡರು. ಸಾಮಾನ್ಯವಾಗಿ ಡಿಗ್ರಿ ಬಳಿಕ ಸ್ನಾತಕೋತ್ತರ ಪದವಿಗಳಿಗೆ ಮಕ್ಕಳನ್ನ ಸೇರಿಸಲು ಹತ್ತಾರು ಕಾಲೇಜಗಳನ್ನ ಪೋಷಕರು ಸುತ್ತಬೇಕಾದ ಪರಿಸ್ಥಿತಿ ಇರ್ತಾ ಇತ್ತು. ಆದ್ರೆ ʻಪಬ್ಲಿಕ್ ಟಿವಿʼ ಈ ಕಷ್ಟವನ್ನ ತಪ್ಪಿಸಿ ಒಂದೇ ವೇದಿಕೆ ಅಡಿ ನೂರಾರು ಆಯ್ಕೆಗಳನ್ನ ನೀಡಿದೆ. ನಿಜಕ್ಕೂ ಇದು ಅದ್ಭುತ ಕಾರ್ಯಕ್ರಮ ಅಂತ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಗೌರಿ ಹಬ್ಬದಂದು ಮುಖ್ಯಮಂತ್ರಿಗಳಿಂದ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ ಉದ್ಘಾಟನೆ – ಡಿಕೆಶಿ

    ಇನ್ನೂ ಎರಡು ದಿನಗಳ ಮೇಳದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದ ಅನುಕೂಲವನ್ನ‌ ಪಡೆದುಕೊಂಡ್ರು. ಮೇಳದಲ್ಲಿ ಭಾಗಿಯಾದ ವಿದ್ಯಾಸಂಸ್ಥೆಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಇನ್ನೂ ಕಾರ್ಯಕ್ರಮದ ಆಯೋಜನೆ, ಜನರ ಪ್ರತಿಕ್ರಿಯೆಗೆ ಮೇಳದಲ್ಲಿ ಭಾಗಿಯಾದ ವಿದ್ಯಾಸಂಸ್ಥೆಗಳು ಕೂಡ ಹರ್ಷ ವ್ಯಕ್ತಪಡಿಸಿ, ಈ ರೀತಿಯ ಕಾರ್ಯಕ್ರಮ ಪೋಷಕರ ಒತ್ತಡ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನೂಕೂಲ ಆಗಲಿದೆ. ಕಾರ್ಯಕ್ರಮ ಆಯೋಜನೆ ಮಾಡಿದ ʻಪಬ್ಲಿಕ್ ಟಿವಿʼಗೆ ಧನ್ಯವಾದ ಅರ್ಪಿಸಿದರು.

    ಒಟ್ಟಾರೆ ಎರಡು ದಿನದ ಕಾರ್ಯಕ್ರಮಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಕಾರ್ಯಕ್ರಮದ ಮೂಲಕ ಸಾವಿರಾರು ಪೋಷಕರು,‌ ವಿದ್ಯಾರ್ಥಿಗಳ‌ ಭವಿಷ್ಯದ ಕನಸಿನ ಗಿಡಕ್ಕೆ ನೀರೆರೆಯುವ ಪ್ರಯತ್ನ ಮಾಡಿದೆ.

  • ಪಬ್ಲಿಕ್ ಟಿವಿಯ ʻವಿದ್ಯಾಮಂದಿರʼ ಪಿಜಿ ಶೈಕ್ಷಣಿಕ ಮೇಳ – ಇಂದು ಕೊನೇ ದಿನ, ಬನ್ನಿ ಸದುಪಯೋಗಪಡಿಸಿಕೊಳ್ಳಿ..

    ಪಬ್ಲಿಕ್ ಟಿವಿಯ ʻವಿದ್ಯಾಮಂದಿರʼ ಪಿಜಿ ಶೈಕ್ಷಣಿಕ ಮೇಳ – ಇಂದು ಕೊನೇ ದಿನ, ಬನ್ನಿ ಸದುಪಯೋಗಪಡಿಸಿಕೊಳ್ಳಿ..

    ಬೆಂಗಳೂರು: AD6 ಅಡ್ವರ್ಟೈಸಿಂಗ್‌ ಸಹಯೋಗದಲ್ಲಿ ‘ಪಬ್ಲಿಕ್‌ ಟಿವಿ’ (PUBLiC TV) ಪ್ರಸ್ತುತ ಪಡಿಸುತ್ತಿರುವ `ವಿದ್ಯಾಮಂದಿರ’ ಶೈಕ್ಷಣಿಕ ಮೇಳ (Vidhya Mandira Education Expo) 3ನೇ ಆವೃತ್ತಿಯು ಇಂದು (ಸೆ.1) ಮುಕ್ತಾಯಗೊಳ್ಳಲಿದೆ. ಆದ್ದರಿಂದ ಡಿಗ್ರಿ ಬಳಿಕ ಮುಂದೇನು ಎಂಬ ಗೊಂದಲದಲ್ಲಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಸೂಕ್ತ ಪರಿಹಾರ ಕಂಡುಕೊಳ್ಳಲು ಇದು ಸೂಕ್ತ ಶೈಕ್ಷಣಿಕ ಮೇಳವಾಗಿದೆ.

    ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ರಾಜ್ಯದ ವಿವಿಧೆಡೆಯಿಂದ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ಪೋಷಕರು ಪದವಿ ನಂತರ ಮುಂದೇನು ಎನ್ನುವ ಗೊಂದಲಗಳಿಗೆ ಸೂಕ್ತ ಪರಿಹಾರ ಕಂಡುಕೊಂಡಿದ್ದಾರೆ. ಇಂದು ಕೊನೆಯ ದಿನವಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

    ಮಲ್ಲೇಶ್ವರಂನ ಕೆ.ಸಿ.ಜನರಲ್‌ ಆಸ್ಪತ್ರೆ ಬಳಿಯ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ವಿದ್ಯಾಮಂದಿರ ಶೈಕ್ಷಣಿಕ ಮೇಳ ನಡೆಯುತ್ತಿದೆ. ಭಾನುವಾರವಾದ ಇಂದು ಸಹ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಜುಕೇಷನ್‌ ಎಕ್ಸ್‌ಪೋ ನಡೆಯಲಿದ್ದು, ಉಚಿತ ಪ್ರವೇಶ ಇರಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಡಿಗ್ರಿ ಕೋರ್ಸ್ ಬಳಿಕ ಮುಂದೇನು ಎಂಬ ವಿದ್ಯಾರ್ಥಿಗಳು ಮತ್ತು ಪೋಷಕರ ಗೊಂದಲಗಳಿಗೆ ʻಪಬ್ಲಿಕ್ ಟಿವಿʼ ವಿದ್ಯಾಮಂದಿರ ಎಜುಕೇಶನ್ ಎಕ್ಸ್‌ಪೋದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

    42ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಭಾಗಿ:
    ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 42ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

    ಲಕ್ಕಿ ಡಿಪ್‌ ಉಡುಗೊರೆ ಪಡೆಯಿರಿ
    ಶೈಕ್ಷಣಿಕ ಮೇಳದಲ್ಲಿ ಸೆಮಿನಾರ್‌ ಸೇರಿದಂತೆ ಹಲವು ಕಾರ್ಯಕ್ರಮಗಳು ಇರಲಿವೆ. ಲಕ್ಕಿ ಡಿಪ್‌ ಮೂಲಕ ಪ್ರತಿ ಒಂದು ಗಂಟೆಗೊಮ್ಮೆ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು.

    ಪ್ಲಾಟಿನಂ ಪ್ರಾಯೋಜಕರು:
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ.

    ಗೋಲ್ಡ್‌ ಪ್ರಾಯೋಜಕರು:
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌, CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಸಪ್ತಗಿರಿ NPS ವಿಶ್ವವಿದ್ಯಾಲಯ.

    ಸಿಲ್ವರ್‌ ಪ್ರಾಯೋಜಕರು:
    AIMS ಇನ್‌ಸ್ಟಿಟ್ಯೂಟ್ಸ್‌, ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ಬೆಂಗಳೂರು, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಂಪೂರ್ಣ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪ್ರೆಸಿಡೆನ್ಸಿ ಯೂನಿವರ್ಸಿಟಿ.

    ಸ್ಪೆಷಲ್‌ ಪೆವಿಲಿಯನ್‌
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್.

    ಸ್ಟಾಲ್‌ ಪಾಲುದಾರರು:
    ಆಚಾರ್ಯ ಬೆಂಗಳೂರು ಬಿ ಶಾಲೆ – ಸ್ವಾಯತ್ತ, BMS ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್, ಸಿಟಿ ಕಾಲೇಜು, ಏಟ್ರಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂಜಿನಿಯರಿಂಗ್‌ ಕಾಲೇಜು, ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಶ್ರೀದೇವಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ – ತುಮಕೂರು, ಪ್ರೆಸಿಡೆನ್ಸಿ ಕಾಲೇಜು, ಇಂಡಿಯನ್ ಅಕಾಡೆಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆರ್ ವಿ ವಿಶ್ವವಿದ್ಯಾಲಯ, www.bangalorestudy.com, ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಸೈನ್ಸ್, ಎಸ್ – ವ್ಯಾಸ, ಡೀಮ್ಡ್ ವಿಶ್ವವಿದ್ಯಾಲಯ – ಬೆಂಗಳೂರು, ಧನ್ವಂತರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಹರ್ಷ ಇನ್ಸ್ಟಿಟ್ಯೂಷನ್ಸ್, ಸುರಾನಾ ಶಿಕ್ಷಣ ಸಂಸ್ಥೆಗಳು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ (ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್).

    ಕ್ರಿಯೆಟಿವ್‌ ಸ್ಪಾನರ್ಸ್‌:
    RR ಸಂಸ್ಥೆಗಳು

    ಇವೆಂಟ್‌ ಪಾರ್ಟ್‌ನರ್‌ :
    AD 6 ಜಾಹೀರಾತು

    ಗಿಫ್ಟ್‌ ಸ್ಪಾನ್ಸರ್ಸ್‌:
    ಜೀನಿ ಮಿಲೆಟ್‌ ಮಿಕ್ಸ್

    (ಕೊನೇ ದಿನ) ದಿನಾಂಕ: ಸೆಪ್ಟೆಂಬರ್‌ 1
    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್‌ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ

  • ಪಬ್ಲಿಕ್‌ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ಇಂದು ಚಾಲನೆ

    ಪಬ್ಲಿಕ್‌ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ಇಂದು ಚಾಲನೆ

    – ಎಜುಕೇಶನ್‌ ಎಕ್ಸ್‌ಪೋದಲ್ಲಿ ಪಿಜಿ ಕಾಲೇಜು, ಕೋರ್ಸ್‌ಗಳ ಬಗ್ಗೆ ಮಾಹಿತಿ
    – ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ರಿಂದ ಕಾರ್ಯಕ್ರಮಕ್ಕೆ ಚಾಲನೆ
    – ರೇವಾ ವಿವಿ ಕುಲಪತಿ ಶ್ಯಾಮರಾಜು, ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ ಮುಖ್ಯ ಅತಿಥಿಗಳಾಗಿ ಭಾಗಿ

    ಬೆಂಗಳೂರು: ‘ಪಬ್ಲಿಕ್‌ ಟಿವಿ’ (PUBLiC TV) ಪ್ರಸ್ತುತ ಪಡಿಸುತ್ತಿರುವ AD6 ಅಡ್ವರ್ಟೈಸಿಂಗ್‌ ಸಹಯೋಗದಲ್ಲಿ ವಿದ್ಯಾಮಂದಿರ ಎಜುಕೇಷನ್‌ ಎಕ್ಸ್‌ಪೋ (Vidhya Mandira Education Expo) 3ನೇ ಆವೃತ್ತಿಗೆ ಇಂದು (ಶನಿವಾರ) ಚಾಲನೆ ದೊರೆಯಲಿದೆ.

    ಮಲ್ಲೇಶ್ವರಂನ ಕೆ.ಸಿ.ಜನರಲ್‌ ಆಸ್ಪತ್ರೆ ಬಳಿಯ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ವಿದ್ಯಾಮಂದಿರ ಶೈಕ್ಷಣಿಕ ಮೇಳ ನಡೆಯಲಿದ್ದು, ಇಂದು ಬೆಳಗ್ಗೆ 10:30 ಕ್ಕೆ ಕಾರ್ಯಕ್ರಮಕ್ಕೆ ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ (H.R.Ranganath) ಅವರು ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೇವಾ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ.ಶ್ಯಾಮರಾಜು ಹಾಗೂ ಮಾಜಿ ಡಿಸಿಎಂ ಮತ್ತು ಮಲ್ಲೇಶ್ವರಂ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್.ಅಶ್ವಥ್‌ ನಾರಾಯಣ್‌ (C.N.Ashwath Narayan) ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ನಾಳೆ ಚಾಲನೆ – ಪಿಜಿ ಕಾಲೇಜ್‌, ಕೋರ್ಸ್‌ ವಿವರ ತಿಳಿದುಕೊಳ್ಳಿ

    ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ಎಜುಕೇಷನ್‌ ಎಕ್ಸ್‌ಪೋ ನಡೆಯಲಿದ್ದು, ಉಚಿತ ಪ್ರವೇಶ ಇರಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಬಹುದು.

    ಡಿಗ್ರಿ ಕೋರ್ಸ್ ಬಳಿಕ ಮುಂದೇನು ಎಂಬ ವಿದ್ಯಾರ್ಥಿಗಳು ಮತ್ತು ಪೋಷಕರ ಗೊಂದಲಗಳಿಗೆ ಪಬ್ಲಿಕ್ ಟಿವಿ ವಿದ್ಯಾಮಂದಿರ ಎಜುಕೇಶನ್ ಎಕ್ಸ್‌ಪೋ ಪರಿಹಾರ ನೀಡಲಿದೆ. ಇದನ್ನೂ ಓದಿ: ಡಿಗ್ರಿ ಬಳಿಕ ಮುಂದೇನು? – ಪಬ್ಲಿಕ್ ಟಿವಿ ವಿದ್ಯಾಮಂದಿರಕ್ಕೆ ಬನ್ನಿ

    ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 42ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

    ಉಡುಗೊರೆ ಪಡೆಯಿರಿ
    ಶೈಕ್ಷಣಿಕ ಮೇಳದಲ್ಲಿ ಸೆಮಿನಾರ್‌ ಸೇರಿದಂತೆ ಹಲವು ಕಾರ್ಯಕ್ರಮಗಳು ಇರಲಿವೆ. ಲಕ್ಕಿ ಡ್ರಾ ಮೂಲಕ ಪ್ರತಿ ಒಂದು ಗಂಟೆಗೊಮ್ಮೆ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು.

    ಪ್ಲಾಟಿನಂ ಪ್ರಾಯೋಜಕರು:
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ.

    ಗೋಲ್ಡ್‌ ಪ್ರಾಯೋಜಕರು
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌, CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಸಪ್ತಗಿರಿ NPS ವಿಶ್ವವಿದ್ಯಾಲಯ.

    ಸಿಲ್ವರ್‌ ಪ್ರಾಯೋಜಕರು:
    AIMS ಇನ್‌ಸ್ಟಿಟ್ಯೂಟ್ಸ್‌, ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು,
    ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ಬೆಂಗಳೂರು, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಂಪೂರ್ಣ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪ್ರೆಸಿಡೆನ್ಸಿ ಯೂನಿವರ್ಸಿಟಿ,

    ಸ್ಪೆಷಲ್‌ ಪೆವಿಲಿಯನ್‌
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್.

    ಸ್ಟಾಲ್‌ ಪಾರ್ಟ್‌ನರ್‌:
    ಆಚಾರ್ಯ ಬೆಂಗಳೂರು ಬಿ ಶಾಲೆ – ಸ್ವಾಯತ್ತ, BMS ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್, ಸಿಟಿ ಕಾಲೇಜು, ಏಟ್ರಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂಜಿನಿಯರಿಂಗ್‌ ಕಾಲೇಜು, ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಶ್ರೀದೇವಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ – ತುಮಕೂರು, ಪ್ರೆಸಿಡೆನ್ಸಿ ಕಾಲೇಜು, ಇಂಡಿಯನ್ ಅಕಾಡೆಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆರ್ ವಿ ವಿಶ್ವವಿದ್ಯಾಲಯ, www.bangalorestudy.com, ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಸೈನ್ಸ್, ಎಸ್ – ವ್ಯಾಸ, ಡೀಮ್ಡ್ ವಿಶ್ವವಿದ್ಯಾಲಯ – ಬೆಂಗಳೂರು, ಧನ್ವಂತರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಹರ್ಷ ಇನ್ಸ್ಟಿಟ್ಯೂಷನ್ಸ್, ಸುರಾನಾ ಶಿಕ್ಷಣ ಸಂಸ್ಥೆಗಳು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ (ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್).

    ಕ್ರಿಯೆಟಿವ್‌ ಸ್ಪಾನರ್ಸ್‌:
    RR ಸಂಸ್ಥೆಗಳು

    ಇವೆಂಟ್‌ ಪಾರ್ಟ್‌ನರ್‌ :
    AD 6 ಜಾಹೀರಾತು

    ಗಿಫ್ಟ್‌ ಸ್ಪಾನ್ಸರ್ಸ್‌:
    ಜೀನಿ ಮಿಲೆಟ್‌ ಮಿಕ್ಸ್

    ದಿನಾಂಕ: ಆಗಸ್ಟ್‌ 31, ಸೆಪ್ಟೆಂಬರ್‌ 1
    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್‌ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ

  • ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು – ಸಿ.ಎನ್.ಅಶ್ವಥ್ ನಾರಾಯಣ ಕರೆ

    ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು – ಸಿ.ಎನ್.ಅಶ್ವಥ್ ನಾರಾಯಣ ಕರೆ

    ಬೆಂಗಳೂರು: ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಿದರೆ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ. ಮಣ್ಣಿನ ಮಕ್ಕಳು ಸ್ವತಃ ಶ್ರಮಜೀವಿಗಳು, ಉದ್ಯಮಶೀಲತೆಯ ಸ್ಫೂರ್ತಿ ಹೊಂದಿರುವವರು ಎಂದು ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ (Ashwath Narayan) ಹೇಳಿದರು.

    ಪ್ರಾದೇಶಿಕ ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ರಚಿಸಲಾದ ವೇದಿಕೆ “ಫರ್ಸ್ಟ್ ಸರ್ಕಲ್” (First Circle) ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಬಿಸಿನೆಸ್ ನೆಟ್‌ವರ್ಕಿಂಗ್ ಎಕ್ಸ್‌ಪೋ ಹಾಗೂ ವಾರ್ಷಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ: ಮೈಸೂರಿನಲ್ಲಿ ಬೇಕಾಬಿಟ್ಟಿ ಮನೆ ಬಾಡಿಗೆ ಕೊಡುವಂತಿಲ್ಲ – ಪೊಲೀಸ್ ಕ್ಲಿಯರೆನ್ಸ್ ಕಡ್ಡಾಯ

    ಕರ್ನಾಟಕದ ಬೆಂಗಳೂರು ಇಡೀ ವಿಶ್ವಕ್ಕೆ ಆವಿಷ್ಕಾರದ ನಾಡು ಎನಿಸಿದೆ. ಎಲ್ಲಾ ಕ್ಷೇತ್ರದಲ್ಲೂ ಬೆಂಗಳೂರು ವಿಶ್ವಕ್ಕೆ ಮಾದರಿಯಾಗಿದೆ. ಇಂತಹ ಪುಣ್ಯಭೂಮಿ, ಭರವಸೆಯ ನಾಡಿನಲ್ಲಿ ನಾವು ಇದ್ದೇವೆ. ಇಂತಹ ಅವಕಾಶಗಳ ನಾಡಿನ ಶಕ್ತಿಯನ್ನು ಅರಿಯಬೇಕು. ಉದ್ಯಮಿಗಳಾಗಿ ಯಶಸ್ಸು ಗಳಿಸಿದ ನಂತರ ಅದನ್ನು ಸಮಾಜಕ್ಕೆ ವಾಪಸ್ ಕೊಡಬೇಕು. ಹೊಸ ಐಡಿಯಾಗಳನ್ನು ಹೊಂದಿರುವ ಉದ್ಯಮಿಗಳನ್ನು ಸದಾ ನಾನು ಬೆಂಬಲಿಸುತ್ತೇನೆ. ನನ್ನ ಕರ್ತವ್ಯವೇ ಅವರನ್ನು ಸನ್ನದ್ಧರನ್ನಾಗಿಸುವುದು, ಅವರಿಗೆ ಸೌಲಭ್ಯ ಒದಗಿಸುವುದು. ನಮ್ಮ ಜೊತೆಯಲ್ಲಿರುವ ನೂರಾರು ಮಂದಿ ಇಂದು ಉದ್ಯಮಿಗಳಾಗಿದ್ದಾರೆ. ಅವರ ಪ್ರಯತ್ನಕ್ಕೆ ನಮ್ಮ ಬೆಂಬಲವಷ್ಟೇ. ನಾವು ಉದ್ಯಮಿಗಳಾಗಲು ಬಯಸುವ ಎಲ್ಲರಿಗೂ ಬೆಂಬಲ, ಸಹಕಾರ ನೀಡುತ್ತೇವೆ ಎಂದರು.

    ಬಿಬಿಎಂಪಿ ವಿಶೇಷ ಆಯುಕ್ತ ಜೈರಾಮ್ ರಾಯ್ಪುರ, ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಈ ಫರ್ಸ್ಟ್‌ ಸರ್ಕಲ್ ಇನ್ನೂ 25 ಜಿಲ್ಲೆಗಳಿಗೆ ವಿಸ್ತರಿಸಲಿದೆ. ಕ್ರಮೇಣ ದೇಶದ ವಿವಿಧ ರಾಜ್ಯಗಳಿಗೆ ವಿಸ್ತರಿಸಲಿದೆ. ಇನ್ನೂ 250ಕ್ಕೂ ಹೆಚ್ಚು ಉದ್ಯಮಿಗಳು ಇದರ ವ್ಯಾಪ್ತಿಗೆ ಸೇರಿಕೊಳ್ಳಲಿದ್ದಾರೆ. ಇದು ಆಂತರಿಕ ಅರ್ಥ ವ್ಯವಸ್ಥೆ ಸುಧಾರಣೆಗೆ ನೆರವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಾಣಂತಿ ಡಿಸ್ಚಾರ್ಜ್ ಮಾಡಲು ಲಂಚಕ್ಕೆ ಬೇಡಿಕೆ – ಇಬ್ಬರು ವೈದ್ಯ ಸಿಬ್ಬಂದಿ ಅಮಾನತು

    ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಂಸದ ಬಿ.ಎನ್.ಬಚ್ಚೇಗೌಡ, ಫ್ರೀಡಂ ಆಪ್ ಸಂಸ್ಥಾಪಕ ಸುಧೀರ್, ಕರ್ನಾಟಕ ಗ್ಯಾಸ್ಟ್ರೊ ಎಂಟರಾಲಜಿ ಇನ್‌ಸ್ಟಿಟ್ಯೂಟ್ ಸಂಸ್ಥಾಪಕ ನಿರ್ದೇಶಕ ಡಾ.ನಾಗೇಶ್, ಫರ್ಸ್ಟ್ ಸರ್ಕಲ್ ಸದಸ್ಯರಾದ ಮನೋಹರ್ ಗೌಡ, ನಂದೀಶ್, ಇಂದ್ರೇಶ್, ಫಿಡೆಲಿಟಸ್ ಸಂಸ್ಥಾಪಕ, ಉದ್ಯಮಿ ಅಚ್ಚುತ್ ಗೌಡ ಮುಂತಾದವರು ಉಪಸ್ಥಿತರಿದ್ದರು.

    ಫರ್ಸ್ಟ್‌ ಸರ್ಕಲ್ ಸಂಸ್ಥೆಯು ಪ್ರಾದೇಶಿಕ ಸಮುದಾಯದ ಏಳಿಗೆಗಾಗಿ ಕೊಡುಗೆ ನೀಡಲು ಸಿದ್ಧರಿರುವ ವೃತ್ತಿಪರರು, ಸ್ವಯಂ ಉದ್ಯೋಗಿಗಳು ಹಾಗೂ ವ್ಯಾಪಾರಸ್ಥರನ್ನು ಒಳಗೊಂಡಿದೆ. ಜಾಗತಿಕ ನೆಟ್‌ವರ್ಕಿಂಗ್ ಮೂಲಕ ಉದ್ದಿಮೆಗಳನ್ನು ಬೆಳೆಸಲು ಫರ್ಸ್ಟ್‌ ಸರ್ಕಲ್ ಸಹಾಯ ಮಾಡುತ್ತಿದೆ. ಬಹಳ ಅಲ್ಪ ಕಾಲದಲ್ಲಿ ಸಂಸ್ಥೆಯು ರಾಜ್ಯಾದ್ಯಂತ ವಿಸ್ತರಿಸುತ್ತಿದೆ. ಆದಾಗ್ಯೂ ಬೆಂಗಳೂರು ನಗರಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಕ್ರಮೇಣ ಕರ್ನಾಟಕದ ಎಲ್ಲಾ ನಗರಗಳಿಗೂ ವಿಸ್ತರಿಸಲಿದೆ. ಇದನ್ನೂ ಓದಿ: BJP ಸರ್ಕಾರ ಕರ್ನಾಟಕಕ್ಕೆ `ಕಳಂಕಿತ ರಾಜ್ಯ’ ಅನ್ನೋ ಬಿರುದು ತಂದುಕೊಟ್ಟಿದೆ – ಡಿಕೆಶಿ

    ಪ್ರಸ್ತುತ ಫರ್ಸ್ಟ್‌ ಸರ್ಕಲ್ ಸಂಸ್ಥೆಯು 6 ವಲಯಗಳಲ್ಲಿ 150 ಸದಸ್ಯರು ಹಾಗೂ 500+ ಸದಸ್ಯರನ್ನು ಒಳಗೊಂಡಿದ್ದು, ಕೇವಲ 6 ತಿಂಗಳ ಅಲ್ಪಾವಧಿಯಲ್ಲಿ 57 ಕೋಟಿ ರೂ. ವ್ಯವಹಾರ ನಡೆಸಲಾಗಿದೆ. ಫಸ್ಟ್ ಸರ್ಕಲ್ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಸಾವಿರಾರು ಸಂಭಾವ್ಯ ಗ್ರಾಹಕರೊಂದಿಗಿರುವ ಹಲವು ವಲಯಗಳ ಹೂಡಿಕೆದಾರರು, ಉದ್ಯಮಿಗಳು, ವಾಣಿಜ್ಯೋದ್ಯಮಿಗಳು, ಯಶಸ್ವಿ ವೃತ್ತಿಪರರು, ಅಧಿಕಾರಿಗಳು ಮಾತ್ರವಲ್ಲದೆ ದೇಶಾದ್ಯಂತ ಇರುವ ನವನವೀನ ಸ್ಟಾರ್ಟ್ ಅಪ್‌ಗಳು, ವ್ಯಾಪಾರೀ ಸಂಸ್ಥೆಗಳು ಮತ್ತು ಉದ್ಯಮಿಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಭಾರತದ ಅತ್ಯಂತ ದೊಡ್ಡ ಬೃಹತ್ ಬಿಸಿನೆಸ್ ಎಕ್ಸ್ ಪೋದಲ್ಲಿ ಪ್ರಪಂಚದ ವಿವಿಧ ಭಾಗಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಅರಮನೆ ಮೈದಾನದ 6ನೇ ದ್ವಾರದ ಗ್ರ್ಯಾಂಡ್ ಕ್ಯಾಸಲ್‌ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]