Tag: DR EXAm

  • ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಲು ಪ್ರಯಾಣಿಕರೇ ಕಾರಣ – ರೈಲ್ವೇ ಅಧಿಕಾರಿಗಳಿಂದ ಸ್ಪಷ್ಟನೆ

    ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಲು ಪ್ರಯಾಣಿಕರೇ ಕಾರಣ – ರೈಲ್ವೇ ಅಧಿಕಾರಿಗಳಿಂದ ಸ್ಪಷ್ಟನೆ

    ಬೆಂಗಳೂರು/ಹುಬ್ಬಳ್ಳಿ: ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಲು ಪ್ರಯಾಣಿಕರೇ ಕಾರಣ ಎಂದು ರೈಲ್ವೇ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

    ಈ ಕುರಿತು ಪ್ರತಿಕಾಗೋಷ್ಠಿ ನಡೆಸಿ ಮಾತನಾಡಿದ ನೈಋತ್ಯ ರೈಲ್ವೇಯ ಡಿಜಿಎಂ ಇ. ವಿಜಯಾ ಅವರು, ತಾಂತ್ರಿಕ ಕಾರಣದಿಂದ ಸಮಸ್ಯೆ ಆಗಿದ್ದು ನಿಜ. ಆದರೆ ಮೇನ್ ಟ್ರ್ಯಾಕ್ ಸಮಸ್ಯೆ ಇದ್ದಿದ್ದರಿಂದ ಗೂಡ್ಸ್ ಮತ್ತು ರಾಣಿ ಚೆನ್ನಮ್ಮ ರೈಲು ಒಂದೇ ಹಳಿಯಲ್ಲಿ ಚಲಿಸುತ್ತಿದ್ದವು. ಗೂಡ್ಸ್ ರೈಲಿನ ಇಂಜಿನ್ ಕೈ ಕೊಟ್ಟಿತ್ತು. ಹೀಗಾಗಿ ಅದನ್ನ ಹಳಿಯಿಂದ ಸರಿಸಲು ರಾಣಿಚೆನ್ನಮ್ಮ ರೈಲಿನ ಇಂಜಿನ್ ಜೋಡಿಸಲಾಗಿತ್ತು. ರೈಲಿನ ಚಾಲನೆಯಲ್ಲಿ ಕೇವಲ ಒಂದು ಗಂಟೆ ಮಾತ್ರ ತಡವಾಗಿದೆ ಆದರೆ 8 ಗಂಟೆಯಲ್ಲ ಎಂದು ಹೇಳಿದ್ದಾರೆ.

    ಗೂಡ್ಸ್ ರೈಲನ್ನು ಟ್ರ್ಯಾಕ್ ನಿಂದ ಬದಲಿಸಲು ಚೆನ್ನಮ್ಮ ಎಕ್ಸ್ ಪ್ರೆಸ್ ರೈಲಿನ ಎಂಜಿನ್ ಬಳಸಿ ಮಧ್ಯರಾತ್ರಿ 1 ಗಂಟೆಗೆ ಮತ್ತೆ ಚೆನ್ನಮ್ಮ ರೈಲಿಗೆ ಇಂಜಿನ್ ಜೋಡಿಸಲಾಗಿತ್ತು. ಒಂದು ಗಂಟೆ ತಡವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು, ಪರೀಕ್ಷಾರ್ಥಿಗಳು ರೊಚ್ಚಿಗೆದ್ದಿದ್ದರು. ರೈಲನ್ನು ನಿಲ್ದಾಣದಿಂದ ಬಿಡದೇ ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಅವರನ್ನು ನಿಯಂತ್ರಿಸಿ ರೈಲು ಸಾಗಿದರೂ ಪದೇ ಪದೇ ಅಲಾರಾಮ್ ಚೈನ್ ಎಳೆದಿದ್ದಾರೆ. ನಾವು ಅವರನ್ನು ಸಂತೈಸುವ ಸ್ಥಿತಿಯಲ್ಲಿ ಇರಲಿಲ್ಲ. ಅಲ್ಲದೇ ರೈಲಿಗೆ ಕಲ್ಲು ಹೊಡೆದಿದ್ದಾರೆ. ಎಷ್ಟೇ ತಡವಾಗಿದ್ದರೂ ನಮ್ಮ ಪ್ರಕಾರ ರೈಲು ಇಂದು ಬೆಳಗ್ಗೆ 7 ಗಂಟೆ ಹೊತ್ತಿಗೆ ಬೆಂಗಳೂರು ತಲುಪುತಿತ್ತು. ಪ್ರಯಾಣಿಕರು ಪ್ರತಿಭಟನೆ ಮಾಡಿದ್ದರಿಂದ ತಡವಾಗಿದೆಯೇ ಹೊರತು ನಮ್ಮಿಂದಲ್ಲ ಎಂದು ಸ್ಪಷ್ಟನೆ ನೀಡಿದರು.

    ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲೇ ಸುಮಾರು 7 ಗಂಟೆಗಳ ಕಾಲ ನಿಂತ ಹಿನ್ನೆಲೆಯಲ್ಲಿ ಬೆಂಗಳೂರು ತೆರಳಬೇಕಿದ್ದ ಪರೀಕ್ಷಾರ್ಥಿಗಳು ಪರದಾಡಿದಾಡಿದ್ದರು. ಮುಖ್ಯವಾಗಿ ಬೆಳಗಾವಿ ಹಾಗೂ ಧಾರವಾಡ ಭಾಗದಿಂದ ಬೆಂಗಳೂರಿಗೆ ಡಿ.ಆರ್ ಪರೀಕ್ಷೆ ಬರೆಯಲು ಇದೇ ಟ್ರೈನ್ ನಲ್ಲಿ ಬರುತ್ತಿದ್ದ ಇದ್ದ ಸಾವಿರಾರೂ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಬೆಂಗಳೂರು ತಲುಪಲಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದರು. ಶನಿವಾರ ಮಧ್ಯಾಹ್ನ ಕೊಲ್ಹಾಪುರ ಬಿಟ್ಟ ಈ ಟ್ರೈನ್ ಇಂದು ಬೆಳಗ್ಗೆ 6.45ಕ್ಕೆ ಬೆಂಗಳೂರು ತಲುಪಬೇಕಿತ್ತು. ಆದ್ರೆ 7 ಗಂಟೆಗಳ ಕಾಲ ತಡವಾದ ಹಿನ್ನೆಲೆಯಲ್ಲಿ ಈ ಟ್ರೈನ್‍ಗಾಗಿ ಎಲ್ಲ ನಿಲ್ದಾಣಗಳಲ್ಲಿ ಕಾಯುತ್ತ ನಿಂತ ಪ್ರಯಾಣಿಕರು ರೋಸಿಹೋಗಿದ್ದರು.

    ಈ ವಿಷಯದ ಕುರಿತು ಮಾಹಿತಿ ಪಡೆದ ಸಿಎಂ ಕುಮಾರಸ್ವಾಮಿ ಅವರು, ಡಿಎಆರ್ ಪರೀಕ್ಷೆಯಿಂದ ಕೆಲ ವಿದ್ಯಾರ್ಥಿಗಳ ವಂಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಿ ಬೆಂಗಳೂರು ತಲುಪಿದ ಕಾರಣ ಪರೀಕ್ಷೆ ಬರೆಯಲು ಆಗದವರಿಗೆ ಮರುಪರೀಕ್ಷೆಗೆ ಅನುವು ಮಾಡಿಕೊಡುತ್ತೇನೆ. ಹುಬ್ಬಳ್ಳಿ ಪರೀಕ್ಷಾ ಕೇಂದ್ರಕ್ಕೂ ಅವಕಾಶ ಮಾಡುತ್ತೇನೆ. ಮುಂದೆ ಈ ರೀತಿಯ ಘಟನೆಗಳಾಗದಂತೆ ನಿಗಾ ವಹಿಸಲು ರೈಲ್ವೇ ಸಚಿವರ ಜೊತೆಗೆ ನಾನು ಮಾತನಾಡುತ್ತೇನೆ ಎಂದು ತಿಳಿಸಿ ಟ್ವೀಟ್ ಮಾಡಿದ್ದರು.

  • ರೈಲು ವಿಳಂಬ: ಪೊಲೀಸ್ ಮರು ಪರೀಕ್ಷೆಗೆ ಅವಕಾಶ- ಸಿಎಂ ಎಚ್‍ಡಿಕೆ

    ರೈಲು ವಿಳಂಬ: ಪೊಲೀಸ್ ಮರು ಪರೀಕ್ಷೆಗೆ ಅವಕಾಶ- ಸಿಎಂ ಎಚ್‍ಡಿಕೆ

    ಬೆಂಗಳೂರು/ಹುಬ್ಬಳ್ಳಿ: ಸಿಲಿಕಾನ್ ಸಿಟಿಗೆ ಹೊರಟ್ಟಿದ್ದ ರೈಲು 7 ಗಂಟೆ ವಿಳಂಬವಾಗಿದ್ದ ಪರಿಣಾಮ ಪೊಲೀಸ್ ಪರೀಕ್ಷೆ ಎದುರಿಸಲು ಸಾಧ್ಯವಾಗದವರಿಗೆ ಮರು ಪರೀಕ್ಷೆ ಮಾಡಲು ಅವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಡಿಎಆರ್ ಪರೀಕ್ಷೆಯಿಂದ ಕೆಲ ವಿದ್ಯಾರ್ಥಿಗಳ ವಂಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಿ ಬೆಂಗಳೂರು ತಲುಪಿದ ಕಾರಣ ಪರೀಕ್ಷೆ ಬರೆಯಲು ಆಗದವರಿಗೆ ಮರುಪರೀಕ್ಷೆಗೆ ಅನುವು ಮಾಡಿಕೊಡುತ್ತೇನೆ. ಹುಬ್ಬಳ್ಳಿ ಪರೀಕ್ಷಾ ಕೇಂದ್ರಕ್ಕೂ ಅವಕಾಶ ಮಾಡುತ್ತೇನೆ. ಮುಂದೆ ಈ ರೀತಿಯ ಘಟನೆಗಳಾಗದಂತೆ ನಿಗಾ ವಹಿಸಲು ರೈಲ್ವೆ ಸಚಿವರ ಜೊತೆಗೆ ನಾನು ಮಾತನಾಡುತ್ತೇನೆ ಅಂತ ಅವರು ತಿಳಿಸಿದ್ದಾರೆ.

    https://twitter.com/CMofKarnataka/status/1025978752784711681

    ಇಂದು ಪೊಲೀಸ್ ಪರೀಕ್ಷೆ ಬರೆಯಬೇಕಿದ್ದ 2 ಸಾವಿರ ಅಭ್ಯರ್ಥಿಗಳಿಗೆ ರೈಲು ವಿಳಂಬವಾದ ಹಿನ್ನೆಲೆಯಲ್ಲಿ ಆಘಾತ ಉಂಟಾಗಿದೆ. ಘಟನೆಯ ಬಗ್ಗೆ ಡಿಜಿಪಿಯವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ನೀಡುವ ಬಗ್ಗೆ ಪೊಲೀಸ್ ಇಲಾಖೆಯಿಂದ ನಿರ್ಧರಿಸಲಾಗುವುದು ಅಂತ ಹುಬ್ಬಳ್ಳಿಯಲ್ಲಿ ಡಿಸಿ ಪಿರೇಣುಕಾ ಸುಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಮಾರ್ಗ ಮಧ್ಯೆಯೇ ನಿಂತ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್- ಪರೀಕ್ಷಾರ್ಥಿಗಳ ಪರದಾಟ

    ಏನಿದು ಘಟನೆ?:
    ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲೇ ಸುಮಾರು 7 ಗಂಟೆಗಳ ಕಾಲ ನಿಂತ ಹಿನ್ನೆಲೆಯಲ್ಲಿ ಬೆಂಗಳೂರು ತೆರಳಬೇಕಿದ್ದ ಪರೀಕ್ಷಾರ್ಥಿಗಳು ಪರದಾಡಿದಾಡಿದ್ದಾರೆ. ಶನಿವಾರ ಮಧ್ಯಾಹ್ನ ಕೊಲ್ಹಾಪುರ ಬಿಟ್ಟ ಈ ಟ್ರೈನ್ ಇಂದು ಬೆಳಗ್ಗೆ 6.45ಕ್ಕೆ ಬೆಂಗಳೂರು ತಲುಪಬೇಕಿತ್ತು. ಆದ್ರೆ 7 ಗಂಟೆಗಳ ಕಾಲ ತಡವಾದ ಹಿನ್ನೆಲೆಯಲ್ಲಿ ಈ ಟ್ರೈನ್‍ಗಾಗಿ ಎಲ್ಲ ನಿಲ್ದಾಣಗಳಲ್ಲಿ ಕಾಯುತ್ತ ನಿಂತ ಪ್ರಯಾಣಿಕರು ರೋಸಿಹೋಗಿದ್ದರು.

    ಬೆಳಗಾವಿ ಹಾಗೂ ಧಾರವಾಡ ಭಾಗದಿಂದ ಬೆಂಗಳೂರಿಗೆ ಡಿ.ಆರ್ ಪರೀಕ್ಷೆ ಬರೆಯಲು ಇದೇ ಟ್ರೈನ್ ನಲ್ಲಿ ಬರ್ತಾ ಇದ್ದ ಸಾವಿರಾರೂ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಬೆಂಗಳೂರು ತಲುಪಲಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಈಗ ಉತ್ತರ ಕರ್ನಾಟಕ ಭಾಗದ ಸಾವಿರಾರೂ ಅಭ್ಯರ್ಥಿಗಳು ತಮ್ಮ ತಪ್ಪು ಇಲ್ಲದೆ ಡಿ.ಆರ್ ಪರೀಕ್ಷೆಯಿಂದ ವಂಚಿತರಾಗುವಂತಾಗಿದ್ದು, ಈ ಕೂಡಲೇ ಪರೀಕ್ಷೆ ಮುಂದೂಡಬೇಕು. ಇಲ್ಲವೇ ರಾಣಿ ಚನ್ನಮ್ಮ ಟ್ರೈನ್‍ಗೆ ಟಿಕೆಟ್ ತೆಗೆಸಿದ್ದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಮರು ಅವಕಾಶ ಕಲ್ಪಿಸಿಕೊಡಬೇಕು ಅನ್ನೋ ಆಗ್ರಹಗಳು ಕೇಳಿ ಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಮಾರ್ಗ ಮಧ್ಯೆಯೇ ನಿಂತ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್- ಪರೀಕ್ಷಾರ್ಥಿಗಳ ಪರದಾಟ

    ಮಾರ್ಗ ಮಧ್ಯೆಯೇ ನಿಂತ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್- ಪರೀಕ್ಷಾರ್ಥಿಗಳ ಪರದಾಟ

    ಧಾರವಾಡ: ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲೇ ಸುಮಾರು 7 ಗಂಟೆಗಳ ಕಾಲ ನಿಂತ ಹಿನ್ನೆಲೆಯಲ್ಲಿ ಬೆಂಗಳೂರು ತೆರಳಬೇಕಿದ್ದ ಪರೀಕ್ಷಾರ್ಥಿಗಳು ಪರದಾಡಿದಾಡಿದ್ದಾರೆ.

    ಮುಖ್ಯವಾಗಿ ಬೆಳಗಾವಿ ಹಾಗೂ ಧಾರವಾಡ ಭಾಗದಿಂದ ಬೆಂಗಳೂರಿಗೆ ಡಿ.ಆರ್ ಪರೀಕ್ಷೆ ಬರೆಯಲು ಇದೇ ಟ್ರೈನ್ ನಲ್ಲಿ ಬರ್ತಾ ಇದ್ದ ಸಾವಿರಾರೂ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಬೆಂಗಳೂರು ತಲುಪಲಾಗದೇ ಪರೀಕ್ಷೆಯಿಂದ ವಂಚಿತರಾಗುವಂತಾಗಿದೆ. ಶನಿವಾರ ಮಧ್ಯಾಹ್ನ ಕೊಲ್ಹಾಪುರ ಬಿಟ್ಟ ಈ ಟ್ರೈನ್ ಇಂದು ಬೆಳಗ್ಗೆ 6.45ಕ್ಕೆ ಬೆಂಗಳೂರು ತಲುಪಬೇಕಿತ್ತು. ಆದ್ರೆ 7 ಗಂಟೆಗಳ ಕಾಲ ತಡವಾದ ಹಿನ್ನೆಲೆಯಲ್ಲಿ ಈ ಟ್ರೈನ್‍ಗಾಗಿ ಎಲ್ಲ ನಿಲ್ದಾಣಗಳಲ್ಲಿ ಕಾಯುತ್ತ ನಿಂತ ಪ್ರಯಾಣಿಕರು ರೋಸಿಹೋಗಿದ್ದಾರೆ.

    ಕೊಲ್ಹಾಪುರದಿಂದ ಹೊರಟ ಈ ಟ್ರೈನ್ ಬೆಳಗಾವಿ ದಾಟಿದ ಬಳಿಕ ಧಾರವಾಡಕ್ಕೂ ಮುಂಚೆ ಬರುವ ಕಂಬಾರಗಣವಿ ನಿಲ್ದಾಣದಲ್ಲಿ ನಿಂತು ಬಿಟ್ಟಿತ್ತು. ಸುಮಾರು 9 ಗಂಟೆ ಹೊತ್ತಿಗೆ ಟ್ರೈನ್‍ನ ಎಲ್ಲ ಬೋಗಿಗಳನ್ನು ಕಂಬಾರಗಣವಿ ನಿಲ್ದಾಣದಲ್ಲಿ ಬಿಟ್ಟು ಇಂಜಿನ್ ಮಾತ್ರ ತೆಗೆದುಕೊಂಡು ಹೋಗಿ ಬಿಡಲಾಗಿದೆ. ಮುಂದಿನ ಮಾರ್ಗದಲ್ಲಿ ಗೂಡ್ಸ್ ಟ್ರೈನ್ ವೊಂದರ ಇಂಜಿನ್ ಕೆಟ್ಟ ಹಿನ್ನೆಲೆಯಲ್ಲಿ ಅದನ್ನು ಮಾರ್ಗದಿಂದ ತೆರವುಗೊಳಿಸಲು ರಾಣಿ ಚನ್ನಮ್ಮ ಎಕ್ಸ್ ಪ್ರೆಸ್ ನ ಇಂಜಿನ್ ಬಳಸಿದ್ರು. ಆದರೆ ಈ ಇಂಜಿನ್ ಗೂಡ್ಸ್ ರೈಲನ್ನು ಧಾರವಾಡಕ್ಕೆ ತಲುಪಿಸಿ ಮರಳಿ ಬೋಗಿಗೆ ಬಂದು ಸೇರಿದ್ದು, ನಸುಕಿನ ಜಾವ 2 ಗಂಟೆಗೆ. ಅಲ್ಲಿಯವರೆಗೂ ಯಾವುದೇ ಸರಿಯಾದ ವ್ಯವಸ್ಥೆಯೂ ಇಲ್ಲದ ಕಂಬಾರಗಣವಿಯ ಪುಟ್ಟ ನಿಲ್ದಾಣದಲ್ಲಿಯೇ ಪ್ರಯಾಣಿಕರು ಪರದಾಡಬೇಕಾಯಿತು.

    ಧಾರವಾಡ ನಿಲ್ದಾಣದಲ್ಲಿಯೂ 200ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಪರೀಕ್ಷಾರ್ಥಿಗಳು ಟ್ರೈನ್‍ಗಾಗಿ ಕಾಯುತ್ತಾ, ರೈಲ್ವೆ ಸಿಬ್ಬಂದಿ ಜೊತೆಗೆ ವಾಗ್ವಾದಕ್ಕಿಳಿದಿದ್ರು. ಕೊನೆಗೂ ನಸುಕಿನ ಜಾವ 5:30ಕ್ಕೆ ಟ್ರೈನ್ ಹೊರಟಿತಾದ್ರೂ, ಬೆಳಗ್ಗೆ 7 ಗಂಟೆಗೆ ಬೆಂಗಳೂರು ತಲುಪಬೇಕಾಗಿದ್ದ ರೈಲು ಮಧ್ಯಾಹ್ನ 1 ಗಂಟೆಗೆ ತಲುಪಲಿದೆ. ಈ ಹಿನ್ನೆಲೆಯಲ್ಲಿ ಈಗ ಉತ್ತರ ಕರ್ನಾಟಕ ಭಾಗದ ಸಾವಿರಾರೂ ಅಭ್ಯರ್ಥಿಗಳು ತಮ್ಮ ತಪ್ಪು ಇಲ್ಲದೆ ಡಿ.ಆರ್ ಪರೀಕ್ಷೆಯಿಂದ ವಂಚಿತರಾಗುವಂತಾಗಿದ್ದು. ಈ ಕೂಡಲೇ ಪರೀಕ್ಷೆ ಮುಂದೂಡಬೇಕು. ಇಲ್ಲವೇ ರಾಣಿ ಚನ್ನಮ್ಮ ಟ್ರೈನ್‍ಗೆ ಟಿಕೆಟ್ ತೆಗೆಸಿದ್ದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಮರು ಅವಕಾಶ ಕಲ್ಪಿಸಿಕೊಡಬೇಕು ಅನ್ನೋ ಆಗ್ರಹಗಳು ಕೇಳಿ ಬರುತ್ತಿವೆ.